Connect with us

ದಿನದ ಸುದ್ದಿ

ವರಗುರು ಶ್ರೀ ಶಿವಕುಮಾರರ ಸ್ಮರಣಾಂಜಲಿಗೆ ಇಂದಿನಿಂದ ಚಾಲನೆ

Published

on

ಸುದ್ದಿದಿನ ಡೆಸ್ಕ್ : ಜಗದೊಳಿತಿಗಾಗಿ ಜನಿಸಿದ ಜಗದ್ಗುರು ನಾಡಿನ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ರಂಗದ ಅದಮ್ಯ ಚೇತನ , ಭಕ್ತರ ಹೃದಯ ಸಿಂಹಾಸನಾಧೀಶ ಲಿಂಗೈಕ್ಯ ಶ್ರೀ ತರಳಬಾಳು ಜಗದ್ಗುರು 1108 ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 26 ನೇ ಶ್ರದ್ದಾಂಜಲಿ ಸಮಾರಂಭಕ್ಕೆ ಇಂದಿನಿಂದ ಚಾಲನೆ ಸಿಗಲಿದ್ದು ಸೆಪ್ಟಂಬರ್ 24ರವರೆಗೆ ವೈಚಾರಿಕ ವಿಷಯಮಂಡನೆಗಳ ಜೊತೆ ನಾಡಿನ ಅನ್ನದಾತರ ಕಾರ್ಪಣ್ಯಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಹೊಸ ಯೋಜನೆಗಳಿಗೆ ಆಶಯವನ್ನು ತರಳಬಾಳು ಶ್ರೀ ಜಗದ್ಗುರುವರ್ಯರು ವ್ಯಕ್ತಪಡಿಸಲಿದ್ದಾರೆ.

ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗಿನ ದರ್ಶನವನ್ನು ಯಥಾವತ್ತಾಗಿ ತೆರೆಯ ಮೇಲೆ ಸೃಷ್ಟಿಸುವ ತರಳಬಾಳು ಜಾನಪದ ಸಿರಿಸಂಭ್ರಮದ 350 ಪ್ರತಿಭಾನ್ವಿತ ಮಕ್ಕಳ ಜಾನಪದ ನೃತ್ಯ ಪ್ರಕಾರಗಳ ಪ್ರದರ್ಶನ ಎಲ್ಲರ ಮನ ಸೆಳೆಯುವುದಂತೂ ನಿಶ್ಚಿತ. ಕಾರ್ಯಕ್ರಮದ ನಿಮಿತ್ತ ಶ್ರೀ ಜಗದ್ಗುರುವರ್ಯರ ಲೇಖನಿಯಿಂದ ಹೊರಹೊಮ್ಮಿದ ಅಪರಿಮಿತ ಓದುಗರನ್ನು ಸೃಷ್ಟಿಸಿದ ಜನಪ್ರಿಯ ಮತ್ತು ಸಾಂಧರ್ಭಿಕ ಸಮಸ್ಯೆಗಳಿಗೆ ಉತ್ತರದಂತಿರುವ ಬಿಸಿಲು ಬೆಳದಿಂಗಳು ಅಂಕಣಮಾಲೆಯ ನೂತನ ಪುಸ್ತಕಗಳು ಲೋಕಾರ್ಪಣೆಯಾಗಲಿವೆ.

ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿಶಿವಾಚಾರ್ಯ ಮಹಾಸ್ವಾಮಿಗಳವರ ಪವಿತ್ರ ದಿವ್ಯ ನೇತೃತ್ವದಿ ಎಲ್ಲಾ ಕಾರ್ಯಕ್ರಮಗಳು ಜರುಗಲಿದ್ದು. ತರಳಬಾಳು ಜಗದ್ಗುರು ಶಾಖಾ.ಶ್ರೀ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ.

ಆಗಮಿಸುವ ಲಕ್ಷಾಂತರ ಶರಣ ಬಂಧುಗಳು ಆತಿಥ್ಯಕ್ಕೆ ಸಿರಿಗೆರೆ ಸಜ್ಜಾಗಿದೆ. ಹತ್ತು ಸಾವಿರಕ್ಕೂ ಹೆಚ್ಚು ಭಕ್ತರು ಸಭಾಂಗಣದ ಒಳಗೆ ಕೂತು ಕಾರ್ಯಕ್ರಮ ವೀಕ್ಷಿಸಲು ಆಕರ್ಷಕ ಸಭಾಂಗಣ ನಿರ್ಮಾಣ ಮಾಡಲಾಗಿದೆ. ಊರಿನಲ್ಲಿರುವ ಶ್ರೀ ಸಂಸ್ಥೆಯ ನೂರಾರು ಕಟ್ಟಡಗಳಿಗೆ ಎಲ್ಲಾ ರಸ್ತೆಗಳಿಗೆ ಜಗಮಗಿಸುವ ವಿದ್ಯುತ್ ದೀಪಗಳ ಅಲಂಕಾರ,ಅತ್ಯಾಕರ್ಷಕ ಸ್ವಾಗತ ಕಮಾನುಗಳ ನಿರ್ಮಾಣ, ತಳಿರು ತೋರಣದಿಂದ ಸಿಂಗರಿಸುವ ಕಾರ್ಯಗಳು ಭರದಿಂದ ಸಾಗಿವೆ.ಪ್ರತಿ ದಿನ ಮುಂಜಾನೆ ಶಿವಮಂತ್ರಲೇಖನ,ಸಾಮೂಹಿಕ ಪ್ರಾರ್ಥನೆ ಐಕ್ಯ ಮಂಟಪದ ಆವರಣದಲ್ಲಿ ಜರುಗಲಿವೆ.

ಪ್ರತಿ ದಿನ ಬೆಳಿಗ್ಗೆ 10 ಗಂಟೆಗೆ ಪ್ರಧಾನ ವೇದಿಕೆಯಲ್ಲಿ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥಯೆಯ 14 ಜಿಲ್ಲೆಯಲ್ಲಿರುವ ಶಾಲಾ ಕಾಲೇಜಿನ ಮಕ್ಕಳಿಂದ ವಚನ,ಜಾನಪದ ನೃತ್ಯ, ಚಿತ್ರಕಲೆ, ನಾಟಕ ಸೇರಿದಂತೆ ಹತ್ತಾರು ಸಾಂಸ್ಕೃತಿಕ ಸ್ಪರ್ಧೆಗಳುನಡೆಯಲಿವೆ.

ನಾಡಿನ ಮುಖ್ಯ ಮಂತ್ರಿಗಳು,ಮಾಜಿ ಮುಖ್ಯ ಮಂತ್ರಿಗಳು, ಹಾಲಿ ಮತ್ತು ಮಾಜಿ ಸಚಿವರು,ಸಂಸದರು,ಶಾಸಕರು,ಜನಪ್ರತಿನಿಧಿಗಳು,ಸಾಹಿತಿಗಳು,ಚಿಂತಕರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಿ ಭಾಗವಹಿಸಿ ಮಹಾಗುರುವಿಗೆ ಶ್ರದ್ಧಾಭಕ್ತಿಗಳನ್ನು ಸಮರ್ಪಿಸಲಿದ್ದಾರೆ. ಅಪರೂಪದ ಧಾರ್ಮಿಕ ,ಸಾಮಾಜಿಕ, ಸಾಂಸ್ಕೃತಿಕ ಸಂಗಮದ ಈ ಸಮಾರಂಭಕ್ಕೆ ತಾವೂ ಸಾಕ್ಷಿಯಾಗಬೇಕೆಂಬ ಪ್ರೀತಿಯ ಆಶಯ ನಮ್ಮದಾಗಿದೆ.

ದಿನಾಂಕ : 20-09-2018 ರ ಗುರುವಾರ ಇಂದಿನ ಸಂಜೆಯ ಕಾರ್ಯಕ್ರಮದಲ್ಲಿ

ದಿವ್ಯ ನೇತೃತ್ವ: ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.

ಸಮ್ಮುಖ ಸಾನ್ನಿಧ್ಯ : ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಪಟ್ಟಾಧ್ಯಕ್ಷರು ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿ.

ಮುಖ್ಯ ಅತಿಥಿಗಳು : ಶರಣ ವೆಂಕಟರಮಣಪ್ಪ
ಕಾರ್ಮಿಕ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು. ಕರ್ನಾಟಕ ಸರ್ಕಾರ ಬೆಂಗಳೂರು, ಶರಣ ಎಸ್ ರವೀಂದ್ರನಾಥ ಮಾಜಿ ಸಚಿವರು. ಶಾಸಕರು ದಾವಣಗೆರೆ, ಶರಣ ಮಾಡಾಳು ವಿರೂಪಾಕ್ಷಪ್ಪ ಶಾಸಕರು ಚನ್ನಗಿರಿ, ಶರಣ ಶ್ರೀನಾಥ್ ಎಂ ಜೋಶಿ
ಜಿಲ್ಲಾ ರಕ್ಷಣಾಧಿಕಾರಿಗಳು ಚಿತ್ರದುರ್ಗ,ಶರಣೆ ಜಯಶೀಲ ಕೆ .ಆರ್ ಅಧ್ಯಕ್ಷರು ಜಿಲ್ಲಾ ಪಂಚಾಯಿತಿ ದಾವಣಗೆರೆ. ಶರಣ ಶಶಾಂಕ್ ಚಲನಚಿತ್ರ ನಿರ್ದೇಶಕರು ಬೆಂಗಳೂರು.

ದಿನಾಂಕ : 21-09-2018 ರ ಶುಕ್ರವಾರ ಸಂಜೆಯ ಕಾರ್ಯಕ್ರಮದಲ್ಲಿ

ಶರಣ ಬಸವರಾಜ ಹೊರಟ್ಟಿ ಸಭಾಪತಿಗಳು ವಿಧಾನ ಪರಿಷತ್ ಬೆಂಗಳೂರು, ಶರಣ ಎಸ್. ಎಸ್ ಮಲ್ಲಿಕಾರ್ಜುನ್ ಮಾಜಿ ಸಚಿವರು ದಾವಣಗೆರೆ,ಶರಣೆ ಸೌಭಾಗ್ಯ ಬಸವರಾಜನ್ ಅಧ್ಯಕ್ಷರು ಜಿಲ್ಲಾ ಪಂಚಾಯಿತಿ ಚಿತ್ರದುರ್ಗ, ಶರಣ ತಿಪ್ಪಾರೆಡ್ಡಿ ಜೆ.ಹೆಚ್.ಶಾಸಕರು ಚಿತ್ರದುರ್ಗ, ಶರಣ ರಾಮಚಂದ್ರ ಎಸ್.ವಿ. ಶಾಸಕರು ಜಗಳೂರು,ಶರಣ ಬೆಳ್ಳಿ ಪ್ರಕಾಶ್ ಶಾಸಕರು ಕಡೂರು.

ದಿನಾಂಕ : 22-09-2018 ರ ಶನಿವಾರ ಸಂಜೆಯ ಕಾರ್ಯಕ್ರಮದಲ್ಲಿ

ಶರಣ ಶಂಕರ್ ಆರ್ ಅರಣ್ಯ ಸಚಿವರು ಕರ್ನಾಟಕ ಸರ್ಕಾರ ಬೆಂಗಳೂರು,ಶರಣ ಆಂಜನೇಯ ಹೆಚ್ ಮಾಜಿ ಸಚಿವರು,ಶರಣ ರುದ್ರೇಗೌಡರು ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ, ಶರಣ ಸುರೇಶ್ ಡಿ.ಎಸ್. ಶಾಸಕರು ತರೀಕೆರೆ, ಶರಣ ಶ್ರೀ ರಂಗಯ್ಯ ಎಂ.ಕೆ. ಜಿಲ್ಲಾಧಿಕಾರಿಗಳು ಚಿಕ್ಕಮಗಳೂರು, ಶರಣ ರಮೇಶ್ ಡಿ.ಎಸ್. ಜಿಲ್ಲಾಧಿಕಾರಿಗಳು ದಾವಣಗೆರೆ, ಶರಣ ಚೇತನ ಆರ್ ಜಿಲ್ಲಾ ರಕ್ಷಣಾಧಿಕಾರಿಗಳು ದಾವಣಗೆರೆ.

ದಿನಾಂಕ : 23-09-2018 ರ ಭಾನುವಾರ ಬೆಳಗ್ಗೆ 11ಗಂಟೆಗೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥಯೆ ಹಿರಿಯ ವಿದ್ಯಾರ್ಥಿಗಳ ಸಮಾವೇಶ.

ದಿವ್ಯ ನೇತೃತ್ವ : ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.

ಸಮ್ಮುಖ ಸಾನ್ನಿಧ್ಯ : ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಪಟ್ಟಾಧ್ಯಕ್ಷರು ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿ

ಮುಖ್ಯಅತಿಥಿಗಳು : ಶರಣ ರವಿಕುಮಾರ.ವಿ. ಸಿವಿಲ್ ನ್ಯಾಯಾಧೀಶರು ಹೊಳಲ್ಕೆರೆ, ಡಾ.ವಿನೋದ್ ಕುಮಾರ್.ವಿ. ಐ ಎ ಎಸ್ ಆಂಧ್ರ ಪ್ರದೇಶ, ಶರಣ ಜಿ .ಎ.ಜಗದೀಶ್ ಎ ಎಸ್ ಪಿ ಹಾವೇರಿ, ಶರಣ ಡಾ.ಶರತ್ ಕುಮಾರ್ ಎನ್.ಎಂ,ವೆಲ್ಲೂರು ಆಂಧ್ರ ಪ್ರದೇಶ. ಶರಣ.ಡಾ.ಭಾಸ್ಕರ್. ಡಿ,ಮದುರೈ ತಮಿಳುನಾಡು.ಶರಣ ಡಾ.ಜಯವರ್ದನ ನರರೋಗ ತಜ್ಞರು ಮೈಸೂರು.ಶರಣ ಡಾ.ನಿರಂಜನ ಮೂರ್ತಿ ಕೆ.ಎಂ ವೈದ್ಯರು ಬೆಂಗಳೂರು. ಶರಣ ಡಾ.ರವಿಕುಮಾರ್ ಜಿ.ವಿ ವೈದ್ಯರು ಬೆಂಗಳೂರು.
ಶರಣ ಡಾ.ಉಮೇಶ್ ಡಿ.ವೈದ್ಯರು ದಾವಣಗೆರೆ.
ಶರಣ ಡಾ.ಅವಿನಾಶ್ ಸಿ.ಬಿ.ವೈದ್ಯರು ಬೆಂಗಳೂರು. ಶರಣ ಲಿಂಗರಾಜ್ ಹೆಚ್.ಕೆ. ಪ್ರಾಚಾರ್ಯರು, ಡಯಟ್, ದಾವಣಗೆರೆ.ಶರಣ ಶೇಖರಪ್ಪ ಹೆಚ್.ಕೆ. ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ದಾವಣಗೆರೆ. ಶರಣ ಪ್ರಸನ್ನ ಕುಮಾರ್. ಸಿ. ಉಪ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕಮಗಳೂರು. ಶರಣ ವೀರಣ್ಣ ಜತ್ತಿ ಪ್ರಾಚಾರ್ಯರು ಸಿಟಿಇ ಜಮಖಂಡಿ. ಶರಣ ಮಲ್ಲಿಕಾರ್ಜುನ ಕಬ್ಬೂರು ಪತ್ರಕರ್ತರು ಚಿಕ್ಕಮಗಳೂರು.

ಸಾಂಸ್ಕೃತಿಕ ಕಾರ್ಯಕ್ರಮ

ಮಲ್ಲಿ ಹಗ್ಗ ಮತ್ತು ಮಲ್ಲಗಂಬ ಪ್ರದರ್ಶನ
ತರಳಬಾಳು ಜಾನಪದ ಸಿರಿ ಸಂಭ್ರಮ -2018

ದಿನಾಂಕ : 23-09-2018 ರ ಭಾನುವಾರ ಸಂಜೆ 6 ಗಂಟೆಗೆ.

ಮುಖ್ಯ ಅತಿಥಿಗಳು : ಶರಣ ಬಿ.ಎಸ್ ಯಡಿಯೂರಪ್ಪ ಮಾಜಿ ಮುಖ್ಯ ಮಂತ್ರಿಗಳು ಮತ್ತು ವಿರೋಧಪಕ್ಷದ ನಾಯಕರು ಬೆಂಗಳೂರು. ಶರಣ ಚಂದ್ರಪ್ಪ ಬಿ.ಎನ್
ಲೋಕಸಭಾ ಸದಸ್ಯರು ಚಿತ್ರದುರ್ಗ.ಶರಣ ಎಂ ಚಂದ್ರಪ್ಪ ಶಾಸಕರು ಹೊಳಲ್ಕೆರೆ.ಶರಣ ಎಂ ಲಿಂಗಪ್ಪ ಶಾಸಕರು ಮಾಯಕೊಂಡ. ಶರಣ ಪಾಟೀಲ ಬಿ.ಸಿ ಶಾಸಕರು ಹಿರೇಕೆರೂರ. ಶರಣ ಮೋಹನ್ ಕೊಂಡಜ್ಜಿ
ವಿಧಾನ ಪರಿಷತ್ ಸದಸ್ಯರು ಬೆಂಗಳೂರು. ಶರಣ ಶ್ರೀನಿವಾಸ್ ಜಿ ಕಪ್ಪಣ್ಣ ಸಾಂಸ್ಕೃತಿಕ ಸಂಘಟಕರು ಬೆಂಗಳೂರು. ಶರಣ ಡಾ.ವೇದಮೂರ್ತಿ ಸಿ.ಜಿ
ರಕ್ಷಣಾಧಿಕಾರಿಗಳು( ಡಿ ಸಿ ಆರ್ ಇ ) ಮಂಗಳೂರು.ಶರಣ ಅಣ್ಣಾಮಲೈ.ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಚಿಕ್ಕಮಗಳೂರು.

ಸಾಂಸ್ಕೃತಿಕ ಸಂಭ್ರಮ

ತರಳಬಾಳು ಜಾನಪದ ಸಿರಿ ಸಂಭ್ರಮ 2018
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ 350 ಮಕ್ಕಳಿಂದ

24-09-2018 ಸೋಮವಾರ ಬೆಳಿಗ್ಗೆ 11 ಗಂಟೆಗೆ ಶ್ರದ್ದಾಂಜಲಿ ಸಮಾರಂಭ

ದಿವ್ಯ ಸಾನಿಧ್ಯ : ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.

ಮುಖ್ಯ ಅತಿಥಿಗಳು : ಶರಣ ಹೆಚ್.ಡಿ ಕುಮಾರಸ್ವಾಮಿ ಮುಖ್ಯ ಮಂತ್ರಿಗಳುಕರ್ನಾಟಕ ಸರ್ಕಾರ. ಶರಣ ಶಾಮನೂರು ಶಿವಶಂಕರಪ್ಪ ಶಾಸಕರು ಮಾಜಿ ಸಚಿವರು ದಾವಣಗೆರೆ. ಶರಣ ಈಶ್ವರ ಖಂಡ್ರೆ ಮಾಜಿ ಸಚಿವರು ಕಾರ್ಯಾಧ್ಯಕ್ಷರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ. ಶರಣ ಜಿ.ಎಂ ಸಿದ್ಧೇಶ್ವರ ಮಾಜಿ ಕೇಂದ್ರ ಸಚಿವರು ಮತ್ತು
ಲೋಕಸಭಾ ಸದಸ್ಯರು ದಾವಣಗೆರೆ. ಶರಣ ಬಸವರಾಜ ಬೊಮ್ಮಾಯಿ ಮಾಜಿ ಸಚಿವರು ಶಾಸಕರು ಶಿಗ್ಗಾಂವಿ. ಶರಣ ಆಯನೂರು ಮಂಜುನಾಥ್ ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ. ಶರಣ ಕೆ ಆರ್ ಜಯದೇವಪ್ಪ ಅಧ್ಯಕ್ಷರು ಸಾಧು ಸದ್ದರ್ಮ ಸಮಾಜ ದಾವಣಗೆರೆ. ಶರಣ ಹೆಚ್ .ವಿಶ್ವನಾಥ್ ಶಾಸಕರು ರಾಜ್ಯ ಅಧ್ಯಕ್ಷರು ಜಾತ್ಯಾತೀತ ಜನತಾದಳ ಬೆಂಗಳೂರು. ಶರಣ ಡಾ.ಶಂಕರ್ ಬಿ.ಎಲ್ ಮಾಜಿ ಸಭಾಪತಿ ವಿಧಾನ ಪರಿಷತ್ ಬೆಂಗಳೂರು. ಶರಣ ಭೋಜೇಗೌಡ ಎಸ್ . ಎಲ್. ವಿಧಾನ ಪರಿಷತ್ ಸದಸ್ಯರು
ಚಿಕ್ಕಮಗಳೂರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ...

ದಿನದ ಸುದ್ದಿ11 hours ago

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ...

ದಿನದ ಸುದ್ದಿ19 hours ago

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ...

ದಿನದ ಸುದ್ದಿ1 day ago

ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಂ.ಎಂ.ಟಿ.ಎಂ 1, ಡಿಎಂಎಂ 20, ಸಿಒಪಿಎ 20, ವೆಲ್ಡರ್ 34 ಹಾಗೂ ರೋಬೊಟಿಕ್ಸ 12 ಖಾಲಿ ಇರುವ...

ದಿನದ ಸುದ್ದಿ1 day ago

ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ...

ದಿನದ ಸುದ್ದಿ2 days ago

ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು

ಸುದ್ದಿದಿನಡೆಸ್ಕ್:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು...

ದಿನದ ಸುದ್ದಿ4 days ago

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ...

ದಿನದ ಸುದ್ದಿ5 days ago

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ...

ದಿನದ ಸುದ್ದಿ5 days ago

KPSC | 2 ತಿಂಗಳೊಳಗೆ ಮರು ಪರೀಕ್ಷೆ

ಸುದ್ದಿದಿನಡೆಸ್ಕ್:ಇತ್ತೀಚಿನ ಕೆ.ಪಿ.ಎಸ್.ಸಿ. ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ, ಅಸಮರ್ಪಕ ಕನ್ನಡಾನುವಾದ ಹಿನ್ನೆಲೆ, ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ, 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ, ಕರ್ನಾಟಕ ಲೋಕ...

ದಿನದ ಸುದ್ದಿ5 days ago

ADITYA-L1 | ಇಸ್ರೋ ಆದಿತ್ಯ ಎಲ್-1 ನೌಕೆ ಉಡಾವಣೆಗೆ ಒಂದು ವರ್ಷ; ಸೂರ್ಯನ ಅಧ್ಯಯನದಲ್ಲಿ ಮಹತ್ವದ ಪ್ರಗತಿ

ಸುದ್ದಿದಿನಡೆಸ್ಕ್:ಇಸ್ರೋದಿಂದ ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೊಂಡು ಇಂದಿಗೆ ಒಂದು ವರ್ಷ ಪೂರೈಸಿದೆ. 2023ರ ಸೆಪ್ಟೆಂಬರ್ 2 ರಂದು ಉಡಾವಣೆಗೊಂಡಿರುವ ಎಲ್-1ನೌಕೆ ಕಕ್ಷೆ ತಲುಪಿದ್ದು, ಭೂಮಿಯಿಂದ ಸುಮಾರು...

Trending