ದಿನದ ಸುದ್ದಿ
ಇ-ಕಾಮರ್ಸ್ ಡ್ರೋಣ್ ಬಳಕೆಗೆ ಅನುಮತಿ; ಇಂಗ್ಲಿಷ್ ಗೊತ್ತಿದ್ರೆ ಮಾತ್ರ ಪರ್ಮಿಷನ್
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/08/1535502913008.jpeg&description=ಇ-ಕಾಮರ್ಸ್ ಡ್ರೋಣ್ ಬಳಕೆಗೆ ಅನುಮತಿ; ಇಂಗ್ಲಿಷ್ ಗೊತ್ತಿದ್ರೆ ಮಾತ್ರ ಪರ್ಮಿಷನ್', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/08/1535502913008.jpeg&description=ಇ-ಕಾಮರ್ಸ್ ಡ್ರೋಣ್ ಬಳಕೆಗೆ ಅನುಮತಿ; ಇಂಗ್ಲಿಷ್ ಗೊತ್ತಿದ್ರೆ ಮಾತ್ರ ಪರ್ಮಿಷನ್', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್: ಆನ್ಲೈನ್ನಲ್ಲಿ ಏನಾದ್ರು ಆರ್ಡರ್ ಮಾಡಿದರೆ ಇದನ್ನು ನಿಮಗೆ ತಲುಪಿಸಲು ಇನ್ಮುಂದೆ ನೀವು ಮನೆ ಬಾಗಿಲಿನಲ್ಲಿ ಡೆಲಿವರಿ ಬಾಯ್ ಬದಲು
ಡ್ರೋಣ್.ಗಾಗಿ ಕಾಯಬೇಕಾಗುತ್ತದೆ. ನಾಗರಿಕ ವಿಮಾನಯಾನ ಇಲಾಖೆಯು ಡ್ರೋಣ್ ನೀತಿ ಜಾರಿಗೆ ತಂದಿದ್ದು, ಕಮರ್ಷಿಯಲ್ ಬಳಕೆಗಾಗಿ ಅವಕಾಶ ನೀಡಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳುವ ಇ- ಕಾಮರ್ಸ್ ಕಂಪನಿಗಳು ಡ್ರೋಣ್ ಬಳಸಿಕೊಂಡು ತಮ್ಮ ಉತ್ಪನ್ನ ಮಾರಾಟ ಮಾಡುವ ಸಾಧಗಯತೆ ಹೆಚ್ಚಾಗಿದೆ. ಇದರೊಂದಿಗೆ ಶೀಘ್ರ ಗ್ರಾಹಕರ ತಲುಪಿ ತಮ್ಮ ವಹಿವಾಟು ಹೆಚ್ಚಿಸಿಕೊಳ್ಳಲಿವೆ.
ಕೇಂದ್ರ ಸರ್ಕಾರ ವಿಮಾನಯಾನ ಇಲಾಖೆ ಇ- ಕಾಮರ್ಸ್ ಕಂಪನಿಗಳು ಡ್ರೋಣ್ ಬಳಕೆಯ ಯೋಜನೆಗೆ ಸಹಿ ಹಾಕಿದ್ದು, ಡಿಸೆಂಬರ್ ನಂತರ ಕಂಪನಿಗಳು ಇದರ ಪಡರದುಕೊಳ್ಳಲಿವೆ.
ಇಂಗ್ಲಿಷ್ ಗೊತ್ತಿದ್ರೆ ಮಾತ್ರ ಪರ್ಮಿಷನ್
ಸರ್ಕಾರ ರಚಿಸಿರುವ ಡ್ರೋಣ್ ನೀತಿಯಲ್ಲಿ ಡ್ರೋಣ್ ಗಳನ್ನು ಐದು ಕ್ಯಾಟಗರಿಗಳಾಗಿ ವಿಂಗಡಿಸಿವೆ. ನ್ಯಾನೋ ಕ್ಯಾಟಗರಿಯಲ್ಲಿ 250ಗ್ರಾಂರಿಂದ 150 ಕೆಜಿ ತೂಕದವರೆಗಿನ ಡ್ರೋಣ್, ಮಕ್ಕಳು ಆಟಿಕೆಯಾಗಿ ಬಳಸುತ್ತಿರುವ 250ರಿಂದ 2 ಕೆಜಿ ತೂಕದ ಮೈಕ್ರೋ ಡ್ರೋಣ್ ಗಳನ್ನು ಬಳಸಿಕೊಳ್ಳಲು ಅವಕಾಶ ನೀಡಿದೆ. ಎಲ್ಲ ಡ್ರೋಣ್ ಬಳಕೆದಾರರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಯುನಿಕ್ ಐಡೆಂಟಿಫಿಕೇಷನ್ ನಂಬರ್ (UIN) ನೀಡಲಿದೆ. ಡ್ರೋಣ್ ಬಳಕೆದಾರರಿಗೆ 18 ವರ್ಷ ವಯಸ್ಸಾಗಿರಬೇಕು. ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದು, ಇಂಗ್ಲಿಷ್ ಜ್ಞಾನ ಹೊಂದಿರಬೇಕು.
ನ್ಯಾನೋ, ಮೈಕ್ರೋ ವಿಧದಲ್ಲಿ ಐದು ಕ್ಯಾಟಗರಿ
ರಿಮೋಟ್ ಪೈಲೆಟೆಡ್ ಏರ್ಕ್ರಾಫ್ಟ್ ಸಿಸ್ಟಮ್ (RPAS) ಚಾಲಿತ ನ್ಯಾನೋ ಡ್ರೋಣ್.ಗಳಿಗೆ ಅನ್ ಮ್ಯಾನ್ಡ್ ಏರ್ಕ್ರಾಫ್ಟ್ ಆಪರೇಟರ್ ಪರ್ಮಿಟ್ (UAOP) ಪರವಾನಿಗೆ ಅಗತ್ಯವಿಲ್ಲ. 50 ಅಡಿ ಎತ್ತರದಲ್ಲಿ ಹಾರಾಟ ಮಾಡುವಂಥವು. 200 ಅಡಿ ಎತ್ತರದಲ್ಲಿ ಕಣ್ಣಿಗೆ ಕಾಣುವ ಅಂತರದಲ್ಲಿ ಹಗಲು ವೇಳೆ ಹಾರಾಟ ಮಾಡುವ ಡ್ರೋಣ್ ಗಳಿಗೆ ಸೆಕ್ಯುರಿಟಿ ಮತ್ತು ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿಯ ಪರವಾನಗಿ ಅಗತ್ಯವಿದೆ. 400ಅಡಿ ಎತ್ತರದವರೆಗೆ ಮಾತ್ರ ಹಾರಾಟ ಮಾಡಬಹುದಾಗಿದೆ.
ನೋ ಫ್ಲೈಯಿಂಗ್ ಜೋನ್ ಹಾರಾಡುವಂತಿಲ್ಲ
ದೇಶದಲ್ಲಿ ಕೆಲವೊಂದು ಪ್ರದೇಶಗಳನ್ನು ‘ನೋ ಫ್ಲೈಯಿಂಗ್ ಜೋನ್’ ಎಂದು ಗುರುತಿಸಿರುವ ಕಡೆ ಹಾರಾಟ ಮಾಡುವಂತಿಲ್ಲ. ಅವುಗಳೆಂದರೆ, ಏರ್ಪೋರ್ಟ್, ಅಂತಾರಾಷ್ಟ್ರೀಯ ಗಡಿಭಾಗ, ದೆಹಲಿಯ ವಿಜಯ್ ಚೌಕ್, ಎಲ್ಲಾ ರಾಜ್ಯಗಳ ರಾಜ್ಯ ಕಾರ್ಯದರ್ಶಿಗಳ ಕಚೇರಿ, ಸ್ಟ್ರಟೆಜಿಕ್ ಲೋಕೇಷನ್, ಮಿಲಿಟರಿ ಸ್ಥಳಗಳಲ್ಲಿ ಹಾರಾಟ ಮಾಡುವಂತಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ5 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

