Connect with us

ಕ್ರೀಡೆ

ನೀವು ನಿದ್ರಿಸುವಾಗ ನಾನು ಜಗತ್ತನ್ನೇ ಗೆದ್ದೆ: ಅಪ್ಪನಿಗೆ ಹಿಮದಾಸ್ ಮಾತು

Published

on

ಸುದ್ದಿದಿನ ಡೆಸ್ಕ್: ನೀವೆಲ್ಲಾ ನಿದ್ರಿಸುತ್ತಿದ್ದೀರಾ? ನಾನು ಜಗತ್ತನ್ನೇ ಗೆದ್ದಿದ್ದೇನೆ ಅಪ್ಪಾ….
ಫಿನ್ ಲ್ಯಾಂಡ್‍ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡ ಅಥ್ಲೀಟ್ ಹಿಮದಾಸ್ ತನ್ನ ತಂದೆಗೆ ಹೇಳಿದ ಮಾತಿದು.
ಕ್ರೀಡೆಯ ಬಗ್ಗೆ ಅಷ್ಟೇನೂ ಗೊತ್ತಿಲ್ಲದ ತನ್ನ ಕುಟುಂಬ ತನ್ನ ಸ್ಪರ್ಧೆ ನೋಡದೆ ಮಲಗಿರಬಹುದು ಎಂದು ಕೊಂಡು ಅಪ್ಪನಿಗೆ ಕರೆ ಮಾಡಿದ ಹಿಮದಾಸ್‍ಗೆ ಒಂದು ಅಚ್ಚರಿ ಕಾದಿತ್ತು. ಇಲ್ಲಮ್ಮ ನಾವು ಮಲಗಿಲ್ಲ ನೀನು ಹೇಗೆ ಓಡುತ್ತೀಯಾ ಎಂಬುದನ್ನು ನೋಡಲು ನಾವೆಲ್ಲ ಟಿವಿ ಮಂದೆ ಕುಳಿತಿದ್ದೇವೆ ಎಂದು ಹಿಮದಾಸ್ ತಂದೆ ಹೇಳಿದಾಗ ಅವರ ಕಣ್ಣಲ್ಲಿ ಆನಂದ ಭಾಷ್ಪ ಚಿಮ್ಮಿ ಭಾವುಕರಾದರು.
ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟ ಹಿಮದಾಸ್ ಈಗ ಚರ್ಚೆಯ ವಿಷಯ.
ಹಿಮದಾಸ್‍ಗೆ ತಾನು ಒಬ್ಬ ಫುಟ್‍ಬಾಲ್ ಆಟಗಾರ್ತಿಯಾಬೇಕೆಂಬ ದೊಡ್ಡ ಕನಸಿತ್ತು ಆದರೆ, ಆಕೆಯ ಆಟದ ವೇಗವನ್ನು ಗಮನಿಸಿದ ಕೋಚ್, ಅಥ್ಲೀಟ್ ಆಗುವಂತೆ ಸಲಹೆ ನೀಡಿದ್ದರು. ಇದನ್ನು ಅನುಸರಿಸಿದ ಅವರೀಗೆ ಉತ್ತುಂಗದಲ್ಲಿ ನಿಂತಿದ್ದಾರೆ.

ಕಂಟ್ರಿ ಸರಾಯಿ ವಿರುದ್ಧ ಧನಿ ಎತ್ತಿದ್ದವರು

ಹಿಮದಾಸ್ ಅವರು ಕೇವಲ ಕ್ರೀಡೆಗಾಗಿ ಬದುಕಿದ ಹುಡುಗಿಯಲ್ಲ. ಆಕೆಗೆ ಸಾಮಾಜಿಕ ಕಳಕಳಿಯೂ ಇದೆ. ಅಸ್ಸಾಂನ ಧಿಂಗಿ ಗ್ರಾಮದವರಾದ ಹಿಮದಾಸ್ ಅವರು ತಮ್ಮೂರಿನಲ್ಲಿ ನಡೆಯುತ್ತಿದ್ದ ಬಟ್ಟಿ ಸಾರಾಯಿ ಅಂಗಡಿಗಳ ಧ್ವಂಸ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಗ್ರಾಮದಲ್ಲಿ ಭಟ್ಟಿ ಸಾರಾಯಿ ದಂಧೆ ನಿಲ್ಲಲು ಹಿಮದಾಸ್ ಅವರೂ ಕೂಡ ಕಾರಣ.
ಏಜೆನ್ಸಿಗಳಿಗೆ ಪಾಠ
ಕೇವಲ 40 ಸೆಂಟ್ ಜಾಗ ಅಪ್ಪ ಅಮ್ಮನಿಗಿದ್ದ ಐವರು ಮಕ್ಕಳಲ್ಲಿ ಒಬ್ಬರಾಗಿದ್ದ ಹಿಮದಾಸ್ ಜೀವನದಲ್ಲಿ ಕಷ್ಟವನ್ನೇ ಉಂಡಿದ್ದು ಹೆಚ್ಚು. ಯಾವುದೇ ಏಜೆನ್ಸಿಗಳ ಮೂಲಕ ತರಬೇತಿ ಪಡೆಯಲು ಹಣವಿಲ್ಲದೆ ಸ್ವಂತ ಪ್ರಯತ್ನದಿಂದ ಇಲ್ಲಿಯವರಿಗೆ ಮುಟ್ಟಿರುವ ಹಿಮದಾಸ್ ಅವರು ಎಲ್ಲರಿಗೂ ಒಂದು ಪಾಠ.

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ21 hours ago

ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ಕೇಸ್‌, ಉಡುಪಿಯಿಂದ ವ್ಯಕ್ತಿಯನ್ನು ಠಾಣೆಗೆ ಕರೆತಂದ ಕ್ರಮಕ್ಕೆ ಹೈಕೋರ್ಟ್‌ ಗರಂ

ಸುದ್ದಿದಿನ,ಬೆಂಗಳೂರು: ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಕಾರ್ಯಕ್ರಮ ರದ್ದಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ಹೆಸರಿನಲ್ಲಿ ಠಾಣೆಗೆ ಕರೆತಂದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಕರ್ನಾಟಕ...

ದಿನದ ಸುದ್ದಿ21 hours ago

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಅರ್ಹ ಫಲಾನುಭವಿಗಳ ಖಚಿತತೆಗೆ ಮನೆ-ಮನೆ ಪರಿಶೀಲನೆ

ಸುದ್ದಿದಿನ,ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಸರ್ಕಾರ ಮಹತ್ವದ ಪರಿಶೀಲನಾ ಕ್ರಮಕ್ಕೆ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಪ್ರಯೋಜನ ತಲುಪಬೇಕು ಎಂಬ...

ದಿನದ ಸುದ್ದಿ22 hours ago

ಬೆಂಗಳೂರು ಮೆಟ್ರೋದಲ್ಲಿ ಸುರಕ್ಷತೆಗೆ ಹೊಸ ಕವಚ: PSD ಕಾಮಗಾರಿ ಯಾವಾಗ?

ಸುದ್ದಿದಿನ,ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೂಪಿಸಿರುವ ಪ್ಲಾಟ್‌ಫಾರ್ಮ್ ಸ್ಕ್ರೀನ್‌ ಡೋರ್‌ (PSD) ಯೋಜನೆಗೆ ಕೇಂದ್ರದ ಅನುಮೋದನೆಯ ವಿಳಂಬವೇ ದೊಡ್ಡ ಅಡ್ಡಿಯಾಗಿದೆ. ಮೆಟ್ರೋ...

august-30-2026-kannada-daily-horoscope-rashi-bhavishya august-30-2026-kannada-daily-horoscope-rashi-bhavishya
ನಿತ್ಯ ಭವಿಷ್ಯ22 hours ago

ವಿಶೇಷ ರಾಶಿಫಲ: ಆಗಸ್ಟ್ 30ರ ಭಾನುವಾರ ಯಾರಿಗೆ ಅದೃಷ್ಟ? ಯಾವ ರಾಶಿಗೆ ಎಚ್ಚರಿಕೆ?

ಸುದ್ದಿದಿನ, ಬೆಂಗಳೂರು: ಶ್ರಾವಣ ಮಾಸದ ಕೃಷ್ಣ ಪಕ್ಷದ ದ್ವಿತೀಯ ಬೆಳಿಗ್ಗೆ 9:37ರವರೆಗೆ ಇದ್ದು, ನಂತರ ತೃತೀಯೆ ಆರಂಭವಾಗಲಿದೆ. ಉತ್ತರಾಭಾದ್ರಪದ ನಕ್ಷತ್ರದ ಪ್ರಭಾವದ ಬಳಿಕ ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದೆ....

ದಿನದ ಸುದ್ದಿ2 days ago

ಬೆಂಗಳೂರು ಜಲಸಂಚಾರಕ್ಕೆ ಹೊಸ ವೇಗ: ಬಿನ್ನಿಗಾನಹಳ್ಳಿ-ಬೈಯಪ್ಪನಹಳ್ಳಿ ನಡುವೆ 65 ಕಿ.ಮೀ. ನೀರು ಮಾರ್ಗ!

ಸುದ್ದಿದಿನ,ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಬಂದಾಗಲೆಲ್ಲಾ ಎದುರಾಗುವ ನೀರು ನಿಲ್ಲುವಿಕೆ ಹಾಗೂ ಪ್ರವಾಹದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತಾಂತ್ರಿಕ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ. ಇದರ ಭಾಗವಾಗಿ...

bengaluru-koodlugate-snn-raj-eternia-18-floor-building-demolition bengaluru-koodlugate-snn-raj-eternia-18-floor-building-demolition
ದಿನದ ಸುದ್ದಿ2 days ago

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ...

kalaburagi-municipal-corporation-mayor-deputy-mayor-election-congress-win kalaburagi-municipal-corporation-mayor-deputy-mayor-election-congress-win
ದಿನದ ಸುದ್ದಿ2 days ago

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್...

ravichandran-political-entry-dk-shivakumar-mlc-nomination ravichandran-political-entry-dk-shivakumar-mlc-nomination
ದಿನದ ಸುದ್ದಿ2 days ago

ರಾಜಕೀಯಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂಟ್ರಿ? ಡಿಕೆಶಿ ಭೇಟಿಯ ಹಿಂದೆ ಇದೆ ‘ಕೈ’ ಲೆಕ್ಕ!

ಸಿಎಂ ಡಿಕೆ ಶಿವಕುಮಾರ್ ಭೇಟಿ ಬಳಿಕ ಹೆಚ್ಚಿದ ಕುತೂಹಲ; ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ ಸುದ್ದಿದಿನ,ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಕ್ರೇಜಿಸ್ಟಾರ್ ರವಿಚಂದ್ರನ್...

ದಿನದ ಸುದ್ದಿ2 days ago

ರಸ್ತೆ ನಿಯಮ ಉಲ್ಲಂಘನೆಗೆ ಬ್ರೇಕ್ ಯಾವಾಗ? 4 ವರ್ಷದಲ್ಲಿ 5.67 ಕೋಟಿ ಪ್ರಕರಣ, ₹2,361 ಕೋಟಿ ದಂಡ ಸಂಗ್ರಹ!

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ದಾಖಲಾಗುತ್ತಿವೆ. ರಸ್ತೆ ಸುರಕ್ಷತೆ ಕುರಿತು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದ್ದರೂ, ನಿಯಮ ಉಲ್ಲಂಘನೆಗೆ...

janardhana-reddy-attacks-b-nagendra-valmiki-scam-ballari-political-war janardhana-reddy-attacks-b-nagendra-valmiki-scam-ballari-political-war
ದಿನದ ಸುದ್ದಿ2 days ago

ವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್‌ಗೆ ರಾಜೀನಾಮೆ ಸವಾಲು!

ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ...

Trending