ನೆಲದನಿ
ಬಹುಮುಖಿ ಕಲಾಪ್ರತಿಭೆ : ‘ಈಶ್ವರ್ ಹತ್ತಿ’ ಅವರ ಬದುಕಿನ ಸುತ್ತ
ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಲೋಕವು ತನ್ನ ಶ್ರೀಮಂತಿಕೆಯಲ್ಲಿ ಉತ್ತುಂಗ ಶಿಖರಕ್ಕೆರಿದೆ. ಇದು ಅತಿಶಯೋಕ್ತಿಯೆನಿಸಿದರೂ ವಾಸ್ತವಕ್ಕೆ ದೂರವಾದ ಮಾತಲ್ಲ. ಇಂದು ಕನ್ನಡ ನಾಡು ವಿವಿಧ ಸಾಂಸ್ಕøತಿಕ ವಲಯಗಳ ಮೂಲಕವಾಗಿ ಕಂಗೊಳಿಸುತ್ತಿದೆ. ಇದಕ್ಕೆ ಹಲವಾರು ನಿದರ್ಶನಗಳು ನಮ್ಮ ಮುಂದಿವೆ. ಕನ್ನಡ ನಾಡಿನ ಈ ಸಾಂಸ್ಕøತಿಕ ಶ್ರೀಮಂತಿಕೆಗೆ ಹಲವಾರು ಮಹಾನಿಯರು ಹೆಗಲುಕೊಟ್ಟು ದಣಿದಿದ್ದಾರೆ, ದುಡಿದಿದ್ದಾರೆ. ಇದರಿಂದಾಗಿ ಕನ್ನಡ ನಾಡು ಹಾಗೂ ಕನ್ನಡ ಸಾರಸ್ವತ ಲೋಕವು ಶ್ರೀಮಂತಿಕೆಯ ಆಗರವಾಗಿ ಕಂಗೊಳಿಸುತ್ತಿದೆ. ಇಂತಹ ಶ್ರೀಮಂತ ಸಾಂಸ್ಕøತಿಕ ಹಿರಿಮೆಗೆ ಹೆಗಲುಕೊಟ್ಟು ದುಡಿದವರಲ್ಲಿ ಬಹುಮುಖಿ ಕಲಾಪ್ರತಿಭೆಯಾದ ಈಶ್ವರ್ ಹತ್ತಿಯವರು ಒಬ್ಬರಾಗಿದ್ದಾರೆ. ಎಲೆ ಮರೆಯ ಕಾಯಿಯಂತಿರುವ ಶ್ರೀಯುತರ ಸಾಹಿತ್ಯ ಹಾಗೂ ಕಲಾ ಸೇವೆಯನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಬಹುಮುಖ್ಯ ಆಶಯವಾಗಿದೆ.
ಶ್ರೀಯುತ ಈಶ್ವರ್ ಹತ್ತಿಯವರು ಯಲಬುರ್ಗಾ ತಾಲ್ಲೂಕು ಗುನ್ನಾಳ ಗ್ರಾಮದಲ್ಲಿ ಶ್ರೀ ಹನುಮಪ್ಪ ಹಾಗೂ ಶ್ರೀಮತಿ ಕಳಕಮ್ಮ ದಂಪತಿಗಳ ಮಗನಾಗಿ ದಿನಾಂಕ: 1ನೇ ಮೇ 1955 ರಲ್ಲಿ ಜನ್ಮತಾಳಿದರು. ಗ್ರಾಮೀಣ ಬದುಕಿನ ಕೂಡು ಕುಟುಂಬದಲ್ಲಿ ಬೆಳೆದುಬಂದ ಇವರು, ತಮ್ಮ ಸೋದರ ಮಾವನವರಾದ ಕಲ್ಲಪ ಮಾಸ್ತರರ ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ಶಿಕ್ಷಣ ಪಡೆದರು. ಮುಂದೆ ಬದುಕಿನ ಹಾದಿಯ ರೂಪುರೇಷೆಗಳನ್ನು ತಮ್ಮ ಮಾವನವರಿಂದ ಪಡೆದುಕೊಂಡರು. ಎಂ.ಎ, ಎಲ್.ಎಲ್.ಬಿ ಪದವಿಯನ್ನು ಪಡೆದ ಈಶ್ವರ್ ಹತ್ತಿಯವರು ಇಂಜಿನಿಯರ್ ಇಲಾಖೆಯಲ್ಲಿ ‘ಸ್ಟೋರ್ ಸೂಪರಿಡೆಂಟ್’ ಆಗಿ ತಮ್ಮ ವೃತ್ತಿ ಜೀವನವನ್ನು ನಿರ್ವಹಿಸಿದರು. ಇವರು ಈ ವೃತ್ತಿಯ ಜೊತೆಯಲ್ಲಿ ಸಾಹಿತ್ಯಿಕ ಮತ್ತು ಸಾಂಸ್ಕøತಿಕ ಕ್ಷೇತ್ರಗಳಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡರು. ಇವರಲ್ಲಿ ಅಂತರ್ಗತವಾಗಿರುವ ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಭೆಗೆ ಹಲವಾರು ಮಹಾನೀಯರು ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಶ್ರೀಯುತ ಈಶ್ವರ್ ಹತ್ತಿಯವರು ನಾಟಕ ಕಲಾವಿದರಾಗಿ ಮಾತ್ರವಲ್ಲದೆ ನಾಟಕ ರಚನಕಾರರಾಗಿಯೂ ಗುರುತಿಸಿಕೊಂಡವರು. ಇವರಲ್ಲಿ ನೆಲೆಯೂರಿದ ನಾಟಕ ಕಲೆಗೆ ಬಾಲ್ಯದಲ್ಲಿ ಪ್ರಮುಖ ಪ್ರೇರಕ ಶಕ್ತಿಯಾದವರು ಶ್ರೀಯುತರ ಹೆಣ್ಣಜ್ಜ (ತಾಯಿಯ ತಂದೆ) ಕಳಕಪ್ಪನವರು. ಇವರು ಸ್ವತಃ ನಾಟಕ ಕಲಾವಿದರಾಗಿ ಸಾಧನೆ ಮಾಡಿದವರಾಗಿದ್ದರು. ಇವರನ್ನು ಹತ್ತಿರದಿಂದ ಬಲ್ಲವರಾಗಿದ್ದ ಈಶ್ವರ್ ಹತ್ತಿಯವರು ತಮ್ಮ ಅಜ್ಜನ ನಟನ ಕಲೆಯನ್ನು ಕರಗತ ಮಾಡಿಕೊಂಡಿದ್ದರು. ಅವರಿಂದ ಸಾಕಷ್ಟು ತರಬೇತಿಯನ್ನು ಪಡೆದುಕೊಂಡಿದ್ದರು. ಹೀಗಾಗಿ ಮುಂದೆ ಇವರೊಬ್ಬ ಪ್ರಮುಖ ರಂಗಕಲಾವಿದರಾಗಲು ವೇದಿಕೆಯೊಂದನ್ನು ಸಿದ್ಧಗೊಳಿಸಿತ್ತು. ಬಾಲ್ಯದಲ್ಲಿ ಇವರ ಅಂತರಾಳದಲ್ಲಿ ಮೊಳಕೆಯೊಡೆದು ನಿಂತಿದ್ದ ಕಲಾ ಬೀಜಕ್ಕೆ ಪ್ರೋತ್ಸಾಹ ಹಾಗೂ ಅವಕಾಶಗಳು ಒದಗಿಬಂದಿದ್ದು ಗುಲಬರ್ಗಾದ ಶರಣ ಬಸವೇಶ್ವರ ಕಾಲೇಜಿನಲ್ಲಿ ಅಧ್ಯಯನ ಮಾಡುವ ಸಂದರ್ಭದಲ್ಲಿ. ಇಲ್ಲಿ ತಮ್ಮ ಸ್ನೇಹಿತರಾದ ಎಸ್.ಎಮ್.ಹಿರೇಮಠ್, ಎಂ.ಎಸ್.ಬಿಜಾಸ್ಪುರ್, ಮಲ್ಲಿನಾಥ್ ಗುಡ್ಡೆದ್, ವೀರಯ್ಯ ಹಿಪ್ಪರಿಗೆ, ಶಾಲಿನಿ, ಶೋಭಜೋಷಿ ಹಾಗೂ ಕೃಷ್ಣವೇಣಿ ಎಂಬ ಸ್ನೇಹಿತರು ಸಮಾನ ಮನಸ್ಕರಾಗಿದ್ದು, ಇವರೆಲ್ಲಾ ಸೇರಿಕೊಂಡು ರಂಗಭೂಮಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇಲ್ಲಿ ಹಲವಾರು ನಾಟಕಗಳನ್ನು ಪ್ರದರ್ಶನ ಮಾಡಿದರು. ಇದರ ಜೊತೆಗೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಕ್ರಿಯಾಶೀಲರಾಗಿ ತಮ್ಮನ್ನು ತೊಡಗಿಸಿಕೊಂಡರು. ಇದರಿಂದಾಗಿ ಈಶ್ವರ್ ಹತ್ತಿಯವರಲ್ಲಿ ಅಂತರ್ಗತವಾಗಿದ್ದ ರಂಗಾಭಿನಯ ಕಲೆಗೆ ಸೂಕ್ತವಾದ ವೇದಿಕೆಯೊಂದು ಲಭಿಸಿದಂತಾಯಿತು. ಈ ಹಿಂದೆ ಹೆಸರಾಂತ ಸಾಹಿತಿಗಳು ಹಾಗೂ ವಿಮರ್ಶಕರಾದ ಗಿರಡ್ಡಿ ಗೋವಿಂದರಾಜು ಹಾಗೂ ಇತರರ ತಂಡವು ಶರಣ ಬಸವೇಶ್ವರ ಮಹಾವಿದ್ಯಾಲಯ ಹಾಗೂ ಗುಲಬರ್ಗಾ ಪ್ರಾಂತ್ಯದಲ್ಲಿ ನಾಟಕವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಸಿದ್ಧಗೊಳಿಸಿದ್ದರು. ಇದು ಕೂಡ ಶ್ರೀಯುತ ಈಶ್ವರ್ ಹತ್ತಿಯವರನ್ನು ಹೆಚ್ಚು ಆಕರ್ಷಣೆಗೊಳಿಸಿತು. ಇದರಿಂದ ಶ್ರೀಯುತರ ಅಂತರಾಳದಲ್ಲಿ ಅಂತರ್ಗತವಾಗಿದ್ದ ಕಲಾ ಬೀಜವು ಮೊಳಕೆಯೊಡೆಯಲು ಪ್ರಚೋದಕ ಶಕ್ತಿಯಾಯಿತು. ಇವುಗಳಾಚೆ ಗುಲ್ಬರ್ಗಾದ ಶ್ರೀ ಶರಣ ಬಸವೇಶ್ವರ ಮಹಾವಿದ್ಯಾಲಯದ ಶೈಕ್ಷಣಿಕ ವಾತಾವರಣವು ಇವರನ್ನು ಒಬ್ಬ ಕಲಾವಿದರಾಗಿ ನಿರ್ಮಿಸಿತು.
ಶ್ರೀಯುತ ಈಶ್ವರ್ ಹತ್ತಿಯವರು ರಂಗಭೂಮಿಯಲ್ಲಿ ವಿಶೇಷವಾದ ಆಸಕ್ತಿಯನ್ನು ಮೈಗೂಡಿಸಿಕೊಂಡು, ಇದನ್ನು ಒಂದು ಪ್ರವೃತ್ತಿಯಾಗಿ ಮುಂದುವರೆಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಹಲವಾರು ರಂಗ ಪ್ರದರ್ಶನ ನೀಡಿ ಮೆಚ್ಚುಗೆಯನ್ನು ಗಳಿಸಿಕೊಂಡಿದ್ದರು. ರಂಗಭೂಮಿಯಲ್ಲಿ ತಾವು ಗಳಿಸಿದ ವಿದ್ವತ್ತನ್ನು ಪ್ರದರ್ಶಿಸುವ ನೆಲೆಯಲ್ಲಿ ಎಂಬತ್ತರ ದಶಕದಲ್ಲಿ ‘ಅಪೂರ್ಣ’ ಎಂಬ ನಾಟಕವನ್ನು ರಚಿಸಿ, ದಿನಾಂಕ: 2 ಅಕ್ಟೋಬರ್ 1982 ರಂದು ಗಾಂಧೀ ಜಯಂತಿಯ ದಿನದಂದು ಬೀದರಿನಲ್ಲಿ ಪ್ರದರ್ಶನ ನೀಡಲಾಗಿತ್ತು. ಬೀದರ್ನಲ್ಲಿ ‘ಹವ್ಯಾಸಿ ಕಲಾವಿದರ ಬಳಗ’ದಿಂದ ಪ್ರಥಮ ಪ್ರದರ್ಶನ ಕಂಡು ಯಶಸ್ವಿಯನ್ನು ಪಡೆದುಕೊಂಡ ಈ ನಾಟಕವು ಗುಲಬರ್ಗಾ, ಭೀಮರಾಯನಗುಡಿ, ಶಹಪೂರ, ರಾಯಚೂರು ಮುಂತಾದ ಕಡೆಗಳಲ್ಲಿ ನಾಡಿನ ಪ್ರತಿಭಾವಂತ ಕಲಾವಿದರಿಂದ ಪ್ರದರ್ಶನಗೊಂಡಿತು. ಈ ‘ಅಪೂರ್ಣ’ ನಾಟಕವು ತನ್ನದೇ ಆದ ವಿಶಿಷ್ಟತೆಯನ್ನು ಒಳಗೊಂಡಿದ್ದು, ವೈಚಾರಿಕ ಚಿಂತನೆಗಳನ್ನು ಅನುಭಾವಿಕ ನೆಲೆಯಲ್ಲಿ ಅನಾವರಣಗೊಳಿಸುತ್ತದೆ. ಗಂಭೀರವಾದ ಮತ್ತು ಚಿಂತನೆಗೆ ಒಳಪಡಿಸಬೇಕಾದ ವಿಷಯವನ್ನು ಮನರಂಜನಾತ್ಮಕ ನೆಲೆಯಲ್ಲಿ ಕಟ್ಟಿಕೊಟ್ಟಿರುವುದೆ ಇದರ ವಿಶೇಷವಾಗಿ ಕಂಡುಬರುತ್ತದೆ. ಇಲ್ಲಿ ಅಪೂರ್ಣತ್ವವನ್ನು ಪಡೆದುಕೊಂಡ ಮಾನವನು ತಾನು ಪರಿಪೂರ್ಣನಾಗಬೇಕು ಎಂದು ತುಡಿಯುತ್ತಲೆ ತನ್ನ ಬದುಕನ್ನು ಕಳೆದುಕೊಳ್ಳುವ ಅಂಶಗಳನ್ನು ಸೈದ್ಧಾಂತಿಕ ನೆಲೆಗಳಲ್ಲಿ ಕಟ್ಟಿಕೊಡಲಾಗಿದೆ. ಹೀಗಾಗಿ ಶ್ರೀಯುತರಲ್ಲಿ ಅಂತರ್ಗತವಾಗಿರುವ ವಿದ್ವತ್ತನ್ನು ಅಳೆಯುವುದಕ್ಕೆ ‘ಅಪೂರ್ಣ’ ಎಂಬ ಈ ನಾಟಕವೊಂದು ಮಾನದಂಡವಾಗಿ ನಿಲ್ಲುತ್ತದೆ ಎಂದರೆ ಅತಿಶಯೋಕ್ತಿಯಾಗಲಾರದು.
ಶ್ರೀಯುತ ಈಶ್ವರ್ ಹತ್ತಿಯವರಿಗೆ ಕೇವಲ ರಂಗಭೂಮಿ ಮಾತ್ರವಲ್ಲದೆ ಸಾಹಿತ್ಯದ ವಿವಿಧ ವಲಯಗಳು ಸಿದ್ಧಿಯಾಗಿವೆ. ಈ ಸಾಹಿತ್ಯ ಪ್ರಕಾರದಲ್ಲಿ ಇವರನ್ನು ಹೆಚ್ಚು ಆಕರ್ಷಿಸಿರುವ ವಲಯವೆಂದರೆ 12ನೇ ಶತಮಾನದ ಶರಣ ಚಳವಳಿ. ಸಮಸಮಾಜದ ಕನಸು ಕಂಡ ವಚನ ಸಾಹಿತ್ಯವು ಇವರನ್ನು ಹೆಚ್ಚು ಆಕರ್ಷಿಸಿತ್ತು. ಇದಕ್ಕೆ ಕಾರಣ ಶ್ರೀ ಶರಣ ಬಸವೇಶ್ವರ ಕಾಲೇಜಿನಲ್ಲಿ ಅಧ್ಯಯನ ಮಾಡುವ ಸಂದರ್ಭದಲ್ಲಿ ಇವರ ಮೇಲೆ ವಿಶಿಷ್ಟ ಪ್ರಭಾವ ಬೀರಿರುವ ಶರಣ ಬಸವೇಶ್ವರರ ಜೀವಪರ ನಿಲುವುಗಳು. ಇದರಿಂದ ಪ್ರಭಾವಿತರಾದ ಶ್ರೀಯುತರು ‘ದಾಸೋಹಿ ಶ್ರೀ ಶರಣಬಸವೇಶ ಕಾವ್ಯಂ’ ಎನ್ನುವ ಕೃತಿಯನ್ನು ರಚಿಸಿದ್ದಾರೆ. ಈ ಧೀರ್ಘವಾದ ಕಾವ್ಯವು ಖಂಡಕಾವ್ಯದ ಮಾದರಿಯಲ್ಲಿದ್ದು, ಇದು ಶಿವಶರಣ ಶ್ರೀ ಶರಣಬಸವರ ಜೀವನ ಮತ್ತು ಸಾಧನೆಯನ್ನು ಅನಾವರಣಗೊಳಿಸುತ್ತದೆ. ಹಾಗೆಯೇ ತಮ್ಮ ಗ್ರಾಮ ದೈವವಾದ ಗುನ್ನಾಳೇಶ್ವರನನ್ನು ಆರಾಧ್ಯ ದೈವವಾಗಿಸಿಕೊಂಡು, ಗುನ್ನಾಳೇಶ್ವರನನ್ನೇ ಅಂಕಿತನಾಮವಾಗಿರಿಸಿಕೊಂಡು ‘ಗುನ್ನಾಳೇಶ್ವರನ ವಚನಗಳು’ ಎಂಬ ವಿಶಿಷ್ಟವಾದ ಸಾಹಿತ್ಯ ಕೃತಿಯೊಂದನ್ನು ಕನ್ನಡ ಸಾರಸ್ವತ ಲೋಕಕ್ಕೆ ಸಮರ್ಪಿಸಿದ್ದಾರೆ. ಇದು ಕೂಡ 12ನೇ ಶತಮಾನದ ಶಿವಶರಣರ ವಚನಗಳ ಮಾದರಿಯಲ್ಲಿ ಮೂಡಿಬಂದಿದೆ. ಇದರ ಆಶಯವು ಕೂಡ ಶರಣ ಮಾರ್ಗವಾಗಿದೆ.
ಹೀಗೆ ಶ್ರೀಯುತ ಈಶ್ವರ್ ಹತ್ತಿಯವರು ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯಗಳಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡು ಮುನ್ನಡೆಯುತ್ತಿದ್ದಾರೆ. ನಾಟಕಾಭಿನಯ ಮಾತ್ರವಲ್ಲದೆ ಸಿನಿಮಾ ಲೋಕದಲ್ಲಿಯೂ ಕೂಡ ಶ್ರೀಯುತರು ತಮ್ಮ ಅಭಿನಯವನ್ನು ಪ್ರದರ್ಶಿಸಿದ್ದಾರೆ. ‘ಮಹಾದಾಸೋಹಿ ಶರಣ ಬಸವ’ ಸಿನಿಮಾದಲ್ಲಿ ‘ದಮ್ಮುರೋಗದ ಜಂಗಮ’ನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ತಮ್ಮ ಕಲಾ ಪಾಂಡಿತ್ಯವನ್ನು ಮೆರೆದಿದ್ದಾರೆ. ತಮ್ಮ ವೃತ್ತಿ ಜೀವನದಿಂದ ನಿವೃತ್ತಿಯನ್ನು ಪಡೆದುಕೊಂಡು ವಿಶ್ರಾಂತಿಯನ್ನು ಪಡೆಯಬೇಕಾದ ದಿನಗಳಲ್ಲಿಯೂ ಸಕ್ರಿಯವಾಗಿ ಸಾಹಿತ್ಯ ಮತ್ತು ಸಾಂಸ್ಕøತಿಕ ಲೋಕದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆ ಮೂಲಕವಾಗಿ ತಮ್ಮ ಕಲಾಭಿಮಾನವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಇಂದು ತಮ್ಮ ಶ್ರೀಮತಿಯವರಾದ ಅನ್ನಪೂರ್ಣಮ್ಮ, ತಮ್ಮ ನಾಲ್ಕು ಜನ ಮಕ್ಕಳಾದ ಜ್ಯೋತಿ, ಜಯಶ್ರೀ, ಜಯಲಕ್ಷ್ಮೀ, ಶರಣಬಸವ ಹಾಗೂ ಮೊಮ್ಮಕ್ಕಳೊಂದಿಗೆ ಅನ್ಯೋನ್ಯವಾದ ಜೀವನ ನಡೆಸುತ್ತಿದ್ದಾರೆ. ಇವರ ಈ ಸುಂದರ ಪಯಣ ಹೀಗೆ ಯಶಸ್ವಿನೆಡೆಗೆ ಸಾಗಲಿ ಎಂಬುದು ನಮ್ಮೆಲ್ಲರ ಹಾರೈಕೆ.
(ಡಾ. ಓಬಳೇಶ್, ಉಪನ್ಯಾಸಕರು, ದಾವಣಗೆರೆ, ಮೊ: 9538345639)

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ1 day agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ



