Connect with us

ಸಿನಿ ಸುದ್ದಿ

ಆಲ್ ರೌಂಡರ್ ಸಹನಾಗೆ ಎಲ್ಲ ಕಲೆಯೂ ವರ

ಚಿತ್ರರಂಗಕ್ಕೆ ಬರಬೇಕೆಂದರೆ ನಟನೆ ಒಂದೇ ಅರ್ಹತೆಯಲ್ಲ. ಕ್ಷೇತ್ರಕ್ಕೆ ಕಾಲಿಟ್ಟ ಮೇಲೆ ಯಾವ ಕಲೆ ನಮಗೆ ವರವಾಗುತ್ತದೆಯೋ ಹೇಳಲು ಬರುವುದಿಲ್ಲ. ಬಹುಮುಖ ಪ್ರತಿಭೆಗಳಿಗೆ ಮಾತ್ರವೇ ಅದೃಷ್ಟ ಹುಡುಕಿಕೊಂಡು ಬರುತ್ತದೆ. ಇದೇ ನಿಟ್ಟಿನಲ್ಲಿ ತಯಾರಾಗುತ್ತಿರುವ ಕಲಾವಿದೆ ಸಹನಾ.

Published

on

ಚಿತ್ರರಂಗಕ್ಕೆ ಬರಬೇಕೆಂದರೆ ನಟನೆ ಒಂದೇ ಅರ್ಹತೆಯಲ್ಲ. ಕ್ಷೇತ್ರಕ್ಕೆ ಕಾಲಿಟ್ಟ ಮೇಲೆ ಯಾವ ಕಲೆ ನಮಗೆ ವರವಾಗುತ್ತದೆಯೋ ಹೇಳಲು ಬರುವುದಿಲ್ಲ. ಬಹುಮುಖ ಪ್ರತಿಭೆಗಳಿಗೆ ಮಾತ್ರವೇ ಅದೃಷ್ಟ ಹುಡುಕಿಕೊಂಡು ಬರುತ್ತದೆ. ಇದೇ ನಿಟ್ಟಿನಲ್ಲಿ ತಯಾರಾಗುತ್ತಿರುವ ಕಲಾವಿದೆ ಸಹನಾ.
ಸಹನ ಮೂಲತಃ ಕುಂದಾಪುರದವರು. ವೃತ್ತಿಯಲ್ಲಿ ಸಾಫ್ಟ್‍ವೇರ್ ಎಂಜಿನಿಯರ್. ಸಹನಾ ಅವರ ತಂದೆ ಒಬ್ಬ ಖ್ಯಾತ ಫೋಟೊಗ್ರಾಫರ್. ಚಿಕ್ಕಂದಿನಲ್ಲಿ ಅಪ್ಪನ ಜತೆ ಫೋಟೊ ಶೂಟ್‍ಗೆ ಹೋಗುತ್ತಿದ್ದ ಸಹನಾ ಅವರಿಗೆ, ಕ್ಯಾಮೆರಾ ಮುಂದೆ ಹೇಗೆ ಪೋಸ್ ಕೊಡಬೇಕು. ಗ್ಲಾಮರ್ ಲೋಕ ಹೇಗಿರುತ್ತದೆ ಎಂಬ ಪರಿಚಯವಾಗಿತ್ತು. ಓದಿನಲ್ಲಿ ಮೆರಿಟ್ ವಿದ್ಯಾರ್ಥಿನಿಯಾಗಿದ್ದ ಸಹನಾಗೆ ತಾನು ಯಾವಾಗ ಫ್ಯಾಷನ್ ಲೋಕಕ್ಕೆ ಕಾಲಿಡುತ್ತೇನೋ ಎಂಬ ತುಡಿತ ಇತ್ತು ಅಪ್ಪ ಅಮ್ಮನ ಬಲವಂತಕ್ಕೆ ಕಟ್ಟುಬಿದ್ದು ಓದು ಮುಂದುವರಿಸಿದರು.
ಎಂಜಿನಿಯರಿಂಗ್ ಪೂರೈಸಿರುವ ಅವರು ಸದ್ಯ ಸಾಫ್ಟ್‍ವೇರ್ ದಿಗ್ಗಜ ಎಚ್.ಪಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಫ್ಯಾಷನ್ ಮೋಹ ಇನ್ನಷ್ಟು ಹೆಚ್ಚಾಗಿದೆ.
ಫ್ಯಾಷನ್ ಫೋಟೊಗ್ರಫಿಗೆಂದು ಹೋಗುತ್ತಿದ್ದ ಸಹನಾ ಅವರಿಗೆ ತಾವ್ಯಾಕೆ ಫ್ಯಾಷನ್ ಡಿಸೈನರ್ ಆಗಬಾರದೆಂಬ ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಒಂದು ಪ್ರಯತ್ನ ಮಾಡಿದರು. ನೋಡುಗರಿಂದ ವ್ಯಕ್ತವಾದ ಮೆಚ್ಚುಗೆ ಅವರ ಹುರುಪನ್ನು ಇನ್ನಷ್ಟು ಹೆಚ್ಚಿಸಿತು. ಪರಿಣಾಮವಾಗಿ ಅವರು ಫ್ಯಾಷನ್ ಡಿಸೈನರ್ ಆಗಬೇಕೆಂಬ ಕನಸು ಮೊಳೆಯಿತು. ಬ್ಯುಸಿ ಶೆಡ್ಯೂಲ್‍ನಲ್ಲಿ ಬಿಡುವಿದ್ದಾಗ ಸಹನಾ ಅವರು ತಮ್ಮ ಡಿಸೈನ್‍ಗಳ ಬಗ್ಗೆ ಹೆಚ್ಚುಆಸ್ಥೆ ವಹಿಸುತ್ತಾರೆ.
ಪ್ರತಿ ನಿಮಿಷವನ್ನೂ ಹೇಗೆ ಬಳಸಿಕೊಳ್ಳುವುದು ಎಂಬ ಹೊಸ ಆಲೋಚನೆಯಲ್ಲೇ ತೊಡಿಗಿರುವ ಅವರು ವಾರದಲ್ಲಿ ಸಿಗುವ ಎರಡು ದಿನ ರಜೆಯಲ್ಲಿ ತಮ್ಮ ಡಿಸೈನ್ ವರ್ಕ್‍ಗಳ ಬಗ್ಗೆ ಆಸಕ್ತಿ ವಹಿಸಿ, ವಸ್ತುಪ್ರದರ್ಶನಗಳನ್ನು ಏರ್ಪಡಿಸುತ್ತಾರೆ.
“ಸಾಫ್ಟ್‍ವೇರ್ ಎಂಜಿನಿಯರ್ ಆದ ಕಾರಣ ಸಮಯ ಹೆಚ್ಚು ಸಿಗುವುದಿಲ್ಲ. ವೀಕೆಂಡ್‍ಗಳಲ್ಲಿ ಸ್ನೇಹಿತರು, ಸಹೋದ್ಯೋಗಿಗಳು ಮನಶಾಂತಿಗಾಗಿ ಔಟಿಂಗ್ ಮೊದಲಾದ ಕಡೆ ಹೋಗುತ್ತಾರೆ. ಆದರೆ, ನನಗೆ ಡಿಸೈನಿಂಗ್‍ನಲ್ಲೇ ಹೆಚ್ಚು ಮನಶಾಂತಿ ಸಿಗುತ್ತದೆ,” ಎಂದು ಅವರು ಹೇಳುತ್ತಾರೆ.

ಸಂಗೀತದಲ್ಲೂ ಸೈ

ಸಹನಾ ಅವರು ಗಾಯಕಿಯೂ ಹೌದು. ಸೃಶ್ರಾವ್ಯವಾಗಿ ಹಾಡುವ ಸಹನಾ ಅವರು ಒಂದು ಮ್ಯೂಸಿಕ್ ಆಲ್ಬಂಗಾಗಿ ಹಾಡಿದ್ದಾರೆ. ಜತೆಗೆ ಆ ವಿಡಿಯೊದಲ್ಲಿ ಮುಖ್ಯ ಪಾತ್ರಧಾರಿಯಾಗಿಯೂ ಕಾಣಿಸಿಕೊಂಡಿದ್ದಾರೆ. ಹಾಡುವುದು ಅವರಲ್ಲಿ ಅಡಗಿರುವ ಒಂದು ಗುಪ್ತ ಪ್ರತಿಭೆಯೂ ಹೌದು.

ಮಿಸ್ ಉತ್ತರ ಕರ್ನಾಟಕ

ಫ್ಯಾಷನ್ ಲೋಕದಲ್ಲಿ ಆಸಕ್ತಿ ಇದ್ದರಿಂದ ಸಹನಾ ಅವರು ಸಿಲ್ವರ್ ಸ್ಟಾರ್ ಎಂಬ ಸಂಸ್ಥೆಯೊಂದಕ್ಕೆ ಸೇರಿ ರ್ಯಾಂಪ್ ವಾಕ್, ಮೊದಲಾದ ಕಲೆಗಳನ್ನು ಕರಗತ ಮಾಡಿಕೊಂಡರು. ರಾಜ್ಯ ಮಟ್ಟದ ಫ್ಯಾಷನ್ ಶೋನಲ್ಲಿ ಪಾಲ್ಗೊಂಡಿದ್ದ ಅವರಿಗೆ ಮಿಸ್ ಉತ್ತರ ಕರ್ನಾಟಕ ಎಂಬ ಕೀರ್ತಿಯೂ ಲಭ್ಯವಾಗಿದೆ.

ಮಗಳ ಬಗ್ಗೆ ಹೆಮ್ಮೆ

ಪ್ರಾರಂಭದಲ್ಲಿ ಮಗಳು ಫ್ಯಾಷನ್ ಲೋಕ ಸೇರುವುದನ್ನು ಒಲ್ಲದ ಸಹನಾರ ಪೋಷಕರು ಓದಿನ ಬಗ್ಗೆ ಗಮನ ವಹಿಸುವಂತೆ ತಿಳಿ ಹೇಳಿದ್ದರು. ಯಾವಾಗ ಸಹನಾ ಅವರು ಕೆಲಸದ ಜತೆಗೆ ಫ್ಯಾಷನ್‍ಅನ್ನು ಒಂಧು ಭಾಗವಾಗಿ ತೆಗೆದುಕೊಂಡು ಆಸಕ್ತಿಯಿಂದ ಕೆಲಸ ಮಾಡಲು ಪ್ರಾರಂಭಿಸಿದರೋ ಆಗ ಮಗಳ ಬಗ್ಗೆ ಪೋಷಕರಿಗೆ ಹೆಮ್ಮೆ ಅನಿಸಿದೆ. ತಮ್ಮ ಮಗಳ ಸಾಧನೆ ಬಗ್ಗೆ ಅವರು ಈಗಲೂ ಖುಷಿಪಡುತ್ತಾರೆ.

ನಟನೆ ಅವಕಾಶ ಬಂದರೆ ಬಿಡಲ್ಲ

ಸಹನಾ ಅವರಿಗೆ ನಟನೆಯ ಕಲೆಯೂ ತಕ್ಕಮಟ್ಟಿಗೆ ಗೊತ್ತಿದೆ. ಫ್ಯಾಷನ್, ಸಂಗೀತ, ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮ ಗುರುತು ಮೂಡಿಸಿರುವ ಸಹನಾ ಅವರು ನಟನೆಯ ಅವಕಾಶಕ್ಕಾಗಿ ಕಾಯುತ್ತಿದ್ದು, ಚಾನ್ಸ್ ಸಿಕ್ಕರೆ ಅದರಲ್ಲೂ ತಮ್ಮ ಪ್ರತಿಭೆ ಅನಾವರಣಗೊಳಿಸುವ ಭರವಸೆ ಹೊಂದಿದ್ದಾರೆ.
Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

Published

on

  • ರಾಜೇಂದ್ರ ಬುರಡಿಕಟ್ಟಿ

ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.

ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.

ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.

ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಈ ಕ್ಷಣದ ಪ್ರಮುಖ ಸುದ್ದಿಗಳು

Published

on

ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)

  1. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
  2. ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
  3. ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
  4. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
  5. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
  6. ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್‌ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ...

ದಿನದ ಸುದ್ದಿ6 hours ago

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ....

ದಿನದ ಸುದ್ದಿ8 hours ago

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು....

ದಿನದ ಸುದ್ದಿ20 hours ago

ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿದೆ ; ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ:ನಗರ ವ್ಯಾಪ್ತಿಯಲ್ಲಿ ಹೊಸದಾಗಿ ಮಂಜೂರಾಗಿರುವ 8 ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ನಗರದಲ್ಲಿ ವಿದ್ಯಾರ್ಥಿನಿಲಯಗಳನ್ನು ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ...

ದಿನದ ಸುದ್ದಿ20 hours ago

ನೀಟ್ ಅಕ್ರಮ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕಳಂಕ : ಸಾಬೀರ್ ಜಯಸಿಂಹ

ಸುದ್ದಿದಿನ,ದಾವಣಗೆರೆ:ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್​​​ನಲ್ಲೂ ಗೋಲ್​​ಮಾಲ್ ನಡೆದಿದೆ. ಬಳಿಕ ನೆಟ್​​​ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ...

ದಿನದ ಸುದ್ದಿ21 hours ago

ಹಿರಿಯ ನಾಗರಿಕರಿಗಿರುವ ಸರ್ಕಾರಿ ಸೌಲಭ್ಯಗಳೇನು..? ; ಮಾಹಿತಿಗೆ ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ...

ದಿನದ ಸುದ್ದಿ1 day ago

ಇನ್ನು ಜನನ-ಮರಣ ಪ್ರಮಾಣ ಪತ್ರ ಕೊಡುವ ಅಧಿಕಾರ ಗ್ರಾಮ ಪಂಚಾಯತಿಗೆ

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಜನನ ಅಥವಾ ಮರಣ ನೋಂದಣಿ ಮಾಡಿ 30 ದಿನಗಳ ಒಳಗೆ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ ಮುಖ್ಯ ನೋಂದಣಾಧಿಕಾರಿ ಸುತ್ತೊಲೆ ಹೊರಡಿಸಿದ್ದಾರೆ. ಇದು...

ದಿನದ ಸುದ್ದಿ1 day ago

ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ

ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ,...

ದಿನದ ಸುದ್ದಿ1 day ago

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ....

ದಿನದ ಸುದ್ದಿ1 day ago

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ...

Trending