Connect with us

ದಿನದ ಸುದ್ದಿ

ಟಿಪ್ಪು ಜಯಂತಿ : ಮದ್ದೂರು ಪೋಲೀಸ್ ಠಾಣೆಯಲ್ಲಿ ಶಾಂತಿ ಸಭೆ

Published

on

ಸುದ್ದಿದಿನ,ಮದ್ದೂರು : ಪಟ್ಟಣದ ಪೋಲೀಸ್ ಠಾಣೆಯಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ರವರ ನೇತೃತ್ವದಲ್ಲಿ ದಿ.10ರಂದು ನಡೆಯಲಿರುವ ಟಿಪ್ಪು ಜಯಂತಿ ಅಂಗವಾಗಿ ಶಾಂತಿ ಸಭೆಯನ್ನು ನಡೆಸಿದರು.

ನಂತರ ಮಾತನಾಡಿದ ಅವರು ದಿ. 9-11-18 ಬೆಳಿಗ್ಗೆ 9ರಿಂದ 11-11-18ರ ಸಂಜೆ 6 ರವರೆಗೆ ಪಟ್ಟಣದಲ್ಲಿ ನಿಷೇದಾಜ್ಞೆ ಇರುತ್ತದೆ ರಾಜ್ಯ ಸರ್ಕಾರದ ಆದೇಶದಂತೆ ಟಿಪ್ಪು ಜಯಂತಿ ಆಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸದಂತೆ ಆದೇಶ ಹೊರಡಿಸಿದೆ ಆದ್ದರಿಂದ ತಾಲ್ಲೂಕಿನ ಮುಸ್ಲಿಂ ಸಮುದಾಯದವರು ಹಾಗೂ ಅನ್ಯ ಜಾತೀಯ ಸಮುದಾಯದವರು ಯಾವುದೇ ಮೆರವಣಿಗೆ ನಡೆಸದಂತೆ ತಿಳಿಸಿದರು
ಪಟ್ಟಣದಲ್ಲಿ ಬ್ಯಾನರ್ ಬಂಟಿಂಗ್ಸ್ ಯಾವುದೇ ಮೆರವಣಿಗೆ ಡಿಜೆ ಸೌಂಡ್ಸ್ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚೊಧನಕಾರಿ ವಿಷಯಗಳು ಬೈಕ್ ಮೆರವಣಿಗೆ ಹಾಗೂ ಬೇರೆ ಊರುಗಳಿಂದ ಸ್ನೇಹಿತರು ನೆಂಟರು ಬಂದು ಯಾವುದೇ ತೊಂದರೆಗಳನ್ನು ನಡೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.ಕಳೆದ ವರ್ಷ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ ಆದ್ದರಿಂದ ಈ ಬಾರಿಯೂ ಶಾಂತಿಯುತವಾಗಿ ನಡೆಸಬೇಕು ಎಂದು ತಿಳಿಸಿದರು.

ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಉಮಾ ಶಂಕರ್ ರವರು ಮಾತನಾಡಿ ತಾಲೂಕಿನಲ್ಲಿರುವ ಮುಸ್ಲಿಂ ಸಮುದಾಯದವರು ಅನ್ಯ ಜಾತೀಯ ಸಮುದಾಯದವರು ಬಾಂಧವ್ಯ ದಿಂದ ಒಗ್ಗಟ್ಟಾಗಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು
ತಾಲ್ಲೂಕಿನಲ್ಲಿ ಯಾವುದೇ ಹೋರಾಟಗಳು ನಡೆದರು ಸ್ವ ಇಚ್ಛೆಯಿಂದ ಬಂದು ಭಾಗವಹಿಸುವರು ಎಂದರು.

ನಂತರ ನೂತನ ಪುರಸಭಾ ಸದಸ್ಯ ಆದಿಲ್ ರವರು ಮಾತನಾಡಿ ಜಾಮೀಯ ಶಾದಿ ಮಹಲ್ ಮುಸ್ಲಿಂ ಕಮಿಟಿ ವತಿಯಿಂದ ಐದು ಜನ ಮಹಿಳಾ ಹೋರಾಟಗಾರ್ತಿ ಯವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು ಮತ್ತು ಟಿಪ್ಪು ಜಯಂತಿ ಅಂಗವಾಗಿ ನೂರು ಜನರ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಆ ರಕ್ತದಾನವನ್ನು ಆದಿಚುಂಚನಗಿರಿ ಆಸ್ಪತ್ರೆಗೆ ನೀಡಲಾಗುವುದು ಎಂದರು.

ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ರವರ ನೇತೃತ್ವದಲ್ಲಿ ತಾಲ್ಲೂಕಿನಾದ್ಯಂತ ಅಹಿತಕರ ಘಟನೆಗಳು ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವರಿಷ್ಠಾಧಿಕಾರಿ ರವರು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ ಡಿವೈಎಸ್ಪಿ ಶೈಲೇಂದ್ರ ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪುರಸಭಾ ಸದಸ್ಯರು ಪೋಲೀಸ್ ಇಲಾಖೆ ಸಿಬ್ಬಂದಿಗಳು ಸಾರ್ವಜನಿಕರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

Published

on

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್. ಹಳ್ಳಿ ಗೇಟ್ ಸಮೀಪ ದಿಢೀರನೆ ಮತ್ತೊಂದು ಕಾರು ಅಡ್ಡ ಬಂದಿದೆ. ಅಡ್ಡ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಶಾಸಕರ ಕಾರು ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ.

http://Visit : www.suddidina.com

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ಶಾಸಕ ಸಮರ್ಥ್ ಶಾಮನೂರು ಹಾಗೂ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತವಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ದಿನದ ಸುದ್ದಿ

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

Published

on

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ಇತ್ತು. ವಾಹನಗಳ ಓಡಾಟವೂ ಯಥಾಸ್ಥಿತಿ ಇತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.

ನಗರದ ಜಯದೇವ ವೃತ್ತದಲ್ಲಿ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ನೇತೃತ್ವದಲ್ಲಿ ಲೋಕಿಕೆರೆ ನಾಗರಾಜ್, ಲಿಂಗರಾಜ್ ಶಾಮನೂರು, ಕೊಳೇನಹಳ್ಳಿ ಸತೀಶ್ ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಸಂಜೆ ಹೊತ್ತಿಗೆ ಬಿಡುಗಡೆ ಮಾಡಿದರು.

http://Visit : www.suddidina.com

ದಾವಣಗೆರೆ ಬಂದ್ ಯಶಸ್ವಿ ಆಗಲಿಲ್ಲ. ಬಂದ್ ಎಂಬಂತ ವಾತಾವರಣವೂ ನಿರ್ಮಾಣ ಆಗಿರಲಿಲ್ಲ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಮಳೆ ಆರಂಭವಾದ ಕಾರಣ ಕಡಿಮೆ ಪ್ರಮಾಣದಲ್ಲಿ ಸೇರಿದ್ದ ರೈತ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿರುದ್ಧ ಘೋಷಣೆ ಹಾಕಿದರು. ಕೂಡಲೇ ಭದ್ರಾ ಡ್ಯಾಂ ನೀರು ಹರಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಒತ್ತಾಯಿಸಿದರು.

Continue Reading

ದಿನದ ಸುದ್ದಿ

ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!

Published

on

ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!

ಕಣ್ಣೂರು: ಮಗಳು ಬೇರೆ ಜಾತಿಯ ಯುವಕನನ್ನು ವಿವಾಹವಾದ ಬಳಿಕ ತಮ್ಮನ್ನು ದೇವಸ್ಥಾನದ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಕಣ್ಣೂರಿನ ಮುಚ್ಚಿಲೋಟ್ ಭಗವತಿ ದೇವಸ್ಥಾನದ ಉಪಕರ್ಮಿ ಸಿ.ವಿ. ರಾಜನ್ ಆರೋಪಿಸಿದ್ದಾರೆ. ಈ ಆರೋಪವು ದೇವಸ್ಥಾನದ ಆಚರಣೆಗಳು, ಜಾತಿ ವ್ಯವಸ್ಥೆ ಹಾಗೂ ವೈಯಕ್ತಿಕ ಆಯ್ಕೆಯ ಹಕ್ಕಿನ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾರ್ಚ್ 15, 2026ರಂದು ವಾಣಿ ಸಮುದಾಯಕ್ಕೆ ಸೇರಿದ ರಾಜನ್ ಅವರ ಮಗಳು ಪೊದುವಾಲ್ ಸಮುದಾಯದ ಯುವಕನನ್ನು ವಿವಾಹವಾಗಿದ್ದರು. ಮದುವೆಗೂ ಮುನ್ನವೇ, 2025ರ ಆಗಸ್ಟ್‌ನಲ್ಲಿ ನಡೆದ ನಿಶ್ಚಿತಾರ್ಥದ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ರಾಜನ್ ಅವರನ್ನು ಕೆಲಸದಿಂದ ದೂರವಿರಲು ಸೂಚಿಸಿತ್ತು ಎಂದು ಅವರು ಹೇಳಿದ್ದಾರೆ.

ಸುಮಾರು 30 ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಜನ್, ದೇವಸ್ವಂ ಮಂಡಳಿಯ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಹಿಂದೆ ಕೆಲಸ ಮುಂದುವರಿಸಲು ಅವಕಾಶ ದೊರೆತಿತ್ತು. ಆದರೆ ಇದೀಗ ಹೊರಡಿಸಿರುವ ಅಮಾನತು ಆದೇಶದಲ್ಲಿ, ಸಮಿತಿ ಸದಸ್ಯರು ಹಾಗೂ ಭಕ್ತರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಮತ್ತು ಪೂರ್ವಜರಿಂದ ಬಂದ ಸಾಂಪ್ರದಾಯಿಕ ಆಚರಣೆಗಳನ್ನು ಉಲ್ಲಂಘಿಸಿರುವುದು ಕಾರಣವೆಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

http://Visit : www.suddidina.com

ಈ ಆರೋಪಗಳಿಗೆ ಸೂಕ್ತ ಸಾಕ್ಷ್ಯ ನೀಡಲಾಗಿಲ್ಲ. ಹಾಗೂ ತಮ್ಮ ಮಗಳ ಅಂತರ್ಜಾತಿ ವಿವಾಹವೇ ತಮ್ಮ ವಿರುದ್ಧದ ಕ್ರಮಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಿದ್ದು, ನನ್ನ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ನೀಡಿದ್ದಲ್ಲಿ ಅಥವಾ ತಪ್ಪು ಸಾಬೀತಾದಲ್ಲಿ ಕೆಲಸ ತೊರೆಯಲು ನಾನು ಸಿದ್ಧನಿದ್ದೇನೆ ಎಂದು ರಾಜನ್ ಅವರು ತಮ್ಮ ವಾದವನ್ನು ಮಂಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ದೇವಸ್ಥಾನದ ಸಮಿತಿ ಕಾರ್ಯದರ್ಶಿಗಳಾದ ಹರೀಂದ್ರನ್ ಅವರು, ರಾಜನ್ ಮುಂದುವರಿಯುವುದಕ್ಕೆ ಸಮಿತಿಗೆ ಯಾವುದೇ ಆಕ್ಷೇಪವಿಲ್ಲ ಮತ್ತು ಅಂತಿಮ ನಿರ್ಧಾರವನ್ನು ವ್ಯವಸ್ಥಾಪಕ ಟ್ರಸ್ಟಿ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಈ ನಡುವೆ ರಾಜನ್ ಅವರು ತಮಗೆ ಆದ ಅನ್ಯಾಯದ ಕುರಿತು ಮಲಬಾರ್ ದೇವಸ್ವಂ ಮಂಡಳಿ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಶಾಸಕರಾದ ವಿ ಕುಂಞಕೃಷ್ಣನ್ ಅವರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ಮುಂದಿನ ತಿಂಗಳು ದೇವಸ್ವಂ ಮಂಡಳಿಯಲ್ಲೇ ನಡೆಯಲಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಒಬ್ಬ ವಯಸ್ಕ ವ್ಯಕ್ತಿಯ ವಿವಾಹದ ಆಯ್ಕೆಗೆ ಆತನ ಪೋಷಕರೇ ಬೆಲೆ ತೆರಬೇಕೇ? ಎಂಬ ಪ್ರಶ್ನೆಯನ್ನು ಈ ಪ್ರಕರಣ ಮತ್ತೆ ಮುನ್ನೆಲೆಗೆ ತಂದಿದೆ.

Continue Reading
Advertisement

Title

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ ! ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
ದಿನದ ಸುದ್ದಿ51 minutes ago

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್....

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಿನದ ಸುದ್ದಿ54 minutes ago

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ...

ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ! ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
ದಿನದ ಸುದ್ದಿ1 hour ago

ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!

ಕಣ್ಣೂರು: ಮಗಳು ಬೇರೆ ಜಾತಿಯ ಯುವಕನನ್ನು ವಿವಾಹವಾದ ಬಳಿಕ ತಮ್ಮನ್ನು ದೇವಸ್ಥಾನದ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಕಣ್ಣೂರಿನ ಮುಚ್ಚಿಲೋಟ್ ಭಗವತಿ ದೇವಸ್ಥಾನದ ಉಪಕರ್ಮಿ ಸಿ.ವಿ. ರಾಜನ್ ಆರೋಪಿಸಿದ್ದಾರೆ....

ಅಂತರಂಗ2 days ago

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

~ ಯೋಗೇಶ್ ಮಾಸ್ಟರ್ ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು. ಈಗ...

ದಿನದ ಸುದ್ದಿ4 days ago

ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3...

ದಿನದ ಸುದ್ದಿ6 days ago

ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ....

ಅಂತರಂಗ6 days ago

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

~ಯೋಗೇಶ್ ಮಾಸ್ಟರ್, ಚಿಂತಕರು ಆಪ್ತ ಸಮಾಲೋಚಕ ಮತ್ತು ಮನೋವೈದ್ಯ ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ...

ದಿನದ ಸುದ್ದಿ1 week ago

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ

ಸುದ್ದಿದಿನ,ಚನ್ನಗಿರಿ: ಪಟ್ಟಣದ ಬಸವ ಚೇತನ ಎಜುಕೇರ್ ಪ್ರಿ – ಪ್ರೈಮರಿ ಸ್ಕೂಲ್ ನಲ್ಲಿ “ಬಂಧುತ್ವ ಫೌಂಡೇಶನ್ ‘ ವತಿಯಿಂದ ಇಂದು ಶ್ರಾವಣಮಾಸದ ನಾಗರ ಪಂಚಮಿ ಪ್ರಯುಕ್ತ ”...

ಅಂತರಂಗ1 week ago

ದಿಮಾಗಿ ನಕ್ಸಲ್-ನಗರ ನಕ್ಸಲ್

~ರಹಮತ್ ತರೀಕೆರೆ, ಚಿಂತಕರು ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ...

ದಿನದ ಸುದ್ದಿ1 week ago

ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್‌ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು...

Trending