ದಿನದ ಸುದ್ದಿ
ಮೈಸೂರು ದಸರಾ ಗಜಪಯಣ ಹಿನ್ನೆಲೆ; ಆನೆಗಳ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ಗೊತ್ತಾ..?
ಸುದ್ದಿದಿನ,ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಗಜಪಯಣ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಇದು ಮಹಾರಾಜರ ಕಾಲದಿಂದಲೂ ಸಹ ಗಜಪಯಣ ಕಾರ್ಯಕ್ರಮವು ಜರುಗುತ್ತಿದ್ದು, ಇಂದಿನ ಕಾರ್ಯಕ್ರಮಗಳಿಗಿಂತ ವಿಭನ್ನವಾಗಿತ್ತು. ಮೈಸೂರು ಮಹಾರಾಜರು ದಸರಾ ಮಹೋತ್ಸವದ ಸಂದರ್ಭದಲ್ಲಿ ಅಂಬಾರಿಯನ್ನು ಹೊರುವುದಕ್ಕಾಗಿ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಕಾಡಿನಲ್ಲಿ ಪಳಗಿಸಿರುವ ಆನೆಗಳನ್ನು ಆಯ್ಕೆ ಮಾಡಿ ನಿಗದಿತ ಶುಭದಿನದಂದು ಶ್ಲೋಕಗಳನ್ನು ಪಠಿಸುವ ಮೂಲಕ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತವನ್ನು ಮಾಡಿ ನಂತರ ಸದರಿ ಸ್ಥಳದಿಂದ ಕಾಲ್ನಡಿಗೆ ಮೂಲಕ ಮೈಸೂರು ಅರಮನೆ ಆವರಣಕ್ಕೆ ಕರೆತರುತ್ತಿದ್ದರು. ಆನೆಗಳಿಗೆ ಭಕ್ತಿ ಮತ್ತು ಶ್ರದ್ದೆಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ದಿನಗಳನ್ನು ಆಚರಣೆ ಮಾಡಲಾಗುತ್ತಿತ್ತು.
ಇಂದು ಮಾನವ ಜಗತ್ತನ್ನು ಆಧುನೀಕರಣಗೊಳಿಸುವ ತವಕದಲ್ಲಿ ಕಾಡುಗಳನ್ನು ನಾಶಮಾಡಿ ಕಾಂಕ್ರೀಟಿಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಜಾಗತಿಕ ವಲಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ರೀತಿ ವಾತವರಣ ಬದಲಾವಣೆ, ರಸ್ತೆಯ ಮೇಲೆ ವಾಹನಗಳ ದಟ್ಟಣೆ, ಶಬ್ದ ಮಾಲಿನ್ಯದಿಂದ ಆನೆಗಳನ್ನು ಕಾಡಿನಿಂದ ಮೈಸೂರಿಗೆ ಕಾಲ್ನಡಿಗೆ ಮೂಲಕ ಕರೆತರಲು ಕಷ್ಟವಾಗಿರುವುದನ್ನು ಅರಿತ ಅರಣ್ಯ ಇಲಾಖೆ, ಆನೆಗಳ ಸುರಕ್ಷತೆಗಾಗಿ ಲಾರಿಗಳ ಮೂಲಕ ಸಾಗಾಣಿಕೆ ಮಾಡಲು 2004ರಲ್ಲಿ ತೀರ್ಮಾನಿಸಲಾಯಿತು. 2004ನೇ ಸಾಲಿನಿಂದ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ಸಾಂಪ್ರದಾಯಿಕ ಪೂಜೆಗಳೊಂದಿಗೆ ಚಾಲನೆ ನೀಡಲಾಗುತ್ತಿರುತ್ತದೆ.
ಸಾಂಪ್ರದಾಯಿಕ ಪೂಜೆಗಳು ನೆರವೇರಿದ ನಂತರ ಆನೆಗಳನ್ನು ಲಾರಿಯ ಮೂಲಕ ಸುರಕ್ಷಿತವಾಗಿ ಮೈಸೂರಿಗೆ ಸಾಗಾಣಿಕೆ ಮಾಡಲಾಗುವುದು.
ನಂತರದ ದಿನಗಳಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ನಡೆಯುತ್ತಿದ್ದ ಸಾಂಪ್ರದಾಯಿಕ ಪೂಜೆ ಕಾರ್ಯಕ್ರಮವನ್ನು ಹುಣಸೂರು ತಾಲ್ಲೂಕು, ನಾಗಪುರ ಗಿರಿಜನ ಹಾಡಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಜನಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆಯನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರಲ್ಲಿ ಅರಣ್ಯ ಮತ್ತು ವನ್ಯಪ್ರಾಣಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ನೆರವೇರಿಸಿಕೊಂಡು ಬರಲಾಗುತ್ತಿರುತ್ತದೆ.
ಸದರಿ ಸಂದರ್ಭದಲ್ಲಿ ಸಾಂಪ್ರದಾಯಿಕ ರಾಗಗಳನ್ನು ನುಡಿಸುವ ಸಂಗೀತಗಾರರು ಹಾಗೂ ಪೂರ್ಣಕುಂಬದೊಂದಿಗೆ ಶ್ಲೋಕಗಳನ್ನು ಪಠಿಸುವುದು ಹಾಗೂ ಆನೆಗಳ ಸುರಕ್ಷತೆ ಮತ್ತು ಸಮಾಜ ಸಾಮೂಹಿಕ ಕಲ್ಯಾಣಕ್ಕಾಗಿ ಗಣೇಶ ಅಷ್ಟೋತ್ತರ ಸೇರಿದಂತೆ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತದೆ. ಅಲ್ಲದೆ ಆನೆಗಳಿಗೆ ತೆಂಗಿನಕಾಯಿ, ಬೆಲ್ಲ ಮತ್ತು ಕಬ್ಬನ್ನು ನೀಡಿ ಸ್ವಾಗತವನ್ನು ಕೋರಲಾಗುತ್ತದೆ. ಗಜಪಯಣ ಕಾರ್ಯಕ್ರಮದ ದಿನ ಆನೆಗಳನ್ನು ವಿವಿಧ ಬಣ್ಣಗಳಿಂದ ಅಲಂಕಾರ ಗೊಳಿಸಿ, ವಿಶೇಷ ವಿನ್ಯಾಸವುಳ್ಳ ಹಣೆಪಟ್ಟಿಯನ್ನು ಹಾಕಲಾಗುವುದು. ಅಲ್ಲದೆ ಆನೆಗಳ ಮಾವುತರು ಮತ್ತು ಕವಾಡಿಗಳು ಸಹಾ ಸಮವಸ್ತ್ರಗಳನ್ನು ಧರಿಸುತ್ತಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳು ಹಾಗೂ ಗಣ್ಯವ್ಯಕ್ತಿಗಳು ಅಲಂಕೃತ ಆನೆಗಳಿಗೆ ಪೂಜೆ ಸಲ್ಲಿಸಿ ಬೆಲ್ಲ ಮತ್ತು ಕಬ್ಬನ್ನು ನೀಡುತ್ತಾರೆ. ಮಾವುತರು ಮತ್ತು ಕವಾಡಿಗಳವರಿಗೆ ತಾಂಬೂಲಗಳನ್ನು ನೀಡಿ ಸ್ವಾಗತವನ್ನು ಕೋರಲಾಗುವುದು. ನಂತರ ಅವರಿಗೆ ವಿಶೇಷ ಭೋಜನವನ್ನು ಏರ್ಪಡಿಸಲಾಗುತ್ತದೆ. ಆನೆಗಳನ್ನು ರ್ಯಾಂಪ್ಸ್ಗಳ ಮೂಲಕ ಲಾರಿಗಳಿಗೆ ಹತ್ತಿಸಿ, ಅರಣ್ಯ ಇಲಾಖೆಯ ಮತ್ತು ಪೋಲೀಸ್ ಸಿಬ್ಬಂದಿ ಬಂದೂಬಸ್ತಿನೊಂದಿಗೆ ಮೈಸೂರಿಗೆ ಸಾಗಾಣಿಕೆ ಮಾಡಲಾಗುತ್ತದೆ.
ಆನೆಗಳ ಆಯ್ಕೆಯ ಪ್ರಕ್ರಿಯೆ, ಆರೋಗ್ಯ ತಪಾಸಣೆ
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳನ್ನು ಈ ಎಲ್ಲಾ ಕಾರ್ಯಕ್ರಮಗಳಿಗಿಂತ ಮುಂಚೆ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪಶುವೈದ್ಯಾಧಿಕಾರಿಗಳೊಂದಿಗೆ ವಿವಿಧ ಆನೆ ಶಿಬಿರಗಳಿಗೆ ತೆರಳಿ ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತಾರೆ. ಈ ಬಾರಿ ದಸರಾ ಮಹೋತ್ಸವಕ್ಕಾಗಿ ಆನೆಗಳನ್ನು ಆಯ್ಕೆ ಮಾಡಲು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಎಂ ಚಳಕಾಪುರೆ ಮತ್ತು ಪಶುವೈದ್ಯಾಧಿಕಾರಿ ಡಾ. ಡಿ.ಎನ್. ನಾಗರಾಜು ಅವರು ನಾಗರಹೊಳೆ, ಬಂಡೀಪುರ ಮತ್ತು ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಗೆ ಬರುವ ವಿವಿಧ ಆನೆಗಳ ಶಿಬಿರಗಳಲ್ಲಿ ಇರುವ ಸಾಕಾನೆಗಳ ಆರೋಗ್ಯ ತಪಾಸಣೆ ಮಾಡಿ ಒಟ್ಟು 16 ಆನೆಗಳನ್ನು ಆಯ್ಕೆ ಮಾಡಿರುತ್ತಾರೆ. ನಂತರ ದಿನಾಂಕ:19-7-2018 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ಜರುಗಿಸಿ,
16 ಆನೆಗಳ ವಿವರಗಳನ್ನು ಪಡೆದು ಅದರಲ್ಲಿ 12 ಆನೆಗಳನ್ನು ಆಯ್ಕೆ ಮಾಡಿ ದಸರಾ ಮಹೋತ್ಸವಕ್ಕೆ ಕರೆತರಲು ತೀರ್ಮಾನಿಸಲಾಯಿತು.
ಗಜಪಯಣ-2018 (ವೀರನಹೊಸಹಳ್ಳಿ ಬಳಿ)
ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ 2018ರ ಮೈಸೂರು ದಸರಾ ಮಹೋತ್ಸವದ
ಅಂಗವಾಗಿ ಗಜಪಯಣ ಕಾರ್ಯಕ್ರಮವನ್ನು ಸೆಪ್ಟಂಬರ್ ಮಾಹೆಯ 2ನೇ ತಾರೀಖಿನಂದು
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯದ ಹೆಬ್ಬಾಗಲಿನಲ್ಲಿ ಪೂಜಾ ಕಾರ್ಯಕ್ರಮವನ್ನು ಹಾಗೂ ಗ್ರಾಮದ ಬಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮವನ್ನು ಹುಣಸೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಡಗೂರು ಹೆಚ್ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಿ.ಟಿ.ದೇವೇಗೌಡ ರವರು ವಿದ್ಯುಕ್ತ ಚಾಲನೆಯನ್ನು ನೀಡಿರುತ್ತಾರೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಪ್ರವಾಸೋದ್ಯಮ, ರೇಷ್ಮೆ ಖಾತೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಾ.ರಾ.ಮಹೇಶ್ ಮತ್ತು ಮಾನ್ಯ ಕನ್ನಡ ಮತ್ತು ಸಂಸ್ಕøತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ
ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಜಯಮಾಲ
ರವರು ಭಾಗವಹಿಸಿರುತ್ತಾರೆ. ಅಲ್ಲದೇ ಮೈಸೂರು ಪ್ರಾಂತ್ಯದ ಮಾನ್ಯ ಲೋಕಸಭಾ ಸದಸ್ಯರು, ಮಾನ್ಯ ಶಾಸಕರು, ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ
ಉಪಾಧ್ಯಕ್ಷರುಗಳು ಭಾಗವಹಿಸಿರುತ್ತಾರೆ.
ಗಜಪಯಣದ ಕಾರ್ಯಕ್ರಮದ ನಂತರ ಮೊದಲನೆ ತಂಡದಲ್ಲಿ ಅರ್ಜುನ, ವರಲಕ್ಷ್ಮಿ,
ಚೈತ್ರ, ಗೋಪಿ, ವಿಕ್ರಮ ಮತ್ತು ಧನಂಜಯ ಆನೆಗಳನ್ನು ಮೈಸೂರಿನ ಅರಣ್ಯ ಭವನಕ್ಕೆ
ಕರೆತರಲಾಯಿತು. ಸದರಿ ಆನೆಗಳನ್ನು ದಿನಾಂಕ:5-9-2018 ರಂದು ಮೈಸೂರು ಅರಮನೆ
ಆವರಣಕ್ಕೆ ಬರಮಾಡಿಕೊಳ್ಳಲು ಶುಭ ದಿನ ನಿಗಧಿಯಾದ್ದರಿಂದ, ಮೂರು ದಿನಗಳವರೆಗೆ
ಮೈಸೂರು ಅರಣ್ಯ ಭವನದಲ್ಲಿ ವಾಸ್ತವ್ಯ ಮಾಡಿದ್ದವು. ದಿನಾಂಕ: 5-9-2018 ರಂದು ಅರಣ್ಯ ಭವನದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿಗಳು (ಹುಲಿ ಮತ್ತು ಆನೆ ಯೋಜನೆ) ಮೈಸೂರು ರವರಾದ ಶ್ರೀ ಜಗತ್ ರಾಮ್ ಭಾ.ಅ.ಸೇ. ಮುಖ್ಯ ಅರಣ್ಯ
ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ, ಮೈಸೂರು ರವರಾದ ಶ್ರೀ ವೆಂಕಟೇಸನ್ ಎಸ್
ಬಾs .ಅ.ಸೇ. ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾಂಪ್ರಾದಾಯಿಕ ಪೂಜೆಯನ್ನು ಸಲ್ಲಿಸಿದ ನಂತರ ಬಲ್ಲಾಳ್ ವೃತ್ತ–ರಾಮಸ್ವಾಮಿ ವೃತ್ತ ಮತ್ತು 100 ಅಡಿ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಅರಮನೆಯ ಜಯಮಾರ್ತಾಂಡ ಗೇಟ್ನ ಬಳಿ ಕರೆತರಲಾಗುತ್ತದೆ. ಅಲ್ಲಿ
ಗಣ್ಯರು ಹಾಗೂ ಅಧಿಕಾರಿಗಳು ಪೂಜೆಯನ್ನು ನೆರವೇರಿಸುವ ಮೂಲಕ ಅರಮನೆಯ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.
ಸೌಲಭ್ಯಗಳು : ಮಾವುತರು ಹಾಗೂ ಅವರ ಕುಟುಂಬ ವರ್ಗದವರಿಗೆ
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳ ಮಾವುತರು ಮತ್ತು
ಕವಾಡಿಗಳವರೊಂದಿಗೆ ಅವುರುಗಳ ಕುಟುಂಬ ವರ್ಗದವರು ಸಹಾ ಜೊತೆಯಲ್ಲಿ ಬರುವುದರಿಂದ ಅವರ ವಾಸ್ತವ್ಯಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ
ನೀರು ನಿರೋಧಕ ಶೆಡ್ಡಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ. ಅಲ್ಲದೇ ಅವರ ದಿನನಿತ್ಯದ ನಿರ್ವಹಣೆಗೆ ಅಗತ್ಯವಾದ ವಸ್ತುಗಳನ್ನು ಸಹಾ ಪೂರೈಸಲಾಗುತ್ತದೆ. ಇವರೊಂದಿಗೆ ಆನೆಗಳಿಗೂ
ಸಹಾ ಶೆಡ್ಡುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅಲ್ಲದೆ ಮಾವುತ ಮತ್ತು ಕವಾಡಿಗಳ ಮಕ್ಕಳ ವಿದ್ಯಾಬ್ಯಾಸಕ್ಕೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ತಾತ್ಕಾಲಿಕವಾಗಿ ಗ್ರಂಥಾಲಯನ್ನು ಹಾಗೂ ಪಾಠಶಾಲೆಯನ್ನು ಮತ್ತು ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸದರಿ ಸ್ಥಳದಲ್ಲಿ ಒಂದು ಆರ್ಯವೇದದ ಆಸ್ಪತ್ರೆಯನ್ನು ಸಹಾ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ತೆರೆಯಲಾಗಿರುತ್ತದೆ. ಇವುಗಳಲ್ಲದೆ ರಕ್ಷಣೆಯ ದೃಷ್ಟಿಯಿಂದ ಆನೆಗಳ ಶಿಬಿರ
ಹಾಗೂ ಶೆಡ್ಡ ಆವರಣಗಳಲ್ಲಿ ಸಿಸಿಟಿವಿಯನ್ನು ಸಹಾ ಅಳವಡಿಸಲಾಗಿರುತ್ತದೆ.
ಎರಡನೇ ತಂಡದ ಆನೆಗಳ ಆಗಮನ
ದಿನಾಂಕ:14-9-2018 ರಂದು ಎರಡನೇ ತಂಡದಲ್ಲಿ ಅಭಿಮನ್ಯು, ಬಲರಾಮ, ಕಾವೇರಿ,
ವಿಜಯ, ಪ್ರಶಾಂತ ಮತ್ತು ದ್ರೋಣ ಆನೆಗಳನ್ನು ಮೈಸೂರು ಅರಮನೆಯ ಜಯಮಾರ್ತಾಂಡ
ಗೇಟ್ನ ಬಳಿ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೂಜಾ
ಕಾರ್ಯಕ್ರಮವನ್ನು ನೆರವೇರಿಸುವ ಮೂಲಕ ಬರಮಾಡಿಕೊಳ್ಳಲಾಯಿತು.
ವಿಶೇಷ ತರಬೇತಿ ಮತ್ತು ತಾಲೀಮು
ದಿನಾಂಕ: 6-9-2018 ರಿಂದ ಮೊದಲನೆ ತಂಡದ ಆನೆಗಳಿಗೆ ಯಾವುದೇ ಭಾರವಿಲ್ಲದೆ
ವಾಹನಗಳ ಶಬ್ದಕ್ಕೆ ಹಾಗೂ ಜನಸಂದಣಿಗೆ ಮತ್ತು ರಾತ್ರಿ ದೀಪದ ಬೆಳೆಕಿಗೆ ಹೊಂದಿಕೊಳ್ಳುವ
ಸಲುವಾಗಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಮೈಸೂರು ಅರಮನೆಯಿಂದ
ಬನ್ನಿಮಂಟಪದವರೆಗೆ ತಾಲೀಮು ನೀಡಲಾಗುತ್ತಿದ್ದು, ನಂತರ ದಿನಾಂಕ 14-9-2018 ರಿಂದ
ಹಂತಹಂತವಾಗಿ 350 ಕೆ.ಜಿ ಯಿಂದ 750 ಕೆಜಿಯರವರೆಗೆ ಭಾರವನ್ನು ಗಂಡು ಆನೆಗಳ ಬೆನ್ನಿಗೆ ಕಟ್ಟುವ ತೊಟ್ಟಿಲಿಗೆ ಮರಳು ಮೂಟೆಗಳನ್ನು ತುಂಬಿ ಪ್ರತಿ ದಿನ ತಾಲೀಮು ನೀಡಲಾಗುತ್ತಿದೆ. ಅಲ್ಲದೇ ವಿಜಯದಶಮಿಯಂದು ಹಾರಿಸುವ ಕುಶಲತೋಪುಗಳ ಶಬ್ದಕ್ಕೆ ಅಂಜದೆ ಇರುವುದಕ್ಕಾಗಿ ದಿನಾಂಕ: 27-9-2018 ರಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಪೋಲಿಸ್ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮುಂದೆ ಅಂದರೆ ಸ್ವಲ್ಪ ದೂರದಲ್ಲಿ ಕುಶಲ ತೋಪುಗಳನ್ನು ಇಟ್ಟು ಸಿಡಿಮದ್ದನ್ನು ಸಿಡಿಸುತ್ತಾರೆ. ಈ ರೀತಿ 3-4 ಬಾರಿ ಆನೆಗಳಿಗೆ ಸಿಡಿಮದ್ದಿನ ತಾಲೀಮನ್ನು ಮಾಡಿಸಲಾಗುವುದು.
ವಿಶೇಷ ಆಹಾರಪದಾರ್ಥಗಳು ಮತ್ತುಮೇವು ಪೂರೈಕೆ
ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಇಲಾಖಾ ಆನೆಗಳು ಸುಮಾರು 50
ರಿಂದ 55 ದಿನಗಳವರಿಗೆ ಮೈಸೂರಿನಲ್ಲಿ ವಾಸ್ತವ್ಯ ಮಾಡಲಾಗುತ್ತದೆ. ಈ ಅವಧಿಯಲ್ಲಿ ಆನೆಗಳ ಬಗ್ಗೆ ವಹಿಸುವ ಎಚ್ಚರ ತುಂಬ ನಾಜೂಕಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು, ಆನೆಗಳಿಗೆ ಪೌಷ್ಟಿಕ ಆಹಾರಗಳನ್ನು ನೀಡಿ ಹೆಚ್ಚಿನ ಮುತುವರ್ಜಿಯಿಂದ ನೋಡಿಕೊಳ್ಳಲಾಗುತ್ತಿದೆ.ಆನೆಗಳಿಗೆ ಪ್ರತಿ ದಿನ ಮರದ ಸೊಪ್ಪು, ಹಸಿಹುಲ್ಲು, ಕಬ್ಬುಗಳನ್ನು ನೀಡಲಾಗುತ್ತಿದ್ದು ಅದರ ಜೊತೆಗೆ ಪ್ರತಿ ದಿನ ಎರಡು ಬಾರಿ ಭತ್ತ, ಹಿಂಡಿ, ಕಾಯಿ, ಬೆಲ್ಲ ಯುಕ್ತ ಪ್ರಮಾಣದಲ್ಲಿ ಉಪ್ಪನ್ನು ಸೇರಿಸಿ ಭತ್ತದ ಹುಲ್ಲಿನಲ್ಲಿ ಕುಸುರೆ ಕಟ್ಟಿ ತಿನ್ನಿಸಲಾಗುತ್ತದೆ. ಅಲ್ಲದೆ ದಿನಕ್ಕೆರಡು ಬಾರಿ ಬೆಳಗ್ಗೆ 6.30 ಗಂಟೆಗೆ ಮತ್ತು ಸಂಜೆ 7.30 ಗಂಟೆಗೆ ಬೇಯಿಸಿದ ಹೆಸರುಕಾಳು, ಉದ್ದಿನಕಾಳು, ಕುಸುಬಲಕ್ಕಿ, ಗೋದಿ, ಈರುಳ್ಳಿ ಜೊತೆಯಲ್ಲಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಬೇಯಿಸಿ ಆದು ತಣ್ಣಗಾದ ಮೇಲೆ ಹಸಿ ತರಕಾರಿಗಳನ್ನು ಮತ್ತು ಬೆಣ್ಣೆಯನ್ನು ಸೇರಿಸಿ ಪ್ರತಿಯೊಂದು ಆನೆಗೂ ಯುಕ್ತ ಪ್ರಮಾಣದಲ್ಲಿ ತಿನ್ನಿಸಲಾಗುತ್ತದೆ.
ಅಲ್ಲದೇ ಪಶುವೈದ್ಯಾಧಿಕಾರಿಗಳು ಪ್ರತಿ ದಿನ ಆನೆ ಶಿಬಿರಗಳಿಗೆ ಬೇಟಿ ಅವುಗಳ ಆರೋಗ್ಯ ತಪಾಸಣೆ, ಆಹಾರ ಪರಿಶೀಲನೆ, ಆನೆಗಳಿಗೆ ತರಬೇತಿ ಮತ್ತು ಅವಶ್ಯವಿದ್ದಲ್ಲಿ ಚಿಕಿತ್ಸೆಯನ್ನು ನೀಡಿ ಔಷಧಿಗಳನ್ನು ನೀಡುತ್ತಾರೆ.
ಪೂಜಾ ಕಾರ್ಯಕ್ರಮಗಳು
ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಇಲಾಖಾ ಆನೆಗಳಿಗೆ ವಿಶೇಷ ದಿನಗಳಂದು
ಅಂದರೆ ಗಣೇಶ ಚತುರ್ಥಿ ಮತ್ತು ಇತರೆ ಹಬ್ಬದ ದಿನಗಳಂದು ಅರಣ್ಯ ಇಲಾಖೆಯ ಹಿರಿಯ
ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಉಪಸ್ಥಿತಿಯಲ್ಲಿ ಪೂಜಾ ಕಾರ್ಯಕ್ರಮಗಳನ್ನು
ನೆರವೇರಿಸಲಾಗುತ್ತದೆ.
ವನ್ಯಜೀವಿ ಸಪ್ತಾಹ-2018
ವನ್ಯಜೀವಿ ಸಪ್ತಾಹವನ್ನು ಪ್ರತಿ ವರ್ಷವು ಅಕ್ಟೋಬರ್ ಮಾಹೆಯ 2ನೇ ತಾರೀಖಿನಿಂದ
8ನೇ ತಾರೀಖಿನವರಗೆ ಆಚರಣೆ ಮಾಡಲಾಗುತ್ತದೆ. ವನ್ಯಜೀವಿ ಸಪ್ತಾಹವು ಸಾರ್ವಜನಿಕರಲ್ಲಿ ವನ್ಯಜೀವಿ ಸಂಪತನ್ನು ಉಳಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿರುತ್ತದೆ. 2018ನೇ ಸಾಲಿನಲ್ಲಿ ಅಕ್ಟೋಬರ್ 2 ರಿಂದ 8ನೇ ತಾರೀಖಿನವರಗೆ ವನ್ಯಜೀವಿ ಸಪ್ತಾಹವನ್ನು ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ದಸರಾ ಮಹೋತ್ಸವದಲ್ಲಿ
ಭಾಗವಹಿಸಲಿರುವ ಇಲಾಖಾ ಆನೆಗಳಿಗೆ ಬಟ್ಟೆಯಿಂದ ತಯಾರಿಸಿದ ಗೌನಗಳ ಮೇಲೆ ವನ್ಯಜೀವಿಗಳ ವಿವಿಧ ಸ್ಲೋಗನ್ಗಳನ್ನು ಬರೆದು ಅವುಗಳನ್ನು ಆನೆಗಳು ಬೆಳಗ್ಗೆ ಮತ್ತು ಸಂಜೆ ತಾಲೀಮು ಮಾಡುವ ವೇಳೆ ಅಂದರೆ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುವ ತಾಲೀಮಿನ ವೇಳೆ ಆನೆಗಳ ಮೇಲೆ ಅವುಗಳನ್ನು ಹೊದಿಸಿ ತಾಲೀಮು ನಡೆಸಲಾಯಿತು. ಈ
ರೀತಿಯಾಗಿ ಸಾರ್ವಜನಿಕರಿಗೆ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಲಾಯಿತು.
ಕಿಟ್ ವಿತರಣೆ ಹಾಗೂ ಇತರೆ ಕಾರ್ಯಕ್ರಮಗಳು
ದಿನಾಂಕ: 5-10-2018 ರಂದು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಅರಣ್ಯ ಸಚಿವರಾದ
ಶ್ರೀ ಶಂಕರ್ ಆರ್ ರವರ ಅಧ್ಯಕ್ಷತೆಯಲ್ಲಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ
ಉಪಸ್ಥಿತಿಯಲ್ಲಿ ಕಿಟ್ ವಿತರಣಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸದರಿ ದಿನದಂದು ಮಾನ್ಯ ಅರಣ್ಯ ಸಚಿವರು ಆನೆಗಳಿಗೆ ಪೂಜೆಯನ್ನು ನೆರವೇರಿಸಿ, ಮಾವುತರು ಮತ್ತು ಕವಾಡಿಗಳಿಗೆ ದಿನನಿತ್ಯದ ನಿರ್ವಹಣೆಗೆ ಅವಶ್ಯವಿದ್ದ ಕೊಡೆ, ವಾಟರ್ ಬಾಟಲ್, ಜಿರ್ಕಿನ್, ಟೋಪಿ, ಟಿ-ಶರ್ಟ, ಶೂ ಮತ್ತು ಬ್ಯಾಗುಗಳನ್ನೊಳಗೊಂಡ ಕಿಟ್ನ್ನು ವಿತರಣೆ ಮಾಡಿದರು. ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳು ಆನೆಗಳ ಮಾವುತರು ಮತ್ತು ಕವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ವಿವಿಧ ದಿನಗಳಂದು ಉಚಿತವಾಗಿ ಆರೋಗ್ಯ ತಪಾಸಣೆ, ವಸ್ತ್ರಗಳನ್ನು ನೀಡುವುದು ಮತ್ತು ಭೋಜನಕೂಟವನ್ನು ಏರ್ಪಡಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ
ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು ಒದಗಿಸುವುದು ಅಷ್ಟೇ ಸಾಕಾಗುವುದಿಲ್ಲ. ಜನರಿಗೆ ಸರಿಯಾದ ಪ್ರಮಾಣದ, ಗುಣಮಟ್ಟದ, ಸುರಕ್ಷಿತ ಮತ್ತು ಪೌಷ್ಟಿಕ ಆಹಾರವನ್ನು ಸಮುದಾಯದ ಸ್ಥಳೀಯ ಸಂಸ್ಕೃತಿಗೆ ಅನುಗುಣವಾಗಿ ಆಹಾರವನ್ನು ಒದಗಿಸಿದಾಗ ಮಾತ್ರ ಆಹಾರ ಭದ್ರತೆಯನ್ನು ಕೊಟ್ಟಿದ್ದೇವೆ ಎಂದು ಹೇಳಲು ಸಾಧ್ಯವಾಗುತ್ತದೆ ಎಂದು ಆಹಾರ ಭದ್ರತಾ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಅವರು ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅನುಷ್ಠಾನದ ಮೇಲ್ವಿಚಾರಣೆ ಮಾಡುವ ಜವಾಬ್ದಾರಿ ನಮ್ಮ ರಾಜ್ಯ ಆಹಾರ ಆಯೋಗಕ್ಕೆ ಇದೆ. ಈ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕಾದರೆ, ಇಲ್ಲಿ ಹಾಜರಿರುವ ಎಲ್ಲಾ ಇಲಾಖೆಗಳು ಸಮನ್ವಯ ಮತ್ತು ಸಹಕಾರದ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ವಿವಿಧ ಇಲಾಖೆಗಳ ನಡುವೆ ಈ ರೀತಿಯ ಸಮನ್ವಯವನ್ನು ಸಾಧಿಸಲು ಆಹಾರ ಭದ್ರತಾ ಕಾಯ್ದೆಯ ಜಾರಿಯಲ್ಲಿ ಕುಂದುಕೊರತೆ ನಿವಾರಣಾ ಅಧಿಕಾರಿಗಳಾದ ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಅವರ ಕಚೇರಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.
ಸುರಕ್ಷಿತ ಕುಡಿಯುವ ನೀರು, ಸ್ವಚ್ಛತೆ, ಆರೋಗ್ಯ ಸೇವೆಗಳ ಲಭ್ಯತೆ, ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳು ಪ್ರಮುಖವಾದಂತಹ ವಿಷಯಗಳು. ಇದರ ಜೊತೆಗೆ ಸಾಮಾಜಿಕ, ದೈಹಿಕ ಹಾಗೂ ಆರ್ಥಿಕ ದುರ್ಬಲತೆಗಳ ಬಗ್ಗೆ ಸ್ಪಷ್ಟವಾದ ಗಮನಹರಿಸುವುದು ಅತ್ಯಂತ ಅವಶ್ಯಕ. ಲಿಂಗ, ಜಾತಿ, ವರ್ಗ, ಉದ್ಯೋಗದ ಆಧಾರದ ಅಸಮಾನತೆಗಳು ಮತ್ತು ಬಡತನ ಈ ಸವಾಲುಗಳನ್ನು ಯಾವಾಗಲೂ ನಮ್ಮ ದೇಶವನ್ನ, ರಾಜ್ಯದಲ್ಲಿ ಇರುವಂತಹ ಸಮಸ್ಯೆಗಳು. ಆದ್ದರಿಂದ ರಾಜ್ಯದಲ್ಲಿ ಆಹಾರ ಅಭಾವ ಮತ್ತು ಅಪೌಷ್ಟಿಕತೆಯನ್ನು ನಿರ್ಮೂಲನೆಗೊಳಿಸಬೇಕಾದರೆ ನಾವು, ನೀವೆಲ್ಲರೂ ಒಟ್ಟಾಗಿ ಸೇರಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಮತ್ತೊಂದು ಪ್ರಮುಖ ಅಂಶವೆಂದರೆ ಜೀವನ ಚಕ್ರ ದೃಷ್ಟಿಕೋನ. ಗರ್ಭಧಾರಣೆಯಿಂದ ಆರಂಭಿಸಿ ಜನನ, ಬಾಲ್ಯ, ಯೌವ್ವನ, ಪ್ರೌಢಾವಸ್ಥೆ ಹಾಗೂ ವೃದ್ಧಾಪ್ಯದವರೆಗೆ ಮಾನವನ ಜೀವನದ ಎಲ್ಲಾ ಹಂತಗಳ ಅಗತ್ಯಗಳನ್ನು ಈ ಕಾಯ್ದೆ ಗಮನದಲ್ಲಿಟ್ಟುಕೊಂಡಿದೆ. ಒಂದು ಹಕ್ಕು ಆಧಾರಿತ ಕಾನೂನು. ಅಂದರೆ ಐ.ಸಿ.ಡಿ.ಎಸ್ (ICDS), ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಯೋಜನೆ, ಸಾರ್ವಜನಿಕ ವಿತರಣಾ ವ್ಯವಸ್ಥೆ, ಟಿ.ಪಿ.ಡಿ.ಎಸ್ (TPDS) ಮತ್ತು ಮಾತೃತ್ವದ ಹಕ್ಕುಗಳು. ಈ ನಾಲ್ಕು ಯೋಜನೆಗಳ ಮೂಲಕ ದೊರೆಯುವ ಸೇವೆಗಳು ಈಗ ಕಾನೂನಾತ್ಮಕವಾಗಿ ಬೇಡಿಕೆ ಇಡಬಹುದಾದ ಹಕ್ಕುಗಳಾಗಿವೆ. ಆದ್ದರಿಂದ ಅನುಷ್ಠಾನದಲ್ಲಿ ಜನರನ್ನು ಕೇಂದ್ರಬಿಂದುವಾಗಿ ಇಟ್ಟುಕೊಂಡು ವ್ಯವಸ್ಥೆಯನ್ನು ಜವಾಬ್ದಾರಿಯುತ, ಪಾರದರ್ಶಕ ಹಾಗೂ ಸಮಾನತೆಯ ತತ್ವದ ಮೇಲೆ ಕಾರ್ಯ ನಿರ್ವಹಿಸಬೇಕು, ಅನ್ನೋದು ನನ್ನ ನಂಬಿಕೆ ಎಂದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಆಹಾರ ಸುರಕ್ಷತೆ ಹಾಗೂ ಅದರೊಂದಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಅಪಾರ ಸಾಮರ್ಥ್ಯವನ್ನು ಹೊಂದಿದ್ದೇವೆ ಎಂದು ಭಾವಿಸಿದ್ದೇನೆ. ಎಲ್ಲರೂ ಒಟ್ಟಾಗಿ ಬದ್ಧತೆಯಿಂದ ಹಕ್ಕು ಆಧಾರಿತ ದೃಷ್ಟಿಕೋನದೊಂದಿಗೆ ಈ ಕಾಯ್ದೆಯನ್ನು ಅದರ ನಿಜವಾದ ಅರ್ಥದಲ್ಲಿ ಜಾರಿಗೆ ತಂದರೆ ಆಹಾರದ ಹಕ್ಕನ್ನು ಸಹಕಾರಗೊಳಿಸುವಲ್ಲಿ ಕರ್ನಾಟಕ ಮುಂಚೂಣಿ ರಾಜ್ಯವಾಗುವುದು. ಭಾರತದಲ್ಲಿ ಆಹಾರ ಭದ್ರತೆ, ಅದು ಹಕ್ಕು ಎಂಬ ತತ್ವದ ಮೇಲೆ ಆಧಾರಿತವಾಗಿದೆ. ಈ ಹಕ್ಕಿಗೆ ಕಾನೂನಾತ್ಮಕ ಬಲ ನೀಡಿದ ಮಹತ್ವದ ಕಾಯ್ದೆ ಈ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ,
ಕೇಂದ್ರ ಅಥವಾ ರಾಜ್ಯ ಸರ್ಕಾರದ ಯೋಜನೆಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಸರಿಯಾಗಿ ಜಾರಿಗೆ ಬರಬೇಕು. ಅದಕ್ಕೆ ಅಧಿಕಾರಿಗಳು ಆಹಾರದ ಹಕ್ಕುಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಅವರ ಸಮಸ್ಯೆಗಳನ್ನ ಕೇಳಬೇಕು. ದೂರುಗಳಿದ್ದರೆ ಅದನ್ನ ಸರಿಮಾಡಬೇಕು ಎಂದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಮಾತನಾಡಿ ತೂಕದಲ್ಲಿನ ಮೋಸವನ್ನು ತಡೆಯಲು ಮತ್ತು ಪಾರದರ್ಶಕತೆಯನ್ನು ತರಲು, ಅಂಗಡಿಗಳಲ್ಲಿ ‘ಜಿಯೋ ಫೆನ್ಸಿಂಗ್’ (Geo-fencing) ತಂತ್ರಜ್ಞಾನವನ್ನು ಅಳವಡಿಸುವುದು ಅವಶ್ಯಕ, ಇದು ಅಂಗಡಿಯ 10 ಮೀಟರ್ ಒಳಗೆ ಮಾತ್ರ ವ್ಯವಹಾರ ನಡೆಯುವಂತೆ ಮಾಡುತ್ತದೆ, ಈವರೆಗೆ ತೂಕದಲ್ಲಿ ವ್ಯತ್ಯಾಸ ಮತ್ತು ಇತರ ಅಕ್ರಮಗಳಿಗಾಗಿ ಸುಮಾರು 23 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳನ್ನು ಅಧಿಕಾರಿಗಳ ತಂಡೊಂದಿಗೆ ಖುದ್ದಾಗಿ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟಾರೆಯಾಗಿ, ನ್ಯಾಯಬೆಲೆ ಅಂಗಡಿಗಳಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಮತ್ತು ಬಡ ಜನರಿಗೆ ಸಿಗಬೇಕಾದ ಪಡಿತರ ಸರಿಯಾದ ತೂಕದಲ್ಲಿ ಸಿಗುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಸಭೆಗೆ ತಿಳಿಸಿದರು.
ಆಹಾರ ಭದ್ರತಾ ಆಯೋಗದ ಸದಸ್ಯರಾದ ಲಿಂಗರಾಜ್ ಕೋಟೆ , ಸುಮಂತ್ ರಾವ್, ಮಾರುತಿ ದೊಡ್ಡಲಿಂಗಣ್ಣ, ಕೆ.ಎಸ್. ವಿಜಯಲಕ್ಷ್ಮಿ, ರೋಹಿಣಿ ಪ್ರಿಯಾ, ಸದಸ್ಯ ಕಾರ್ಯದರ್ಶಿ ಮತ್ತು ಅಪರ ನಿರ್ದೇಶಕರಾದ ಸುಜಾತಾ ಹೊಸಮನಿ , ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


