ದಿನದ ಸುದ್ದಿ
ಶಿವಮೊಗ್ಗ | ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಲು ಹೋರಾಟ
ಸುದ್ದಿದಿನ ಡೆಸ್ಕ್ : ನಗರದ ಸಹ್ಯಾದ್ರಿ ಕಾಲೇಜು ಬಳಿಯಲ್ಲಿ ಟೆಂಟ್ಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಲು ಸಂಘಟನಾತ್ಮಕ ಮತ್ತು ಕಾನೂನಾತ್ಮಕ ಹೋರಾಟ ನಡೆಸಲು ತೀರ್ಮಾನ ಮಾಡಲಾಯಿತು.
ಶಿವಮೊಗ್ಗ ನಿರಂತರ ಸಂಘಟನೆಯ ಸಹಯೋಗದಲ್ಲಿ ನಗರವು ಸೇರಿದಂತೆ ವಿವಿದೆಡೆಯಿಂದ ಬಂದ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಚಳವಳಿಗಾರರ ಅಲೆಮಾರಿಗಳ ಟೆಂಟ್ ಬಳಿ ನಡೆಸಿದ ಸಭೆಯಲ್ಲಿ ಅಲೆಮಾರಿಗಳಿಗೆ ಸೂರು ಒದಗಿಸಲು ಸಂಬಂಧ ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬಹುದಾದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.
ಕಳೆದ ಹಲವು ವರ್ಷಗಳಿಂದ ನಿರಂತರ ಗೆಳೆಯರ ನೇತೃತ್ವದಲ್ಲಿ ಅಲೆಮಾರಿಗಳಿಗೆ ಸೌಲಭ್ಯ ಕೊಡಿಸಲು ನಡೆಸಿದ ವಿವರಗಳ ಕುರಿತು, ಪಡೆದ ಸೌಲಭ್ಯಗಳ ಕುರಿತ ನೂತನ ಜಿಲ್ಲಾಧಿಕಾರಿಗಳಿಗೆ ಈ ತಕ್ಷಣ ಮನವರಿಕೆ ಮಾಡಿಕೊಡವುದಲ್ಲದೆ ಅಲೆಮಾರಿಗಳಿಗೆ ಜಾತಿ ಪ್ರಮಾಣ ಕೊಡಿಸಿ ಕೋಡುವ ಬಗ್ಗೆ ಡಿಸಿಯವರೊಂದಿಗೆ ಚರ್ಚಿಸಲು ತೀರ್ಮಾನಿಸಲಾಯಿತು.
ರಾಜ್ಯ ಸರ್ಕಾರ ರಚನೆ ಮಾಡಿರುವ ರಾಜ್ಯ ಅಲೆಮಾರಿ ಕೋಶ ಮತ್ತು ಜಿಲ್ಲಾ ಅನುಷ್ಟಾನ ಸಮಿತಿಗೆ ಇಲ್ಲಿನ ಅಲೆಮಾರಿಗಳ ಸ್ಥಿತಿಗತಿಗಳ ಕುರಿತು ವರದಿ ನೀಡಲು ಮತ್ತು ವಾಸ್ತವ ಸ್ಥಿತಿ ಅಧ್ಯಯನಕ್ಕೆ ಸ್ಥಳ ಸಮೀಕ್ಷೆ ನಡೆಸಲು ರಾಜ್ಯ ಅಲೆಮಾರಿ ಕೋಶದ ಅಧಿಕಾರಿಗಳಿಗೆ ಅವರನ್ನು ಸಂಪರ್ಕಿಸಿ ಆಹ್ವಾನ ನೀಡಲು ತೀರ್ಮಾನ ಮಾಡಲಾಯಿತು.
ಅಲೆಮಾರಿ ಸಮುದಾಯದ ಸುನೀತಮ್ಮ ಮಾತನಾಡಿ ನಮಗೆ ಮನೆ ಕಟ್ಟಿಸಿಕೊಡುವುದೇ ಬೇಡ ನಮಗೆ ಟೆಂಟ್ ನಿರ್ಮಿಸಲು ಶಾಶ್ವತವಾದ ಜಾಗ ಸಿಕ್ಕರೆ ಸಾಕು. ನಮಗೆ ಈ ಅಭದ್ರತೆಯ ಜೀವನ ಸಾಕಾಗಿದೆಎಂದು ಬಂದವರಲ್ಲಿ ಮನವಿ ಮಾಡಿದ್ದು ಅಲೆಮಾರಿಗಳ ಅಸಾಹಾಯಕ ಸ್ಥಿತಿಯನ್ನು ತೆರೆದಿಟ್ಟಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಅನಿಲ್ ಕುಮಾರ್ ಹಲವು ವರ್ಷಗಳಿಂದ ನಿರಂತರ ಗೆಳೆಯರ ಅಲೆಮಾರಿಗಳ ಪರ ಹೋರಾಟ ಮಾಡಿದ್ದಾರೆ ಆದರೆ ಇಂದು ಹಲವು ಚಿರಪರಿಚಿತ ಸಂಗಮವಾಗಿದೆ, ಅದು ನಮ್ಮ ಚಳವಳಿಯ ಯಶಸ್ಸು ಎಂದು ಬಾವಿಸುವೆ. ಕಳೆದ ೨೦ವರ್ಷಗಳಲ್ಲಿ ಈ ಟೆಂಟ್ಗಳಲ್ಲಿ ಮಕ್ಕಳ ಕಳ್ಳತನವಾಗಿದೆ. ಮಕ್ಕಳು, ಬಾಣಂತಿಯರು ಮೃತರಾಗಿದ್ದಾರೆ. ಇವರಿಗೆ ನಾಗರೀಕ ಸೌಲಭ್ಯ ಸಿಗದಿರುವುದು ನಾಗರೀಕ ಸಮಾಜ ತಲೆ ತಗ್ಗಿಸಬೇಕಾದ ಸಂಗತಿ. ಆದರೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸದಿರುವುದು ವಿಷಾದನೀಯ. ಈಗ ನಾವೆಲ್ಲ ಸೇರಿದ್ದೇವೆ. ಇವರಿಗೆ ಕನಿಷ್ಠ ಸೂರು ಒದಗಿಸಲು ನಮ್ಮೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದರು.
ಶೃಂಗೇಶ್ ಮಾತನಾಡಿ ಅಧಿಕಾರಿಗಳನ್ನು ಇದೇ ಸ್ಥಳದಲ್ಲಿ ಕರೆಸಿ ಸಭೆ ನಡೆಸಿದರೆ ಅವರಿಗೆ ವಾಸ್ತವ ಚಿತ್ರಣ ಅರಿವಾಗಲಿದೆ. ಆ ನಿಟ್ಟಿನಲ್ಲಿ ಎಲ್ಲರು ಕಾರ್ಯನ್ಮುಖರಾಗೋಣ ಎಂದರು.
ರಂಗಕರ್ಮಿ ಎಂ ವಿ ಪ್ರತಿಭಾ ಮಾತನಾಡಿ ಇಲ್ಲಿನ ಜನರ ಪರಿಸ್ಥಿತಿ ನೋಡಿದರೆ ನಾಗರೀಕ ಸಮಾಜ ತಲೆ ತಗ್ಗಿಸಬೇಕು. ಎರೆಡೆರಡು ಅಟೆಚ್ಡ್ ಬಾತ್ ರೂಂ ಹೊಂದಿರುವ ಈ ಕಾಲದಲ್ಲಿ ಇಲ್ಲಿನ ಹೆಣ್ಣು ಮಕ್ಕಳ ಶೌಚಾಲಯವಿಲ್ಲ , ಋತು ಚಕ್ರದ ಸಂದರ್ಭವನ್ನು ಹೇಗೆ ನಿಭಾಯಿಸುತ್ತಾರೆ. ಬಸುರಿ ಭಾಣಂತೀಯರ ಹೇಗಿರುತ್ತಾರೆಂದು ಯೋಚಿಸಲು ಸಾಧ್ಯವಾಗದು. ಇವರಿಗೆ ನಾಗರೀಕ ಸೌಲಭ್ಯ ಸಿಗುವವರೆಗೂ ಸಂಘಟನೆ ಪ್ರಯತ್ನ ಮುಂದುವರಿಸೋಣ ಎಂದರು.
ಪ್ರಗತಿಪರ ಹೋರಾಟಗಾರ , ಪತ್ರಕರ್ತ ಹರ್ಷಕುಮಾರ್ ಕುಗ್ವೆ ಅಲೆಮಾರಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಸಂಘಟನಾತ್ಮಕ ಹೋರಾಟ ಮಾಡಿ ಈ ಅಲೆಮಾರಿ ಜನಾಂಗದವರಿಗೆ ಮನೆ ಮತ್ತಿತರ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೆಕಿದೆ.ಸರ್ಕಾರ ಪ್ರತಿವರ್ಷ ಹಣ ತೆಗೆದಿರಿಸಿದರು ಕ್ರಿಯಾಯೋಜನೆ ಮಾಡಿರಲಿಲ್ಲ. ಇತ್ತೀಚೆಗೆ ಅಲೆಮಾರಿ ಕೋಶದ ಮೂಲಕ ಸೌಲಭ್ಯ ಸಿಗುತ್ತಿವೆ. ಸರ್ಕಾರಗಳೂ ಸ್ಪಂದಿಸಿವೆ. ಆದರೆ ಅಧಿಕಾರಿಗಳ ಮೇಲೆ ಒತ್ತಡ ತರಬೇಕಿದೆ. ಈ ಮೂಲಕ ಅಲೆಮಾರಿಗಳು ಒಳ್ಳೆಯ ಬದುಕು ಕಾಣಲು ನಾಗರಿಕ ಸಮಾಜ ಸಹಕರಿಸಬೇಕಿದೆ ಎಂದರು
ವೃತ್ತಿ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೈ.ಕೆ. ಸೂರ್ಯನಾರಾಯಣ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಉಪನ್ಯಾಸಕ ಗಾಜನೂರು ಕಿರಣ್, ಭಾಸ್ಕರ ಸಮುದಾಯದ ಕೆ.ಎಲ್.ರಾವ್, ಕುಮುದ, ಕವಯತ್ರಿ ಅಕ್ಷತ, ಇಂದ್ರಾನಾಯಕ್, ವಕೀಲರಾದ ಗೀತಾಬಾಯಿ, ಪೂರ್ಣಿಮ , ಮುಖಂಡರಾದ ಗೌಸ್ ಪೀರ್, ಅಜಿತ್ , ಪ್ರಕಾಶ್ ಮಂಡಘಟ್ಟ, ಧರ್ಮ ಪ್ರಭು, ಮೊದಲಾದವರಿದ್ದರು.
ಉಪನ್ಯಾಸಕ ಮಂಜುನಾಥ್ಸ್ವಾಗತಿಸಿ, ಅನನ್ಯ ಶಿವುವಂದಿಸಿ, ಸುನಿಲ್ಕುಮಾರ್ಶಿರನಲ್ಲಿ ಕಾರ್ಯಕ್ರಮ ನಿರೂಪಿಸಿದರು. ಅಲೆಮಾರಿ ಮಕ್ಕಳು ಭಾವೈಕ್ಯತಾ ಗೀತೆ ಹಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 hours agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

