Connect with us

ಲೈಫ್ ಸ್ಟೈಲ್

ನಿಯಮಿತ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ !

Published

on

banana-health-benefits-kannada

ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ (ಬಾಳೆಹಣ್ಣು) ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ (banana benefits in kannada) ನಿಮ್ಮ ಬಾಳು ಬಂಗಾರ ಆಗುತ್ತದೆ !

ನಾಟಿಬಾಳೆ, ಏಲಕ್ಕಿ ಬಾಳೆ, ರಸಬಾಳೆ, ಪಚ್ಚಬಾಳೆ ಸೇರಿದಂತೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ.

ನಿಯಮಿತ ಬಾಳೆಹಣ್ಣು ಸೇವಿಸಿದರೆ ಆರೋಗ್ಯ ವೃದ್ಧಿ ( benefits of banana in kannada )

ಒಂದು ಬಾಳೆಹಣ್ಣು ತಿಂದು ಒಂದು ಕಪ್ಪು ಚಹಾದ ಕಷಾಯ ಸೇವಿಸಿದರೆ ಅತಿಸಾರ ಮತ್ತು ಆಮಶಂಕೆ ವಾಸಿ ಆಗುತ್ತದೆ.(benefits of banana in kannada) ಬಾಳೆಹಣ್ಣಿನ ತಿರುಳನ್ನು ಮಜ್ಜಿಗೆಯಲ್ಲಿ ಚೆನ್ನಾಗಿ ಬೆರೆಸಿ ಸೇವಿಸುವುದರಿಂದ ಕೂಡ ಆಮಶಂಕೆ ಗುಣವಾಗುತ್ತದೆ. ಜತೆಗೆ ಬಾಳೆಹಣ್ಣಿನ ಸಿಪ್ಪೆ ಕಷಾಯ ತಯಾರಿಸಿ ಕುಡಿದರೆ ಆಮಶಂಕೆ ದೂರವಾಗುತ್ತದೆ.

ಪ್ರತಿದಿನ ರಾತ್ರಿ ಮಲುಗುವುದಕ್ಕೂ ಮುಂಚೆ ಸಿಪ್ಪೆ ಸಹಿತ ಒಂದು ಏಲಕ್ಕಿಯನ್ನು ಬಾಳೆಹಣ್ಣಿ ನೊಂದಿಗೆ ತಿನ್ನುವುದರಿಂದ ಮೂಲವ್ಯಾಧಿ ಗುಣವಾಗುತ್ತದೆ. ಬಾಳೆಹಣ್ಣಿನ ತಿರುಳನ್ನು ಹುಳಿ ಮಜ್ಜಿಗೆಯಲ್ಲಿ ಕಿವುಚಿ ದೀರ್ಘಕಾಲ ಸೇವಿಸಿದರೆ ಮೂಲವ್ಯಾಧಿ ಶಮನ ವಾಗುತ್ತದೆ. ಜತೆಗೆ ಒಂದು ಬಟ್ಟಲು ಹಾಲಿನೊಂದಿಗೆ ಬಾಳೆಹಣ್ಣನ್ನು ಕಲಸಿ ದಿನನಿತ್ಯ ಸೇವಿಸಿದರೆ ಕರುಳಿನ ಹುಣ್ಣು ವಾಸಿಯಾಗುತ್ತದೆ.

ದೇಹದ ತೂಕ ಹೆಚ್ಚಿಸಿ ಕೊಳ್ಳಲು ಪ್ರತಿದಿನ ಒಂದು ಬಾಳೆಹಣ್ಣು ಹಾಗೂ ಒಂದು ಮೊಟ್ಟೆ ಸೇವಿಸುವುದು ಉತ್ತಮ ಮಾರ್ಗ. ಮಾಗಿದ ರಸಬಾಳೆ ಹಣ್ಣಿನೊಂದಿಗೆ ಅರ್ಧ ಟಿ ಚಮಚ ಕಾಳೆಮೆಣಸಿನ ಪುಡಿ ಮಿಶ್ರಣ ಮಾಡಿ ಮೂರು ಸಮಭಾಗವಾಗಿ ಮಾಡಿಕೊಂಡು ದಿನಕ್ಕೆ ಮೂರುಬಾರಿ ಸೇವಿಸಿದರೆ ನೆಗಡಿ ಮತ್ತು ಕೆಮ್ಮು ಮಾಯವಾಗುತ್ತದೆ.

ಕುರು ಕಾಣಿಸಿಕೊಂಡರೆ ಬಾಳೆಹಣ್ಣಿನ ತಿರುಳನ್ನು ಚೆನ್ನಾಗಿ ಕಿವುಚಿ ಕುರುವಿನ ಮೇಲೆ ಸೇಪಿಸಿದರೆ ಕುರು ಶೀಘ್ರವಾಗಿ ಒಡೆದುಕೊಂಡು ರಕ್ತ, ಕೀವು ಹೊರಬರುತ್ತದೆ. ಇದರಿಂದ ನೋವು ಬೇಗ ಉಪಶಮನ ಆಗುತ್ತದೆ. ಬಾಳೆಹಣ್ಣಿನ ತಿರುಳನ್ನು ಒಂದು ಬಟ್ಟಲು ಮಜ್ಜಿಗೆಯೊಂದಿಗೆ ಬೆರೆಸಿ ಒಂದು ವಾರಗಳ ಕಾಲ ಸೇವಿಸಿದರೆ ಅಂಗಾಲು, ಅಂಗೈ, ಆಸನಾಗ್ರಹದಲ್ಲಿ ಉಂಟಾದ ಉರಿ ಕಡಿಮೆ ಮಾಡುತ್ತದೆ. ಬಾಳೆಹಣ್ಣು ಸೇವಿಸುವುದರಿಂದ ರಕ್ತ, ಪಿತ್ತ ಹಾಗೂ ವಾಯುವಿಕಾರಗಳು ಕಡಿಮೆ ಆಗುತ್ತವೆ. ಜತೆಗೆ ಪಚನ ಕಾರ್ಯ ಉತ್ತಮವಾಗಲು ಬಾಳೆಹಣ್ಣು ಉತ್ತಮ ಔಷಧಿ.

ಗರ್ಭಿಣಿಯರು ಬಾಳೆಹಣ್ಣನ್ನು ನಿಯಮಿತವಾಗಿ ಸೇವಿಸಿದರೆ ರಕ್ತಪುಷ್ಟಿಯಾಗಿ ಹೆರಿಗೆ ಸುಳಭವಾಗಲು ಅನುಕೂಲ ಮಾಡುತ್ತದೆ. ಜತೆಗೆ ಹಾಲು ಮತ್ತು ಸಕ್ಕೆರೆ ಯೊಂದಿಗೆ ಬಾಳೆಹಣ್ಣು ತಿಂದರೆ ಮಲಬದ್ಧತೆ ನಿವಾರಣೆ ಆಗುತ್ತದೆ. ಪುರುಷರ ವೀರ್ಯ ವೃದ್ಧಿಗೆ ಬಾಳೆಹಣ್ಣಿನ ನಿಯಮಿತ ಸೇವನೆ ಉತ್ತಮ ಮಾರ್ಗ.

ಜೇನುತುಪ್ಪದೊಂದಿಗೆ ಬಾಳೆಹಣ್ಣು ಸೇವಿಸಿದರೆ ಕೆಮ್ಮು ಮತ್ತು ಎದೆನೋವು ಕಡಿಮೆ ಆಗುತ್ತದೆ. ರಾತ್ರಿ ಊಟ ಆದ ನಂತರ ಹಾಲು ಮತ್ತು ಬಾಳೆಹಣ್ಣು ಸೇವಿಸಿದರೆ ಸಂಭೋಗ ಶಕ್ತಿ ವೃದ್ಧಿ ಆಗುತ್ತದೆ.

Read also: ಬೇಸಿಗೆಯಲ್ಲಿ ಉಂಟಾಗುವ ಆರೋಗ್ಯ ಪರಿಣಾಮಗಳು

ಬಹು ಉಪಯೋಗಿ ಬಾಳೆಹಣ್ಣು (benefits of banana in kannada)

  • 1. ಬಾಳೆಹಣ್ಣಿನಿಂದ ರಸಾಯನ ತಯಾರು ಮಾಡುವುದು ವಿಶೇಷ.
  • 2. ಬಾಳೆಹಣ್ಣಿನಿಂದ ಜಾಮ್ ತಯಾರಿಸಲಾಗುತ್ತದೆ. ಇದು ದೊಡ್ಡವರಿಂದ ಚಿಕ್ಕ ಮಕ್ಕಳಿಗೂ ಇಷ್ಟವಾಗುತ್ತದೆ.
  • 3. ದೇವರ ಪೂಜೆಗೆ, ಪಂಚಾಮೃತ ತಯಾರಿಕೆಗೆ ಸಕ್ಕರೆ, ಹಾಲು, ಜೇನು ತುಪ್ಪದೊಂದಿಗೆ ಬಾಳೆ ಹಣ್ಣು ಬೆರೆಸಲಾಗುತ್ತದೆ.
  • 4. ಬಯಲು ಸೀಮೆ ಸೇರಿದಂತೆ ನಾಡಿನ ಹಲವು ಭಾಗಗಳಲ್ಲಿ ಬಾಳೆಹಣ್ಣಿನ ಸೀಕರಣೆ ತಯಾರಿಸಿ ಹೋಳಿಗೆಯೊಂದಿಗೆ ಊಟ ಮಾಡುವುದು ವಾಡಿಕೆ.
  • 5. ಬಾಳೆ ಕಾಯಿ ಹಾಗೂ ಅದರ ದಿಂಡಿನಿಂದ ಕಾಯಿಪಲ್ಯ ತಯಾರಿಸುವುದು ವಿಶೇಷ.

ಬಾಳೆಹಣ್ಣಿನಲ್ಲಿ ಅಡಗಿರುವ ಪೌಷ್ಟಿಕಾಂಶಗಳು (ಪ್ರತಿ ನೂರು ಗ್ರಾಂ) (benefits of banana kannada)

  1. ಬಲ (ಶಕ್ತಿ)          1.16 ಗ್ರಾಂ
  2. ಪ್ರೋಟೀನ್ 1.2 ಗ್ರಾಂ
  3. ಕೊಬ್ಬು  0.2 ಗ್ರಾಂ
  4. ಕಾರ್ಬೋಹೈಡ್ರೇಟ್ಸ್  27 ಗ್ರಾಂ
  5. ಕ್ಯಾಲ್ಸಿಯಂ 17 ಮಿಲಿಗ್ರಾಂ
  6. ಕಬ್ಬಿಣ  9 ಮಿಲಿಗ್ರಾಂ
  7. ಕೆರೋಟೀನ್ 78 ಮಿಲಿ ಗ್ರಾಂ
  8. ಥಿಯಾಮಿನ್ 0.05 ಮಿಲಿ ಗ್ರಾಂ
  9. ರಿಬೋಪ್ಲೇಮಿನ್ 0.08 ಮಿಲಿ ಗ್ರಾಂ
  10. ಸೋಡಿಯಂ  5 ಮಿಲಿ ಗ್ರಾಂ
  11. ನಿಯಾಸಿನ್            0.5 ಮಿಲಿ ಗ್ರಾಂ
  12. ವಿಟಮಿನ್ “ಸಿ” 0.5 ಮಿಲಿ ಗ್ರಾಂ
  13. ಖನಿಜಾಂಶ  6.0 ಗ್ರಾಂ

ಈ ಐದು ಸಮಸ್ಯೆ ನಿವಾರಣೆ ಬಾಳೆಹಣ್ಣು ರಾಮಬಾಣ

  • 1. ಭೇದಿ ನಿಯಂತ್ರಣ
  • 2. ಮಲಬದ್ಧತೆ ನಿವಾರಣೆಗೆ ಬಾಳೆಹಣ್ಣು ಉಪಯುಕ್ತ
  • 3. ಅಲ್ಸರ್ ನಿವಾರಣೆ
  • 4. ಮೂತ್ರ ಕೋಶದ ಕಾಯಿಲೆ ನಿವಾರಣೆಗೆ
  • 5. ಹೃದಯದ ಬೇನೆಗೆ ಬಾಳೆಹಣ್ಣು ಉಪಯುಕ್ತ

ಬಾಳೇಹಣ್ಣನ್ನು ನಿಸರ್ಗದ ಕಾಮಧೇನು ಎಂದು ಕರೆಯಲಾಗುತ್ತದೆ. ಈ ಹಣ್ಣಿನಲ್ಲಿ ಖನಿಜಾಂಶ, ಪೋಷಕಾಂಶ ಹೆಚ್ಚು ಇರುವುದರಿಂದ ಇದು ಹಲವು ರೋಗಗಳಿಗೆ ಮದ್ದಾಗಿ ಕೆಲಸ ಮಾಡುತ್ತದೆ. ಆದ್ದರಿಂದ ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಆರೋಗ್ಯ ವೃದ್ಧಿಸುವುದರಲ್ಲಿ ಅನುಮಾನ ಇಲ್ಲ.

English Summery 

benefits of banana  in kannada

banana is one fruit that is commonly available across the India and even world also. its instant energy booster. it is given much importance where various regional cuisines use it in making sinful desserts. Bananas contain natural sugars. and here we give benefits of banana  in kannada language.
 |

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

Published

on

ಕುಂಬಳಕಾಯಿ ಬೀಜಗಳು ಖಾದ್ಯ ಬೀಜಗಳಾಗಿವೆ, ಅವುಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯಕ್ಕಾಗಿ ಶತಮಾನಗಳಿಂದ ತಿಳಿದುಬಂದಿದೆ. ಕುಂಬಳಕಾಯಿ ಸಸ್ಯದ ಈ ಚಪ್ಪಟೆ ಮತ್ತು ಬಿಳಿ ಬೀಜಗಳನ್ನು ಸರಿಯಾಗಿ “ಶಕ್ತಿ ಕೇಂದ್ರ” ಎಂದು ಕರೆಯಲಾಗುತ್ತದೆ ಪೋಷಣೆ”. ಕುಂಬಳಕಾಯಿ ಬೀಜದಿಂದ ಹೊರಗಿನ ಬಿಳಿ ಹೊದಿಕೆಯನ್ನು ತೆಗೆದಾಗ, ತಿಳಿ ಹಸಿರು ಬೀಜಗಳನ್ನು ಪಡೆಯಲಾಗುತ್ತದೆ, ಅವು ಕಣ್ಣಿನ ಆಕಾರದಲ್ಲಿರುತ್ತವೆ, ಆದರೆ ಚಪ್ಪಟೆ ಆಕಾರದಲ್ಲಿರುತ್ತವೆ. ಸಾಂಪ್ರದಾಯಿಕವಾಗಿ, ಕುಂಬಳಕಾಯಿ ಬೀಜಗಳನ್ನು ಮೂತ್ರಪಿಂಡದಂತಹ ವಿವಿಧ ಆರೋಗ್ಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಮೂತ್ರನಾಳದ ತೊಂದರೆಗಳು, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ, ಮತ್ತು ಪರಾವಲಂಬಿಗಳು.

ಕುಂಬಳಕಾಯಿ ಬೀಜಗಳನ್ನು ಅವುಗಳ ಕಚ್ಚಾ, ಮೊಳಕೆಯೊಡೆದ ರೂಪದಲ್ಲಿ ಯಾವುದೇ ಕಿರಾಣಿ ಅಂಗಡಿಯಲ್ಲಿ ಕಾಣಬಹುದು, ಇದು ಕುಂಬಳಕಾಯಿ ಬೀಜಗಳನ್ನು ಸೇವಿಸಲು ಉತ್ತಮ ಮಾರ್ಗವಾಗಿದೆ. ಕುಂಬಳಕಾಯಿ ಬೀಜಗಳ ಪೌಷ್ಟಿಕಾಂಶದ ಮೌಲ್ಯವು ಅಧಿಕವಾಗಿದೆ ಮತ್ತು ಇದು ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್ಗಳು ಮತ್ತು ಅಪರ್ಯಾಪ್ತ ಕೊಬ್ಬಿನಾಮ್ಲಗಳ ಸಮೃದ್ಧ ಮೂಲವಾಗಿದೆ. ಕುಂಬಳಕಾಯಿ ಬೀಜಗಳ ಪ್ರಯೋಜನಗಳು ವಿವಿಧ ಆರೋಗ್ಯ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡುತ್ತದೆ, ಉದಾಹರಣೆಗೆ ಕ್ಯಾನ್ಸರ್.

ಕುಂಬಳಕಾಯಿ ಬೀಜಗಳ ಪೌಷ್ಟಿಕಾಂಶದ ಮೌಲ್ಯ
ಕುಂಬಳಕಾಯಿ ಬೀಜಗಳು ಪೊಟ್ಯಾಸಿಯಮ್, ಸತು ಮತ್ತು ಮ್ಯಾಂಗನೀಸ್ ಮತ್ತು ವಿಟಮಿನ್ ಕೆ ನಂತಹ ಖನಿಜಗಳು ಸೇರಿದಂತೆ ಹಲವಾರು ಪೋಷಕಾಂಶಗಳ ಪ್ರಬಲ ಮೂಲವಾಗಿದೆ. ನಿರೋಧಕ ವ್ಯವಸ್ಥೆಯ ಪ್ರತಿಜನಕಗಳ ವಿರುದ್ಧ ಹೋರಾಡಲು. ಕುಂಬಳಕಾಯಿ ಬೀಜಗಳು ರಂಜಕ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ ಮತ್ತು ತಾಮ್ರದಂತಹ ಇತರ ಅಗತ್ಯ ಖನಿಜಗಳ ಅತ್ಯುತ್ತಮ ಮೂಲವಾಗಿದೆ.

ಪ್ರತಿ ಸೇವೆಗೆ ಇರುವ ಕುಂಬಳಕಾಯಿ ಬೀಜಗಳ ಬಗ್ಗೆ ಪೌಷ್ಟಿಕಾಂಶದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಕ್ಯಾಲೋರಿಗಳು: ಕುಂಬಳಕಾಯಿ ಬೀಜಗಳು ಒಣಗಿದ ಕುಂಬಳಕಾಯಿ ಬೀಜಗಳ ನಾಲ್ಕನೇ ಕಪ್ನಲ್ಲಿ 180 kCal ಅನ್ನು ಹೊಂದಿರುತ್ತವೆ.

ಪ್ರೋಟೀನ್ಗಳು: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 10 ಗ್ರಾಂ ಪ್ರೋಟೀನ್ ಅನ್ನು ಹೊಂದಿರುತ್ತವೆ.

ಫ್ಯಾಟ್: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 16 ಗ್ರಾಂ ಕೊಬ್ಬನ್ನು ಒದಗಿಸುತ್ತದೆ.

ಕಾರ್ಬೋಹೈಡ್ರೇಟ್ಗಳು: ಕುಂಬಳಕಾಯಿ ಬೀಜಗಳು ಪ್ರತಿ ಸೇವೆಗೆ ಸುಮಾರು 3 ಗ್ರಾಂ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತವೆ.

ಫೈಬರ್: ಕುಂಬಳಕಾಯಿ ಬೀಜಗಳಲ್ಲಿ ಸುಮಾರು 2 ಗ್ರಾಂ ಫೈಬರ್ ಇರುತ್ತದೆ.

ಕುಂಬಳಕಾಯಿ ಬೀಜಗಳು ಯಾವುದೇ ಸಕ್ಕರೆ ಅಥವಾ ಅನಾರೋಗ್ಯಕರ ಕೊಬ್ಬನ್ನು ಹೊಂದಿರುವುದಿಲ್ಲ, ಇದು ತೂಕ ನಷ್ಟದ ಆಡಳಿತದಲ್ಲಿರುವವರಿಗೆ ಬೆಳಗಿನ ಉಪಾಹಾರ ಧಾನ್ಯಗಳು ಮತ್ತು ಸಲಾಡ್‌ಗಳಿಗೆ ಉತ್ತಮ ಸೇರ್ಪಡೆಯಾಗಿದೆ. ಆದಾಗ್ಯೂ, ಕುಂಬಳಕಾಯಿ ಬೀಜಗಳು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುವ ಕಾರಣ ಮಿತವಾಗಿ ಸೇವಿಸಬೇಕು. ಹೆಚ್ಚುವರಿಯಾಗಿ, ಅವುಗಳು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಅವುಗಳನ್ನು ಸೇವಿಸಿದ ನಂತರ ಜನರು ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ ಮತ್ತು ಅತಿಯಾಗಿ ತಿನ್ನುವ ಬಯಕೆಯನ್ನು ನಿಗ್ರಹಿಸುವ ಮೂಲಕ ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ.

12 ಕುಂಬಳಕಾಯಿ ಬೀಜಗಳ ಆರೋಗ್ಯ ಪ್ರಯೋಜನಗಳು
ಕುಂಬಳಕಾಯಿ ಬೀಜಗಳನ್ನು ನೇರವಾಗಿ ಆಹಾರಕ್ಕೆ ಹೆಚ್ಚುವರಿಯಾಗಿ ಬಳಸಬಹುದು ಅಥವಾ ಸೇವಿಸುವ ಮೊದಲು ಹುರಿಯಬಹುದು. ಅವುಗಳನ್ನು ಸ್ವಂತವಾಗಿ ಲಘುವಾಗಿ ತಿನ್ನಬಹುದು ಅಥವಾ ಅನೇಕ ಪಾಕವಿಧಾನಗಳು ಮತ್ತು ಊಟಗಳಿಗೆ ಸೇರಿಸಬಹುದು. ಅನೇಕ ಕುಂಬಳಕಾಯಿ ಬೀಜಗಳಲ್ಲಿ ಹುರಿದ ಪ್ರಯೋಜನಗಳಿವೆ, ಇದನ್ನು ಸ್ಮೂಥಿಗಳಲ್ಲಿ ಬಳಸುವುದರ ಮೂಲಕ, ಊಟದ ಮೇಲೆ ಅಲಂಕರಿಸುವ ಮೂಲಕ ಅಥವಾ ಲಘುವಾಗಿ ಟೋಸ್ಟ್ ಮಾಡುವ ಮೂಲಕ ಆನಂದಿಸಬಹುದು. ಆದಾಗ್ಯೂ, ಕುಂಬಳಕಾಯಿ ಬೀಜಗಳನ್ನು ಹೆಚ್ಚು ತಿನ್ನಬಾರದು, ವಿಶೇಷವಾಗಿ ಆರೋಗ್ಯಕರ ತೂಕವನ್ನು ನಿರ್ವಹಿಸಲು ಅವುಗಳನ್ನು ಸೇವಿಸುವಾಗ.

ಕುಂಬಳಕಾಯಿ ಬೀಜಗಳನ್ನು ಪ್ರತಿದಿನ ಸೇವಿಸುವುದರಿಂದ ಅನೇಕ ಸಂಭಾವ್ಯ ಪ್ರಯೋಜನಗಳಿವೆ. ಬಿಳಿ ಕುಂಬಳಕಾಯಿ ಬೀಜಗಳ ಟಾಪ್ 12 ಪ್ರಯೋಜನಗಳು ಇಲ್ಲಿವೆ.

ಮಧುಮೇಹದ ಅಪಾಯವನ್ನು ಕಡಿಮೆ ಮಾಡುವುದು

ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್ ಅಧಿಕವಾಗಿದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಆಹಾರದ ಅತ್ಯಗತ್ಯ ಅಂಶವಾಗಿದೆ. ಕುಂಬಳಕಾಯಿ ಬೀಜಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಮೂಲಕ ಮತ್ತು ಮಧುಮೇಹದ ಅಪಾಯವನ್ನು ಕಡಿಮೆ ಮಾಡುವ ಮೂಲಕ ಮಧುಮೇಹ ರೋಗಿಗಳಿಗೆ ಒಳ್ಳೆಯದು. ಮಧುಮೇಹ ಮೆಲ್ಲಿಟಸ್ ಅನ್ನು ನಿರ್ವಹಿಸುವ ಮೂಲಕ ಕುಂಬಳಕಾಯಿ ಬೀಜಗಳು ಮಧುಮೇಹ ರೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ, ಇದರಿಂದಾಗಿ ಸ್ಥಿತಿಯನ್ನು ಸರಿಯಾಗಿ ನಿಯಂತ್ರಿಸುತ್ತದೆ.

ಉರಿಯೂತದ ಗುಣಲಕ್ಷಣಗಳು

ಕುಂಬಳಕಾಯಿ ಬೀಜಗಳು ಹಲವಾರು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇದು ನಮ್ಮ ಕೋಶಗಳನ್ನು ಹಾನಿಯಿಂದ ರಕ್ಷಿಸಲು ಮತ್ತು ರೋಗಗಳಿಗೆ ಕಾರಣವಾಗುವ ಉರಿಯೂತದಿಂದ ರಕ್ಷಿಸುತ್ತದೆ. ನಾರಿನ ಸಮೃದ್ಧ ಮೂಲವಾಗಿರುವುದರಿಂದ, ಕುಂಬಳಕಾಯಿ ಬೀಜಗಳು ತಮ್ಮ ಉರಿಯೂತದ ಗುಣಲಕ್ಷಣಗಳನ್ನು ವರ್ಧಿಸುತ್ತವೆ. ಈ ಗುಣವು ಯಕೃತ್ತು, ಮೂತ್ರಕೋಶ, ಕರುಳು ಮತ್ತು ಕೀಲುಗಳ ರೋಗಗಳನ್ನು ತಡೆಗಟ್ಟುವಲ್ಲಿ ಪ್ರಯೋಜನಕಾರಿಯಾಗಿದೆ.

ಹೃದಯದ ಕಾರ್ಯವನ್ನು ಬೆಂಬಲಿಸುತ್ತದೆ

ಕುಂಬಳಕಾಯಿ ಬೀಜಗಳು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಕುಂಬಳಕಾಯಿ ಬೀಜದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಹೃದಯವನ್ನು ವಿವಿಧ ಕಾಯಿಲೆಗಳಿಂದ ರಕ್ಷಿಸುತ್ತದೆ. ಹೆಚ್ಚುವರಿಯಾಗಿ, ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಮೆಗ್ನೀಸಿಯಮ್ ಕೊಲೆಸ್ಟ್ರಾಲ್ ಮಟ್ಟಗಳು ಮತ್ತು ಟ್ರೈಗ್ಲಿಸರೈಡ್‌ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಹೃದಯ ಕಾಯಿಲೆಗಳ ಅಪಾಯವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ.

ಉತ್ತಮ ನಿದ್ರೆ

ಕುಂಬಳಕಾಯಿ ಬೀಜಗಳು ಟ್ರಿಪ್ಟೊಫಾನ್, ಉತ್ತಮ ನಿದ್ರೆಯನ್ನು ಉತ್ತೇಜಿಸುವ ಅಮೈನೋ ಆಮ್ಲದಂತಹ ವಿವಿಧ ಪೋಷಕಾಂಶಗಳ ಶಕ್ತಿ ಕೇಂದ್ರವಾಗಿದೆ ಮತ್ತು ತಾಮ್ರ, ಸತು ಮತ್ತು ಸೆಲೆನಿಯಮ್ ಅನ್ನು ಸಹ ಒಳಗೊಂಡಿರುತ್ತದೆ, ಇದು ನಿದ್ರೆಯ ಗುಣಮಟ್ಟ ಮತ್ತು ಅವಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ, ಮೆಗ್ನೀಸಿಯಮ್ ಆತಂಕ ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನಿದ್ರಾಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು

ಕುಂಬಳಕಾಯಿ ಬೀಜಗಳಲ್ಲಿರುವ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿವೆ, ವಿಶೇಷವಾಗಿ ಸ್ತನ ಮತ್ತು ಪ್ರಾಸ್ಟೇಟ್ ಗ್ರಂಥಿಗಳ ಕ್ಯಾನ್ಸರ್.

ತೂಕ ನಿರ್ವಹಣೆಯಲ್ಲಿ ಸಹಾಯಕ

ಕುಂಬಳಕಾಯಿ ಬೀಜಗಳು ಫೈಬರ್ ಮತ್ತು ಪ್ರೋಟೀನ್‌ಗಳಲ್ಲಿ ಸಮೃದ್ಧವಾಗಿವೆ, ಇದು ಸಣ್ಣ ಪ್ರಮಾಣದ ಬೀಜಗಳನ್ನು ಸೇವಿಸುವ ಮೂಲಕವೂ ವ್ಯಕ್ತಿಯನ್ನು ಪೂರ್ಣವಾಗಿ ಅನುಭವಿಸುವಂತೆ ಮಾಡುತ್ತದೆ. ಅವರು ದೀರ್ಘಕಾಲದವರೆಗೆ ಹಸಿವನ್ನು ನೀಗಿಸಲು ಸಹಾಯ ಮಾಡುತ್ತಾರೆ, ಇದು ದಿನವಿಡೀ ಸೇವಿಸುವ ಆಹಾರದ ಪ್ರಮಾಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಸೇವಿಸುವ ಕ್ಯಾಲೊರಿಗಳ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ತೂಕ ನಷ್ಟದ ಪ್ರಯಾಣದಲ್ಲಿ ಇದು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಕುಂಬಳಕಾಯಿ ಬೀಜಗಳಲ್ಲಿ ವಿಟಮಿನ್ ಇ ಮತ್ತು ಸತುವು ಇರುತ್ತದೆ, ಇದು ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಪೋಷಕಾಂಶಗಳ ಉತ್ತಮ ಮೂಲವಾಗಿದೆ. ವಿಟಮಿನ್ ಇ ಪ್ರತಿರಕ್ಷಣಾ ಪ್ರತಿಕ್ರಿಯೆಗಳನ್ನು ಹೆಚ್ಚಿಸಲು ಮತ್ತು ವಿವಿಧ ಸಾಂಕ್ರಾಮಿಕ ರೋಗಗಳಿಂದ ರಕ್ಷಿಸಲು ಹೆಸರುವಾಸಿಯಾಗಿದೆ ಮತ್ತು ದೇಹದ ಜೀವಕೋಶಗಳಲ್ಲಿ ಸ್ವತಂತ್ರ ರಾಡಿಕಲ್ ಹಾನಿಯನ್ನು ತಡೆಯುತ್ತದೆ. ಸತುವು ನಮ್ಮ ದೇಹವನ್ನು ಉರಿಯೂತ, ಅಲರ್ಜಿಗಳು ಮತ್ತು ರೋಗಕಾರಕಗಳಂತಹ ವಿವಿಧ ಸಮಸ್ಯೆಗಳಿಂದ ರಕ್ಷಿಸುತ್ತದೆ. ಆದ್ದರಿಂದ, ಸಂಚಿತವಾಗಿ, ಈ ಪೋಷಕಾಂಶಗಳು ಸೋಂಕುಗಳನ್ನು ತಡೆಗಟ್ಟಲು ಮತ್ತು ಒಟ್ಟಾರೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕುಂಬಳಕಾಯಿ ಬೀಜಗಳ ಪ್ರಯೋಜನಗಳು ಆಂಟಿಬ್ಯಾಕ್ಟೀರಿಯಲ್, ಆಂಟಿಫಂಗಲ್ ಮತ್ತು ಆಂಟಿವೈರಲ್ ಗುಣಲಕ್ಷಣಗಳನ್ನು ಸಹ ಒಳಗೊಂಡಿರುತ್ತವೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಮೂಳೆಯ ಆರೋಗ್ಯವನ್ನು ಬೆಂಬಲಿಸುತ್ತದೆ

ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ಬಲವಾದ ಮೂಳೆಗಳಿಗೆ ಒಳ್ಳೆಯದು ಮತ್ತು ಬೆಳವಣಿಗೆಗೆ ಪ್ರಮುಖವಾಗಿದೆ. ಕುಂಬಳಕಾಯಿ ಬೀಜಗಳು ಸಾಕಷ್ಟು ಪ್ರಮಾಣದ ಖನಿಜಗಳನ್ನು ಒದಗಿಸುತ್ತವೆ, ಇದು ಮೂಳೆಗಳ ಸಾಂದ್ರತೆ ಮತ್ತು ಬಲವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೀಗಾಗಿ, ಇದು ಸುಲಭವಾಗಿ ಮೂಳೆ ಮುರಿತಗಳು ಮತ್ತು ಆಸ್ಟಿಯೊಪೊರೋಸಿಸ್ನಂತಹ ಪರಿಸ್ಥಿತಿಗಳನ್ನು ತಡೆಯಲು ಸಹಾಯ ಮಾಡುತ್ತದೆ. ಮೆಗ್ನೀಸಿಯಮ್ ಕೊರತೆಯು ಕ್ಯಾಲ್ಸಿಯಂ ಕೊರತೆಗೆ ಸಂಬಂಧಿಸಿದೆ, ಇದು ದುರ್ಬಲ ಮೂಳೆಗಳಿಗೆ ಕಾರಣವಾಗುತ್ತದೆ.

ಪುರುಷ ಸಂತಾನೋತ್ಪತ್ತಿ ಆರೋಗ್ಯವನ್ನು ಬೆಂಬಲಿಸುತ್ತದೆ

ಕುಂಬಳಕಾಯಿ ಬೀಜಗಳಲ್ಲಿ ಉತ್ಕರ್ಷಣ ನಿರೋಧಕಗಳ ದೊಡ್ಡ ಸಂಗ್ರಹವಿದೆ, ಇದು ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ತಡೆಯಲು ಸಹಾಯ ಮಾಡುತ್ತದೆ. ಪುರುಷರಿಗೆ ಕುಂಬಳಕಾಯಿ ಬೀಜಗಳ ಪ್ರಯೋಜನಗಳು ಮೂತ್ರದ ಸೋಂಕುಗಳು, ರೋಗಗಳು ಮತ್ತು ಅಸ್ವಸ್ಥತೆಗಳನ್ನು ತಡೆಗಟ್ಟುವುದು ಮತ್ತು ಚಿಕಿತ್ಸೆ ನೀಡುವುದು, ಮತ್ತೊಂದೆಡೆ, ವೀರ್ಯದ ಗುಣಮಟ್ಟವನ್ನು ಸುಧಾರಿಸುವುದು. ಇದು ದೇಹದಲ್ಲಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸುವ ಮೂಲಕ ಪುರುಷರಲ್ಲಿ ಫಲವತ್ತತೆಯನ್ನು ಸುಧಾರಿಸುತ್ತದೆ ಮತ್ತು ವೀರ್ಯದ ಗುಣಮಟ್ಟ ಮತ್ತು ಪ್ರಮಾಣವನ್ನು ಸುಧಾರಿಸುತ್ತದೆ.

ಸ್ತ್ರೀ ಸಂತಾನೋತ್ಪತ್ತಿ ಆರೋಗ್ಯವನ್ನು ಬೆಂಬಲಿಸುತ್ತದೆ

ಕುಂಬಳಕಾಯಿ ಬೀಜಗಳು ಉತ್ತಮ ಪ್ರಮಾಣದ ಸತುವನ್ನು ಹೊಂದಿರುತ್ತವೆ, ಇದು ಗರ್ಭಧಾರಣೆಗೆ ಒಳ್ಳೆಯದು. ಸತುವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಮಗುವಿನ ಆರೋಗ್ಯಕರ ಬೆಳವಣಿಗೆಗೆ ಸಹಾಯ ಮಾಡುತ್ತದೆ, ಇದು ಮಹಿಳೆಯರಿಗೆ ಕುಂಬಳಕಾಯಿ ಬೀಜಗಳ ಪ್ರಯೋಜನಗಳನ್ನು ಹೊಂದಿದೆ. ಆದ್ದರಿಂದ, ಗರ್ಭಿಣಿಯರು ಕುಂಬಳಕಾಯಿ ಬೀಜಗಳಂತಹ ಸತುವು ಭರಿತ ಆಹಾರವನ್ನು ಸೇವಿಸುವುದರಿಂದ ಪ್ರಯೋಜನ ಪಡೆಯುತ್ತಾರೆ. ಕುಂಬಳಕಾಯಿ ಬೀಜಗಳು ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಸಹಾಯ ಮಾಡುತ್ತದೆ.

ಕೂದಲು ಮತ್ತು ಚರ್ಮಕ್ಕೆ ಒಳ್ಳೆಯದು

ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಕೂದಲನ್ನು ನಯವಾಗಿ ಮತ್ತು ಬಲವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದು ಚರ್ಮವನ್ನು ಮೃದುವಾಗಿಸಲು ಮತ್ತು ಸುಕ್ಕು ಮುಕ್ತವಾಗಲು ಸಹಾಯ ಮಾಡುತ್ತದೆ. ಅದರ ಉರಿಯೂತದ ಗುಣಲಕ್ಷಣಗಳಿಂದಾಗಿ, ಇದು ಮೊಡವೆ ಮತ್ತು ಮೊಡವೆಗಳನ್ನು ತಡೆಯಲು ಸಹಾಯ ಮಾಡುತ್ತದೆ ಚರ್ಮದ ಸೋಂಕುಗಳು.

ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡುತ್ತದೆ

ಕುಂಬಳಕಾಯಿ ಬೀಜಗಳಲ್ಲಿ ಇರುವ ಮೆಗ್ನೀಸಿಯಮ್ ಒತ್ತಡ ಮತ್ತು ಆತಂಕವನ್ನು ತಡೆಯಲು ಮತ್ತು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮನಸ್ಸನ್ನು ಶಾಂತಗೊಳಿಸುವ ಮೂಲಕ ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕುಂಬಳಕಾಯಿ ಬೀಜಗಳು ಒಂದು ಸೂಪರ್‌ಫುಡ್ ಆಗಿದ್ದು ಅದು ಹಲವಾರು ಪ್ರಯೋಜನಗಳನ್ನು ಮತ್ತು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿದೆ. ಇದನ್ನು ಸ್ಮೂಥಿಗಳು, ಸಲಾಡ್‌ಗಳು, ಸೂಪ್‌ಗಳು, ಧಾನ್ಯಗಳು, ಕೇಕ್‌ಗಳು, ಎನರ್ಜಿ ಬಾರ್‌ಗಳು ಇತ್ಯಾದಿಗಳಲ್ಲಿ ಬಳಸಬಹುದು. ಆದಾಗ್ಯೂ, ಇದನ್ನು ಮಿತವಾಗಿ ಸೇವಿಸಬೇಕು ಇಲ್ಲದಿದ್ದರೆ ಇದು ಉಬ್ಬುವುದು, ಹೊಟ್ಟೆನೋವು, ವಾಯು, ಮತ್ತು ಮಲಬದ್ಧತೆಗೆ ಕಾರಣವಾಗಬಹುದು. ಇದು ಬಹಳಷ್ಟು ಕ್ಯಾಲೊರಿಗಳನ್ನು ಹೊಂದಿರುವುದರಿಂದ, ಇದನ್ನು ಹೆಚ್ಚು ಸೇವಿಸುವುದರಿಂದ ತೂಕ ಹೆಚ್ಚಾಗಬಹುದು. ಕುಂಬಳಕಾಯಿ ಬೀಜಗಳನ್ನು ಸೇವಿಸಲು ಉತ್ತಮ ಮಾರ್ಗವೆಂದರೆ ಅವುಗಳನ್ನು ಹುರಿದು ಊಟಕ್ಕೆ ಸೇರಿಸುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಇಂದು ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂಕಣ22 hours ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ23 hours ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ1 day ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ3 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ4 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

ದಿನದ ಸುದ್ದಿ4 days ago

ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ...

ಅಂಕಣ4 days ago

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು...

ದಿನದ ಸುದ್ದಿ4 days ago

ಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

ಸುದ್ದಿದಿನ ಡೆಸ್ಕ್:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ...

ದಿನದ ಸುದ್ದಿ4 days ago

ಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ...

ದಿನದ ಸುದ್ದಿ6 days ago

ದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ

ಸುದ್ದಿದಿನಡೆಸ್ಕ್:ದಾವಣಗೆರೆಮಹಾನಗರದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಮಾಡುವ ಮುನ್ನ ಪೂರ್ವಭಾವಿಯಾಗಿ ಒಂದಿಷ್ಟು ಮಾಹಿತಿಯ ಅಗತ್ಯವಿದೆ. ದಾವಣಗೆರೆ ಅತ್ಯಂತ ನಿಖರವಾಗಿ ಕರ್ನಾಟಕದ ಮಧ್ಯಭಾಗದಲ್ಲಿದೆ. ಅದ್ದರಿಂದ ಈ ನಗರವನ್ನೇ...

Trending