ದಿನದ ಸುದ್ದಿ
ಎ ಸಿ ಬಿ ಬಲೆಗೆ ಬಿದ್ದ ಕೊಪ್ಪಳದ ಬಿ ಇ ಓ ಮತ್ತು ಎಫ್ ಡಿ ಎ
ಸುದ್ದಿದಿನ,ಕೊಪ್ಪಳ : ಬಂದ್ ಆಗಿರುವ ಶಾಲೆಯ ಡಿಪಾಸಿಟ್ ಅನ್ನು ವಾಪಾಸ್ ಪಡೆಯಲು ಮೂರುವರೆ (3.500ರೂ) ಲಂಚ ಕೇಳಿದ್ದ ಬಿ ಇ ಓ ಮತ್ತು ಎಫ್ ಡಿ ಎ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಭಾಗ್ಯನಗರದ ಎಸ್ ಎಸ್ ಕರ ಶಾಲೆಯ ಬಾಲಚಂದ್ರ ಕಬಾಡೆ ಎಂಬುವವರ ದೂರಿನ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ಮೂರೂವರೆ ಸಾವಿರ ಲಂಚ ಪಡೆಯುವಾಗವಾಗ ಬಿಇಓ ಉಮಾದೇವಿ ಸೊನ್ನದ, ಎಫ್ ಡಿ ಎ ಎ ಆರುಂಧತಿ ಬಲೆಗೆ ಬಿದ್ದಿದ್ದಾರೆ. ಶಾಲೆ 2002ರಲ್ಲಿ ಆರಂಭವಾಗಿದ್ದು ೨೦೦೯ 2009 ರಲ್ಲಿ ಬಂದಾಗಿತ್ತು.
ಇದನ್ನೂ ಓದಿ | ಅಶ್ಲೀಲ ಸಿಡಿ ವೈರಲ್ | ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ; ಆರೋಪ ಮುಕ್ತನಾದ ಮೇಲೆ ಸಚಿವ ಸ್ಥಾನ ನೀಡಿ
ಬಳ್ಳಾರಿ ಎಸ್ಪಿ ಗುರುನಾಥ ಮತ್ತೂರ ಮಾರ್ಗದರ್ಶನದಲ್ಲಿ ಡಿಎಸ್ಪಿ ಶಿವಕುಮಾರ್, ಎಸ್ ಐ ಎಸ್ ಎಸ್ ಬೀಳಗಿ, ಎಸೈ ಬಾಳನಗೌಡ ತಂಡವು ಈ ದಾಳಿ ನಡೆಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243