ದಿನದ ಸುದ್ದಿ
ಸಾವಿರ ರೂ. ಹೊಸ ನೋಟಲ್ಲಿ ಗುಜರಾತ್ ರಾಣಿ ಉದಯಮತಿ ಇತಿಹಾಸ ?
ಸುದ್ದಿದಿನ ಡೆಸ್ಕ್: ಹೊಸದಾಗಿ ಬಿಡುಗಡೆಯಾಗಲಿರುವ ಸಾವಿರ ರೂ.ನೋಟುಗಳಲ್ಲಿ ಗುಜರಾತ್ ರಾಣಿ ಉದಯಮತಿ ಇತಿಹಾಸ ಇದೆ ಎನ್ನುವ ವಿಷಯ ಈಗ ಜಾಅಲತಾಣಗಳಲ್ಲಿ ಹರಿದಾಡುತ್ತಿವೆ.
ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರೋ 100 ರ ಹೊಸ ನೋಟಿಗೂ.. ಗುಜರಾತ್ನ ರಾಣಿಗೂ, ಪ್ರಧಾನಿ ಮೋದಿಗೂ ಒಂದು ಲಿಂಕ್ ಇದೆ. ಅದೇನಪ್ಪಾ ಅಂದ್ರೆ ರಿಲೀಸ್ ಆಗಲಿರೋ ಹೊಸ 100 ರ ನೋಟಿನಲ್ಲಿ ಗುಜರಾತ್ ರಾಣಿಯ ಇತಿಹಾಸವನ್ನ ಸಾರುವ ರಾಣಿ ಕಿ ವಾವ್ ಚಿತ್ರವನ್ನ ಸೇರಿಸಿದೆ.
ಈ ರಾಣಿ ಕಿ ವಾವ್ ಗುಜರಾತ್ನ ಪಠಾಣ್ನಲ್ಲಿರೋ ಪಾರಂಪರಿಕ ಸ್ಥಳ. ಯುನ್ಸ್ಕೋನ ವಿಶ್ವ ಪ್ರಸಿದ್ದ ಪಾರಂಪರಿಕ ಸ್ಥಳಗಳ ಪೈಕಿ ಇದೂ ಒಂದು.. ಈ ರಾಣಿ ಕಿ ವಿವಾ ತಲೆ ಕೆಳಗಾದ ದೇವಸ್ಥಾನವೂ ಹೌದು ಹಾಗೂ ಜಲ ಶೇಖರಣೆ ಮಾಡುವ ಮೆಟ್ಟಿಲಿನ ಬಾವಿಯೂ ಕೂಡ.. ನಿಜಕ್ಕೂ ಇದರ ನಿರ್ಮಾಣ ಅಚ್ಚರಿ ಆಗುತ್ತೆ. ಇಂತಹ ಒಂದು ಸ್ಮಾರಕವನ್ನ ನಿರ್ಮಿಸಿದ ಆ ರಾಣಿಯ ಹೆಸರು ಉದಯಮತಿ.
11 ನೇ ಶತಮಾನದಲ್ಲಿ ಚೌಲುಕ್ಯ ಸಾಮ್ರಾಜ್ಯದ ಭೀಮ ಮಹಾರಾಜನ ನೆನಪಿಗಾಗಿ ರಾಣಿ ಉದಯಮತಿ ಮತ್ತು ಮಗ ಕರ್ಣ ಈ ದೇವಾಲಯದ ಬಾವಿಯನ್ನ ನಿರ್ಮಿಸಿದ್ರು.. ಈ ದೇವಾಲಯದ ಪಕ್ಕದಲ್ಲೇ ಸರಸ್ವತಿ ನದಿ ಹರೀತಿರೋದ್ರಿಂದ ಅಲ್ಲಿನ ನೀರನ್ನ ಇಲ್ಲಿ ಶೇಖರಣೆ ಮಾಡಲಾಗ್ತಿತ್ತು.. ಈ ದೇವಾಲಯದಲ್ಲಿ ವಿಷ್ಣು, ರಾಮ, ಕೃಷ್ಣ, ನರಸಿಂಹ, ವಾಮನ ವರಾಹಿ ದೇವರುಗಳು ಸೇರಿದಂತೆ ಅನೇಕ ಶಿಲಾಕೃತಿಗಳನ್ನ ಕೆತ್ತಲಾಗಿದೆ.. ಏಳು ಗ್ಯಾಲರಿಗಳಲ್ಲಿ ಸುಮಾರು 800 ಕಲಾಕೃತಿಗಳಿರೋ ಈ ರಾಣಿ ಕಿ ವಾವ್ ಇವತ್ತಿಗೂ ತನ್ನ ಸೌಂದರ್ಯವನ್ನ ಕೆಡಿಸಿಕೊಳ್ಳದೇ ಪ್ರವಾಸಿಗರನ್ನ ಆಕರ್ಷಿಸುತ್ತಿದೆ..
ಸದ್ಯ ಈ ರಾಣಿ ಕಿ ವಾವ್ ಭಾರತದ ಮೆಟ್ಟಿಲಿನ ಭಾವಿ ಎಂದೇ ಖ್ಯಾತವಾಗಿದೆ. ಇದರ ತಳದಲ್ಲೊಂದು ಸುರಂಗಕ್ಕೆ ಬಾಗಿಲಿದ್ದು ಇಲ್ಲಿಂದ ಹೊರ ನಡೆದರೆ 30 ಕಿ.ಮೀ ದೂರದ ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸುತ್ತದೆ.. ಇನ್ನು ಈ ದೇವಾಲಯದ ಸುತ್ತ ಮುತ್ತ 50-60 ವರ್ಷಗಳ ಹಿಂದೆ ಆಯುರ್ವೇದ ಔಷಧಿಗೆ ಸಂಬಂಧಿಸಿದ ಗಿಡಗಳಿದ್ದವಂತೆ. ಇದರ ಪರಿಣಾಮವೋ ಏನೋ ಈ ಬಾವಿಯಲ್ಲಿನ ನೀರು ಇಂದಿಗೂ ಔಷಧಿಯಾಗಿ ಬಳಸಲಾಗ್ತಿದ್ಯಂತೆ. ಜ್ವರ ಸೇರಿದಂತೆ ಹಲವಾರು ರೋಗಗಳಿಗೆ ಈ ಬಾವಿಯ ನೀರು ಮದ್ದಂತೆ..
ರಾಣಿ ಉದಯಮತಿ ತನ್ನ ಪತಿಗಾಗಿ ನಿರ್ಮಿಸಿದ ಈ ದೇವಾಲಯದ ಬಾವಿ ಮೋದಿ ಮನಸ್ಸನ್ನ ಸೂರೆಗೊಂಡಿದೆ. ಹಾಗಾಗಿ ಇದನ್ನ 2016 ರಲ್ಲಿ ಮೋದಿ ಅವರು ಸ್ವಚ್ಚ ಪಾರಂಪರಿಕ ತಾಣ ಎಂದು ಘೋಷಿಸಿದ್ದಾರೆ. ಅಷ್ಟೇ ಅಲ್ಲ ಮಹೇಶ ಬಾಬು ನಟಿಸಿರೋ ತೆಲಗಿನ ದೂಕುಡು ಚಿತ್ರದ ಶೂಟಿಂಗ್ ಕೂಡ ಇಲ್ಲೇ ನಡೆದಿದೆ. ಇದೀಗ ಮೋದಿ ಬಿಡುಗೆಡೆ ಮಾಡಲಿರೋ 100ರ ನೋಟಿನಲ್ಲೂ ಸ್ಥಾನ ಪಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ1 day agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

