Connect with us

ದಿನದ ಸುದ್ದಿ

ಶಾಕಿಂಗ್ ನ್ಯೂಸ್: ಎರಡು ಲಕ್ಷ ಮಕ್ಕಳು ನಾಪತ್ತೆ

Published

on

ಸುದ್ದಿದಿನ ಡೆಸ್ಕ್: ಸುಪ್ರೀಂ ಕೋರ್ಟ್‌ಗೆ ಎರಡು ಸರ್ಕಾರಗಳ ಸಲ್ಲಿರುವ ಸಮೀಕ್ಷಾ ವರದಿಯಲ್ಲಿ ಶಾಕಿಂಕ್ ನ್ಯೂಸ್ ಹೊರಬಿದ್ದಿದ್ದು, ದೇಶಾದ್ಯಂತ ಇರುವ ಸರ್ಕಾರಿ ನಿಲಯಗಳಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮಕ್ಕಳು ನಾಪತ್ತೆಯಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ. ಈಚೆಗಷ್ಟೇ ಉತ್ತರಪ್ರದೇಶದ ಬಾಲಕಿಯರ ನಿಲಯದಲ್ಲಿ ಅತ್ಯಾಚಾರ ಎಸಗಿ ಹೂತು ಹಾಕಿದ್ದ ಘಟನೆಯ ಬೆನ್ನಲ್ಲೇ ದೇಶವೇ ಶಾಂಕ್ ಆಗುವ ಮಾಹಿತಿ ಬಹಿರಂಗವಾಗಿದೆ.

ಕೇಂದ್ರ ಮಹಿಳಾ ಮಕ್ಕಳಾಭಿವೃದ್ಧಿ ಸಚಿವಾಲಯ 2016-17ನೇ ಸಾಲಿನಲ್ಲಿ ದೇಶಾದ್ಯಂತ ಇರುವ ಸರ್ಕಾರಿ ಮಕ್ಕಳ ನಿಲಯಗಳಲ್ಲಿ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿದೆ. ಈ ವರದಿಯ ಪ್ರಕಾರ 4.73 ಮಕ್ಕಳು ಸರ್ಕಾರಿ ನಿಲಯಗಳಲ್ಲಿ ವಾಸಿಸುತ್ತಿರುವುದಾಗಿ ದಾಖಲಾಗಿದೆ. ಆದರೆ, ಸುಪ್ರೀಂ ಕೋರ್ಟ್‌ಗೆ ಮಾರ್ಚ್‌ನಲ್ಲಿ ಕೇಂದ್ರ ಸಲ್ಲಿಸಿದ ವರದಿಯಲ್ಲಿ 2.61 ಮಕ್ಕಳು ಕಡಿಮೆಯಾಗಿರುವ ಅಂಶ ಬೆಳಕಿಗೆ ಬಂದಿದೆ. ಈ ಮಾಹಿತಿಯನ್ನು ಕೇಂದ್ರವು ರಾಜ್ಯ ಸರ್ಕಾರಗಳಿಂದ ಪಡೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕೂರ್, ಎಸ್. ಅಬ್ದುಲ್ ನಜೀರ್, ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠ, ಬಹಳ ಗೊಂದಲಕ್ಕೀಡಾಗಿದ್ದು, ಮಕ್ಕಳು ಕೇವಲ ಅಂಕಿಗಳಲ್ಲ, ವರದಿಯಲ್ಲಿ ಅಂಶಗಳು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಮಕ್ಕಳನ್ನು ಕೇವಲ ಅಂಕಿಗಳಂತೆ ಪರಿಗಣಿಸಿರುವುದು ನಮಗೆ ನೋವು ತಂದಿದೆ. ಅವರಿಗೂ ಹೃದಯವಿದೆ, ಅವರಿಗೂ ಮನಸ್ಸಿದೆ ಎಂದು ಹೇಳಿ ತಾರತಮ್ಯವನ್ನು ಎತ್ತಿಹಿಡಿದಿದೆ.

ಹಣದಾಸೆಗಾಗಿ ನಿಲಯಗಳು ಸುಳ್ಳು ಮಾಹಿತಿ ನೀಡಿವೆಯೋ ಅಥವಾ ಏನು ಮಾಡಿವೆಯೋ ನಮಗೆ ತಿಳಿಯುತ್ತಿಲ್ಲ.
 ನ್ಯಾಯಮೂರ್ತಿ ಲೋಕೂರ್

ದೇಶದಲ್ಲಿ ಇರುವ 9,589 ಶಿಶುಪಾಲನಾ ಸಂಸ್ಥೆಗಳಿವೆ. 1,596 ಶಿಶುಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸಂಖ್ಯೆ ಮೀತಿ ಮೀರಿದೆ. 97 ಜಿಲ್ಲೆಗಳಲ್ಲಿ ಶಿಶುಪಾಲನಾ ಸಂಸ್ಥೆಗಳಿಲ್ಲ. ಈ ನಿಲಯಗಳಲ್ಲಿ ಎಷ್ಟು ಮಕ್ಕಳ ಮೇಲೆ ದೈಹಿಕ ಹಲ್ಲೆ ಸೇರಿ ಇತರ ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತಿದೆ. ಈ ಎರಡು ಲಕ್ಷ ಮಕ್ಕಳನ್ನು ಹೊರತುಪಡಿಸಿ ದೇಶದಲ್ಲಿ ಇನ್ನು ಎಷ್ಟು ಮಕ್ಕಳು ನಾಪತ್ತೆಯಾಗಿದ್ದಾರೆ‌ ಎಂದು ಮಾಹಿತಿ ನೀಡುವಂತೆ ಸರ್ಕಾರಿ ಅಧಕಾರಿಗಳನ್ನು ಸುಪ್ರೀಂ ಕೋರ್ಟ್ ಸಮಜಾಷಿಸಿದೆ‌.

ಶಿಶುಪಾಲನಾ ಮಂದಿರಗಳ ಮೇಲೆ ನಿಗಾ ಇಡಲು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿ ರಚನೆ ಕುರಿತು ನ್ಯಾಯಪೀಠ ಪ್ರಸ್ತಾಪ ಮಾಡಿದ್ದು, ಕೇಂದ್ರದ ಸಲಹೆ, ಸೂಚನೆಗಳನ್ನು ಪಡೆಯಲು ಸಮಯ ನೀಡಿದೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ...

ದಿನದ ಸುದ್ದಿ9 hours ago

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ...

ದಿನದ ಸುದ್ದಿ17 hours ago

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ...

ದಿನದ ಸುದ್ದಿ1 day ago

ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಂ.ಎಂ.ಟಿ.ಎಂ 1, ಡಿಎಂಎಂ 20, ಸಿಒಪಿಎ 20, ವೆಲ್ಡರ್ 34 ಹಾಗೂ ರೋಬೊಟಿಕ್ಸ 12 ಖಾಲಿ ಇರುವ...

ದಿನದ ಸುದ್ದಿ1 day ago

ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ...

ದಿನದ ಸುದ್ದಿ2 days ago

ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು

ಸುದ್ದಿದಿನಡೆಸ್ಕ್:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು...

ದಿನದ ಸುದ್ದಿ4 days ago

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ...

ದಿನದ ಸುದ್ದಿ5 days ago

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ...

ದಿನದ ಸುದ್ದಿ5 days ago

KPSC | 2 ತಿಂಗಳೊಳಗೆ ಮರು ಪರೀಕ್ಷೆ

ಸುದ್ದಿದಿನಡೆಸ್ಕ್:ಇತ್ತೀಚಿನ ಕೆ.ಪಿ.ಎಸ್.ಸಿ. ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ, ಅಸಮರ್ಪಕ ಕನ್ನಡಾನುವಾದ ಹಿನ್ನೆಲೆ, ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ, 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ, ಕರ್ನಾಟಕ ಲೋಕ...

ದಿನದ ಸುದ್ದಿ5 days ago

ADITYA-L1 | ಇಸ್ರೋ ಆದಿತ್ಯ ಎಲ್-1 ನೌಕೆ ಉಡಾವಣೆಗೆ ಒಂದು ವರ್ಷ; ಸೂರ್ಯನ ಅಧ್ಯಯನದಲ್ಲಿ ಮಹತ್ವದ ಪ್ರಗತಿ

ಸುದ್ದಿದಿನಡೆಸ್ಕ್:ಇಸ್ರೋದಿಂದ ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೊಂಡು ಇಂದಿಗೆ ಒಂದು ವರ್ಷ ಪೂರೈಸಿದೆ. 2023ರ ಸೆಪ್ಟೆಂಬರ್ 2 ರಂದು ಉಡಾವಣೆಗೊಂಡಿರುವ ಎಲ್-1ನೌಕೆ ಕಕ್ಷೆ ತಲುಪಿದ್ದು, ಭೂಮಿಯಿಂದ ಸುಮಾರು...

Trending