Connect with us

ದಿನದ ಸುದ್ದಿ

ಮೈಸೂರು ದಸರಾ ಗಜಪಯಣ ಹಿನ್ನೆಲೆ; ಆನೆಗಳ ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ಗೊತ್ತಾ..?

Published

on

ಸುದ್ದಿದಿನ,ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಗಜಪಯಣ ವಿಶಿಷ್ಟ ಕಾರ್ಯಕ್ರಮವಾಗಿದ್ದು, ಇದು ಮಹಾರಾಜರ ಕಾಲದಿಂದಲೂ ಸಹ ಗಜಪಯಣ ಕಾರ್ಯಕ್ರಮವು ಜರುಗುತ್ತಿದ್ದು, ಇಂದಿನ ಕಾರ್ಯಕ್ರಮಗಳಿಗಿಂತ ವಿಭನ್ನವಾಗಿತ್ತು. ಮೈಸೂರು ಮಹಾರಾಜರು ದಸರಾ ಮಹೋತ್ಸವದ ಸಂದರ್ಭದಲ್ಲಿ ಅಂಬಾರಿಯನ್ನು ಹೊರುವುದಕ್ಕಾಗಿ ಹಾಗೂ ವಿವಿಧ ಕಾರ್ಯಕ್ರಮಗಳಿಗಾಗಿ ಕಾಡಿನಲ್ಲಿ ಪಳಗಿಸಿರುವ ಆನೆಗಳನ್ನು ಆಯ್ಕೆ ಮಾಡಿ ನಿಗದಿತ ಶುಭದಿನದಂದು ಶ್ಲೋಕಗಳನ್ನು ಪಠಿಸುವ ಮೂಲಕ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತವನ್ನು ಮಾಡಿ ನಂತರ ಸದರಿ ಸ್ಥಳದಿಂದ ಕಾಲ್ನಡಿಗೆ ಮೂಲಕ ಮೈಸೂರು ಅರಮನೆ ಆವರಣಕ್ಕೆ ಕರೆತರುತ್ತಿದ್ದರು. ಆನೆಗಳಿಗೆ ಭಕ್ತಿ ಮತ್ತು ಶ್ರದ್ದೆಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ದಿನಗಳನ್ನು ಆಚರಣೆ ಮಾಡಲಾಗುತ್ತಿತ್ತು.

ಇಂದು ಮಾನವ ಜಗತ್ತನ್ನು ಆಧುನೀಕರಣಗೊಳಿಸುವ ತವಕದಲ್ಲಿ ಕಾಡುಗಳನ್ನು ನಾಶಮಾಡಿ ಕಾಂಕ್ರೀಟಿಕರಣಗೊಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಜಾಗತಿಕ ವಲಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ರೀತಿ ವಾತವರಣ ಬದಲಾವಣೆ, ರಸ್ತೆಯ ಮೇಲೆ ವಾಹನಗಳ ದಟ್ಟಣೆ, ಶಬ್ದ ಮಾಲಿನ್ಯದಿಂದ ಆನೆಗಳನ್ನು ಕಾಡಿನಿಂದ ಮೈಸೂರಿಗೆ ಕಾಲ್ನಡಿಗೆ ಮೂಲಕ ಕರೆತರಲು ಕಷ್ಟವಾಗಿರುವುದನ್ನು ಅರಿತ ಅರಣ್ಯ ಇಲಾಖೆ, ಆನೆಗಳ ಸುರಕ್ಷತೆಗಾಗಿ ಲಾರಿಗಳ ಮೂಲಕ ಸಾಗಾಣಿಕೆ ಮಾಡಲು 2004ರಲ್ಲಿ ತೀರ್ಮಾನಿಸಲಾಯಿತು. 2004ನೇ ಸಾಲಿನಿಂದ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್‍ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ಸಾಂಪ್ರದಾಯಿಕ ಪೂಜೆಗಳೊಂದಿಗೆ ಚಾಲನೆ ನೀಡಲಾಗುತ್ತಿರುತ್ತದೆ.

ಸಾಂಪ್ರದಾಯಿಕ ಪೂಜೆಗಳು ನೆರವೇರಿದ ನಂತರ ಆನೆಗಳನ್ನು ಲಾರಿಯ ಮೂಲಕ ಸುರಕ್ಷಿತವಾಗಿ ಮೈಸೂರಿಗೆ ಸಾಗಾಣಿಕೆ ಮಾಡಲಾಗುವುದು.
ನಂತರದ ದಿನಗಳಲ್ಲಿ ಗಜಪಯಣ ಕಾರ್ಯಕ್ರಮದಲ್ಲಿ ಮೊದಲನೇ ತಂಡದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ರಾಜೀವ್‍ಗಾಂಧಿ ರಾಷ್ಟ್ರೀಯ ಉದ್ಯಾನದ ವೀರನಹೊಸಳ್ಳಿ ಬಳಿ ನಡೆಯುತ್ತಿದ್ದ ಸಾಂಪ್ರದಾಯಿಕ ಪೂಜೆ ಕಾರ್ಯಕ್ರಮವನ್ನು ಹುಣಸೂರು ತಾಲ್ಲೂಕು, ನಾಗಪುರ ಗಿರಿಜನ ಹಾಡಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಜನಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ಅಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆಯನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರಲ್ಲಿ ಅರಣ್ಯ ಮತ್ತು ವನ್ಯಪ್ರಾಣಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ನೆರವೇರಿಸಿಕೊಂಡು ಬರಲಾಗುತ್ತಿರುತ್ತದೆ.

ಸದರಿ ಸಂದರ್ಭದಲ್ಲಿ ಸಾಂಪ್ರದಾಯಿಕ ರಾಗಗಳನ್ನು ನುಡಿಸುವ ಸಂಗೀತಗಾರರು ಹಾಗೂ ಪೂರ್ಣಕುಂಬದೊಂದಿಗೆ ಶ್ಲೋಕಗಳನ್ನು ಪಠಿಸುವುದು ಹಾಗೂ ಆನೆಗಳ ಸುರಕ್ಷತೆ ಮತ್ತು ಸಮಾಜ ಸಾಮೂಹಿಕ ಕಲ್ಯಾಣಕ್ಕಾಗಿ ಗಣೇಶ ಅಷ್ಟೋತ್ತರ ಸೇರಿದಂತೆ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತದೆ. ಅಲ್ಲದೆ ಆನೆಗಳಿಗೆ ತೆಂಗಿನಕಾಯಿ, ಬೆಲ್ಲ ಮತ್ತು ಕಬ್ಬನ್ನು ನೀಡಿ ಸ್ವಾಗತವನ್ನು ಕೋರಲಾಗುತ್ತದೆ. ಗಜಪಯಣ ಕಾರ್ಯಕ್ರಮದ ದಿನ ಆನೆಗಳನ್ನು ವಿವಿಧ ಬಣ್ಣಗಳಿಂದ ಅಲಂಕಾರ ಗೊಳಿಸಿ, ವಿಶೇಷ ವಿನ್ಯಾಸವುಳ್ಳ ಹಣೆಪಟ್ಟಿಯನ್ನು ಹಾಕಲಾಗುವುದು. ಅಲ್ಲದೆ ಆನೆಗಳ ಮಾವುತರು ಮತ್ತು ಕವಾಡಿಗಳು ಸಹಾ ಸಮವಸ್ತ್ರಗಳನ್ನು ಧರಿಸುತ್ತಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳು ಹಾಗೂ ಗಣ್ಯವ್ಯಕ್ತಿಗಳು ಅಲಂಕೃತ ಆನೆಗಳಿಗೆ ಪೂಜೆ ಸಲ್ಲಿಸಿ ಬೆಲ್ಲ ಮತ್ತು ಕಬ್ಬನ್ನು ನೀಡುತ್ತಾರೆ. ಮಾವುತರು ಮತ್ತು ಕವಾಡಿಗಳವರಿಗೆ ತಾಂಬೂಲಗಳನ್ನು ನೀಡಿ ಸ್ವಾಗತವನ್ನು ಕೋರಲಾಗುವುದು. ನಂತರ ಅವರಿಗೆ ವಿಶೇಷ ಭೋಜನವನ್ನು ಏರ್ಪಡಿಸಲಾಗುತ್ತದೆ. ಆನೆಗಳನ್ನು ರ್ಯಾಂಪ್ಸ್‍ಗಳ ಮೂಲಕ ಲಾರಿಗಳಿಗೆ ಹತ್ತಿಸಿ, ಅರಣ್ಯ ಇಲಾಖೆಯ ಮತ್ತು ಪೋಲೀಸ್ ಸಿಬ್ಬಂದಿ ಬಂದೂಬಸ್ತಿನೊಂದಿಗೆ ಮೈಸೂರಿಗೆ ಸಾಗಾಣಿಕೆ ಮಾಡಲಾಗುತ್ತದೆ.

ಆನೆಗಳ ಆಯ್ಕೆಯ ಪ್ರಕ್ರಿಯೆ, ಆರೋಗ್ಯ ತಪಾಸಣೆ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳನ್ನು ಈ ಎಲ್ಲಾ ಕಾರ್ಯಕ್ರಮಗಳಿಗಿಂತ ಮುಂಚೆ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪಶುವೈದ್ಯಾಧಿಕಾರಿಗಳೊಂದಿಗೆ ವಿವಿಧ ಆನೆ ಶಿಬಿರಗಳಿಗೆ ತೆರಳಿ ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತಾರೆ. ಈ ಬಾರಿ ದಸರಾ ಮಹೋತ್ಸವಕ್ಕಾಗಿ ಆನೆಗಳನ್ನು ಆಯ್ಕೆ ಮಾಡಲು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಎಂ ಚಳಕಾಪುರೆ ಮತ್ತು ಪಶುವೈದ್ಯಾಧಿಕಾರಿ ಡಾ. ಡಿ.ಎನ್. ನಾಗರಾಜು ಅವರು ನಾಗರಹೊಳೆ, ಬಂಡೀಪುರ ಮತ್ತು ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಗೆ ಬರುವ ವಿವಿಧ ಆನೆಗಳ ಶಿಬಿರಗಳಲ್ಲಿ ಇರುವ ಸಾಕಾನೆಗಳ ಆರೋಗ್ಯ ತಪಾಸಣೆ ಮಾಡಿ ಒಟ್ಟು 16 ಆನೆಗಳನ್ನು ಆಯ್ಕೆ ಮಾಡಿರುತ್ತಾರೆ. ನಂತರ ದಿನಾಂಕ:19-7-2018 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆಯನ್ನು ಜರುಗಿಸಿ,
16 ಆನೆಗಳ ವಿವರಗಳನ್ನು ಪಡೆದು ಅದರಲ್ಲಿ 12 ಆನೆಗಳನ್ನು ಆಯ್ಕೆ ಮಾಡಿ ದಸರಾ ಮಹೋತ್ಸವಕ್ಕೆ ಕರೆತರಲು ತೀರ್ಮಾನಿಸಲಾಯಿತು.

ಗಜಪಯಣ-2018 (ವೀರನಹೊಸಹಳ್ಳಿ ಬಳಿ)
ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲಿಯೂ 2018ರ ಮೈಸೂರು ದಸರಾ ಮಹೋತ್ಸವದ
ಅಂಗವಾಗಿ ಗಜಪಯಣ ಕಾರ್ಯಕ್ರಮವನ್ನು ಸೆಪ್ಟಂಬರ್ ಮಾಹೆಯ 2ನೇ ತಾರೀಖಿನಂದು
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ವಲಯದ ಹೆಬ್ಬಾಗಲಿನಲ್ಲಿ ಪೂಜಾ ಕಾರ್ಯಕ್ರಮವನ್ನು ಹಾಗೂ ಗ್ರಾಮದ ಬಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮವನ್ನು ಹುಣಸೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಡಗೂರು ಹೆಚ್ ವಿಶ್ವನಾಥ್ ಅಧ್ಯಕ್ಷತೆಯಲ್ಲಿ ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜಿ.ಟಿ.ದೇವೇಗೌಡ ರವರು ವಿದ್ಯುಕ್ತ ಚಾಲನೆಯನ್ನು ನೀಡಿರುತ್ತಾರೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಪ್ರವಾಸೋದ್ಯಮ, ರೇಷ್ಮೆ ಖಾತೆ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಾ.ರಾ.ಮಹೇಶ್ ಮತ್ತು ಮಾನ್ಯ ಕನ್ನಡ ಮತ್ತು ಸಂಸ್ಕøತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ
ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಜಯಮಾಲ
ರವರು ಭಾಗವಹಿಸಿರುತ್ತಾರೆ. ಅಲ್ಲದೇ ಮೈಸೂರು ಪ್ರಾಂತ್ಯದ ಮಾನ್ಯ ಲೋಕಸಭಾ ಸದಸ್ಯರು, ಮಾನ್ಯ ಶಾಸಕರು, ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ
ಉಪಾಧ್ಯಕ್ಷರುಗಳು ಭಾಗವಹಿಸಿರುತ್ತಾರೆ.

ಗಜಪಯಣದ ಕಾರ್ಯಕ್ರಮದ ನಂತರ ಮೊದಲನೆ ತಂಡದಲ್ಲಿ ಅರ್ಜುನ, ವರಲಕ್ಷ್ಮಿ,
ಚೈತ್ರ, ಗೋಪಿ, ವಿಕ್ರಮ ಮತ್ತು ಧನಂಜಯ ಆನೆಗಳನ್ನು ಮೈಸೂರಿನ ಅರಣ್ಯ ಭವನಕ್ಕೆ
ಕರೆತರಲಾಯಿತು. ಸದರಿ ಆನೆಗಳನ್ನು ದಿನಾಂಕ:5-9-2018 ರಂದು ಮೈಸೂರು ಅರಮನೆ
ಆವರಣಕ್ಕೆ ಬರಮಾಡಿಕೊಳ್ಳಲು ಶುಭ ದಿನ ನಿಗಧಿಯಾದ್ದರಿಂದ, ಮೂರು ದಿನಗಳವರೆಗೆ
ಮೈಸೂರು ಅರಣ್ಯ ಭವನದಲ್ಲಿ ವಾಸ್ತವ್ಯ ಮಾಡಿದ್ದವು. ದಿನಾಂಕ: 5-9-2018 ರಂದು ಅರಣ್ಯ ಭವನದಲ್ಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿಗಳು (ಹುಲಿ ಮತ್ತು ಆನೆ ಯೋಜನೆ) ಮೈಸೂರು ರವರಾದ ಶ್ರೀ ಜಗತ್ ರಾಮ್ ಭಾ.ಅ.ಸೇ. ಮುಖ್ಯ ಅರಣ್ಯ
ಸಂರಕ್ಷಣಾಧಿಕಾರಿಗಳು, ಮೈಸೂರು ವೃತ್ತ, ಮೈಸೂರು ರವರಾದ ಶ್ರೀ ವೆಂಕಟೇಸನ್ ಎಸ್
ಬಾs .ಅ.ಸೇ. ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾಂಪ್ರಾದಾಯಿಕ ಪೂಜೆಯನ್ನು ಸಲ್ಲಿಸಿದ ನಂತರ ಬಲ್ಲಾಳ್ ವೃತ್ತ–ರಾಮಸ್ವಾಮಿ ವೃತ್ತ ಮತ್ತು 100 ಅಡಿ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಅರಮನೆಯ ಜಯಮಾರ್ತಾಂಡ ಗೇಟ್‍ನ ಬಳಿ ಕರೆತರಲಾಗುತ್ತದೆ. ಅಲ್ಲಿ
ಗಣ್ಯರು ಹಾಗೂ ಅಧಿಕಾರಿಗಳು ಪೂಜೆಯನ್ನು ನೆರವೇರಿಸುವ ಮೂಲಕ ಅರಮನೆಯ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.

ಸೌಲಭ್ಯಗಳು : ಮಾವುತರು ಹಾಗೂ ಅವರ ಕುಟುಂಬ ವರ್ಗದವರಿಗೆ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಆನೆಗಳ ಮಾವುತರು ಮತ್ತು
ಕವಾಡಿಗಳವರೊಂದಿಗೆ ಅವುರುಗಳ ಕುಟುಂಬ ವರ್ಗದವರು ಸಹಾ ಜೊತೆಯಲ್ಲಿ ಬರುವುದರಿಂದ ಅವರ ವಾಸ್ತವ್ಯಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ
ನೀರು ನಿರೋಧಕ ಶೆಡ್ಡಗಳನ್ನು ನಿರ್ಮಾಣ ಮಾಡಿಕೊಡಲಾಗುತ್ತದೆ. ಅಲ್ಲದೇ ಅವರ ದಿನನಿತ್ಯದ ನಿರ್ವಹಣೆಗೆ ಅಗತ್ಯವಾದ ವಸ್ತುಗಳನ್ನು ಸಹಾ ಪೂರೈಸಲಾಗುತ್ತದೆ. ಇವರೊಂದಿಗೆ ಆನೆಗಳಿಗೂ
ಸಹಾ ಶೆಡ್ಡುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅಲ್ಲದೆ ಮಾವುತ ಮತ್ತು ಕವಾಡಿಗಳ ಮಕ್ಕಳ ವಿದ್ಯಾಬ್ಯಾಸಕ್ಕೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ತಾತ್ಕಾಲಿಕವಾಗಿ ಗ್ರಂಥಾಲಯನ್ನು ಹಾಗೂ ಪಾಠಶಾಲೆಯನ್ನು ಮತ್ತು ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸದರಿ ಸ್ಥಳದಲ್ಲಿ ಒಂದು ಆರ್ಯವೇದದ ಆಸ್ಪತ್ರೆಯನ್ನು ಸಹಾ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ತೆರೆಯಲಾಗಿರುತ್ತದೆ. ಇವುಗಳಲ್ಲದೆ ರಕ್ಷಣೆಯ ದೃಷ್ಟಿಯಿಂದ ಆನೆಗಳ ಶಿಬಿರ
ಹಾಗೂ ಶೆಡ್ಡ ಆವರಣಗಳಲ್ಲಿ ಸಿಸಿಟಿವಿಯನ್ನು ಸಹಾ ಅಳವಡಿಸಲಾಗಿರುತ್ತದೆ.

ಎರಡನೇ ತಂಡದ ಆನೆಗಳ ಆಗಮನ

ದಿನಾಂಕ:14-9-2018 ರಂದು ಎರಡನೇ ತಂಡದಲ್ಲಿ ಅಭಿಮನ್ಯು, ಬಲರಾಮ, ಕಾವೇರಿ,
ವಿಜಯ, ಪ್ರಶಾಂತ ಮತ್ತು ದ್ರೋಣ ಆನೆಗಳನ್ನು ಮೈಸೂರು ಅರಮನೆಯ ಜಯಮಾರ್ತಾಂಡ
ಗೇಟ್‍ನ ಬಳಿ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೂಜಾ
ಕಾರ್ಯಕ್ರಮವನ್ನು ನೆರವೇರಿಸುವ ಮೂಲಕ ಬರಮಾಡಿಕೊಳ್ಳಲಾಯಿತು.

ವಿಶೇಷ ತರಬೇತಿ ಮತ್ತು ತಾಲೀಮು

ದಿನಾಂಕ: 6-9-2018 ರಿಂದ ಮೊದಲನೆ ತಂಡದ ಆನೆಗಳಿಗೆ ಯಾವುದೇ ಭಾರವಿಲ್ಲದೆ
ವಾಹನಗಳ ಶಬ್ದಕ್ಕೆ ಹಾಗೂ ಜನಸಂದಣಿಗೆ ಮತ್ತು ರಾತ್ರಿ ದೀಪದ ಬೆಳೆಕಿಗೆ ಹೊಂದಿಕೊಳ್ಳುವ
ಸಲುವಾಗಿ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಮೈಸೂರು ಅರಮನೆಯಿಂದ
ಬನ್ನಿಮಂಟಪದವರೆಗೆ ತಾಲೀಮು ನೀಡಲಾಗುತ್ತಿದ್ದು, ನಂತರ ದಿನಾಂಕ 14-9-2018 ರಿಂದ
ಹಂತಹಂತವಾಗಿ 350 ಕೆ.ಜಿ ಯಿಂದ 750 ಕೆಜಿಯರವರೆಗೆ ಭಾರವನ್ನು ಗಂಡು ಆನೆಗಳ ಬೆನ್ನಿಗೆ ಕಟ್ಟುವ ತೊಟ್ಟಿಲಿಗೆ ಮರಳು ಮೂಟೆಗಳನ್ನು ತುಂಬಿ ಪ್ರತಿ ದಿನ ತಾಲೀಮು ನೀಡಲಾಗುತ್ತಿದೆ. ಅಲ್ಲದೇ ವಿಜಯದಶಮಿಯಂದು ಹಾರಿಸುವ ಕುಶಲತೋಪುಗಳ ಶಬ್ದಕ್ಕೆ ಅಂಜದೆ ಇರುವುದಕ್ಕಾಗಿ ದಿನಾಂಕ: 27-9-2018 ರಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಹಾಗೂ ಪೋಲಿಸ್ ಹಿರಿಯ ಅಧಿಕಾರಿಗಳು ಉಪಸ್ಥಿತಿಯಲ್ಲಿ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮುಂದೆ ಅಂದರೆ ಸ್ವಲ್ಪ ದೂರದಲ್ಲಿ ಕುಶಲ ತೋಪುಗಳನ್ನು ಇಟ್ಟು ಸಿಡಿಮದ್ದನ್ನು ಸಿಡಿಸುತ್ತಾರೆ. ಈ ರೀತಿ 3-4 ಬಾರಿ ಆನೆಗಳಿಗೆ ಸಿಡಿಮದ್ದಿನ ತಾಲೀಮನ್ನು ಮಾಡಿಸಲಾಗುವುದು.

ವಿಶೇಷ ಆಹಾರಪದಾರ್ಥಗಳು ಮತ್ತುಮೇವು ಪೂರೈಕೆ

ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿರುವ ಇಲಾಖಾ ಆನೆಗಳು ಸುಮಾರು 50
ರಿಂದ 55 ದಿನಗಳವರಿಗೆ ಮೈಸೂರಿನಲ್ಲಿ ವಾಸ್ತವ್ಯ ಮಾಡಲಾಗುತ್ತದೆ. ಈ ಅವಧಿಯಲ್ಲಿ ಆನೆಗಳ ಬಗ್ಗೆ ವಹಿಸುವ ಎಚ್ಚರ ತುಂಬ ನಾಜೂಕಿನ ಹಾಗೂ ಜವಾಬ್ದಾರಿಯುತ ಕೆಲಸವಾಗಿದ್ದು, ಆನೆಗಳಿಗೆ ಪೌಷ್ಟಿಕ ಆಹಾರಗಳನ್ನು ನೀಡಿ ಹೆಚ್ಚಿನ ಮುತುವರ್ಜಿಯಿಂದ ನೋಡಿಕೊಳ್ಳಲಾಗುತ್ತಿದೆ.ಆನೆಗಳಿಗೆ ಪ್ರತಿ ದಿನ ಮರದ ಸೊಪ್ಪು, ಹಸಿಹುಲ್ಲು, ಕಬ್ಬುಗಳನ್ನು ನೀಡಲಾಗುತ್ತಿದ್ದು ಅದರ ಜೊತೆಗೆ ಪ್ರತಿ ದಿನ ಎರಡು ಬಾರಿ ಭತ್ತ, ಹಿಂಡಿ, ಕಾಯಿ, ಬೆಲ್ಲ ಯುಕ್ತ ಪ್ರಮಾಣದಲ್ಲಿ ಉಪ್ಪನ್ನು ಸೇರಿಸಿ ಭತ್ತದ ಹುಲ್ಲಿನಲ್ಲಿ ಕುಸುರೆ ಕಟ್ಟಿ ತಿನ್ನಿಸಲಾಗುತ್ತದೆ. ಅಲ್ಲದೆ ದಿನಕ್ಕೆರಡು ಬಾರಿ ಬೆಳಗ್ಗೆ 6.30 ಗಂಟೆಗೆ ಮತ್ತು ಸಂಜೆ 7.30 ಗಂಟೆಗೆ ಬೇಯಿಸಿದ ಹೆಸರುಕಾಳು, ಉದ್ದಿನಕಾಳು, ಕುಸುಬಲಕ್ಕಿ, ಗೋದಿ, ಈರುಳ್ಳಿ ಜೊತೆಯಲ್ಲಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಬೇಯಿಸಿ ಆದು ತಣ್ಣಗಾದ ಮೇಲೆ ಹಸಿ ತರಕಾರಿಗಳನ್ನು ಮತ್ತು ಬೆಣ್ಣೆಯನ್ನು ಸೇರಿಸಿ ಪ್ರತಿಯೊಂದು ಆನೆಗೂ ಯುಕ್ತ ಪ್ರಮಾಣದಲ್ಲಿ ತಿನ್ನಿಸಲಾಗುತ್ತದೆ.
ಅಲ್ಲದೇ ಪಶುವೈದ್ಯಾಧಿಕಾರಿಗಳು ಪ್ರತಿ ದಿನ ಆನೆ ಶಿಬಿರಗಳಿಗೆ ಬೇಟಿ ಅವುಗಳ ಆರೋಗ್ಯ ತಪಾಸಣೆ, ಆಹಾರ ಪರಿಶೀಲನೆ, ಆನೆಗಳಿಗೆ ತರಬೇತಿ ಮತ್ತು ಅವಶ್ಯವಿದ್ದಲ್ಲಿ ಚಿಕಿತ್ಸೆಯನ್ನು ನೀಡಿ ಔಷಧಿಗಳನ್ನು ನೀಡುತ್ತಾರೆ.

ಪೂಜಾ ಕಾರ್ಯಕ್ರಮಗಳು

ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಇಲಾಖಾ ಆನೆಗಳಿಗೆ ವಿಶೇಷ ದಿನಗಳಂದು
ಅಂದರೆ ಗಣೇಶ ಚತುರ್ಥಿ ಮತ್ತು ಇತರೆ ಹಬ್ಬದ ದಿನಗಳಂದು ಅರಣ್ಯ ಇಲಾಖೆಯ ಹಿರಿಯ
ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಉಪಸ್ಥಿತಿಯಲ್ಲಿ ಪೂಜಾ ಕಾರ್ಯಕ್ರಮಗಳನ್ನು
ನೆರವೇರಿಸಲಾಗುತ್ತದೆ.

ವನ್ಯಜೀವಿ ಸಪ್ತಾಹ-2018

ವನ್ಯಜೀವಿ ಸಪ್ತಾಹವನ್ನು ಪ್ರತಿ ವರ್ಷವು ಅಕ್ಟೋಬರ್ ಮಾಹೆಯ 2ನೇ ತಾರೀಖಿನಿಂದ
8ನೇ ತಾರೀಖಿನವರಗೆ ಆಚರಣೆ ಮಾಡಲಾಗುತ್ತದೆ. ವನ್ಯಜೀವಿ ಸಪ್ತಾಹವು ಸಾರ್ವಜನಿಕರಲ್ಲಿ ವನ್ಯಜೀವಿ ಸಂಪತನ್ನು ಉಳಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿರುತ್ತದೆ. 2018ನೇ ಸಾಲಿನಲ್ಲಿ ಅಕ್ಟೋಬರ್ 2 ರಿಂದ 8ನೇ ತಾರೀಖಿನವರಗೆ ವನ್ಯಜೀವಿ ಸಪ್ತಾಹವನ್ನು ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ದಸರಾ ಮಹೋತ್ಸವದಲ್ಲಿ
ಭಾಗವಹಿಸಲಿರುವ ಇಲಾಖಾ ಆನೆಗಳಿಗೆ ಬಟ್ಟೆಯಿಂದ ತಯಾರಿಸಿದ ಗೌನಗಳ ಮೇಲೆ ವನ್ಯಜೀವಿಗಳ ವಿವಿಧ ಸ್ಲೋಗನ್‍ಗಳನ್ನು ಬರೆದು ಅವುಗಳನ್ನು ಆನೆಗಳು ಬೆಳಗ್ಗೆ ಮತ್ತು ಸಂಜೆ ತಾಲೀಮು ಮಾಡುವ ವೇಳೆ ಅಂದರೆ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುವ ತಾಲೀಮಿನ ವೇಳೆ ಆನೆಗಳ ಮೇಲೆ ಅವುಗಳನ್ನು ಹೊದಿಸಿ ತಾಲೀಮು ನಡೆಸಲಾಯಿತು. ಈ
ರೀತಿಯಾಗಿ ಸಾರ್ವಜನಿಕರಿಗೆ ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಲಾಯಿತು.

ಕಿಟ್ ವಿತರಣೆ ಹಾಗೂ ಇತರೆ ಕಾರ್ಯಕ್ರಮಗಳು

ದಿನಾಂಕ: 5-10-2018 ರಂದು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಅರಣ್ಯ ಸಚಿವರಾದ
ಶ್ರೀ ಶಂಕರ್ ಆರ್ ರವರ ಅಧ್ಯಕ್ಷತೆಯಲ್ಲಿ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ
ಉಪಸ್ಥಿತಿಯಲ್ಲಿ ಕಿಟ್ ವಿತರಣಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸದರಿ ದಿನದಂದು ಮಾನ್ಯ ಅರಣ್ಯ ಸಚಿವರು ಆನೆಗಳಿಗೆ ಪೂಜೆಯನ್ನು ನೆರವೇರಿಸಿ, ಮಾವುತರು ಮತ್ತು ಕವಾಡಿಗಳಿಗೆ ದಿನನಿತ್ಯದ ನಿರ್ವಹಣೆಗೆ ಅವಶ್ಯವಿದ್ದ ಕೊಡೆ, ವಾಟರ್ ಬಾಟಲ್, ಜಿರ್ಕಿನ್, ಟೋಪಿ, ಟಿ-ಶರ್ಟ, ಶೂ ಮತ್ತು ಬ್ಯಾಗುಗಳನ್ನೊಳಗೊಂಡ ಕಿಟ್‍ನ್ನು ವಿತರಣೆ ಮಾಡಿದರು. ಗಣ್ಯರು ಮತ್ತು ವಿವಿಧ ಸಂಘ ಸಂಸ್ಥೆಗಳು ಆನೆಗಳ ಮಾವುತರು ಮತ್ತು ಕವಾಡಿಗಳು ಹಾಗೂ ಅವರ ಕುಟುಂಬ ವರ್ಗದವರಿಗೆ ವಿವಿಧ ದಿನಗಳಂದು ಉಚಿತವಾಗಿ ಆರೋಗ್ಯ ತಪಾಸಣೆ, ವಸ್ತ್ರಗಳನ್ನು ನೀಡುವುದು ಮತ್ತು ಭೋಜನಕೂಟವನ್ನು ಏರ್ಪಡಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ

Published

on

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ.

ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಿತು. 5 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ, 6ನೇ ಹಂತದ 58 ಕ್ಷೇತ್ರಗಳಲ್ಲಿ ಒಟ್ಟಾರೆ ಶೇಕಡ 57.70 ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಶೇಕಡ 52.24, ಜಾರ್ಖಂಡ್‌ನಲ್ಲಿ ಶೇಕಡ 61.41, ಹರ್ಯಾಣzಲ್ಲಿ ಶೇಕಡ 55.93, ಒಡಿಶಾದಲ್ಲಿ ಶೇಕಡ 59.60, ಉತ್ತರಪ್ರದೇಶದಲ್ಲಿ 52.02 ಮತ್ತು ಪಶ್ಚಿಮಬಂಗಾಳದಲ್ಲಿ 77.99, ದೆಹಲಿಯಲ್ಲಿ 53.73 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 51.35ರಷ್ಟು ಮತದಾನವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Published

on

ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಆದಿಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ದೂರಿನ ಬೆನ್ನಲ್ಲೇ ಆದಿಲ್‌ನನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.

ಕರೆತಂದ ಕೆಲವೇ ನಿಮಿಷದಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾನೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಹೇಳಿದ್ದಾರೆ.

ಆದಿಲ್ ಸಾವು ಬೆನ್ನಲ್ಲೇ ರೊಚ್ಚಿಗೆದ್ದ ಜನರು, ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಗಿರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಮಧ್ಯಾಹ್ನದ ಪ್ರಮುಖ ಸುದ್ದಿಗಳು 

Published

on

ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು 

  1. ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ ಒಟ್ಟಾರೆ 6ನೇ ಹಂತದ 58 ಕ್ಷೇತ್ರಗಳಲ್ಲಿ ಶೇಕಡ 25.76ರಷ್ಟು ಮತದಾನವಾಗಿದೆ. ಬಿಹಾರದಲ್ಲಿ ಶೇಕಡ 23.67, ಹರಿಯಾಣದ ಶೇಕಡ 22.09, ಜಾರ್ಖಂಡ್‌ನಲ್ಲಿ ಶೇಕಡ 27.80, ಒಡಿಶಾದ ಶೇಕಡ 21.30, ಉತ್ತರಪ್ರದೇಶದ 27.06, ಪಶ್ಚಿಮಬಂಗಾಳದಲ್ಲಿ 36.88, ದೆಹಲಿಯಲ್ಲಿ 21.69 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 23.11ರಷ್ಟು ಮತದಾನವಾಗಿದೆ.
  2. ದೆಹಲಿಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಡಾ. ಎಸ್. ಜೈಶಂಕರ್, ಹರ್‌ದೀಪ್ ಸಿಂಗ್ ಪುರಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಆಪ್ ನಾಯಕಿ ಅತೀಶಿ ಸಿಂಗ್ ಸೇರಿದಂತೆ ಹಲವು ಪ್ರಮುಖರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಮತದಾನದಲ್ಲಿ ಭಾಗವಹಿಸಲು ಪ್ರೇರೇಪಿಸಿದ್ದಾರೆ.
  3. ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  4. ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯೂ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.
  5. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ – ಎನ್‌ಐಎ ಬಂಧಿಸಿದೆ. ಹುಬ್ಬಳ್ಳಿಯ 35 ವರ್ಷದ ಶೋಯಬ್ ಅಹಮದ್ ಮಿರ್ಜಾ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯಾಗಿದ್ದು, ಲಷ್ಕರ್ ಎ ತೊಯ್ಬಾದ ಭಯೋತ್ಪಾದನಾ ಸಂಚು ಪ್ರಕರಣದಲ್ಲಿ ಮಾಜಿ ಆರೋಪಿಯಾಗಿದ್ದಾನೆ ಎಂದು ಎನ್‌ಐಎ ತಿಳಿಸಿದೆ.
  6. ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ಸ್ ಪಂದ್ಯದಲ್ಲಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು, ವಿಶ್ವದ 20ನೇ ಶ್ರೇಯಾಂಕಿತ ಥೈಲ್ಯಾಂಡ್‌ನ ಬುಸಾನನ್ ಆಂಗ್‌ಬಾಮ್‌ರುಂಗ್‌ಫಾನ್ ವಿರುದ್ಧ ಫೈನಲ್ಸ್ ಪ್ರವೇಶಿಸಲು ಸೆಣಸಲಿದ್ದಾರೆ.
  7. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 36 ರನ್‌ಗಳ ಗೆಲುವು ದಾಖಲಿಸಿದ್ದು, ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 hours ago

ಆರನೇ ಹಂತದ ಲೋಕಸಭಾ ಚುನಾವಣೆ ಮತದಾನ ಶಾಂತಿಯುತ

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ...

ದಿನದ ಸುದ್ದಿ13 hours ago

ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು...

ಕ್ರೀಡೆ20 hours ago

ಮಧ್ಯಾಹ್ನದ ಪ್ರಮುಖ ಸುದ್ದಿಗಳು 

ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು  ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ...

ದಿನದ ಸುದ್ದಿ1 day ago

ಈ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆ

ಸುದ್ದಿದಿನ ಡೆಸ್ಕ್ ; ರಾಜ್ಯದ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು, ಕೊಡುಗು ಜಿಲ್ಲೆಗಳ ಧಾರಾಕಾರ...

ದಿನದ ಸುದ್ದಿ2 days ago

ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ ಡೆಸ್ಕ್ : ಬಂಡವಾಳ ಹೂಡಿಕೆಗೆ ರಾಜ್ಯ ಉತ್ತಮ ತಾಣವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಉತ್ತಮ...

ದಿನದ ಸುದ್ದಿ2 days ago

ಉಪೇಂದ್ರ UI ಸಿನೆಮಾ | ಇತಿಹಾಸ ನಿರ್ಮಿಸಲು ಸಜ್ಜು ; ಹಂಗೇರಿಯಲ್ಲಿ ಮ್ಯೂಸಿಕ್..!

“UI” ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಮೊದಲ ಬಾರಿಗೆ, ಹಂಗೇರಿಯ ಬುಡಾಪೆಸ್ಟ್‌ನಲ್ಲಿ 90-ಪೀಸ್ ಆರ್ಕೆಸ್ಟ್ರಾ ಭಾರತೀಯ ಚಲನಚಿತ್ರಕ್ಕಾಗಿ ಸಂಗೀತವನ್ನು ರೆಕಾರ್ಡ್ ಮಾಡುತ್ತಿದೆ. ಈ ಅದ್ಭುತ ಸಾಧನೆಯು...

ದಿನದ ಸುದ್ದಿ2 days ago

ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸರ್ಕಾರ ಸಿದ್ದ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆ ಫಲಿತಾಂಶ ಹೊರಬಂದ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ...

ದಿನದ ಸುದ್ದಿ2 days ago

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವೋಟರ್ ಸ್ಲಿಪ್ ವಿತರಣೆಗೆ ಸೂಚನೆ : ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ತ ಶಿಕ್ಷಕರ ಹಾಗೂ ಪದವೀಧರರ...

ದಿನದ ಸುದ್ದಿ2 days ago

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಬುಡಕಟ್ಟು ವುವಹಾರಗಳ ಸಚಿವಾಲಯವು 2024-25ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು....

ದಿನದ ಸುದ್ದಿ2 days ago

ದಾವಣಗೆರೆ | ನಾಳೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ಟಿ.ವಿ.ಪಿ ಎಲೆಬೇತೂರು ಶಾಖಾ ವ್ಯಾಪ್ತಿಯ ಕೇಂದ್ರ ದಿಂದ ಹೊರಡುವ ಎಫ್-1-ಚಿತ್ತಾನಹಳ್ಳಿ, ಎಫ್-3-ಕಕ್ಕರಗೊಳ್ಳ, ಎಫ್-4 ಅವರಗೊಳ್ಳ, ಎಫ್-5-ದೇವರಹಟ್ಟಿ ಎಫ್-14-ಯರಗುಂಟೆ, ಎಫ್-17-ಅಮೃತನಗರ ಮತ್ತು ಎಫ್-20-ಕೋಡಿಹಳ್ಳಿ...

Trending