ದಿನದ ಸುದ್ದಿ
ಕೇರಳದಲ್ಲಿ ದಲಿತರಿಂದ ಊಟ ನಿರಾಕರಿಸಿದ ‘ಸುದ್ದಿ ಸತ್ಯ’ : ಇದು ‘ಸುದ್ದಿದಿನ’ ರಿಯಾಲಿಟಿ ಚೆಕ್..!
ಸುದ್ದಿದಿನ ಡೆಸ್ಕ್ | ದಲಿತರ ಧ್ವನಿ ಅಡಗಿಸಲಾಗುತ್ತಿದೆ, ಮಾಧ್ಯಮಗಳು ದಲಿತರಿಗೆ ಅನ್ಯಾಯವಾದ ಸುದ್ದಿಗಳನ್ನು ಪ್ರಕಟಿಸುತ್ತಿಲ್ಲ ಎಂಬ ಒಂದು ಆರೋಪವಿದೆ. ಇದನ್ನು ದಿಟ್ಟವಾಗಿ ಎದುರಿಸಿದ ಸುದ್ದಿದಿನಕ್ಕೆ ತುಳಿತಕ್ಕೊಳಗಾದವರ ನೋವನ್ನು ಪ್ರಪಂಚಕ್ಕೆ ಮುಟ್ಟಿಸುವುದು ಹೇಗೆಂಬ ಆತಂಕ ಎದುರಾಗಿದೆ.
ಭಾನುವಾರ ಬೆಳ್ಳಂಬೆಳಗ್ಗೆ ಇಂಡಿಯಾ ಟುಡೆ ವೆಬ್ ಪೋರ್ಟಲ್ ಕೇರಳದ ಅಲಪ್ಪುಳ ಜಿಲ್ಲೆಯ ನಿರಾಶ್ರಿತರ ಕೇಂದ್ರದಲ್ಲಿ ದಲಿತರು ಮಾಡಿದ ಅಡುಗೆಯನ್ನು ಮೇಲ್ಜಾತಿಯವರು ತಿನ್ನುತ್ತಿಲ್ಲ. ಸವರ್ಣೀಯರು ಪ್ರತ್ಯೇಕ ಕ್ಯಾಂಪ್ ಮಾಡಿಕೊಂಡು ಪರಿಹಾರವಾಗಿ ಬಂದ ಅರ್ಧಕ್ಕೂ ಹೆಚ್ಚು ದಿನಸಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯನ್ನು ಭಾವಾನುವಾದ ಮಾಡಿ ಕನ್ನಡಿಗರಿಗೆ ತಲುಪಿಸಲಾಗಿತ್ತು.
ಈ ಸುದ್ದಿ ಬರೆದ ಕೆಲವೇ ನಿಮಿಷಗಳಲ್ಲಿ ಫೇಸ್ಬುಕ್ ಪೇಜ್ನಲ್ಲಿ ಶೇರ್ ಮಾಡಿದ್ದೆವು. ಹಾಗೆಯೇ ನಮ್ಮ ಪೋರ್ಟಲ್ನ ಸಿಬ್ಬಂದಿಯೂ ಅದನ್ನು ತಮ್ಮ ಖಾತೆಗಳ ಮೂಲಕ ಶೇರ್ ಮಾಡಿದ್ದರು. ಬರಹ ಹೆಸರಿನ ಖಾತೆಯಿಂದ ಗಂಟೆಗಳಲ್ಲಿ ಸಾವಿರಾರು ಮಂದಿ ತಲುಪಿದ ಪೋಸ್ಟ್ ವೈರಲ್ ಆಗಿತ್ತು. ಸದ್ಯ ಧಮನಿತರ ಧ್ವನಿ ಎಲ್ಲರಿಗೂ ತಲುಪಿತಲ್ಲ ಎಂದು ನಿರಾತಂಕವಾದೆವು. ಆದರೆ, ನಮ್ಮ ನಿರೀಕ್ಷೆ ಕೆಲವೇ ನಿಮಿಷಗಳಲ್ಲಿ ಸುಳ್ಳಾಯಿತು.
ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ದಲಿತ ವಿರೋಧಿಗಳು ಈ ಸುದ್ದಿಯನ್ನು ಫೇಕ್ ಎಂದು ಕಮೆಂಟ್ ಮಾಡಿದರು. ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟು ರಿಪೋರ್ಟ್ ಮಾಡಿದರು. ಪರಿಣಾಮವಾಗಿ ಈ ಖಾತೆಯು ಬ್ಲಾಕ್ ಆಯಿತು. ಅಷ್ಟಕ್ಕೂ ನಾವು ಬರೆದ ಸುದ್ದಿ ಸುಳ್ಳಾಗಿರಲಿಲ್ಲ. ಇಂಡಿಯಾ ಟುಡೆ ಪೋರ್ಟಲ್ನಲ್ಲಿ ಬಂದ ಇದೇ ಸುದ್ದಿಯು ಟೈಮ್ಸ್ ಆಫ್ ಇಂಡಿಯಾ ಕೂಡ ಅಪ್ಲೋಡ್ ಮಾಡಿತ್ತು.
ಈ ಎರಡೂ ಪೋರ್ಟಲ್ನಲ್ಲಿ ಬಂದ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಬರೆದಿದ್ದರೂ ನಾವೇ ಎಡವಿದೆವಾ ಎಂಬ ಅನುಮಾನದಿಂದ ಸುದ್ದಿಯನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆವು. ಇದಕ್ಕಾಗಿ ಕೇರಳದ ಅಲಪ್ಪುಳ ಜಿಲ್ಲೆಯ ಜಿಲ್ಲಾಧಿಕಾರಿ ಸುಹಾಸ್ ಅವರನ್ನು ಸುದ್ದಿದಿನ ತಂಡ ಸಂಪರ್ಕಿಸಿತು. ಈ ವಿಷಯವನ್ನು ಅವರು ಖಚಿತಪಡಿಸಿದರೂ, ಹೆಚ್ಚು ಹೈಲೈಟ್ ಮಾಡದಂತೆ ಸುಹಾಸ್ ಸಲಹೆ ನೀಡಿದರೆ. ನಾವು ಅದನ್ನು ಗೌರವಿಸುತ್ತೇವೆ. ಆದರೆ, ಪ್ರವಾಹದಂಥ ಭೀಕರ ಪರಿಸ್ಥಿತಿಯಲ್ಲೂ ದಲಿತರನ್ನು ತುಳಿಯುವ ಮನೋಭಾವನೆಗೆ ನಮ್ಮ ವಿರೋಧವಿದೆ. ಖಾತೆ ಬ್ಲಾಕ್ ಆದರೆ, ಅದನ್ನು ಮತ್ತೆ ಪಡೆಯಬಹುದು. ನಮ್ಮನ್ನು ಫೇಸ್ಬುಕ್ನಿಂದ ಹೊರಗೆ ತಳ್ಳಿ ಸತ್ಯವನ್ನು ಬಚ್ಚಿಡುವ ಯತ್ನಕ್ಕೆ ನಾವು ಹೆದರುವುದಿಲ್ಲ. ಸಮಾಜದ ಮೂರನೇ ವರ್ಗದವರಿಗೂ ಧನಿಯಾಗುವುದು ಪತ್ರಿಕೋದ್ಯಮದ ಮೂಲ ಉದ್ದೇಶ. ಅದಕ್ಕೆ ಸುದ್ದಿದಿನ ಸದಾ ಬೆಂಬಲಿಸುತ್ತದೆ.
-ಸುದ್ದಿದಿನ

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


