Connect with us

ಸಿನಿ ಸುದ್ದಿ

HaPpY BiRtHdAy | ಕಭೀ ಕಭೀ ಮೇರೆ ದಿಲ್ ಮೇ| ಗಾನ ಕೋಗಿಲೆ ಮುಖೇಶ್ ಬಗ್ಗೆ ನೀವಿಷ್ಟು ಓದಲೇ ಬೇಕು

Published

on

ಫೋಟೋ ಮೇಲಿನ ಸಹಿ ಮುಖೇಶ್ ಅವರದ್ದು

ಭಾರತೀಯ ಚಿತ್ರರಂಗದ ಅಮರ ಗಾಯಕರಲ್ಲೊಬ್ಬರಾದ ಮುಖೇಶ್ ಅವರು ಜನಿಸಿದ್ದು ಜುಲೈ 22, 1923ರಲ್ಲಿ. 1950ರ ದಶಕದಿಂದ ಎಪ್ಪತರ ದಶಕದಲ್ಲಿ ಅವರ ಕಂಠದಿಂದ ಹರಿದ ಗಾನ ಸುಧೆ ತಣಿಸದ ಕಿವಿಗಳೇ ಇಲ್ಲ. ತಟ್ಟದ ಹೃದಯಗಳಿಲ್ಲ. ಒಂದಷ್ಟು ನಟನಾಗಿ ಸಿನಿಮಾ ಗಾಯಕನಾಗಿ ಮತ್ತು ಭಕ್ತಿಗೀತೆಗಳ ಹಾಡುಗಾರನಾಗಿ ಮುಖೇಶ್ ಮಾಡಿದ ಮೋಡಿ ಮೋಹಕವಾದದ್ದು.

ಸಂಗೀತ ಶಿಕ್ಷಕರೊಬ್ಬರು ತಮ್ಮ ಸೋದರಿಗೆ ಕಲಿಸಲು ಬರುತ್ತಿದ್ದಾಗ ಅದನ್ನು ಪಕ್ಕದ ಕೋಣೆಯಿಂದ ಆಲಿಸಿ ಹಾಡಲು ಪ್ರಾರಂಭಿಸಿದ ಮುಖೇಶ್ ಮುಂದೆ ಬೆಳೆದ ರೀತಿ ಮಹೋನ್ನತವಾದದ್ದು. ‘ನಿರ್ದೋಷ್’ ಎಂಬ ಚಿತ್ರದಲ್ಲಿ ಗಾಯಕ ನಟನಾಗಿ ಚಿತ್ರಜೀವನ ಪ್ರಾರಂಭಿಸಿದ ಮುಖೇಶ್ ಸುಮಾರು ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ತಮ್ಮ ಗಾನಸುಧೆ ಹರಿಸಿದರು.

ಕೆಲವು ವರ್ಷಗಳ ಕಾಲ ಯುಗಳಗೀತೆಗಳನ್ನು ಹಾಡಿದ ಮುಖೇಶ್ 1945ರಲ್ಲಿ ಪಹಲೀ ನಜರ್ ಚಿತ್ರದಲ್ಲಿ ಮೊದಲ ಬಾರಿಗೆ ‘ದಿಲ್ ಜಲ್‌ತಾ ಹೈ ತೋ ಜಲ್‌ನೇ ದೇ’ಹಾಡನ್ನು ಹಾಡಿದರು. ಅದು ಯಶಸ್ವಿಯಾಯಿತು. ಮುಂದೆ ನೌಶಾದ್ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ ‘ಅಂದಾಜ್’ ಚಿತ್ರದಲ್ಲಿ ಹಾಡಿದ ‘ತೂ ಕಹೇ ಅಗರ್…’, ‘ಝೂಮ್ ಝೂಮ್ ಕೇ ನಾಚೇ ಆಜ್…’ , ‘ಹಮ್ ಆಜ್ ಕಹೀಂ ದಿಲ್ ಖೋ ಬೈಠೇ…’ ಮತ್ತು ‘ಟೂಟೇ ನ ದಿಲ್ ಟೂಟೇ ನ…’ ಹಾಡುಗಳಲ್ಲಿ ಮುಖೇಶರ ಸ್ವಂತಿಕೆ ಎದ್ದು ತೋರುತ್ತವೆ

‘ರಾಜ್ ಕಪೂರರ ಗಾಯನ ಸ್ವರ ಮುಖೇಶ್’ ಎಂಬ ಪ್ರಸಿದ್ಧವಾದ ಮಾತು 1948ರಲ್ಲಿ ರಾಜ್ ಕಪೂರ್ ನಿರ್ಮಿಸಿ ನಟಿಸಿದ ‘ಆಗ್’ ಚಿತ್ರದಿಂದ ಆರಂಭವಾಯಿತು. ರಾಜ್ ಕಪೂರರ ‘ಆವಾರಾ’ ಮತ್ತು ‘ಶ್ರೀ 420’ ಚಿತ್ರಗಳಲ್ಲಿ ಮುಖೇಶ್ ಹಾಡಿದ ಹಾಡು ಎಲ್ಲೆಲ್ಲೂ ಪ್ರಸಿದ್ಧವಾಗಿಬಿಟ್ಟವು.

ಹಲವು ಚಿತ್ರಗಳಲ್ಲಿ ಅಭಿನಯ ಮತ್ತು ನಿರ್ಮಾಣ ಮಾಡಲು ಹೋಗಿ ಸೋಲು ಕಂಡ ಮುಖೇಶ್, 1953ರಲ್ಲಿ ಬಿಡುಗಡೆಯಾದ ರಾಜ್ ಕಪೂರರ ಆಹ್ ನಲ್ಲಿ ‘ಛೋಟಿಸೀ ಯಹ್ ಜಿಂದ್‌ಗಾನೀರೇ…’ ಎಂಬ ಹಾಡನ್ನು ಟಾಂಗೇವಾಲನಾಗಿ ಹಾಡಿ ಅಭಿನಯಿಸಿದ ನಂತರ ಅಭಿನಯಕ್ಕೆ ವಿದಾಯ ಹೇಳಿ ಗಾಯನಕ್ಕಷ್ಟೇ ತಮ್ಮನ್ನು ಮುಡಿಪಿಟ್ಟರು.

1958ರಲ್ಲಿ ದಿಲೀಪ್ ಕುಮಾರ್ ಅಭಿನಯದ ಯಹೂದಿ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ…’ ಹಾಡು ಬಿಡುಗಡೆಯಾದಾಗ ಹಲವುಕಾಲ ನಿಧಾನವಾಗಿ ಹರಿದ ಮುಖೇಶ್ ಅವರ ಬದುಕಿಗೆ ಮತ್ತೊಂದು ಮಿನುಗು ನಕ್ಷತ್ರವಾಯಿತು. ದಿಲೀಪ್ ಕುಮಾರರ ಆ ವರ್ಷದ ಇನ್ನೊಂದು ಚಿತ್ರ ಬಿಮಲ್ ರಾಯ್ ನಿರ್ದೇಶನದ ಮಧುಮತಿ ಚಿತ್ರದಲ್ಲಿ ಸಲಿಲ್ ಚೌಧುರಿ ಸಂಗೀತ ನಿರ್ದೇಶನದಲ್ಲಿ ಹಾಡಿದ ಎಲ್ಲವೂ ಜನಪ್ರಿಯವಾದವು. ಅಲ್ಲದೆ ‘ಪರ್ವರಿಶ್’ ಹಾಗೂ ಮರುವರ್ಷದ ‘ಫಿರ್ ಸುಬಹ್ ಹೋಗೀ’ ಚಿತ್ರಗಳ ಹಾಡುಗಳ ಜತೆಗೆ 1960ರಿಂದ 1976ರ ವರೆಗಿನ ಸಮಯದಲ್ಲಿ ಅತ್ಯಂತ ಹೃದಯಂಗಮ ಹಾಡುಗಳಿಂದ ಮುಖೇಶ್ ರಸಿಕರನ್ನು ರಂಜಿಸಿದರು. ನಾಲ್ಕು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ ಮತ್ತು ಒಮ್ಮೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶ್ರೇಷ್ಠ ಹಿನ್ನೆಲೆ ಗಾಯನಕ್ಕಾಗಿ ಪಡೆದರು.

ಅಫ್‌ಸಾನಾ ಚಿತ್ರದ ‘ಕಿಸ್‌ಮತ್ ಬಿಗ್‌ಡೀ, ದುನಿಯಾ ಬದ್‌ಲೀ’, ಯಹೂದೀ ಚಿತ್ರದ ‘ಯೆಹ್ ಮೇರಾ ದೀವಾನಾಪನ್ ಹೈ’, ದೇವರ್ ಚಿತ್ರದ ‘ಬಹಾರೋಂ ನೆ ಮೇರಾ ಚಮನ್ಈ ಚಿತ್ರದ ‘ಕಹಿಂ ದೂರ್ ಜಬ್ ದಿನ್ ಡಲ್ ಜಾಏ…’ ಕಭೀ ಕಭೀ ಚಿತ್ರದ ‘ಕಭೀ ಕಭೀ ಮೇರೆ ದಿಲ್ ಮೇ’, ಮುಂತಾದ ಹಾಡುಗಳಲ್ಲಿ ಹಾಡಿನಲ್ಲಿ ಮಾಧುರ್ಯದ ಜತೆ ದುಃಖದ ಒಳತೋಟಿಯೊಂದು ಹರಿಯುವದನ್ನು ಅನುಭವಿಸಬಹುದು.

ರಾಜ್ ಕಪೂರರ ಸಂಗೀತಸ್ವರವೆಂದು ಗುರುತಿಸಲ್ಪಟ್ಟ ಮುಖೇಶ್ ಮನೋಜ್ ಕುಮಾರನಿಗೇ ಹೆಚ್ಚು ಹಾಡಿದರಲ್ಲದೆ, ಶಂಕರ್-ಜೈಕಿಶನರ ಸಂಗೀತ ನಿರ್ದೇಶನಕ್ಕಿಂತ ಅಧಿಕವಾಗಿ ಕಲ್ಯಾಣ್‌ಜೀ-ಆನಂದ್‌ಜೀಯವರ ನಿರ್ದೇಶನದಲ್ಲಿ ಹಾಡಿದರು. ರಾಜ್ ಕಪೂರರ ಸತ್ಯಮ್ ಶಿವಮ್ ಸುಂದರಮ್ ಚಿತ್ರದಲ್ಲಿ ಲಕ್ಷ್ಮೀಕಾಂತ್-ಪ್ಯಾರೇಲಾಲರ ಸಂಗೀತ ನಿರ್ದೇಶನದಲ್ಲಿ ಧ್ವನಿಮುದ್ರಿಸಲ್ಪಟ್ಟ ‘ಚಂಚಲ್, ಶೀತಲ್, ನಿರ್ಮಲ್, ಕೋಮಲ್ ಸಂಗೀತ್ ಕೀ ದೇವೀ ಸ್ವರ್ ಸಜ್‌ನೀ’ ಹಾಡು ಕೊನೆಯದಾಯಿತು. ನಂತರ ಲತಾ ಜತೆಗೂಡಿ ಅಮೆರಿಕಾ ಸಂಯುಕ್ತ ಸಂಸ್ಥಾನಗಳಲ್ಲಿ ಸಂಗೀತ ಪರ್ಯಟನೆಗೆ ಹೋದ ಅವರು ಆ ಪ್ರವಾಸದ ಸಮಯದಲ್ಲಿ ನಿಧನರಾದರು. ಕೇವಲ 53ವರ್ಷ ಜೀವಿಸಿದ್ದ ಮುಖೇಶ್ ತಮ್ಮ ಧ್ವನಿಯಲ್ಲಿ ಉಳಿಸಿಹೋದ ಮಾಧುರ್ಯದ ಹಾಡುಗಳು ಚಿರಂತನವಾಗುಳಿದಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ1 week ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ3 weeks ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ3 weeks ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ3 weeks ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ3 weeks ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

Trending