ಲೈಫ್ ಸ್ಟೈಲ್
‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ ಸುಳ್ಳು | ಹಾವಿನ ಬಗೆಗೆ ನೀವಿಷ್ಟು ತಿಳಿಯಲೇ ಬೇಕು..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/08/Sneak-suddidina.jpg&description=‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ ಸುಳ್ಳು | ಹಾವಿನ ಬಗೆಗೆ ನೀವಿಷ್ಟು ತಿಳಿಯಲೇ ಬೇಕು..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/08/Sneak-suddidina.jpg&description=‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ ಸುಳ್ಳು | ಹಾವಿನ ಬಗೆಗೆ ನೀವಿಷ್ಟು ತಿಳಿಯಲೇ ಬೇಕು..!', 'pinterestShare', 'width=750,height=350'); return false;" title="Pin This Post">
ವರದಿಯೊಂದರ ಪ್ರಕಾರ ನಮ್ಮ ದೇಶದಲ್ಲಿ ಪ್ರತಿ ವರ್ಷಕ್ಕೆ ಸರಿ ಸುಮಾರು 2,50,000 ಜನಗಳು ಹಾವುಗಳಿಂದ ಕಡಿತಕ್ಕೊಳಗಾಗುತ್ತಾರೆ. ಇದರಲ್ಲಿ 50,000 ಜನರು ಪ್ರಾಣ ಕಳೆದುಕೊಳ್ಳುತ್ತಾರೆ. ಇದರಲ್ಲಿ 725 ಜನ ಹಾವು ಕಚ್ಚಿದೆ ಎಂಬ ಭಯಕ್ಕೆ ಸಾಯುತ್ತಾರೆ.ಮೊದಲು ಸ್ವಲ್ಪ ಹಾವಿನ ಬಗ್ಗೆ ತಿಳಿಯೋಣ.
ವೈಜ್ಞಾನಿಕ ವರ್ಗೀಕರಣ
ಸಾಮ್ರಾಜ್ಯ : ಪ್ರಾಣಿಗಳು
ವಿಭಾಗ : ಕಾರ್ಡೇಟ
ಉಪವಿಭಾಗ: ಕಶೇರುಕ
ವರ್ಗ : ಸರೀಸೃಪಗಳು
ಗಣ : ಸ್ಕ್ವಾಮಾಟ
ಹಾವು ಅಥವಾ ಉರಗ. ನೆಲದ ಮೇಲೆ ಹರಿದಾಡುತ್ತ, ಹೊರಳುತ್ತ, ಅಂಕು ಡೊಂಕಾಗಿ ಚಲಿಸುವ ಈ ಉರಗಕ್ಕೆ ಎದೆಮೂಳೆಗಳಿಲ್ಲ. ಬೆನ್ನು ಮೂಳೆ ಹಾಗು ಪಕ್ಕೆಲುಬುಗಳಿವೆ. ಎದೆ ಮೂಳೆ ಇಲ್ಲದ ಕಾರಣ ಪಕ್ಕೆಲುಬು ಸಡಿಲವಾಗಿದೆ. ತಲೆ ಬುರುಡೆ ಮೂಳೆಗಳು ಅಳ್ಳಕವಾಗಿದೆ. ಹಾಗಾಗಿ ಅವು ತಲೆಯನ್ನು ಸುಲಭವಾಗಿ ಆಡಿಸಬಹುದು. ಹಾವಿನ ಮಿದುಳಿನ ರಚನೆ ಸರಳವಾಗಿದ್ದು ಇನ್ನಿತರ ಸರೀಸೃಪಗಳ ಮಿದುಳನ್ನೆ ಹೋಲುತ್ತದೆ. ಹಾವಿಗೆ ವಿವೇಚನೆಯಾಗಲೀ ಸ್ಮರಣಶಕ್ತಿಯಾಗಲೀ ಇಲ್ಲ. ‘ಹಾವಿನ ದ್ವೇಷ ಹನ್ನೆರಡು ವರ್ಷ’ ಎಂಬ ನುಡಿ ಸತ್ಯವಲ್ಲ. ಹಾವು ಘಟನೆಗಳನ್ನು ನೆನಪಿನಲ್ಲಿಟ್ಟು ಕೊಳ್ಳಲಾಗುವುದಿಲ್ಲ. ಹಾವುಗಳ ಆಯಸ್ಸು 20 ರಿಂದ 30 ವರ್ಷಗಳೆಂದು ಅಂದಾಜು.
ಹಾವುಗಳ ಬಣ್ಣ ವರ್ಣರಂಜಿತ ಮತ್ತು ವೈವಿಧ್ಯಮಯ. ಮೇಲ್ಭಾಗದಲ್ಲಿ ಕಪ್ಪು,ಕಂದು,ಹಳದಿ ಅಥವಾ ಗೋಧಿ ಬಣ್ಣ, ಕೆಳಭಾಗದಲ್ಲಿ ಬಿಳಿ ಇಲ್ಲವೆ ತಿಳಿಹಳದಿ ಬಣ್ಣ. ಕೆಲ ಹಾವುಗಳು ಬಣ್ಣ ಅವು ವಾಸಿಸುವ ಪರಿಸರದ ಬಣ್ಣವನ್ನೇ ಹೋಲುತ್ತದೆ.
ಹಾವಿನ ಹುಟ್ಟು
ಹಾವುಗಳ ಪಳೆಯುಳಿಕೆಗಳು ದೊರೆಯುವುದು ಅಪರೂಪ. ದೊರತ ಪಳೆಯುಳಿಕೆಗಳಲ್ಲಿ ಅತ್ಯಂತ ಹಳೆಯದು ಎಂದರೆ ಸುಮಾರು 112 ರಿಂದ 94 ಮಿಲಿಯನ್ ವರ್ಷಗಳಷ್ಟು ಪ್ರಾಚೀನವಾದುದು. ಶರೀರಶಾಸ್ತ್ರದ ಅಧ್ಯಯನದಿಂದ ಹಾವುಗಳು ಹಲ್ಲಿಗಳ ಜಾತಿಯಿಂದ ಉಗಮವಾಗಿರುತ್ತವೆ ಎಂದು ತಿಳಿದು ಬಂದಿದೆ.
ಉದ್ದ ಮತ್ತು ತೂಕ
ಸುಮಾರು 20 ಕುಟುಂಬಕ್ಕೆ ಸೇರಿದ 3600ಕ್ಕೂ ಹೆಚ್ಚು ಜಾತಿಯ ಹಾವುಗಳು ಪ್ರಪಂಚದಾದ್ಯಂತ ಕಾಣಸಿಗುತ್ತವೆ. ಅಂಟಾರ್ಟಿಕವನ್ನು ಹೊರತುಪಡಿಸಿ ಉಳಿದ ಎಲ್ಲಾ ಖಂಡಗಳಲ್ಲಿಯೂ ಸಮುದ್ರ ಹಾಗೂ ಸುಮಾರು 16000ಅಡಿ ಎತ್ತರದಲ್ಲಿ ಹಿಮಾಲಯ ಪರ್ವತ ಶ್ರೇಣಿಯಲ್ಲಿ ಕೂಡಾ ಹಾವುಗಳು ಕಾಣಸಿಗುತ್ತವೆ. ಹಾವಿನ ಶರೀರ ಉರುಳೆ ಆಕಾರದಲ್ಲಿದೆ. ಉದ್ದ 12ಸೆಂಮೀ-10ಮೀ ವರೆಗೂ ಇರುವುದು. ಅದರೆ ಪಳೆಯುಳಿಕೆ ಸಿಕ್ಕಿರುವ ಪ್ರಕಾರ species Titanoboa cerrejonenis ಎಂಬುದು 12.8ಮೀ [42feet] ಉದ್ದ ಇತ್ತು.
ಶರೀರ ರಚನೆ ಮತ್ತು ಪೊರೆ ಕಳುಚುವಿಕೆ
ಹಾವಿನ ಶರೀರದ ಹೊರಭಾಗದಲ್ಲಿ ಕೈ ಕಾಲುಗಳು ಇಲ್ಲದಿರುವ ಕಾರಣ ಅವು ತಮ್ಮ ಕೆಳಭಾಗದಿಂದ ತೆವಳುತ್ತ ಮುಂದೆ ಸಾಗುತ್ತದೆ. ಕೈ ಕಾಲುಗಳಿಲ್ಲದಿದ್ದರೂ ಬೆನ್ನುಮೂಳೆ, ಪಕ್ಕೆಲುಬುಗಳು ವಿಭಿನ್ನವಾಗಿ ಮಾರ್ಪಾಡಾಗಿರುವುದರಿಂದ, ಶರೀರದ ಮುಂದಿನ ಅರ್ಧಭಾಗವನ್ನು ನೆಲದಿಂದ ಮೇಲಕ್ಕೆ ಎತ್ತಬಲ್ಲವು.ಬೆಳೆವಣಿಗೆಯಿಲ್ಲದ ಹೊರಚರ್ಮದ ಭಾಗವನ್ನು ಆಗಾಗ್ಗೆ ಹಾವು ಕಳಚಿ ಹೊಸ ಚರ್ಮವನ್ನು ಪಡೆಯುತ್ತದೆ. ಇದನ್ನು ಪೊರೆ ಕಳಚುವುದು ಎನ್ನುತ್ತಾರೆ. ಹಾವು ಬೆಳೆಯುವ ವರ್ಷಗಳಲ್ಲಿ ಹೆಚ್ಚು ಬಾರಿಯೂ, ವೃದ್ದ್ಯಾಪಕ್ಕೆ ಕಾಲಿರುಸುತ್ತಿದ್ದಂತೆ ಕಡಿಮೆ ಬಾರಿ ಪೊರೆ ಕಳಚುತ್ತದೆ. ಪೊರೆ ಕಳಚಿದ ಬಳಿಕ ಹೊಸ ಚರ್ಮ ಹಳೆ ಚರ್ಮಕ್ಕಿಂತ ಸ್ವಲ್ಪ ವಿಸ್ತಾರವಿರುವುದರಿಂದ ಮತ್ತೆ ಶರೀರದ ಒಳಭಾಗದ ಅಂಗಗಳು ಬೆಳೆಯಲು ಅವಕಾಶವಾಗುತ್ತದೆ.
ದೃಷ್ಟಿ ಮತ್ತು ಶಬ್ಧ ಗ್ರಹಿಸುವಿಕೆ
ಹಾವಿನ ರೆಪ್ಪೆಗಳು ಒಂದಕ್ಕೊಂದು ಕೂಡಿಕೊಂಡಿರುತ್ತವೆ. ಅವು ಅಲುಗಾಡುವುದಿಲ್ಲ. ಕಣ್ಣಿನ ಹೊರಭಾಗದಲ್ಲಿ ಪಾರದರ್ಶಕ ತೊಪ್ಪಿಯಂತಿರುವ ವಸ್ತು ಆವರಿಸಿರುತ್ತದೆ. ಅದರಿಂದ ಅವು ಯಾವಾಗಲೂ ಕಣ್ಣು ತೆರೆದಿರುವಂತೆ ಕಾಣಿಸುತ್ತದೆ. ಹೀಗಾಗಿ ಹಾವು ನಿದ್ರಿಸುತ್ತಿದೆಯೋ ಅಥವಾ ಎಚ್ಚರದಿಂದ ಇದೆಯೋ ಎಂದು ತಿಳಿಯುವುದಿಲ್ಲ. ಹಾವುಗಳ ದೃಷ್ಟಿ ಮಂದ. ಮುಂದೆ ಇರುವ ವಸ್ತುಗಳನ್ನು ಸರಿಯಾಗಿ ಗುರುತಿಸಲಾರವು ಮತ್ತು ಬಣ್ಣಗಳು ಕಾಣುವುದಿಲ್ಲ.ಹಾವುಗಳಿಗೆ ಹೊರ ಕಿವಿಗಳಿಲ್ಲ, ಕಿವಿ ತಮಟೆಯೂ ಇಲ್ಲ. ಅವುಗಳಿಗೆ ಕೇವಲ ಒಳಕಿವಿ ಮಾತ್ರ ಇರುತ್ತದೆ. ಆದ್ದರಿಂದ ಹಾವುಗಳಿಗೆ ಗಾಳಿಯ ಮೂಲಕ ಪ್ರಸಾರವಾಗುವ ಯಾವ ಶಬ್ದವೂ ಕೇಳಿಸಲಾರದು. ಅವಕ್ಕೆ ಭೂಮಿಯ ಮೇಲುಂಟಾಗುವ ಕಂಪನಗಳನ್ನು ಅವು ಗ್ರಹಿಸಬಲ್ಲವು.
ನಾಲಿಗೆ ಮತ್ತು ಆಹಾರನ್ವೇಷಣೆ
ಹಾವಿನ ನಾಲಿಗೆ ಉದ್ದವಿದ್ದು ಮುಂಭಾಗದಲ್ಲಿ ಸೀಳುಗಳಿವೆ. ಮೇಲಿನ ತುಟಿ ಪುಟ್ಟ ಕಮಾನಿನಾಕಾರದಲ್ಲಿದ್ದು ಬಾಯಿ ಮುಚ್ಚಿಕೊಂಡಾಗ ಚಿಕ್ಕ ರಂಧ್ರವೇರ್ಪಡುತ್ತದೆ. ಈ ರಂಧ್ರದ ಮೂಲಕ ಹಾವು ಆಗಾಗ ನಾಲಿಗೆಯನ್ನು ಹೊರಚಾಚುತ್ತಿರುತ್ತದೆ. ಎರಡು ಸೀಳುಗಳು ಪ್ರತ್ಯೇಕವಾಗಿರುವಂತೆ ಕಾಣುವುದರಿಂದ ಹಾವಿಗೆ ಎರಡು ನಾಲಿಗೆಗಳಿವೆ ಎಂದು ತಪ್ಪಾಗಿ ಭಾವಿಸಲಾಗುತ್ತದೆ ಈ ನಾಲಿಗೆ ವಾಸನೆಯನ್ನು ಕಂಡುಹಿಡಿಯಲು ಬಳುಸುತ್ತವೆ. ಮೇಲ್ದವಡೆಯಲ್ಲಿ ಎರಡು ಪುಟ್ಟ ಕುಳಿಗಳಿವೆ. ಜಕೋಬ್ಸನ್ ಅಂಗ ಎಂದು ಅದರ ಹೆಸರು. ನಾಲಗೆಯು ಈ ಅಂಗಕ್ಕೆ ಗಾಳಿಯಲ್ಲಿರುವ ರಾಸಾಯಾನಿಕಗಳನ್ನು ತಲಪಿಸುತ್ತದೆ. ಆಗ ಇದು ವಾಸನೆಯನ್ನು ಗ್ರಹಿಸುತ್ತದೆ. ವಾತಾವರಣದಲ್ಲಿನ ಅನೇಕ ಏರಿಳಿತವನ್ನು ಕೂಡ ನಾಲಿಗೆ ಗ್ರಹಿಸಬಲ್ಲದು. ಕಾಳಿಂಗ ಸರ್ಪ 100ಮೀಟರ್ ದೂರದಲ್ಲಿ ಚಲಿಸುತ್ತಿರುವ ತನ್ನ ಬೇಟೆಯನ್ನು ಪತ್ತೆ ಹಚ್ಚುತ್ತದೆ. ಇಲಿ, ಹೆಗ್ಗಣಗಳಂಥ ಪುಟ್ಟ ಸಸ್ತನಿಗಳು, ಪಕ್ಷಿಗಳು, ಸರೀಸೃಪಗಳು, ಕಪ್ಪೆ, ಮೀನುಗಳು, ಕೀಟಗಳು ಇತ್ಯಾದಿ ಹಾವಿನ ಆಹಾರ. ಕೆಲವು ಹಾವುಗಳು ವಿವಿಧ ಪ್ರಾಣಿ, ಪಕ್ಷಿಗಳ ಮೊಟ್ಟೆಗಳನ್ನು ತಿನ್ನುತ್ತವೆ. ಸಸ್ಯಹಾರೀ ಹಾವು ಇಲ್ಲವೇ ಇಲ್ಲ.
ವಿಷಗ್ರಂಥಿ ಮತ್ತು ಹಲ್ಲುಗಳು
ವಿಷದ ಹಾವುಗಳ ತಲೆ ಎರಡೂ ಪಕ್ಕದಲ್ಲಿ ಒಂದೊಂದರಂತೆ ವಿಷ ಸ್ರವಿಸುವ ಒಂದು ಜೊತೆ ಗ್ರಂಥಿ ಇದೆ. ಹಾವಿನ ವಿಷದ ಗ್ರಂಥಿಗಳಂದರೆ ಮಾರ್ಪಾಡಾಗಿರುವ ಎಂಜಲು ಗ್ರಂಥಿಗಳು. ಕಣ್ಣಿನ ಕೆಳಭಾಗ ಹಾಗೂ ಮೇಲ್ದವಡೆಗಳ ನಡುಭಾಗದಲ್ಲಿ ಇವುಗಳ ನೆಲೆ. ಗ್ರಂಥಿಯ ಮುಂಭಾಗದಲ್ಲಿ ನಾಳವಿದ್ದು ಬಾಯಿಯ ಭಾಗದಲ್ಲಿ ವಿಷದ ಹಲ್ಲಿಗೆ ಜೋಡಿಕೊಂಡಿರುತ್ತದೆ. ವಿಷದ ಹಲ್ಲುಗಳಿಗಿಂತ ದೊಡ್ಡವು ಮತ್ತು ಚೂಪು. ಕೆಲವು ಹಾವುಗಳಲ್ಲಿ ವಿಷದ ಹಲ್ಲುಗಳು ಕೊಳವೆಯಂತಿರಬಹುದು, ಇನ್ನು ಕೆಲವು ಹಾವುಗಳಲ್ಲಿ ಒಂದು ಕಡೆ ತೆರೆದಿದ್ದು ಕಮಾನಿನಂತಿರಬಹುದು. ಆದ್ದರಿಂದ ಕೆಲವು ಪರಿಣಿತರು ಕಡಿತದ ಗಾಯ ನೋಡಿಯೇ ಕಚ್ಚಿದ ಹಾವಿನ ಪ್ರಭೇದ ಊಹಿಸಬಲ್ಲರು. ವಿಷರಹಿತ ಹಾವುಗಳಲ್ಲಿ ವಿಷಗ್ರಂಥಿಗಳ ಬೆಳೆವಣಿಗೆ ಅಪೂರ್ಣ ಅಥವಾ ಬೆಳೆವಣಿಗೆಯೇ ಇರುವುದಿಲ್ಲ. ಇನ್ನು ಕೆಲವು ಹಾವುಗಳಲ್ಲಿ ವಿಷದ ಹಲ್ಲುಗಳು ಮೇಲ್ದವಡೆಯ ಮುಂಭಾಗದಲ್ಲಿಯೇ ಇರುತ್ತದೆ. ವಿಷಗ್ರಂಥಿಯ ನಳ ಈ ಹಲ್ಲಿನ ಕೆಳಭಾಗದಲ್ಲಿ ಜೋಡಿಕೊಂಡಿರುತ್ತದೆ. ಈ ಹಲ್ಲುಗಳನ್ನು ಕಿತ್ತರೆ, ಕೆಲವೇ ದಿನಗಳಲ್ಲಿ ಅವುಗಳ ಪಕ್ಕದ ಹಲ್ಲುಗಳೂ ವಿಷದ ಹಲ್ಲುಗಳಾಗಿ ಮಾರ್ಪಡುತ್ತವೆ.
ಭಾರತದಲ್ಲಿ ಎಷ್ಟು ವಿಷಪೂರಿತ ಹಾವುಗಳು..?
ನಮ್ಮ ದೇಶದಲ್ಲಿ 4 ಜಾತಿಯ ಹಾವುಗಳು ಮಾತ್ರ ವಿಷಪೂರಿತ. ಈ ಜಾತಿಯ ಹಾವು ಕಚ್ಚಿದರೆ ಮಾತ್ರ ಮನುಷ್ಯ ಸಾಯುತ್ತಾನೆ ಹೊರೆತು[ಅಗತ್ಯ ಚಿಕಿತ್ಸೆ ಕೊಡಿಸದಿದ್ದಾಗ] ಬೇರೆ ಎಲ್ಲಾ ಹಾವುಗಳು ವಿಷರಹಿತ.
ಈ 4 ಜಾತಿಯ ಹಾವುಗಳು ಯಾವುವುವೆಂದರೆ
1. King Cobra ಅಥವಾ ಕಾಳಿಂಗ
2. Cobra ಅಥವಾ ನಾಗರ ಹಾವು
3. Viper ಅಥವಾ ಕನ್ನಡಿ ಹಾವು ಅಥವಾ ಕೊಳಕು ಮಂಡಲ
4. Common krait ಅಥವಾ ಕಡಂಬಳ ಅಥವಾ ಕಟ್ಟು ಹಾವು
ಈ ವಿಷಪೂರಿತ ಹಾವುಗಳು ಕೂಡ ಯಾರಿಗೂ ಸುಮ್ಮನೆ ಸುಮ್ಮನೆ ಕಚ್ಚುವುದಿಲ್ಲ. ನಾವು ಅಚಾನಕ್ಕಾಗಿ ಅವುಗಳನ್ನು ತುಳಿದಾಗ ಅಥವಾ ಬೇಕೆಂದೇ ಹಿಂಸೆ ಮಾಡಿದಾಗ ಮಾತ್ರ ಅವುಗಳ ಪ್ರಾಣ ಉಳಿಸಿಕೊಳ್ಳಲು ಅವು ಕಚ್ಚುತ್ತವೆ. ಪ್ರಕೃತಿಯಲ್ಲಿ ವಿಷರಹಿತ ಹಾವುಗಳಿಗೂ, ವಿಷಪೂರಿತ ಹಾವುಗಳಿಗೂ ತಮ್ಮ ಪ್ರಾಣ ರಕ್ಷಣೆ ಮಾಡಿಕೊಳ್ಳಲು ಅವುಗಳದ್ದೇ ಆದ ಒಂದು ರಕ್ಷಣಾ ತಂತ್ರವು ಇರುತ್ತದೆ. ಯಾವಾಗ ತಮ್ಮ ಪ್ರಾಣಕ್ಕೆ ಸಂಚಕಾರ ಬಂದಿದೆ ಎಂದು ಅನ್ನಿಸಿದಾಗ ಮಾತ್ರ ಅವು ರಕ್ಷಣ ತಂತ್ರವನ್ನು ಬಳಸಿಕೊಳ್ಳುತ್ತವೆ.
ಹಾವುಗಳಿಂದ ಮನುಷ್ಯನಿಗೆ ಆಗುವ ಉಪಯೋಗಗಳು
ಹಾವುಗಳು ವಿಷಯುಕ್ತ ಪ್ರಾಣಿಗಳೆನೋ ನಿಜ ಜೊತೆಗೆ ಇದು ಮಾನವನಿಗೆ ಮಾತ್ರವಲ್ಲ ಬೇರೆ ಪ್ರಾಣಿಗಳಿಗೂ ಜೀವಹಾನಿಯಾಗುತ್ತದೆ. ಆದರೆ ಇದಿಷ್ಟೇ ಕಾರಣದಿಂದ ಹಾವುಗಳೆಲ್ಲವೂ ಹಾನಿಕಾರಕ ಎಂದು ಪರಿಗಣಿಸಬಾರದು. ವಿಷರಹಿತ ಹಾಗೂ ವಿಷಯುಕ್ತ ಹಾವು ಎಲ್ಲವುಗಳಿಂದಲೂ ನಮಗೆ ಸಾಕಷ್ಟು ಉಪಯೋಗಗಳಿವೆ.
1. ಪರಿಸರದ ಸಮತೋಲನ ಸಾಧಿಸುವಲ್ಲಿ ಹಾವುಗಳ ಪಾತ್ರ ತುಂಬಾನೇ ಮುಖ್ಯ. ಇಲಿ, ಹೆಗ್ಗಣ, ಕೀಟ, ಪಕ್ಷಿ ಮುಂತಾದವನ್ನು ಹಾವುಗಳು ಆಹಾರವಾಗಿ ಸೇವಿಸುವುದರಿಂದ ಇದು ನಮ್ಮ ದವಸ ಧಾನ್ಯಗಳಿಗೆ ಉಂಟಗುವ ಹಾನಿಯನ್ನು ಕಡಿಮೆಗೊಳಿಸುತ್ತವೆ ಅಲ್ಲದೆ, ಈ ಹಾವುಗಳೇ ಇತರೆ ಕೆಲವು ಜೀವಿಗಳಿಗೆ [ಉದಾ: ಕೆಲವು ಪಕ್ಷಿಗಳಿಗೆ] ಆಹಾರವಾಗುವುದರಿಂದ ನಿಸರ್ಗದ ಆಹಾರ ಸರಪಳಿಯಲ್ಲಿ ಒಂದು ಕೊಂಡಿಯೂ ಆಗಿದೆ.
2. ಹಾವಿನ ವಿಷದಲ್ಲಿ ಫಾಸ್ಫೊಡೈಯೆಸ್ಟಿರೇಸ್ ಎಂಬ ಕಿಣ್ವವಿದೆ. ಇದನ್ನು ಕೆಲವು ಸರಳ ರಾಸಾಯನಿಕ ಕ್ರಿಯೆಗಳಿಂದ ಬೇರ್ಪಡಿಸಬಹುದು. ಈ ಕಿಣ್ವ ಜೀವಿಗಳ ಅನುವಂಶೀಯತೆಗೆ ಕಾರಣವಾಗುವ ಜೈವಿಕ ವಸ್ತು ಡಿಎನ್ಎಯ ತಂತುಗಳನ್ನು ಬೇರ್ಪಡಿಸುತ್ತದೆ. ಇದನ್ನು ಬಳಸಿ ಡಿಎನ್ಎಯ ರಚನೆ ಹಾಗೂ ಕಾರ್ಯವಿಧಾನಗಳನ್ನು ಅರಿಯಲು ಸಾಧ್ಯವಾಗಿದೆ.
3. ನರಕೋಶಗಳನ್ನು ನಿಷ್ಕ್ರಿಯಗೊಳಿಸುವ ವಿಷವನ್ನು ಬಳಸಿ ಪಾರ್ಶ್ವವಾಯು ಅಥವಾ ನರಮಂಡಲ ಸಂಬಂಧೀ ರೋಗಗಳಿಗೆ ಔಷಧಿ ತಯಾರಿಸಲಾಗುತ್ತದೆ. ವೈಜ್ಞಾನಿಕವಾಗಿ ಈ ಪ್ರಯತ್ನ ಇನ್ನೂ ಸಫಲವಾಗಿಲ್ಲದಿದ್ದರೂ ಕೆಲವೂ ಸ್ಥಳೀಯ ವೈದ್ಯ ಪದ್ಧತಿಯಲ್ಲಿ ಈ ತಂತ್ರ ಬಳಕೆಯಲ್ಲಿದೆ.
4. ವಿಷದ ಘಟಕವಾದ ಆ್ಯಂಕ್ರೊಡ್ ಎಂಬ ವಸ್ತುವನ್ನು ಬೇರ್ಪಡಿಸಿ ಅದನ್ನು ನರರೋಗ ಚಿಕಿತ್ಸೆಗೆ ಬಳಸುವ ಪ್ರಯತ್ನವೂ ನಡೆಯುತ್ತಿದೆ. ಕ್ರೀಡಾಪಟುಗಳ ಕಾಲಿನ ಅಥವಾ ಶರೀರದ ಕೆಲವು ಮಾಂಸಖಂಡಗಳು ಆಟದ ಒತ್ತಡದಿಂದ ಕ್ರೀಯಾಹೀನವಾಗುತ್ತವೆ. ಆಫ್ರಿಕ ದೇಶದ ಕೆಲ ಹಾವುಗಳ ವಿಷದಿಂದ ಇಂಥ ರೋಗಗಳಿಗೆ ಚಿಕಿತ್ಸೆ ನಡೆಸಲಾಗುತ್ತದೆ.
5. ಹಾವಿನ ಚರ್ಮದಿಂದ ನಾವು ಧರಿಸುವ ಸೊಂಟದ ಪಟ್ಟಿ [ಬೆಲ್ಟ್] ಹಾಗೂ ಸ್ತ್ರಿಯರು ಬಳಸುವ ಚೀಲ [ವ್ಯಾನಿಟಿ ಬ್ಯಾಗ್] ಮುಂತಾದವನ್ನು ತಯಾರಿಸುತ್ತಾರೆ.
6. ಆಫ್ರಿಕ, ಚೀನಾದಂಥ ರಾಷ್ಟ್ರಗಳಲ್ಲಿ ಕೆಲವು ಪ್ರಭೇದದ ಹಾವುಗಳ ಮಾಂಸವನ್ನು ತಿನ್ನುತ್ತಾರೆ.
7. ಕಡಲ ಹಾವಿನ ವಿಷದ ನಂಜು ನರಗಳ ಮೇಲೆ ಪರಿಣಾಮಕಾರಿಯಾಗಿದೆ. ಮುಂಬೈಯ ಹಾಫ್ಕಿನ್ ಇನ್ಸ್ಟಿಟ್ಯೂಟಿನಲ್ಲಿ ಇದರ ನಂಜನ್ನು ಶಮನಗೊಳಿಸುವ ಆಂಟಿವೆನೊಮ್ ಅಥವಾ ಪ್ರತಿವಿಷವನ್ನು ಅಭಿವೃಧ್ಧಿಪಡಿಸಲಾಗುತ್ತಿದೆ.
ಹಾವುಗಳನ್ನು ರಕ್ಷಿಸಿ
ನಾವು ನಮ್ಮ ಜಾಗ್ರತೆಯಲ್ಲಿದ್ದರೆ ಹಾವುಗಳಿಂದ ಕಡಿತಕ್ಕೊಳಗಾಗುವ ಸಂದರ್ಭವೇ ಬರುವುದಿಲ್ಲ. ಅಕಸ್ಮಾತ್ ಹಾವುಗಳು ದಾರಿ ತಪ್ಪಿ ನಿಮ್ಮ ಮನೆಯ ಸುತ್ತ ಮುತ್ತ ಕಾಣಿಸಿಕೊಂಡರೆ ನೀವು ಹೆದರಿ ಹಿಂಸೆ ಮಾಡದೆ ಉರಗ ರಕ್ಷಕರನ್ನು ಸಂಪರ್ಕಿಸಿ ಅವುಗಳನ್ನು ಸುರಕ್ಷಿತ ಪ್ರದೇಶಕ್ಕೆ ಬಿಡಿಸಿ. ಜೊತೆಗೆ ಆಹಾರ ಸರಪಳಿಯ ಒಂದು ಕೊಂಡಿಯಾದ ಕಾರಣಕ್ಕಾಗಿ ಹಾವುಗಳು ಅಳಿವಿನಂಚಿಗೆ ಬಂದು ನಿಂತಿದೆ. ಹಲವಾರು ಪ್ರಭೇದದ ಹಾವುಗಳನ್ನು ಕಳೆದ ನೂರು ವರ್ಷಗಳಿಂದ ಜೀವಂತವಾಗಿ ಯಾರೂ ಕಂಡಿಲ್ಲ. ಇವನ್ನು ಉಳಿಸಲು ಇವುಗಳ ಆವಾಸ ಸ್ಥಾನವಾದ ಕಾಡುಗಳನ್ನು ಉಳಿಸುವುದು ಅತಿ ಮುಖ್ಯ. ಜೊತೆಗೆ ಹಾವುಗಳ ಬಗ್ಗೆ ಜನರಲ್ಲಿ ಇರುವ ಮೂಢನಂಬಿಕೆಗಳನ್ನು ತೊಲಗಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ ಹಾವುಗಳನ್ನು ಉಳಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
~ಗೋವರ್ಧನ ನವಿಲೇಹಾಳು
ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.
ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.
ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.
ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್ನ ನಷ್ಟ ಅಪಾರ. ಲೆಬನಾನ್ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್ಎಚ್ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.
ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?
ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.
ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.
ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್ನ ಮಕ್ಕಳ ಸಾವುಗಳು, ಇಸ್ರೇಲ್ನ ಗಾಯಗೊಂಡ ಕುಟುಂಬಗಳು, ಗಲ್ಫ್ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
~ಗೋವರ್ಧನ ನವಿಲೇಹಾಳು
ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.
ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ; ಎಚ್ಚರಿಕೆಯೂ ಹೌದು.
ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಎಲೆಕ್ಟ್ರಾಲ್ ಬಾಂಡ್ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.
ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.
ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.
ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್ಗಳಾಗಿ ಪರಿವರ್ತಿಸುತ್ತದೆ.
ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.
ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ
ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್ಲೈನ್ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.
ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.
ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.
ಸುದ್ದಿದಿನ | ವಾಟ್ಸಾಪ್ | 9980346243

ದಿನದ ಸುದ್ದಿ
ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು.
ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು
-
ದಿನದ ಸುದ್ದಿ4 days agoಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ
-
ದಿನದ ಸುದ್ದಿ4 days agoಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ಅಂಕಣ3 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ3 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ದಿನದ ಸುದ್ದಿ4 days agoಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ3 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ





