ದಿನದ ಸುದ್ದಿ
ಚಿತ್ರದುರ್ಗ | ನಿರುದ್ಯೋಗಿಗಳಿಗೊಂದು ಸಂತಸದ ಸುದ್ದಿ : ಹೊಸ ಕೈಗಾರಿಕಾ ನೀತಿಯಡಿ ಉದ್ಯಮಗಳ ಸ್ಥಾಪನೆ ; ಸಹಾಯ ಧನ
ಸುದ್ದಿದಿನ, ಚಿತ್ರದುರ್ಗ : ಉದ್ಯೋಗಸೃಷ್ಟಿ, ತಾಂತ್ರಿಕ ನೈಪುಣ್ಯತೆ, ಮಾನವ ಸಂಪನ್ಮೂಲ ಅಭಿವೃದ್ಧಿಯ ಸದ್ಬಳಕೆ, ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ಅಲ್ಲದೆ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ಉದ್ಯಮಗಳನ್ನು ಸ್ಥಾಪಿಸುವತ್ತ, ಉದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಹಲವು ಉತ್ತೇಜನಾಕಾರಿ ಅಂಶಗಳನ್ನೊಳಗೊಂಡ ಹೊಸ ಕೈಗಾರಿಕಾ ನೀತಿಯನ್ನು 2014 ರಿಂದ 2019 ರವರೆಗೆ ಅನ್ವಯಿಸುವಂತೆ ರೂಪಿಸಿ ಜಾರಿಗೊಳಿಸಿದೆ.
ಕೈಗಾರಿಕಾ ನೀತಿ ಜಾರಿಗೊಳಿಸುವ ಮೂಲಕ ಸರ್ಕಾರ ಕೆಲವು ಕಾರ್ಯ ನೀತಿಗಳನ್ನು ಹಮ್ಮಿಕೊಂಡಿದೆ. ಉತ್ತಮ ಗುಣಮಟ್ಟದಲ್ಲಿ ಸಮಗ್ರ ಸುವ್ಯವಸ್ಥಿತ ಮೂಲಭೂತ ಸೌಕರ್ಯಗಳನ್ನು ಸೃಷ್ಟಿಸುವುದು. ತಾಂತ್ರಿಕ ನೈಪುಣ್ಯತೆ ಮತ್ತು ಸಾಮಥ್ರ್ಯದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೊಳಿಸುವುದು. ಉತ್ತಮ ಯಾಂತ್ರೀಕತೆಯ ಅವಕಾಶಗಳು ಮತ್ತು ಕ್ರಮಬದ್ಧ ಕೈಗಾರಿಕಾ ಅಭಿವೃದ್ಧಿ. ಕೈಗಾರಿಕಾ ಬೆಳವಣಿಗೆಯ ಆಧಾರದ ಮೇಲೆ ತಾಲ್ಲೂಕುಗಳ ಮರುವಿಂಗಡಣೆ. ಎಂಎಸೆಂಇ ವಲಯಕ್ಕೆ ಹೆಚ್ಚಿನ ಉತ್ತೇಜನ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ವಲಯದ ಕೈಗಾರಿಕಾ ಕ್ಷೇತ್ರಕ್ಕೆ ಆಕರ್ಷಕ ಪ್ರೋತ್ಸಾಹ ಮತ್ತು ರಿಯಾಯಿತಿ ಸೌಲಭ್ಯಗಳನ್ನು ದೊರಕಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಅಂಗವಿಕಲ ಮಾಜಿ ಸೈನಿಕ ಮತ್ತು ಅನಿವಾಸಿ ಭಾರತೀಯ ಇವರನ್ನು ಉತ್ತೇಜಿಸಲು ಅವರು ಸ್ಥಾಪಿಸುವ ಕೈಗಾರಿಕೆಗಳಿಗೆ ವಿಶೇಷ ಆದ್ಯತೆ ನೀಡುವುದು. ರಫ್ತು ಉತ್ತೇಜನಕ್ಕೆ ಪ್ರೋತ್ಸಾಹ ನೀಡುವುದು. ಹಸಿರು ವಲಯ ಸಂರಕ್ಷಣೆಯೊಂದಿಗೆ ಇಂಧನ ಕ್ಷಮತೆ ಹೆಚ್ಚಿಸುವ ಘಟಕಗಳ ಅಳವಡಿಕೆಯೊಂದಿಗೆ ಸ್ಥಾಪಿಸುವ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪ್ರೋತ್ಸಾಹ ನೀಡುವುದು. ಗುರುತಿಸಲ್ಪಟ್ಟತಿ ವಿರಳ ವಸ್ತುಗಳ ಉತ್ಪಾದನೆ ಘಟಕಗಳಿಗೆ ವಿಶೇಷ ಒತ್ತು ನೀಡುವುದು. ಆಸ್ತಿ ಹಕ್ಕುಗಳ ಪ್ರಕರಣಗಳೊಂದಿಗೆ ಹೊಂದಾಣಿಕೆ ಕೈಗೊಳ್ಳುವುದು ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಡಿಜಿಟಲ್ ಡೈರೆಕ್ಟ್ ಉತ್ಪಾದನಾ ಘಟಕಗಳಿಗೆ ಆಸರೆ ನೀಡುವುದು ಹೊಸ ಕೈಗಾರಿಕಾ ನೀತಿಯ ಉದ್ದೇಶವಾಗಿದೆ.
ಕೈಗಾರಿಕಾ ವಲಯಗಳ ವರ್ಗೀಕರಣ
ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ನೀಡಲು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳನ್ನು ವಲಯವಾರು ವರ್ಗೀಕರಿಸಲಾಗಿದೆ. ವಲಯ-1 ರಲ್ಲಿ ಹೊಳಲ್ಕೆರೆ ತಾಲ್ಲೂಕು. ವಲಯ-2 ರಲ್ಲಿ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕು ಹಾಗೂ ವಲಯ-3 ರಲ್ಲಿ ಚಳ್ಳಕೆರೆ ತಾಲ್ಲೂಕು ನಿಗದಿಪಡಿಸಲಾಗಿದೆ.
ಬಂಡವಾಳ ಉತ್ತೇಜನಕ್ಕೆ ಸಹಾಯಧನ
ಕೈಗಾರಿಕೆ ಗಳನ್ನು ಸ್ಥಾಪಿಸಬಯಸವವರಿಗೆ ಉತ್ತೇಜನ ನೀಡುವ ಸಲುವಾಗಿ ವರ್ಗವಾರು ಸಹಾಯಧನವನ್ನು ನೀಡಲಾಗುವುದು. ವಲಯವಾರು ಹಾಗೂ ವರ್ಗವಾರು ಉತ್ತೇಜನ ಸಹಾಯಧನದ ಪ್ರಮಾಣ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಎ) ಅತಿಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 25 ರಿಂದ ಶೇ. 35 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು. ಸಾಮಾನ್ಯ ವರ್ಗ, ಮಹಿಳೆ, ಪ.ಜಾತಿ/ಪ.ವರ್ಗ, ಪ.ಜಾತಿ/ಪ.ವರ್ಗ ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕ ಹೀಗೆ ವರ್ಗವಾರು ವಿವಿಧ ವಲಯಗಳಲ್ಲಿ ಪ್ರಾರಂಭಿಸುವ ಅತಿ ಸಣ್ಣ ಕೈಗಾರಿಕೆಗಳಿಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಬಿ) ಸಣ್ಣ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 25 ಲಕ್ಷ ರೂ. ಗಳಿಂದ 5 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 10 ಲಕ್ಷ ರೂ. ಗಳಿಂದ 2 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ ಶೇ. 20 ರಿಂದ ಶೇ. 30 ರವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಸಿ) ಮಧ್ಯಮ ಕೈಗಾರಿಕೆಗಳಿಗೆ ಅಂದರೆ ಉತ್ಪಾದನಾ ವಲಯದಲ್ಲಿ ಯಂತ್ರ ಸ್ಥಾವರಗಳ ಮೇಲೆ 5 ಕೋಟಿ ರೂ. ಗಳಿಂದ 10 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಹಾಗೂ ಸೇವಾ ವಲಯದಲ್ಲಿ ಉಪಕರಣಗಳ ಮೇಲೆ 02 ಕೋಟಿ ರೂ. ಗಳಿಂದ 05 ಕೋಟಿ ರೂ. ವರೆಗೆ ಬಂಡವಾಳ ಹೂಡುವವರಿಗೆ ಕನಿಷ್ಟ 30 ರಿಂದ ಗರಿಷ್ಠ 60 ಲಕ್ಷ ರೂ. ಗಳÀವರೆಗೆ ಬಂಡವಾಳ ಉತ್ತೇಜನ ಸಹಾಯಧನ ನೀಡಲಾಗುವುದು.
ಮುದ್ರಾಂಕ ಮತ್ತು ನೊಂದಣಿ ಶುಲ್ಕ ವಿನಾಯಿತಿ
ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ, ಉದ್ಯಮ ಕ್ಷೇತ್ರಕ್ಕೆ ಉತ್ತೇಜಿಸಲು ಮುದ್ರಾಂಕ ಶುಲ್ಕ ಮತ್ತು ನೊಂದಣಿ ಶುಲ್ಕದಲ್ಲಿ ವಿನಾಯಿತಿ ನೀಡುವ ಕಾರ್ಯಕ್ರಮ ರೂಪಿಸಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಮುದ್ರಾಂಕ ಶುಲ್ಕ ವಿನಾಯಿತಿ ಇದೆ. ನೊಂದಣಿ ಶುಲ್ಕದಲ್ಲಿಯೂ ಸಾಕಷ್ಟು ರಿಯಾಯಿತಿಯನ್ನು ಸರ್ಕಾರ ಘೋಷಿಸಿದೆ.
ಭೂ ಪರಿವರ್ತನಾ ಶುಲ್ಕ ಮರುಪಾವತಿ
ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಅಲ್ಲದೆ ದೊಡ್ಡ, ಮೆಗಾ ಬೃಹತ್ ಕೈಗಾರಿಕೆ ಸ್ಥಾಪಿಸುವವರಿಗೆ ಹೊಳಲ್ಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ ಶೇ. 75 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ. ಉಳಿದಂತೆ ಮಹಿಳೆ, ಪ.ಜಾತಿ/ಪ.ವರ್ಗ, ಮಹಿಳೆ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಎಲ್ಲ ತಾಲ್ಲೂಕುಗಳಲ್ಲಿ ಶೇ. 100 ರಷ್ಟು ಭೂ ಪರಿವರ್ತನಾ ಶುಲ್ಕ ಮರುಪಾವತಿ ಇರುತ್ತದೆ.
ಪ್ರವೇಶ ತೆರಿಗೆ ವಿನಾಯಿತಿ
ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಮಹಿಳೆ, ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ 03 ರಿಂದ 05 ವರ್ಷ ಶೇ. 100 ರಷ್ಟು ಪ್ರವೇಶ ತೆರಿಗೆ ವಿನಾಯಿತಿ ಇದೆ. ಅದೇ ರೀತಿ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಯಂತ್ರೋಪಕರಣಗಳಿಗೆ ಕನಿಷ್ಟ 03 ರಿಂದ 05 ವರ್ಷ ಹಾಗೂ ಕಚ್ಚಾ ಸಾಮಗ್ರಿಗಳಿಗೆ ಕನಿಷ್ಟ 05 ರಿಂದ 08 ವರ್ಷ ಪ್ರವೇಶ ತೆರಿಗೆ ವಿನಾಯಿತಿ ಇದೆ.
ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಹಾಯಧನ
ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಬಯಸುವ ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಗರಿಷ್ಠ 50 ಲಕ್ಷ ರೂ. ಪ.ಜಾತಿ/ಪ.ವರ್ಗ, ಅಲ್ಪಸಂಖ್ಯಾತ, ಅಂಗವಿಕಲ, ಹಿಂದುಳಿದ ವರ್ಗ, ಮಾಜಿ ಸೈನಿಕರಿಗೆ ಶೇ. 75, ಗರಿಷ್ಟ 01 ಕೋಟಿ ರೂ. ಹಾಗೂ ದೊಡ್ಡ, ಮೆಗಾ, ಅಲ್ಟ್ರಾ ಮೆಗಾ, ಸೂಪರ್ ಮೆಗಾ ಕೈಗಾರಿಕೆಗಳಿಗೆ ಶೇ. 50, ಗರಿಷ್ಠ 2 ಕೋಟಿ ರೂ. ವರೆಗೆ ಸಹಾಯಧನ ನೀಡಲಾಗುವುದು.
ವಿವಿಧ ಬಗೆಯ ನೆರವು : ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ವಿದ್ಯುತ್ ಶುಲ್ಕದ ಮೇಲೆ ಕನಿಷ್ಟ 04 ರಿಂದ 07 ವರ್ಷಗಳ ಕಾಲ ತೆರಿಗೆ ವಿನಾಯಿತಿ ಒದಗಿಸಲಾಗುವುದು. ಮಳೆ ನೀರು ಕೊಯ್ಲು, ರ್ಯಾಜ್ಯ ನೀರು ಮರು ಸಂಸ್ಕರಣೆ, ಶೂನ್ಯ ತ್ಯಾಜ್ಯ ಹೊರ ಹೋಗುವಿಕೆ ನಿರ್ವಹಣೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಇಂಧನ ಸಂರಕ್ಷಣೆ ಕ್ರಮಗಳಿಗೆ ಸಹಾಯಧನ, ಯೋಜನಾ ವರದಿ ತಯಾರಿಕೆ ವೆಚ್ಚದ ಮರು ಸಂದಾಯಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಕೆಐಎಡಿಬಿ/ಕೆಎಸ್ಐಡಿ ಯಿಂದ ರಿಯಾಯಿತಿ ದರದಲ್ಲಿ ನಿವೇಶನ/ಮಳಿಗೆ ಹಂಚಿಕೆ ಸೌಲಭ್ಯವಿದೆ.
ಅರ್ಹ ಕೈಗಾರಿಕೆಗಳು
ಉತ್ತೇಜನ ಸೌಲಭ್ಯಕ್ಕೆ ಅರ್ಹವಾದ ಸೇವಾ ವಲಯದ ಕೈಗಾರಿಕೆಗಳ ವಿವರ ಇಂತಿದೆ. ಕೈಗಾರಿಕೆಗಳಿಗೆ ನೆರವಾಗುವ ಲಾಜಿಸ್ಟಿಕ್ ಸೌಕರ್ಯಗಳು. ಸೇವಾ ಕಾರ್ಯದಲ್ಲಿ ನಿರತವಾಗಿರುವ ಪವರ್ ಕೋಟಿಂಗ್, ಪೇಂಟಿಂಗ್, ಇಂಡಸ್ಟ್ರಿಯಲ್ ಪೇಂಟಿಂಗ್, ಕೆಐಡಿಬಿ/ಕೆಎಸ್ಎಸ್ಐಡಿಸಿ ಕೈಗಾರಿಕಾ ವಲಯ/ವಸಾಹತುಗಳಲ್ಲಿ ಸ್ಥಾಪಿತಗೊಳ್ಳುವ ವೇಬ್ರಿಡ್ಜ್, ಹೆಲ್ತ್ ಕೇರ್ ಫೆಸಿಲಿಟಿ ಘಟಕಗಳು. ಮೆಟೀರಿಯಲ್/ಪ್ರಾಡಕ್ಟ್ ಟೆಸ್ಟಿಂಗ್ ಲ್ಯಾಬೊರೇಟರಿ. ಫ್ಲೋರ್ಮಿಲ್ಸ್, ಎಲ್ಲಾ ವಿಧವಾದ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ. ಟೈಲರಿಂಗ್, ಜನರಲ್ ಇಂಜಿನಿಯರಿಂಗ್, ಫ್ಯಾಬ್ರಿಕೇಶನ್, ಮೋಟಾರ್ ರಿವೈಂಡಿಂಗ್, ಆಟೋಮೊಬೈಲ್ ಸರ್ವಿಸ್ ಮತ್ತು ದುರಸ್ತಿ, ಎಲೆಕ್ಟ್ರೋ ಪೇಂಟಿಂಗ್ ಇತ್ಯಾದಿ. ಎಲ್ಲ ವಿಧವಾದ ಪ್ರಿಂಟಿಂಗ್ ಪ್ರೆಸ್.
ಚಿತ್ರದುರ್ಗ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರ ವಿಸ್ತರಣೆಗೊಳ್ಳಲು ನೂತನ ಕೈಗಾರಿಕಾ ನೀತಿ ಹಲವು ಬಗೆಯ ಯೋಜನೆ, ಕಾರ್ಯಕ್ರಮಗಳ ಮೂಲಕ ಉತ್ತೇಜನ ನೀಡುತ್ತಿದ್ದು, ಸರ್ಕಾರದ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವ ಮೂಲಕ, ಉದ್ಯಮ ಸ್ಥಾಪಿಸಲು ಆಸಕ್ತರು ಮುಂದಾಗಬೇಕಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗ, ದೂರವಾಣಿ ಸಂ: 08194-235994 / 235817. www.karnatakaindustry.gov.in ವೆಬ್ಸೈಟ್ ಸಂಪರ್ಕಿಸಬಹುದಾಗಿದೆ.

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


