Connect with us

ರಾಜಕೀಯ

ಹಿಂದಕ್ಕೆಳೆಸುವ ಸ್ಥಾವರ ಧ್ವನಿಗಳ ಅಬ್ಬರ..!

Published

on

ಬ್ಬ ಸಣ್ಣ ಹುಡುಗ. ಅವನ ಕೈಯಲ್ಲಿ ದೊಡ್ಡ ದೊಡ್ಡ ನಾಲ್ಕು ಕಲ್ಲುಗಳು. ಆ ಫೋಟೋದೊಂದಿಗೆ ರಾರಾಜಿಸುತ್ತಿರುವ ಸಾಲುಗಳು – ‘ನಾನು ರಾಹುಲ್ ಗಾಂಧಿಯನ್ನು ಭೇಟಿ ಮಾಡಬೇಕಿದೆ’. ಫೇಸ್‍ಬುಕ್‍ನಲ್ಲಿ ಈಚೆಗೆ ಕಾಣಿಸಿಕೊಂಡ ಈ ಚಿತ್ರದೊಂದಿಗಿನ ಸಾಲುಗಳು ಭವಿಷ್ಯದ ಪೀಳಿಗೆಯ ಹೆಜ್ಜೆಗಳು ಏನಾಗಬಹುದು ಎಂಬುದರ ಸ್ಪಷ್ಟ ಸುಳಿವನ್ನು ನೀಡುವಂತೆಯೇ ಇವೆ. ಅವುಗಳು ಹಿಂಸೆಯೊಂದಿಗೇ ಗುರುತಿಸಿಕೊಳ್ಳಬೇಕು ಎಂಬ ಕಾರ್ಯಸೂಚಿಯ ಯಶಸ್ಸಿನ ದ್ಯೋತಕವಾಗಿಯೇ ಕಾಣಿಸುತ್ತಿವೆ. ಅಂಬೆಗಾಲಿಟ್ಟು, ಆ ಹಂತವನ್ನು ದಾಟಿಕೊಂಡು ಇದೀಗ ತಾನೆ ನಡೆಯುವುದನ್ನು ಕಲಿತಿರುವ ಅತ್ಯಂತ ಕಿರಿಯ ವಯಸ್ಸಿನ ಸಣ್ಣ ಹುಡುಗನಿಗೆ ಹಿಂಸೆಯ ಭಾಷೆ, ಪರಿಭಾಷೆ ಮತ್ತು ಸ್ವರೂಪವನ್ನು ಪರಿಚಯಿಸುವ ವಿಚಿತ್ರವಾದ ನಡೆಯೊಂದನ್ನು ಸಂಕೇತಿಸುತ್ತಿವೆ.

Rajadharma a column by Dr.N k padmanabh

ಭ್ರಮಾತ್ಮಕ ಚೌಕಟ್ಟುಗಳು

ನಮ್ಮ ದೃಷ್ಟಿಕೋನಗಳು ಈ ಪರಿ ದುರವಸ್ಥೆ ತಲುಪಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾದದ್ದಾದರೂ ಏಕೆ? ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಯಿತೇ? ಆ ಉದ್ದೇಶದ ಹಿಂದೆ ಕಾರ್ಯೋನ್ಮುಖವಾಗಿರುವ ಶಕ್ತಿಗಳು ಯಾವುವು? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಮೊದಲು ಈ ದೇಶದ ರಾಜಕಾರಣ ಮತ್ತು ಆಡಳಿತ ನೆಚ್ಚಿಕೊಂಡ ಹೊಸದನ್ನು ಬಹುಬೇಗ ಸ್ವೀಕರಿಸದ, ಸ್ವೀಕರಿಸಿದರೂ ನಿರಾಕರಣೆಯ ಭಾವವ ಸಾಂಪ್ರದಾಯಿಕತೆಯ ಚೌಕಟ್ಟುಗಳನ್ನು ಗೊತ್ತುಮಾಡಿಕೊಳ್ಳಬೇಕಾಗುತ್ತದೆ. ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯಾನಂತರದ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ ಭಾರತೀಯ ರಾಜಕಾರಣದ ವಿವಿಧ ಮಗ್ಗಲುಗಳು ಪರಿಚಯವಾಗುವುದರೊಂದಿಗೇ ಅಹಿಂಸೆಯ ಆಲೋಚನಾ ಕ್ರಮಗಳು ಹಿಂಸೆಯ ಸಂಕುಚಿತತೆಯೊಂದಿಗೆ ಮುಖಾಮುಖಿಯಾದ ವಿವಿಧ ಸಂದರ್ಭಗಳ ಚಾರಿತ್ರಿಕ ಹಿನ್ನೆಲೆ ಗಮನಕ್ಕೆ ಬರುತ್ತದೆ. ಅಹಿಂಸೆಯ ಮಾರ್ಗವು ಸ್ವಾತಂತ್ರ್ಯವನ್ನು ಕಂಡುಕೊಳ್ಳಲು ಸಹಾಯಕವಾದ ನಂತರ ಭಾರತೀಯ ಆಡಳಿತ ಅಳವಡಿಸಿಕೊಂಡ ನಿರ್ವಹಣೆಯ ಮಾದರಿಗೆ ಸಂಬಂಧಿಸಿದ ಸಂಗತಿಗಳು ತಿಳಿಯುತ್ತವೆ.

ಸಾರ್ಥಕತೆಯ ಹಾದಿಯ ನೆನಪು

ಬಾಲ್ಯದಲ್ಲಿ ನಮಗೆ ಹಲವು ಮಹನೀಯರ ತ್ಯಾಗದ ಕಾರಣಕ್ಕಾಗಿಯೇ ಸ್ವಾತಂತ್ರ್ಯ ಲಭಿಸಿರುವುದನ್ನು ಹಿರಿಯರ ಭಾಷಣಗಳು ಮನವರಿಕೆ ಮಾಡಿಕೊಡುತ್ತಿದ್ದವು. ಗಾಂಧಿ ಸೇರಿದಂತೆ ಹಲವರ ಹೋರಾಟದ ಪ್ರತಿಫಲವಾಗಿ ಸ್ವಾತಂತ್ರ್ಯ ನಮ್ಮೊಂದಿಗಿರುವುದನ್ನು ದೃಢೀಕರಿಸುತ್ತಿದ್ದವು. ಆಗ ನಮಗೆ ಹಿಂಸೆಯೇ ಶ್ರೇಷ್ಠ ಎಂಬಂಥ ದಾರಿತಪ್ಪಿಸುವ ದುರ್ಮಾರ್ಗದ ವೈಭವೀಕರಣ ಕಣ್ಣಮುಂದೆ ಬರುತ್ತಲೇ ಇರಲಿಲ್ಲ. ಬದಲಾಗಿ ಎಲ್ಲ ಭಾಷಣಗಳ ಚಿಂತನೆಗಳು ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವ ಹಾದಿ ಯಾವುದಾಗಿರಬೇಕು ಎಂಬುದನ್ನು ಹೊಳೆಸುವುದರ ಕಡೆಗೇ ಕೇಂದ್ರೀಕೃತವಾಗಿರುತ್ತಿದ್ದವು.ಬಾಲ್ಯದ ಅನುಭವವು ಹಲವು ಪಾಠಗಳನ್ನು ಕಲಿಸುತ್ತಿತ್ತು. ಮಕ್ಕಳು ಹೊಡೆದಾಡಿಕೊಂಡು ಬಂದರೆ ದೊಡ್ಡವರು ಬುದ್ಧಿವಾದ ಹೇಳುತ್ತಿದ್ದರು. ಹೊಡೆದಾಟ ಯಾಕೆ ಸರಿಯಲ್ಲ ಸ್ಪಷ್ಟಪಡಿಸುತ್ತಿದ್ದರು. ಹೊಡೆದವನು ಹೊಡೆತ ತಿಂದವನ ಮುಂದೆ ನಿಂತು ಕ್ಷಮೆ ಕೇಳಬೇಕಾಗುತ್ತಿತ್ತು. ಆ ಕ್ಷಮೆಯ ಪ್ರಸ್ತಾಪದೊಂದಿಗೇ ಇಬ್ಬರ ನಡುವೆ ಸ್ನೇಹ ಮತ್ತೆ ಚಿಗುರೊಡೆಯುತ್ತಿತ್ತು. ಸಣ್ಣ ಭಿನ್ನಾಭಿಪ್ರಾಯದ ಜಾಗವನ್ನು ಆಕ್ರಮಿಸಿಕೊಂಡು ಹೊಡೆದಾಡುವಷ್ಟರ ಮಟ್ಟಿಗೆ ಪ್ರಚೋದಿಸಿದ ದ್ವೇಷದ ದಟ್ಟ ಭಾವನೆಯನ್ನು ಆ ಕ್ಷಣವೇ ಅಳಿಸಿಹಾಕಿಬಿಡುತ್ತಿತ್ತು. ಆಮೇಲಾಮೇಲೆ ಸಣ್ಣ ಸಣ್ಣ ಭಿನ್ನಾಭಿಪ್ರಾಯಗಳು, ಸಣ್ಣ ಸಣ್ಣ ಜಗಳಗಳು, ಮತ್ತೆ ಒಂದಾಗಿ ಮಾತನಾಡಿಕೊಳ್ಳುವ ಸೊಗಡಿನೊಂದಿಗೇ ಬಾಲ್ಯ ಕಳೆದುಬಿಡುತ್ತಿತ್ತು. ದೊಡ್ಡವರಾಗುತ್ತಿದ್ದಂತೆಯೇ ಸಣ್ಣವರಾಗಿದ್ದಾಗಿನ ಕೆಲವು ಸಣ್ಣತನಗಳ ಪೊರೆಗಳನ್ನು ಕಳಚಿಕೊಳ್ಳುತ್ತಾ ಸಾಗಬೇಕಾಗಿತ್ತು. ಮಕ್ಕಳಾಗಿದ್ದಾಗ ಸಾಧ್ಯವಾಗಿದ್ದ ಈ ವಿವೇಕ ದೊಡ್ಡವರ ಬದುಕಿನೊಳಗೆ ಇಲ್ಲವಾಗುತ್ತದೆ. ಅವಿವೇಕತನದ ಪರಮಾವಧಿಯನ್ನು ಮತ್ತೆ ಮತ್ತೆ ಸಾಬೀತುಪಡಿಸುವ ಹಾಗೆಯೇ ಅವರು ವಿಕೃತಿಗಳೊಂದಿಗೇ ಗುರುತಿಸಿಕೊಳ್ಳುತ್ತಾರೆ. ಈಗಿನ ರಾಜಕಾರಣ ಮತ್ತು ಅದು ಪೋಷಿಸುವ ಆಡಳಿತ ವ್ಯವಸ್ಥೆಯು ಆ ವಿಕೃತಿಗಳನ್ನು ದಟ್ಟವಾಗಿಸುವ ನಕಾರಾತ್ಮಕ ಪಾತ್ರವನ್ನು ಅತ್ಯಂತ ಚಾಣಾಕ್ಷಯುತವಾಗಿ ನಿಭಾಯಿಸುತ್ತಿದೆ.

ಧೀಮಂತಿಕೆಯ ಗೈರುಹಾಜರಿ

ರಾಜಕಾರಣ ಮತ್ತು ಆಡಳಿತ ಒಂದನ್ನೊಂದು ನೆಚ್ಚಿಕೊಂಡಿರುವ ಪರಸ್ಪರ ಪೂರಕವಾದ ಕ್ಷೇತ್ರಗಳು. ಒಂದು ಶಾಸಕಾಂಗಕ್ಕೆ ಬೇಕಾದ ನಾಯಕತ್ವದ ಸಂಪನ್ಮೂಲವನ್ನು ಒದಗಿಸಿಕೊಡುವ ವಲಯವಾದರೆ, ಮತ್ತೊಂದು ಆ ಸಂಪನ್ಮೂಲದ ಆಧಾರದಲ್ಲಿ ಬಹುಮುಖೀ ಪಾತ್ರವನ್ನು ನಿರ್ವಹಿಸುವ ಕ್ರಿಯಾತ್ಮಕ ವ್ಯವಸ್ಥೆ. ಇವೆರಡನ್ನೂ ಪ್ರತಿನಿಧಿಸುವವರು ದೊಡ್ಡವರಾಗಿರಬೇಕು. ಅವರ ದೊಡ್ಡತನವು ಕೇವಲ ವಯಸ್ಸಲ್ಲಷ್ಟೇ ಅಲ್ಲ, ಅವರ ಧೀಮಂತಿಕೆಯ ಮೂಲಕ ಸಾಬೀತಾಗುತ್ತಿರಬೇಕು.ರಾಜಕಾರಣದಲ್ಲಿ ಹಿರಿವಯಸ್ಕ ರಾಜಕಾರಣಿಗಳಿದ್ದಾರೆ. ಆಡಳಿತ ವಲಯದಲ್ಲಿ ಅನುಭವಿ ಅಧಿಕಾರಿಗಳಿದ್ದಾರೆ. ಆದರೆ ಈ ಹಿರಿತನ ಮತ್ತು ಅನುಭವ ಇಡೀ ಸಮಾಜವನ್ನು ಹೊಸ ಹಾದಿಯ ಕಡೆಗೆ ಕೊಂಡೊಯ್ಯುವ ಬದಲು ಹಿಂದಿನ ಅನಾಗರಿಕ ಜಗತ್ತಿನ ಕ್ರೌರ್ಯದ ಕಡೆಗೇ ಹಿಂತಿರುಗಿಸುತ್ತಿದೆಯೇನೋ ಎಂಬ ಆತಂಕ ಆವರಿಸಿಕೊಳ್ಳುತ್ತಿದೆ. ಒಬ್ಬ ರಾಜಕಾರಣಿ ಮತ್ತೊಬ್ಬ ರಾಜಕಾರಣಿಯ ಬಗ್ಗೆ ಕೆಟ್ಟದಾಗಿ ಮಾತನಾಡುವಿಕೆ, ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟುವ ಭರದಲ್ಲಿ ಹಿಂಸೆಯ ಮನಸ್ಥಿತಿಯನ್ನೇ ಕಾಡಿಸಿಕೊಂಡು ಪ್ರಚೋದಿಸುವ ಬಗೆ – ಇವೆಲ್ಲವೂ ಹಿರಿತನದ ಸಂಕೇತಗಳಾಗುವುದೂ ಇಲ್ಲ. ಅನುಭವ ಶ್ರೇಷ್ಠತೆಯನ್ನೂ ನಿರೂಪಿಸುವುದಿಲ್ಲ.

ನಂಬಿಕೆಯ ನಡಿಗೆ ಮತ್ತು ನಿಜದ ಅರಿವು

ನಂಬಿಕೆಯ ತಂತಿ ಮೇಲಿನ ನಡಿಗೆಯ ಹಾಗೆಯೇ ಸೂಕ್ಷ್ಮಾತಿಸೂಕ್ಷ್ಮ ಸ್ವರೂಪದೊಂದಿಗೆ ಈ ದೇಶದ ಜನರ ತಿಳುವಳಿಕೆಯು ನಿಕಟನಂಟು ಹೊಂದಿದೆ. ಇದು ಅರಿವಿನ ಎತ್ತರ ತಲುಪಿಕೊಳ್ಳುವ ಮುನ್ನವೇ ಇಲ್ಲಿಯ ರಾಜಕಾರಣ ಅವರ ಮನೋಲೋಕವನ್ನುಆವರಿಸಿಕೊಂಡುಬಿಡುತ್ತದೆ. ನಂಬಿಸಿ ಆ ಮೂಲಕ ಸೃಷ್ಟಿಯಾಗುವ ಪರವಾದ ಅಲೆಯ ಮೇಲೆ ಅದು ಯಾವತ್ತೂ ತನ್ನನ್ನು ಪ್ರತಿಷ್ಠಾಪಿಸಿಕೊಳ್ಳುತ್ತದೆ. ಇಲ್ಲಿಯ ವೈಚಾರಿಕತೆಯು ನಂಬಿಕೆಯೊಂದಿಗೆ ಆರೋಗ್ಯಕರ ಸಂವಾದವನ್ನು ಏರ್ಪಡಿಸಿಕೊಂಡು ಜನಸಮುದಾಯವನ್ನು ಒಂದು ಹೆಜ್ಜೆ ಮುಂದಕ್ಕೆ ಕರೆದೊಯ್ದರೆ, ಅದೇ ನಂಬಿಕೆಯ ಜಗತ್ತನ್ನು ಪ್ರತಿನಿಧಿಸುವ ಧಾರ್ಮಿಕ ಯಜಮಾನಿಕೆಯ ಪ್ರತಿನಿಧಿಗಳು ಮತ್ತು ಅವರೊಂದಿಗೆ ಗುರುತಿಸಿಕೊಂಡ ರಾಜಕೀಯ ಶಕ್ತಿಗಳು ಒಂದು ಹೆಜ್ಜೆ ಹಿಂದಕ್ಕೆ ಕರೆದೊಯ್ಯುತ್ತವೆ.

ಹಿಂದಕ್ಕೆಳೆಸುವ ಸ್ಥಾವರ ಧ್ವನಿಗಳು

ಈಗ ಏನಾಗಿದೆ ಎಂದರೆ ನಮ್ಮನ್ನು ಮುನ್ನಡೆಸುವ ಬೌದ್ಧಿಕ ಚಲನೆಯ ಜಂಗಮ ಶಕ್ತಿಗಳಿಗಿಂತ ನಮ್ಮನ್ನು ಹಿಂದೆಯೇ ಉಳಿಸಿ ತಟಸ್ಥವಾಗಿ ಉಳಿಸಿ ಸ್ಥಾವರಗೊಳಿಸುವ ಧ್ವನಿಗಳ ಅಬ್ಬರದ ಕಡೆಗಿನ ವ್ಯಾಮೋಹವೇ ಸಾಮೂಹಿಕ ಕಾಯಿಲೆಯಾಗಿ ಸಾರ್ವಜನಿಕ ವಲಯದಲ್ಲಿ ಬೇರೂರಿಬಿಟ್ಟಿದೆ. ಈ ಊನದ ಕಾರಣಕ್ಕಾಗಿಯೇ ಅರಿವಿನ ಆಂದೋಲನದ ಬದಲು ಇಲ್ಲೀಗ ಹಿಂಸೆಯ ದೃಷ್ಟಿಕೋನಗಳು ಹಿಂದೆಂದಿಗಿಂತಲೂ ಹೆಚ್ಚಾಗಿ ಪ್ರಾಮುಖ್ಯತೆ ಪಡೆಯುತ್ತಿವೆ. ಯಾರೊಳಗೂ ತಿಳಿದುಕೊಳ್ಳುವ ಸಂಯಮವಿಲ್ಲ. ಸಹನೆಯಿಂದ ಯೋಚಿಸುವ ತಾಳ್ಮೆಯಿಲ್ಲ. ತಕ್ಷಣವೇ ಪ್ರತಿಕ್ರಿಯಿಸುವ, ಹಾಗೆ ಪ್ರತಿಕ್ರಿಯಿಸುತ್ತಲೇ ಕ್ರೌರ್ಯ ಮೆರೆಯುವ ಪ್ರಚೋದಕ ಉತ್ಸಾಹ ಎಲ್ಲೆಲ್ಲೂ ಕಂಡುಬರುತ್ತಿದೆ. ಇದರ ಭಾಗವಾಗಿಯೇ ಸಣ್ಣ ಮಗುವಿನ ಕೈಯಲ್ಲಿ ದೊಡ್ಡ ದೊಡ್ಡ ಕಲ್ಲುಗಳನ್ನಿಟ್ಟು ‘ನಾನು ರಾಹುಲ್ ಗಾಂಧಿಯನ್ನು ಭೇಟಿಯಾಗಲು ಇಚ್ಛಿಸುತ್ತಿದ್ದೇನೆ’ ಎಂಬ ಒಕ್ಕಣೆಯ ಫೋಟೋ ಫೇಸ್‍ಬುಕ್‍ನ ಆವರಣದಲ್ಲಿ ಕಾಣಿಸಿಕೊಳ್ಳುತ್ತದೆ. ದಿಢೀರನೆ ಅದು ಹಂಚಲ್ಪಡುತ್ತದೆ. ನಾಳಿನ ಪೀಳಿಗೆಯನ್ನು ಪ್ರತಿನಿಧಿಸುವ ಪೋರನ ಹಿಂಸಾಪರ ಫೋಟೋಕ್ಕೆ ಅಸಂಖ್ಯಾತ ಲೈಕ್‍ಗಳು ಹರಿದುಬರುತ್ತವೆ. ಇದು ಅರಿವನ್ನು ಎತ್ತರಿಸಿಕೊಳ್ಳುವ ಲಕ್ಷಣವಲ್ಲ. ಬದಲಾಗಿ ಜನರ ಸ್ವಯಂತಿಳುವಳಿಕೆಯ ಶಕ್ತಿಯ ಮೇಲೆ ತಣ್ಣಗೆ ಆಗುವ ಗದಾಪ್ರಹಾರ.

ರೂಢಿಗತ ಸಂಕುಚಿತ ವಿಧಾನ

ನಂಬಿಕೆಯ ಜಗತ್ತು ಆಧ್ಯಾತ್ಮಿಕ ತಾತ್ವಿಕತೆಯ ಪ್ರಖರತೆಯನ್ನು ತೀವ್ರಗೊಳಿಸುವುದು ಒಂದು ಸಾಧ್ಯತೆ. ಆದರೆ, ಇದೇ ಜಗತ್ತು ದೈವಿಕ ಮತ್ತು ಧಾರ್ಮಿಕ ಮೌಢ್ಯವನ್ನು ಪ್ರತಿಷ್ಠಾಪಿಸುವುದಕ್ಕೆ ಸಹಾಯಕವಾಗುತ್ತದೆ. ಅಷ್ಟೇ ಅಲ್ಲ, ರಾಜಕೀಯದ ಸ್ವರೂಪವನ್ನು ನಿರ್ಧರಿಸುವಷ್ಟರ ಮಟ್ಟಿಗೆ ತನ್ನ ಪ್ರಭಾವವನ್ನು ಪ್ರಬಲವಾಗಿ ಬೇರೂರಿಸಿಬಿಡುತ್ತದೆ. ಇದರ ಪರಿಣಾಮವು ಜನರ ಮನೋಧರ್ಮದ ಮೇಲಾಗುತ್ತದೆ. ಅಧಿಕಾರದಲ್ಲಿರುವ ಮತ್ತು ಅಧಿಕಾರದಲ್ಲಿ ಇಲ್ಲದೇ ಇರುವ ನಾಯಕರೆನ್ನಿಸಿಕೊಂಡವರನ್ನು ಗ್ರಹಿಸುವ ಸಂಕುಚಿತ ವಿಧಾನವನ್ನೂ ರೂಢಿಸಿಬಿಡುತ್ತದೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಬೇಕಿದೆ ಎನ್ನುವ ಪುಟ್ಟ ಪೋರನ ಕೈಯಲ್ಲಿನ ದೊಡ್ಡ ದೊಡ್ಡ ಕಲ್ಲುಗಳ ಫೋಟೋ ಈ ವಿಧಾನ ಎಂಥದ್ದು ಎಂಬುದನ್ನು ನಿರೂಪಿಸಿದೆ. ಲೋಕಸಭೆಯಲ್ಲಿ ನಿರರ್ಗಳವಾಗಿ ಮಾತನಾಡಿ ಭಾಷಿಕ ಪ್ರೌಢಿಮೆ ಮೆರೆದು ಅಧಿಕಾರದಲ್ಲಿರುವವರ ಊನಗಳ ಮೇಲೆ ಬೆಳಕು ಚೆಲ್ಲುವ ಪ್ರಬುದ್ಧ ನಡೆಯನ್ನು ಪ್ರದರ್ಶಿಸುವವರು ಉತ್ತಮ ಸಂಸದೀಯ ಪಟು ಎಂಬ ಹಿರಿಮೆ ಪಾತ್ರರಾಗುವ ಪರಂಪರೆ ಇದೆ. ಆದರೆ, ಇದಕ್ಕೆ ತದ್ವಿರುದ್ಧವಾದ ನಡೆಗಳೊಂದಿಗಿನ ಹೀನ ಸಂಪ್ರದಾಯವನ್ನು ರಾಜಕಾರಣಿಗಳು ಈಗಾಗಲೇ ಆರಂಭಿಸಿಬಿಟ್ಟಿದ್ದಾರೆ. ಅಷ್ಟಕ್ಕೇ ಅವರು ಸಮಾಧಾನಗೊಳ್ಳದೇ, ಸಾಮಾಜಿಕ ಜಾಲತಾಣಗಳ ವೇದಿಕೆಯ ತಾರ್ಕಿಕ ಸಾಧ್ಯತೆಗಳ ಆಯಾಮಕ್ಕೇ ಧಕ್ಕೆಯೊದಗಿಸುವ ಹಾಗೆ ನಡೆದುಕೊಳ್ಳುತ್ತಿದ್ದಾರೆ. ಸದ್ಯದ ಮತ್ತು ಭವಿಷ್ಯದ ಹಿಂಸಾಪ್ರವೃತ್ತಿಗಳ ವಾತಾವರಣ ಸೃಷ್ಟಿಗೆ ಹೊಸ ಪೀಳಿಗೆಯ ಎಳೆ ಜೀವಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಬಿಂಬಗಳು ನಕಾರಾತ್ಮಕ ಸಂದೇಶವನ್ನು ಸಾರುತ್ತಿವೆ.

ದ್ವೇಷದ ವಿಷ

ಒಬ್ಬರನ್ನೊಬ್ಬರು ಹಿಂಸಿಸಿಕೊಳ್ಳುವ, ದ್ವೇಷ ಸಾಧಿಸುವ, ಆ ಮೂಲಕ ನೆಮ್ಮದಿಯನ್ನು ತಂದುಕೊಳ್ಳುವ ಭ್ರಮಾತ್ಮಕತೆಯೇ ಶ್ರೇಷ್ಠ ಎಂದು ನಂಬಿಸುವ ಆಟ ಈಗೀಗ ಅಧಿಕೃತತೆಯನ್ನು ಪಡೆದುಕೊಂಡಿದೆ. ಈ ಆಟದ ಓಟವು ಹಲವು ಜೀವಗಳ ಬಲಿಬೇಡುತ್ತದೆ ಎಂಬ ಸತ್ಯದ ಕಡೆಗೆ ಯಾರ ಗಮನವೂ ಇಲ್ಲ. ಅದು ನಮ್ಮನ್ನು ಯಾವ ಕೂಪಕ್ಕೆ ತಳ್ಳುತ್ತದೆ ಎಂಬ ಪರಿಜ್ಞಾನವಿಲ್ಲದೇ ದ್ವೇಷಕ್ಕೆ ಮನಸ್ಸನ್ನು ತಿರುಗಿಸಿಕೊಳ್ಳುವ ರಣೋತ್ಸಾಹವು ಪೀಳಿಗೆಯನ್ನು ಸರ್ವನಾಶದ ಕಡೆಗೆ ಕೊಂಡೊಯ್ಯುತ್ತಿದೆ. ನಮ್ಮ ನಾಯಕರ ಕುರಿತು ಅಸಮಾಧಾನಗೊಳ್ಳುವ, ಭಿನ್ನಾಭಿಪ್ರಾಯ ವ್ಯಕ್ತಪಡಿಸುವ, ಆ ಮೂಲಕ ಅವರು ನಮ್ಮ ಅಗತ್ಯಗಳೇನೇನು ಎಂಬುದರ ಬಗ್ಗೆ ಆಲೋಚಿಸುವಂತೆ ಒತ್ತಡ ಹಾಕುವುದರ ಬದಲು ವಿರೋಧ ಪಕ್ಷಗಳವರ ಬಗ್ಗೆ ದ್ವೇಷ ಹುಟ್ಟುಹಾಕುವಂಥ ವಿಷದ ಬೀಜಗಳನ್ನು ಬಿತ್ತುವ ಪ್ರಯತ್ನಗಳು ಸಾಮಾಜಿಕ ಜಾಲತಾಣಗಳ ಮೂಲಕ ಮುನ್ನೆಲೆಗೆ ಬರುತ್ತಿರುವುದು ಭವಿಷ್ಯದ ಕರಾಳತೆಯ ಬಗ್ಗೆ ಮುನ್ಸೂಚನೆ ನೀಡುತ್ತಿವೆ.

ನಮಗೆ ಅಧಿಕಾರದಲ್ಲಿರುವವರೂ ಮುಖ್ಯ. ಅವರನ್ನು ಪ್ರಶ್ನಿಸುವ ವಿರೋಧ ಪಕ್ಷಗಳವರೂ ಮುಖ್ಯ. ಜೊತೆಗೆ ತಾರ್ಕಿಕವಾಗಿ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ವೈಚಾರಿಕ ಚಿಂತಕರೂ ಪ್ರಧಾನ ಪಾತ್ರ ನಿರ್ವಹಿಸುತ್ತಾರೆ. ಈ ಮೂರೂ ವಲಯಗಳವರನ್ನೂ ಪರಸ್ಪರ ದ್ವೇಷದ ನೆಲೆಗಳಲ್ಲಿ ನೋಡುವಂತೆ ಪ್ರಚೋದಿಸುವ ಸಣ್ಣತನದ ರಾಜಕಾರಣ ತನ್ನ ವ್ಯತಿರಿಕ್ತತೆಯನ್ನು ಈಗಾಗಲೇ ಪ್ರದರ್ಶಿಸುತ್ತಿದೆ. ಅಧಿಕಾರ, ಹಣ ಮತ್ತು ಅದಕ್ಕನುಗುಣವಾದ ಎಲ್ಲ ಸೌಲಭ್ಯಗಳನ್ನು ದಕ್ಕಿಸಿಕೊಳ್ಳುವುದರಲ್ಲಿ ಒಂದಾಗುವ ಅಧಿಕಾರರೂಢರು ಮತ್ತು ವಿರೋಧ ಪಕ್ಷಗಳವರಿಗೆ ನಾವು ಸ್ಪಷ್ಟ ಸಂದೇಶ ರವಾನಿಸಬೇಕಿದೆ. ನೀವಿಬ್ಬರೂ ಈ ದೇಶದ ನಿಜವಾದ ಬೆಳವಣಿಗೆಯ ಬಗ್ಗೆ ಆಲೋಚಿಸಿ ಎಂದು ದಿಟ್ಟವಾಗಿ ಕಿವಿಮಾತು ಹೇಳಬೇಕಿದೆ. ಒಬ್ಬರಿಗೊಬ್ಬರು ಹೇಳಿಕೆಗಳ ಮೂಲಕ ಕಚ್ಚಾಡುತ್ತಾ, ಆ ಮೂಲಕವೇ ಹಿಂಸೆಗೆ ಪ್ರಚೋದನೆ ನೀಡುತ್ತಾ, ಬೀದಿಬದಿಯಲ್ಲಿ ಅಮಾಯಕ ಜೀವಗಳ ಮಾರಣಹೋಮಕ್ಕೆ ಕಾರಣವಾಗುವ ರಾಜಕೀಯ ಪ್ರವೃತ್ತಿಗಳನ್ನು ಗಟ್ಟಿದನಿಯಲ್ಲಿ ಖಂಡಿಸಬೇಕಿದೆ. ಹಾಗಾಗದಿದ್ದರೆ ನಮ್ಮ ದೇಶ ಮಹಾನ್ ಆಗುವುದಿಲ್ಲ. ಸಮೃದ್ಧ ಭಾರತದ ಕನಸುಗಳೂ ಸಾಕಾರಗೊಳ್ಳುವುದಿಲ್ಲ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್‌ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್‌ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ...

ದಿನದ ಸುದ್ದಿ1 day ago

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ...

ದಿನದ ಸುದ್ದಿ2 days ago

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ...

ದಿನದ ಸುದ್ದಿ2 days ago

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್...

ದಿನದ ಸುದ್ದಿ4 days ago

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ...

ದಿನದ ಸುದ್ದಿ4 days ago

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್...

ದಿನದ ಸುದ್ದಿ1 week ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ1 week ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ1 week ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

Trending