Connect with us

ಲೈಫ್ ಸ್ಟೈಲ್

‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ‌ ಸುಳ್ಳು | ಹಾವಿನ ಬಗೆಗೆ ನೀವಿಷ್ಟು ತಿಳಿಯಲೇ ಬೇಕು..!

Published

on

ದಿಯೊಂದರ ಪ್ರಕಾರ ನಮ್ಮ ದೇಶದಲ್ಲಿ ಪ್ರತಿ ವರ್ಷಕ್ಕೆ ಸರಿ ಸುಮಾರು 2,50,000 ಜನಗಳು ಹಾವುಗಳಿಂದ ಕಡಿತಕ್ಕೊಳಗಾಗುತ್ತಾರೆ. ಇದರಲ್ಲಿ 50,000 ಜನರು ಪ್ರಾಣ ಕಳೆದುಕೊಳ್ಳುತ್ತಾರೆ. ಇದರಲ್ಲಿ 725 ಜನ ಹಾವು ಕಚ್ಚಿದೆ ಎಂಬ ಭಯಕ್ಕೆ ಸಾಯುತ್ತಾರೆ.ಮೊದಲು ಸ್ವಲ್ಪ ಹಾವಿನ ಬಗ್ಗೆ ತಿಳಿಯೋಣ.

ವೈಜ್ಞಾನಿಕ ವರ್ಗೀಕರಣ

ಸಾಮ್ರಾಜ್ಯ : ಪ್ರಾಣಿಗಳು
ವಿಭಾಗ : ಕಾರ್ಡೇಟ
ಉಪವಿಭಾಗ: ಕಶೇರುಕ
ವರ್ಗ : ಸರೀಸೃಪಗಳು
ಗಣ : ಸ್ಕ್ವಾಮಾಟ

ಹಾವು ಅಥವಾ ಉರಗ. ನೆಲದ ಮೇಲೆ ಹರಿದಾಡುತ್ತ, ಹೊರಳುತ್ತ, ಅಂಕು ಡೊಂಕಾಗಿ ಚಲಿಸುವ ಈ ಉರಗಕ್ಕೆ ಎದೆಮೂಳೆಗಳಿಲ್ಲ. ಬೆನ್ನು ಮೂಳೆ ಹಾಗು ಪಕ್ಕೆಲುಬುಗಳಿವೆ. ಎದೆ ಮೂಳೆ ಇಲ್ಲದ ಕಾರಣ ಪಕ್ಕೆಲುಬು ಸಡಿಲವಾಗಿದೆ. ತಲೆ ಬುರುಡೆ ಮೂಳೆಗಳು ಅಳ್ಳಕವಾಗಿದೆ. ಹಾಗಾಗಿ ಅವು ತಲೆಯನ್ನು ಸುಲಭವಾಗಿ ಆಡಿಸಬಹುದು. ಹಾವಿನ ಮಿದುಳಿನ ರಚನೆ ಸರಳವಾಗಿದ್ದು ಇನ್ನಿತರ ಸರೀಸೃಪಗಳ ಮಿದುಳನ್ನೆ ಹೋಲುತ್ತದೆ. ಹಾವಿಗೆ ವಿವೇಚನೆಯಾಗಲೀ ಸ್ಮರಣಶಕ್ತಿಯಾಗಲೀ ಇಲ್ಲ. ‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ ಸತ್ಯವಲ್ಲ. ಹಾವು ಘಟನೆಗಳನ್ನು ನೆನಪಿನಲ್ಲಿಟ್ಟು ಕೊಳ್ಳಲಾಗುವುದಿಲ್ಲ. ಹಾವುಗಳ ಆಯಸ್ಸು 20 ರಿಂದ 30 ವರ್ಷಗಳೆಂದು ಅಂದಾಜು.
ಹಾವುಗಳ ಬಣ್ಣ ವರ್ಣರಂಜಿತ ಮತ್ತು ವೈವಿಧ್ಯಮಯ. ಮೇಲ್ಭಾಗದಲ್ಲಿ ಕಪ್ಪು,ಕಂದು,ಹಳದಿ ಅಥವಾ ಗೋಧಿ ಬಣ್ಣ, ಕೆಳಭಾಗದಲ್ಲಿ ಬಿಳಿ ಇಲ್ಲವೆ ತಿಳಿಹಳದಿ ಬಣ್ಣ. ಕೆಲ ಹಾವುಗಳು ಬಣ್ಣ ಅವು ವಾಸಿಸುವ ಪರಿಸರದ ಬಣ್ಣವನ್ನೇ ಹೋಲುತ್ತದೆ.

ಹಾವಿನ ಹುಟ್ಟು

ಹಾವುಗಳ ಪಳೆಯುಳಿಕೆಗಳು ದೊರೆಯುವುದು ಅಪರೂಪ. ದೊರತ ಪಳೆಯುಳಿಕೆಗಳಲ್ಲಿ ಅತ್ಯಂತ ಹಳೆಯದು ಎಂದರೆ ಸುಮಾರು 112 ರಿಂದ 94 ಮಿಲಿಯನ್ ವರ್ಷಗಳಷ್ಟು ಪ್ರಾಚೀನವಾದುದು. ಶರೀರಶಾಸ್ತ್ರದ ಅಧ್ಯಯನದಿಂದ ಹಾವುಗಳು ಹಲ್ಲಿಗಳ ಜಾತಿಯಿಂದ ಉಗಮವಾಗಿರುತ್ತವೆ ಎಂದು ತಿಳಿದು ಬಂದಿದೆ.

King cobra | ಕಾಳಿಂಗ ಸರ್ಪ

ಉದ್ದ ಮತ್ತು ತೂಕ

ಸುಮಾರು 20 ಕುಟುಂಬಕ್ಕೆ ಸೇರಿದ 3600ಕ್ಕೂ ಹೆಚ್ಚು ಜಾತಿಯ ಹಾವುಗಳು ಪ್ರಪಂಚದಾದ್ಯಂತ ಕಾಣಸಿಗುತ್ತವೆ. ಅಂಟಾರ್ಟಿಕವನ್ನು ಹೊರತುಪಡಿಸಿ ಉಳಿದ ಎಲ್ಲಾ ಖಂಡಗಳಲ್ಲಿಯೂ ಸಮುದ್ರ ಹಾಗೂ ಸುಮಾರು 16000ಅಡಿ ಎತ್ತರದಲ್ಲಿ ಹಿಮಾಲಯ ಪರ್ವತ ಶ್ರೇಣಿಯಲ್ಲಿ ಕೂಡಾ ಹಾವುಗಳು ಕಾಣಸಿಗುತ್ತವೆ. ಹಾವಿನ ಶರೀರ ಉರುಳೆ ಆಕಾರದಲ್ಲಿದೆ. ಉದ್ದ 12ಸೆಂಮೀ-10ಮೀ ವರೆಗೂ ಇರುವುದು. ಅದರೆ ಪಳೆಯುಳಿಕೆ ಸಿಕ್ಕಿರುವ ಪ್ರಕಾರ species Titanoboa cerrejonenis ಎಂಬುದು 12.8ಮೀ [42feet] ಉದ್ದ ಇತ್ತು.

ಶರೀರ ರಚನೆ ಮತ್ತು ಪೊರೆ ಕಳುಚುವಿಕೆ

ಹಾವಿನ ಶರೀರದ ಹೊರಭಾಗದಲ್ಲಿ ಕೈ ಕಾಲುಗಳು ಇಲ್ಲದಿರುವ ಕಾರಣ ಅವು ತಮ್ಮ ಕೆಳಭಾಗದಿಂದ ತೆವಳುತ್ತ ಮುಂದೆ ಸಾಗುತ್ತದೆ. ಕೈ ಕಾಲುಗಳಿಲ್ಲದಿದ್ದರೂ ಬೆನ್ನುಮೂಳೆ, ಪಕ್ಕೆಲುಬುಗಳು ವಿಭಿನ್ನವಾಗಿ ಮಾರ್ಪಾಡಾಗಿರುವುದರಿಂದ, ಶರೀರದ ಮುಂದಿನ ಅರ್ಧಭಾಗವನ್ನು ನೆಲದಿಂದ ಮೇಲಕ್ಕೆ ಎತ್ತಬಲ್ಲವು.ಬೆಳೆವಣಿಗೆಯಿಲ್ಲದ ಹೊರಚರ್ಮದ ಭಾಗವನ್ನು ಆಗಾಗ್ಗೆ ಹಾವು ಕಳಚಿ ಹೊಸ ಚರ್ಮವನ್ನು ಪಡೆಯುತ್ತದೆ. ಇದನ್ನು ಪೊರೆ ಕಳಚುವುದು ಎನ್ನುತ್ತಾರೆ. ಹಾವು ಬೆಳೆಯುವ ವರ್ಷಗಳಲ್ಲಿ ಹೆಚ್ಚು ಬಾರಿಯೂ, ವೃದ್ದ್ಯಾಪಕ್ಕೆ ಕಾಲಿರುಸುತ್ತಿದ್ದಂತೆ ಕಡಿಮೆ ಬಾರಿ ಪೊರೆ ಕಳಚುತ್ತದೆ. ಪೊರೆ ಕಳಚಿದ ಬಳಿಕ ಹೊಸ ಚರ್ಮ ಹಳೆ ಚರ್ಮಕ್ಕಿಂತ ಸ್ವಲ್ಪ ವಿಸ್ತಾರವಿರುವುದರಿಂದ ಮತ್ತೆ ಶರೀರದ ಒಳಭಾಗದ ಅಂಗಗಳು ಬೆಳೆಯಲು ಅವಕಾಶವಾಗುತ್ತದೆ.

ದೃಷ್ಟಿ ಮತ್ತು ಶಬ್ಧ ಗ್ರಹಿಸುವಿಕೆ

ಹಾವಿನ ರೆಪ್ಪೆಗಳು ಒಂದಕ್ಕೊಂದು ಕೂಡಿಕೊಂಡಿರುತ್ತವೆ. ಅವು ಅಲುಗಾಡುವುದಿಲ್ಲ. ಕಣ್ಣಿನ ಹೊರಭಾಗದಲ್ಲಿ ಪಾರದರ್ಶಕ ತೊಪ್ಪಿಯಂತಿರುವ ವಸ್ತು ಆವರಿಸಿರುತ್ತದೆ. ಅದರಿಂದ ಅವು ಯಾವಾಗಲೂ ಕಣ್ಣು ತೆರೆದಿರುವಂತೆ ಕಾಣಿಸುತ್ತದೆ. ಹೀಗಾಗಿ ಹಾವು ನಿದ್ರಿಸುತ್ತಿದೆಯೋ ಅಥವಾ ಎಚ್ಚರದಿಂದ ಇದೆಯೋ ಎಂದು ತಿಳಿಯುವುದಿಲ್ಲ. ಹಾವುಗಳ ದೃಷ್ಟಿ ಮಂದ. ಮುಂದೆ ಇರುವ ವಸ್ತುಗಳನ್ನು ಸರಿಯಾಗಿ ಗುರುತಿಸಲಾರವು ಮತ್ತು ಬಣ್ಣಗಳು ಕಾಣುವುದಿಲ್ಲ.ಹಾವುಗಳಿಗೆ ಹೊರ ಕಿವಿಗಳಿಲ್ಲ, ಕಿವಿ ತಮಟೆಯೂ ಇಲ್ಲ. ಅವುಗಳಿಗೆ ಕೇವಲ ಒಳಕಿವಿ ಮಾತ್ರ ಇರುತ್ತದೆ. ಆದ್ದರಿಂದ ಹಾವುಗಳಿಗೆ ಗಾಳಿಯ ಮೂಲಕ ಪ್ರಸಾರವಾಗುವ ಯಾವ ಶಬ್ದವೂ ಕೇಳಿಸಲಾರದು. ಅವಕ್ಕೆ ಭೂಮಿಯ ಮೇಲುಂಟಾಗುವ ಕಂಪನಗಳನ್ನು ಅವು ಗ್ರಹಿಸಬಲ್ಲವು.

ನಾಲಿಗೆ ಮತ್ತು ಆಹಾರನ್ವೇಷಣೆ

ಹಾವಿನ ನಾಲಿಗೆ ಉದ್ದವಿದ್ದು ಮುಂಭಾಗದಲ್ಲಿ ಸೀಳುಗಳಿವೆ. ಮೇಲಿನ ತುಟಿ ಪುಟ್ಟ ಕಮಾನಿನಾಕಾರದಲ್ಲಿದ್ದು ಬಾಯಿ ಮುಚ್ಚಿಕೊಂಡಾಗ ಚಿಕ್ಕ ರಂಧ್ರವೇರ್ಪಡುತ್ತದೆ. ಈ ರಂಧ್ರದ ಮೂಲಕ ಹಾವು ಆಗಾಗ ನಾಲಿಗೆಯನ್ನು ಹೊರಚಾಚುತ್ತಿರುತ್ತದೆ. ಎರಡು ಸೀಳುಗಳು ಪ್ರತ್ಯೇಕವಾಗಿರುವಂತೆ ಕಾಣುವುದರಿಂದ ಹಾವಿಗೆ ಎರಡು ನಾಲಿಗೆಗಳಿವೆ ಎಂದು ತಪ್ಪಾಗಿ ಭಾವಿಸಲಾಗುತ್ತದೆ ಈ ನಾಲಿಗೆ ವಾಸನೆಯನ್ನು ಕಂಡುಹಿಡಿಯಲು ಬಳುಸುತ್ತವೆ. ಮೇಲ್ದವಡೆಯಲ್ಲಿ ಎರಡು ಪುಟ್ಟ ಕುಳಿಗಳಿವೆ. ಜಕೋಬ್ಸನ್ ಅಂಗ ಎಂದು ಅದರ ಹೆಸರು. ನಾಲಗೆಯು ಈ ಅಂಗಕ್ಕೆ ಗಾಳಿಯಲ್ಲಿರುವ ರಾಸಾಯಾನಿಕಗಳನ್ನು ತಲಪಿಸುತ್ತದೆ. ಆಗ ಇದು ವಾಸನೆಯನ್ನು ಗ್ರಹಿಸುತ್ತದೆ. ವಾತಾವರಣದಲ್ಲಿನ ಅನೇಕ ಏರಿಳಿತವನ್ನು ಕೂಡ ನಾಲಿಗೆ ಗ್ರಹಿಸಬಲ್ಲದು. ಕಾಳಿಂಗ ಸರ್ಪ 100ಮೀಟರ್ ದೂರದಲ್ಲಿ ಚಲಿಸುತ್ತಿರುವ ತನ್ನ ಬೇಟೆಯನ್ನು ಪತ್ತೆ ಹಚ್ಚುತ್ತದೆ. ಇಲಿ, ಹೆಗ್ಗಣಗಳಂಥ ಪುಟ್ಟ ಸಸ್ತನಿಗಳು, ಪಕ್ಷಿಗಳು, ಸರೀಸೃಪಗಳು, ಕಪ್ಪೆ, ಮೀನುಗಳು, ಕೀಟಗಳು ಇತ್ಯಾದಿ ಹಾವಿನ ಆಹಾರ. ಕೆಲವು ಹಾವುಗಳು ವಿವಿಧ ಪ್ರಾಣಿ, ಪಕ್ಷಿಗಳ ಮೊಟ್ಟೆಗಳನ್ನು ತಿನ್ನುತ್ತವೆ. ಸಸ್ಯಹಾರೀ ಹಾವು ಇಲ್ಲವೇ ಇಲ್ಲ.

ವಿಷಗ್ರಂಥಿ ಮತ್ತು ಹಲ್ಲುಗಳು

ವಿಷದ ಹಾವುಗಳ ತಲೆ ಎರಡೂ ಪಕ್ಕದಲ್ಲಿ ಒಂದೊಂದರಂತೆ ವಿಷ ಸ್ರವಿಸುವ ಒಂದು ಜೊತೆ ಗ್ರಂಥಿ ಇದೆ. ಹಾವಿನ ವಿಷದ ಗ್ರಂಥಿಗಳಂದರೆ ಮಾರ್ಪಾಡಾಗಿರುವ ಎಂಜಲು ಗ್ರಂಥಿಗಳು. ಕಣ್ಣಿನ ಕೆಳಭಾಗ ಹಾಗೂ ಮೇಲ್ದವಡೆಗಳ ನಡುಭಾಗದಲ್ಲಿ ಇವುಗಳ ನೆಲೆ. ಗ್ರಂಥಿಯ ಮುಂಭಾಗದಲ್ಲಿ ನಾಳವಿದ್ದು ಬಾಯಿಯ ಭಾಗದಲ್ಲಿ ವಿಷದ ಹಲ್ಲಿಗೆ ಜೋಡಿಕೊಂಡಿರುತ್ತದೆ. ವಿಷದ ಹಲ್ಲುಗಳಿಗಿಂತ ದೊಡ್ಡವು ಮತ್ತು ಚೂಪು. ಕೆಲವು ಹಾವುಗಳಲ್ಲಿ ವಿಷದ ಹಲ್ಲುಗಳು ಕೊಳವೆಯಂತಿರಬಹುದು, ಇನ್ನು ಕೆಲವು ಹಾವುಗಳಲ್ಲಿ ಒಂದು ಕಡೆ ತೆರೆದಿದ್ದು ಕಮಾನಿನಂತಿರಬಹುದು. ಆದ್ದರಿಂದ ಕೆಲವು ಪರಿಣಿತರು ಕಡಿತದ ಗಾಯ ನೋಡಿಯೇ ಕಚ್ಚಿದ ಹಾವಿನ ಪ್ರಭೇದ ಊಹಿಸಬಲ್ಲರು. ವಿಷರಹಿತ ಹಾವುಗಳಲ್ಲಿ ವಿಷಗ್ರಂಥಿಗಳ ಬೆಳೆವಣಿಗೆ ಅಪೂರ್ಣ ಅಥವಾ ಬೆಳೆವಣಿಗೆಯೇ ಇರುವುದಿಲ್ಲ. ಇನ್ನು ಕೆಲವು ಹಾವುಗಳಲ್ಲಿ ವಿಷದ ಹಲ್ಲುಗಳು ಮೇಲ್ದವಡೆಯ ಮುಂಭಾಗದಲ್ಲಿಯೇ ಇರುತ್ತದೆ. ವಿಷಗ್ರಂಥಿಯ ನಳ ಈ ಹಲ್ಲಿನ ಕೆಳಭಾಗದಲ್ಲಿ ಜೋಡಿಕೊಂಡಿರುತ್ತದೆ. ಈ ಹಲ್ಲುಗಳನ್ನು ಕಿತ್ತರೆ, ಕೆಲವೇ ದಿನಗಳಲ್ಲಿ ಅವುಗಳ ಪಕ್ಕದ ಹಲ್ಲುಗಳೂ ವಿಷದ ಹಲ್ಲುಗಳಾಗಿ ಮಾರ್ಪಡುತ್ತವೆ.

Cobra | ನಾಗರಹಾವು

ಭಾರತದಲ್ಲಿ ಎಷ್ಟು ವಿಷಪೂರಿತ ಹಾವುಗಳು..?

ನಮ್ಮ ದೇಶದಲ್ಲಿ 4 ಜಾತಿಯ ಹಾವುಗಳು ಮಾತ್ರ ವಿಷಪೂರಿತ. ಈ ಜಾತಿಯ ಹಾವು ಕಚ್ಚಿದರೆ ಮಾತ್ರ ಮನುಷ್ಯ ಸಾಯುತ್ತಾನೆ ಹೊರೆತು[ಅಗತ್ಯ ಚಿಕಿತ್ಸೆ ಕೊಡಿಸದಿದ್ದಾಗ] ಬೇರೆ ಎಲ್ಲಾ ಹಾವುಗಳು ವಿಷರಹಿತ.

ಈ 4 ಜಾತಿಯ ಹಾವುಗಳು ಯಾವುವುವೆಂದರೆ

1. King Cobra ಅಥವಾ ಕಾಳಿಂಗ
2. Cobra ಅಥವಾ ನಾಗರ ಹಾವು
3. Viper ಅಥವಾ ಕನ್ನಡಿ ಹಾವು ಅಥವಾ ಕೊಳಕು ಮಂಡಲ
4. Common krait ಅಥವಾ ಕಡಂಬಳ ಅಥವಾ ಕಟ್ಟು ಹಾವು

ಈ ವಿಷಪೂರಿತ ಹಾವುಗಳು ಕೂಡ ಯಾರಿಗೂ ಸುಮ್ಮನೆ ಸುಮ್ಮನೆ ಕಚ್ಚುವುದಿಲ್ಲ. ನಾವು ಅಚಾನಕ್ಕಾಗಿ ಅವುಗಳನ್ನು ತುಳಿದಾಗ ಅಥವಾ ಬೇಕೆಂದೇ ಹಿಂಸೆ ಮಾಡಿದಾಗ ಮಾತ್ರ ಅವುಗಳ ಪ್ರಾಣ ಉಳಿಸಿಕೊಳ್ಳಲು ಅವು ಕಚ್ಚುತ್ತವೆ.  ಪ್ರಕೃತಿಯಲ್ಲಿ ವಿಷರಹಿತ ಹಾವುಗಳಿಗೂ, ವಿಷಪೂರಿತ ಹಾವುಗಳಿಗೂ ತಮ್ಮ ಪ್ರಾಣ ರಕ್ಷಣೆ ಮಾಡಿಕೊಳ್ಳಲು ಅವುಗಳದ್ದೇ ಆದ ಒಂದು ರಕ್ಷಣಾ ತಂತ್ರವು ಇರುತ್ತದೆ. ಯಾವಾಗ ತಮ್ಮ ಪ್ರಾಣಕ್ಕೆ ಸಂಚಕಾರ ಬಂದಿದೆ ಎಂದು ಅನ್ನಿಸಿದಾಗ ಮಾತ್ರ ಅವು ರಕ್ಷಣ ತಂತ್ರವನ್ನು ಬಳಸಿಕೊಳ್ಳುತ್ತವೆ.

ಹಾವುಗಳಿಂದ ಮನುಷ್ಯನಿಗೆ ಆಗುವ ಉಪಯೋಗಗಳು

ಹಾವುಗಳು ವಿಷಯುಕ್ತ ಪ್ರಾಣಿಗಳೆನೋ ನಿಜ ಜೊತೆಗೆ ಇದು ಮಾನವನಿಗೆ ಮಾತ್ರವಲ್ಲ ಬೇರೆ ಪ್ರಾಣಿಗಳಿಗೂ ಜೀವಹಾನಿಯಾಗುತ್ತದೆ. ಆದರೆ ಇದಿಷ್ಟೇ ಕಾರಣದಿಂದ ಹಾವುಗಳೆಲ್ಲವೂ ಹಾನಿಕಾರಕ ಎಂದು ಪರಿಗಣಿಸಬಾರದು. ವಿಷರಹಿತ ಹಾಗೂ ವಿಷಯುಕ್ತ ಹಾವು ಎಲ್ಲವುಗಳಿಂದಲೂ ನಮಗೆ ಸಾಕಷ್ಟು ಉಪಯೋಗಗಳಿವೆ.

1. ಪರಿಸರದ ಸಮತೋಲನ ಸಾಧಿಸುವಲ್ಲಿ ಹಾವುಗಳ ಪಾತ್ರ ತುಂಬಾನೇ ಮುಖ್ಯ. ಇಲಿ, ಹೆಗ್ಗಣ, ಕೀಟ, ಪಕ್ಷಿ ಮುಂತಾದವನ್ನು ಹಾವುಗಳು ಆಹಾರವಾಗಿ ಸೇವಿಸುವುದರಿಂದ ಇದು ನಮ್ಮ ದವಸ ಧಾನ್ಯಗಳಿಗೆ ಉಂಟಗುವ ಹಾನಿಯನ್ನು ಕಡಿಮೆಗೊಳಿಸುತ್ತವೆ ಅಲ್ಲದೆ, ಈ ಹಾವುಗಳೇ ಇತರೆ ಕೆಲವು ಜೀವಿಗಳಿಗೆ [ಉದಾ: ಕೆಲವು ಪಕ್ಷಿಗಳಿಗೆ] ಆಹಾರವಾಗುವುದರಿಂದ ನಿಸರ್ಗದ ಆಹಾರ ಸರಪಳಿಯಲ್ಲಿ ಒಂದು ಕೊಂಡಿಯೂ ಆಗಿದೆ.

2. ಹಾವಿನ ವಿಷದಲ್ಲಿ ಫಾಸ್ಫೊಡೈಯೆಸ್ಟಿರೇಸ್ ಎಂಬ ಕಿಣ್ವವಿದೆ. ಇದನ್ನು ಕೆಲವು ಸರಳ ರಾಸಾಯನಿಕ ಕ್ರಿಯೆಗಳಿಂದ ಬೇರ್ಪಡಿಸಬಹುದು. ಈ ಕಿಣ್ವ ಜೀವಿಗಳ ಅನುವಂಶೀಯತೆಗೆ ಕಾರಣವಾಗುವ ಜೈವಿಕ ವಸ್ತು ಡಿಎನ್‍ಎಯ ತಂತುಗಳನ್ನು ಬೇರ್ಪಡಿಸುತ್ತದೆ. ಇದನ್ನು ಬಳಸಿ ಡಿಎನ್‍ಎಯ ರಚನೆ ಹಾಗೂ ಕಾರ್ಯವಿಧಾನಗಳನ್ನು ಅರಿಯಲು ಸಾಧ್ಯವಾಗಿದೆ.

Viper | ಕೊಳಕು ಮಂಡಲ ಹಾವು

3. ನರಕೋಶಗಳನ್ನು ನಿಷ್ಕ್ರಿಯಗೊಳಿಸುವ ವಿಷವನ್ನು ಬಳಸಿ ಪಾರ್ಶ್ವವಾಯು ಅಥವಾ ನರಮಂಡಲ ಸಂಬಂಧೀ ರೋಗಗಳಿಗೆ ಔಷಧಿ ತಯಾರಿಸಲಾಗುತ್ತದೆ. ವೈಜ್ಞಾನಿಕವಾಗಿ ಈ ಪ್ರಯತ್ನ ಇನ್ನೂ ಸಫಲವಾಗಿಲ್ಲದಿದ್ದರೂ ಕೆಲವೂ ಸ್ಥಳೀಯ ವೈದ್ಯ ಪದ್ಧತಿಯಲ್ಲಿ ಈ ತಂತ್ರ ಬಳಕೆಯಲ್ಲಿದೆ.

4. ವಿಷದ ಘಟಕವಾದ ಆ್ಯಂಕ್ರೊಡ್ ಎಂಬ ವಸ್ತುವನ್ನು ಬೇರ್ಪಡಿಸಿ ಅದನ್ನು ನರರೋಗ ಚಿಕಿತ್ಸೆಗೆ ಬಳಸುವ ಪ್ರಯತ್ನವೂ ನಡೆಯುತ್ತಿದೆ. ಕ್ರೀಡಾಪಟುಗಳ ಕಾಲಿನ ಅಥವಾ ಶರೀರದ ಕೆಲವು ಮಾಂಸಖಂಡಗಳು ಆಟದ ಒತ್ತಡದಿಂದ ಕ್ರೀಯಾಹೀನವಾಗುತ್ತವೆ. ಆಫ್ರಿಕ ದೇಶದ ಕೆಲ ಹಾವುಗಳ ವಿಷದಿಂದ ಇಂಥ ರೋಗಗಳಿಗೆ ಚಿಕಿತ್ಸೆ ನಡೆಸಲಾಗುತ್ತದೆ.

5. ಹಾವಿನ ಚರ್ಮದಿಂದ ನಾವು ಧರಿಸುವ ಸೊಂಟದ ಪಟ್ಟಿ [ಬೆಲ್ಟ್] ಹಾಗೂ ಸ್ತ್ರಿಯರು ಬಳಸುವ ಚೀಲ [ವ್ಯಾನಿಟಿ ಬ್ಯಾಗ್] ಮುಂತಾದವನ್ನು ತಯಾರಿಸುತ್ತಾರೆ.

6. ಆಫ್ರಿಕ, ಚೀನಾದಂಥ ರಾಷ್ಟ್ರಗಳಲ್ಲಿ ಕೆಲವು ಪ್ರಭೇದದ ಹಾವುಗಳ ಮಾಂಸವನ್ನು ತಿನ್ನುತ್ತಾರೆ.

7. ಕಡಲ ಹಾವಿನ ವಿಷದ ನಂಜು ನರಗಳ ಮೇಲೆ ಪರಿಣಾಮಕಾರಿಯಾಗಿದೆ. ಮುಂಬೈಯ ಹಾಫ್ಕಿನ್ ಇನ್ಸ್ಟಿಟ್ಯೂಟಿನಲ್ಲಿ ಇದರ ನಂಜನ್ನು ಶಮನಗೊಳಿಸುವ ಆಂಟಿವೆನೊಮ್ ಅಥವಾ ಪ್ರತಿವಿಷವನ್ನು ಅಭಿವೃಧ್ಧಿಪಡಿಸಲಾಗುತ್ತಿದೆ.

Common krait | ಕಟ್ಟು ಹಾವು

ಹಾವುಗಳನ್ನು ರಕ್ಷಿಸಿ

ನಾವು ನಮ್ಮ ಜಾಗ್ರತೆಯಲ್ಲಿದ್ದರೆ ಹಾವುಗಳಿಂದ ಕಡಿತಕ್ಕೊಳಗಾಗುವ ಸಂದರ್ಭವೇ ಬರುವುದಿಲ್ಲ. ಅಕಸ್ಮಾತ್ ಹಾವುಗಳು ದಾರಿ ತಪ್ಪಿ ನಿಮ್ಮ ಮನೆಯ ಸುತ್ತ ಮುತ್ತ ಕಾಣಿಸಿಕೊಂಡರೆ ನೀವು ಹೆದರಿ ಹಿಂಸೆ ಮಾಡದೆ ಉರಗ ರಕ್ಷಕರನ್ನು ಸಂಪರ್ಕಿಸಿ ಅವುಗಳನ್ನು ಸುರಕ್ಷಿತ ಪ್ರದೇಶಕ್ಕೆ ಬಿಡಿಸಿ. ಜೊತೆಗೆ ಆಹಾರ ಸರಪಳಿಯ ಒಂದು ಕೊಂಡಿಯಾದ ಕಾರಣಕ್ಕಾಗಿ ಹಾವುಗಳು ಅಳಿವಿನಂಚಿಗೆ ಬಂದು ನಿಂತಿದೆ. ಹಲವಾರು ಪ್ರಭೇದದ ಹಾವುಗಳನ್ನು ಕಳೆದ ನೂರು ವರ್ಷಗಳಿಂದ ಜೀವಂತವಾಗಿ ಯಾರೂ ಕಂಡಿಲ್ಲ. ಇವನ್ನು ಉಳಿಸಲು ಇವುಗಳ ಆವಾಸ ಸ್ಥಾನವಾದ ಕಾಡುಗಳನ್ನು ಉಳಿಸುವುದು ಅತಿ ಮುಖ್ಯ. ಜೊತೆಗೆ ಹಾವುಗಳ ಬಗ್ಗೆ ಜನರಲ್ಲಿ ಇರುವ ಮೂಢನಂಬಿಕೆಗಳನ್ನು ತೊಲಗಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ ಹಾವುಗಳನ್ನು ಉಳಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ3 days ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ3 days ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ3 days ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ4 days ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

ದಿನದ ಸುದ್ದಿ4 days ago

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು...

ದಿನದ ಸುದ್ದಿ5 days ago

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ...

ದಿನದ ಸುದ್ದಿ6 days ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ6 days ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

ದಿನದ ಸುದ್ದಿ7 days ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

Trending