ದಿನದ ಸುದ್ದಿ
ಹಿಂದಿ, ಇಂಗ್ಲಿಷ್ ನಂತರ ಕನ್ನಡ ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೂ ಬಂತು ಕುತ್ತು
ಸುದ್ದಿದಿನ ಡೆಸ್ಕ್: ಅನ್ಯಾಯಗಳ ವಿರುದ್ಧ ಅಕ್ಷರಗಳ ಬೆಂಕಿಯುಂಡೆ ಉಗುಳುತ್ತಾ ದೇಶದ ರಾಜಕಾರಣಿಗಳ ಚಳಿ ಬಿಡಿಸಿದ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಹತ್ಯೆ ಮಾಡಿದವರು ಯಾರೆಂಬ ಊಹೆಗಳು ನಿಜವಾಗುತ್ತವೆ. ಸತ್ಯ ಹೇಳುವ ಪತ್ರಿಕೋದ್ಯಮ ಇನ್ನು ಮುಂದುವರಿದರೆ ನಾವೆಷ್ಟು ಗೌರಿಗಳನ್ನು ಕಳೆದುಕೊಳ್ಳಬೇಕೋ ಗೊತ್ತಿಲ್ಲ. ಇದಕ್ಕಾಗಿಯೇ ಭಾರತದ ಕೆಲವು ಬಹು ದೊಡ್ಡ ಮಾಧ್ಯಮ ಸಂಸ್ಥೆಗಳು ಹಾಗೂ ಪತ್ರಿಕೆಗಳು ಶರಣಾಗತಿಯ ತಂತ್ರಗಳನ್ನು ಅನುಸರಿಸುತ್ತಿವೆ.
ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮೊನ್ನೆಯಷ್ಟೆ ಹೊಸಪೇಟೆಗೆ ಬಂದಿದ್ದರು. ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತ ಪತ್ರಿಕೋದ್ಯಮಿಗಳನ್ನು ಹೇಗೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ತಮ್ಮ ವಿರುದ್ಧ ಬರೆಯದಂತೆ ಹೇಗೆ ನಿಯಂತ್ರಿಸುತ್ತದೆ ಎಂಬ ಮಾಹಿತಿಗಳನ್ನು ಪುಂಖಾನುಪುಂಖವಾಗಿ ನೀಡುತ್ತಾ ಹೋದರು. ಆದರೆ, ಇದನ್ನು ವರದಿ ಮಾಡಿದ ಮಾಧ್ಯಮಗಳು ಭೂಷಣ್ ಈ ಕುರಿತು ನೀಡಿದ ಹೇಳಿಕೆಗಳನ್ನು ತೇಲಿಸಿ ಬರೆದು ತಮಗೇನು ಗೊತ್ತೇ ಇಲ್ಲವೇನೋ ಎಂಬಂತೆ ಮೌನಕ್ಕೆ ಶರಣಾಗಿವೆ. ಅಸಲಿಗೆ ಭೂಷಣ್ ಹೇಳಿದ್ದು ಹೀಗಿತ್ತು. ಸದ್ಯ ಪತ್ರಿಕೋದ್ಯಮ ತುರ್ತು ಪರಿಸ್ಥಿತಿ ದೇಶದಲ್ಲಿದೆ.ಪತ್ರಿಕೆಗಳು, ಹಾಗೂ ಮಾಧ್ಯಮಗಳನ್ನು ಬ್ಲಾಕ್ ಮೇಲ್ ಮಾಡಿ ರಾಜಕೀಯ ಪಕ್ಷ ಹಾಗೂ ಅದಕ್ಕೆ ಸಂಬಂಧಿಸಿದ ಸಂಘಟನೆಯೊಂದು ತಮ್ಮ ವಿರುದ್ಧ ಏನೂ ಬರೆಯದಂತೆ ಷಡ್ಯಂತ್ರ ರೂಪಿಸುತ್ತಿದೆ. ಈ ಪಕ್ಷವು ತನ್ನದೇ ಆದ ದೊಡ್ಡ ಐಟಿ ಸೆಲ್ ರೂಪಿಸಿಕೊಂಡಿದ್ದು ದೇಶದ ಪ್ರಾದೇಶಿಕ ಮಾಧ್ಯಮಗಳು ಹಾಗೂ ಪತ್ರಿಕೆಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಅದರಲ್ಲಿ ಈಗ ಬಹುತೇಕ ಸಫಲವಾಗಿದೆ ಕೂಡ. ಈ ಐಟಿ ಸೆಲ್ ಶಿವಮೊಗ್ಗದಂತ ಸಣ್ಣ ಊರಿನಿಂದ ಹಿಡಿದು ಮುಂಬಯಿಯಂತ ದೊಡ್ಡ ನಗರಗಳಲ್ಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ಮೂಲದ ಪ್ರಕಾರ ಈ ಐಟಿ ಸೆಲ್ನಲ್ಲಿ ಕೆಲಸ ಮಾಡುವ ಪ್ರತಿ ಬರಹಗಾರನಿಗೆ ಕನಿಷ್ಠ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತಿದೆ.ಹೀಗೆ ಅರ್ಧ ಲಕ್ಷ ರೂ. ಸಂಬಳ ಪಡೆಯುತ್ತಿರುವ ಇವರು ಸುಳ್ಳು ಸುದ್ದಿಗಳನ್ನು ಬಿತ್ತುವುದು, ಕೋಮು ಗಲಭೆ ಸೃಷ್ಟಿಸುವುದು. ಒಂದು ಧರ್ಮದ ಕುರಿತು ಇಲ್ಲ ಸಲ್ಲದ ಸುದ್ದಿ ಬರೆಯುವುದು. ಇನ್ನೊಂದು ಧರ್ಮವನ್ನು ಪ್ರಚೋದಿಸುವಂತಹ ಸುದ್ದಿಗಳನ್ನು ಬರೆಯುತ್ತಿದ್ದಾರೆ. ಇದಿಷ್ಟೆ ಅಲ್ಲ ಈ ಐಟಿ ಸೆಲ್ ಸಾಕುತ್ತಿರುವ ರಾಜಕೀಯ ಪಕ್ಷವು ದೇಶವನ್ನು ಉದ್ಧಾರ ಮಾಡುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಫೇಸ್ಬುಕ್, ಟ್ವಿಟರ್, ವಾಟ್ಸ್ ಆಪ್ ಮೂಲಕ ಹರಡುವುದು ಇದರ ಮುಖ್ಯ ಉದ್ದೇಶ.
ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪತ್ರಿಕೆಗಳು ನಡೆಯಲು ಅಗತ್ಯವಾಗಿ ಬೇಕಿರುವ ನ್ಯೂಸ್ಪ್ರಿಂಟ್ಗಳ ಬೆಲೆ ಈಗ ಶೇ. 50ರಷ್ಟು ಹೆಚ್ಚಾಗಿದೆ. ಹಣ ಹೆಚ್ಚಿಗೆ ಕೊಟ್ಟರೂ ನ್ಯೂಸ್ ಪ್ರಿಂಟ್ಗಳನ್ನು ಖರೀದಿಸಲು ಅನುಮತಿ ಸಿಗುತ್ತಿಲ್ಲ. ಪರಿಸರವನ್ನು ಉಳಿಸುವ ಸಲುವಾಗಿ ನ್ಯೂಸ್ಪ್ರಿಂಟ್ ಬೆಲೆ ಏರಿಕೆ ಮಾಡಿ ಅದರ ಬಳಕೆ ಕಡಿಮೆ ಮಾಡಲಾಗುತ್ತಿದೆ ಎಂದು ಬೂಸಿ ಬಿಡಲಾಗುತ್ತಿದೆ. ಆದರೆ, ಪತ್ರಿಕೋದ್ಯಮವನ್ನು ನಿಯಂತ್ರಿಸಲು ಕಂಡುಕೊಂಡಿರುವ ಬಹು ದೊಡ್ಡ ದಾರಿ ಇದು.
ಕನ್ನಡದ ದೊಡ್ಡ ಪತ್ರಿಕೆ ಮೇಲೆ ರಾಜಕೀಯ ಪ್ರಭಾವ
ರಾಜಕೀಯ ಸಂಘಟನೆಯೊಂದು ತಾನು ಮಾಧ್ಯಮಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡು ಓಡಾಡುತ್ತಿದೆ. ತಾನು ಕನ್ನಡದ ಒಂದು ದೊಡ್ಡ ಪತ್ರಿಕೆಗೆ ವಾರ್ನಿಂಗ್ ಕೊಟ್ಟಿರುವುದಾಗಿ ಅದು ಬೀಗುತ್ತಿದೆ. ಆ ಸಂಘಟನೆಯ ಕಾರ್ಯಕರ್ತರ ಪ್ರಕಾರ. ಇತ್ತೀಚೆಗೆ ಬಹುಮತ ಸಾಬೀತುಪಡಿಸಲು ವಿಫಲವಾದ ಪಕ್ಷವೊಂದು ತನ್ನ ಆತ್ಮಾವಲೋಕನಾ ಸಭೆಯಲ್ಲಿ ತನ್ನ ವಿಫಲತೆಗೆ ಕಾರಣವಾದ 20 ಅಂಶಗಳ ಪಟ್ಟಿ ಮಾಡಿತು.
ಪ್ರಾದೇಶಿಕ ಹಾಗೂ ರಾಷ್ಟೀಯ ಪಕ್ಷಗಳು ಅಧಿಕಾರ ರಚಿಸಲು ನಾವು ಬಿಡುವುದಿಲ್ಲ ಎಂದು ದೇಶದ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರೊಬ್ಬರು ದಿಲ್ಲಿಯಲ್ಲಿ ಮಾಡಿದ್ದ ಭಾಷಣವನ್ನು ಕನ್ನಡ ಪತ್ರಿಕೆಯು ತನ್ನ ಮುಖಪುಟದಲ್ಲಿ ವರದಿ ಮಾಡಿತ್ತು. ಈ ವರದಿಯು , ಹೇಳಿಕೆ ನೀಡಿದ ರಾಜಕಾರಣಿಯ ಪಕ್ಷದ ವಿರುದ್ಧ ಕನ್ನಡಿಗರು ಸಂಘಟನೆಯಾಗಲು ಕಾರಣವಾಯಿತು ಎಂಬ ಅಭಿಪ್ರಾಯಗಳು ವ್ಯಕ್ತವಾದವು.
ಈ ಸುದ್ದಿಯನ್ನು ಪಿಟಿಐ ವರದಿ ಮಾಡಿದೆ ಎಂದು ಪತ್ರಿಕೆ ಹೇಳಿತ್ತು. ಇದನ್ನು ಆಧರಿಸಿ ಆ ರಾಜಕೀಯ ಪಕ್ಷವು ಪಿಟಿಐ ಕಚೇರಿಯಾದ್ಯಂತ ತಡಕಾಡಿ ಆ ಸುದ್ದಿ ಪಿಟಿಐನಿಂದ ವರದಿಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಆ ಪತ್ರಿಕೆಯ ಕಚೇರಿಗೆ ಹೋಯಿತು. ಆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವರು ಸಂಪಾದಕರೊಂದಿಗೆ ಮಾತನಾಡಿ ಈ ಸುದ್ದಿ ಕೊಟ್ಟವರು ಯಾರು ಎಂಬುದಾಗಿ ಪ್ರಶ್ನಿಸಿತು. ಅಂದಹಾಗೆ ಅದು ಪಿಟಿಐನಿಂದ ವರದಿಯಾಗಿದ್ದ ಸುದ್ದಿ ಆಗಿರಲಿಲ್ಲ ಬದಲಾಗಿ ಅದೇ ಸಂಸ್ಥೆಯ ಇಂಗ್ಲಿಷ್ ವರದಿಗಾರರು ದಿಲ್ಲಿಯಿಂದ ನೀಡಿದ ವರದಿಯಾಗಿತ್ತು. ಅದನ್ನು ಯತಾವತ್ತಾಗಿ ಭಾಷಾಂತರ ಮಾಡಲಾಗಿತ್ತು. ಭಾಷಾಂತರಿಸಿದ ಹಿರಿಯ ಪತ್ರಕರ್ತರಿಗೆ ಕ್ಷಮಾಧಾನ ನೀಡಲಾಗಿದೆಯಾದರೂ ಅದನ್ನು ವರದಿ ಮಾಡಿದ ಇಂಗ್ಲಿಷ್ ಪತ್ರಿಕೆ ವರದಿಗಾರನಿಗೆ ಇನ್ನು ಕಿರುಕುಳ ತಪ್ಪಿಲ್ಲ ಎಂಬ ಮಾಹಿತಿಗಳು ಬಂದಿವೆ.
ಕನ್ನಡಿಗರ ವಿಶ್ವಾಸ ಗಳಿಸಿ ಸ್ವಾತಂತ್ರ ನಂತರದ ದಿನಗಳಿಂದಲೂ ಸಮಾಜದ ಕಟ್ಟಕಡೆಯ ವ್ಯಕ್ತಿಪರವಾಗಿ ನಿಂತಿದ್ದ ಈ ದೊಡ್ಡ ಪತ್ರಿಕೆಯ ಕತೆಯೇ ಹೀಗಾದರೆ ಮಿಕ್ಕ ಪತ್ರಿಕೆಗಳ ಕತೆಯೇನು? ಕೋಬ್ರಾ ಪೋಸ್ಟ್ ಈಗಾಗಲೇ ನೀಡಿರುವ ಸೂಜಿ ಮೊನೆ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದಿರುವ ಸಂಪಾದಕರನ್ನು ನೋಡಿದ್ದೀರ. ಇದರರ್ಥ ಕೆಲವರು ಆ ಪಕ್ಷದ ಜತೆ ಕೈ ಜೋಡಿಸಿ ಡೀಲ್ ಆಗಿದ್ದಾರೆ. ಇನ್ನೂ ಕೆಲವರು ಡೀಲ್ ಆಗದೆ ಬೆದರಿಕೆ ಎದುರಿಸುತ್ತಿದ್ದಾರೆ.
ಏನು ಮಾಡಬೇಕು?
ಮಾಧ್ಯಮ ಸಂಸ್ಥೆಗಳ ಮೇಲೆ ರಾಜಕೀಯ ನಾಯಕರು, ಪಕ್ಷಗಳ ಪ್ರಭಾವ ಬೀರುತ್ತಿರುವುದು ಇಂದು ನಿನ್ನೆಯದಲ್ಲ. ಯಾವ ಸರಕಾರ ಬಂದರೂ, ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಇಂಥ ಅನಾಚಾರ ತಪ್ಪಲ್ಲ. ಈಗ ಸ್ವಲ್ಪ ಹೆಚ್ಚಾಗಿದೆ ಎಂದುಕೊಳ್ಳೋಣ. ವಿಶ್ವಾಸಾರ್ಹವಾದ ಸುದ್ದಿಗಳನ್ನು ತಿಳಿಯಬೇಕಿದ್ದರೆ ನವ ಹಾಗೂ ಸ್ವತಂತ್ರ ಮಾಧ್ಯಮಗಳನ್ನು ಆಯ್ಕೆ ಮಾಡಿಕೊಳ್ಳಿ. ಅವುಗಳಿ ಆಗಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಐದು ರೂಪಾಯಿಂದ ಸಾವಿರ ರೂ. ವರೆಗೆ ಆರ್ಥಿಕ ಸಹಾಯ ಮಾಡಿ ಅವನ್ನು ಪೋಷಿಸಿ.
ನಮಸ್ಕಾರ
ಸುದ್ದಿದಿನ ಸಂಪಾದಕೀಯ ಬಳಗ

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


