ದಿನದ ಸುದ್ದಿ
ಕೊಡಗು ಪ್ರವಾಹ | ಪರಿಹಾರ ಕೇಂದ್ರದಲ್ಲಿ 2,363 ಸಂತ್ರಸ್ತರು ; ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ ಓದಿ
ಸುದ್ದಿದಿನ,ಮಡಿಕೇರಿ : ಜಿಲ್ಲೆಯಾದ್ಯಾಂತ ಭಾರೀ ಮಳೆಯಿಂದಾಗಿ ಹಲವು ಭಾಗಗಳಲ್ಲಿ ತೀವ್ರ ಭೂಕುಸಿತ ಉಂಟಾಗಿತ್ತು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಹಲವು ಮಂದಿ ಸಂತ್ರಸ್ಥರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ.
ಸಂತ್ರಸ್ತರಿಗೆ ವಿತರಿಸಲು ರಾಜ್ಯ, ಜಿಲ್ಲೆಯ ವಿವಿಧೆಡೆಗಳಿಂದ, ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದ, ಸಂಘ ಸಂಸ್ಥೆಗಳಿಂದ ಸ್ವೀಕೃತವಾಗುತ್ತಿರುವ ಪರಿಹಾರ ಸಾಮಾಗ್ರಿಗಳನ್ನು ಜಿಲ್ಲೆಯ ದಾಸ್ತಾನು ಕೇಂದ್ರಗಳಾದ ನಗರದ ಜಿಲ್ಲಾಡಳಿತ ಭವನ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗೋದಾಮು, ಕುಶಾಲನಗರ ಮತ್ತು ಪೊನ್ನಂಪೇಟೆಯ ಹಳೇ ನ್ಯಾಯಾಲಯ ಕಟ್ಟಡ ಕೇಂದ್ರಗಳಲ್ಲಿ ದಾಸ್ತಾನು ಮಾಡಲು ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಗೆ ಆಹಾರ ಸಾಮಾಗ್ರಿಗಳು, ವೈದ್ಯಕೀಯ ಸಾಮಾಗ್ರಿಗಳು, ಕುಡಿಯುವ ನೀರು ಹಾಗೂ ಹಾಗೂ ಇತರೆ ಅಗತ್ಯ ಪರಿಹಾರ ಸಾಮಾಗ್ರಿಗಳು 30 ಭಾರಿ ಹಾಗೂ ಲಘು ವಾಹನಗಳಲ್ಲಿ ಆಗಸ್ಟ್ 29 ರಂದು ಜಿಲ್ಲೆಗೆ ಬಂದಿರುತ್ತದೆ. ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ನೆರೆ ಸಂತ್ರಸ್ಥರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯಾಧಿಕಾರಿಗಳ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳ ಮುಖಾಂತರ ಹಂಚಿಕೆ ಮಾಡಲು 34 ಲಘು ವಾಹನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ಪ್ರಮುಖ ಅವಶ್ಯವಿರುವ ಸಾಮಾಗ್ರಿಗಳು: 15540 ಕೆ.ಜಿ. ಅಕ್ಕಿ, 1204 ಕೆ.ಜಿ. ಸಕ್ಕರೆ, 1152 ಲೀಟರ್ ಎಣ್ಣೆ, 1173 ಕೆ.ಜಿ. ತೊಗರಿ ಬೆಳೆ, 397 ಬಾಕ್ಸ್ ಕುಡಿಯುವ ನೀರಿನ ಬಾಟಲಿ, 27 ಹಾಲಿನ ಬಾಕ್ಸ್, 262 ಬಾಕ್ಸ್ ಬಿಸ್ಕೆಟ್, 1,112 ಹೊದಿಕೆಗಳು, 175 ಸ್ವೆಟರ್, 770 ಉಡುಗೆ ವಸ್ತುಗಳನ್ನು ಜಿಲ್ಲಾಡಳಿತದ ವತಿಯಂದ ಸಂತ್ರಸ್ತರಿಗೆ ಆಗಸ್ಟ್ 29 ರಂದು ವಿತರಣೆ ಮಾಡಲಾಗಿದೆ.
ಪರಿಹಾರ ಕೇಂದ್ರಗಳಲ್ಲಿರುವ ಸಂತ್ರಸ್ತರ ವಿವರ: ಮಡಿಕೇರಿ ತಾಲ್ಲೂಕಿನ 17 ಪರಿಹಾರ ಕೇಂದ್ರಗಳಲ್ಲಿ 590 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 800 ಗಂಡು, ಮತ್ತು 832 ಹೆಣ್ಣು ಸೇರಿದಂತೆ 1632 ಜನ ಸಂತ್ರಸ್ತರಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ 05 ಪರಿಹಾರ ಕೇಂದ್ರಗಳಲ್ಲಿ 237 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 348 ಗಂಡು ಮತ್ತು 357 ಹೆಣ್ಣು ಸೇರಿದಂತೆ ಒಟ್ಟು 705 ಜನ ಸಂತ್ರಸ್ತರಿದ್ದಾರೆ.
ವಿರಾಜಪೇಟೆ ತಾಲ್ಲೂಕಿನ 01 ಪರಿಹಾರ ಕೇಂದ್ರಗಳಲ್ಲಿ 06 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 12 ಗಂಡು ಮತ್ತು 14 ಹೆಣ್ಣು ಸೇರಿದಂತೆ ಒಟ್ಟು 26 ಜನ ಸಂತ್ರಸ್ತರಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿರುವ 23 ಪರಿಹಾರ ಕೇಂದ್ರಗಳಲ್ಲಿ ಒಟ್ಟು 833 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 1,160 ಗಂಡು ಮತ್ತು 1203 ಹೆಣ್ಣು ಸೇರಿದಂತೆ ಒಟ್ಟು 2,363 ಜನ ಸಂತ್ರಸ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ10 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

