Connect with us

ರಾಜಕೀಯ

ಯುದ್ಧೋನ್ಮಾದ ಹೆಮ್ಮೆಯ ಅಮಲಿನ ವಿಲಕ್ಷಣ ಅಲೆ

Published

on

ಸುದ್ದಿದಿನ ವಿಶೇಷ : ಇಬ್ಬರ ನಡುವೆ ಜಗಳವಾಗುತ್ತದೆ. ಕೈ ಕೈ ಮಿಲಾಯಿಸಿ ಒಬ್ಬರನ್ನೊಬ್ಬರು ಹೊಡೆದುಕೊಂಡು ರಕ್ತಸಿಕ್ತಗೊಂಡು ಘಾಸಿಗೊಳ್ಳುವ ಸಂದರ್ಭವದು.

ದೈಹಿಕ ಶಕ್ತಿಯ ಬಲದಲ್ಲಿ ಒಬ್ಬರು ಮತ್ತೊಬ್ಬರನ್ನು ಮಣಿಸಿಬಿಡುತ್ತಾರೆ. ಗೆದ್ದು ಬೀಗುತ್ತಾರೆ. ಆ ಗೆಲುವು ಗೆದ್ದವನೊಳಗೆ ಅಹಂಕಾರವನ್ನು ಶಾಶ್ವತವಾಗಿ ಬೇರೂರಿಸಿಬಿಡುತ್ತದೆ. ಅದರ ಜೊತೆಗೆ ಪ್ರತಿಯೊಂದು ಸಲವೂ ಆ ಗೆಲುವನ್ನು ನೆನಪಿಸುವಂಥ ರೀತಿಯ ನಡವಳಿಕೆಗಳೊಂದಿಗೆ ಉಳಿದವರೊಳಗೆ ಭಯಭೀತಿ ಉಂಟುಮಾಡುತ್ತಲೇ ತನ್ನ ಪ್ರಾಬಲ್ಯದ ಪ್ರದರ್ಶನದೊಂದಿಗೆ ವಿಜೃಂಭಿಸುತ್ತಾನೆ. ಅಂಥ ಕ್ಷಣಗಳನ್ನೇ ಸಂಭ್ರಮಿಸುತ್ತಾ ದೈಹಿಕವಾಗಿ ಪ್ರಬಲವಾಗಿರುವುದೇ ಎಲ್ಲರನ್ನು ಹದ್ದುಬಸ್ತಿನಲ್ಲಿಡುವ ಬಹುಮುಖ್ಯ ತಂತ್ರ ಎಂಬುದನ್ನು ಸಾರುತ್ತಲೇ ಇರುತ್ತಾನೆ. ತನ್ನನ್ನು ತೊಡವಿಕೊಂಡರೆ ಪರಿಣಾಮ ನೆಟ್ಟಗಿರದು ಎಂಬ ಭಯಾನಕ ಸಂದೇಶ ರವಾನಿಸುತ್ತಾನೆ.

ಅವನ ಬೆಂಬಲಿಗರ ಭಾವುಕ ಅಜ್ಞಾನವು ಅವರಲ್ಲಿ ಒಂದು ಬಗೆಯ ಹುಸಿ ಹೆಮ್ಮೆಯನ್ನು ಮೂಡಿಸಿಬಿಡುತ್ತದೆ. ಅದರ ಕತ್ತಲ ಬಂಧದೊಳಗೆ ಬೆಂಬಲಿಗ ಅಭಿಮಾನಿಗಳ ವಿವೇಕ ಉಸಿರುಗಟ್ಟುತ್ತಿರುತ್ತದೆ. ಅಂಥವರ ಸಂಖ್ಯೆಯೇ ಹೆಚ್ಚಾಗುತ್ತಾ ಒಂದು ಬಗೆಯ ಸ್ಥಗಿತತೆಯ ವಾತಾವರಣ ನೆಲೆಸಿಬಿಡುತ್ತದೆ.

 

ನಕಾರಾತ್ಮಕತೆಗೆ ಸಾಕ್ಷ್ಯ ಒದಗಿಸುವ ಯುದ್ಧ

ಕಾರ್ಗಿಲ್ ವಿಜಯೋತ್ಸವವು ದೇಶದಾದ್ಯಂತ ಇಂಥದ್ದೊಂದು ನಕಾರಾತ್ಮಕತೆಗೆ ಸಾಕ್ಷ್ಯ ಒದಗಿಸುತ್ತಿದೆ. ಯುದ್ಧ ಗೆದ್ದ ಸಂಭ್ರಮದಲ್ಲಿ ದೇಶದ ಕುರಿತಾದ ಹೆಮ್ಮೆ ಅಪವ್ಯಾಖ್ಯಾನಕ್ಕೀಡಾಗುತ್ತಿದೆ. ನಿಜದ ಹೆಮ್ಮೆಯ ಬದಲು ವಿಲಕ್ಷಣ ಅಭಿಮಾನದ ವಿಕೃತಿ ವ್ಯಾಪಕವಾಗುತ್ತಲೇ ಇದೆ.

ಒಂದು ದೇಶ ಮತ್ತೊಂದು ದೇಶದ ವಿರುದ್ಧ ಜಯ ಸಾಧಿಸಿದ ಘಳಿಗೆಯನ್ನು ನೆನಪಿಸಿಕೊಂಡು ಜಗತ್ತಿಗೆ ನಮ್ಮ ಶಕ್ತಿಯನ್ನು ತೋರ್ಪಡಿಸುವ ವಿಜಯೋತ್ಸವವು ಪ್ರಜೆಗಳ ಪ್ರಜ್ಞೆಯನ್ನು ಶತಮಾನಗಳಷ್ಟು ಹಿಂದಕ್ಕೆ ತಳ್ಳುವ ಹುನ್ನಾರದ ಭಾಗವಾಗಿಯೇ ಕಾಣಿಸುತ್ತಿದೆ. ನಮ್ಮವರೇ ಆಗಿದ್ದವರು ಹಿಂದೊಮ್ಮೆ ವಿಭಜನೆಯ ಸಾಂದರ್ಭಿಕ ಅನಿವಾರ್ಯತೆಯಲ್ಲಿ ಅಧಾರ್ಮಿಕ ತಿಳಿಗೇಡಿತನದ ಪರಮಾವಧಿಯ ಅತಿರೇಕದ ಕಾರಣಕ್ಕಾಗಿ ಬೇರೊಂದು ದೇಶದವರಾದರು. ನಂತರ ಒಬ್ಬರಿಗೊಬ್ಬರು ಜಗಳವಾಡಿಕೊಳ್ಳುವ ಧಾವಂತ ಒಬ್ಬರನ್ನೊಬ್ಬರು ಜಯಿಸುವ ಹಠವನ್ನು ಪ್ರತಿಷ್ಠಾಪಿಸಿಬಿಟ್ಟಿತು. ಈ ಹಠದೊಂದಿಗಿನ ದ್ವೇಷದ ಭಾವಗಳನ್ನು ರಾಜಕೀಯ ಸಂಕುಚಿತತೆ ಮತ್ತು ಅಧಿಕಾರ ದಾಹದ ಮನುಷ್ಯ ಸಹಜ ದೌರ್ಬಲ್ಯಗಳು ಮತ್ತಷ್ಟು ಪ್ರಬಲಗೊಳಿಸಿದವು.

ಅವು ಎಷ್ಟು ಪ್ರಖರವಾಗಿ ಮುಂದುವರೆದವು ಎಂದರೆ ಬಗೆಹರಿಸಿಕೊಳ್ಳಬಹುದಾಗಿದ್ದ ಭಿನ್ನಾಭಿಪ್ರಾಯಗಳನ್ನು ಕ್ರೌರ್ಯದ ಮೂಲಸರಕುಗಳನ್ನಾಗಿಸಿದವು. ಇಷ್ಟಿಷ್ಟಕ್ಕೆ ಗೆರೆಗೀಚಿ ಜಗಳಕ್ಕೆ ನಿಲ್ಲುವುದನ್ನೇ ಸ್ಥಾಯಿಯಾಗಿಸಿದವು. ಒಡೆದು ಆಳುವ ನೀತಿಯನ್ನೇ ಬಂಡವಾಳವಾಗಿಸಿಕೊಂಡವರನ್ನು ಮುಂಚೂಣಿಗೆ ತಂದುನಿಲ್ಲಿಸಿದವು. ಅವರ ಮೂಗಿನ ನೇರಕ್ಕೆ ರಾಷ್ಟ್ರವಾದವನ್ನು ಮುನ್ನೆಲೆಗೆ ತಂದವು. ಅಷ್ಟೇ ಅಲ್ಲದೇ ದೇಶವನ್ನು ಪ್ರೇಮಿಸುವ ಭ್ರಮಾತ್ಮಕ ಭಾವನೆ ಕೆರಳಿಸುವಂಥ ವಿಕೃತಿಗಳನ್ನು ಸೃಷ್ಟಿಸಿದವು. ಯುದ್ಧ, ಸಂಘರ್ಷಗಳ ಜೊತೆಗೆ ನಿಲ್ಲುವ ವಿಲಕ್ಷಣ ವಿತಂಡವಾದವನ್ನು ದಾಟಿಸಿದವು.

ಉದಾತ್ತ ಪದಗಳ ವರ್ತುಲದೊಳಗೆ ಬಂಧಿ

ದೇಶಾಭಿಮಾನವು ಅಧಿಕಾರವನ್ನು ದಕ್ಕಿಸಿಕೊಳ್ಳುವ ಹುನ್ನಾರಗಳೊಂದಿಗೆ ಗುರುತಿಸಿಕೊಂಡವರ ರಾಕ್ಷಸ ಹಸಿವನ್ನು ನೀಗಿಸುವ ಪಾತ್ರವನ್ನು ನಿಭಾಯಿಸಲಾರಂಭಿಸಿತು. ಸಾವು-ನೋವುಗಳು ತ್ಯಾಗ-ಬಲಿದಾನಗಳ ಉದಾತ್ತ ಪದಗಳ ವರ್ತುಲದೊಳಗೆ ಬಂಧಿಯಾಗಿ ತಮ್ಮ ನಿಜ ಅರ್ಥವನ್ನು ಕಳೆದುಕೊಂಡವು. ಈ ಹಂತದಲ್ಲಿಯೇ ಇತಿಹಾಸದಲ್ಲಿ ಆಗಿಹೋದ ಗಾಯಗಳನ್ನು ಜನಪ್ರಿಯ ಶೈಲಿಯಲ್ಲಿ ನೆನಪಿಸಿಕೊಂಡು ಅತ್ಯದ್ಭುತ ಎನ್ನಿಸುವ ಹಾಗೆ ಭಾಷಾಪಾಂಡಿತ್ಯ ಪ್ರದರ್ಶಿಸಿ ಇನ್ನೊಂದು ದೇಶದ ವಿರುದ್ಧ ಮಾತನಾಡುತ್ತಾ ಬೆಂಬಲ ಗಳಿಸಿಕೊಳ್ಳುವ ರಹಸ್ಯ ಕಾರ್ಯಸೂಚಿ ಪ್ರಯತ್ನಗಳು ಯಶಸ್ಸು ಕಂಡವು. ಆ ಯಶಸ್ಸೇ ಇಂದು ಹಿಂಸೆಯ ಪರವಾದ ಸೋಂಕಿನೊಂದಿಗಿನ ವರ್ತನೆಗಳನ್ನೇ ವ್ಯಾಪಕವಾಗಿಸಿಬಿಟ್ಟಿದೆ.

ಇಂಥವುಗಳನ್ನು ಪ್ರಶ್ನಿಸಿ ಚಿಗುರಿಕೊಳ್ಳಬೇಕಾಗಿದ್ದ ಪರ್ಯಾಯ ಪ್ರತಿರೋಧದ ರಾಜಕಾರಣ ಪಕ್ಷಗಳ ಸಂಕುಚಿತ ಸಾರ್ವಭೌಮತ್ವದ ಅಲೆಯ ಹೊಡೆತಕ್ಕೆ ಸಿಲುಕಿಬಿಟ್ಟಿದೆ. ಆ ಅಲೆಯು ನಟನೆಯನ್ನೇ ನಿಜವಾದ ನಾಯಕತ್ವ ಎಂದು ಬಿಂಬಿಸುತ್ತಿದೆ. ಹಿಂದಿನವರಿಗಿಂತ ಈಗಿನ ಭಾವುಕ ಕೃತಕತೆಯೇ ಯೋಗ್ಯ ಎನ್ನುವಂಥ ನಂಬಿಕೆಯನ್ನು ಬಿತ್ತುತ್ತಿದೆ. ಚಿಂತನೆಯ ಸಾರ್ವಜನಿಕ ಸಾಮಥ್ರ್ಯವನ್ನೇ ಮುಳುಗಿಸಿ ಅದರ ಜಾಗದಲ್ಲಿ ಆರಾಧನೆಯ ಮನೋಭಾವವನ್ನು ನೆಲೆಗೊಳಿಸಿಬಿಟ್ಟಿದೆ.

ಮಾತಿನ ಮೋಡಿಯೊಳಗೆ ಸಿಲುಕಿದ ಯುವಜನ

ಯಾರನ್ನು ನೆಚ್ಚಿಕೊಂಡಿದ್ದೇವೆ, ಯಾರನ್ನು ನೆಚ್ಚಿಕೊಳ್ಳಬೇಕಿತ್ತು ಎಂಬ ವಿವೇಚನೆಯನ್ನೇ ಮರೆಸಿ ಒಂದು ಬಗೆಯ ಅಸಹಾಯಕತೆಯನ್ನು ಸೃಷ್ಟಿಸಿಬಿಟ್ಟಿದೆ.
ಕಾರ್ಗಿಲ್ ಯುದ್ಧದ ವೇಳೆ ಭಾರತದ ಆಗಿನ ಪ್ರಧಾನಿ ಕಾವ್ಯಾತ್ಮಕ ಧಾಟಿಯ ಯುದ್ಧಪ್ರಚೋದಕ ಭಾವುಕ ಪರಿಭಾಷೆಯನ್ನು ನೆಚ್ಚಿಕೊಂಡಿದ್ದರು. ಈಗಿನ ಪ್ರಧಾನಿ ಭಾಷೆಗೆ ಇರುವ ಉದಾತ್ತ ದೃಷ್ಟಿಕೋನಗಳ ಬಹುಮುಖೀ ಪ್ರಭಾವೀ ಶಕ್ತಿಯನ್ನೇ ಆಧರಿಸಿಕೊಂಡ ಮಾತಿನ ಮೋಡಿಯೊಳಗೆ ಜನರನ್ನು ಸಿಲುಕಿಸುತ್ತಿದ್ದಾರೆ. ಮಾತನಾಡಲೇಬೇಕಾದ ಸಂಗತಿಗಳ ಬಗ್ಗೆ ಮೌನವಹಿಸುತ್ತಿದ್ದಾರೆ.

ಇದೇನು ಇಂದು ನಿನ್ನೆಯ ರಾಜಕೀಯ ಪ್ರವೃತ್ತಿಯಲ್ಲ. ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು ಈಗ ಮಾತಿನ ಆಕರ್ಷಕ ಆಯಾಮ ಪಡೆದಿದೆ ಅಷ್ಟೇ. ಅವರ ಮೌನದ ಸ್ಪೇಸ್‍ನ್ನು ಅವರನ್ನು ಆರಾಧಿಸುವ ಬೆಂಬಲಿಗ ಪಡೆಯು ಸಂಘರ್ಷವನ್ನು, ಯದ್ಧೋನ್ಮಾದದ ಗುಂಗುಗಳನ್ನು ಶಾಶ್ವತವಾಗಿ ಬೇರೂರಿಬಿಡಿಸುವ ಪ್ರಯತ್ನಗಳಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ.
ಜನರೂ ರಾಜಕೀಯ ಮನರಂಜನೆಯ ಗ್ರಾಹಕರಾಗಿ ಮೂಕಪ್ರೇಕ್ಷಕರಾಗಿದ್ದಾರೆ. ಅವರ ಅಸಹಾಯಕತೆಯು ಯುದ್ಧೋನ್ಮಾದದ ಅಮಲನ್ನು ಹೆಮ್ಮೆ ಮತ್ತು ಅಭಿಮಾನ ಎಂಬ ಪದಗಳೊಂದಿಗೆ ಜೋಡಿಸಿ ಹಿಂಸೆಯ ಪರವಾದ ಅಲೆಯನ್ನು ಸೃಷ್ಟಿಸಲಾಗುತ್ತಿದೆ. ರಂಜನೆಯ ರೂಪದ ನುಡಿಗಳು ಮತ್ತು ಮಾತನಾಡಲೇಬೇಕಾದ ಸಂದರ್ಭದಲ್ಲಿ ಮೌನಕ್ಕೆ ಶರಣುಹೋಗುವ ತಂತ್ರಗಳ ಮೂಲಕ ಹಿಂಸೆಯೇ ಎಲ್ಲದಕ್ಕೂ ಪರಿಹಾರ ಎಂಬ ತಪ್ಪುಕಲ್ಪನೆಯನ್ನು ಬಿತ್ತಲಾಗುತ್ತಿದೆ. ತಪ್ಪು ತಿಳುವಳಿಕೆಗಳನ್ನು ನೆಲೆಗೊಳಿಸಿ ಅದರ ಆಧಾರದ ಮೇಲೆ ಅಧಿಕಾರದ ಮೇಲಿನ ಹಿಡಿತವನ್ನು ಪ್ರಬಲಗೊಳಿಸಿಕೊಳ್ಳುವ ಹೆಜ್ಜೆಗಳು ಹಿಂದೆಂದಿಗಿಂತಲೂ ದಟ್ಟವಾಗುತ್ತಿವೆ.

ಮನಮೋಹನ ಮೌನಕ್ಕಿಂತಲೂ ಈಗಿಮ ಮಾತಿನ ಅಬ್ಬರವೇ ಮೇಲು

ಹಿಂದಿನ ಮನಮೋಹನ ಮೌನಕ್ಕಿಂತಲೂ ಈಗಿನ ಮಾತಿನ ಅಬ್ಬರವೇ ಮೇಲು ಎಂದು ನಂಬಿಸಲಾಗುತ್ತಿದೆ. ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷವು ಪ್ರಬಲ ಪ್ರತಿರೋಧವನ್ನೊಡ್ಡುವ ಬದಲು ತನ್ನ ಮುಂಚೂಣಿ ಯುವ ನೇತಾರನ ತೊಳಲಾಟದ ಚಡಪಡಿಕೆಗೆ ಸಾಕ್ಷಿಯಾಗುತ್ತಿದೆ. ಇದೆಲ್ಲದರ ನಡುವೆ ಹಿಂಸೆಯು ಅಧಿಕಾರದ ಅಧಿಪತ್ಯದ ಇಂಧನವಾಗಿ ರಾಜಕೀಯ ಬೃಹದಾಕೃತಿಯನ್ನು ತಳೆದುಬಿಟ್ಟಿದೆ. ಅದೇ ಕಾರ್ಗಿಲ್ ಜಯಭೇರಿಯ ಕ್ಷಣಗಳಿಗೆ ಉತ್ಸವದ ಬಣ್ಣವನ್ನು ಲೇಪಿಸಿ ಜನರ ಮನೋಧರ್ಮವನ್ನು ಯುದ್ಧದ ಪರವಾಗಿ ತಿರುಗಿಸಿಬಿಟ್ಟಿದೆ.

ಯುದ್ಧವೆಂದರೆ ಎರಡು ದೇಶಗಳ ಸಂಘರ್ಷದ ಹಿಂಸಾತ್ಮಕ ಕ್ರಿಯೆ. ಕಳೆದುಕೊಳ್ಳುವ ನೋವುಗಳನ್ನು ಮನುಷ್ಯ ವಲಯದೊಳಗೆ ಸೇರ್ಪಡೆಗೊಳಿಸುವ ರಾಕ್ಷಸದಾಹದ ಅಖಾಡ. ಸೈನಿಕರ ಜೀವಗಳನ್ನು ಬಲಿ ಪಡೆದು ತಂದೆ, ತಾಯಿ, ಅಜ್ಜ, ಅಜ್ಜಿ, ಪತ್ನಿ, ಅಕ್ಕ, ತಂಗಿ ಸೇರಿದಂತೆ ಸಂಬಂಧಿಗಳೊಳಗೆ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಭಯಾನಕ ಸ್ವರೂಪಿ. ಜೀವ ಕಳೆದುಕೊಂಡ ಸೈನಿಕರ ತ್ಯಾಗ ನೆನಪಿಸಿಕೊಂಡು ದೇಶದ ಆಡಳಿತಾತ್ಮಕ ಪ್ರತಿನಿಧಿಗಳು ಅಧಿಕಾರಕ್ಕೆ ಮತ್ತಷ್ಟು ಹತ್ತಿರಾಗುವ ಪ್ರಯತ್ನಗಳಿಗೆ ಕುಮ್ಮಕ್ಕು ನೀಡುವ ಸಂದರ್ಭ. ಜೊತೆಗೆ ಯುದ್ಧ ನಡೆಯಲೇಬೇಕು, ಎದುರಾಳಿಗಳ ಸೊಕ್ಕು ಮುರಿಯಲೇಬೇಕು ಎಂಬ ಆವೇಶಭರಿತ ವಿಕೃತಿಗಳನ್ನು ವಿಜೃಂಭಿಸಿಕೊಳ್ಳಲು ಬೇಕಾಗುವ ಮಾಹಿತಿಯ ನಮೂನೆಗಳನ್ನು ನೆನಪಿಸಿಕೊಳ್ಳಲು ಪೂರಕವಾಗುವ ಬೀತಿಯ ಮೂಲ.

ಸದ್ಯದ ಕಾರ್ಗಿಲ್ ವಿಜಯೋತ್ಸವದೊಂದಿಗಿನ ರಹಸ್ಯ ಕಾರ್ಯಸೂಚಿ ಮತ್ತು ಅದನ್ನು ದೃಷ್ಟಿಯಲ್ಲಿರಿಸಿಕೊಂಡ ಸಂಕುಚಿತ ರಾಜಕಾರಣ ಯುದ್ಧವನ್ನು ಹೀಗೆ ಮರುವ್ಯಾಖ್ಯಾನಿಸಿಕೊಳ್ಳುವ ಒತ್ತಡವನ್ನು ಸೃಷ್ಟಿಸಿದೆ.
ಆದರೆ, ನಮ್ಮ ಯುವಶಕ್ತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತುಕೊಂಡು ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುವ ಭಾವುಕತೆಯ ಲೇಪನೆಯೊಂದಿಗಿನ ವಿಕೃತ ಬಿಂಬಗಳನ್ನೇ ಆರಾಧಿಸುತ್ತಾ ಸೈನಿಕರನ್ನು ನೆನಪಿಸಿಕೊಳ್ಳುವುದಷ್ಟನ್ನೇ ದೇಶಪ್ರೇಮ ಎಂದುಕೊಂಡಿವೆ. ಯುದ್ಧ ಆಗಲೇಬೇಕು, ಯುದ್ಧದಿಂದಲೇ ಪರಿಹಾರ ಎಂಬ ಅಧಿಕಾರಕೇಂದ್ರದ ಮೂಲಭೂತವಾದಿ ದೃಷ್ಟಿಕೋನವನ್ನೇ ಆರಾಧಿಸುತ್ತಾ, ಆ ಆರಾಧನೆಯ ಭಾವಗಳನ್ನೇ ವಿಸ್ತರಿಸುವ ಪ್ರಚೋದಕ ಮಾಹಿತಿ, ಮಾತುಗಳನ್ನು ಶೇರ್ ಮಾಡುತ್ತಾ ತಮ್ಮೊಳಗಿನ ಯೋಚನೆಯ ಶಕ್ತಿಯನ್ನೇ ಕ್ರಮೇಣ ಕಳಚಿಕೊಳ್ಳುತ್ತಾ ಸಾಗಿದೆ.

ಗೇಲಿ ಮಾಡುವ ಪ್ರವೃತ್ತಿ

ಯೋಚಿಸುವವರನ್ನು ‘ಬುದ್ಧಿಜೀವಿಗಳು’ ಎಂಬ ಪಟ್ಟ ಕಟ್ಟಿ ಅದೊಂದು ಅಸ್ಪೃಶ್ಯ ವರ್ಗ ಎನ್ನುವಂತೆ ಗೇಲಿಮಾಡುತ್ತಿದೆ. ಬುದ್ಧಿ ಮತ್ತು ಜೀವ ಎರಡೂ ಮನುಷ್ಯ ಬದುಕನ್ನು ಚಲನಶೀಲಗೊಳಿಸುವಂಥವು. ಬುದ್ಧಿಯು ವಿವೇಕ ತಂದುಕೊಳ್ಳುವ ಮೂಲವಾದರೆ ಜೀವ ಅಂಥ ವಿವೇಕವನ್ನು ದಾಟಿಸುವ ಚಲನೆಯನ್ನೇ ಸಂಕೇತಿಸುತ್ತದೆ. ಆ ಮೂಲಕ ಸಾಮಾಜಿಕ ಚಲನಶೀಲತೆಯ ಜೀವಂತಿಕೆಯನ್ನು ಹೆಚ್ಚಿಸುವುದಕ್ಕೆ ಸಾಧ್ಯವಾಗುತ್ತದೆ. ಅದಕ್ಕೆ ಮೌಲಿಕ ಚಿಂತನೆಗಳನ್ನು ಕೊಡುಗೆಗಳನ್ನಾಗಿ ನೀಡುವವರು ಬುದ್ಧಿಜೀವಿಗಳೆನ್ನಿಸಿಕೊಳ್ಳುತ್ತಾರೆ. ತಾವು ಬುದ್ಧಿಜೀವಿಗಳೆಂದುಕೊಂಡು ಬೀಗುವವರು, ತಮ್ಮ ಬುದ್ಧಿಯನ್ನು ಅಧಿಕಾರದಲ್ಲಿರುವವರ ಕೈಗೊಪ್ಪಿಸುವವರು, ಸಮಾಜದ ಜೀವಂತಿಕೆಗೆ ತದ್ವಿರುದ್ಧದ ನಡವಳಿಕೆಯವರು ಬುದ್ಧಿ ಅಥವಾ ವಿವೇಕದೊಂದಿಗಿನ ಜೀವಗಳಲ್ಲ. ಆದರೆ, ಸಮಾಜಕ್ಕೆ ಈ ಕ್ಷಣಕ್ಕೆ ಬೇಕಾದದ್ದನ್ನು ಪ್ರಸ್ತಾಪಿಸಿ ಅಧಿಕಾರದಲ್ಲಿರುವವರನ್ನು ಎಚ್ಚರಿಸುವ ಮಾತುಗಳನ್ನಾಡಿ ಬೆಳವಣಿಗೆಗೆ ಅರ್ಥಪೂರ್ಣ ತೀವ್ರತೆ ತಂದುಕೊಡುವ ಚಿಂತನಶೀಲರು ಬುದ್ಧಿಜೀವಿಗಳು.

ನಮ್ಮ ರಾಜಕಾರಣ ಮತ್ತು ಮಾಧ್ಯಮದ ಆಕ್ರಾಮಕ ಭಾಷಿಕ ವಿಕೃತಿಗಳು ಬುದ್ಧಿಜೀವಿಗಳ ವೈವಿಧ್ಯಮಯ ಶಕ್ತಿಯನ್ನು ಹಿನ್ನೆಲೆಗೆ ಸರಿಸಿ ಅವರನ್ನು ದೇಶದ್ರೋಹಿಗಳು ಎಂದು ಬಿಂಬಿಸುವುದರ ಕಡೆಗೆ ಹೆಚ್ಚು ವಾಲಿಕೊಂಡಿವೆ. ನಾಯಕರೆನ್ನಿಸಿಕೊಂಡ ಅಪ್ರಬುದ್ಧರು ‘ನಾನು ಗೃಹಸಚಿವನಾಗಿದ್ದರೆ ಇಂಥವರನ್ನು ಒಟ್ಟಿಗೆ ನಿಲ್ಲಿಸಿ ಗುಂಡು ಹಾರಿಸುವಂತೆ ಹೇಳುತ್ತಿದ್ದೆ’ ಎಂಬ ಯುದ್ಧದ ಪರಿಭಾಷೆಯಲ್ಲಿಯೇ ಮಾತನಾಡಿಬಿಡುತ್ತಾರೆ. ಆ ಮಾತನ್ನು ಸುದ್ದಿಮಾಧ್ಯಮಗಳು ಬಹುದೊಡ್ಡ ದಾರ್ಶನಿಕ ನುಡಿ ಎಂಬಂತೆ ಚಿತ್ರಿಸಿಬಿಡುತ್ತವೆ. ಮತ್ತೊಂದು ರಾಷ್ಟ್ರದ ವಿರುದ್ಧದ ಯುದ್ಧಸನ್ನದ್ಧತೆಯ ವಿಕೃತಿಗಳು ಮತ್ತು ದೇಶದ ಒಳಗೇ ಇರುವ ಯೋಚಿಸುವ ಶಕ್ತಿಯುಳ್ಳವರ ವಿರುದ್ಧದ ಹಿಂಸಾತ್ಮಕ ದಾಳಿಗಳು ಸಂಕುಚಿತತೆಯನ್ನು ವಿಸ್ತಾರಗೊಳಿಸಲು ಬೇಕಾದ ಜನಸಮ್ಮತಿಯನ್ನು ಉತ್ಪಾದಿಸಿಕೊಳ್ಳುತ್ತಿವೆ. ಹಾಗಾಗುವಂತೆ ಮೂಲಭೂತವಾದಿ ಚಾಣಾಕ್ಷ ನಡೆಗಳು ಸಂವಹನ ತಂತ್ರಗಳನ್ನು ಹೆಣೆದು ಯಶಸ್ಸು ಕಾಣುತ್ತಿವೆ.

ಮೂಲಭೂತವಾದಿ ಕಾರ್ಯತಂತ್ರಗಳು ಗಾಂಧಿ ಚಿಂತನೆಯನ್ನು ಪರೋಕ್ಷವಾಗಿ ಮತ್ತು ನೇರವಾಗಿ ಅಪ್ರಸ್ತುತ ಎಂದು ನಂಬಿಸುತ್ತಿವೆ. ಉಪವಾಸದ ನಡೆಗಿಂತ ಹಿಂಸೆಯೊಂದಿಗಿನ ನಡೆಗಳಿಗೆ ಬ್ರಿಟಿಷರು ಹೆದರಿದರು ಎಂದು ಈಗಾಗಲೇ ಆಗಿಹೋದ ಇತಿಹಾಸವನ್ನು ಸಂಕುಚಿತ ದೃಷ್ಟಿಕೋನಗಳ ಮಟ್ಟಕ್ಕಿಳಿಸಿ ವಿವರಿಸುತ್ತಿವೆ. ಇಂಥವುಗಳನ್ನು ಅಲ್ಲಗಳೆಯಬೇಕಿದ್ದ ಸುದ್ದಿಮಾಧ್ಯಮಗಳು ವೈಭವೀಕರಣದ ತಂತ್ರಗಾರಿಕೆಯೊಂದಿಗೆ ಪ್ರಜೆಗಳನ್ನು ವೀಕ್ಷಕ ಗ್ರಾಹಕರನ್ನಾಗಿಸಿಕೊಂಡು ಹಣಗಳಿಕೆಯ ಲೆಕ್ಕಾಚಾರದ ಗುಂಗಿನೊಂದಿಗೇ ಸಂಭ್ರಮಿಸುತ್ತಿವೆ. ಈ ನಕಾರಾತ್ಮಕತೆಗೆ ಕಡಿವಾಣ ಹೇಗೆ? ಸಾಧ್ಯವೇ ಇಲ್ಲ ಎನ್ನುವಂತಿಲ್ಲ.

ಮತ್ತೆ ಬುದ್ಧಿ ಮತ್ತು ಜೀವಗಳೆರಡೂ ಸಂಯೋಜಿತಗೊಂಡು ಚಲನಶೀಲತೆಯೆಡಗಿನ ಪಯಣ ಹಿಂದೆಂದಿಗಿಂತಲೂ ತೀವ್ರಗೊಳ್ಳಬೇಕು. ಪ್ರಶ್ನೆಗಳು ಹುಟ್ಟಿಕೊಳ್ಳಬೇಕು. ಪ್ರಶ್ನಿಸುವವರ ಸ್ಥೈರ್ಯ ಹೆಚ್ಚಿಸುವ ಪ್ರಜಾಸತ್ತಾತ್ಮಕ ವಾತಾವರಣ ರೂಪುಗೊಳ್ಳಬೇಕು. ಬುದ್ಧಿ ಜೀವಗಳನ್ನು ಕೊಲ್ಲುವ ಪರಿಭಾಷೆಯನ್ನು ಎದುರುಗೊಳ್ಳುವ ಸೌಹಾರ್ದಯುತ ಸಂವಾದದ ಆರೋಗ್ಯಕರ ಆಂದೋಲನ ದೇಶವ್ಯಾಪಿಯಾಗಬೇಕು. ಯುದ್ಧೋನ್ಮೋದ ಮತ್ತು ಸಂಘರ್ಷದ ಭಾಷಿಕ ವಿಕೃತಿಗಳಿಗಿಂತ ಮಾನವೀಯತೆಯೇ ದೇಶದ ಶ್ರೇಷ್ಠ ಗುಣಲಕ್ಷಣವಾಗಬೇಕು ಎಂಬ ಕಾಳಜಿಗಳು ಮುನ್ನೆಲೆಗೆ ಬರಬೇಕು. ದೇಶದ ಕುರಿತಾದ ಹೆಮ್ಮೆಯ ಭಾವಗಳು ಮನುಷ್ಯತ್ವದ ಮೌಲಿಕತೆಯೊಂದಿಗೇ ಸಂಯೋಜಿತಗೊಳ್ಳಬೇಕು. ದೇಶದ ಬಗೆಗಿನ ಪ್ರೇಮವು ಅಂಧಾಭಿಮಾನದ ಮಿತಿಗಳನ್ನು ದಾಟಿಕೊಂಡು ಗಂಭೀರ ಚಿಂತನೆಗಳ ಬಲದಲ್ಲಿ ಗಟ್ಟಿಗೊಳ್ಳಬೇಕು.

(ಲೇಖಕರು: ಡಾ.ಎನ್.ಕೆ.ಪದ್ಮನಾಭ,
ಸಹಾಯಕ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್‍ಡಿಎಂ ಸ್ನಾತಕೋತ್ತರ ಕೇಂದ್ರ, ಉಜಿರೆ)

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ1 week ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ1 week ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ3 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending