ರಾಜಕೀಯ
ಮೈತ್ರಿ ಸರ್ಕಾರ ಉರುಳಿಸಲು 250 ಕೋಟಿ ರೂ ಹಂಚಿಕೆ ; “ರಾಜಿನಾಮೆ ಕೊಡ್ತೀವಿ ಆದ್ರೆ ಹಣ ವಾಪಸ್ ಕೊಡಲ್ಲ” ಎಂದ ಶಾಸಕರು
ಸುದ್ದಿದಿನ, ಬೆಂಗಳೂರು : ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ನಿವಾಸಕ್ಕೆ ಹೊರಟ ಕುಮಾರಸ್ವಾಮಿಯವರು ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಲಿದ್ದಾರೆ. ಮಾಜಿ ಸಿಎಂ 12 ದಿನಗಳ ಫಾರಿನ್ ಟೂರ್ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಸಿದ್ದು.
ಕಳೆದೊಂದು ವಾರದಿಂದ ಮೈತ್ರಿ ಸರ್ಕಾರದ ಬುಡ ಅಲುಗಾಡಿಸ್ತಿರೋ ಅತೃಪ್ತರ ಬಣ
ಈ ಬಗ್ಗೆ ಸಿದ್ದು ಜತೆ ಮಾತುಕತೆ ನಡೆಸಲು ಸಿಎಂ ಕುಮಾರಸ್ವಾಮಿ ಸಿದ್ದು ಮನೆಗೆ ಹೊರಟಿದ್ದಾರೆ.
ಈಗಾಗಲೇ ಸಿದ್ದರಾಮಯ್ಯ ನಿವಾಸದಲ್ಲಿ ವೇಣುಗೋಪಾಲ್, ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆ ಅವರು ಇದ್ದಾರೆ.
ಮೈತ್ರಿ ಸರ್ಕಾರ ಬೀಳೋದು ಗ್ಯಾರಂಟಿಯಂತೆ
ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ ಯಾಗಿದ್ದು ನಾಳೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಲಿದೆ. ಯಾವುದೇ ಕಾರಣಕ್ಕೂ ಈ ಮೈತ್ರಿ ಸರ್ಕಾರ ಉಳಿಯಲ್ಲ ಎಂಬುದು ಬಿಜೆಪಿ ಮುಖಂಡರ ಸಾಮಾನ್ಯ ಹೇಳಿಕೆಯಾಗಿ್ದೆದೆ. ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ವೇಣುಗೋಪಾಲ್ ಏನೇ ಕಸರತ್ತು ಮಾಡಿದ್ರೂ ಸರ್ಕಾರ ಉಳಿಯಲ್ಲ. ಸಿದ್ದರಾಮಯ್ಯ ವಾಪಸ್ ಬಂದು ಏನೇ ಮ್ಯಾಜಿಕ್ ಮಾಡಿದ್ರೂ ಸರ್ಕಾರ ಪತನ ಪಕ್ಕಾ ಆಗಿದೆ. 25 ಕಾಂಗ್ರೆಸ್ ಶಾಸಕರ ಸಂಪರ್ಕದಲ್ಲಿರುವ ಬಿಜೆಪಿ ನಾಯಕರು –
ನಾಳೆ 20 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡೋದು ಗ್ಯಾರಂಟಿಯಾಗಿದೆ. ಇನ್ನೂ ಐವರು ಶಾಸಕರು ರಾಜೀನಾಮೆ ನೀಡುವ ಗೊಂದಲದಲ್ಲಿದ್ದಾರೆ. ನಾಳೆ ಬೆಳಗ್ಗೆ ಸಿದ್ದು ಆಶೀರ್ವಾದ ಪಡೆದು ರಾಜೀನಾಮೆ ನೀಡಲಿರೋ ಈ ಶಾಸಕರು
ಸೆಪ್ಟೆಂಬರ್ 23ಕ್ಕೆ ಯಡಿಯೂರಪ್ಪ ಸಿಎಂ ಆಗೋದು ಪಕ್ಕಾ ಆಗಿದೆ. ಹೀಗಾಗಿಯೇ ಇಂದು ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಬಿಎಸ್ವೈ ಹೊಸ ಸರ್ಕಾರ ರಚನೆ ಬಗ್ಗೆ ಎಲ್ಲವೂ ಪ್ಲಾನ್ ಮಾಡಿಕೊಂಡಿದೆ ಬಿಜೆಪಿ.
ಬರೋಬ್ಬರಿ 250 ಕೋಟಿ ರೂ ಹಂಚಿಕೆ
ಹಾಗೇ ಮೈತ್ರಿ ಸರ್ಕಾರ ಬೀಳಿಸಲು ಬರೋಬ್ಬರಿ 250 ಕೋಟಿ ಹಂಚಲಾಗಿಯಂತೆ
ಈಗಾಗಲೇ ಕೆಲ ಶಾಸಕರಿಗೆ ತಲುಪಿದೆಯಂತೆ ಕೋಟಿ ಕೋಟಿ ಕಂತೆ ಹಣ. ಶಾಸಕರಿಗೆ ದುಡ್ಡು ತಲುಪಿರೋ ಬಗ್ಗೆ ಮುಖ್ಯಮಂತ್ರಿಗಳು ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ. ರಾಜೀನಾಮೆ ಬೇಕಾದ್ರೆ ಕೊಡ್ತೇವೆ, ದುಡ್ಡು ವಾಪಸ್ ಕೊಡಲ್ಲ ಅಂತಿರೋ ಶಾಸಕರು. ಕಾಂಗ್ರೆಸ್ ನಾಯಕರು ಫೋನ್ಗಳನ್ನ ಸ್ವೀಕರಿಸುತ್ತಿಲ್ಲ ಈ 20 ಶಾಸಕರು. ಯಾರ ಕೈಗೂ ಸಿಗದೆ ನಾಳೆ ನೇರವಾಗಿ ಸಿದ್ದರಾಮಯ್ಯರನ್ನ ಭೇಟಿ ಮಾಡಲಿದ್ದಾರೆ ಶಾಸಕರು.
ಸಿದ್ದು ಭೇಟಿ ನಂತರ ನೇರವಾಗಿ ಸ್ಪೀಕರ್ ಬಳಿ ಹೋಗಿ ರಾಜೀನಾಮೆ ನೀಡಲಿರುವ ಶಾಸಕರು,
ಫುಲ್ ಕನ್ಫ್ಯೂಸ್ನಲ್ಲಿರುವ ಇನ್ನುಳಿದ ಐವರು ಕಾಂಗ್ರೆಸ್ ಶಾಸಕರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.
ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.
“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

