Connect with us

ದಿನದ ಸುದ್ದಿ

ಯಶಸ್ವಿಯಾಗದ 22 ಕೆರೆಗಳ ಏತ ನೀರಾವರಿಯ ಯೋಜನೆ : ತರಳಬಾಳು ಶ್ರೀ ಬೇಸರ

Published

on

ಸುದ್ದಿದಿನ,ಹರಿಹರ : 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯು ಹಲವು ಲೋಪದೋಷಗಳಿಂದಾಗಿ ಪರಿಣಾಮಕಾರಿಯಾಗಿ ಯಶಸ್ವಿಯಾಗದೇ ಇರುವುದು ಅತ್ಯಂತ ಬೇಸರ ತಂದಿದೆ ಎಂದು ತರಳಬಾಳು ಜಗದ್ಗುರು ಡಾ .ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಿಷಾದ ವ್ಯಕ್ತ ಪಡಿಸಿದರು.

ಹರಿಹರ ನಗರದ ಹೊರವಲಯದಲ್ಲಿರುವ ಜಾಕ್ ವೆಲ್ ಬಳಿ ಯೋಜನೆಯ ಕಾಮಗಾರಿ ಪರಿಶೀಲಿಸಿ ಶ್ರೀಗಳು ಮಾತನಾಡಿದರು.ಪ್ರಾಕೃತಿಕ, ತಾಂತ್ರಿಕ ಹಾಗೂ ಮನುಷ್ಯರ ಸಮಸ್ಯೆಗಳು ಒಟ್ಟಾಗಿ ಸೇರಿಕೊಂಡು 22 ಕೆರೆಗಳ ಏತ ನೀರಾವರಿಯ ಯೋಜನೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಬೇಸರ ಹೊರಹಾಕಿದರು.

ನದಿಯಲ್ಲಿ ನೀರಿದ್ದರು ಜಾಕ್ ವೆಲ್ ಮೂಲಕ ನೀರು ಬರುತ್ತಿಲ್ಲ. ಕಳೆದ ಬಾರಿ ಮೂರು ಮೋಟರ್ ಅಳವಡಿಸಿದ್ದರಿಂದ ನೀರು ತಕ್ಕಮಟ್ಟಿಗೆ ನೀರು ಕೆರೆಗಳಿಗೆ ಹರಿದಿದೆ. ಆದರೆ ಇದು ಶಾಶ್ವತ ಪರಿಹಾರದ ಕೆಲಸ ಅಲ್ಲ.
ಶಾಶ್ವತ ಪರಿಹಾರ ದೊರಕಬೇಕಾದರೆ ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳನ್ನು ಕರೆಸಿ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದರು.

ತಾಂತ್ರಿಕ ತೊಂದರೆ ಸರಿಯಾದಗ ನದಿಯಲ್ಲಿ ನೀರಿನ ಕೊರತೆ ಕಂಡು ಬರುತ್ತದೆ.ಆದ್ದರಿಂದ ಈ ಸ್ಥಳದಲ್ಲಿ ಕೆರೆ ನಿರ್ಮಾಣ ಮಾಡಿದರೆ ಸ್ವತಂತ್ರವಾಗಿ ನೀರು ಎರಡನೇ ಜಾಕ್ ವೆಲ್ ನಲ್ಲಿ ಇರುವಂತಹ ಮೋಟರ್ ಸರಿಯಾಗಿ ಕೆಲಸ ಮಾಡುತ್ತದೆಯೋ , ಇಲ್ಲವೋ ಎಂದು ತಿಳಿಯುತ್ತದೆ. ಈ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿದಾಗ ತಾಂತ್ರಿಕ ತೊಂದರೆ ಇದೆ ಎಂಬುದು ಗೊತ್ತಾಗಿದೆ ಎಂದರು. ಈ ಯೋಜನೆಗೆ ಮಾಯಕೊಂಡ ಶಾಸಕರಾದ ಪ್ರೋ.ಲಿಂಗಣ್ಣನವರು 1 ಕೋಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್ ಗುಂಗೆಯವರು ಸುಮಾರು 4 ರಿಂದ 5 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಬಹುದು. ಅದನ್ನು ಅವರೇ ಮಾಡಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದರು .

ಜಗಳೂರು ತಾಲ್ಲೂಕಿನ 53 ಹಾಗೂ ಭರಮಸಾಗರ ಸುತ್ತಮುತ್ತಲಿನ 41 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂಗಳನ್ನು ಬಿಡುಗಡೆ ಮಾಡಿದ್ದು, ತದ ನಂತರ ಈಗಿನ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿಯವರು
ಸ್ಪಂದಿಸುವುದಾಗಿ ಹೇಳಿದ್ದಾರೆಂದರು.ಸಂಸದರಾದ ಜಿ.ಎಂ ಸಿದ್ದೇಶ್ವರ್ ಮಾತನಾಡಿ ಮಳೆಗಾಲದಲ್ಲಿ 120 ಟಿ ಎಂ ಸಿ ನೀರು
ತುಂಗಭದ್ರಾ ನದಿಯ ಮೂಲಕ ಸಮುದ್ರ ಪಾಲಾಗಿದೆ. ನಮ್ಮ ಈ ಏತ ನೀರಾವರಿ ಯೋಜನೆಗೆ ಬೇಕಾಗಿರುವುದು 1 ಟಿ ಎಂ ಸಿ ನೀರು ಮಾತ್ರ. ಸಾಕಷ್ಟು ನೀರು ಪೋಲಾಗಿರುವುದು ನೋವು ತಂದಿದೆ ಎಂದರು. ಶ್ರೀಗಳು ಏತ ನೀರಾವರಿ ಯೋಜನೆಯ ಅನುಷ್ಠಾನ ವಿಚಾರದಲ್ಲಿ ಅತ್ಯಂತ ಕಾಳಜಿ ಹೊಂದಿದ್ದಾರೆ. ಶ್ರೀಗಳ ಆಶಯದಂತೆ ಜಗಳೂರು ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 330 ಕೋಟಿ ಹಾಗೂ ಭರಮಸಾಗರ ಮತ್ತು ಚಿತ್ರದುರ್ಗ ಎಲ್ಲಾ ತಾಲೂಕುಗಳ ಕೆರೆ ತುಂಬಿಸುವ ಯೋಜನೆಗೆ 600 ಕೋಟಿ ರೂ ಅನುದಾನಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಸಮಗ್ರ ವರದಿ ತಯಾರಾಗಿದ್ದು ,ಶ್ರೀಗಳ ಸೂಚನೆಯ ಮೇರೆಗೆ ಈ ಯೋಜನೆಯಡಿ ಕೆಲವು ಸಣ್ಣ ಪುಟ್ಟ ಮಾರ್ಪಾಡುಗಳು ಆಗಬೇಕಿದೆ ಎಂದು ಹೇಳಿದರು.

ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಜೆ ಮಲ್ಲಿಕಾರ್ಜುನ್ ಗುಂಗೆ ಮಾತನಾಡಿ ಈ ಯೋಜನೆಯಲ್ಲಿ ವೆಲ್ಡಿಂಗ್ ಮತ್ತು ವಿದ್ಯುತ್ ವ್ಯತ್ಯಯದಿಂದ
ಲೋಪದೋಷಗಳು ಹುಟ್ಟಿಕೊಂಡಿವೆ.ಇದಕ್ಕೆ ಸ್ಥಳದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಮಾಡಿ,ನೀರು ಸರಾಗವಾಗಿ ಜಾಕ್ ವೆಲ್ ಗೆ ಬಂದು ಸೇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.

ಇದಕ್ಕೆ ಬೇಕಾಗುವ 4 ರಿಂದ 5 ಕೋಟಿ ಹಣವನ್ನು ಬಳಕೆ ಮಾಡಲು ಯಾವುದೇ ತೊಂದರೆ ಬರುವುದಿಲ್ಲ.ಆದರೆ ಟೆಂಡರ್ ಹಂತ ಮಾತ್ರ ನಮ್ಮ ವ್ಯಾಪ್ತಿಗೆ ವ್ಯಾಪ್ತಿಗೆ ಬರುತ್ತದೆ.ಆದರೆ ಹಣ ಬಿಡುಗಡೆ ಮಾಡಲಿಕ್ಕೆ ಸಿ ಎಂ ಬಳಿ ಚರ್ಚೆ ಮಾಡಿ ಶೀಘ್ರವೇ ಕೆಲಸ ಮಾಡಿಸಿಕೊಡುವುದಾಗಾ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರ ,ಪ್ರೊ.ಲಿಂಗಣ್ಣ, ಮುಖ್ಯ ಎಂಜಿನಿಯರ್ ಯತೀಶ್ ಚಂದ್ರನ್, ಅಧೀಕ್ಷಕ ಎಂಜಿನಿಯರ್ ದಿವಾಕರ್ ನಾಯಕ್,ಕಾರ್ಯಪಾಲಕ ಎಂಜಿನಿಯರ್ ಜಿ.ಆರ್ ಕೊಟ್ರೇಶ್ ,ಗಂಗಪ್ಪ,ವಿಕಾಸ್ ನಿಂಬಣ್ಣ,ನಾಗರಾಜಪ್ಪ ಕರೆ ನೀರಾವರಿ ಯೋಜನೆಯ ಅಧ್ಯಕ್ಷರಾದ ಡಾ.ಮಂಜುನಾಥ್ ಗೌಡ,ಸುಭಾಷ್ ಚಂದ್ರ ಮುಂತಾದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ...

ದಿನದ ಸುದ್ದಿ11 hours ago

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ...

ದಿನದ ಸುದ್ದಿ19 hours ago

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ...

ದಿನದ ಸುದ್ದಿ1 day ago

ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಂ.ಎಂ.ಟಿ.ಎಂ 1, ಡಿಎಂಎಂ 20, ಸಿಒಪಿಎ 20, ವೆಲ್ಡರ್ 34 ಹಾಗೂ ರೋಬೊಟಿಕ್ಸ 12 ಖಾಲಿ ಇರುವ...

ದಿನದ ಸುದ್ದಿ1 day ago

ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ...

ದಿನದ ಸುದ್ದಿ2 days ago

ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು

ಸುದ್ದಿದಿನಡೆಸ್ಕ್:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು...

ದಿನದ ಸುದ್ದಿ4 days ago

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ...

ದಿನದ ಸುದ್ದಿ5 days ago

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ...

ದಿನದ ಸುದ್ದಿ5 days ago

KPSC | 2 ತಿಂಗಳೊಳಗೆ ಮರು ಪರೀಕ್ಷೆ

ಸುದ್ದಿದಿನಡೆಸ್ಕ್:ಇತ್ತೀಚಿನ ಕೆ.ಪಿ.ಎಸ್.ಸಿ. ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ, ಅಸಮರ್ಪಕ ಕನ್ನಡಾನುವಾದ ಹಿನ್ನೆಲೆ, ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ, 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ, ಕರ್ನಾಟಕ ಲೋಕ...

ದಿನದ ಸುದ್ದಿ5 days ago

ADITYA-L1 | ಇಸ್ರೋ ಆದಿತ್ಯ ಎಲ್-1 ನೌಕೆ ಉಡಾವಣೆಗೆ ಒಂದು ವರ್ಷ; ಸೂರ್ಯನ ಅಧ್ಯಯನದಲ್ಲಿ ಮಹತ್ವದ ಪ್ರಗತಿ

ಸುದ್ದಿದಿನಡೆಸ್ಕ್:ಇಸ್ರೋದಿಂದ ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೊಂಡು ಇಂದಿಗೆ ಒಂದು ವರ್ಷ ಪೂರೈಸಿದೆ. 2023ರ ಸೆಪ್ಟೆಂಬರ್ 2 ರಂದು ಉಡಾವಣೆಗೊಂಡಿರುವ ಎಲ್-1ನೌಕೆ ಕಕ್ಷೆ ತಲುಪಿದ್ದು, ಭೂಮಿಯಿಂದ ಸುಮಾರು...

Trending