Connect with us

ದಿನದ ಸುದ್ದಿ

ದಾವಣಗೆರೆಯಲ್ಲಿ ಇಂದು ‘ಕಸಾಪ ಉಳಿಸಿ‌ ಆಂದೋಲನ’ ಸಭೆ : ಶಿವಕುಮಾರಸ್ವಾಮಿ ಕುರ್ಕಿ

Published

on

ದಾವಣಗೆರೆಯ ಕಸಾಪ ಆಜೀವ ಸದಸ್ಯರ ಸಮಾನ ಮನಸ್ಕರ ವೇದಿಕೆಯು 11 ಮಾರ್ಚ್ 2018 ರಂದು ಇಲ್ಲಿನ ಕನ್ನಡ ಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹಾಲಿ ಇರುವ ಬೈಲಾವನ್ನು ತಿದ್ದುಪಡಿ ಮಾಡಿಕೊಂಡ ಕಸಾಪ ಅಧ್ಯಕ್ಷರ ಅಧಿಕಾರಾವಧಿಯನ್ನು ತಂತಾನೆ ಹೆಚ್ಚಿಸಿಕೊಳ್ಳುವುದನ್ನು ವಿರೋಧಿಸಿದ್ದೆವು.

ಅಲ್ಲದೆ ನಾವು ಹೈಕೋರ್ಟ್ ಮೆಟ್ಟಿಲೇರಿ ಬಹುದೂರದ ದ.ಕ. ಜಿಲ್ಲೆಯ ಪುಟ್ಟಗ್ರಾಮ ಕೋಟದಲ್ಲಿ ನಡೆವ ಸಭೆಗೆ ತಡೆಯಾಜ್ಞೆ ತರಲು ಲಾಯರ್ ಬಳ್ಳಾರಿ ರೇವಣ್ಣನವರ ವಕಾಲತ್ತಿನ ಮೂಲಕ ಪ್ರಯತ್ನಿಸಿದ್ದೆವು. ಆಗ ಸಮಯದ ಅಭಾವದಿಂದ ಈ ಕೆಲಸ ಆಗಿರಲಿಲ್ಲ. ಆದರೆ “ಸಹಕಾರಿ ಸಂಘಸಂಸ್ಥೆಗಳ ಉಪ ನೋಂದಣಾಧಿಕಾರಿಗಳಿಗೆ ತಿದ್ದುಪಡಿಮಾಡದಿರಲು ಅರ್ಜಿ ಹಾಕಬಹುದು ” ಎಂಬ ಸಲಹೆಯನ್ನು ಹೈಕೋರ್ಟ್ ಸೂಚಿಸಿತ್ತು.
ಆದ ಕಾರಣ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯಿಂದ ಈ ಕುರಿತ ಅರ್ಜಿಯೊಂದಿಗೆ ನಾವು ಹೈಕೋರ್ಟ್ಗೆ ನೀಡಿದ ಎಲ್ಲಾ ದಾಖಲೆಗಳನ್ನೂ ಬೆಂಗಳೂರು ಮಲ್ಲೇಶ್ವರಂ ಸಹಕಾರ ಭವನದಲ್ಲಿರುವ ಈ ಸಂಘ ಸಂಸ್ಥೆಗಳ ಉಪನೋಂದಾವಣಾಧಿಕಾರಿಗಳ ಕಡೆ ನೀಡಿದ್ದೆವು.

ಜುಲೈ 9ರಂದು ಬೆಂಗಳೂರು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಡಾ.ಕೋ.ವೆಂ.ರಾಮಕೃಷ್ಣೇಗೌಡರು, ಧಾರವಾಡದ ಲೇಖಕಿ ಹೊರಾಟಗಾರ್ತಿ ಡಾ.ಹನುಮಾಕ್ಷಿ ಗೋಗಿ ಹಾಗೂ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯ ಪರವಾಗಿ ಸಂಚಾಲಕರಾದ ಆರ್. ಶಿವಕುಮಾರಸ್ವಾಮಿ ಕುರ್ಕಿ ಎಂಬ ನಾನು ಇಲ್ಲಿನ ಉಪನಿಬಂಧಕರ ನ್ಯಾಯಾಲಯಕ್ಕೆ ಹಾಜರಾಗಿದ್ದೆವು.

ಆ ವಿಚಾರಣೆಯಲ್ಲಿ ಕಸಾಪ ಅಧ್ಯಕ್ಷರಾದ ಡಾ.ಮನುಬಳಿಗಾರ್ ಹಾಗೂ ಗೌ.ಕಾರ್ಯದರ್ಶಿಗಳು ಉಪಸ್ಥಿತರಿದ್ದು ಮತ್ತೆ ತಮ್ಮ ಅದೇ ಹಳೇ ರಾಗದಲ್ಲಿ ” ಅಧ್ಯಕ್ಷರ ಅಧಿಕಾರ ಅವಧಿಯನ್ನು 3 ರ ಬದಲು 5 ವರ್ಷ ಮಾಡಿಕೊಳ್ಳಲು ಅವಕಾಶ ನೀಡಲು ಕೇಳಿಕೊಂಡರು. ಅಲ್ಲದೆ ಈ ನಿಬಂಧನೆಗಳನ್ನು ಇವತ್ತೇ ಈಗಲೇ ಅನುಮೋದಿಸುವಂತೆ , ತಮ್ಮ ಅಧಿಕಾರ ಅವಧಿಯಿಂದಲೇ ಜಾರಿಯಾಗುವಂತೆ ಕೋಟಾದಲ್ಲಿ ನಡೆಸಿದ ಸಭೆಯ ನಿಬಂಧನೆಗಳನ್ನು ಅನುಮೋದಿಸಬೇಕಾಗಿ ಹಟಕ್ಕೆ ಬಿದ್ದವರಂತೆ ಕೇಳಿಕೊಂಡರು.

ಆಗ ನಾವು ಮೂವರೂ ಸೂಕ್ತ ಕಾರಣಗಳನ್ನು ನೀಡಿ ಅದನ್ನು ಬಲವಾಗಿ ವಿರೋಧಿಸಿದೆವು. ಚುನಾವಣೆ ನಡೆದುದು 3 ವರ್ಷಗಳ ಕಾಲಾವಧಿಗಾಗಿಯೇ ವಿನಃ 5 ವರ್ಷಗಳಿಗಲ್ಲ. ಅಲ್ಲದೆ ನ್ಶಾ.ಶ್ಯಾಮಸಂದರ್ ಆಯೋಗ ಹಿಂದೊಮ್ಮೆ ಹಂ.ಪ.ನಾ. ಅವರು ತಮ್ಮ ಆಧಿಕಾರ ಅವಧಿ ವಿಸ್ತರೀಕರಣ ಮಾಡಿಕೊಳ್ಳಲು ಇವರಂತೆಯೇ ಮುಂದಾದಾಗ ಅದನ್ನು ತಿರಸ್ಕರಿಸಿತ್ತು. ಅಗ ಅವರು ತಿದ್ದಿಕೊಂಡಿದ್ದ 5 ರ ಬದಲು 3 ವರ್ಷವೇ ಇರುವಂತೆ ಸರಕಾರ ನೇಮಿಸಿದ ಆಯೋಗ ತಾಕೀತು ಮಾಡಿತ್ತು’ ಎಂಬ ವಿಷಯವನ್ನು ಕೋರ್ಟ್ ಗಮನಕ್ಕೆ ತಂದೆವು.
ಆಗ ಸ್ಪಂದಿಸಿದ ಉಪನಿಬಂಧಕರು ಅದನ್ನು ಆಸಕ್ತಿಯಿಂದ ಆಲಿಸಿದರು. ಅಲ್ಲದೆ ಬಳಿಗಾರರ ವಾದವನ್ನು ಒಪ್ಪದೆ ಈ ಕುರಿತು ಮಾಹಿತಿ ಸಾಕ್ಷಿಗಳನ್ನು ತೋರಿಸಲು ನಾವು ಮೂವರಿಗೆ ಅವಕಾಶ ಕೊಟ್ಟು ಜು.20 ರಂದು ವಿಚಾರಣೆ ಮಾಡಲಾಗುವುದೆಂದು ತಿಳಿಸಿದರು.

ಕನ್ನಡ ವಿದ್ವಾಂಶರು ದಿಗ್ಗಜರು ಕವಿಪುಂಗವರು 100 ವರ್ಷಗಳ ಹಿಂದೆ ನಿಸ್ವಾರ್ಥತೆಯಿಂದ ಕಟ್ಟಿದ ಈ ಕನ್ನಡ ಸಾಹಿತ್ಯ ಹೃನ್ಮಂದಿರ ಇದೀಗ ಹಣ-ಅಧಿಕಾರ ಲಾಲಸೆ ಇರುವ ಮನುಬಳಿಗಾರ ಅವರಂತಹ ಸ್ವಾರ್ಥಪರ ಜನರಿಂದ ಪೂರ್ಣ ಕಲುಷಿತವಾಗಿದೆ.
ಇದರ ಶುದ್ಧೀಕರಣಕ್ಕಾಗಿ ಇಂದು (ಜುಲೈ12) ರ ಸಂಜೆ 6 ಗಂಟೆಗೆ ದಾವಣಗೆರೆಯ ಉದ್ಯಾನವನದ ಕಾವ್ಯ ಮಂಟಪದಲ್ಲಿ “ಕಸಾಪ ಉಳಿಸಿ” ಆಂದೋಲನ ನಡೆಸಲು ಪೂರ್ವಬಾವೀ ಸಮಾಲೋಚನಾ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಸಾಪ ಆಜೀವ ಸದಸ್ಯರುಗಳು ಸ್ವಯಂಸ್ಫೂರ್ತಿಯಿಂದ ಪಾಲ್ಗೊಂಡು ಕಸಾಪ ಕ್ಕೆ ಬಂದಿರುವ ಈ ಕುತ್ತನ್ನು ದೂರಮಾಡಲು ಸಹಕರಿಸಲು ವಿನಂತಿ.

ಈಗಾಗಲೆ ಧಾರವಾಡ, ಬೆಂಗಳೂರು, ಮಂಗಳೂರು, ಬಳ್ಳಾರಿ, ಮೈಸೂರು, ಮಂಡ್ಯ, ಮುಂತಾದ ಕಡೆ ಆಂಧೋಲನ ನಡೆಸಲು ಹುರಿಗೊಳ್ಳುತ್ತಿದ್ದಾರೆ. ಆದ್ದರಿಂದ ಹಾಲಿ ಕಸಾಪ ಸಮಿತಿಯ ಯಾವುದೇ ಆಸೆ ಆಮಿಷ, ಹಿಂಜರಿಕೆಗೆ ಒಳಗಾಗದೆ ನಾಳೆ ಜು.12 ರ ಗುರುವಾರ ಸಂಜೆ 6.00 ಗಂಟೆಗೆ ಸರಿಯಾಗಿ ದಾವಣಗೆರೆ ವಿದ್ಯಾನಗರದ ಕಾವ್ಯಮಂಟಪ ಉದ್ಯಾನವನಕ್ಕೆ ಆಗಮಿಸಲು ಆಹ್ವಾನಿಸುತ್ತೇವೆ. ತಮ್ಮ ಆತ್ಮೀಯರೆಲ್ಲರಿಗೂ ಈ ಸಂದೇಶವನ್ನು ರವಾನಿಸಲು ವಿನಂತಿ.

ಆರ್.ಶಿವಕುಮಾರಸ್ವಾಮಿ ಕುರ್ಕಿ, ಸಂಚಾಲಕರು, ದಾವಣಗೆರೆ
ಮೊ: 8970948221

ದಿನದ ಸುದ್ದಿ

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

Published

on

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.

ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.

ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 days ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 days ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

ದಿನದ ಸುದ್ದಿ3 days ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

ದಿನದ ಸುದ್ದಿ3 days ago

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ...

ದಿನದ ಸುದ್ದಿ1 week ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ2 weeks ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ2 weeks ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ2 weeks ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

Trending