ದಿನದ ಸುದ್ದಿ
ಶ್ರಾವಣ ಸಂಜೆಯ ಕಾಣಿಕೆ ಕೊಡಗು – ಕೇರಳ ಸಂತ್ರಸ್ತರ ಪುನರ್ವಸತಿಗೆ ಬಳಕೆ | ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಘೋಷಣೆ
ಸುದ್ದಿದಿನ, ಅಲಬೂರು : ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಕಾಣಿಕೆಯನ್ನು ಕೊಡಗೂ,ಚಿಕ್ಕಮಗಳೂರು ಹಾಗೂ ಕೇರಳ ರಾಜ್ಯದಲ್ಲಿ ಉಂಟಾಗಿರುವ ಜಲ ಪ್ರಳಯದ ಸಂತ್ರಸ್ತರ ಪುನರ್ವಸತಿಗೆ ಬಳಕೆ ಮಾಡಲಾಗುವುದು ಎಂದು ತರಳಬಾಳು ಜಗದ್ಗುರು ಶಾಖಾ ಶ್ರೀ ಮಠದ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪ್ರಕೃತಿಯ ಅವಘಡದ ಅನೇಕ ಸಂಧರ್ಭಗಳಲ್ಲಿ ಮಾನವೀಯ ನೆಲೆಯಲ್ಲಿ ಅಂತಃಕರಣದಿಂದ ತರಳಬಾಳು ಜಗದ್ಗುರು ಬೃಹನ್ಮಠ ನಾಡಿನ ಕಷ್ಟ ಪರಿಸ್ಥಿತಿಗಳಲ್ಲಿ ಮಿಡಿದಿದೆ.ಅಪಾಯಗಳಲ್ಲಿ ಸಿಲುಕಿ ನರಳಾಡುತ್ತಿರುವವ ಬಾಂಧವರು ಅಪಾರ ಪ್ರಮಾಣದ ಆಸ್ತಿ ಪಾಸ್ತಿ ವಂಚಿತರಾದ ಅವರ ಅಸಹಾಯಕತೆಯ ಆಕ್ರಂದನ ನಮ್ಮ ಮನಸ್ಸನ್ನು ಜರ್ಜರಿತಗೊಳಿಸಿದ್ದು.ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದ ಜೊತೆ ಇನ್ನೊಷ್ಟು ಸಂಗ್ರಹಿಸಿ ನಿರಾಶ್ರಿತರ ಕಷ್ಟದಲ್ಲಿಭಾಗಿಯಾಗುವುದಾಗಿ ತಿಳಿಸಿದರು .
ಕೊಟ್ಟೂರು ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಶ್ರಾವಣ ಸಂಜೆಯ ಎಂಟನೇ ದಿನದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು ಆಶೀರ್ವಚನ ನೀಡಿದ ಶ್ರೀಗಳು ಬಸವಣ್ಣ ಹನ್ನೆರಡನೆಯ ಶತಮಾನದ ಅಗ್ರಮಾನ್ಯರಾದ ವಿಶ್ವಖ್ಯಾತಿಯ ವಿಭೂತಿ ಪುರುಷ .ತಲತಲಾಂತರದಿಂದ ಆಚರಣೆಯಲ್ಲಿದ್ದ ಅವಿವೇಕತನದ ಸಂಪ್ರದಾಯಗಳನ್ನು ದಿಕ್ಕರಿಸಿ ಸಮ ಸಮಾಜದ ನಿರ್ಮಾತೃ ಧಾರ್ಮಿಕ ವಿಮರ್ಶೆಯ ಜೊತೆ ಸಾಮಾಜಿಕ ವಿಮರ್ಶೆ,ರಾಜಕೀಯ ವಿಮರ್ಶೆ, ಸಾಹಿತ್ಯ ವಿಮರ್ಶೆಯ ವೈಚಾರಿಕ ಕ್ರಾಂತಿಗೆ ನಾಂದಿ ಹಾಡಿ ಯಶಸ್ಸು ಗಳಿಸಿದ ಮಹಾಮಾನವತಾವಾದಿಯ ಹಾದಿಯಲ್ಲಿ ಹೆಜ್ಜೆ ಹಾಕಲು ಕರೆ ನೀಡಿದರು.
‘ಬಸವಣ್ಣನವರ ಲೋಕ ವಿಮರ್ಶೆ’ ಕುರಿತು ಉಪನ್ಯಾಸ ನೀಡಿದ ಚಿಂತಕ ಡಾ.ಎಸ್ ಆರ್ ಪುರುಷೋತ್ತಮ ವಾಟಿಗಾರ್ ಮಾತನಾಡಿ ಸಾಮಾನ್ಯ ಜನರಿಂದ ಹಿಡಿದು ಅಸಮಾನ್ಯ ಜನರ ವರೆಗೆ ನಡೆ-ನುಡಿಯ ಅಸಮನಾತೆಯ ಸಾಮರಸ್ಯ ಎದ್ದು ಕಾಣುತ್ತಿದೆ.ಆದರೆ 12 ನೆಯ ಶತಮಾನದ ವಚನಕಾರರ ನುಡಿ-ನಡೆಯಲ್ಲಿ ಯಾವುದೇ ವ್ಯತ್ಯಾಸ ಕಾಣಸಿಗುವುದಿಲ್ಲ,ಆಡುವ ಮಾತುಗಳಲ್ಲಿ ಅನುಷ್ಠಾನ ಇಲ್ಲದೇ ಹೋದರೆ ಆ ಮಾತಿನ ಮೌಲ್ಯ ಕಳೆದು ಹೋಗುತ್ತದೆ, ಹೃದಯ ವೈಶ್ಯಾಲ್ಯತೆ ಇಲ್ಲದೇ ಹೋದರೆ ಮನುಷ್ಯತ್ವ ತೆರೆಯ ಮರೆಗೆ ಸರಿಯುತ್ತದೆ.ಸುಧಾರಣೆ ತನ್ನಿಂದಲೇ ಆಗಬೇಕೆಂದು ಬಸವಣ್ಣ ತನ್ನ ಹುಟ್ಟಿನ ಶ್ರೇಷ್ಠತೆಯನ್ನು ಅಲ್ಲಗಳೆದು ; ನಾನು ಹಾರವನೆಂದರೆ ನಮ್ಮ ಶರಣರು ನಗುವರಯ್ಯ ಎಂದು ತನ್ನನ್ನು ತಾನೇ ತುಚ್ಚೀಕರಿಸಿಕೊಳ್ಳುವರು ಬಸವಣ್ಣನವರ ಸಂದೇಶಗಳು ವಿಶ್ವ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿವೆ.ದ್ವೇಷದಿಂದ ದ್ವೇಷವನ್ನು ಯಾರೂ ಗೆಲ್ಲಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅಣ್ಣನವರು ಹೇಳಿದ್ದು ‘ ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯ ಎಂದು,ಬಡತನ ಮತ್ತು ಸಿರಿತನ ಮನುಷ್ಯನ ಎರಡು ಆಯಾಮಗಳನ್ನು ಸೂಚಿಸುತ್ತದೆ.ಹಾಗಾಗಿ ಬಡತನ ಬಂದರೆ ಕುಗ್ಗಿದೆ ಸಿರಿತನ ಬಂದರೆ ಹಿಗ್ಗದೇ ಬದುಕನ್ನು ಸಾರ್ಥಕ ಪಡಿಸಿಕೊಳ್ಳುವ ನಿಟ್ಟಿನಲ್ಲಿ ನಮಗೆ ದಾರಿದೀಪವಾಗುವುದು ಬಸವಣ್ಣನವರ ವಚನಗಳು ಎಂದು ಅಭಿಪ್ರಾಯ ಪಟ್ಟರು.
ಶಿವಮೊಗ್ಗೆಯ ವಿಧಾನಪರಿಷತ್ ಸದಸ್ಯರು, ಉದ್ಯಮಿಗಳಾದ ಶ್ರೀ ಎಸ್.ರುದ್ರೇಗೌಡ್ರು ಮಾತನಾಡಿ, ತರಳಬಾಳು ಜಗದ್ಗುರು ಬೃಹನ್ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಗ್ರಾಮೀಣರ ಶಿಕ್ಷಣಕ್ಕೆ ಆಸರೆಯಾಗಿ ನಿಂತ ಮಹಾನ್ ಚೇತನರಾಗಿ ಹಳ್ಳಿ ಹಳ್ಳಿ ಗಳಲ್ಲಿ ನೂರಾರು ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ದಾಸೋಹಿಯಾಗಿ ಲಕ್ಷಾಂತರ ಜನರ ವಿಧ್ಯಾಭ್ಯಾಸಕ್ಕೆ ಕಾರಣರಾದರು. ಈಗಿನ ಜಗದ್ಗುರುವರ್ಯರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಈ ದೇಶದ ಅಪ್ರತಿಮ ವಿದ್ವತ್ ಪಂಡಿತೋತ್ತಮರಾಗಿದ್ದರೂ ಸಹ ರೈತರ ಬಾಳಿಗೆ ಬೆಳಕಾಗುವ ಯಶಸ್ವಿ ಯೋಜನೆಗಳ ಸಾಕಾರ ಮೂರ್ತಿಯಾಗಿದ್ದು ರೈತ ಮೆಚ್ಚಿದ ,ದೇಶ ಒಪ್ಪಿದ ಗುರುವರ್ಯರಾಗಿದ್ದಾರೆ. ಅಂತೆಯೇ ಪ್ರಗತಿ ಪರ ಚಿಂತನೆಯ ಶರಣತತ್ವ ದಾಸೋಹಿಗಳಾದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಈ ನಾಡಿನ ಸಾಂಸ್ಕೃತಿಕ ಜಂಗಮರಾಗಿ ಶರಣರ ಆಶಯಗಳನ್ನು ಜನರ ಮನದಲ್ಲಿ ಬಿತ್ತುವ ಮೂಲಕ ಬದುಕಿನ ಅರ್ಥಪೂರ್ಣ ಹಸನತೆಗೆ ಕಾರಣೀಕೃತರಾಗಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪರಿಹಾರನಿಧಿಗೆ 10 ಸಾವಿರ ರೂಗಳ ದೇಣಿಗೆಯನ್ನು ಶ್ರೀಗಳಿಗೆ ಸಲ್ಲಿಸಿದರು.
ಸಂಜೆ ನಾಲ್ಕು ಗಂಟೆಯಿಂದಲೂ ಶ್ರೀ ಗಳ ಪಾದಯಾತ್ರೆ ಗ್ರಾಮದಲ್ಲಿ ಜರುಗಿತು.ಗ್ರಾಮವೂ ತಳಿರ ತೋರಣ ರಂಗೋಲಿಯಿಂದ ಅಲಂಕೃತಗೊಂಡು ಹಬ್ಬದ ವಾತಾವರಣವೇ ಮೈದಾಳಿತ್ತು. ವಚನ ಕಂಠಪಾಠ ಸ್ಪರ್ಧೆಯ ವಿಜೇತ ಮಕ್ಕಳಿಗೆ, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ
ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಲಾಯಿತು.
ವೇದಿಕೆಯ ಮೇಲೆ ಕರ್ನಾಟಕ ಬೀಜ ನಿಗಮದ ನಿರ್ದೇಶಕರಾದ ಎಸ್.ರಾಜೇಂದ್ರ ಪ್ರಸಾದ್, ಡಾ.ಮೂಗಪ್ಪ,ವಸಂತ ಕೊಟ್ರೇಶ್,ಸಿದ್ದಲಿಂಗಪ್ಪ,ಸುಶೀಲಮ್ಮ ,ಬಿ.ಕೊಟ್ರೇಶ್ ಹಾಜರಿದ್ದರು.
ಶಿಕ್ಷಕ ಹೆಚ್ ನಾಗರಾಜ್ ಸ್ವಾಗತಿಸಿದರು,ಸಾಣೇಹಳ್ಳಿಯ ಶಿವ ಸಂಚಾರದ ತಂಡದ ಜ್ಯೋತಿ. ಕೆ,ದ್ರಾಕ್ಷಾಯಿಣಿ ಕೆ ಹಾಗೂ ನಾಗರಾಜ್ ಹೆಚ್.ಎಸ್ ಶರಣ್ ತಂಡದವರಿಂದ ವಚನ ಗಾಯನ ನಡೆಯಿತು. ಮಕ್ಕಳು ವಚನ ನೃತ್ಯ ರೂಪಕಗಳನ್ನು ಪ್ರಸ್ತುತಿ ಪಡಿಸಿದರು. ಅಧ್ಯಾಪಕ ಹೆಚ್.ಎಸ್ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


