Connect with us

ನೆಲದನಿ

ಕನ್ನಡ ಸಾಹಿತ್ಯದ ಬಂಡಾಯದ ಕಿಡಿ: ಅಲ್ಲಮಪ್ರಭು ಬೆಟ್ಟದೂರು ಬದುಕಿನ ಕಥನ

Published

on

ನ್ನಡ ಸಾಹಿತ್ಯ ಪರಂಪರೆಯು ಸುದೀರ್ಘವಾದ ಐತಿಹಾಸಿ ಹಿನ್ನಲೆಯನ್ನು ಒಳಗೊಂಡಿದೆ. ಇಂತಹ ಕನ್ನಡ ಸಾಹಿತ್ಯ ಪರಂಪರೆಯು ಕಾಲದಿಂದ ಕಾಲಕ್ಕೆ ವರ್ತಮಾನದ ತುರ್ತಿಗೆ ಪೂರಕವಾದ ನೆಲೆಯಲ್ಲಿ ತನ್ನ ಆಶಯಗಳನ್ನು ಅಭಿವ್ಯಕ್ತಿಸುವ ನೆಲೆಯಲ್ಲಿ ಬೆಳೆದುಬಂದಿದೆ. ಕನ್ನಡ ಸಾಹಿತ್ಯವು ತನ್ನಲ್ಲಿ ಮಡಿವಂತಿಕೆಯನ್ನು ಕಾಪಾಡಕೊಳ್ಳದೆ ಸಮಾಜಮುಖಿಯಾಗಿ ಸ್ಪಂದಿಸುತ್ತ ಬಂದಿದೆ. ಇದರ ಫಲವಾಗಿ ಈ ಸಾಹಿತ್ಯ ಪ್ರಕಾರವು ಕ್ರಿಸ್ತಪೂರ್ವದಿಂದ ಸಮಕಾಲೀನ ಸಂದರ್ಭದವರೆಗೆ ಹಲವಾರು ಅವಸ್ಥಾಂತಗಳ ಮೂಲಕ ತನ್ನ ಅಸ್ತಿತ್ವವನ್ನು ಕಾಯ್ದುಕೊಂಡು ಮುನ್ನಡೆದಿದೆ. ಹೀಗಾಗಿಯೇ ಪೂರ್ವದ ಹಳಹನ್ನಡ, ಹಳಗನ್ನಡ, ನಡುಗನ್ನಡ ಹಾಗೂ ಹೊಸಗನ್ನಡ ಎಂಬ ವಿವಿಧ ಕಾಲಘಟ್ಟಗಳನ್ನು ದಾಟುವ ಮೂಲಕ ತನ್ನ ಗಟ್ಟಿತನವನ್ನು ವಿಸ್ತರಿಸುತ್ತ ಶ್ರೀಮಂತ ಭಾಷೆಯಾಗಿ ಕಂಗೊಳಿಸುತ್ತಿದೆ. ಹೀಗೆ ಬೆಳೆದುಬಂದ ವಿವಿಧ ಅವಸ್ಥಾಂತರಗಳಲ್ಲಿ ನಮ್ಮ ಮುಂದಿರುವ ಹೊಸಗನ್ನಡವು ವಿಸ್ತ್ರøತ ಸ್ವರೂಪವನ್ನು ಪಡೆದುಕೊಂಡು ಮುನ್ನಡೆದಿದೆ. ಹೊಸಗನ್ನಡದಲ್ಲಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಹಾಗೂ ದಲಿತ ಸಾಹಿತ್ಯ ಎಂಬ ವಿಶಿಷ್ಟ ಪ್ರಕಾರಗಳ ಮೂಲಕವಾಗಿ ಕನ್ನಡ ಸಾಹಿತ್ಯವು ತನ್ನ ಅನನ್ಯತೆಯನ್ನು ಕಾಯ್ದುಕೊಂಡು ಬಂದಿದೆ. ಹೊಸಗನ್ನಡದ ಬಂಡಾಯ ಮತ್ತು ದಲಿತ ಸಾಹಿತ್ಯವು ವಿಶಿಷ್ಟವಾಗಿ ದನಿಯಿಲ್ಲದವರ ದನಿಯಾಗಿ, ನೆಲದ ನೋವುಗಳಿಗೆ ಸ್ಪಂದಿಸುವ ನೆಲೆಯಲ್ಲಿ ತನ್ನ ಗುಣ ಮತ್ತು ಸ್ವರೂಪಗಳಲ್ಲಿ ಬದಲಾವಣೆಯನ್ನು ಕಂಡುಕೊಂಡಿದೆ. ‘ಖಡ್ಗವಾಗಲಿ ಕಾವ್ಯ’ ಎಂಬ ಘೋಷವಾಕ್ಯದ ಮೂಲಕವಾಗಿ ಬಂಡಾಯ ಸಾಹಿತ್ಯವು ಸಾಮಾಜಿಕ ಅಸಮಾನತೆಯನ್ನು ವಿರೋಧಿಸಿ ಸಮಸಮಾಜದ ಕನಸ್ಸೊತ್ತು ಮುನ್ನಡೆಯಿತು. ಇಂತಹ ಬಂಡಾಯ ಸಾಹಿತ್ಯ ಪರಂಪರೆಗೆ ಕನ್ನಡದ ಹಲವಾರು ವಿಚಾರವಾದಿಗಳು ಹೆಗಲುಕೊಟ್ಟು ದುಡಿದಿದ್ದಾರೆ. ಅಂತಹ ವಿಚಾರವಾದಿಗಳಲ್ಲಿ ಅಲ್ಲಮಪ್ರಭು ಬೆಟ್ಟದೂರು ಅವರು ಒಬ್ಬರು.

ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಬೆಟ್ಟದೂರು ಎಂಬ ಗ್ರಾಮದಲ್ಲಿ ಶ್ರೀ ಚನ್ನಬಸವಪ್ಪ ಶ್ರೀಮತಿ ಅಮರಮ್ಮ ಇವರ ಮಗನಾಗಿ ದಿನಾಂಕ: 30 ಜುಲೈ 1951 ರಂದು ಜನಿಸಿದರು. ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರ ಕೌಟುಂಬಿಕ ಹಿನ್ನೆಲೆಯನ್ನು ಗಮನಿಸಿದರೆ, ಇವರದು ಸಾಮಾಜಿಕ ಹೋರಾಟದಿಂದ ಬಂದ ಕುಟುಂಬವಾಗಿದೆ. ಶ್ರೀಯುತರ ತಂದೆಯವರಾದ ಶ್ರೀ ಚನ್ನಬಸವಪ್ಪನವರು ರೈತ ಹೋರಾಟಗಾರರು ಹಾಗೂ ಚಿಂತಕರಾಗಿದ್ದು, ವಚನ ಸಾಹಿತ್ಯ ಹಾಗೂ ಶರಣ ಚಳವಳಿಯ ಬಗೆಗೆ ವಿಶೇಷವಾದ ಆಸಕ್ತಿಯನ್ನು ಮೈಗೂಡಿಸಿಕೊಂಡಿದ್ದರು. ಶರಣರ ವಿಚಾರಗಳನ್ನು ಕುರಿತಂತೆ ‘ಸಕಲ ಜೀವ ಪ್ರೇಮ’, ‘ಸಲ್ಲಲಿತ ಸನ್ಮಾರ್ಗ’ ಎಂಬ ವೈಚಾರಿಕ ಕೃತಿಗಳನ್ನು ರಚಿಸಿದ್ದರು. ಈ ಸಲ್ಲಲಿತ ಸನ್ಮಾರ್ಗ ಎಂಬ ಕೃತಿಯೊಳಗೆ ಶರಣರ ಚಳವಳಿಯನ್ನು ‘ವಚನ ಧರ್ಮ’ ಎಂದು ಕರೆಯುವ ವಾಡಿಕೆಯನ್ನು ವಿರೋಧಿಸಿ, ವಚನ ಮಾರ್ಗ ಅಥವಾ ಶರಣ ಮಾರ್ಗ ಎಂದು ಪ್ರತಿಪಾದಿಸಿದ್ದಾರೆ. ಇವರು ರಚಿಸಿರುವ ಈ ಕೃತಿಗಳಿಗೆ ಹಲವಾರು ಪ್ರಶಸ್ತಿ ಹಾಗೂ ಗೌರವ ಪುರಸ್ಕಾರಗಳು ಕೂಡ ಲಭಿಸಿವೆ. ಹಾಗೆಯೇ ಶ್ರೀಯುತರ ಚಿಕ್ಕಪ್ಪನವರಾದ ಶ್ರೀ ಶಂಕರೆಗೌಡರು ನಂದಾಲಾಲ್ ಬಸು ಎಂಬ ಹೆಸರಾಂತ ಚಿತ್ರಕಲಾವಿದರ ಶಿಷ್ಯರಾಗಿ ಚಿತ್ರಕಲೆಯನ್ನು ಕರಗತಮಾಡಿಕೊಂಡಿದ್ದರು. ನಂತರದಲ್ಲಿ ಗಾಂಧೀಜಿಯವರು ತಮ್ಮ ಕೊನೆಯ ದಿನಗಳನ್ನು ಕಳೆಯುವ ಸಂದರ್ಭದಲ್ಲಿ ಅವರ ಜೊತೆಗಿದ್ದು, ಅವರ ಜೀವನ ಕುರಿತ ಭಿತ್ತಿಚಿತ್ರಗಳನ್ನು ರಚಿಸಿದ್ದವರು. ಹಾಗೆಯೇ ಇವರು ಲಾಲ್ ಬಹಾದ್ದೂರ್ ಶಾಸ್ತ್ರಿಗಳಿಗೆ ಅತ್ಯಂತ ಪ್ರಿಯವಾದವರು. ಇಷ್ಟೊಂದು ಹೆಸರು ಮಾಡಿದ್ದರು ಸಹ ಕಲಾಲೋಕದಿಂದ ವಿಮುಖರಾಗಿ ಕೃಷಿ ಕಾಯಕದಲ್ಲಿ ತಲ್ಲಿನರಾಗಿ ಬಸವ ಮಾರ್ಗದಲ್ಲಿ ‘ಕಾಯಕವೇ ಕೈಲಾಸ’ವೆಂದು ನಡೆದರು. ಇವರೆಲ್ಲರ ಪ್ರೇರಣೆ ಮತ್ತು ಪ್ರಭಾವಗಳು ಶ್ರೀಯುತ ಅಲ್ಲಮಪ್ರಭು ಅವರ ಮೇಲಾಗಿದ್ದವು. ಹೀಗಾಗಿ ಕಾಯಕ ಮಾರ್ಗ, ಹೋರಾಟ ಮಾರ್ಗಗಳು ಬಾಲ್ಯದ ದಿನಗಳಿಂದಲೂ ಇವರ ರಕ್ತದೊಳಗೆ ಕರಗತವಾಗಿದ್ದವು. ಬಾಲ್ಯದ ಸಂದರ್ಭದಲ್ಲಿ ತಮ್ಮ ಕುಟುಂಬದ ಹಿರಿಯರು ನಡುಗನ್ನಡದ ಪ್ರಭುಲಿಂಗಲೀಲೆ ಮತ್ತು ಕುಮಾರವ್ಯಾಸ ಭಾರತವನ್ನು ಹಾಡುತ್ತಿದ್ದರೆ, ಅವುಗಳನ್ನು ಓದುವ ಹವ್ಯಾಸವನ್ನು ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ಮೈಗೂಡಿಸಿಕೊಂಡಿದ್ದರು.

ಅಲ್ಲಮಪ್ರಭು ಬೆಟ್ಟದೂರು ಅವರು ವಿದ್ಯಾರ್ಥಿ ದೆಸೆಯಿಂದಲೂ ಹೋರಾಟದ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದರು. ಹೀಗಾಗಿ ಬಂಡಾಯ ಸಾಹಿತ್ಯ ಪ್ರಕಾರದ ಅಡಿಯಲ್ಲಿ ತಮ್ಮ ದನಿಯನ್ನು ಎತ್ತಿಹಿಡಿದರು. ಧಾರವಾಡದಲ್ಲಿ ಪದವಿ ಶಿಕ್ಷಣವನ್ನು ಅಧ್ಯಯನ ಮಾಡುವ ಸಂದರ್ಭದಲ್ಲಿ ಶ್ರೀಯುತ ಚಂಪಾ ಅವರ ಪ್ರೇರಣೆಗೊಳಗಾಗಿ ಜೆ.ಪಿ ಚಳವಳಿಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಆಗ ಚಂಪಾ ಅವರು ಜೆ.ಪಿ ಚಳುವಳಿಯ ರಾಜ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಿದರೆ, ಅಲ್ಲಮಪ್ರಭು ಅವರು ರಾಯಚೂರು ಭಾಗದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಸಂಚಾಲಕರಾಗಿ ಚಳವಳಿಯನ್ನು ಮುನ್ನಡೆಸಿದರು. ಹಾಗೆಯೇ 1979 ರ ಅವಧಿಯಿಂದಲೂ ಬಂಡಾಯ ಸಾಹಿತ್ಯಕ್ಕೆ ಬೆನ್ನೆಲುಬಾಗಿ ನಿಂತ ಶ್ರೀಯುತರು ಹಲವಾರು ಜನಪರ ಮತ್ತು ಪ್ರಗತಿಪರ ಹೋರಾಟಗಳಲ್ಲಿ ತಮ್ಮ ಸಹಭಾಗಿತ್ವವನ್ನು ವ್ಯಕ್ತಪಡಿಸುತ್ತ ಬಂದಿದ್ದಾರೆ. ಇವರ ಪ್ರಮುಖ ಹೋರಾಟಗಳೆಂದರೆ, ‘ಕುದುರೆ ಮೋತಿ ಹೋರಾಟ’, ‘ಗೋಕಾಕ ಚಳವಳಿ’, ‘ಹೈದ್ರಾಬಾದ್ ಕರ್ನಾಟಕದ 371 ಜೆ’ ವಿಧಿಯ ಜಾರಿಗಾಗಿ ಹೋರಾಟ, ‘ಪ್ರತ್ಯೇಕ ಕೊಪ್ಪಳ ಜಿಲ್ಲಾ ಹೋರಾಟ’ ಹೀಗೆ ಹಲವಾರು ಜನಪರವಾದ ಚಳವಳಿಗಳ ಮೂಲಕವಾಗಿ ಸಮಸಮಾಜದ ಕನಸ್ಸೊತ್ತು ಮುನ್ನಡೆಯುತ್ತಿದ್ದಾರೆ. ಇವರ ಹೋರಾಟಗಳಲ್ಲಿ ‘ಕುದುರಿ ಮೋತಿ ಪ್ರಕರಣ’ವು ಅತ್ಯಂತ ಮಹತ್ವದ ಹೋರಾಟವಾಗಿದೆ. 11 ಜೂನ್ 1985 ರಲ್ಲಿ ಮಠಾಧೀಶನೊಬ್ಬ ತಳಸಮುದಾಯದ ಪಾರ್ವತಮ್ಮ ಮತ್ತು ಮುಸ್ಲಿಂ ಸಮುದಾಯದ ಹುಸೇನ್‍ಬಿ ಎಂಬುವವರನ್ನು ಅಪಮಾನಿಸಿ, ಬೆತ್ತಲಗೊಳಿಸಿ ಊರಿನ ತುಂಬ ಮೆರವಣಿಗೆ ಮಾಡಿಸಿದ್ದ. ಈ ಪ್ರಕರಣದ ಕುರಿತು ಸಮಗ್ರವಾದ ಮಾಹಿತಿಯನ್ನು ಕಲೆಹಾಕಿ, ಇದರ ವಿರುದ್ಧ ಹೋರಾಟವನ್ನು ಮಾಡಿದ ಕೀರ್ತಿಯು ಶ್ರೀಯುತರಿಗೆ ಸಲ್ಲುತ್ತದೆ. ಇವರು ಈ ಪ್ರಕರಣವನ್ನು ಗಂಭೀರವಾಗಿ ಕೈಗೆತ್ತಿಕೊಳ್ಳದಿದ್ದರೆ ಈ ಪ್ರಕರಣವನ್ನು ಮುಚ್ಚಿಹಾಕುವ ತಂತ್ರಗಳು ನಡೆದಿದ್ದವು. ಆದರೆ ಇಲ್ಲಿ ಅನ್ಯಾಯಕ್ಕೊಳಗಾದ ದಮನಿತ ಮತ್ತು ಅಸಹಾಯಕ ಸಮುದಾಯಗಳ ದನಿಯಾಗಿ ನಿಂತು ಹೋರಾಟ ಮಾಡಿದರು. ಇದರಿಂದ ಮೂಲಭೂತವಾದಿಗಳು ಹಾಗೂ ಉನ್ನತ ವರ್ಗದವರ ವಿರೋಧಕ್ಕೂ ಗುರಿಯಾಗಿ, ಮಠಾಧೀಶನ ಅನುಯಾಯಿಗಳಿಂದ ಹಲ್ಲೆಗಳು ಕೂಡ ಇವರ ಮೇಲೆ ನಡೆದವು. ಸಾಕಷ್ಟು ಪ್ರಾಣ ಬೆದರಿಕೆಗಳು ಕೇಳಿಬಂದವು. ಆದರೆ ಇದಾವುದನ್ನು ಲೆಕ್ಕಿಸದೆ ಜನಪರವಾದ ನೆಲೆಯಲ್ಲಿ ತಮ್ಮ ಹೋರಾಟವನ್ನು ಇಂದಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಇಂದಿಗೂ ತಮ್ಮ ಗುರುಗಳಾದ ಎಂ.ಎಂ ಕಲುಬುರ್ಗಿ, ಚಂಪಾ ಅವರು ಹಾಕಿಕೊಟ್ಟ ಮಾರ್ಗದಲ್ಲಿಯೇ ಮುನ್ನಡೆಯುತ್ತಿದ್ದಾರೆ.

ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ಕೇವಲ ಹೋರಾಟಗಾರರು ಮಾತ್ರವಲ್ಲದೆ ಹೆಸರಾಂತ ಬಂಡಾಯ ಸಾಹಿತಿಗಳು ಹೌದು. ಸಾಮಾಜಿಕ ಅಸಮಾನತೆ, ಅಸ್ಪøಶ್ಯತೆ, ಕೋಮುವಾದ, ಜಾತಿವಾದದ ವಿರುದ್ಧವಾಗಿ ತಮ್ಮ ದನಿಯನ್ನು ಎತ್ತುವ ಮೂಲಕ ಸಮಸಮಾಜ ಮತ್ತು ಶಾಂತಿಯುತ ಸಮಾಜದ ಕನಸು ಕಂಡವರು. ಸುಮಾರು 80 ರ ದಶಕದಲ್ಲಿ ಭಾರತದ ರಾಜಕೀಯದಲ್ಲಿ ಉಂಟಾದ ಅರಾಜಕತೆಯ ವಿರುದ್ಧ ಬಂಡಾಯದ ನೆಲೆಯಲ್ಲಿ ಜೆ.ಪಿ ಚಳವಳಿಗೆ ಹೆಗಲು ಕೊಟ್ಟು ನಿಂತವರು. ಇವರ ಸಾಹಿತ್ಯಿಕ ಬರಹಗಳಲ್ಲೂ ಇದೇ ಬಂಡಾಯದ ದನಿ ಪ್ರಮುಖವಾಗಿ ಎದ್ದು ಕಾಣುತ್ತದೆ. ಹಾಗೆಯೇ ಕೋಮುವಾದವನ್ನು ಸೃಷ್ಟಿಸುತ್ತಿರುವ ಬಿಜೆಪಿ ಹಾಗೂ ಆರ್.ಎಸ್.ಎಸ್ ಸಿದ್ಧಾಂತಗಳನ್ನು ವಿರೋಧಿಸುವ ನೆಲೆಯಲ್ಲಿ 1980ರ ಸುಮಾರಿನಲ್ಲಿಯೇ ಬಂಡಾಯದ ಕಳಹಳೆಯನ್ನು ಮೊಳಗಿಸಿದ ಕೀರ್ತಿಯು ಶ್ರೀಯುತರಿಗೆ ಸಲ್ಲುತ್ತದೆ. ಅಂದು ವಾಜಪೇಯಿಯವರ ಅಧ್ಯಕ್ಷತೆಯಲ್ಲಿ ಸಿದ್ಧಗೊಂಡ ಬಿಜೆಪಿಯ ಸಂಘಪರಿವಾರ ನೀತಿಯನ್ನು ಅನಾವರಣಗೊಳಿಸುವ ಇವರ ಕವಿತೆಯೊಂದು ಹೀಗಿದೆ;

ವಾಜಪೇಯ ಭಾಜಪೇಯ
ಹೊಚ್ಚ ಹೊಸ ಪೇಯ
ಕುಡಿಯಿರಯ್ಯ, ಕುಡಿಯದಿದ್ದರೆ
ಮೂಗ ಹಿಡಿದು ಕುಡಿಸಲಾಗುವುದು
ಕೇಳಿರಯ್ಯ, ಕೇಳ್ ಈರಯ್ಯ…

ಎಂದು ಗುಡುಗುವ ಅಲ್ಲಮಪ್ರಭು ಅವರು, ಅಂದಿನ ಬಿಜೆಪಿ ಮತ್ತು ಆರ್.ಎಸ್.ಎಸ್ ಮೂಲಭೂತವಾದಿ ಧೋರಣೆಗಳನ್ನು ವಿಡಂಬಿಸುವ ಇವರ ಮತ್ತೊಂದು ಕವಿತೆ ಹೀಗಿದೆ;

ಕುಂಕುಮದ ಕಲಿಗಳು ದೇಶವಾಳುವರು ಕೇಳಿರಣ್ಣ
ತುಪ್ಪದ ತಲೆಗಳು ರಾಜ್ಯವಾಳುವರು ಕೇಳಿರಣ್ಣ
ಹತ್ತು ವರ್ಷದಾಗ ಮೀನು ಬೀಳುತಾವ ತಿಳಿಯಿರಣ್ಣ

ಎಂಬ ಕವಿತೆಯನ್ನು ಹಿಂದೆ ಶರಣರ ವಚನಗಳ ಆಶಯಗಳನ್ನು ಸಾರುವ ಜಂಗಮರ ಧಾಟಿಯಲ್ಲಿ ವ್ಯಕ್ತಪಡಿಸಿದ್ದರು. ಅಂದರೆ ಸುಮಾರು 80 ರ ದಶಕದಲ್ಲಿ ಸಾರಿದ ಇವರ ಕವಿತೆಯ ಆಶಯವು ಇಂದಿಗೆ ಸತ್ಯವಾಗಿದೆ. ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬಂದರೆ ಏನೆಲ್ಲ ಅನಾಹುತಗಳಾಗಬಹುದು ಎಂಬುದನ್ನು ಅಂದೇ ಗ್ರಹಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ತರುವಾಯದಲ್ಲಿ ಕೋಮುವಾದ, ಭಯೋತ್ಪಾದನೆ, ವಿಚಾರವಾದಿಗಳ ಹತ್ಯೇ, ಅತ್ಯಾಚಾರದಂತಹ ಹೇಯ್ಯ ಕೃತ್ಯಗಳು ಸಹಜ ಕೃತ್ಯಗಳಂತೆ ನಡೆಯುತ್ತಿವೆ. ಸರ್ವಮಾನವರನ್ನು ಸಮಾನವಾಗಿ ಕಾಣುವ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಘಂಟಾಘೋಷ ವಾಕ್ಯಗಳು ಎದೆಗಾರಿಕೆಯಿಂದ ಹೊರಬರುತ್ತಿವೆ. ಅಷ್ಟೇ ಅಲ್ಲದೆ ಸಂವಿಧಾನವನ್ನು ಸುಡುವುದರ ಮೂಲಕ ನಾವು ಸಂವಿಧಾನ ವಿರೋಧಿಗಳು ಎಂಬುದನ್ನು ಸಮರ್ಥಿಸಿಕೊಳ್ಳುವ ಪುಂಡಾಟಿಕೆಯನ್ನು ಬಿಜೆಪಿ ಮತ್ತದರ ಸಂಘಪರಿವಾರವು ಪ್ರದರ್ಶಿಸುತ್ತಿದೆ. ಆದ್ದರಿಂದ ಶ್ರೀಯುತ ಅಲ್ಲಮಪ್ರಭು ಅವರು ಅಂದು ನುಡಿದ ಕವಿವಾಣಿಯನ್ನು ಇದೊಂದು ಭವಿಷ್ಯವಾಣಿ ಎಂದರೆ ತಪ್ಪಾಗಲಾರದು. ಹೀಗೆ ಮೂಲಭೂತವಾದಿಗಳು ಮತ್ತು ಸನಾತನವಾದಿಗಳ ವಿರೋಧವನ್ನು ಕಟ್ಟಿಕೊಂಡೆ ಬಂಡಾಯ ಸಾಹಿತ್ಯ ಮತ್ತು ಜನಪರವಾದ ಚಳವಳಿಗಳನ್ನು ಮುಂದುವರೆಸಿಕೊಂಡು ಬಂದವರು. ಇವರ ಪ್ರಮುಖ ಕವನ ಸಂಕಲನಗಳೆಂದರೆ, ‘ಇದು ನನ್ನ ಭಾರತ’, ಕುದುರಿ ಮೋತಿ ಮತ್ತು ನೀಲಗಿರಿ’, ‘ಕೆಡಹಬಲ್ಲರು ಅವರು ಕಟ್ಟಬಲ್ಲೆವು ನಾವು’ ಇವು ಅವರ ಕವನ ಸಂಕಲನಗಳು. ‘ಗುಲಗಂಜಿ’ ಎಂಬ ಚುಟುಕು ಕವನ ಸಂಕಲನವನ್ನು ಪ್ರಕಟಿಸಿದ್ದಾರೆ. ಇದರ ಜೊತೆಯಲ್ಲಿ ‘ತಳಮಳ’ ಎಂಬ ಪತ್ರಿಕೆಯಲ್ಲಿ ‘ಪ್ರಚಲಿತ’ ಎಂಬ ಅಂಕಣವನ್ನು ಬರೆದು, ಈ ಅಂಕಣಗಳನ್ನು ‘ವರ್ತಮಾನ’ ಎಂಬ ಕೃತಿಯ ಮೂಲಕ ಸಂಕಲಿಸಿದ್ದಾರೆ. ಇಷ್ಟೇ ಅಲ್ಲದೆ ಹಲವಾರು ಸಂಪಾದನ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೀರ್ತಿಗೆ ಶ್ರೀಯುತರು ಪಾತ್ರರಾಗಿರುತ್ತಾರೆ. ಇವರ ಈ ಸಾಹಿತ್ಯ ಮತ್ತು ಹೋರಾಟದ ಹಾದಿಯನ್ನು ಗಮನಿಸಿ ಹಲವಾರು ಗೌರವ, ಪುರಸ್ಕಾರ ಮತ್ತು ಪ್ರಶಸ್ತಿಗಳು ಇವರ ಮುಡಿಗೇರಿವೆ. ಇವುಗಳಲ್ಲಿ ಕೆಲವು ಹೀಗಿವೆ; ಶಕ್ತಿನಗರದ ಕನ್ನಡ ಸಂಘದಿಂದ ‘ರಾಜ್ಯೋತ್ಸವ ಪ್ರಶಸ್ತಿ’, ಕರಾವಳಿಯ ಸಾಂಸ್ಕøತಿಕ ಸಂಘಟನೆಯಿಂದ ‘ಕರಾವಳಿ ಪ್ರಶಸ್ತಿ’, ಕೊಪ್ಪಳದ ಸ್ಥಳೀಯ ಸಂಘಟನೆಗಳಿಂದ ‘ಕನಕ ಪ್ರಶಸ್ತಿ’ಗಳು ಇವರ ಮುಡಿಗೇರಿವೆ. ಸಾಹಿತ್ಯದ ಮೇಲಿನ ವಿಶೇಷವಾದ ಕಾಳಜೀಯಿಂದಾಗಿ ಮತ್ತು ಸಾಹಿತಿಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಬೇಕೆಂಬ ಕನಸ್ಸೊತ್ತು ಸಮಾನ ಮನಸ್ಕರೊಂದಿಗೆ ಸೇರಿ ‘ತಿರುಳ್ಗನ್ನಡ ಸಾಹಿತಿಗಳ ಸಹಕಾರ ಸಂಘ’ ಎಂಬ ಸಂಸ್ಥೆಯೊಂದನ್ನು ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಭಾರಿಗೆ ಸ್ಥಾಪಿಸುವ ಮೂಲಕ ಸಾಹಿತ್ಯ ವಲಯಕ್ಕೆ ಮಾದರಿಯಾಗಿದ್ದಾರೆ. ಈ ಸಂಸ್ಥೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ಸಹಕಾರಿ ಸಂಘದ ಮೂಲಕ ಕೃತಿ ಪ್ರಕಟಣೆ ಮಾಡುವ ಲೇಖಕರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಕೈಗೊಳ್ಳಲಾಗಿದೆ.

ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿ ಕೊಪ್ಪಳದಲ್ಲಿ ಸೇವೆಸಲ್ಲಿಸಿ, ಪ್ರಾಂಶುಪಾಲರಾಗಿ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ಇದರ ಜೊತೆಯಲ್ಲಿ ಚಂಪಾ ಅವರು ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ದ ಅಧ್ಯಕ್ಷರಾದ ಸಂದರ್ಭದಲ್ಲಿ ಅಲ್ಲಮಪ್ರಭು ಅವರು ಸದಸ್ಯರಾಗಿ, ನಂತರ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಸೇವೆಸಲ್ಲಿಸಿರುತ್ತಾರೆ. ಇಂದು ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರು ಮೂಲತಃ ಕೃಷಿಮೂಲ ಪರಂಪರೆಯಿಂದ ಬಂದವರಾಗಿದ್ದು, ‘ಕಾಯಕವೇ ಕೈಲಾಸ’ ಎಂಬ ಶರಣ ಮಾರ್ಗದಲ್ಲಿ ಮುನ್ನಡೆದವರು. ಹೀಗಾಗಿ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಆಸಕ್ತಿಯಿಂದಾಗಿ ಕೊಪ್ಪಳದ ಸಮೀಪದಲ್ಲಿ ಜಮೀನು ಖರೀದಿಸಿ ವ್ಯವಸಾಯಯಲ್ಲಿ ತಲ್ಲಿನರಾಗಿದ್ದಾರೆ. ಇವರ ಏಕೈಕ ಪುತ್ರರಾದ ಪುಟ್ಟರಾಜ್ ಪಾಟೀಲ್ ಅವರು ಕೂಡ ಸಾವಯವ ಕೃಷಿಯಲ್ಲಿ ತಲ್ಲಿನರಾಗಿದ್ದಾರೆ. ಪುಟ್ಟರಾಜ್ ಅವರು ಗೋಕಾಕ್ ಚಳವಳಿಯ ಸಂದರ್ಭದಲ್ಲಿ ಜನಿಸಿದ ಕಾರಣದಿಂದಾಗಿ, ಅದೇ ಚಳವಳಿಯಲ್ಲಿ ತಲ್ಲಿನರಾಗಿದ್ದ ಅಲ್ಲಮಪ್ರಭು ಅವರು ತಮ್ಮ ಮಗನಿಗೆ ಗೋಕಾಕ್ ಚಳವಳಿಯ ಪ್ರಮುಖ ರುವಾರಿಗಳಾದ ಪಾಟೀಲ್ ಪುಟ್ಟಪ್ಪ, ರಾಜ್‍ಕುಮಾರ್ ಹಾಗೂ ಚಂದ್ರಶೇಖರ್ ಪಾಟೀಲ್ ಅವರ ಹೆಸರುಗಳನ್ನು ಸಂಯೋಜಿಸಿ ‘ಪುಟ್ಟರಾಜ್ ಪಾಟೀಲ್’ ಎಂದು ನಾಮಕರಣ ಮಾಡಿದ್ದಾರೆ. ಇದು ಶ್ರೀಯುತರು ತಮ್ಮ ಗುರುಪರಂಪರೆ ಮತ್ತು ಹೋರಾಟ ಮಾರ್ಗದೊಂದಿಗೆ ಇವರಿಗಿರುವ ನಂಟನ್ನು ಎತ್ತಿಹಿಡಿಯುತ್ತದೆ. ಇಂದು ಶ್ರೀಯುತ ಅಲ್ಲಮಪ್ರಭು ಬೆಟ್ಟದೂರು ಅವರು ತಮ್ಮ ಶ್ರೀಮತಿ ಮಂಜುಳಾ, ಮಗ ಪುಟ್ಟರಾಜ್ ಪಾಟೀಲ್ ಹಾಗೂ ಮೊಮ್ಮಕ್ಕಳೊಂದಿಗೆ ಸರಳವಾದ ಜೀವನ ನಡೆಸುತ್ತಿದ್ದಾರೆ. ಇದರ ಜೊತೆಗೆ ಸಮಾಜಿಕ ಕಾಳಜಿಯೊತ್ತು ಹೋರಾಟ ಹಾಗೂ ವೈಚಾರಿಕ ಚಿಂತನೆಯ ಬೀಜಗಳನ್ನು ನಾಡಿಗೆ ಬಿತ್ತರಿಸುತ್ತಿದ್ದಾರೆ. ಇವರ ಈ ಬದುಕು ಮತ್ತು ಹೋರಾಟ ಯಶಸ್ವಿನೆಡೆಗೆ ಸಾಗಲಿ ಎಂಬುದು ನಮ್ಮೆಲ್ಲರ ಹಾರೈಕೆ.

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

Published

on

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.

ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ

ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.

ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.

‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.

‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.

ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ

ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.

ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ...

ದಿನದ ಸುದ್ದಿ2 days ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ2 days ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

ದಿನದ ಸುದ್ದಿ3 days ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

ದಿನದ ಸುದ್ದಿ3 days ago

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ: ನದಿ ದಂಡೆಯ ಸಾರ್ವಜನಿಕರು, ರೈತರಿಗೆ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ: ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿ ಪಾತ್ರದ ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರನ್ನು ಪೂರೈಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ...

ದಿನದ ಸುದ್ದಿ3 days ago

ಶಿಕ್ಷಕರು, ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್‌ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್‌ಲೈನ್ ವಂಚನೆಗಳ ಕುರಿತು...

ದಿನದ ಸುದ್ದಿ4 days ago

ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?

ಡಾ. ಗಿರೀಶ್ ಕುಮಾರ್ ಗೌಡ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ನಾಪತ್ತೆ. ಲಾರಿಗಳ ಮಾಲೀಕರೊಂದಿಗೆ ಶ್ಯಾಮಿಲು. ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್...

ಅಂಕಣ5 days ago

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ...

ದಿನದ ಸುದ್ದಿ5 days ago

ಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ

ಸುದ್ದಿದಿನ,ದಾವಣಗೆರೆ:ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಸ್‌ಜೆಎಂ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಶಿವರಾಜಕುಮಾರ್ ಮಂಡಿಸಿದ ‘ಪ್ರಧಾನ ಮಂತ್ರಿ ಜನಧನ ಯೋಜನಾ ಆಯ್ಯಂಡ್ ಫೈನಾನ್ಸಿಯಲ್...

ದಿನದ ಸುದ್ದಿ7 days ago

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು. ಚಲನಚಿತ್ರ ರಂಗ – 2005ರಲ್ಲಿ ‘ಬಾಯ್...

Trending