ದಿನದ ಸುದ್ದಿ
ಕೊಡಗು ಮಹಾಮಳೆ | ವಿಪತ್ತು ನಿರ್ವಹಣಾ ಕೇಂದ್ರಗಳ ಕಂಪ್ಲೀಟ್ ಡೀಟೇಲ್ಸ್
ಸುದ್ದಿದಿನ ಡೆಸ್ಕ್ |ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಳುತ್ತಿರುವ ಭಾರೀ ಗಾಳಿ ಮಳೆಯಿಂದ ಜಿಲ್ಲೆಯ ಅನೇಕ ಭಾಗಗಳಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕ ಸಂತ್ರಸ್ಥರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾಯದಲ್ಲಿ ಸಿಲುಕಿದ್ದು, ತುರ್ತು ರಕ್ಷಣಾ ಕಾರ್ಯ ಕೈಗೊಳ್ಳಲು ದೂರವಾಣಿ ಮುಖಾಂತರ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ತಾಲ್ಲೂಕು ಕಚೇರಿ, ಪೊಲೀಸ್ ಕಚೇರಿಯಲ್ಲಿ ಸ್ಥಾಪಿಸಲಾಗಿರುವ 24*7 ವಿಪತ್ತು ನಿಯಂತ್ರಣಾ ಕೊಠಡಿಗೆ ವಿನಂತಿಸುತ್ತಿದ್ದಾರೆ.
ಜಿಲ್ಲಾಡಳಿತವು ಅಪಾಯದಲ್ಲಿ ಸಿಲುಕಿರುವ ಸಂತ್ರಸ್ಥರ ನೆರವಿಗೆ ಸ್ಪಂದಿಸಲು ಸಕಲ ಪರಿಹಾರ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲಾ ಕಚೇರಿ, ಪೊಲೀಸ್ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿರುತ್ತದೆ. ಹಾಗೂ ಸ್ವೀಕೃತವಾಗುವ ಎಲ್ಲಾ ಕರೆಗಳಿಗೆ ಸ್ಪಂದಿಸಿ, ಶೀಘ್ರ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಾದ್ಯಂತ ಈವರೆವಿಗೆ ಒಟ್ಟು 2569 ಸಂತ್ರಸ್ಥರನ್ನು ರಕ್ಷಿಸಿದ್ದು, ಸುರಕ್ಷಿತ ಸ್ಥಳ/ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಜಿಲ್ಲೆಯಾದ್ಯಂತ ಒಟ್ಟು 31 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಕೇಂದ್ರದಲ್ಲಿ ಸಂತ್ರಸ್ಥರಿಗೆ ಊಟೋಪಚಾರ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಹಾಸಿಗೆ ಮತ್ತು ಹೊದಿಕೆ ಮುಂತಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಸಚಿವ ಮಹೇಶ್ ತಿಳಿಸಿದರು.
ಮಡಿಕೇರಿ ತಾಲ್ಲೂಕಿನ ಕೊಟ್ಟಮುಡಿ, ಗಾಳಿಬೀಡು, ಕರ್ಣಂಗೇರಿ, ಮಕ್ಕಂದೂರು, ಜೋಡುಪಾಲ, ಕಾಟಕೇರಿ, ಹೊದವಾಡ, ಐಕೊಳ, ಮಡಿಕೇರಿ ನಗರ-2 ಪುನರ್ವಸತಿ ಕೇಂದ್ರದಲ್ಲಿ 550 ಸಂತ್ರಸ್ಥರು. ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ, ಕಾಂಡನಕೊಲ್ಲಿ, ಮಂಜುನಾಥ ಕಲ್ಯಾಣ, ಮದರಸಾ, ಸೇಂಟ್ ಮೇರೀಸ್ ಸ್ಕೂಲ್, ರಾಮಮಂದಿರ, ಪನ್ಯ ಎಸ್ಟೇಟ್ ಸುಂಟಿಕೊಪ್ಪ, ಬೆಟ್ಟದಕಾಡು, ಗುಡ್ಡೆಹೊಸೂರು, ಮದಲಾಪುರ, ಹಾರಂಗಿ, ದಂಡಿನಪೇಟೆ, ಕೊಡವ ಸಮಾಜ, ಗಂಧದಕೋಟೆ, ಶಾಂತಳ್ಳಿ, ಸೋಮವಾರಪೇಟೆ ಪುನರ್ವಸತಿ ಕೇಂದ್ರದಲ್ಲಿ 2233 ಸಂತ್ರಸ್ಥರು.
ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು-3, ಅಮ್ಮತ್ತಿ-1, ವಿರಾಜಪೇಟೆ-1, ಪುನರ್ವಸತಿ ಕೇಂದ್ರದಲ್ಲಿ 376 ಸಂತ್ರಸ್ಥರು. ಜಲ್ಲೆಯ ಒಟ್ಟು 31 ಪುನರ್ವಸತಿ ಕೇಂದ್ರದಲ್ಲಿ 3159 ಸಂತ್ರಸ್ಥರಿಗೆ ಆಶ್ರಯವನ್ನು ಕಲ್ಪಿಸಲಾಗಿದೆ. ಪುನರ್ವಸತಿ ಕೇಂದ್ರದಲ್ಲಿ ಸಂತ್ರಸ್ಥರಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಪ್ರತಿ ಕೇಂದ್ರಕ್ಕೆ ತಲಾ ಇಬ್ಬರಂತೆ ಅಧಿಕಾರಿ/ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ರಕ್ಷಣಾ ಪರಿಹಾರ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್), ನಾಗರಿಕ ರಕ್ಷಣಾ ಪಡೆ (ಸಿವಿಲ್ ಡಿಫೆನ್ಸ್ ಫೋರ್ಸ್-ಕ್ಯೂ.ಆರ್.ಟಿ), ಭಾರತೀಯ ಸೇನೆಯ ಒಂದು ತುಕಡಿಯ 167 ಜನರು ತಲಾ 10 ಸದಸ್ಯರಂತೆ 16 ತಂಡಗಳಾಗಿ ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಗೂ ಸ್ಥಳೀಯರ ಸಹಕಾರದೊಂದಿಗೆ ತುರ್ತು ಪರಿಸ್ಥಿತಿ ಇರುವ ಪ್ರದೇಶಗಳಾದ ಕಾಟಕೇರಿ, ಜೋಡುಪಾಲ, ಕಾಲೂರು, ಮುಕ್ಕೋಡ್ಲು, ಮಕ್ಕಂದೂರು, ಹೆಮ್ಮೆತ್ತಾಳು, ಮೇಘತ್ತಾಳು, ದೇವಸ್ತೂರು, ದೇವಮಾನಿ, ಹಟ್ಟಿಹೊಳೆ ಪ್ರದೇಶಗಳಲ್ಲಿ ಸಂತ್ರಸ್ಥರ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕಾರ್ಯನಿರ್ವಹಿಸುತ್ತಿವೆ ಎಂದು ಸಾ.ರಾ.ಮಹೇಶ್ ಅವರು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯ ಹಲವು ಭಾಗಗಳು ಮಳೆಯಿಂದ ಜಲಾವೃತಗೊಂಡಿದ್ದು, ಭಾರಿ ಭೂ ಕುಸಿತದಿಂದ ಅಪಾಯದಂಚಿನಲ್ಲಿ ಸಂತ್ರಸ್ಥರು ಸಿಲುಕಿದ್ದು, ಇವರುಗಳನ್ನು ರಕ್ಷಿಸಲು ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ವಾಯು ಮಾರ್ಗದ ಮುಖಾಂತರ ರಕ್ಷಣಾ ಕಾರ್ಯ ನಡೆಸಲು ಪ್ರಯತ್ನಿಸಲಾಗಿ, ಪ್ರತಿಕೂಲ ಹವಾಮಾನದಿಂದ ಹೆಲಿಕಾಪ್ಟರ್ ಮೂಲಕ ಈ ಕಾರ್ಯ ನಡೆಸಲು ಸಾಧ್ಯವಾಗಿರುವುದಿಲ್ಲ. ಮಡಿಕೇರಿ ತಾಲ್ಲೂಕಿನ ಸಂಪಾಜೆ ಹೋಬಳಿಯ ಜೋಡುಪಾಲ ಗ್ರಾಮದಲ್ಲಿ ಅಪಾಯದ ಪರಿಸ್ಥಿತಿಗೆ ಸಿಲುಕಿದ್ದ 140 ಸಂತ್ರಸ್ಥರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಹಾಯದಿಂದ ರಕ್ಷಿಸಿ, ಸುರಕ್ಷಿತ ಸ್ಥಳವಾದ ಸಂಪಾಜೆಯ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಸುಂಟಿಕೊಪ್ಪ ಹೋಬಳಿಯ ನಂದಿಮೊಟ್ಟೆಯಲ್ಲಿ ಅಪಾಯದ ಪರಿಸ್ಥಿತಿಗೆ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ಒಳಗೊಂಡ ಒಟ್ಟು 30 ಮಂದಿ ಸಂತ್ರಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇವರಲ್ಲಿ 4 ಮಂದಿ ಗಾಯಾಳುಗಳಿರುವ ಬಗ್ಗೆ ವರದಿ ಸ್ವೀಕೃತವಾಗಿರುತ್ತದೆ. ಹಟ್ಟಿಹೊಳೆಯಿಂದ 10 ಕಿ.ಮೀ ಅಂತರದಲ್ಲಿರುವ ಸೂರ್ಯಕಿರಣ ಎಸ್ಟೇಟ್ನಲ್ಲಿ ಸಿಲುಕಿದ್ದ 12 ಮಹಿಳೆಯರು ಮತ್ತು 3 ಮಕ್ಕಳನ್ನು ಒಳಗೊಂಡಂತೆ ಒಟ್ಟು 37 ಮಂದಿಯನ್ನು ಭಾರತೀಯ ಸೇನೆ ಹಾಗೂ ತುರ್ತು ರಕ್ಷಣಾ ತಂಡದ ಸಹಾಯದಿಂದ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಭಾರತೀಯ ಸೇನಾ ತುಕಡಿ ಮತ್ತು ಕ್ಯೂ.ಆರ್.ಟಿ ತಂಡಗಳು ಮುಕ್ಕೋಡ್ಲುವಿನ ಸಂತ್ರಸ್ಥರೊಂದಿಗೆ ಸಂಪರ್ಕ ಸಾಧಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಚಿವರು ಹೇಳಿದರು.
ಅಲ್ಲದೆ ಮಡಿಕೇರಿ ತಾಲ್ಲೂಕಿನ ಹೆಮ್ಮತ್ತಾಳು ಮತ್ತು ಮಕ್ಕಂದೂರು ಗ್ರಾಮದಲ್ಲಿ 130, ಕಾಲೂರು ಮತ್ತು ಗಾಳಿಬೀಡುವಿನಲ್ಲಿ 200, ಕಟ್ಟೆಮಾಡು ಮತ್ತು ಪರಂಬು ಪೈಸಾರಿ (ಮರಗೋಡು) ಯಲ್ಲಿ 60 ಕುಟುಂಬಗಳು, 2ನೇ ಮೊಣ್ಣಂಗೇರಿ-20, ಜೋಡುಪಾಲದಲ್ಲಿ 130 ಸಂತ್ರಸ್ಥರನ್ನು ಭಾರತೀಯ ಸೇನೆ, ಎಸ್.ಡಿ.ಆರ್.ಎಫ್ ಮತ್ತು ನಾಗರೀಕ ರಕ್ಷಣಾ ಪಡೆಗಳ ಜಂಟಿ ಕಾರ್ಯಾಚರಣೆಯಿಂದ ರಕ್ಷಿಸಲಾಗಿದೆ. ದಿನಾಂಕ:16-08-2018 ಹಾಗೂ 17-08-2018 ರಂದು ಜಿಲ್ಲೆಯಲ್ಲಿ ಬಿದ್ದ ಧಾರಾಕಾರ ಮಳೆಯಿಂದಾಗಿ ಒಟ್ಟು 05 ಜನರು ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನಿಡಿದರು.
ಕಂದಾಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ತುರ್ತು ರಕ್ಷಣಾ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ದೇಶನ ನೀಡಿದ್ದು, ಜಿಲ್ಲೆಯ ಒಟ್ಟು 07 ಪುನರ್ವಸತಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ ಹಾಗೂ ತುರ್ತು ಕಾರ್ಯಾಚರಣೆ ಮತ್ತು ಪುನರ್ವಸತಿ ಕೇಂದ್ರಗಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿರುತ್ತಾರೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಜಿಲ್ಲಾಡಳಿತದಿಂದ ಕೈಗೊಂಡಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ7 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

