ಲೈಫ್ ಸ್ಟೈಲ್
ಸೀರಿಯಲ್ ಸುಂದರಿಯರ ಟ್ರೆಂಡೀ ಆಭರಣಗಳ ಗುಟ್ಟು, ರಟ್ಟಾಯ್ತು ನೋಡಿ..!
ಮಹಿಳೆಯರಿಗೂ ಸೀರಿಯಲ್ ಗೂ ಇರುವ ಅವಿನಾಭಾವ ಸಂಬಂಧ ವಿವರಿಸಲು ಕೂತರೆ ಸಾವಿರ ಪುಟಗಳು ಸಾಲದು. ಮಹಿಳೆಯರ ಒಡವೆಗಳ ವ್ಯಾಮೋಹ ಎಲ್ಲರಿಗೂ ತಿಳಿದಿರುವ ಸಂಗತಿ. ಇತ್ತೀಚೆಗೆ ಸೀರಿಯಲ್ ಕ್ರೇಜ್ ಹೆಚ್ಚಿದ್ದು..ಕಿರುತೆರೆ ಈ ಪಾತ್ರಗಳು ಸಮಾಜಕ್ಕೆ ಹತ್ತಿರವಾಗುತ್ತಿದೆ. ಮಹಿಳಾ ಪ್ರಧಾನ ಕಥಾಹಂದರವನ್ನು ಹೊಂದಿರುವ ಈ ಸೀರಿಯಲ್ ಗಳು ಮಹಿಳೆಯರಿಂದ ಮಹಿಳೆಯರಿಗಾಗಿ ಎಂಬಂತೆ ರೂಪಗೊಂಡಿದ್ದು ಹೆಚ್ಚು ಮಹಿಳಾ ಪ್ರೇಕ್ಷಕರನ್ನು ಹೊಂದಿದೆ.
ಸೀರಿಯಲ್ ಗಳಲ್ಲಿನ ಪಾತ್ರ ದಷ್ಪೇ ಫೇಮಸ್ ಆ ಪತ್ರದ ಸ್ಟೈಲ್ ಸ್ಟೇಟ್ ಮೆಂಟ್! ಈಗಂತೂ ಸೀರಿಯಲ್ ತಾರೆಯರು ಸೀರೆ-ಒಡವೆಗಳ ಫ್ಯಾಷನ್ ಫಾಲೋ ಮಾಡುವ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಅಂತಹದೇ ಸ್ಟೋರಿ ಇಲ್ಲಿದೆ ನೋಡಿ.
ಕಲರ್ಸ್ ಕನ್ನಡ ದ “ರಾಧಾರಮಣ” ಸೀರಿಯಲ್ ಸಿಕ್ಕಾಪಟ್ಟೆ ಫೇಮಸ್ ಆಗಿದ್ದು ಪ್ರತಿ ಪಾತ್ರ್ರ ತನ್ನದೇ ವಿಭಿನ್ನ ಸ್ಟೈಲ್ ಸ್ಟೇಟ್ ಮೆಂಟ್ ಹೊಂದಿದೆ.
ಈ ಸೀರಿಯಲ್ ನ ಮತ್ತೊಂದು ಪ್ರಮುಖ ಪಾತ್ರ “ಸಿತಾರಾದೇವಿ” ನೆಗಟಿವ್ ಷೇಡ್ ಹೊಂದಿದ್ದರೂ ತನ್ನದೇ ವಿಭಿನ್ನ ಮ್ಯಾನರಿಸಂ, ಸ್ಟೈಲ್ ಮತ್ತು ಅಧ್ಬುತ ನಟನೆಯಿಂದ ವೀಕ್ಷಕರ ಮನಗೆದ್ದಿದ್ದಾರೆ ಕಾಮಿಡಿ ಟೈಮ್ ಖ್ಯಾತಿಯ ಸುಜಾತಾ ರವರು. ಇವರ ಖಡಕ್ ಡೈಲಾಗ್..ಹಾವ-ಭಾವ ಗಳಷ್ಟೇ ಫೇಮಸ್ “ಸಿತಾರಾದೇವಿಯ” ಇವರ ಫ್ಯಾಷನಬಲ್ ಲುಕ್.. ಇವರ ವಿಶಿಷ್ಟ ಶೈಲಿಯ ಒಡವೆಗಳು ಸೀರಿಯಲ್ ಪ್ರಿಯರಲ್ಲಿ ತುಂಬಾ ನೇ ಚರ್ಚೆಗೆ ಗ್ರಾಸವಾಗಿದೆ.
ಈಗಂತೂ ಫ್ಯಾಷನ್ ಜಿವಲೆರಿ ಟ್ರೆಂಡ್ ಫಾಲೋ ಆಗುತ್ತಿದ್ದು..ಸೆಲಿಬ್ರಿಟಿ ಗಳಾಗಲೀ..ಸಾಮಾನ್ಯ ಜನರಾಗಲೀ ಎಲ್ಲರೂ ತಮ್ಮದೇ ಆದ ವಿಭಿನ್ನ ಫ್ಯಾಷನ್ ಮತ್ತು ಸ್ಟೈಲ್ ಸ್ಟೇಟ್ ಮೆಂಟ್ ಹೊಂದಲು ಬಯಸುತ್ತಾರೆ.
ಬಣ್ಣ ಬಣ್ಣದ ಟೆರಾಕೋಟಾ ಒಡವೆಗಳು.. ಕಾಪರ್, ಕಪ್ಪು ಲೋಹ, ಬಿಳಿ ಲೋಹ..ಬೆಳ್ಳಿ ಯ ಒಡವೆಗಳು ಭಾರೀ ಪ್ರಮಾಣದಲ್ಲಿ ಟ್ರೆಂಡ್ ಸೃಷ್ಟಿಸಿದೆ. ವಿಭಿನ್ನ ಹಾಗೂ ಆಕರ್ಷಕ ವಿನ್ಯಾಸಗಳಲ್ಲಿ ಮಹಿಳೆಯರ ಮನಸೂರೆ ಗೊಂಡಿದೆ ಈ ಫ್ಯಾಷನ್ ಜಿವೆಲೆರೀ..
ಅಂದಹಾಗೆ ಈ ಸೀರಿಯಲ್ ಬೆಡಗಿಯರ ಕಿವಿ ಓಲೆ..ಝುಮಕಿ, ಸರ.. ಬಳೆ..ಮೂಗುತಿ.. ಎಲ್ಲವೂ ವಿಭಿನ್ನ ಹಾಗೂ ವಿಶಿಷ್ಟ. ಇವರ ಈ ವಿಶಿಷ್ಟ ಒಡವೆಗಳ ಹಿಂದಿನ ರಹಸ್ಯ ತಿಳಿಯುವ ಕುತೂಹಲ ನಿಮಗಿದ್ದರೆ , ಸೀರಿಯಲ್ ಬೆಡಗಿಯರ ಜಿವಲೆರಿ ಸ್ಟೋರಿ ನಿಮಗಾಗಿ ಇಲ್ಲಿದೆ ನೋಡಿ..
ಜೋಜೋಲಾಲಿ ಸೀರಿಯಲ್ ನ ನವ್ಯಾ ಶೆಟ್ಟಿ..ಸುವರ್ಣ ವಾಹಿನಿಯ “ಪುಟ್ಟಮಲ್ಲಿ” ಖ್ಯಾತಿಯ ವೀಣಾ ಪೊಣ್ಣಪ್ಪ.. ಆರನೇ ಮೈಲಿ ಚಿತ್ರದ ನಾಯಕನಟಿಯ ವಿಶೇಷ ಸ್ಟೈಲ್ ಸ್ಟೇಟ್ ಮೆಂಟ್… ಕೇವಲ ಸೀರಿಯಲ್ ಸುಂದರಿರು ಅಷ್ಟೇ ಅಲ್ಲದೆ, ಸ್ಯಾಂಡಲ್ ವುಡ್ ನ ಖ್ಯಾತ ಗಾಯಕಿ ಅನನ್ಯಾ ಭಟ್ ರ ಸ್ಟೈಲಿಶ್ ಲುಕ್ ನ ಹಿಂದಿನ ರಹಸ್ಯ ನಿಮಗಾಗಿ ನವು ತಂದಿದ್ದೇವೆ.
ಈ ಎಲ್ಲಾ ಸುಂದರಿ ಯರ ಚೆಲುವನ್ನ ತಮ್ಮ ವಿಶಿಷ್ಟ ಸ್ಟೈಲಿಂಗ್ ನಿಂದ ತೆರೆಯ ಮೇಲೆ ಸುಂದರವಾಗಿ ಮಿಂಚುವಂತೆ ಮಾಡಿರುವುದು..ಪ್ರತಿಷ್ಠಿತ ಸೆಲಿಬ್ರಿಟಿ ಜಿವಲೆರಿ ಡಿಸೈನರ್ , ಸೀಮಾ ಆಥ್ರೇಯ.
ಯಾರು ಸೀಮಾ ಆಥ್ರೇಯ..?
ಬೆಂಗಳೂರಿನ ಪದ್ಮ ಮತ್ತು ನಾಗರಾಜ್ ದಂಪತಿಗಳ ಮಗಳು ಸೀಮಾ. ಪಿ.ಜಿ ಇನ್ ಬಿಸಿನೆಸ್ ಅಡ್ಮಿನಿಸ್ಟೇಷನ್ ಪಧವೀಧರೆ ಆಗಿರುವ ಸೀಮಾಗೆ ಕಲೆ ಯಲ್ಲಿ ವಿಶೇಷ ಆಸಕ್ತಿ. ಪತಿ ಹರೀಶ್ ರೊಂದಿಗೆ ಬೆಂಗಳೂರಿನಲ್ಲೇ ನೆಲಸಿರುವಾ ಸೀಮಾ ಜಿವಲೆರಿ ಡಿಸೈನಿಂಗ್ ಪ್ರವೀಣೆ . ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸೀಮಾ ತಮ್ಮ ದೇ ವಿಶಿಷ್ಟ ಜಿವಲೆರಿ ಡಿಸೈನ್ ಗಳಿಂದ ಸೆಲಿಬ್ರಿಟಿ ಡಿಸೈನರ್ ಆಗಿ ಮಿಂಚುತ್ತಿದ್ದಾರೆ. ಇವರ *ಬೀಡೆಡ್ ಜಿವಲೆರಿ*ಸಂಸ್ಥೆ ಮುಖಾಂತರ ಹಲವಾರು ಖ್ಯಾತ ಸೀರಿಯಲ್ ಸುಂದರಿಯರ ನ್ನು ಸ್ಟೈಲ್ ಮಾಡಿದ್ದಾರೆ.
ಸುಜಾತಾ..ಅನನ್ಯಾ ಭಟ್..ಸುರಭಿ ವಸಿಷ್ಟ..ವೀಣಾ ಪೂಣಚ್ಚ..ನವ್ಯ ಶೆಟ್ಟಿ.. ಹಲವಾರು ಸೆಲಿಬ್ರಿಟಿ ನಟಿಯರ ಮನಮೋಹಕ ಒಡವೆಗಳ ಕತೃ ಇವರು. ಸೆಲಿಬ್ರಿಟಿ ಗಳಷ್ಟೇ ಅಲ್ಲದೆ, ಸಾಫ್ಟವೇರ್ ಕಂಪನಿ..M.N.C ಕಂಪನಿಗಳು ಸೇರಿ.. ನಾಟಕಗಳಿಗೂ ಇವರು ಜಿವಲೆರಿ ಡಿಸೈನರ್ ಆಗಿದ್ದಾರೆ. ಜಿವಲೆರಿ ಡಿಸೈನಿಂಗ್ ಕ್ಷೇತ್ರದಲ್ಲಿ ಯಾರು ಅತ್ಯುತ್ತಮ ಡಿಸೈನ್ಗಳನ್ನು ನೀಡುತ್ತಾರೋ ಅವರೇ ಹೆಚ್ಚು ಕಾಲ ಉಳಿಯಲು ಸಾಧ್ಯ ಎನ್ನುತ್ತಾರೆ ಸೀಮ.
ಕ್ರಿಯಾಶೀಲತೆ..ಹೊಸತನ..ಫ್ಯಾಷನ್..ಸ್ಟೈಲ್ ಎಲ್ಲವೂ ಇದ್ದಲ್ಲಿ ಮಾತ್ರ ಇಲ್ಲಿ ಬಹೈಕಾಲ ಉಳಿಯಲು ಸಾಧ್ಯ. ತಮ್ಮ ಅದ್ಭುತ ಕಲೆ ಹಾಗೂ ವಿನ್ಯಾಸ ದಿಂದ ಸೀರಿಯಲ್ ಕ್ಷೇತ್ರದಲ್ಲಿ ದಿ ಬೆಸ್ಟ್ ಜಿವಲೆರಿ ಸ್ಟೈಲಿಸ್ಟ್ ಆಗಿ ಮಿಂಚುತ್ತಿರುವ ಸೀಮಾ ರ ಎಲ್ಲಾ ಕನಸುಗಳು ಈಡೇರಲಿ ಎಂದು ಹಾರೈಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ6 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ





