Connect with us

ಸಿನಿ ಸುದ್ದಿ

HapPy BiRtHdAy | ‘ಹಾಸ್ಯ ಬ್ರಹ್ಮ ನರಸಿಂಹ ರಾಜು’ ಅವರ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

ಡಾ.ರಾಜ್ ಕುಮಾರ್ ಅವರ ಕಾಲ್ ಶೀಟ್ ಗಿಂತಲೂ ಮೊದಲು ನರಸಿಂಹರಾಜು ಅವರ ಕಾಲ್ ಶೀಟ್ ಬುಕ್ ಮಾಡಲು ಪ್ರಯತ್ನಿಸುತ್ತಿದ್ದ ಕಾಲವೊಂದಿತ್ತು. ಅವರೇ ನಮ್ಮ ತಿಳಿ ಹಾಸ್ಯದ ಬ್ರಹ್ಮ, ಕರ್ನಾಟಕದ ಚಾಪ್ಲಿನ್ ನರಸಿಂಹರಾಜು ಅವರಿಗೆ ಜನ್ಮದಿನದ ಶುಭಾಶಯಗಳು.

ನಮ್ಮ ನಾಡು ಕಂಡ ಶ್ರೇಷ್ಠರಲ್ಲಿ ಶ್ರೇಷ್ಠ ಕಲಾವಿದರಲ್ಲೊಬ್ಬರಾದ ಹಾಸ್ಯಚಕ್ರವರ್ತಿ ನರಸಿಂಹರಾಜು ಅವರ ಜನ್ಮದಿನ ಜುಲೈ 24ರಂದು. ಅವರು ಜನಿಸಿದ ವರ್ಷ 1926. ನಾವು ಮೆಚ್ಚಿರುವ ಯಾವುದೇ ಶ್ರೇಷ್ಠ ನಟ ನಟಿಯರಿರಲಿ, ಅವರು ನಟಿಸಿರುವ ನೂರಿನ್ನೂರು ಚಿತ್ರಗಳು ಇರುತ್ತವೆಂದರೆ ಅವರ ಬೆರಳೆಣಿಕೆಯಷ್ಟು ಪಾತ್ರಗಳು ನಮ್ಮನ್ನು ಸೆಳೆದಿರುತ್ತವೆ. ಇಲ್ಲವೇ ನಾವು ಅವರ ಅಪಾರ ಅಭಿಮಾನಿಗಳಾಗಿರುತ್ತೇವೆ ಎಂದುಕೊಂಡರೂ ಆ ಸಂಖ್ಯೆ ಇನ್ನೊಂದಷ್ಟು ಎಂಬಂತಿರಬಹುದು ಅಷ್ಟೇ. ಆದರೆ ನರಸಿಂಹರಾಜು ಅವರ ಬಗ್ಗೆ ಆ ಮಾತು ಅನ್ವಯಿಸುವುದಿಲ್ಲ. ಅವರ ಪ್ರತೀ ಪಾತ್ರವೂ ಜನತೆಗೆ ಪ್ರಿಯವೇ.

ನರಸಿಂಹರಾಜು ಅವರ ಬಗ್ಗೆ ಅವರ ಪುತ್ರಿ ಸುಧಾನರಸಿಂಹರಾಜು ಅವರು ದೂರದರ್ಶನದಲ್ಲಿ ಕಾರ್ಯಕ್ರಮ ಮಾಡಿದಾಗ ಸಂದರ್ಶನದಲ್ಲಿ ಭಾಗವಹಿಸಿದ್ದ ವರನಟ ರಾಜ್ ಕುಮಾರ್ ಅವರು ಹೇಳಿದ್ದ ಮಾತು ನೆನಪಾಗುತ್ತಿದೆ, “ಅಂದಿನ ದಿನದಲ್ಲಿ ನಿರ್ಮಾಪಕ ನಿರ್ದೇಶಕರು, ಚಲನಚಿತ್ರಗಳಿಗೆ ಮೊದಲು ನರಸಿಂಹರಾಜು ಅವರ ದಿನಗಳನ್ನು ಗುರುತುಪಡಿಸಿಕೊಂಡು ಉಳಿದ ನಮ್ಮಂತಹ ಕಲಾವಿದರನ್ನು ಸಂಪರ್ಕಿಸುತ್ತಿದ್ದರು“. ರಾಜ್ ಅವರು ಹೇಳಿದ ಮಾತು ನರಸಿಂಹರಾಜು ಅವರು ಗಳಿಸಿದ ಶ್ರೇಷ್ಠತೆಗೆ ಮತ್ತು ಅಂತಹ ಮಾತನ್ನು ಹೇಳುವ ರಾಜ್ ಅವರ ಸಜ್ಜನತೆಯ ಶ್ರೇಷ್ಠತೆಗೆ ಕನ್ನಡಿ ಹಿಡಿದಂತಿದೆ. ರಾಜ್ ಕುಮಾರ್ ಮತ್ತು ನರಸಿಂಹರಾಜು ಅವರ ಜೋಡಿ ಕನ್ನಡ ಚಿತ್ರರಂಗದಲ್ಲಿ ಸಂಭವಿಸಿದ ಅದ್ಭುತಗಳಲ್ಲೊಂದು. ಈ ಜೋಡಿಗೆ ಬಾಲಣ್ಣ ಅವರನ್ನು ಕೂಡಾ ಸೇರಿಸಬಹುದು.

ಅಂದಿನ ದಿನದಲ್ಲಿ ಬಾಲಕೃಷ್ಣ ಮತ್ತು ನರಸಿಂಹರಾಜು ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಪೂರಕವಾಗಿ ಅಭಿನಯಿಸುತ್ತಿದ್ದುದು ನೆನಪಾಗುತ್ತದೆ. ಬಾಲಣ್ಣ ಅವರದು ರೇಗುವ ಅಸಹನತೆಯ ಪಾತ್ರವೋ, ಕೆಲವೊಂದು ಭಾರೀ ಕೃತ್ರಿಮ ಪಾತ್ರವೋ ಆಗಿರಬಹುದಾದರೂ ನರಸಿಂಹರಾಜು ಅವರ ಪಾತ್ರ ಮಾತ್ರ ಸರಳ ಸಜ್ಜನಿಕೆಯ ನೆರಳಲ್ಲೇ ಮೂಡುವ ಪೆದ್ದನದೋ, ಪೆಚ್ಚನದೋ, ತುಂಟನದೋ, ಮೂರ್ಖನದೋ ಆದ, ಹಾಗೆ ನಾವಾಗಲು ಇಷ್ಟಪಡದಿದ್ದರೂ ಇಂಥಹ ಪಾತ್ರ ಯಾವಾಗಲೂ ನಮ್ಮ ಮುಂದೆ ಇರಬೇಕು ಎನಿಸುವಂತೆ ಆಪ್ತವಾಗಿರುತ್ತಿದ್ದ ಸುಂದರತೆಯ ಹೃದ್ಭಾವದ ಸೃಜನಸೃಷ್ಠಿಗಳು. ನರಸಿಂಹರಾಜು ಅವರ ಹಿಂದೆ ಹಾಗೂ ಅವರ ನಂತರ ಅನೇಕ ಕಲಾವಿದರು ಚಿತ್ರರಂಗದಲ್ಲಿ ಮೂಡಿದ್ದಾರೆ. ಹೀಗೆ ಮೂಡಿದ ಹಲವಾರು ಕಲಾವಿದರು ನಮಗೆ ಇಷ್ಟವೂ ಆಗಿದ್ದಾರೆ ನಿಜ. ಆದರೆ ನರಸಿಂಹರಾಜು ಅಂತಹ ಆಳವಾದ ಆಪ್ತತೆ ಮೂಡಿಸಿದ ನಟ ಮಾತ್ರ ಚಾರ್ಲಿ ಚಾಪ್ಲಿನ್ ಹೊರತಾಗಿ ಅವರೊಬ್ಬರೇ.

ಕನ್ನಡದಲ್ಲಿ ಹೊಸಬಗೆಯ ಪ್ರಯೋಗ, ವೈವಿಧ್ಯಪೂರ್ಣ ಕಥೆಗಳು, ಯಶಸ್ವೀ ಚಿತ್ರಗಳು ಹೊರಬಂದದ್ದು ಕಳೆದ ಶತಮಾನದ ಐದು, ಆರು ಮತ್ತು ಏಳನೆಯ ದಶಕಗಳಲ್ಲಿ. ಈ ಅವಧಿ ಕನ್ನಡ ಚಿತ್ರರಂಗದ ಸುವರ್ಣ ಯುಗ. ಈ ಯುಗದಲ್ಲಿ ರಾರಾಜಿಸಿದ ನರಸಿಂಹರಾಜು, 1954ರಲ್ಲಿ ಬಿಡುಗಡೆಯಾದ ‘ಬೇಡರ ಕಣ್ಣಪ್ಪ`ದಿಂದ ಆರಂಭವಾಗಿ 1979ರವರೆಗಿನ 25 ವರ್ಷಗಳಲ್ಲಿ 250ಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಹಾಸ್ಯನಟರಾಗಿ ಬೆಳಗಿದವರು.

ತಮ್ಮ ನಾಲ್ಕನೆಯ ವಯಸ್ಸಿನಲ್ಲಿ ಸಿ.ಬಿ.ಮಲ್ಲಪ್ಪನವರ ಶ್ರೀಚಂದ್ರಮೌಳೀಶ್ವರ ನಾಟಕ ಸಭಾದಲ್ಲಿ ಬಾಲಕಲಾವಿದನಾಗಿ ಸೇರಿಕೊಂಡ ನರಸಿಂಹರಾಜು ಅವರಿಗೆ ಅಲ್ಲಿಯೇ ಬದುಕಿನ ಶಿಕ್ಷಣವೂ ಆರಂಭವಾಯಿತು. ಹಾಸ್ಯಪಾತ್ರಕ್ಕೆ ಹೇಳಿ ಮಾಡಿಸಿದಂತಹ ಮುಖ, ಶರೀರವನ್ನು ಸಹಜವಾಗಿ ಪಡೆದಿದ್ದ ನರಸಿಂಹರಾಜು ಅವರಿಗೆ ಹಾಸ್ಯಪಾತ್ರಗಳ ನಿರ್ವಹಣೆ ಸಹಜವಾಗಿತ್ತು. ರಂಗಮಂಚದ ಮೇಲೆ ಬಂದು ನಿಂತರೆ ಸಾಕು, ಪ್ರೇಕ್ಷಕರ ನಗೆಹೊನಲು ಹರಿಯುತ್ತಿತ್ತು.

ನರಸಿಂಹರಾಜು ಅವರು ಪೌರಾಣಿಕ ಪಾತ್ರಗಳನ್ನು – ವಿಶ್ವಾಮಿತ್ರ, ರಾಮ, ಕೆಲವೊಮ್ಮೆ ರಾವಣ. ಭರತ, ಇನ್ನು ಕೆಲವು ಸಲ ಲಕ್ಷ್ಮಿಯ ಪಾತ್ರವನ್ನೂ ನಿರ್ವಹಿಸುತ್ತಿದ್ದರು. ಆಗಲೇ ಜನಪ್ರಿಯತೆ ಪಡೆದಿದ್ದ ‘ಬೇಡರ ಕಣ್ಣಪ್ಪ` ನಾಟಕದಲ್ಲಿ ಅರ್ಚಕನ ಪುತ್ರ ಕಾಶಿಯ ಪಾತ್ರದಲ್ಲಿ ನರಸಿಂಹರಾಜು ತುಂಬಾ ಜನಪ್ರಿಯತೆ ಪಡೆದರು.

`ಶ್ರೀ ಚಂದ್ರಮೌಳೀಶ್ವರ ನಾಟಕ ಸಭಾ`, `ಎಡತೊರೆಯ ಕಂಪೆನಿ`, `ಹಿರಣ್ಣಯ್ಯನವರ ಮಿತ್ರಮಂಡಲಿ`, `ಭಾರತ ಲಲಿತ ಕಲಾ ಸಂಘ`, ಬೇಲೂರಿನ `ಗುಂಡಾ ಜೋಯಿಸರ ಕಂಪೆನಿ`, ಗುಬ್ಬಿಯ `ಚೆನ್ನಬಸವೇಶ್ವರ ನಾಟಕ ಕಂಪೆನಿ`ಯ ನಾಟಕಗಳಲ್ಲಿ ತಮ್ಮ ಬಣ್ಣದ ಬದುಕಿನ ಆರಂಭದ 27 ವರ್ಷಗಳನ್ನು ನರಸಿಂಹರಾಜು ಕಳೆದಿದ್ದರು.

ರಾಜ್‌ಕುಮಾರ್ ಅವರೊಂದಿಗೆ `ಬೇಡರ ಕಣ್ಣಪ್ಪ` ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಪಡೆದ ನಂತರವೂ ಅವರು ರಂಗಭೂಮಿಯನ್ನು ಕಡೆಗಣಿಸಲಿಲ್ಲ. ಬಾಲನಟನಾಗಿ ರಂಗ ಪ್ರವೇಶಿಸಿದ ನರಸಿಂಹರಾಜು ಬೆಳೆಯುತ್ತಿದ್ದಂತೆ ದೊಡ್ಡವರ ಪಾತ್ರಗಳಿಗೆ ಭಡ್ತಿ ಪಡೆದರು. ತಮ್ಮ ವಿಶಿಷ್ಟ ಅಭಿನಯದಿಂದ ಹಾಸ್ಯನಟರಾಗಿ ರೂಪುಗೊಂಡರು. ರಂಗಭೂಮಿಯಲ್ಲಿ ಪಡೆದ ಎಲ್ಲ ಬಗೆಯ ಅನುಭವ, ಅವರಿಗೆ ಸಿನಿಮಾ ಜಗತ್ತಿನಲ್ಲಿ ಉಪಯೋಗಕ್ಕೆ ಬಂದಿತು. ಚಿತ್ರರಂಗದ ಪ್ರವೇಶಕ್ಕೆ ನಿಮಿತ್ತವಾದ ‘ಬೇಡರ ಕಣ್ಣಪ್ಪ`ದಲ್ಲಿನ ಕಾಶಿಯ ಪಾತ್ರ ಅವರಿಗೆ ಲೀಲಾಜಾಲವಾಗಿತ್ತು. ‘ಬೇಡರ ಕಣ್ಣಪ್ಪ` ನಾಟಕದಲ್ಲಿ ಸಾವಿರಕ್ಕೂ ಹೆಚ್ಚಿನ ಪ್ರದರ್ಶನಗಳಲ್ಲಿ ಅವರು ಕಾಶಿಯ ಪಾತ್ರ ವಹಿಸಿದ್ದರು. ಪ್ರತಿ ಪ್ರದರ್ಶನದಲ್ಲಿಯೂ ಅವರು ತೋರಿಸುತ್ತಿದ್ದ ತನ್ಮಯತೆ, ಬೆರಗು ಮೂಡಿಸುವಂತಿತ್ತು ಎಂದು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಾಸ್ಟರ್ ಹಿರಣ್ಣಯ್ಯ ಇಂದಿಗೂ ನೆನಪು ಮಾಡಿಕೊಳ್ಳುತ್ತಾರೆ.

ಶ್ರೇಷ್ಠ ಹಾಸ್ಯ ನಟ ಚಾರ್ಲಿ ಚಾಪ್ಲಿನ್ ಅವರಿಂದ ಸಾಕಷ್ಟು ಪ್ರಭಾವಿತರಾಗಿದ್ದ ನರಸಿಂಹರಾಜು ಅವರ ಪೀಚು ಶರೀರ, ವಿಶಿಷ್ಟ ಬಗೆಯ ಹಾವಭಾವಗಳ ಮ್ಯಾನರಿಸಂಗಳು ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಿತ್ತು. ಅವರ ಚಿತ್ರಗಳನ್ನು ಟೆಂಟ್‌ಗಳಲ್ಲಿ ನೋಡುತ್ತಿದ್ದ ಗ್ರಾಮೀಣರು, ಉಬ್ಬು ಹಲ್ಲಿನ ತಮ್ಮ ಮಿತ್ರರನ್ನು ‘ನರಸಿಂಹರಾಜು` ಎಂದೇ ಕರೆಯುವಷ್ಟು ದಟ್ಟ ಪ್ರಭಾವವನ್ನು ನರಸಿಂಹರಾಜು ಮೂಡಿಸಿದ್ದರು. ಇದು ಜನಪದ ನಾಯಕನೊಬ್ಬ ಬೀರಿದ ಪ್ರಭಾವದಂತೆ ತೋರುತ್ತದೆ.

ನರಸಿಂಹ ರಾಜು ಅವರ ಪ್ರತೀ ಪಾತ್ರವೂ ನಮಗೆ ಪ್ರಿಯವೇ. ಅದರಲ್ಲಿ ಯಾವ ಯಾವ ಪಾತ್ರ ಇಷ್ಟ ಎಂಬುದು ಹೇಳಲಾಗದ ಮಾತು. ನಾವು ಅವರ ಎಷ್ಟು ಪಾತ್ರಗಳನ್ನು ನೋಡಿದ್ದೇವೆ ಎಂಬುದಷ್ಟೇ ನಮಗೆ ಹೇಳಲು ಸಾಧ್ಯವಿರುವಂತದ್ದು. ಏಕೆಂದರೆ, ಅವರ ಪ್ರತೀ ಪಾತ್ರ ನಿರ್ವಹಣೆಯೂ ನಮಗೆ ಇಷ್ಟವಾಗಿರುವಂತದ್ದೆ. ‘ಬೇಡರ ಕಣ್ಣಪ್ಪ’ದಿಂದ ಪ್ರಾರಂಭಗೊಂಡು ಅವರು ನಟಿಸಿರುವ ಪಾತ್ರಗಳ ವೈವಿಧ್ಯ ಅದರಲ್ಲಿ ಅವರು ಹರಿಸಿರುವ ಹಾಸ್ಯವೆಂಬ ಚೈತನ್ಯದ ವೈವಿಧ್ಯ ನಿತ್ಯ ಸ್ಮರಣೀಯವಾದುದು. ಬಹುಷಃ ನರಸಿಂಹರಾಜು ಅವರೊಬ್ಬರಿಲ್ಲದಿದ್ದರೆ ನಾವು ನೋಡಿದ ಚಿತ್ರಗಳು ಹೇಗಿದ್ದಿರಬಹುದಿತ್ತು ಎಂದು ಊಹಿಸುವುದು ಕೂಡಾ ಕಷ್ಟ ಸಾಧ್ಯ.

‘ಸ್ಕೂಲ್ ಮಾಸ್ಟರ್’ ಚಿತ್ರದ ಭಾಮೆಯ ನೋಡಲು ತಾ ಬಂದ ಹಾಡಿನಲ್ಲಿ ‘ಕಣ್ ಸನ್ನೆಯಲೇ ಕನ್ಯೆಯ ಮನ ಸೆಳೆದ’ ಎಂದು ತಾನು ನೋಡಲು ಬಂದ ಹುಡುಗಿ ಹಾಡಿದರೆ ‘ಆ ಚಿನ್ಮಯ ಮೂರುತಿ ಶ್ರೀಗೋವಿಂದ’ನ ಸ್ಥಾನದಲ್ಲಿ ಕುಳಿತ ಈ ಪೆಚ್ಚು ನರಸಿಂಹರಾಜು ಪಿಳಿ ಪಿಳಿ ಕಣ್ಸನ್ನೆ ಮಾಡಿದ್ದು ಕೂಡಾ ಅಷ್ಟೇ ಮನಮೋಹಕವಾದದ್ದು. ಶ್ರೀಕೃಷ್ಣದೇವರಾಯ ಚಿತ್ರದಲ್ಲಿ ನರಸಿಂಹರಾಜು ಅವರಂತೆ ತೆನಾಲಿ ರಾಮಕೃಷ್ಣನಾಗಿ ಮತ್ತ್ಯಾರೂ ಅಭಿನಯಿಸಿರಲಾರರು. ‘ಸತ್ಯ ಹರಿಶ್ಚಂದ್ರ’ ಚಿತ್ರದಲ್ಲಿ ಉದಯ್ ಕುಮಾರ್ ಅವರ ಶ್ರೇಷ್ಠ ಸಿಡುಕು ಮತ್ತು ರಾಜ್ ಕುಮಾರ್ ಅವರ ಸರ್ವೋತ್ಕೃಷ್ಟ ಸೌಮ್ಯತೆಯ ನಡುವೆ ಕಪಿ ಚೇಷ್ಟೆಯ, ಆದರೆ ಕಡೆಯಲ್ಲಿ ಅಷ್ಟೇ ಗೌರವಯುತವಾಗಿ ಪರಿವರ್ತಿತವಾಗುವ ನಕ್ಷತ್ರಿಕನಾದ ನರಸಿಂಹರಾಜು ಅಭಿನಯ ಮತ್ತೊಂದು ಶ್ರೇಷ್ಠ ಮಜಲಿನದು. ಜೊತೆಗೆ ಆ ಪಾತ್ರ ಚಿತ್ರದಲ್ಲಿನ ಸಶಕ್ತ ಕೊಂಡಿಯಾಗಿ ಇಡೀ ಚಿತ್ರವನ್ನೇ ತನ್ನ ಹಿಡಿತದಲ್ಲಿ ನಡೆಸುವಷ್ಟು ಸಮರ್ಥವಾದದ್ದು ಕೂಡಾ. ‘ಅಂಡ ಪಿಂಡ ಬ್ರಹ್ಮಾಂಡ’ ಎಂದು ಮೂರ್ಖನಾಗಿ ಮಾತನಾಡಿ ‘ನಿನ್ನ ಪಿಂಡ’ ಎಂದು ವಿಶ್ವಾಮಿತ್ರರಿಂದ ಬೈಸಿಕೊಳ್ಳುವುದಾಗಲಿ, ‘ಏನಿದೀ ಗ್ರಹಚಾರವೋ’ ಎಂದು ಹರಿಶ್ಚಂದ್ರನ ಪ್ರಾಣ ತಿನ್ನುವುದಾಗಲೀ, ‘ಅಪ್ಪಾ ನನ್ನನ್ನು ಕ್ಷಮಿಸಿ ಬಿಡಪ್ಪ’ ಎಂದು ಹರಿಶ್ಚಂದ್ರನ ಕ್ಷಮಾಪಣೆ ಯಾಚಿಸುವ ಧೈನ್ಯತೆಯಾಗಲೀ, ಕಡೆಗೆ ಗುರು ವಿಶ್ವಾಮಿತ್ರರಿಗೇ “ಗುರುಗಳೇ ಒಂದು ಮಾತು ಮಾತ್ರ ನನ್ನ ಅನುಭಾವಕ್ಕೆ ಬಂತು, ಈ ಅಂಡ ಪಿಂಡ ಬ್ರಹ್ಮಾಂಡದಲ್ಲಿ ಅವರರವರ ಕರ್ಮ ಅವರದು” ಎಂದು ಹೇಳುವ ವೇದಾಂತ’ವಾಗಲಿ ಚಿತ್ರರಂಗದ ನಾನು ಕಂಡ ಪಾತ್ರಗಳಲ್ಲಿ ನನ್ನನ್ನು ಅತೀವವಾಗಿ ಹಿಡಿದಿಟ್ಟ ಒಂದು ಅದಮ್ಯತೆ. ಸಂಧ್ಯಾರಾಗ, ವೀರ ಕೇಸರಿ, ರತ್ನ ಮಂಜರಿ, ಕಣ್ತೆರೆದು ನೋಡು, ರಾಯರ ಸೊಸೆ ಹೀಗೆ ನೀವು ಅವರ ಇನ್ನೂರೈವತ್ತು ಚಿತ್ರಗಳಲ್ಲಿ ನೋಡಿರುವಷ್ಟನ್ನೂ ಒಂದಕ್ಕೊಂದು ಪೋಣಿಸಿಕೊಂಡು ಹೋಗಬಹುದು.

ಬಹುಷಃ ಅಂದಿನ ದಿನದಲ್ಲಿ ನರಸಿಂಹರಾಜು ಅವರನ್ನೇ ಕೇಂದ್ರವಾಗಿಸಿ ಚಾರ್ಲಿ ಚಾಪ್ಲಿನ್ ಸಿನಿಮಾದಂತೆ ಒಂದು ಸಿನಿಮಾ ಯಾಕೆ ಸೃಷ್ಟಿಯಾಗಲಿಲ್ಲ ಎಂದು ನನಗೆ ಆಗಾಗ ಅನ್ನಿಸಿದೆ. ಆದರೆ ಕನ್ನಡದ ಕೆಲವೊಂದು ಹಾಸ್ಯ ಕಲಾವಿದರು ಹೀರೋ ಆಗಲು ಹೋಗಿ ಚಿತ್ರ ನಿರ್ಮಾಣದ ಸೋಲಿನಲ್ಲಿ ತಮ್ಮನ್ನೂ ಧನಹೀನರನ್ನಾಗಿಸಿಕೊಂಡು ತಮ್ಮಲ್ಲಿನ ಸಾಮರ್ಥ್ಯವನ್ನೂ ವ್ಯರ್ಥಗೊಳಿಸಿಕೊಂಡು ಪ್ರೇಕ್ಷಕರಿಗೆ ತಲೆ ನೋವು ತಂದಿರುವುದನ್ನು ನೆನೆಸಿಕೊಂಡರೆ ನಮಗೆ ನರಸಿಂಹರಾಜು ಅವರು ಇಷ್ಟವಾಗಿದ್ದು ಅವರು ಹಾಸ್ಯಪಾತ್ರವಾಗಿಯೇ ಉಳಿದದ್ದರಿಂದ ಎಂದು ಕೂಡಾ ಅನಿಸುತ್ತದೆ. ನರಸಿಂಹ ರಾಜು ಅವರು ತಾವೇ ನಿರ್ಮಿಸಿದ ‘ಪ್ರೊಫೆಸರ್ ಹುಚ್ಚೂರಾಯ’ ಚಿತ್ರದಲ್ಲಿ ಕೂಡಾ ತಮ್ಮನ್ನೇ ತಾವು ವಿಜ್ರಂಭಿಸಿಕೊಳ್ಳದೆ ಹಲವಾರು ಸಾಮಾಜಿಕ ನಿಲುವುಗಳ ಒಂದು ಸುಂದರ ಕಥೆ ಹೆಣೆದು ಅದರಲ್ಲಿ ತಾವೊಂದು ಉತ್ತಮ ಹೃದಯವಂತ ವ್ಯಕ್ತಿಯಾಗಿ, ಮತ್ತು ತಮ್ಮ ಸಾಮರ್ಥ್ಯದ ಕುರುಹಾದ ಹಾಸ್ಯ ಲೇಪನದ ಪಾತ್ರವಾಗಿ ಮಾತ್ರ ಮೂಡಿದ್ದು, ನರಸಿಂಹರಾಜು ತಮ್ಮನ್ನು ಎಂದೂ ಅಗತ್ಯಕ್ಕಿಂತ ತೋರಿಕೊಳ್ಳದೆ ತಮ್ಮ ಕಲಾವಿದನನ್ನು ಮಾತ್ರ ಹೊರತಂದ ಶ್ರೇಷ್ಠತೆಯನ್ನು ಸಾರಿ ಹೇಳುತ್ತದೆ.

“ನಗಬೇಕು ನಗಿಸಬೇಕು, ಇದೇ ನನ್ನ ಧರ್ಮ ನಗಲಾರೆ ಅಳುವೇ ಎಂದರೆ ಅದೇ ನಿನ್ನ ಕರ್ಮ” ಎಂಬುದು ನರಸಿಂಹ ರಾಜು ಅವರ ಮೇಲೆ ಚಿತ್ರಿತವಾದ ‘ನಕ್ಕರೆ ಅದೇ ಸ್ವರ್ಗ’ ಚಿತ್ರದ ಗೀತೆ. ಇದನ್ನು ಚಾಚೂ ತಪ್ಪದೆ ತಮ್ಮ ಬಾಳಿನ ತಿರುಳನ್ನಾಗಿ ಮಾಡಿಕೊಂಡವರು ನರಸಿಂಹರಾಜು. ಅವರು ಯಾರ ಬಗ್ಗೆ ಕೆಟ್ಟ ಮಾತನ್ನು ಆಡಿದ್ದಾಗಲೀ, ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಿದ್ದಾಗಲೀ ನಾವೆಂದು ಮಾಧ್ಯಮದಲ್ಲಿ ಓದಲಿಲ್ಲ.

ಕೆಲವು ವರ್ಷ ಮದ್ರಾಸಿನಲ್ಲಿ ನೆಲೆಸಿದ್ದ ನರಸಿಂಹರಾಜು ಕನ್ನಡ ಚಿತ್ರಗಳ ನಿರ್ಮಾಣ ಚಟುವಟಿಕೆಗಳು ಬೆಂಗಳೂರಿನಲ್ಲಿ ಆರಂಭವಾದಾಗ ಅವರು ವಾಸ್ತವ್ಯವನ್ನು ಬೆಂಗಳೂರಿಗೆ ಬದಲಿಸಿದರು. ಮಕ್ಕಳು ಮೊಮ್ಮಕ್ಕಳೊಂದಿಗೆ ನೆಲೆಸಿದ್ದ ಕುಟುಂಬವತ್ಸಲ ನರಸಿಂಹರಾಜು, ತಮ್ಮ 56ನೇ ವಯಸ್ಸಿನಲ್ಲಿ 1979ರ ಜುಲೈ 20 ರಂದು ಎಂದಿನಂತೆ ರಾತ್ರಿ ಉಪಹಾರ ಸೇವಿಸಿ ಮಲಗಿದ್ದರು. ಮುಂಜಾನೆ 4.30ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು.

ನರಸಿಂಹರಾಜು ಅವರು ಕನ್ನಡ ಚಿತ್ರರಂಗದ ಸುವರ್ಣ ಕಾಲ ಎನ್ನಬಹುದಾದ ಅರವತ್ತು ಎಪ್ಪತ್ತರ ದಶಕದಲ್ಲಿ ಹಾಸ್ಯಚಕ್ರವರ್ತಿಯಾಗಿ ಕನ್ನಡಿಗರನ್ನು ರಂಜಿಸಿದ್ದರು. ಇಂತಹ ನಟನಾ ಚಕ್ರವರ್ತಿಗೆ ಒಮ್ಮೆಯೂ ರಾಜ್ಯ ಸರ್ಕಾರದ ಪ್ರಶಸ್ತಿ ಕೂಡಾ ಬರಲಿಲ್ಲ. ಅವರ ಹೆಸರಿನಲ್ಲಿ ಯಾವೊಂದು ಸ್ಮಾರಕ, ರಸ್ತೆ, ಕಟ್ಟಡಗಳು ಮೂಡಲಿಲ್ಲ. ಆದರೆ ಅವರು ಚಿತ್ರರಸಿಕರ ಹೃದಯದಲ್ಲಿ ಮೂಡಿರುವಷ್ಟು ಉಳಿದವರು ನಿಲ್ಲಬಲ್ಲರು ಎಂದು ಯಾರೂ ಊಹಿಸಲೂ ಸಾಧ್ಯವಿಲ್ಲ. ಇದನ್ನೇ ಇರಬೇಕು ವಚನಕಾರರು ಹೇಳಿರುವುದು “ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ” ಎಂದು. ನರಸಿಂಹ ರಾಜು ಅಂತಹ ತಾನೂ ನಕ್ಕು, ಇತರರನ್ನೂ ನಗೆಗಡಲಿನಲ್ಲಿ ತೇಲಿಸಿದ ಆತ್ಮಉಂಟೆ? ಈ ಮಹಾನ್ ಚೇತನಕ್ಕೆ ನಮ್ಮ ಗೌರವದ ಪ್ರೀತಿಯ ಆತ್ಮೀಯ ನಮನ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಸಿನಿ ಸುದ್ದಿ

ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್‌ಡೇ; 53ನೇ ವಸಂತದಲ್ಲಿ ಸುದೀಪ್‌ ಸಿನಿಮಾ ಸರ್ಪ್ರೈಸ್‌ಗೆ ಕೌಂಟ್‌ಡೌನ್!

Published

on

ಹುಟ್ಟುಹಬ್ಬದ ದಿನವೂ ಕಿಚ್ಚನಿಗೆ ಸಿನಿಮಾ ಜಪ; 30 ವರ್ಷದ ಸಿನಿ ಪಯಣಕ್ಕೆ ಹೊಸ ಅಧ್ಯಾಯ

ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಇಂದು, ಸೆಪ್ಟೆಂಬರ್‌ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್‌, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಸೆ.2ರಂದು ಮನೆ ಬಳಿ ಅಭಿಮಾನಿಗಳು ಯಾರೂ ಬರಬಾರದು ಎಂದು ಸುದೀಪ್‌ ಈಗಾಗಲೇ ಮನವಿ ಮಾಡಿದ್ದರು. ಹೀಗಾಗಿ ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಕೇಕ್‌ ಕತ್ತರಿಸಿ ಸಂಭ್ರಮಿಸುತ್ತಿದ್ದ ಕಿಚ್ಚನ ಬರ್ತ್‌ಡೇ ಈ ಬಾರಿ ವಿಭಿನ್ನವಾಗಿದೆ.

ಆದರೆ, ಅಭಿಮಾನಿಗಳಿಗೆ ನಿರಾಸೆಯಾಗದಂತೆ ಸಿನಿಮಾ ವಿಚಾರದಲ್ಲಿ ಭರ್ಜರಿ ಸರ್ಪ್ರೈಸ್‌ ಸಿಗುವ ನಿರೀಕ್ಷೆ ಮೂಡಿದೆ. ಹುಟ್ಟುಹಬ್ಬದ ಸಂದರ್ಭದಲ್ಲೇ ಕಿಚ್ಚನ ಮುಂಬರುವ ಸಿನಿಮಾಗಳ ಕುರಿತು ಮಹತ್ವದ ಅಪ್‌ಡೇಟ್‌ಗಳು ಹೊರಬರುವ ಸಾಧ್ಯತೆ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

http://Visit : www.suddidina.com

53ನೇ ವಸಂತ, 30 ವರ್ಷದ ಸಿನಿ ಪಯಣ

ಕಿಚ್ಚ ಸುದೀಪ್‌ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು, 1997ರಲ್ಲಿ ಬಿಡುಗಡೆಯಾದ ‘ತಾಯವ್ವ’ ಚಿತ್ರದ ಮೂಲಕ ಸಿನಿಮಾ ಪಯಣ ಆರಂಭಿಸಿದ್ದರು. ಇದೀಗ ಚಿತ್ರರಂಗದಲ್ಲಿ ಮೂರು ದಶಕಗಳ ಪಯಣ ಪೂರ್ಣಗೊಳಿಸಿರುವುದು ಈ ಹುಟ್ಟುಹಬ್ಬದ ಮತ್ತೊಂದು ವಿಶೇಷ.

ನಟನೆಯ ಜೊತೆಗೆ ನಿರ್ದೇಶನ, ನಿರ್ಮಾಣ ಹಾಗೂ ಕಿರುತೆರೆಯಲ್ಲಿಯೂ ಸುದೀಪ್‌ ತಮ್ಮದೇ ಗುರುತು ಮೂಡಿಸಿದ್ದಾರೆ. ‘ಬಿಗ್‌ ಬಾಸ್‌ ಕನ್ನಡ’ ಕಾರ್ಯಕ್ರಮದ ನಿರೂಪಕರಾಗಿ ಸತತವಾಗಿ ಮುಂದುವರಿದಿರುವುದು ಅವರ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.

 

View this post on Instagram

 

‘ಬಿಲ್ಲ ರಂಗ ಭಾಷಾ’ ಮೇಲೆ ಹೆಚ್ಚಿದ ನಿರೀಕ್ಷೆ

‘ವಿಕ್ರಾಂತ್‌ ರೋಣ’ ಬಳಿಕ ನಿರ್ದೇಶಕ ಅನೂಪ್‌ ಭಂಡಾರಿ ಹಾಗೂ ಸುದೀಪ್‌ ಮತ್ತೊಮ್ಮೆ ‘ಬಿಲ್ಲ ರಂಗ ಭಾಷಾ’ ಮೂಲಕ ಒಂದಾಗಿದ್ದಾರೆ. ಈಗಾಗಲೇ ಚಿತ್ರದ ಲುಕ್‌ ಅಭಿಮಾನಿಗಳ ಗಮನ ಸೆಳೆದಿದ್ದು, ಮಾಸ್‌ ಅವತಾರದಲ್ಲಿ ಕಿಚ್ಚ ಕಾಣಿಸಿಕೊಂಡಿರುವುದು ನಿರೀಕ್ಷೆ ಹೆಚ್ಚಿಸಿದೆ.

ಚಿತ್ರದ ಬಗ್ಗೆ ನಿರ್ದೇಶಕ ಅನೂಪ್‌ ಭಂಡಾರಿ ಕೂಡ ಉತ್ಸಾಹ ವ್ಯಕ್ತಪಡಿಸಿದ್ದು, ಸುದೀಪ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಸಿನಿಮಾಗೆ ಸಂಬಂಧಿಸಿದ ಹೊಸ ಅಪ್‌ಡೇಟ್‌ ಸಿಗುವ ಸಾಧ್ಯತೆ ಇದೆ. ಸಿನಿಮಾ 2027ರಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.

4 ಸಿನಿಮಾಗಳ ಸದ್ದು?

2024ರಲ್ಲಿ ‘ಮ್ಯಾಕ್ಸ್‌’ ಬಿಡುಗಡೆಯಾದ ಬಳಿಕ ಸುದೀಪ್‌ ಅವರ ಹೊಸ ಸಿನಿಮಾ ತೆರೆಗೆ ಬಂದಿಲ್ಲ. ಇದೀಗ ಒಂದೇ ಬಾರಿ ನಾಲ್ಕು ಸಿನಿಮಾಗಳ ಕುರಿತಂತೆ ಘೋಷಣೆ ಅಥವಾ ಅಪ್‌ಡೇಟ್‌ ಸಿಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಈ ಮೂಲಕ ಬರ್ತ್‌ಡೇ ಸಂಭ್ರಮದಿಂದ ದೂರವಿದ್ದರೂ, ಸಿನಿಮಾ ಸುದ್ದಿಗಳ ಮೂಲಕ ಕಿಚ್ಚ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲಿದ್ದಾರೆ.

ಸೆ.6ಕ್ಕೆ ಮತ್ತೆ ಟಿವಿ ಪರದೆ ಮೇಲೆ ಕಿಚ್ಚ

ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಕಿಚ್ಚನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ‘ಬಿಗ್‌ ಬಾಸ್‌ ಕನ್ನಡ ಸೀಸನ್‌ 13’ ಗ್ರ್ಯಾಂಡ್‌ ಪ್ರೀಮಿಯರ್‌ ಸೆಪ್ಟೆಂಬರ್‌ 6ರಂದು ನಡೆಯಲಿದ್ದು, ಮತ್ತೊಮ್ಮೆ ಸುದೀಪ್‌ ನಿರೂಪಕರಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಹೀಗಾಗಿ 53ನೇ ಹುಟ್ಟುಹಬ್ಬ, 30 ವರ್ಷದ ಸಿನಿ ಪಯಣ, ಹೊಸ ಸಿನಿಮಾಗಳ ನಿರೀಕ್ಷೆ ಹಾಗೂ ‘ಬಿಗ್‌ ಬಾಸ್‌’ ಎಂಟ್ರಿ—ಈ ಬಾರಿ ಕಿಚ್ಚನ ಬರ್ತ್‌ಡೇಗೆ ವಿಶೇಷ ಅರ್ಥ ಸಿಕ್ಕಿದೆ.

Continue Reading

ದಿನದ ಸುದ್ದಿ

Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್‌; ಕಿಚ್ಚ ಸುದೀಪ್‌ ಸಾರಥ್ಯದ ಬಿಗ್‌ಬಾಸ್‌ ಕನ್ನಡ 13ರ ವಿಶೇಷತೆಗಳೇನು?

Published

on

Source: Vijayakarnataka
Bigg Boss Kannada 13: ಅರಮನೆಗೆ ಗುಡ್‌ಬೈ, ಈ ಬಾರಿ ‘ಫ್ಲೈಟ್’ನಲ್ಲಿ ಬಿಗ್‌ಬಾಸ್‌ ಪ್ರಯಾಣ; ಸೆ.6ರಿಂದ ಹೊಸ ಸೀಸನ್‌ ಶುರು!

ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್‌ಬಾಸ್‌ ಕನ್ನಡ ಸೀಸನ್‌ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್‌ ಸೆಪ್ಟೆಂಬರ್‌ 6ರಿಂದ ಆರಂಭವಾಗಲಿದೆ. ಹೊಸ ಸೀಸನ್‌ನಲ್ಲಿ ಮನೆ, ಥೀಮ್‌, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.

ಕಳೆದ 12 ಸೀಸನ್‌ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್‌ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್‌ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್‌ಬಾಸ್‌ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.

ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್‌ಬಾಸ್‌ ಹವಾ

  • ಸೆಪ್ಟೆಂಬರ್‌ 6ರಂದು ಸಂಜೆ 7ಕ್ಕೆ ಬಿಗ್‌ಬಾಸ್‌ ಕನ್ನಡ 13ರ ಗ್ರ್ಯಾಂಡ್‌ ಪ್ರೀಮಿಯರ್‌
  • ಈ ಬಾರಿ ‘Flight’ ಥೀಮ್‌ನಲ್ಲಿ ಬಿಗ್‌ಬಾಸ್‌ ಮನೆ ಮತ್ತು ಕಾರ್ಯಕ್ರಮ
  • ಸೆಲೆಬ್ರಿಟಿಗಳ ಜತೆಗೆ ಮೂವರು ಸಾಮಾನ್ಯ ಸ್ಪರ್ಧಿಗಳಿಗೆ ಅವಕಾಶ
  • ಜಿಯೋಹಾಟ್‌ಸ್ಟಾರ್‌ನಲ್ಲಿ 24×7 ಲೈವ್‌ ವೀಕ್ಷಣೆಯ ಸೌಲಭ್ಯ
  • ಕಿಚ್ಚ ಸುದೀಪ್‌ ಸತತ 13ನೇ ಸೀಸನ್‌ಗೂ ನಿರೂಪಕರಾಗಿ ಮುಂದುವರಿಕೆ

http://Visit : www.suddidina.com

ಈ ಬಾರಿ ‘Flight’ ಥೀಮ್‌ ಏಕೆ ವಿಶೇಷ?

ಕಳೆದ ಸೀಸನ್‌ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್‌ಬಾಸ್‌ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್‌ ಆಧಾರಿತವಾಗಿ ಸೀಸನ್‌ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್‌ ಕಾಣಿಸಿಕೊಂಡಿದೆ.

ವಿಶೇಷವೆಂದರೆ ಫ್ಲೈಟ್‌ ಥೀಮ್‌ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್‌ಬಾಸ್‌ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಸೆಲೆಬ್ರಿಟಿಗಳ ಜತೆಗೆ ಕಾಮನ್‌ ಮ್ಯಾನ್‌ ಎಂಟ್ರಿ

ಬಿಗ್‌ಬಾಸ್‌ ಕನ್ನಡದ ಪ್ರತಿ ಸೀಸನ್‌ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.

‘ಬಿಗ್‌ಬಾಸ್‌ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್‌ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.

ಮನೆಯ ಪ್ರತಿಕ್ಷಣವೂ 24×7 ಲೈವ್‌

ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್‌ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್‌ಸ್ಟಾರ್‌ನಲ್ಲಿ ಬಿಗ್‌ಬಾಸ್‌ ಮನೆಯ 24×7 ಲೈವ್‌ ವೀಕ್ಷಣೆ ಲಭ್ಯವಿರಲಿದೆ.

ಅಂದರೆ ದಿನದ ಎಪಿಸೋಡ್‌ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.

ಪ್ರಸಾರದ ಸಮಯವೂ ಫಿಕ್ಸ್‌

ಸೆಪ್ಟೆಂಬರ್‌ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್‌ ಪ್ರೀಮಿಯರ್‌ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.

ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್‌ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗಲಿವೆ.

ಬಿಗ್‌ಬಾಸ್‌ ಪ್ರಯಾಣ ಯಾವ ದಿಕ್ಕಿಗೆ?

ಫ್ಲೈಟ್‌ ಥೀಮ್‌, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್‌ ವೀಕ್ಷಣೆಯೊಂದಿಗೆ ಸೀಸನ್‌ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್‌’ನಲ್ಲಿ ಯಾರು ಟೇಕಾಫ್‌ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್‌ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

Continue Reading

ದಿನದ ಸುದ್ದಿ

Bigg Boss Agniparikshé: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಿಂದ ಕುಮಾರಿ ಎಕ್ಸಿಟ್; ಆಟ ಮುಗಿದರೂ ಭವಿಷ್ಯಕ್ಕೆ ಸಿಕ್ಕಿತು ದೊಡ್ಡ ಗಿಫ್ಟ್

Published

on

Bigg Boss Agniparikshé: ಅನಾರೋಗ್ಯದಿಂದ ಅರ್ಧಕ್ಕೆ ಶೋ ಬಿಟ್ಟ ನಂಜನಗೂಡಿನ ಕುಮಾರಿ; ₹5 ಲಕ್ಷ ನೆರವು, ದುಬೈ ಉದ್ಯೋಗದ ಆಫರ್!

ಸುದ್ದಿದಿನ,ಬೆಂಗಳೂರು: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ರಿಯಾಲಿಟಿ ಶೋನಲ್ಲಿ ತಮ್ಮ ಸರಳತೆ, ಮುಗ್ಧತೆ ಹಾಗೂ ಸಹಜ ವರ್ತನೆಯಿಂದ ವೀಕ್ಷಕರ ಗಮನ ಸೆಳೆದಿದ್ದ ನಂಜನಗೂಡಿನ ಕುಮಾರಿ ಇದೀಗ ಅನಾರೋಗ್ಯದ ಕಾರಣದಿಂದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಿ, ವೈದ್ಯರ ಸಲಹೆಯಂತೆ ಆಟವನ್ನು ಮುಂದುವರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶೋನಿಂದ ಹೊರಬಂದಿದ್ದಾರೆ.

ಕಳೆದ ಕೆಲವು ಸಂಚಿಕೆಗಳಲ್ಲಿ ಕುಮಾರಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಅವರು ಯಾಕೆ ಕಾರ್ಯಕ್ರಮದಲ್ಲಿ ಕಾಣಿಸುತ್ತಿಲ್ಲ ಎಂಬ ಪ್ರಶ್ನೆಯೂ ಚರ್ಚೆಗೆ ಬಂದಿತ್ತು. ಇದೇ ಸಂದರ್ಭದಲ್ಲಿ ಮತ್ತೊಬ್ಬ ಸ್ಪರ್ಧಿ ಪೂರ್ಣಿಮಾ, ತಮ್ಮನ್ನು ಕಳುಹಿಸಿ ಕುಮಾರಿಯನ್ನು ಕರೆತರಲಾಗುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಕುಮಾರಿ ಶೋನಿಂದ ದೂರ ಉಳಿದಿರುವ ನಿಜವಾದ ಕಾರಣ ಅನಾರೋಗ್ಯ ಎಂಬುದು ಸ್ಪಷ್ಟವಾಗಿದೆ.

http://Visit : www.suddidina.com

ಆಟ ಅರ್ಧಕ್ಕೆ ನಿಂತರೂ ಸಿಕ್ಕಿತು ₹5 ಲಕ್ಷ!

ಕುಮಾರಿಯ ಬಿಗ್ ಬಾಸ್ ಪಯಣ ಅರ್ಧಕ್ಕೆ ಅಂತ್ಯಗೊಂಡಿದ್ದರೂ, ಕಾರ್ಯಕ್ರಮದ ವೇದಿಕೆ ಅವರಿಗೆ ನಿರೀಕ್ಷೆಗೂ ಮೀರಿದ ನೆರವು ನೀಡಿದೆ. ಕಾರ್ಯಕ್ರಮದ ಪ್ರಾಯೋಜಕರಾದ ಇಕೋ ಪ್ಲ್ಯಾನೆಟ್ ಎಲಿವೇಟರ್ ಸಂಸ್ಥೆ ಕುಮಾರಿಗೆ ಬರೋಬ್ಬರಿ ₹5 ಲಕ್ಷ ನಗದು ನೆರವು ನೀಡಿದೆ.

ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಕುಮಾರಿಗೆ ಈ ಹಣ ದೊಡ್ಡ ಆರ್ಥಿಕ ಆಸರೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಕುಟುಂಬದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆಗೆ ಈ ಹಣ ನೆರವಾಗಬಹುದು ಎಂಬ ನಿರೀಕ್ಷೆಯೂ ಇದೆ.

ಶಿಕ್ಷಣದ ಬಳಿಕ ಉದ್ಯೋಗಕ್ಕೂ ಭರವಸೆ

₹5 ಲಕ್ಷ ನೆರವಿನ ಜತೆಗೆ ಕುಮಾರಿಗೆ ಮತ್ತೊಂದು ಮಹತ್ವದ ಅವಕಾಶವನ್ನು ಸಂಸ್ಥೆ ಘೋಷಿಸಿದೆ. ಅವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಕರ್ನಾಟಕದಲ್ಲಿರುವ ಸಂಸ್ಥೆಯ ಯಾವುದೇ ಶಾಖೆಯಲ್ಲಿ ಅಥವಾ ದುಬೈನಲ್ಲಿರುವ ಶಾಖೆಯಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡಲಾಗಿದೆ.

ಇದು ಕುಮಾರಿಯ ಭವಿಷ್ಯಕ್ಕೆ ಹೊಸ ದಿಕ್ಕು ನೀಡುವ ಘೋಷಣೆಯಾಗಿದೆ. ರಿಯಾಲಿಟಿ ಶೋನಿಂದ ಸಿಕ್ಕ ಜನಪ್ರಿಯತೆಯ ಜತೆಗೆ ಇದೀಗ ಶಿಕ್ಷಣ ಮತ್ತು ಉದ್ಯೋಗದ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡುವ ಅವಕಾಶವೂ ದೊರೆತಿದೆ.

ಭಾವುಕ ವಿದಾಯ, ಹೊಸ ಬದುಕಿನ ಭರವಸೆ

ಹಳ್ಳಿಯಿಂದ ಬಂದ ಕುಮಾರಿಗೆ ಬೆಂಗಳೂರನ್ನು ನೋಡುವ ಅವಕಾಶದಿಂದ ಹಿಡಿದು ದೊಡ್ಡ ರಿಯಾಲಿಟಿ ಶೋ ವೇದಿಕೆಯಲ್ಲಿ ಸ್ಪರ್ಧಿಸುವವರೆಗೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಹಲವು ಹೊಸ ಅನುಭವಗಳನ್ನು ನೀಡಿದೆ. ಶೋನಿಂದ ನಿರ್ಗಮಿಸುವ ಸಂದರ್ಭದಲ್ಲಿ ಕುಮಾರಿ ಸೇರಿದಂತೆ ಇತರ ಸ್ಪರ್ಧಿಗಳು ಭಾವುಕರಾದರು.

ಸ್ಪರ್ಧೆಯಲ್ಲಿ ಮುಂದುವರಿಯಲು ಸಾಧ್ಯವಾಗದ ನೋವಿನ ನಡುವೆಯೂ, ಇಷ್ಟು ದೊಡ್ಡ ವೇದಿಕೆಯಲ್ಲಿ ಅವಕಾಶ ಸಿಕ್ಕಿದ್ದಕ್ಕೆ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದಾಗಿ ಅವರ ಆಟ ಅಂತ್ಯಗೊಂಡಿದ್ದರೂ, ₹5 ಲಕ್ಷ ನೆರವು ಮತ್ತು ಭವಿಷ್ಯದ ಉದ್ಯೋಗದ ಭರವಸೆ ಕುಮಾರಿಯ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ.

ಹೀಗಾಗಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಕುಮಾರಿಯ ಆಟ ಅರ್ಧಕ್ಕೆ ನಿಂತಿದ್ದರೂ, ಕಾರ್ಯಕ್ರಮದ ವೇದಿಕೆಯಿಂದ ಸಿಕ್ಕ ಬೆಂಬಲ ಅವರ ಮುಂದಿನ ಬದುಕಿಗೆ ಮಹತ್ವದ ತಿರುವು ನೀಡಿದೆ.

Continue Reading
Advertisement

Title

ದಿನದ ಸುದ್ದಿ4 days ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ4 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ4 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ4 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ4 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ4 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ4 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ4 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ4 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ4 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending