Connect with us

ದಿನದ ಸುದ್ದಿ

ಶಿಮ್ಲಾದಿಂದ ಕನ್ನಡತಿ ಕರೆತಂದ ವಿಕ ವರದಿಗಾರ ನಿಮಗೆ ಗೊತ್ತಾ?

Published

on

ಸುದ್ದಿದಿನ ಡೆಸ್ಕ್: ಪತ್ರಕರ್ತರು ಚೌಕಟ್ಟಿನ ಹೊರಗೂ ಕೆಲಸ ಮಾಡಿ ಹೇಗೆ ಸತ್ಕಾರ್ಯ ಮಾಡಬಹುದು ಎನ್ನುವುದಕ್ಕೆ ಶಿಮ್ಲಾದ ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರಿನ ಪಿರಿಯಾಪಟ್ಟಣ ಮೂಲದ ಕನ್ನಡತಿ ಪದ್ಮಾರನ್ನು ಕರೆತರಲು ಅವಿರತವಾಗಿ ಶ್ರಮಿಸಿದ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕ ಚಾಣಕ್ಯ ನೀಲಕಂಠನಹಳ್ಳಿ ಅವರು ಮಾದರಿಯಾಗಿ ನಿಂತಿದ್ದಾರೆ.

ಚಾಣಕ್ಯ ಅವರ ಸೇವೆಯ ಬಗ್ಗೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರೂ ಕೂಡ ಪದ್ಮಾ ಅವರನ್ನು ಭೇಟಿಯಾಗಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ವಿಜಯ ಕರ್ನಾಟಕ ಹೆಸರನ್ನು ಪ್ರಸ್ತಾಪಿಸಿ ವರದಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುದ್ದಿಗಳು ಸುಳ್ಳೋ ನಿಜವೋ ಎಂದು ಯೋಚಿಸದೆ ಯಥಾವತ್ತಾಗಿ ಭಟ್ಟಿ ಇಳಿಸುವ ಮಾಧ್ಯಮಗಳಿಗೆ ಹೀಗೂ ಕೆಲಸ ಮಾಡಬಹುದು ಎಂಬುದನ್ನು ಒಂದು ನಿದರ್ಶನ ಸಮೇತ ಚಾಣಕ್ಯ ಅವರು ಸಾಬೀತುಮಾಡಿ ತೋರಿಸಿದ್ದಾರೆ.

 

ಚನ್ನಪಟ್ಟಣ ತಾಲೂಕಿನ ನೀಲಕಂಠನಹಳ್ಳಿ ಎಂಬ ಪುಟ್ಟ ಗ್ರಾಮ ಮೂಲದವರಾದ ಅವರು, ಸದ್ಯ ಮೈಸೂರಿನ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಹಿರಿಯ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಅಮೋಘ್ ಸ್ಥಳೀಯ ವಾಹಿನಿಯಲ್ಲಿ ವರದಿಗಾರರಾಗಿ, ಪ್ರಜಾವಾಣಿ ಬೆಂಗಳೂರು ವಿಭಾಗದಲ್ಲಿ ಟ್ರೇನಿಯಾಗಿ, ವಿಜಯವಾಣಿ ದಿನಪತ್ರಿಕೆಯ ಚಿತ್ರದುರ್ಗ ಹಾಗೂ ದಾವಣಗೆರೆಯ ವರದಿಗಾರನಾಗಿ ಕೆಲಸ ಮಾಡಿದ್ದ ಅವರು ಕಳೆದ ಐದು ವರ್ಷಗಳಿಂದ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಕರಣ ಭೇದಿಸಿದ್ದು ಹೀಗೆ…

ಪದ್ಮಾ ಪ್ರಕರಣ ಕುರಿತು ಟ್ವಿಟರ್ ಹಾಗೂ ಫೇಸ್‍ಬುಕ್‍ನಲ್ಲಿ ಕಾಣಿಸಿಕೊಂಡ ಒಂದು ಮಾಹಿತಿಯ ಬೆನ್ನು ಹತ್ತಿದ ಚಾಣಕ್ಯ ಅವರು ಶಿಮ್ಲಾ ಆಸ್ಪತ್ರೆಯ ದೂರವಾಣಿ ಸಂಖ್ಯೆಯನ್ನು ಗೂಗಲ್‍ನಲ್ಲಿ ಪತ್ತೆಮಾಡಿದರು. ತಮಗೆ ಗೊತ್ತಿದ್ದಷ್ಟು ಹಿಂದಿಯಲ್ಲಿ ಅಲ್ಲಿನ ಸ್ವಾಗತಕಾರನ ಹತ್ತಿರ ಮಾತನಾಡಿ ಹೇಗೋ ಅಲ್ಲಿನ ವೈದ್ಯ ಸಂಜಯ್ ಪಾಠಕ್ ಸಂಪರ್ಕ ಸಾಧಿಸಿ ಪದ್ಮಾ ಅವರೊಂದಿಗೆ ಮಾತನಾಡಲು ಯಶಸ್ವಿಯಾದರು. ಶಿಮ್ಲಾದಲ್ಲಿದ್ದ ಪದ್ಮಾರನ್ನು ಮೊದಲು ಗುರುತಿಸಿದ ಹಿಮಾಚಲಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸುನೀಲ ಶರ್ಮಾ ಅವರಿಗೆ ಫೇಸ್ ಬುಕ್‍ನಲ್ಲಿ ಸಂದೇಶ ಕಳಿಸಿ ಅವರ ಸಂಪರ್ಕವನ್ನೂ ಗಳಿಸಲು ಯಶಸ್ವಿಯಾದರು.

ವರದಿ ಮಾಡಿ ಸುಮ್ಮನಾಗಲಿಲ್ಲ

ಮೇಲಿನವರ ಗಮನಕ್ಕೆ ತಂದು ವರದಿಮಾಡಿ ತಣ್ಣಗಾಗಿದ್ದರೆ ಅವರು ಹತ್ತರಲ್ಲಿ ಹನ್ನೊಂದನೆಯವರಾಗಿರಬೇಕಾಗಿತ್ತು. ವಿಕ ಮೈಸೂರು ಸ್ಥಾನಿಕ ಸಂಪಾದಕ ಲೋಕೇಶ್ ಕಾಯರ್ಗ ಅವರು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ಅವರಿಗೆ ವಿಷಯ ಮುಟ್ಟಿಸಿದರು. ಚಾಣಕ್ಯ ಮೈಸೂರು ಜಿಲ್ಲಾ ಮಾನಸಿಕ ಆರೋಗ್ಯ ಯೋಜನಾಧಿಕಾರಿ ಮಂಜುಪ್ರಸಾದ್ ಅವರಿಗೆ ವಿಷಯ ಮುಟ್ಟಿಸಿದರು. ಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗೆ ಸುನೀಲ ಶರ್ಮಾ, ಸಂಜಯ್ ಪಾಠಕ್ ಅವರ ಮೊಬೈಲ್ ನಂಬರ್ ನೀಡಿ. ಈ  ಪ್ರಕರಣದಲ್ಲಿ ವಿಜಯ ಕರ್ನಾಟಕ ಪತ್ರಿಕೆಯು ಮುಖ್ಯ ಸೂತ್ರಧಾರಿಯಾಗಿರುವಂತೆ ನೋಡಿಕೊಂಡರು.

ವರದಿ ಪರಕಟವಾದ ಮರುದಿನವೇ ವಿಜಯ ಕರ್ನಾಟಕದ ಪಿರಿಯಾಪಟ್ಟಣ ವರದಿಗಾರ ನವೀನ್ ಅವರು ಕಂಪಲಾಪುರದ ಮಾಕನಹಳ್ಳಿ ಪಾಳ್ಯದಲ್ಲಿರುವ ಪದ್ಮಾ ಅವರ ಮನೆಯನ್ನು ಪತ್ತೆ ಮಾಡಿದರು. ಮಾನಸಿಕ ಆರೋಗ್ಯಾಧಿಕಾರಿಗೆ ವಿಳಾಸ ತೋರಿಸಿ ಅವರನ್ನು ಕರೆದೊಯ್ದವರು ನವೀನ್.

ಮನೆ ಪರಿಸ್ಥಿತಿ ಸರಿ ಇರಲಿಲ್ಲ

ಪದ್ಮಾ ಅವರ ಕುಟುಂಬ ವರ್ಗವನ್ನು ಮಾನಸಿಕ ಆರೋಗ್ಯ ಇಲಾಖೆ ತಂಡ ಭೇಟಿಯಾದಾಗ ಅವರ ಮನೆ ಪರಿಸ್ಥಿತಿ ಕರಳು ಚುರುಕ್ ಎನ್ನುವಂತಿತ್ತು. ದುಡ್ಡಿಲ್ಲದೆ ಅರ್ಧಕ್ಕೆ ಮನೆ ನಿಂತಿದ್ದರಿಂದ ಪದ್ಮಾರ ತಾಯಿ ಪಾರ್ವತಮ್ಮನವರು ಅವರ ಮಗಳ ಮನೆಯಲ್ಲಿ ವಾಸಿಸುತ್ತಿದ್ದರು. ಕೂಲಿ ಮಾಡಿ ಬದುಕುವ ಕುಟುಂಬಕ್ಕೆ ಪದ್ಮಾ ಇನ್ನಷ್ಟು ಹೊರೆಯಾಗಬಹುದೆಂದು ಮೇಲ್ನೋಟದಲ್ಲೇ ಕಾಣುತ್ತಿತ್ತು. ಕೂಡಲೇ ಪಿರಿಯಾಪಟ್ಟಣ ಶಾಸಕ ಮಹದೇವು ಅವರನ್ನು ಸಂಪರ್ಕಿಸಿದ ಚಾಣಕ್ಯ ಅವರು ಪದ್ಮಾರ ಮನೆ ಪರಿಸ್ಥಿತಿಯನ್ನು ವಿವರಿಸಿ ಹೇಳಿದರು. ಇದರಿಂದ ಕರಗಿದ ಶಾಸಕರು ಪದ್ಮಾ ಕುಟುಂಬಕ್ಕೆ ನೆರವು ನೀಡುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಅಭಿರಾಂ ಅವರೂ ಕೂಡ ಇದೇ ರೀತಿ ಭರವಸೆ ನೀಡಿದರು.

ಪ್ರೇರಣೆಯಾಗಿದ್ದು ಸಂಸ್ಥೆ ಹಾಗೂ ಗುರುಗಳು

ವರದಿಗಳು ಸಮಾಜದ ಮೂರನೇ ವ್ಯಕ್ತಿಗೆ ಲಾಭ ತಂದುಕೊಟ್ಟಾಗಲೇ ಸಾರ್ಥಕವಾಗುವುದು ಎಂದು ಚಾಣಕ್ಯ ಅವರು ತಮ್ಮ ಫೇಸ್‍ಬುಕ್ ಪೋಸ್ಟ್‍ವೊಂದರಲ್ಲಿ ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ನನ್ನ ಸಂಸ್ಥೆ ಹಾಗೂ ಸ್ಥಾನಿಕ ಸಂಪಾದಕರು ನೀಡಿದ ಪ್ರೋತ್ಸಾಹ ಎಂದು ಫೇಸ್ ಬುಕ್ ಮೆಸೆಂಜರ್‍ನಲ್ಲಿ ಸುದ್ದಿದಿನ ಕ್ಕೆ ತಿಳಿಸಿದ್ದಾರೆ.

ನಾನು ವಿಕ ಬಳಗಕ್ಕೆ ಸೇರಿದಾಗ ನನ್ನ ಆದ್ಯಗುರುಗಳು ನೀವು ಏನು ಬರೆಯುತ್ತೀರಾ ಎಂದು ಕೇಳಿದರು. ಕೃಷಿ, ವಿಜ್ಞಾನ, ಭಾಷಾಂತರ, ಲೈಫ್ ಸ್ಟೈಲ್ ವರದಿಗಾರಿಕೆ ಬಗ್ಗೆ ವಿವರಿಸಿದೆ. ಶ್ರೀಸಾಮಾನ್ಯನಿಗೆ ನೆರವಾಗುವಂತಹ ಯಾವುದಾದರೂ ಲೇಖನ ಬರೆದಿದ್ದೀರಾ ಎಂದು ಕೇಳಿದರು. ನನ್ನ ಬಳಿ ಉತ್ತರ ಇರಲಿಲ್ಲ. ಸಮಾಜದ ಮೂರನೇ ವ್ಯಕ್ತಿಗೆ ಲಾಭ ತಂದು ಕೊಟ್ಟಾಗ ಮಾತ್ರ ವರದಿ ಸಾರ್ಥಕವಾಗತ್ತದೆ ಎಂದು ಅವರು ಹೇಳಿದ್ದರು. ಇದು ಅರ್ಥವಾಗಲು ಐದು ವರ್ಷ ಹಿಡಿಯಿತು ಎಂದು ಚಾಣಕ್ಯ ಅವರು ತಮ್ಮ ಫೇಸ್‍ಬುಕ್ ಪೋಸ್ಟ್ ವೊಂದರಲ್ಲಿ ಬರೆದಿದ್ದಾರೆ.

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ಹೆದ್ದಾರಿಯಲ್ಲಿ ಹಾಲಿನ ಹೊಳೆ! ಪಲ್ಟಿಯಾದ ನಂದಿನಿ ಟ್ಯಾಂಕರ್‌ನಿಂದ 21 ಸಾವಿರ ಲೀಟರ್ ಹಾಲು ರಸ್ತೆಗೆ

Published

on

ತುಮಕೂರಿನಲ್ಲಿ ಅಪರೂಪದ ಅಪಘಾತ: ಕ್ಷಣಾರ್ಧದಲ್ಲಿ ಹಾಲಿನ ಹೊಳೆಯಾದ

ತುಮಕೂರು: ಸಾಮಾನ್ಯವಾಗಿ ಮಳೆ ಬಂದಾಗ ರಸ್ತೆಯಲ್ಲಿ ನೀರು ಹರಿಯುವುದನ್ನು ನೋಡುತ್ತೇವೆ. ಆದರೆ ತುಮಕೂರಿನ ಶಿರಾ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದ ಘಟನೆ ಮಾತ್ರ ವಿಭಿನ್ನ. ಇಲ್ಲಿ ನೀರಿನ ಬದಲು ಸಾವಿರಾರು ಲೀಟರ್ ಹಾಲು ಹೆದ್ದಾರಿಯುದ್ದಕ್ಕೂ ಹರಿದು, ರಸ್ತೆ ಸಂಪೂರ್ಣ ಹಾಲಿನ ಹೊಳೆಯಂತಾಗಿದೆ. ಕೆಎಂಎಫ್‌ನ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಈ ಘಟನೆ ನಡೆದಿದ್ದು, ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

http://Visit : www.suddidina.com

21 ಸಾವಿರ ಲೀಟರ್ ಹಾಲು ಹೊತ್ತೊಯ್ಯುತ್ತಿದ್ದ ಟ್ಯಾಂಕರ್

ಶಿರಾ ಸಮೀಪದ ಗುಮ್ಮನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 21 ಸಾವಿರ ಲೀಟರ್ ಹಾಲನ್ನು ತುಂಬಿಕೊಂಡಿದ್ದ ಕೆಎಂಎಫ್‌ನ ನಂದಿನಿ ಹಾಲಿನ ಟ್ಯಾಂಕರ್ ತುಮಕೂರಿನಿಂದ ಮುಂಬೈ ಕಡೆಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ಯಾಂಕರ್ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ.

ಟ್ಯಾಂಕರ್ ಪಲ್ಟಿಯಾದ ಬೆನ್ನಲ್ಲೇ ಅದರೊಳಗಿದ್ದ ಹಾಲು ರಸ್ತೆಗೆ ಭಾರೀ ಪ್ರಮಾಣದಲ್ಲಿ ಹರಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಹೆದ್ದಾರಿಯ ಒಂದು ಭಾಗ ಬಿಳಿ ಬಣ್ಣದ ಹಾಲಿನಿಂದ ಆವೃತವಾಗಿದ್ದು, ನೋಡಲು ಅಕ್ಷರಶಃ ‘ಹಾಲಿನ ನದಿ’ ಹರಿದಂತೆ ಕಂಡಿದೆ.

ಬಾಟಲಿ, ಕ್ಯಾನ್‌ ಹಿಡಿದು ಓಡಿಬಂದ ಜನ

ಹಾಲು ರಸ್ತೆಯಲ್ಲಿ ಹರಿಯುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಕೆಲವರು ಪ್ಲಾಸ್ಟಿಕ್ ಬಾಟಲಿ, ಇನ್ನು ಕೆಲವರು ಪಾತ್ರೆ ಹಾಗೂ ಕ್ಯಾನ್‌ಗಳನ್ನು ಹಿಡಿದುಕೊಂಡು ಹಾಲು ಸಂಗ್ರಹಿಸಲು ಮುಂದಾಗಿದ್ದಾರೆ.

ಘಟನೆಯ ವಿಡಿಯೋದಲ್ಲಿ ಜನರು ರಸ್ತೆಯಲ್ಲಿ ಹರಿಯುತ್ತಿದ್ದ ಹಾಲನ್ನು ವಿವಿಧ ಪಾತ್ರೆಗಳಲ್ಲಿ ತುಂಬಿಕೊಳ್ಳುತ್ತಿರುವ ದೃಶ್ಯಗಳು ಕಂಡುಬಂದಿವೆ. ಇದೇ ಕಾರಣಕ್ಕೆ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

https://x.com/zingabad/status/2093215448036962774

ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿ

ಅಪಘಾತದಲ್ಲಿ ಟ್ಯಾಂಕರ್‌ನ ಚಾಲಕ ಹಾಗೂ ಕ್ಲೀನರ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಹಾಲು ಹೆದ್ದಾರಿಯಲ್ಲಿ ಹರಿದಿದ್ದಲ್ಲದೆ, ಅಪಘಾತದ ಸ್ಥಳದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ವಾಹನ ಸಂಚಾರಕ್ಕೂ ಕೆಲಕಾಲ ಅಡ್ಡಿಯಾಯಿತು. ಬಳಿಕ ಸ್ಥಳಕ್ಕೆ ಕ್ರೇನ್ ತರಿಸಿ ಪಲ್ಟಿಯಾಗಿದ್ದ ಟ್ಯಾಂಕರ್‌ನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ವೈರಲ್ ವಿಡಿಯೋಗೆ ನಟ್ಟಿಗರ ವಿಭಿನ್ನ ಪ್ರತಿಕ್ರಿಯೆ

ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರು “ಉಚಿತವಾಗಿ ಸಿಕ್ಕರೆ ಜನ ಹೇಗೆ ಮುಗಿಬೀಳುತ್ತಾರೆ” ಎಂದು ವ್ಯಂಗ್ಯವಾಡಿದ್ದರೆ, ಇನ್ನು ಕೆಲವರು “ಹಾಲು ವ್ಯರ್ಥವಾಗುವುದಕ್ಕಿಂತ ಜನ ತೆಗೆದುಕೊಂಡು ಹೋದರೆ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ, ಅಪಘಾತದಿಂದ ಅಪಾರ ಪ್ರಮಾಣದ ಹಾಲು ವ್ಯರ್ಥವಾಗಿರುವುದು ಬೇಸರದ ಸಂಗತಿಯಾಗಿದ್ದು, ಅದೃಷ್ಟವಶಾತ್ ಟ್ಯಾಂಕರ್‌ನಲ್ಲಿದ್ದವರ ಜೀವಕ್ಕೆ ಯಾವುದೇ ದೊಡ್ಡ ಅಪಾಯ ಸಂಭವಿಸಿಲ್ಲ.

Continue Reading

ದಿನದ ಸುದ್ದಿ

Trump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್‌ನಾ?

Published

on

Trump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್‌ನಾ?

ಸುದ್ದಿದಿನ,ಅಮೆರಿಕ: ಅಮೆರಿಕ-ವೆನೆಜುವೆಲಾ ನಡುವಿನ ಹೊಸ ತೈಲ ಒಪ್ಪಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಒಪ್ಪಂದವನ್ನು ‘ವಿಶ್ವದ ಅತಿದೊಡ್ಡ ತೈಲ ಡೀಲ್’ ಎಂದು ಬಣ್ಣಿಸಿದ್ದಾರೆ.

ವೆನೆಜುವೆಲಾದ ಬೃಹತ್ ತೈಲ ಸಂಪತ್ತನ್ನು ಅಭಿವೃದ್ಧಿಪಡಿಸುವುದು ಮಾತ್ರವಲ್ಲದೆ, ಅಮೆರಿಕದ ಇಂಧನ ಭದ್ರತೆಯನ್ನು ಬಲಪಡಿಸುವ ಉದ್ದೇಶವೂ ಇದರ ಹಿಂದೆ ಇದೆ ಎನ್ನಲಾಗಿದೆ.

ಹೈಲೈಟ್ಸ್

  • ಅಮೆರಿಕ-ವೆನೆಜುವೆಲಾ ನಡುವೆ ಬೃಹತ್ ತೈಲ ಒಪ್ಪಂದ
  • 65 ಬಿಲಿಯನ್ ಬ್ಯಾರೆಲ್‌ಗೂ ಹೆಚ್ಚು ತೈಲ ಸಂಗ್ರಹದ ಮೇಲೆ ಗಮನ
  • 17 ಪ್ರಮುಖ ತೈಲ ಕ್ಷೇತ್ರಗಳ ಅಭಿವೃದ್ಧಿ ಯೋಜನೆ
  • $100 ಬಿಲಿಯನ್‌ಗೂ ಹೆಚ್ಚು ಹೂಡಿಕೆ ಸಾಧ್ಯತೆ
  • ಉತ್ಪಾದನೆ ಹೆಚ್ಚಾದರೆ ಜಾಗತಿಕ ತೈಲ ಮಾರುಕಟ್ಟೆಯ ಮೇಲೂ ಪರಿಣಾಮ

http://Visit : www.suddidina.com

65 ಬಿಲಿಯನ್ ಬ್ಯಾರೆಲ್ ತೈಲದತ್ತ ಗಮನ

ಒಪ್ಪಂದದ ಪ್ರಮುಖ ಅಂಶವೆಂದರೆ ವೆನೆಜುವೆಲಾದಲ್ಲಿರುವ ಸುಮಾರು 65 ಬಿಲಿಯನ್ ಬ್ಯಾರೆಲ್‌ಗಳಿಗೂ ಹೆಚ್ಚು ತೈಲ ಸಂಗ್ರಹ. ಈ ಸಂಪತ್ತಿನ ಅಭಿವೃದ್ಧಿಯಲ್ಲಿ ಅಮೆರಿಕ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹಾಗೂ ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ನೇತೃತ್ವದಲ್ಲಿ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ.

17 ತೈಲ ಕ್ಷೇತ್ರಗಳ ಅಭಿವೃದ್ಧಿಗೆ ಬೃಹತ್ ಹೂಡಿಕೆ

ವೆನೆಜುವೆಲಾದ 17 ಪ್ರಮುಖ ತೈಲ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ 100 ಬಿಲಿಯನ್ ಡಾಲರ್‌ಗೂ ಹೆಚ್ಚು ಹೂಡಿಕೆ ಬರಬಹುದೆಂಬ ನಿರೀಕ್ಷೆ ಇದೆ. ಇದರಿಂದ ವೆನೆಜುವೆಲಾ ಸರ್ಕಾರಕ್ಕೆ ದೀರ್ಘಾವಧಿಯಲ್ಲಿ 209 ಬಿಲಿಯನ್ ಡಾಲರ್‌ಗೂ ಅಧಿಕ ತೆರಿಗೆ ಆದಾಯ ದೊರೆಯುವ ಸಾಧ್ಯತೆಯನ್ನೂ ಅಲ್ಲಿನ ಆಡಳಿತ ಉಲ್ಲೇಖಿಸಿದೆ.

https://x.com/SecRubio/status/2093472965404860812

ಅಮೆರಿಕಕ್ಕೆ ಏನು ಲಾಭ?

ತೈಲ ಉತ್ಪಾದನೆ ಹೆಚ್ಚಾದರೆ ಅಮೆರಿಕಕ್ಕೆ ಕಡಿಮೆ ದರದಲ್ಲಿ ಕಚ್ಚಾ ತೈಲ ಲಭ್ಯವಾಗುವ ಸಾಧ್ಯತೆ ಇದೆ. ಇದರಿಂದ ದೇಶೀಯ ಇಂಧನ ಬೆಲೆಗಳ ಮೇಲೆ ಒತ್ತಡ ಕಡಿಮೆಯಾಗಬಹುದು ಎಂಬುದು ಟ್ರಂಪ್ ಆಡಳಿತದ ನಿರೀಕ್ಷೆ. ಉತ್ಪಾದನೆಯ ಒಂದು ಭಾಗವನ್ನು ಅಮೆರಿಕದ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್‌ಗೆ ಬಳಸುವುದರ ಜೊತೆಗೆ ಸೇನಾ ಅಗತ್ಯಗಳಿಗೂ ಬಳಸುವ ಸಾಧ್ಯತೆ ಇದೆ.

ತಕ್ಷಣ ಉತ್ಪಾದನೆ ಹೆಚ್ಚುವುದು ಸುಲಭವಲ್ಲ

ಆದರೆ ಒಪ್ಪಂದ ಘೋಷಣೆಯಾದ ತಕ್ಷಣ ವೆನೆಜುವೆಲಾದ ತೈಲ ಉತ್ಪಾದನೆ ಗಗನಕ್ಕೇರುವುದಿಲ್ಲ. ಹಲವು ವರ್ಷಗಳ ನಿರ್ಲಕ್ಷ್ಯದಿಂದ ತೈಲ ಕ್ಷೇತ್ರಗಳ ಮೂಲಸೌಕರ್ಯ ದುರ್ಬಲಗೊಂಡಿದೆ. ಹಳೆಯ ಘಟಕಗಳ ಪುನರ್‌ನಿರ್ಮಾಣ, ಪೈಪ್‌ಲೈನ್‌ಗಳು, ಸಂಸ್ಕರಣಾ ಘಟಕಗಳು ಮತ್ತು ಸಾರಿಗೆ ವ್ಯವಸ್ಥೆ ಸುಧಾರಣೆಗೆ ಭಾರೀ ಬಂಡವಾಳ ಹಾಗೂ ಹಲವು ವರ್ಷಗಳ ಸಮಯ ಬೇಕಾಗಬಹುದು.

ಜಾಗತಿಕ ತೈಲ ಮಾರುಕಟ್ಟೆಗೆ ಸವಾಲು?

ವೆನೆಜುವೆಲಾ ಅಪಾರ ತೈಲ ಸಂಗ್ರಹ ಹೊಂದಿದ್ದರೂ, ಅದರ ಉತ್ಪಾದನೆ ಸಂಗ್ರಹದ ಪ್ರಮಾಣಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಹೊಸ ಹೂಡಿಕೆಗಳ ಮೂಲಕ ಉತ್ಪಾದನೆ ಗಣನೀಯವಾಗಿ ಹೆಚ್ಚಾದರೆ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪೂರೈಕೆ ಹೆಚ್ಚಬಹುದು. ಇದರಿಂದ ತೈಲ ಬೆಲೆ, ಅಮೆರಿಕದ ಇಂಧನ ನೀತಿ ಮತ್ತು ಇತರ ತೈಲ ಉತ್ಪಾದಕ ರಾಷ್ಟ್ರಗಳ ತಂತ್ರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading
Advertisement

Title

ದಿನದ ಸುದ್ದಿ4 minutes ago

ಹೆದ್ದಾರಿಯಲ್ಲಿ ಹಾಲಿನ ಹೊಳೆ! ಪಲ್ಟಿಯಾದ ನಂದಿನಿ ಟ್ಯಾಂಕರ್‌ನಿಂದ 21 ಸಾವಿರ ಲೀಟರ್ ಹಾಲು ರಸ್ತೆಗೆ

ತುಮಕೂರು: ಸಾಮಾನ್ಯವಾಗಿ ಮಳೆ ಬಂದಾಗ ರಸ್ತೆಯಲ್ಲಿ ನೀರು ಹರಿಯುವುದನ್ನು ನೋಡುತ್ತೇವೆ. ಆದರೆ ತುಮಕೂರಿನ ಶಿರಾ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಡೆದ ಘಟನೆ ಮಾತ್ರ ವಿಭಿನ್ನ. ಇಲ್ಲಿ ನೀರಿನ ಬದಲು...

ದಿನದ ಸುದ್ದಿ13 minutes ago

Trump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್‌ನಾ?

ಸುದ್ದಿದಿನ,ಅಮೆರಿಕ: ಅಮೆರಿಕ-ವೆನೆಜುವೆಲಾ ನಡುವಿನ ಹೊಸ ತೈಲ ಒಪ್ಪಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಒಪ್ಪಂದವನ್ನು ‘ವಿಶ್ವದ ಅತಿದೊಡ್ಡ...

ದಿನದ ಸುದ್ದಿ3 hours ago

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್...

medical-college-hostel-canteen-food-safety-inspection-karnataka medical-college-hostel-canteen-food-safety-inspection-karnataka
ದಿನದ ಸುದ್ದಿ3 hours ago

ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್

ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಇಲಾಖೆ ವಿಶೇಷ ಪರಿಶೀಲನೆ ನಡೆಸಿದೆ. ಸರ್ಕಾರಿ ಹಾಗೂ ಖಾಸಗಿ...

august-29-2026-daily-horoscope-kannada-rashi-bhavishya august-29-2026-daily-horoscope-kannada-rashi-bhavishya
ನಿತ್ಯ ಭವಿಷ್ಯ3 hours ago

ಇಂದಿನ ರಾಶಿಫಲ: 12 ರಾಶಿಗಳ ಭವಿಷ್ಯ ಹೇಗಿದೆ? ಉದ್ಯೋಗ, ಹಣಕಾಸು, ಪ್ರೀತಿ–ಆರೋಗ್ಯದ ಸಂಪೂರ್ಣ ಫಲ

ಸುದ್ದಿದಿನ,ರಾಶಿಫಲ: ಶನಿವಾರ, ಆಗಸ್ಟ್ 29, 2026. ಇಂದಿನ ದಿನವು 12 ರಾಶಿಗಳಿಗೂ ವಿಭಿನ್ನ ಅನುಭವಗಳನ್ನು ತರಲಿದೆ. ಕೆಲವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ...

bengaluru-clubs-food-safety-raid-cockroaches-expired-food-found bengaluru-clubs-food-safety-raid-cockroaches-expired-food-found
ದಿನದ ಸುದ್ದಿ2 days ago

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು...

ದಿನದ ಸುದ್ದಿ2 days ago

ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು

ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್‌ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ...

toxic-movie-geethu-mohandas-old-statement-viral-yash-fans-troll toxic-movie-geethu-mohandas-old-statement-viral-yash-fans-troll
ದಿನದ ಸುದ್ದಿ2 days ago

ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್‌ಗಳ ಸದ್ದು

ಸುದ್ದಿದಿನ,ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹಳೆಯ ಹೇಳಿಕೆಯೊಂದು...

ದಿನದ ಸುದ್ದಿ2 days ago

ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ

ಸುದ್ದಿದಿನ,ಬೆಂಗಳೂರು: ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ...

ದಿನದ ಸುದ್ದಿ2 days ago

ಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್‌ಕಟ್‌ ಹೇಳಿದ ಡಿಕೆಶಿ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ತಮ್ಮ ಆಸ್ತಿ ಮತ್ತು ಸರಳ ಜೀವನಶೈಲಿಯ ಕುರಿತು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಮಾತ್ರವಲ್ಲ, ಸಾರ್ವಜನಿಕರಲ್ಲೂ ಚರ್ಚೆಗೆ...

Trending