Connect with us

ದಿನದ ಸುದ್ದಿ

ಶ್ರಾವಣ ಸಂಜೆಯ ಕಾಣಿಕೆ ಕೊಡಗು – ಕೇರಳ ಸಂತ್ರಸ್ತರ ಪುನರ್ವಸತಿಗೆ ಬಳಕೆ | ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಘೋಷಣೆ

Published

on

ಸುದ್ದಿದಿನ, ಅಲಬೂರು : ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಕಾಣಿಕೆಯನ್ನು ಕೊಡಗೂ,ಚಿಕ್ಕಮಗಳೂರು ಹಾಗೂ ಕೇರಳ ರಾಜ್ಯದಲ್ಲಿ ಉಂಟಾಗಿರುವ ಜಲ ಪ್ರಳಯದ ಸಂತ್ರಸ್ತರ ಪುನರ್ವಸತಿಗೆ ಬಳಕೆ ಮಾಡಲಾಗುವುದು ಎಂದು ತರಳಬಾಳು ಜಗದ್ಗುರು ಶಾಖಾ ಶ್ರೀ ಮಠದ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಪ್ರಕೃತಿಯ ಅವಘಡದ ಅನೇಕ ಸಂಧರ್ಭಗಳಲ್ಲಿ ಮಾನವೀಯ ನೆಲೆಯಲ್ಲಿ ಅಂತಃಕರಣದಿಂದ ತರಳಬಾಳು ಜಗದ್ಗುರು ಬೃಹನ್ಮಠ ನಾಡಿನ ಕಷ್ಟ ಪರಿಸ್ಥಿತಿಗಳಲ್ಲಿ ಮಿಡಿದಿದೆ.ಅಪಾಯಗಳಲ್ಲಿ ಸಿಲುಕಿ ನರಳಾಡುತ್ತಿರುವವ ಬಾಂಧವರು ಅಪಾರ ಪ್ರಮಾಣದ ಆಸ್ತಿ ಪಾಸ್ತಿ ವಂಚಿತರಾದ ಅವರ ಅಸಹಾಯಕತೆಯ ಆಕ್ರಂದನ ನಮ್ಮ ಮನಸ್ಸನ್ನು ಜರ್ಜರಿತಗೊಳಿಸಿದ್ದು.ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದ ಜೊತೆ ಇನ್ನೊಷ್ಟು ಸಂಗ್ರಹಿಸಿ ನಿರಾಶ್ರಿತರ ಕಷ್ಟದಲ್ಲಿಭಾಗಿಯಾಗುವುದಾಗಿ ತಿಳಿಸಿದರು .

ಕೊಟ್ಟೂರು ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಶ್ರಾವಣ ಸಂಜೆಯ ಎಂಟನೇ ದಿನದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು ಆಶೀರ್ವಚನ ನೀಡಿದ ಶ್ರೀಗಳು ಬಸವಣ್ಣ ಹನ್ನೆರಡನೆಯ ಶತಮಾನದ ಅಗ್ರಮಾನ್ಯರಾದ ವಿಶ್ವಖ್ಯಾತಿಯ ವಿಭೂತಿ ಪುರುಷ .ತಲತಲಾಂತರದಿಂದ ಆಚರಣೆಯಲ್ಲಿದ್ದ ಅವಿವೇಕತನದ ಸಂಪ್ರದಾಯಗಳನ್ನು ದಿಕ್ಕರಿಸಿ ಸಮ ಸಮಾಜದ ನಿರ್ಮಾತೃ ಧಾರ್ಮಿಕ ವಿಮರ್ಶೆಯ ಜೊತೆ ಸಾಮಾಜಿಕ ವಿಮರ್ಶೆ,ರಾಜಕೀಯ ವಿಮರ್ಶೆ, ಸಾಹಿತ್ಯ ವಿಮರ್ಶೆಯ ವೈಚಾರಿಕ ಕ್ರಾಂತಿಗೆ ನಾಂದಿ ಹಾಡಿ ಯಶಸ್ಸು ಗಳಿಸಿದ ಮಹಾಮಾನವತಾವಾದಿಯ ಹಾದಿಯಲ್ಲಿ ಹೆಜ್ಜೆ ಹಾಕಲು ಕರೆ ನೀಡಿದರು.

‘ಬಸವಣ್ಣನವರ ಲೋಕ ವಿಮರ್ಶೆ’ ಕುರಿತು ಉಪನ್ಯಾಸ ನೀಡಿದ ಚಿಂತಕ ಡಾ.ಎಸ್ ಆರ್ ಪುರುಷೋತ್ತಮ ವಾಟಿಗಾರ್ ಮಾತನಾಡಿ ಸಾಮಾನ್ಯ ಜನರಿಂದ ಹಿಡಿದು ಅಸಮಾನ್ಯ ಜನರ ವರೆಗೆ ನಡೆ-ನುಡಿಯ ಅಸಮನಾತೆಯ ಸಾಮರಸ್ಯ ಎದ್ದು ಕಾಣುತ್ತಿದೆ.ಆದರೆ 12 ನೆಯ ಶತಮಾನದ ವಚನಕಾರರ ನುಡಿ-ನಡೆಯಲ್ಲಿ ಯಾವುದೇ ವ್ಯತ್ಯಾಸ ಕಾಣಸಿಗುವುದಿಲ್ಲ,ಆಡುವ ಮಾತುಗಳಲ್ಲಿ ಅನುಷ್ಠಾನ ಇಲ್ಲದೇ ಹೋದರೆ ಆ ಮಾತಿನ ಮೌಲ್ಯ ಕಳೆದು ಹೋಗುತ್ತದೆ, ಹೃದಯ ವೈಶ್ಯಾಲ್ಯತೆ ಇಲ್ಲದೇ ಹೋದರೆ ಮನುಷ್ಯತ್ವ ತೆರೆಯ ಮರೆಗೆ ಸರಿಯುತ್ತದೆ.ಸುಧಾರಣೆ ತನ್ನಿಂದಲೇ ಆಗಬೇಕೆಂದು ಬಸವಣ್ಣ ತನ್ನ ಹುಟ್ಟಿನ ಶ್ರೇಷ್ಠತೆಯನ್ನು ಅಲ್ಲಗಳೆದು ; ನಾನು ಹಾರವನೆಂದರೆ ನಮ್ಮ ಶರಣರು ನಗುವರಯ್ಯ ಎಂದು ತನ್ನನ್ನು ತಾನೇ ತುಚ್ಚೀಕರಿಸಿಕೊಳ್ಳುವರು ಬಸವಣ್ಣನವರ ಸಂದೇಶಗಳು ವಿಶ್ವ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿವೆ.ದ್ವೇಷದಿಂದ ದ್ವೇಷವನ್ನು ಯಾರೂ ಗೆಲ್ಲಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅಣ್ಣನವರು ಹೇಳಿದ್ದು ‘ ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯ ಎಂದು,ಬಡತನ ಮತ್ತು ಸಿರಿತನ ಮನುಷ್ಯನ ಎರಡು ಆಯಾಮಗಳನ್ನು ಸೂಚಿಸುತ್ತದೆ.ಹಾಗಾಗಿ ಬಡತನ ಬಂದರೆ ಕುಗ್ಗಿದೆ ಸಿರಿತನ ಬಂದರೆ ಹಿಗ್ಗದೇ ಬದುಕನ್ನು ಸಾರ್ಥಕ ಪಡಿಸಿಕೊಳ್ಳುವ ನಿಟ್ಟಿನಲ್ಲಿ ನಮಗೆ ದಾರಿದೀಪವಾಗುವುದು ಬಸವಣ್ಣನವರ ವಚನಗಳು ಎಂದು ಅಭಿಪ್ರಾಯ ಪಟ್ಟರು.

ಶಿವಮೊಗ್ಗೆಯ ವಿಧಾನಪರಿಷತ್ ಸದಸ್ಯರು, ಉದ್ಯಮಿಗಳಾದ ಶ್ರೀ ಎಸ್.ರುದ್ರೇಗೌಡ್ರು ಮಾತನಾಡಿ, ತರಳಬಾಳು ಜಗದ್ಗುರು ಬೃಹನ್ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಗ್ರಾಮೀಣರ ಶಿಕ್ಷಣಕ್ಕೆ ಆಸರೆಯಾಗಿ ನಿಂತ ಮಹಾನ್ ಚೇತನರಾಗಿ ಹಳ್ಳಿ ಹಳ್ಳಿ ಗಳಲ್ಲಿ ನೂರಾರು ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ದಾಸೋಹಿಯಾಗಿ ಲಕ್ಷಾಂತರ ಜನರ ವಿಧ್ಯಾಭ್ಯಾಸಕ್ಕೆ ಕಾರಣರಾದರು. ಈಗಿನ ಜಗದ್ಗುರುವರ್ಯರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಈ ದೇಶದ ಅಪ್ರತಿಮ ವಿದ್ವತ್ ಪಂಡಿತೋತ್ತಮರಾಗಿದ್ದರೂ ಸಹ ರೈತರ ಬಾಳಿಗೆ ಬೆಳಕಾಗುವ ಯಶಸ್ವಿ ಯೋಜನೆಗಳ ಸಾಕಾರ ಮೂರ್ತಿಯಾಗಿದ್ದು ರೈತ ಮೆಚ್ಚಿದ ,ದೇಶ ಒಪ್ಪಿದ ಗುರುವರ್ಯರಾಗಿದ್ದಾರೆ. ಅಂತೆಯೇ ಪ್ರಗತಿ ಪರ ಚಿಂತನೆಯ ಶರಣತತ್ವ ದಾಸೋಹಿಗಳಾದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಈ ನಾಡಿನ ಸಾಂಸ್ಕೃತಿಕ ಜಂಗಮರಾಗಿ ಶರಣರ ಆಶಯಗಳನ್ನು ಜನರ ಮನದಲ್ಲಿ ಬಿತ್ತುವ ಮೂಲಕ ಬದುಕಿನ ಅರ್ಥಪೂರ್ಣ ಹಸನತೆಗೆ ಕಾರಣೀಕೃತರಾಗಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪರಿಹಾರನಿಧಿಗೆ 10 ಸಾವಿರ ರೂಗಳ ದೇಣಿಗೆಯನ್ನು ಶ್ರೀಗಳಿಗೆ ಸಲ್ಲಿಸಿದರು.

ಸಂಜೆ ನಾಲ್ಕು ಗಂಟೆಯಿಂದಲೂ ಶ್ರೀ ಗಳ ಪಾದಯಾತ್ರೆ ಗ್ರಾಮದಲ್ಲಿ ಜರುಗಿತು.ಗ್ರಾಮವೂ ತಳಿರ ತೋರಣ ರಂಗೋಲಿಯಿಂದ ಅಲಂಕೃತಗೊಂಡು ಹಬ್ಬದ ವಾತಾವರಣವೇ ಮೈದಾಳಿತ್ತು. ವಚನ ಕಂಠಪಾಠ ಸ್ಪರ್ಧೆಯ ವಿಜೇತ ಮಕ್ಕಳಿಗೆ, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ
ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಲಾಯಿತು.

ವೇದಿಕೆಯ ಮೇಲೆ ಕರ್ನಾಟಕ ಬೀಜ ನಿಗಮದ ನಿರ್ದೇಶಕರಾದ ಎಸ್.ರಾಜೇಂದ್ರ ಪ್ರಸಾದ್, ಡಾ.ಮೂಗಪ್ಪ,ವಸಂತ ಕೊಟ್ರೇಶ್,ಸಿದ್ದಲಿಂಗಪ್ಪ,ಸುಶೀಲಮ್ಮ ,ಬಿ.ಕೊಟ್ರೇಶ್ ಹಾಜರಿದ್ದರು.

ಶಿಕ್ಷಕ ಹೆಚ್ ನಾಗರಾಜ್ ಸ್ವಾಗತಿಸಿದರು,ಸಾಣೇಹಳ್ಳಿಯ ಶಿವ ಸಂಚಾರದ ತಂಡದ ಜ್ಯೋತಿ. ಕೆ,ದ್ರಾಕ್ಷಾಯಿಣಿ ಕೆ ಹಾಗೂ ನಾಗರಾಜ್ ಹೆಚ್.ಎಸ್ ಶರಣ್ ತಂಡದವರಿಂದ ವಚನ ಗಾಯನ ನಡೆಯಿತು. ಮಕ್ಕಳು ವಚನ ನೃತ್ಯ ರೂಪಕಗಳನ್ನು ಪ್ರಸ್ತುತಿ ಪಡಿಸಿದರು. ಅಧ್ಯಾಪಕ ಹೆಚ್.ಎಸ್ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ...

ದಿನದ ಸುದ್ದಿ11 hours ago

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ...

ದಿನದ ಸುದ್ದಿ19 hours ago

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ...

ದಿನದ ಸುದ್ದಿ1 day ago

ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಂ.ಎಂ.ಟಿ.ಎಂ 1, ಡಿಎಂಎಂ 20, ಸಿಒಪಿಎ 20, ವೆಲ್ಡರ್ 34 ಹಾಗೂ ರೋಬೊಟಿಕ್ಸ 12 ಖಾಲಿ ಇರುವ...

ದಿನದ ಸುದ್ದಿ1 day ago

ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ...

ದಿನದ ಸುದ್ದಿ2 days ago

ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು

ಸುದ್ದಿದಿನಡೆಸ್ಕ್:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು...

ದಿನದ ಸುದ್ದಿ4 days ago

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ...

ದಿನದ ಸುದ್ದಿ5 days ago

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ...

ದಿನದ ಸುದ್ದಿ5 days ago

KPSC | 2 ತಿಂಗಳೊಳಗೆ ಮರು ಪರೀಕ್ಷೆ

ಸುದ್ದಿದಿನಡೆಸ್ಕ್:ಇತ್ತೀಚಿನ ಕೆ.ಪಿ.ಎಸ್.ಸಿ. ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ, ಅಸಮರ್ಪಕ ಕನ್ನಡಾನುವಾದ ಹಿನ್ನೆಲೆ, ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ, 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ, ಕರ್ನಾಟಕ ಲೋಕ...

ದಿನದ ಸುದ್ದಿ5 days ago

ADITYA-L1 | ಇಸ್ರೋ ಆದಿತ್ಯ ಎಲ್-1 ನೌಕೆ ಉಡಾವಣೆಗೆ ಒಂದು ವರ್ಷ; ಸೂರ್ಯನ ಅಧ್ಯಯನದಲ್ಲಿ ಮಹತ್ವದ ಪ್ರಗತಿ

ಸುದ್ದಿದಿನಡೆಸ್ಕ್:ಇಸ್ರೋದಿಂದ ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೊಂಡು ಇಂದಿಗೆ ಒಂದು ವರ್ಷ ಪೂರೈಸಿದೆ. 2023ರ ಸೆಪ್ಟೆಂಬರ್ 2 ರಂದು ಉಡಾವಣೆಗೊಂಡಿರುವ ಎಲ್-1ನೌಕೆ ಕಕ್ಷೆ ತಲುಪಿದ್ದು, ಭೂಮಿಯಿಂದ ಸುಮಾರು...

Trending