ದಿನದ ಸುದ್ದಿ
ಗಾಂಧೀಜಿ, ಶಾಸ್ತ್ರೀಜಿ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳ ಬೇಕು | ಸಚಿವ ಸಿ.ಎಸ್.ಪುಟ್ಟರಾಜು
ಸುದ್ದಿದಿನ,ಮಂಡ್ಯ : ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹನೀಯರಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನೆಹರು ಯುವ ಕೇಂದ್ರ, ಮಂಡ್ಯ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದ ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಗಾಂಧೀಜಿ ತನ್ನ ಚಿಂತನೆ, ಜೀವನ ಸಂದೇಶಗಳಿಂದಲೇ ಜಗತ್ತಿನುದ್ದಕ್ಕೂ ವ್ಯಾಪಿಸಿ ನಿಂತ ಈ ಮಹಾನ್ ಚೇತನವಾದ ಇವರುಗಳ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ನಡೆದಾಗ ಮಾತ್ರ ಅವರಿಗೆ ನಾವು ಸಲ್ಲಿಸುವ ಗೌರವ ಎಂದು ಹೇಳಿದರು.
ಮಹಾತ್ಮ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರು ನುಡಿದಂತೆ ನಡೆದವರು. ಜಗತ್ತಿನ ಎಲ್ಲಾ ಶ್ರೇಷ್ಠ ಧರ್ಮಗಳು ಮಾನವತೆಯ ಸಮಾನತೆ, ಭಾತೃತ್ವ ಹಾಗೂ ಸಹನೆಯ ಸದ್ಗುಣಗಳನ್ನು ಸಾರಿ ಸಾರಿ ಹೇಳುತ್ತವೆ. ಇದನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಸಚಿವರು ಸೇವೆ ಮಾಡುವುದರ ಮೂಲಕ ನಿನ್ನನ್ನು ನೀನು ಕಾಣಬಹುದಾಗಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಶೆಟ್ಟಿ ಅವರು ಸತ್ಯ, ಶಾಂತಿ, ಅಹಿಂಸೆ, ಸತ್ಯಾಗ್ರಹ ಮತ್ತು ಹೋರಾಟದ ಮೂಲಕವೇ ಜಗತ್ತನ್ನು ಗೆದ್ದವರು ಗಾಂಧೀಜಿ. ಯುಗ ಪುರುಷ, ಫಾದರ್ ಆಫ್ ದಿ ನೇಷನ್ ಎಂದು ಕರೆಸಿಕೊಂಡಿದ್ದು ಗಾಂಧೀಜೀಯವರ ಹೆಚ್ಚುಗಾರಿಕೆಯಾಗಿದೆ ಎಂದು ತಿಳಿಸಿದ ಅವರು ಶಾಸ್ತ್ರೀಜಿ ಅವರು ಕೇವಲ 19 ತಿಂಗಳು ಪ್ರಧಾನ ಮಂತ್ರಿಯಾಗಿದ್ದರೂ ಇಡೀ ಪ್ರಪಂಚವೇ ಮೆಚ್ಚುವಂತಹ ಆಳ್ವಿಕೆ ನಡೆಸಿದರು ಎಂದು ತಿಳಿಸಿದರು.
ಗಾಂಧೀಜಿ ಅವರ ಆದರ್ಶಗಳು ಹಾಗೂ ತತ್ವಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಳ್ಳಬೇಕು. ಇದರಿಂದ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದ ಅವರು ತನ್ನ ಚಿಂತನೆ, ಜೀವನ ಸಂದೇಶಗಳಿಂದಲೇ ಜಗತ್ತಿನುದ್ದಕ್ಕೂ ವ್ಯಾಪಿಸಿ ನಿಂತ ಈ ಮಹಾನ್ ಚೇತನವನ್ನು ತಿಳಿಯಬೇಕಾದರೆ ಅವರು ನಡೆಸಿದ ಜೀವನವನ್ನು ತಿಳಿಯಬೇಕು ಎಂದು ಅವರು ತಿಳಿಸಿದರು.
ಜನಮನ ಸೆಳದ ಛಾಯಾಚಿತ್ರ ಪ್ರದರ್ಶನ
ಕಾವೇರಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮ ಗಾಂಧೀಜಿಯವರ ಅಪರೂಪದ ಛಾಯಾಚಿತ್ರಗಳು ವಿಶೇಷವಾಗಿತು. ಬಾಪು ಹುಟ್ಟು, ಶಿಕ್ಷಣ, ಬಾಲ್ಯಾ ಜೀವನ, ಕರ್ನಾಟಕದಲ್ಲಿ ಗಾಂಧೀಜಿ, ಅವರು ಆರಂಭಿಸಿದ ಸತ್ಯಾಗ್ರಹ, ಉಪವಾಸ ಈ ವಿಷಯಗಳ ಛಾಯಾಚಿತ್ರಗಳು ಹೆಚ್ಚಿನ ಸಾರ್ವಜನಿಕರನ್ನು ಆಕರ್ಷಿಸಿತು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಹಾಗೂ ಜನಪ್ರತಿಧಿಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಿಸಲಾದ ಗಾಂಧಿ ಆತ್ಮಚರಿತ್ರೆ ಕುರಿತ ಸಾಕ್ಷ್ಯಚಿತ್ರ ಹಾಗೂ ಛಾಯಾಚಿತ್ರವನ್ನು ವಿಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿಕ್ಕೆ ಅಭಿನಂದನೆ ಸಲ್ಲಿಸಿದರು.
ಅಲ್ಲದೇ ಆಯುಷ್ ಇಲಾಖೆಯಿಂದ ಆಯುರ್ವೇದ ಆರೋಗ್ಯ ಶಿಬಿರ ಈ ಬಾರಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನೆ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಕೆ.ಟಿ.ಶ್ರೀಕಂಠೇಗೌಡ, ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ, ಅಪರ ಜಿಲ್ಲಾಧಿಕಾರಿಗಳಾದ ಬಿ.ಪಿ.ವಿಜಯ್, ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಾವಣ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

