ಸಿನಿ ಸುದ್ದಿ
ದುನಿಯಾ ವಿಜಿ ‘ಖೈದಿ ನಂಬರ್ 9035’..!: ಈ ದಿನದ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ ಓದಿ
ಸುದ್ದಿದಿನ, ಬೆಂಗಳೂರು : ಪರಪ್ಪನ ಆಗ್ರಹಾರ ಜೈಲಿನಲ್ಲಿ ದುನಿಯಾ ವಿಜಿಗೆ ನಂಬರ್ ಖೈದಿ ನಂಬರ್ ಕೊಡಲಾಗಿದೆ. ಜೈಲು ಅಧಿಕಾರಿಗಳಿಂದ ವಿಜಿಗೆ ವಿಚಾರಣಾಧೀನ ಖೈದಿ ಸಂಖ್ಯೆ ಮಂಜೂರು ಮಾಡಿದ್ದಾರೆ. ದುನಿಯಾ ವಿಜಿಗೆ 9035, ಪ್ರಸಾದ್ 9036, ಮಣಿ 9037, ಪ್ರಸಾದ್ 9038. ನಾಲ್ವರು ಆರೋಪಿಗಳಿಗೆ UTP (ಯು.ಟಿ.ಪಿ : ಅಂಡರ್ ಟ್ರಯಲ್ ಪ್ರಿಸನರ್) ಸಂಖ್ಯೆ ನೀಡಿದ ಜೈಲು ಆಧಿಕಾರಿಗಳು.
ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ದುನಿಯಾ ವಿಜಯ್ ಕೋರ್ಟ್ ಮೊರೆ ಹೋಗುದ್ದಾರೆ. 8ನೇ ACMM ಕೋರ್ಟ್ಗೆ ಜಾಮೀನು ಕೋರಿ ಅರ್ಜಿಸಲ್ಲಿಸಿದ್ದಾರೆ. A1 ಪ್ರಸಾದ್, A2 ದುನಿಯಾ ವಿಜಯ್, A3 ಮಣಿ ಇಂದ ಅರ್ಜಿ ಸಲ್ಲಿಸಲಾಗಿದ್ದು, ಮೂವರು ಆರೋಪಿಗಳ ಪರ ವಕೀಲ ಶಿವಕುಮಾರ್ ವಕಾಲತ್ತು ನಡೆಸಲಿದ್ದಾರೆ. ನ್ಯಾ.ಮಹೇಶ್ ಬಾಬು ರಿಂದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆಗೆ ಬಂದ 3 ಆರೋಪಿಗಳಿಗೆ ಜಾಮೀನು ಅರ್ಜಿ
ನೀಡದಂತೆ ವಾದ ಮಂಡಿಸಲಾಯ್ತು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಿರುವ ಸರ್ಕಾರಿ ಅಭಿಯೋಜಕರು.
ದುನಿಯಾ ವಿಜಯ್ ಪತ್ನಿಯರ ಬಡಿದಾಟ ಪ್ರಕರಣ
ಇಬ್ಬರು ಪತ್ನಿಯರ ಹೇಳಿಕೆ ದಾಖಲಿಸಿರುವ ಪೊಲೀಸರು, ಕೀರ್ತಿ ಮನೆಯಲ್ಲಿ ನೆನ್ನೆ ನಡೆದಿದ್ದ ಪತ್ನಿಯರಿಬ್ಬರ ಬಡಿದಾಟ, ಪರಸ್ಪರ ತಳ್ಳಾಡಿ, ಬಡಿದಾಡಿಕೊಂಡು,ಕೈ ಗಳಿಂದ ಹಲ್ಲೆ ಮಾಡಿಕೊಂಡು ಜಗಳ. ದುನಿಯಾ ವಿಜಯ್ ತಂದೆ-ತಾಯಿ ಇಬ್ಬರಿಂದಲೂ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು. ಕೀರ್ತಿ ಮತ್ತು ನಾಗರತ್ನ ಗಲಾಟೆಗೆ ಕಾರಣವೇನು ಎಂಬ ಅಂಶಗಳ ಕುರಿತ ಪೊಲೀಸರಿಗೆ ವಿವರಣೆ ಪಡೆಯಲಾಗಿದೆ. ಘಟನೆ ಸಂಪೂರ್ಣ ಚಿತ್ರಣ ಪೊಲೀಸರಿಗೆ ವಿವರಿಸಿರುವ ವಿಜಯ್ ಪೋಷಕರು. ವಿಜಯ್ ಮಕ್ಕಳ ಹೇಳಿಕೆ ದಾಖಲಿಸಲು ಪೊಲೀಸರ ನಿರ್ಧಾರ ಮಾಡಿದ್ದಾರೆ.
ಘಟನೆ ನಡೆದ ವೇಳೆ ಮನೆಯಲ್ಲಿ ಪ್ರತ್ಯಕ್ಷ ದರ್ಶಿಗಳಾಗಿದ್ದ ಮೂವರು ಮಕ್ಕಳ ಹೇಳಿಕೆಯನ್ನು ಸಂಜೆ ದಾಖಲಿಸಲು ನಿರ್ಧರಿಸಿರುವ ಗಿರಿನಗರ ಪೊಲೀಸರು.
ಪರಂ ಮೊರೆ ಹೋದ ಪಾನಿಪೂರಿಕಿಟ್ಟಿ
ಗೃಹಸಚಿವ ಜಿ. ಪರಮೇಶ್ವರ್ ಮೊರೆ ಹೋದ ಪಾನಿಪುರಿ ಕಿಟ್ಟಿಯು ದುನಿಯಾ ವಿಜಿ ಪ್ರಕರಣವನ್ನು ಸರ್ಕಾರಿ ವಿಶೇಷ ಅಭಿಯೋಜ ಕಾರಗಿ ಶ್ಯಾಂಮ್ ಸುಂದರ್ ಅವರನ್ನು ನೇಮಿಸುವಂತೆ ಮನವಿ ಮಾಡಿದ್ದಾರೆ. ಶ್ಯಾಂಮ್ ಸುಂದರ್ ವಿದ್ವತ್ ಪ್ರಕರಣವನ್ನು ತುಂಬಾ ಚೆನ್ನಾಗಿ ಹ್ಯಾಂಡಲ್ ಮಾಡಿದ್ರು,ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ನೋಡಿಕೊಂಡಿದ್ರು, ಹೀಗಾಗಿ ಅವರನ್ನೆ ನೇಮಕ ಮಾಡಬೇಕೆಂದು ಗೃಹಸಚಿವರ ಬಳಿ ಮನವಿ ಮಾಡಿದ್ದಾರೆ ಕಿಟ್ಟಿ.
ವಿಜಿ ಪತ್ನಿ ನಾಗರತ್ನ ಹೀಗಂದ್ರು
ಪಾನಿಪುರಿ ಕಿಟ್ಟಿ ಒಳ್ಳೆ ಮನುಷ್ಯ. ವಿಜಯ್ ಜೊತೆ ತುಂಬಾ ಚೆನ್ನಾಗೆ ಇದ್ರು. ಪಾನಿಪುರಿ ಕಿಟ್ಟಿ ಅವರ ಮನೆಯಿಂದ ಊಟ ತಂದು ವಿಜಯ್ ಗೆ ಕೊಟ್ತೀದ್ರು. ನನ್ನ ಗಂಡನ ಜೊತೆ ತುಂಬಾ ಚೆನ್ನಾಗಿದ್ರು. ನಮ್ಮ ಮನೆಗೆ ಬಂದು ಹೋಗುತ್ತಿದ್ದರು. ಯಾಕೆ ಗಲಾಟೆ ಆಯಿತು ಅನ್ನೋದು ಗೊತ್ತಿಲ್ಲ ವಿಜಿ ಪತ್ನಿ ನಾಗರತ್ನ ಹೇಳಿಕೆ ನೀಡಿದ್ದಾರೆ. ದುನಿಯಾ ವಿಜಯ್ ತಂದೆ ಅವರೇ ನನ್ನ ಬಗ್ಗೆ ತಪ್ಪು ಮಾಹಿತಿ ನೀಡ್ತೀದ್ದಾರೆ. ನಾಗರತ್ನಗೆ ಆಸ್ತಿ ಕೊಟ್ಟಿದೇವೆ ಅಂತಾ ಹೇಳಿಕೊಂಡು ಓಡಾಡ್ತೀದ್ದಾರೆ. ಅವರೇ ಹಾದಿ ತಪ್ಪಿಸುತ್ತಿದ್ದಾರೆ ಎಂದಿದ್ದಾರೆ. ವಿಜಿ ಎರಡನೇ ಹೆಂಡ್ತಿ ಮೇಲೆ ದೂರು ನೀಡಿದ್ದ ನಾಗರತ್ನ . ನಿನ್ನೆ ದುನಿಯಾ ವಿಜಯ್ ಗಲಾಟೆ ವಿಚಾರ ಟಿವಿಯಲ್ಲಿ ನೋಡ್ದೆ. ಮಗಾ ಸಾಮ್ರಾಟ್ ಕೂಡಾ ವಿಜಯ್ ಜೊತೆ ಇದ್ರು ಅಂತಾ ನೋಡ್ದೆ. ಅದ್ಕೆ ಗಾಬರಿಯಾಗಿ ಕೀರ್ತಿ ಗೌಡ ಮನೆಗೆ ಹೋದೆ.ಯಾಕೆ ನನ್ನ ಮಗನನ್ನ ಅಷ್ಟೋತ್ತಿಗೆ ಕಳುಹಿಸಿದ್ರೆ ಅಂತಾ ಕೇಳ್ದೆ. ಆಗ ನಮ್ಮ ಮಾವಾ,ಅತ್ತೆ ಕೀರ್ತಿ ಗೌಡಗೆ ಸರ್ಫೋರ್ಟ್ ಮಾಡಿದ್ರು. ನಂತ್ರ ಮಾತಿಗೆ ಮಾತು ಬೆಳೆದು ಗಲಾಟೆ ಆಯಿತು, ಹೊಡೆದಾಟ ಆಯಿತು. ನಂತ್ರ ಪೊಲೀಸ್ ಠಾಣೆಗೆ ಕಂಪ್ಲೇಟ್ ಕೊಟ್ಟೆ.
ದುನಿಯಾ ವಿಜಯ್ ಗೆ ಬುದ್ಧಿ ಹೇಳೋರು ಯಾರು ಇಲ್ಲ
ಕಳೆದ ಎರಡು ವರ್ಷದಿಂದ ವಿಜಿ ಜೈಲು,ಪೊಲೀಸ್ ಠಾಣೆಗೆ ಹೋಗ್ತಾನೆ ಇದ್ದಾರೆ. ನಾನ್ ಬುದ್ಧಿ ಹೇಳೋಕೆ ಹೋದೆ ನನ್ನನ್ನ ದೂರ ಮಾಡಿದ್ರು. ಈಗ ಅವರು ದುಡ್ಡಿಗಾಗಿ ಬಂದವಳ ಜೊತೆ ಇದ್ದಾರೆ. ಅವ್ಳು ಸ್ವಲ್ಪ ದಿನ ಇರ್ತಾಳೆ ಆಮೇಲೆ ಹೋಗ್ತಾಳೆ. ಅವ್ರೆಲ್ಲ ದುಡ್ಡಿಗೆ ಬರೋರು. ಈಗ ಇವ್ರು ಜೈಲಿಗೆ ಹೋಗಿದ್ದಾರೆ, ನನ್ನ ಮಕ್ಕಳ ಗತಿ ಏನು. ಕೀರ್ತಿ ಗೌಡದು ದಾರಿದ್ರ ಕಾಲು.ಅವಳು ಕಾಲು ಇಟ್ಟಿದೆ ತಡ ವಿಜಯ್ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ನಾನ್ ಇದಿದ್ರೆ ಸುಮ್ಮನೆ ಇರ್ತಿದ್ನಾ..? ಈಗ ವಿಜಯ್ ಜೈಲಿಗೆ ಹೋಗೋಕ್ಕೆ ಕೀರ್ತಿ ಗೌಡನೇ ಕಾರಣ.
ಪಾನಿಪುರಿ ಕಿಟ್ಟಿ ಹೇಳಿಕೆ
ಮಾರುತಿ ಗೌಡ ಆರೋಗ್ಯ ಇನ್ನು ಚೇತರಿಕೆಯಾಗಿಲ್ಲ. ಎರಡಗಡೆ ಕಣ್ಣು ಸರಿಯಾಗಿ ಕಾಣುತ್ತಿಲ್ಲ ಎನ್ನುತ್ತಿದ್ದಾನೆ ಮಾರುತಿ ಗೌಡ. ರಾತ್ರಿಯೆಲ್ಲಾ ಕತ್ತು ತುಂಬಾ ನೋವು ಎನ್ನುತ್ತಿದ್ದ. ಏನು ತಿಂದರು ಮಾರುತಿ ಗೌಡ ವಾಂತಿ ಮಾಡಿಕೊಳ್ಳುತ್ತಿದ್ದಾನೆ. ಬಾಯಿಗೆ 14 ಹೊಲಿಗೆ ಹಾಕಿದ್ರು ಊತ ಕಡಿಮೆಯಾಗಿಲ್ಲ. ಮಾರುತಿ ಬಾಯಿ ಹಾಗೂ ತುಟಿ ಮತ್ತಷ್ಟು ಊತುಕೊಂಡಂತಿದೆ. ಸಿಟಿ ಸ್ಕ್ಯಾನ್ ರಿಪೋರ್ಟ್ ಗಾಗಿ ಕಾಯುತ್ತಿದ್ದೇವೆ. 9 ಗಂಟೆಗೆ ಸಿಟಿ ಸ್ಕ್ಯಾನ್ ರಿಪೋರ್ಟ್ ಬಂದಿರಬೇಕು.ನಾವು ಡಿಸಿಎಂ ಭೇಟಿ ಗೆ ಬಂದಿದ್ದೇವೆ. ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಮಾರುತಿಗೌಡ ಎಂದು ಪಾನಿಪುರಿ ಕಿಟ್ಟಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.
ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.
ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್ಗೆ ಜೋಡಿಯಾಗಿ ವನಿತಾ ನಟಿಸಿದ್ದರು.
ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.
ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.
ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್ಗೆ.. ಬೀಚ್ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
ಸುದ್ದಿದಿನ,ಮುಂಬೈ:ಗನ್ ಮಿಸ್ ಫೈರ್ ಆದ ಕಾರಣ ಬಾಲಿವುಡ್ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ತನ್ನದೇ ಗನ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಗೋವಿಂದ ಅವರ ಬಳಿಯಿದ್ದ ಗನ್ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ನಟ ಗೋವಿಂದ ಹಾಗೂ ಕುಟುಂಬಸ್ಥರು ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಟ ದರ್ಶನ್ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು
ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್, ವಾರ್ಡರ್ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಡಿನೆಲ್ಲೆಡೆ ಆಯುಧಪೂಜೆ ಸಡಗರ; ಮೈಸೂರು ಅರಮನೆಯಲ್ಲಿ ಪಟ್ಟದ ಹಸು, ಆನೆ, ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ
-
ದಿನದ ಸುದ್ದಿ6 days ago
ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ
-
ದಿನದ ಸುದ್ದಿ6 days ago
ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ
-
ದಿನದ ಸುದ್ದಿ5 days ago
ಯಲ್ಲಮ್ಮನ ಸವದತ್ತಿ ಕ್ಷೇತ್ರಾಭಿವೃದ್ಧಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಭರವಸೆ
-
ದಿನದ ಸುದ್ದಿ6 days ago
ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್
-
ದಿನದ ಸುದ್ದಿ4 days ago
ಅಕ್ಟೋಬರ್ 20 ರಂದು ಬೃಹತ್ ಉದ್ಯೋಗ ಮೇಳ
-
ದಿನದ ಸುದ್ದಿ2 days ago
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ
-
ದಿನದ ಸುದ್ದಿ2 days ago
ಜಾತಿ ಪ್ರಮಾಣಪತ್ರ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ