ಸಿನಿ ಸುದ್ದಿ
EXCLUSIVE INTERVIEW | ಸ್ಯಾಂಡಲ್ ವುಡ್ ಬ್ಯೂಟಿ ; ‘ಸ್ವರ್ಣಖಡ್ಗಂ’ನ ಮಹಧಾತ್ರಿ ಸಂಜನಾ ಗಲ್ರಾಣಿ
![](https://suddidina.com/wp-content/uploads/2018/07/Sanjana-suddidina5.jpg)
ಬಾಹುಬಲಿ ಚಿತ್ರದ ನಿರ್ಮಾಪಕರಿಂದ ಮತ್ತೊಂದು ಅದ್ದೂರೀ ಕೊಡುಗೆ; ತೆರೆಯ ಮೇಲೆ ಮಹರಾಣಿ ಮಹಧಾತ್ರಿಯಾಗಿ ಮಿಂಚಲಿದ್ದಾರೆ ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾ ಗಲ್ರಾಣಿ
ಬಾಹುಬಲಿ ಚಿತ್ರದ ನಿರ್ಮಾಪಕರು, ಹಾಗೂ ಆರ್ಕಾ ಮೀಡಿಯಾ ವರ್ಕ್ಸ್ ಅವರ ಚಿಕ್ಕ ಪರದೆಯ ಮೇಲೆ ಬಹು ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ “ಸ್ವರ್ಣ ಖಡ್ಗಂ”. ಭಾರತೀಯ ಟಿ.ವಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹದಿನಾಲ್ಕು ಭಾಷೆಗಳಲ್ಲಿ ಮೂಡಿ ಬರಲಿದ್ದು, ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ತೆಲುಗಿನ ಖ್ಯಾತ ಸೀರಿಯಲ್ ನಿರ್ದೇಶಕರಾದ ಯತ ಸತ್ಯನಾರಾಯಣ ರವರು ಇದನ್ನು ನಿರ್ದೇಶಿಸಿದ್ದಾರೆ. ಜುಲೈ ಆರರಿಂದ ಪ್ರಾರಂಭವಾಗುತ್ತಿರುವ ಈ ದೊಡ್ಡ ಪ್ರಾಜೆಕ್ಟ್, ಪೌರಾಣಿಕ ಕಥಾ ಹದರ ಒಳಗೊಂಡಿದ್ದು, ಬಾಹುಬಲಿ ಚಿತ್ರದ ತಂತ್ರಜ್ಞರೇ ಇಲ್ಲೂ ಕೆಲಸ ಮಾಡಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ.
ಇದು ಸಂಜನಾ ‘ಡ್ರೀಮ್ ರೋಲ್ ‘
ಬಾಹುಬಲಿ ಚಿತ್ರ ನೋಡಿದ ಪ್ರತಿಯೊಬ್ಬ ನಟಿಯೂ, ನಾನು ಆ ಚಿತ್ರದ ಒಂದು ಭಾಗವಾಗಿರ ಬೇಕಿತ್ತು ಎಂದು ಮನಸ್ಸಲೇ ನೆನೆದಿದ್ದುಂಟು. ಆ ಸೌಭಾಗ್ಯ ಈಗ ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾರ ಪಾಲಾಗಿದೆ.
‘ಸ್ವರ್ಣ ಖಡ್ಗಂ’ “ನನ್ನಒಂಬತ್ತು ವರ್ಷಗಳ ಸಿನಿ ವೃತ್ತಿಯಲ್ಲಿ ಯೇ ಇದು ಮಹತ್ವಾಕಾಂಕ್ಷೆ ಯ ಪಾತ್ರ. ಯಾವುದೇ ನಟಿಗಾದರೂ ಒಮ್ಮೆ ಯಾದರೂ ಇಂತಹ ಮಹಿಳಾ ಪ್ರಧಾನ ಪಾತ್ರ ದಲ್ಲಿ ಮಿಂಚುವ ಆಸೆ ಇದ್ದೇ ಇರುತ್ತದೆ. ಆ ಸೌಭಾಗ್ಯ ನನ್ನದಾಗಿದೆ ಎನ್ನುತ್ತಾರೆ ಸ್ಯಾಂಡಲ್ವುಡ್ ಬ್ಯೂಟಿ ಸಂಜನಾ.
ಸದ್ಯ ಇದೇ ಸೀರಿಯಲ್ ನ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಸಂಜನಾ, ‘ಸುದ್ದಿದಿನ‘ ಕ್ಕೆ ನೀಡಿರುವ Exclusive Interview ನ ಸಂಪೂರ್ಣ ಡೀಟೇಲ್ ಇಲ್ಲಿದೆ.
ಯೋಧ ರಾಜಕುಮಾರಿಯ ಕಸರತ್ತು ಹೇಗಿದೆ ಗೊತ್ತಾ..!
ದಂಡುಪಾಳ್ಯದ ಪಾತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡಿದ್ದ ಸಂಜನಾ, ಈಗಿನ ತಮ್ಮ ‘ಡ್ರೀಮ್ ರೋಲ್’ಗಾಗಿ ಬಹಳಷ್ಟು ಕಸರತ್ತು ಮಾಡುತ್ತಿದ್ದಾರೆ. ಮಹಾರಾಣಿ ಮಹಧಾತ್ರಿ ಯಾಗಿ ತೆರೆಯ ಮೇಲೆ ಮಿಂಚಲು ಹೊರಟಿರುವ ಸಂಜನಾ, ಈ ಪಾತ್ರಕ್ಕಾಗಿಯೇ ಕತ್ತಿ ವರಸೆ, ಕುದುರೆ ಸವಾರಿ ಯ ವಿಶೇಷ ತರಬೇತಿ ಯನ್ನು ಪಡೆದಿದ್ದಾರೆ.
ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾ ಈಗ “ಸ್ವರ್ಣಖಡ್ಗಂ” ನ ಯೋಧ ರಾಜಕುಮಾರಿ !
ಈ ಮಹಿಳಾ ಪ್ರಧಾನ ಪಾತ್ರದ ಬಗ್ಗೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಸಂಜನಾ, ದಿನನಿತ್ಯ ಬೆಳಿಗ್ಗೆ 3.30 ಕ್ಕೆ ಎದ್ದು ಸುಮಾರು ಒಂದೂವರೆ ಫಂಟೆಗಳ ಹೈ ಇಂಟೆಂಸಿಟೀ ವರ್ಕ್ ಔಟ್ ಮಾಡಿ, ನಂತರ ಸುಮಾರು ಎರಡೂವರೆ ಘಂಟೆಗಳ ಕಾಲ ಪಾತ್ರಕ್ಕಾಗಿ ರೆಡಿಯಾಗುತ್ತಾ ರಂತೆ.
ಸುಮಾರು 12-14 ತಾಸುಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಸಂಜನಾ, ತಮ್ಮ ಪಾತ್ರಕ್ಕಾಗಿ 5-6 ಕೆ.ಜಿ ತೂಕದ ಕಾಸ್ಟ್ಯೂಮ್ ಧರಿಸುತ್ತಿದ್ದಾರೆ. ಇನ್ನು ಬಾಹುಬಲಿ ಚಿತ್ರದ ವಸ್ತ್ರ ವಿನ್ಯಾಸಕರೇ ಇಲ್ಲೂ ಕೆಲಸ ಮಾಡುತ್ತಿದ್ದು. ಮಹಾರಾಣಿ ಮಹಧಾತ್ರಿಯ ಲುಕ್ ಬಾಹುಬಲಿಯ ತುಣುಕು ಗಳನ್ನ ನೆನಪಿಸುತ್ತದೆ. ಸೀರಿಯಲ್ ನ ಪ್ರಮೋ ದಲ್ಲಿ ಶ್ವೇತ ಹಂಸದಂತೆ ಒಮ್ಮೆ ಕಣ್ಮನ ಸೆಳೆದರೆ, ಮತ್ತೊಮ್ಮೆ ಯೋಧರಾಣಿಯ ಖಡಕ್ ಲುಕ್ ನಲ್ಲಿ ಮಿಂಚುತ್ತಿದ್ದಾರೆ ಸುಂದರಿ ಸಂಜನಾ.
“ಮಹಾರಾಣಿ ಮಹಧಾತ್ರಿ”ಯಾಗಿ ಮಿಂಚಲು ಹೊರಟಿರುವ ಸ್ಯಾಂಡಲ್ ವುಡ್ ಬ್ಯೂಟಿ ಸಂಜನಾರ ” ಫಿಟ್ನೆಸ್ ಸೀಕ್ರೇಟ್” ನಮ್ಮ ಮುಂದಿನ ಸಂಚಿಕೆಯಲ್ಲಿ ತಪ್ಪದೇ ಓದಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ
![](https://suddidina.com/wp-content/uploads/2024/06/guccha_suddidina.jpg)
ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.
ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
![](https://suddidina.com/wp-content/uploads/2024/06/Sarod_Maestro_Rajeev_Taranath_suddidina.jpg)
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
![](https://suddidina.com/wp-content/uploads/2024/06/Darshan_suddidina_Kannada_actor.jpg)
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.
ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ7 days ago
JOB NEWS | ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
-
ಅಂತರಂಗ7 days ago
ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ