ದಿನದ ಸುದ್ದಿ
ಶಿಮ್ಲಾದಿಂದ ಕನ್ನಡತಿ ಕರೆತಂದ ವಿಕ ವರದಿಗಾರ ನಿಮಗೆ ಗೊತ್ತಾ?
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/08/vk-impact-report.png&description=ಶಿಮ್ಲಾದಿಂದ ಕನ್ನಡತಿ ಕರೆತಂದ ವಿಕ ವರದಿಗಾರ ನಿಮಗೆ ಗೊತ್ತಾ?', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/08/vk-impact-report.png&description=ಶಿಮ್ಲಾದಿಂದ ಕನ್ನಡತಿ ಕರೆತಂದ ವಿಕ ವರದಿಗಾರ ನಿಮಗೆ ಗೊತ್ತಾ?', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್: ಪತ್ರಕರ್ತರು ಚೌಕಟ್ಟಿನ ಹೊರಗೂ ಕೆಲಸ ಮಾಡಿ ಹೇಗೆ ಸತ್ಕಾರ್ಯ ಮಾಡಬಹುದು ಎನ್ನುವುದಕ್ಕೆ ಶಿಮ್ಲಾದ ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರಿನ ಪಿರಿಯಾಪಟ್ಟಣ ಮೂಲದ ಕನ್ನಡತಿ ಪದ್ಮಾರನ್ನು ಕರೆತರಲು ಅವಿರತವಾಗಿ ಶ್ರಮಿಸಿದ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕ ಚಾಣಕ್ಯ ನೀಲಕಂಠನಹಳ್ಳಿ ಅವರು ಮಾದರಿಯಾಗಿ ನಿಂತಿದ್ದಾರೆ.
ಚಾಣಕ್ಯ ಅವರ ಸೇವೆಯ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಕೂಡ ಪದ್ಮಾ ಅವರನ್ನು ಭೇಟಿಯಾಗಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ವಿಜಯ ಕರ್ನಾಟಕ ಹೆಸರನ್ನು ಪ್ರಸ್ತಾಪಿಸಿ ವರದಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುದ್ದಿಗಳು ಸುಳ್ಳೋ ನಿಜವೋ ಎಂದು ಯೋಚಿಸದೆ ಯಥಾವತ್ತಾಗಿ ಭಟ್ಟಿ ಇಳಿಸುವ ಮಾಧ್ಯಮಗಳಿಗೆ ಹೀಗೂ ಕೆಲಸ ಮಾಡಬಹುದು ಎಂಬುದನ್ನು ಒಂದು ನಿದರ್ಶನ ಸಮೇತ ಚಾಣಕ್ಯ ಅವರು ಸಾಬೀತುಮಾಡಿ ತೋರಿಸಿದ್ದಾರೆ.
ಚನ್ನಪಟ್ಟಣ ತಾಲೂಕಿನ ನೀಲಕಂಠನಹಳ್ಳಿ ಎಂಬ ಪುಟ್ಟ ಗ್ರಾಮ ಮೂಲದವರಾದ ಅವರು, ಸದ್ಯ ಮೈಸೂರಿನ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಹಿರಿಯ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಅಮೋಘ್ ಸ್ಥಳೀಯ ವಾಹಿನಿಯಲ್ಲಿ ವರದಿಗಾರರಾಗಿ, ಪ್ರಜಾವಾಣಿ ಬೆಂಗಳೂರು ವಿಭಾಗದಲ್ಲಿ ಟ್ರೇನಿಯಾಗಿ, ವಿಜಯವಾಣಿ ದಿನಪತ್ರಿಕೆಯ ಚಿತ್ರದುರ್ಗ ಹಾಗೂ ದಾವಣಗೆರೆಯ ವರದಿಗಾರನಾಗಿ ಕೆಲಸ ಮಾಡಿದ್ದ ಅವರು ಕಳೆದ ಐದು ವರ್ಷಗಳಿಂದ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಕರಣ ಭೇದಿಸಿದ್ದು ಹೀಗೆ…
ಪದ್ಮಾ ಪ್ರಕರಣ ಕುರಿತು ಟ್ವಿಟರ್ ಹಾಗೂ ಫೇಸ್ಬುಕ್ನಲ್ಲಿ ಕಾಣಿಸಿಕೊಂಡ ಒಂದು ಮಾಹಿತಿಯ ಬೆನ್ನು ಹತ್ತಿದ ಚಾಣಕ್ಯ ಅವರು ಶಿಮ್ಲಾ ಆಸ್ಪತ್ರೆಯ ದೂರವಾಣಿ ಸಂಖ್ಯೆಯನ್ನು ಗೂಗಲ್ನಲ್ಲಿ ಪತ್ತೆಮಾಡಿದರು. ತಮಗೆ ಗೊತ್ತಿದ್ದಷ್ಟು ಹಿಂದಿಯಲ್ಲಿ ಅಲ್ಲಿನ ಸ್ವಾಗತಕಾರನ ಹತ್ತಿರ ಮಾತನಾಡಿ ಹೇಗೋ ಅಲ್ಲಿನ ವೈದ್ಯ ಸಂಜಯ್ ಪಾಠಕ್ ಸಂಪರ್ಕ ಸಾಧಿಸಿ ಪದ್ಮಾ ಅವರೊಂದಿಗೆ ಮಾತನಾಡಲು ಯಶಸ್ವಿಯಾದರು. ಶಿಮ್ಲಾದಲ್ಲಿದ್ದ ಪದ್ಮಾರನ್ನು ಮೊದಲು ಗುರುತಿಸಿದ ಹಿಮಾಚಲಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸುನೀಲ ಶರ್ಮಾ ಅವರಿಗೆ ಫೇಸ್ ಬುಕ್ನಲ್ಲಿ ಸಂದೇಶ ಕಳಿಸಿ ಅವರ ಸಂಪರ್ಕವನ್ನೂ ಗಳಿಸಲು ಯಶಸ್ವಿಯಾದರು.
ವರದಿ ಮಾಡಿ ಸುಮ್ಮನಾಗಲಿಲ್ಲ
ಮೇಲಿನವರ ಗಮನಕ್ಕೆ ತಂದು ವರದಿಮಾಡಿ ತಣ್ಣಗಾಗಿದ್ದರೆ ಅವರು ಹತ್ತರಲ್ಲಿ ಹನ್ನೊಂದನೆಯವರಾಗಿರಬೇಕಾಗಿತ್ತು. ವಿಕ ಮೈಸೂರು ಸ್ಥಾನಿಕ ಸಂಪಾದಕ ಲೋಕೇಶ್ ಕಾಯರ್ಗ ಅವರು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ಅವರಿಗೆ ವಿಷಯ ಮುಟ್ಟಿಸಿದರು. ಚಾಣಕ್ಯ ಮೈಸೂರು ಜಿಲ್ಲಾ ಮಾನಸಿಕ ಆರೋಗ್ಯ ಯೋಜನಾಧಿಕಾರಿ ಮಂಜುಪ್ರಸಾದ್ ಅವರಿಗೆ ವಿಷಯ ಮುಟ್ಟಿಸಿದರು. ಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗೆ ಸುನೀಲ ಶರ್ಮಾ, ಸಂಜಯ್ ಪಾಠಕ್ ಅವರ ಮೊಬೈಲ್ ನಂಬರ್ ನೀಡಿ. ಈ ಪ್ರಕರಣದಲ್ಲಿ ವಿಜಯ ಕರ್ನಾಟಕ ಪತ್ರಿಕೆಯು ಮುಖ್ಯ ಸೂತ್ರಧಾರಿಯಾಗಿರುವಂತೆ ನೋಡಿಕೊಂಡರು.
ವರದಿ ಪರಕಟವಾದ ಮರುದಿನವೇ ವಿಜಯ ಕರ್ನಾಟಕದ ಪಿರಿಯಾಪಟ್ಟಣ ವರದಿಗಾರ ನವೀನ್ ಅವರು ಕಂಪಲಾಪುರದ ಮಾಕನಹಳ್ಳಿ ಪಾಳ್ಯದಲ್ಲಿರುವ ಪದ್ಮಾ ಅವರ ಮನೆಯನ್ನು ಪತ್ತೆ ಮಾಡಿದರು. ಮಾನಸಿಕ ಆರೋಗ್ಯಾಧಿಕಾರಿಗೆ ವಿಳಾಸ ತೋರಿಸಿ ಅವರನ್ನು ಕರೆದೊಯ್ದವರು ನವೀನ್.
ಮನೆ ಪರಿಸ್ಥಿತಿ ಸರಿ ಇರಲಿಲ್ಲ
ಪದ್ಮಾ ಅವರ ಕುಟುಂಬ ವರ್ಗವನ್ನು ಮಾನಸಿಕ ಆರೋಗ್ಯ ಇಲಾಖೆ ತಂಡ ಭೇಟಿಯಾದಾಗ ಅವರ ಮನೆ ಪರಿಸ್ಥಿತಿ ಕರಳು ಚುರುಕ್ ಎನ್ನುವಂತಿತ್ತು. ದುಡ್ಡಿಲ್ಲದೆ ಅರ್ಧಕ್ಕೆ ಮನೆ ನಿಂತಿದ್ದರಿಂದ ಪದ್ಮಾರ ತಾಯಿ ಪಾರ್ವತಮ್ಮನವರು ಅವರ ಮಗಳ ಮನೆಯಲ್ಲಿ ವಾಸಿಸುತ್ತಿದ್ದರು. ಕೂಲಿ ಮಾಡಿ ಬದುಕುವ ಕುಟುಂಬಕ್ಕೆ ಪದ್ಮಾ ಇನ್ನಷ್ಟು ಹೊರೆಯಾಗಬಹುದೆಂದು ಮೇಲ್ನೋಟದಲ್ಲೇ ಕಾಣುತ್ತಿತ್ತು. ಕೂಡಲೇ ಪಿರಿಯಾಪಟ್ಟಣ ಶಾಸಕ ಮಹದೇವು ಅವರನ್ನು ಸಂಪರ್ಕಿಸಿದ ಚಾಣಕ್ಯ ಅವರು ಪದ್ಮಾರ ಮನೆ ಪರಿಸ್ಥಿತಿಯನ್ನು ವಿವರಿಸಿ ಹೇಳಿದರು. ಇದರಿಂದ ಕರಗಿದ ಶಾಸಕರು ಪದ್ಮಾ ಕುಟುಂಬಕ್ಕೆ ನೆರವು ನೀಡುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಅಭಿರಾಂ ಅವರೂ ಕೂಡ ಇದೇ ರೀತಿ ಭರವಸೆ ನೀಡಿದರು.
ಪ್ರೇರಣೆಯಾಗಿದ್ದು ಸಂಸ್ಥೆ ಹಾಗೂ ಗುರುಗಳು
ವರದಿಗಳು ಸಮಾಜದ ಮೂರನೇ ವ್ಯಕ್ತಿಗೆ ಲಾಭ ತಂದುಕೊಟ್ಟಾಗಲೇ ಸಾರ್ಥಕವಾಗುವುದು ಎಂದು ಚಾಣಕ್ಯ ಅವರು ತಮ್ಮ ಫೇಸ್ಬುಕ್ ಪೋಸ್ಟ್ವೊಂದರಲ್ಲಿ ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ನನ್ನ ಸಂಸ್ಥೆ ಹಾಗೂ ಸ್ಥಾನಿಕ ಸಂಪಾದಕರು ನೀಡಿದ ಪ್ರೋತ್ಸಾಹ ಎಂದು ಫೇಸ್ ಬುಕ್ ಮೆಸೆಂಜರ್ನಲ್ಲಿ ಸುದ್ದಿದಿನ ಕ್ಕೆ ತಿಳಿಸಿದ್ದಾರೆ.
ನಾನು ವಿಕ ಬಳಗಕ್ಕೆ ಸೇರಿದಾಗ ನನ್ನ ಆದ್ಯಗುರುಗಳು ನೀವು ಏನು ಬರೆಯುತ್ತೀರಾ ಎಂದು ಕೇಳಿದರು. ಕೃಷಿ, ವಿಜ್ಞಾನ, ಭಾಷಾಂತರ, ಲೈಫ್ ಸ್ಟೈಲ್ ವರದಿಗಾರಿಕೆ ಬಗ್ಗೆ ವಿವರಿಸಿದೆ. ಶ್ರೀಸಾಮಾನ್ಯನಿಗೆ ನೆರವಾಗುವಂತಹ ಯಾವುದಾದರೂ ಲೇಖನ ಬರೆದಿದ್ದೀರಾ ಎಂದು ಕೇಳಿದರು. ನನ್ನ ಬಳಿ ಉತ್ತರ ಇರಲಿಲ್ಲ. ಸಮಾಜದ ಮೂರನೇ ವ್ಯಕ್ತಿಗೆ ಲಾಭ ತಂದು ಕೊಟ್ಟಾಗ ಮಾತ್ರ ವರದಿ ಸಾರ್ಥಕವಾಗತ್ತದೆ ಎಂದು ಅವರು ಹೇಳಿದ್ದರು. ಇದು ಅರ್ಥವಾಗಲು ಐದು ವರ್ಷ ಹಿಡಿಯಿತು ಎಂದು ಚಾಣಕ್ಯ ಅವರು ತಮ್ಮ ಫೇಸ್ಬುಕ್ ಪೋಸ್ಟ್ ವೊಂದರಲ್ಲಿ ಬರೆದಿದ್ದಾರೆ.

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ14 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ


