ಲೈಫ್ ಸ್ಟೈಲ್
ಪ್ಲಾಸ್ಟಿಕ್ ಬಳಕೆಯಿಂದ ಆಗುವ ಪರಿಣಾಮ ಗೊತ್ತಾದ್ರೆ ಬೆಚ್ಚಿ ಬೀಳ್ತೀರಾ..!
Leo Henricus Arthur Baekland ಅವರು 1907ರಲ್ಲಿ Bakellite ಎಂಬ synethic ವಸ್ತುವಿನಿಂದ ಪ್ಲಾಸ್ಟಿಕ್ ಅನ್ನು ಕಂಡುಹಿಡಿದರು. ಇದನ್ನು ಕಂಡು ಹಿಡಿದ ಮೇಲೆ ಜನಕ್ಕೆ ಪ್ರತಿದಿನ ತುಂಬ ಉಪಯೋಗವಾಗಲು ಶುರುವಾಯಿತು. ವರ್ಷ ಕಳೆದಂತೆ ಜನಗಳಿಗೆ ಪ್ಲಾಸ್ಟಿಕ್ ಇಲ್ಲದೇ ದಿನವೇ ಸಾಗದಂತೆ ಆಗಿದೆ. ಈ ಪ್ಲಾಸ್ಟಿಕ್ ಮನುಷ್ಯರ ದೇಹದ ಅಂಗಗಳ ರೀತಿಯಲ್ಲಿ ಒಂದು ಅಂಗವಾಗಿದೆ. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ವರೆಗು ಒಂದಲ್ಲ ಒಂದು ರೀತಿಯಲ್ಲಿ ಪ್ಲಾಸ್ಟಿಕ್ ಅನ್ನು ಬಳಸುತ್ತೇವೆ. ಪ್ಲಾಸ್ಟಿಕ್ ಕಂಡು ಹಿಡಿದು ಇಲ್ಲಿಗೆ 111 ವರ್ಷವಾಗಿದೆ. ಅದರೆ ನಮ್ಮ ಜನರಿಗೆ ಇದು ಪ್ರಪಂಚ ಹುಟ್ಟಿದಾಗಿನಿಂದ ಈ ಪ್ಲಾಸ್ಟಿಕ್ ಇತ್ತೇನೊ ಅನ್ನೊ ಮಟ್ಟಿಗೆ ಅದನ್ನು ಅವಲಂಬಿಸಿದ್ದಾರೆ.
ಈ ಪ್ಲಾಸ್ಟಿಕ್ ಎಲ್ಲರಿಗೂ ಕಡಿಮೆ ಬೆಲೆಯಲ್ಲಿ ಸಿಗುವ ವಸ್ತು. ಆರಾಮವಾಗಿ ಎಲ್ಲಾ ಕಡೆ ಸಿಗುತ್ತದೆ ಮತ್ತು ಕೊಂಡೊಯ್ಯಲು ಸುಲಭ ಎಂದು ಜನರ ನಂಬಿಕೆ. ಪ್ಲಾಸ್ಟಿಕ್ ಅನ್ನು ಮರುಬಳಕೆ ಮಾಡಬಹುದು ,ಇದರಿಂದ ತೊಂದರೆ ಆಗುವುದಿಲ್ಲ ಎಂದು ತಿಳಿದಿದರು. ಆದರೆ ಎಲ್ಲಾ ಪ್ಲಾಸ್ಟಿಕ್ ಅನ್ನು ನಾವು ಮರುಬಳಕೆ ಮಾಡಲು ಆಗುವುದಿಲ್ಲ ಎಂದು ಈಗ ನಮಗೆ ತಿಳಿದಿರುವ ವಿಷಯ. 20% ಅಷ್ಟೇ ಪ್ಲಾಸ್ಟಿಕ್ ಅನ್ನು ಮಾತ್ರ ಮರುಬಳಕೆ ಮಾಡಬಹುದು. ಇನ್ನೂ ಸ್ವಲ್ಪ ಸುಟ್ಟು ಹಾಕುತ್ತಾರೆ.
ಈ ಪ್ಲಾಸ್ಟಿಕ್ ನಮ್ಮಗೆ ಎಷ್ಟು ಉಪಯೋಗವೊ ಅದಕ್ಕಿಂತ ಹೆಚ್ಚು ಅಪಯಾಕಾರಿಯು ಹೌದು. ಈ ನೀರಿನ ಬಾಟಲ್, ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಲೋಟಗಳು, ಇನ್ನೂ ಹಲವು ಪ್ಲಾಸ್ಟಿಕ್ಗಳನ್ನು ನಾವು ಮರುಬಳಕೆ ಮಾಡಲು ಆಗುವುದಿಲ್ಲ. ಅವನ್ನೂ ಜನ ಎಲ್ಲೆಂದರಲ್ಲಿ ಬಿಸಾಡುತ್ತಾರೆ. ಇದು ನಗರದಲ್ಲಿ ಹೆಚ್ಚು ಹಳ್ಳಿ ಹಾಗೂ ಪಟ್ಟಣದಲು ಕೂಡ ಹೆಚ್ಚಾಗುತ್ತಿದೆ.
ಈಗಾಗಲೇ ಹಸುಗಳು, ಜಲಚರ ಪ್ರಾಣಿಗಳ ಮತ್ತು ಇನ್ನೂ ಇತರ ಪ್ರಾಣಿಗಳ ಹೊಟ್ಟೆ ಸೇರಿ ಈ ಪ್ಲಾಸ್ಟಿಕ್ ಎಲ್ಲವನ್ನೂ ಬಲಿತೆಗೆದು ಕೊಳ್ಳುತ್ತಿದೆ. ಈಗ ಅದು ಮನುಷ್ಯರಾದ ನಮ್ಮ ಸರದಿ. ನೇರವಾಗಿ ಹಾನಿಯಾಗದಿದರು ಅದರಿಂದ ತುಂಬಾನೆ ಅಪಾಯವಂತು ಇದೇ.
ಈ ಪ್ಲಾಸ್ಟಿಕ್ ನಮ್ಮ ದೇಹಕ್ಕೆ ಹೇಗೆ ಸೇರುತ್ತದೆ? ನಮ್ಮನ್ನು ಹೇಗೆ ಬಲಿ ತೆಗೆದುಕೊಂಡಿತು ಎಂದು ಪ್ರಶ್ನೆ? ನಗರ, ಪಟ್ಟಣ, ಹಳ್ಳಿಗಳಲ್ಲಿನ ಪ್ಲಾಸ್ಟಿಕ್ ಕೆಲ ಪ್ರಾಣಿಗಳನ್ನು ಬಲಿ ತೆಗೆದುಕೊಂಡರೆ, ಈ ನಗರ,ಪಟ್ಟಣ,ಹಳ್ಳಿಗಳಿಂದ ನದಿ, ಸಮುದ್ರ, ಸಾಗರಕ್ಕೆ ಸೇರುತ್ತಿರುವ ಪ್ಲಾಸ್ಟಿಕ್ ಇಡೀ ಮನುಕುಲಕ್ಕೆ ಹಾನಿಯನ್ನು ಉಂಟುಮಾಡುತ್ತಿದೆ.
ಹೇಗೆ ಪ್ಲಾಸ್ಟಿಕ್ ಸಾಗರದವರೆಗು ಸೇರುತ್ತದೆ ಎಂದರೆ ಮುಖ್ಯವಾಗಿ ಕಾರ್ಖಾನೆಗಳಿಂದ, ಬಟ್ಟೆ ತೊಳೆಯುವುದರಿಂದ, ಇನ್ನೂ ಮುಖ್ಯವಾಗಿ ಮನುಷ್ಯ ನದಿಗೆ ಹಾಕುವ ಕಸದಿಂದ, ಮಳೆ ಬಂದಾಗ ಭೂಮಿಯಲ್ಲಿನ ಪ್ಲಾಸ್ಟಿಕ್ ನದಿ ಸೇರಿ, ನದಿಯಿಂದ ಸಮುದ್ರಕ್ಕೆ, ಸಮುದ್ರದಿಂದ ಸಾಗರಕ್ಕೆ ಸೇರುತ್ತಿದೆ.
ಈ ಪ್ಲಾಸ್ಟಿಕ್ ಸಂಪೂರ್ಣವಾಗಿ ಕರಗದೆ ಕ್ರಮೇಣವಾಗಿ ಚಿಕ್ಕ ಚಿಕ್ಕ ಮೈಕ್ರೋಪ್ಲಾಸ್ಟಿಕ್ ಅಗಿ ಬದಲಾಗಿ ಎಲ್ಲಾ ಜಲಚರ ಪ್ರಾಣಿಗಳಿಗೆ ಸೇರುತ್ತಿದೆ. ಆಹಾರ ಕೊಂಡಿಯ ಮೂಲಕ ಜಲಚರ ಪ್ರಾಣಿಗಳು ಹಾಗೂ ಸಮುದ್ರದ ನೀರಿನಲ್ಲಿ ಸೇರಿ ಅದು ಮನುಷ್ಯನ ದೇಹ ಸೇರುತ್ತಿದೆ. ಅಬ್ಬಾ ಅದು ಬರಿ ಮಾಂಸಾಹಾರಿಗಳಿಗೆ ಮಾತ್ರ ಸೇರುತೆ ನಮಗಲ್ಲ ಎಂದು ಸಸ್ಯಹಾರಿಗಳ ಭಾವನೆ. ಆದರೆ ಈಗ ಅದು ಸಸ್ಯಹಾರಿಗಳಿಗು ಉಪ್ಪು ಹಾಗೂ ಮಿನರಲ್ ವಾಟರ್ ಈ ಎರಡು ಬಗ್ಗೆ ಯಾಗಿ ಸೇರುತ್ತಿದೆ.
ಹೌದು ,ಐಐಟಿ ಬಾಂಬೆಯವರು ಭಾರತದ ಉಪ್ಪಿನ ಬ್ರಾಂಡ್ಗಳ ಸುಮಾರು 24 ಕೆ.ಜಿ.ಉಪ್ಪನ್ನು ಪರೀಕ್ಷೆ ಮಾಡಿದಾಗ ಅದರಲ್ಲಿ ಸಾಮಾನ್ಯ ಉಪ್ಪಿನಲ್ಲಿ 63% ರಷ್ಟು, ಬ್ರಾಂಡೆಡ್ ಉಪ್ಪಿನಲ್ಲಿ 37%ರಷ್ಟು ಮೈಕ್ರೋಪ್ಲಾಸ್ಟಿಕ್ ಪತ್ತೆಯಾಗಿದೆ. ಇನ್ನೂ ಎರಡನೆಯದು ನಾವು ಶುದ್ಧ , ಖನಿಜಯುಕ್ತ ಎಂದು ಭಾವಿಸಿ ಕುಡಿಯುವ ಬಾಟಲ್ ನೀರಿನಲ್ಲಿ ಈ ಮೈಕ್ರೋಪ್ಲಾಸ್ಟಿಕ್ ಇದೇ. ಪ್ರೆಡೋನಿಯಾದ ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕಿನ ವಿಜ್ಞಾನಿಗಳು ಅಮೆರಿಕ, ಭಾರತ, ಚೀನಾ, ಇಂಡೋನೇಷ್ಯಾ, ಮೆಕ್ಸಿಕೊ, ಲೆಬನಾನ್, ಕೀನ್ಯಾ ದೇಶಗಳ 19 ಭಿನ್ನ ಪ್ರದೇಶಗಳಿಂದ 11 ವಿವಿಧ ಕಂಪನಿಗಳ 259 ಬಾಟಲ್ ನೀರು ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಕೇವಲ17 ಬಾಟಲಿಗಳಲ್ಲಿದ್ದ ನೀರು ಕುಡಿಯಲು ಯೋಗ್ಯ ಮತ್ತು ಸುರಕ್ಷಿತ ಎಂದು ಪತ್ತೆ ಹಚ್ಚಿದಾರೆ.
ಮುಖ್ಯವಾಗಿ, ಪಾಲಿಪ್ರೊಪಲಿನ್ ಎಂಬ ಪ್ಲಾಸ್ಟಿಕ್ ಕಣಗಳು ಈ ಬಾಟಲ್ ನೀರಿನ ಪ್ರತಿ ಲೀಟರಿಗೆ ಸರಾಸರಿ 58.6 ಪ್ಲಾಸ್ಟಿಕ್ ಫೈಬರ್ ಪತ್ತೆಯಾಗಿದೆ.
ಈ ಮೈಕ್ರೋಪ್ಲಾಸ್ಟಿಕ್ ನಮ್ಮ ದೇಹಕ್ಕೆ ಸೇರಿ ಹಲವು ಕಾಯಿಲೆಗಳಿಗೆ ಕಾರಣವಾಗಿದೆ. ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಕಾರಣವಾಗಿದೆ. ನರ ಸಂಬಂಧಿಸಿದ ಕಾಯಿಲೆ, ಥೈರಾಯಿಡ್ ತೊಂದರೆ, ಕ್ಯಾನ್ಸರ್, ಆಸ್ತಮಾ ಹಾಗೂ ಹೃದಯ ಕಾಯಿಲೆಗಳು, ಲೈಂಗಿಕ ದೌರ್ಬಲ್ಯ, ಜತಗೆ ಕೂದಲು ಮತ್ತು ಚರ್ಮ ಸಮಸ್ಯೆಗಳಿಗೆ ಈ ಮೈಕ್ರೋಪ್ಲಾಸ್ಟಿಕ್ ಕಾರಣವಾಗಿದೆ. ಇನ್ನೂ ಇದರಿಂದಾಗುವ ಅಗುತ್ತಿರುವ ತೊಂದರೆಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ. ಇಂದು ನಮ್ಮ ಮಹಾ ಸಾಗರಗಳು ಅಂದಾಜು 15 ಕೋಟಿ ಟನ್ನಿನಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಒಳಗಿರಿಸಿಕೊಂಡಿದೆ ಎಂದು ವರದಿಯಾಗಿದೆ.
ನಾವು ಈಗ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ಬಳಕೆ ಮಾಡದಿರಲು ಸಾಧ್ಯವಿಲ್ಲ ಅದರೇ ನಮ್ಮಲ್ಲಿ ಒಂದು ಚಿಕ್ಕ ಜಾಗೃತಿ ಮೂಡಿದರೆ ಮುಂದೆ ಅಗುವಾ ಈ ದೊಡ್ಡ ಪ್ಲಾಸ್ಟಿಕ್ ಸಮಸ್ಯೆಯನ್ನು ಸ್ವಲ್ಪವಾದರೂ ತಡೆಯಬಹುದು.ದೊಡ್ಡ ದೊಡ್ಡ ಆಹಾರ , ಎಣ್ಣೆ, ಪಾನಿಯಾ ಕಂಪನಿಗಳು ನೈಸರ್ಗಿಕವಾಗಿ ಬೇಗ ಕರಗುವಂತವುದರಲ್ಲಿ ಪ್ಯಾಕಿಂಗ್ ಮಾಡಿದರೆ ಎಷ್ಟೋ ಪ್ಲಾಸ್ಟಿಕ್ ಸಮಸ್ಯೆ ಬಗ್ಗೆ ಹರಿಯುತ್ತದೆ. ಸರ್ಕಾರ ಅವರು ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಿದರು ಅದು ಕಾರ್ಯ ರೂಪದಲ್ಲಿ ನೆಡೆಯುತ್ತಿಲ್ಲ. ಅದುದರಿಂದ ಇದು ನಮ್ಮಲ್ಲೆ ಜಾಗೃತಿ ಮೂಡಿದರೆ ಮಾತ್ರ ಸಾಧ್ಯ.
ಪ್ಲಾಸ್ಟಿಕ್ ಯಿಂದ ಅಗುವ ತೊಂದರೆ ಬಗ್ಗೆ ಅರಿವು ಮೂಡಿಸಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ.
-ಸೌಮ್ಯ ಅಶೋಕ್
ಬೆಂಗಳೂರು
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪ್ರಮುಖ 8 ಕ್ಲಬ್ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್
ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
http://Visit : www.suddidina.com
ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ
ಬೌರಿಂಗ್ ಕ್ಲಬ್ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಕೆಎಸ್ಸಿಎ ಕ್ಲಬ್ನಲ್ಲೂ ಹಲವು ಲೋಪ
ಕೆಎಸ್ಸಿಎ ಕ್ಲಬ್ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.
ಅವಧಿ ಮೀರಿದ ಅಣಬೆ ಪತ್ತೆ
ಕ್ಯಾಥೋಲಿಕ್ ಕ್ಲಬ್ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.
ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.
ಹೋಟೆಲ್ಗಳಿಗೂ ಕಟ್ಟುನಿಟ್ಟಿನ ಸೂಚನೆ
ಕ್ಲಬ್ಗಳ ಜೊತೆಗೆ ಹೋಟೆಲ್ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ದಿನದ ಸುದ್ದಿ
ಸೆ.2ರ ಹುಟ್ಟುಹಬ್ಬ ಆಚರಿಸದಿರಲು ಕಿಚ್ಚನ ನಿರ್ಧಾರ: “ನಿಮ್ಮ ಪ್ರೀತಿಯೇ ನನಗೆ ದೊಡ್ಡ ಮೈಲಿಗಲ್ಲು
ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬದ ವಾತಾವರಣ. ಆದರೆ ಈ ಬಾರಿ ಸೆಪ್ಟೆಂಬರ್ 2ರಂದು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ. ವೈಯಕ್ತಿಕ ಹಾಗೂ ಬಲವಾದ ಕೆಲವು ಕಾರಣಗಳಿಂದ ಈ ವರ್ಷದ ಜನ್ಮದಿನದ ಸಂಭ್ರಮದಿಂದ ದೂರ ಉಳಿಯುತ್ತಿರುವುದಾಗಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಪತ್ರದ ಮೂಲಕ ತಿಳಿಸಿದ್ದಾರೆ.
ಹುಟ್ಟುಹಬ್ಬದಂದು ಮನೆಯ ಬಳಿ ಅಭಿಮಾನಿಗಳನ್ನು ಭೇಟಿಯಾಗಲು ತಾವು ಲಭ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕಿಚ್ಚ, ಯಾವುದೇ ರೀತಿಯ ಗದ್ದಲ ಅಥವಾ ಸತ್ಕಾರಕ್ಕೆ ಮುಂದಾಗದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಸಾಮಾನ್ಯವಾಗಿ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಮನೆ ಮುಂದೆ ಸೇರುವ ಸಂದರ್ಭದಲ್ಲೇ, ಈ ಬಾರಿ ಸುದೀಪ್ ಅವರ ಮನವಿ ವಿಶೇಷ ಗಮನ ಸೆಳೆದಿದೆ.
ಉಡುಗೊರೆ ಬೇಡ, ಸಮಾಜಕ್ಕೆ ಸಹಾಯ ಮಾಡಿ
ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ನೀಡಲು ಉದ್ದೇಶಿಸಿರುವ ಉಡುಗೊರೆಗಳ ಬದಲಾಗಿ ಆ ಹಣವನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸುವಂತೆ ಸುದೀಪ್ ಕರೆ ನೀಡಿದ್ದಾರೆ. ತಮ್ಮ ಹೆಸರಿನಲ್ಲಿ ನಡೆಯುವ ಸಂಭ್ರಮಕ್ಕಿಂತ ಸಮಾಜಕ್ಕೆ ನೆರವಾಗುವ ಕೆಲಸವೇ ತಮಗೆ ನಿಜವಾದ ಸಂತೋಷ ನೀಡುತ್ತದೆ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.
ಅಭಿಮಾನಿಗಳು ತಮ್ಮ ತಮ್ಮ ಊರು, ಪ್ರದೇಶಗಳಲ್ಲಿ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುವುದೇ ತಮಗೆ ದೊರೆಯುವ ಅತ್ಯುತ್ತಮ ಆಶೀರ್ವಾದ ಎಂದು ಕಿಚ್ಚ ಹೇಳಿದ್ದಾರೆ. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಹೊಸ ಅರ್ಥ ನೀಡುವ ಪ್ರಯತ್ನ ಮಾಡಿದ್ದಾರೆ.
30 ವರ್ಷಗಳ ಸಿನಿ ಪಯಣದ ನೆನಪು
ಕನ್ನಡ ಚಿತ್ರರಂಗಕ್ಕೆ ಸುದೀಪ್ ಬರೋಬ್ಬರಿ ಮೂರು ದಶಕಗಳನ್ನು ಅರ್ಪಿಸಿದ್ದಾರೆ. ಸಿನಿಮಾ ತಮ್ಮ ಪರಮ ಕಾಯಕವಾಗಿದ್ದು, ಕೆಲವೊಮ್ಮೆ ಸಿನಿಮಾಗಳು ತಡವಾಗಬಹುದು; ಅದಕ್ಕೂ ಕಾರಣಗಳಿರುತ್ತವೆ ಎಂದು ಅವರು ಹೇಳಿದ್ದಾರೆ. ಈ ಮಾತುಗಳ ಮೂಲಕ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ.
“ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ” ಎಂಬ ಖಡಕ್ ಡೈಲಾಗ್ ಮೂಲಕ ಮುಂದಿನ ಸಿನಿಮಾ ಅಥವಾ ಹೊಸ ಯೋಜನೆಗೆ ಸುದೀಪ್ ಸುಳಿವು ನೀಡಿದ್ದಾರೆ. ಹೀಗಾಗಿ ಅವರ ಪತ್ರ ಕೇವಲ ಹುಟ್ಟುಹಬ್ಬದ ಮನವಿಯಾಗದೆ, ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆಯನ್ನೂ ಹುಟ್ಟುಹಾಕಿದೆ.
https://x.com/KicchaSudeep/status/2092857077706506638
“ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ”
ತಮ್ಮ ಮಾತೃಭಾಷೆ ಕನ್ನಡದ ಮೇಲಿನ ಪ್ರೀತಿಯನ್ನೂ ಸುದೀಪ್ ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ. ಎಲ್ಲೇ ಹೋದರೂ ಕನ್ನಡಿಗರನ್ನು ರಂಜಿಸುವ ವಿಷಯದಲ್ಲಿ ಎಂದಿಗೂ ರಾಜಿಯಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ 30 ವರ್ಷಗಳಿಂದ ಅಭಿಮಾನಿಗಳಿಂದ ದೊರೆತ ಪ್ರೀತಿ, ಹಾರೈಕೆ, ಚಪ್ಪಾಳೆ ಮತ್ತು ಶಿಳ್ಳೆಗಳೇ ತಮ್ಮ ದೊಡ್ಡ ಬಲ ಎಂದು ಸ್ಮರಿಸಿದ್ದಾರೆ.
“ನಮ್ಮನ್ನು ಮತ್ತು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ?” ಎಂದು ಪ್ರಶ್ನಿಸುವ ಮೂಲಕ ಅಭಿಮಾನಿಗಳೊಂದಿಗಿನ ತಮ್ಮ ಭಾವನಾತ್ಮಕ ಬಂಧವನ್ನು ತೆರೆದಿಟ್ಟಿದ್ದಾರೆ. ಕೊನೆಯಲ್ಲಿ “Luv u all always…” ಎಂದು ಹೇಳುವ ಮೂಲಕ ಕಿಚ್ಚ ತಮ್ಮ ಅಭಿಮಾನಿಗಳ ಮೇಲಿನ ಅಪಾರ ಪ್ರೀತಿಯನ್ನು ಮತ್ತೊಮ್ಮೆ ಸಾರಿದ್ದಾರೆ.

ದಿನದ ಸುದ್ದಿ
ಬಿಡುಗಡೆ ಬೆನ್ನಲ್ಲೇ ನಿರ್ದೇಶಕಿಯ ಹಳೆಯ ಮಾತಿಗೆ ಹೊಸ ವಿವಾದ: ‘ಟಾಕ್ಸಿಕ್’ ಸುತ್ತ ಟ್ರೋಲ್ಗಳ ಸದ್ದು
ಸುದ್ದಿದಿನ,ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಹಳೆಯ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ನಿರ್ದೇಶಕಿಯ ಸಿನಿಮಾ ಮಾಡುವ ವಿಧಾನಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಚರ್ಚೆಯ ಕೇಂದ್ರಬಿಂದುವಾಗಿದೆ.
ವೈರಲ್ ವಿಡಿಯೋದಲ್ಲಿ ಗೀತು ಮೋಹನ್ದಾಸ್ ಅವರು, ತಾವು ಬರೆಯುವುದು, ಚಿತ್ರೀಕರಿಸುವುದು ಹಾಗೂ ಎಡಿಟ್ ಮಾಡುವ ಪ್ರಕ್ರಿಯೆಯಲ್ಲಿ ಸಿನಿಮಾ ನಿಧಾನವಾಗಿ ರೂಪುಗೊಳ್ಳುತ್ತದೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ತಾವು ಸ್ಕ್ರಿಪ್ಟ್ಗೆ ಕಟ್ಟುನಿಟ್ಟಾಗಿ ಅಂಟಿಕೊಂಡು ಕೆಲಸ ಮಾಡುವುದಿಲ್ಲ ಎಂಬ ಅವರ ಹೇಳಿಕೆಯೇ ಇದೀಗ ನೆಟ್ಟಿಗರ ಗಮನ ಸೆಳೆದಿದೆ.
http://Visit : www.suddidina.com
‘ಸ್ಕ್ರಿಪ್ಟ್ನಂತೆ ಸಿನಿಮಾ ಸಿಗುವುದಿಲ್ಲ’ ಎಂದಿದ್ದ ನಿರ್ದೇಶಕಿ
ನಿರ್ಮಾಪಕರನ್ನು ಭೇಟಿಯಾಗುವಾಗಲೇ ತಮ್ಮ ಕೆಲಸದ ಶೈಲಿಯನ್ನು ಸ್ಪಷ್ಟಪಡಿಸುವುದಾಗಿ ಗೀತು ಹೇಳಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ. ಸ್ಕ್ರಿಪ್ಟ್ನಲ್ಲಿ ಓದುವ ಕಥೆಯಂತೆಯೇ ಅಂತಿಮ ಸಿನಿಮಾ ಇರಬೇಕೆಂದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದರು.
ಸಾಮಾನ್ಯವಾಗಿ ದೊಡ್ಡ ಬಜೆಟ್ನ ಸಿನಿಮಾಗಳಲ್ಲಿ ಕಥೆ, ಚಿತ್ರಕಥೆ ಮತ್ತು ಚಿತ್ರೀಕರಣದ ಯೋಜನೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ಗೀತು ಅವರ ಈ ಹಳೆಯ ಹೇಳಿಕೆಯನ್ನು ಕೆಲವರು ಪ್ರಶ್ನಿಸುತ್ತಿದ್ದರೆ, ಮತ್ತೊಂದೆಡೆ ನಿರ್ದೇಶಕರ ಸೃಜನಶೀಲ ಪ್ರಕ್ರಿಯೆ ಒಂದೇ ರೀತಿಯಾಗಿರಬೇಕೆಂದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.
https://x.com/alpasankhyata/status/2092620787698094334
‘ಟಾಕ್ಸಿಕ್’ ಮೇಲೆ ಪರಿಣಾಮ ಬೀರಿದ ಹಳೆಯ ಹೇಳಿಕೆ?
‘ಟಾಕ್ಸಿಕ್’ ಬಿಡುಗಡೆ ಬಳಿಕ ಸಿನಿಮಾದ ಕಥೆ, ನಿರೂಪಣೆ, ಆಕ್ಷನ್ ಹಾಗೂ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಇದೇ ಸಮಯದಲ್ಲಿ ಹಳೆಯ ವಿಡಿಯೋ ವೈರಲ್ ಆಗಿರುವುದರಿಂದ, ಸಿನಿಮಾದಲ್ಲಿನ ಕೆಲವು ಅಂಶಗಳನ್ನು ಈ ಹೇಳಿಕೆಯೊಂದಿಗೆ ಹೋಲಿಸಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.
ಚಿತ್ರವು ಸ್ವಾತಂತ್ರ್ಯಪೂರ್ವದ ಗೋವಾ ಹಿನ್ನೆಲೆಯಲ್ಲಿನ ಅಪರಾಧ ಜಗತ್ತು ಮತ್ತು ಅಂಡರ್ವರ್ಲ್ಡ್ ಕಥೆಯನ್ನು ಒಳಗೊಂಡಿದೆ. ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಆರಂಭ
ಭಾರೀ ನಿರೀಕ್ಷೆಯೊಂದಿಗೆ ಬಿಡುಗಡೆಯಾದ ‘ಟಾಕ್ಸಿಕ್’ ಮೊದಲ ದಿನವೇ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬ ವರದಿಗಳು ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಆರಂಭ ಪಡೆದಿರುವುದನ್ನು ಸೂಚಿಸುತ್ತವೆ. ಆದರೆ ಪ್ರೇಕ್ಷಕರ ಪ್ರತಿಕ್ರಿಯೆ ಮಾತ್ರ ಮಿಶ್ರವಾಗಿದೆ.
ಸದ್ಯ ಗೀತು ಮೋಹನ್ದಾಸ್ ಅವರ ಹಳೆಯ ಹೇಳಿಕೆ ಮತ್ತು ‘ಟಾಕ್ಸಿಕ್’ ಚಿತ್ರದ ಕುರಿತು ನಡೆಯುತ್ತಿರುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಮುಂದುವರಿದಿದೆ. ವೈರಲ್ ವಿಡಿಯೋ ಚಿತ್ರದ ಸೃಜನಶೀಲ ವಿಧಾನಕ್ಕೆ ಸಂಬಂಧಿಸಿದ ಹಳೆಯ ಅಭಿಪ್ರಾಯವಾಗಿದ್ದು, ಅದನ್ನು ಇಂದಿನ ಚಿತ್ರದ ಫಲಿತಾಂಶದೊಂದಿಗೆ ಹೇಗೆ ಸಂಪರ್ಕಿಸಬೇಕು ಎಂಬುದರ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

-
ಅಂತರಂಗ4 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ2 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ


