Connect with us

ಲೈಫ್ ಸ್ಟೈಲ್

ಕರ್ನಾಟಕದ ಗಿಡಗಳ‌ ನಂಟನ್ನು ರಾಜಸ್ಥಾನದಲ್ಲೂ ಬೆಳಸುವ ಅಪರೂಪದ ಪರಿಸರ ಪ್ರೇಮಿ ‘ಬೈರವ್ ಸಿಂಗ್’..!

Published

on

  • ಸಂಜಯ್ ಹೊಯ್ಸಳ

ರ್ನಾಟಕದಿಂದ ರಾಜಸ್ಥಾನಕ್ಕೆ ಪ್ರತಿವರ್ಷ ಕೆಲವೊಂದಿಷ್ಟು ಗಿಡ ತೆಗೆದುಕೊಂಡು ಹೋಗಿ, ಕರ್ನಾಟಕದ ಗಿಡಗಳ‌ ನಂಟನ್ನು ರಾಜಸ್ಥಾನದಲ್ಲೂ ಬೆಳಸುವ ಪ್ರಯತ್ನ ಮಾಡುತ್ತಿರುವ ಅಪರೂಪದ ಪರಿಸರ ಪ್ರೇಮಿ.

ಮೊನ್ನೆ ನಮ್ಮ ನರ್ಸರಿಗೆ ಬೈರವ್ ಸಿಂಗ್ ಬಂದಿದ್ದರು. ಇವರು ಹುಟ್ಟಿ ಬೆಳದಿದ್ದೆಲ್ಲಾ ಮೈಸೂರಿನಲ್ಲಿಯಾದರೂ, ಪೂರ್ವಜರ ತವರಾದ ರಾಜಸ್ಥಾನದ ಜೊತೆಗೆ ಇವರು ನಂಟು ಕಡಿದುಕೊಂಡಿಲ್ಲ. ಆಗಾಗ್ಗೆ ತಮ್ಮೂರಿನ ಕಡೆಗೆ ಹೋಗಿ ಬರುತ್ತಿರುತ್ತಾರೆ. ಇವರು ರಾಜಸ್ಥಾನ ಐತಿಹಾಸಿಕ ನಗರವಾದ ಜೋದ್ ಪುರ ಮೂಲದವರು. ಸದ್ಯ ಮೈಸೂರಿನಲ್ಲಿ ವ್ಯಾಪಾರ ಮಾಡಿಕೊಂಡು‌ ಜೀವನ ಮಾಡುತ್ತಿರುವ ಇವರು, ಮಳೆಗಾಲದ ಸಮಯದಲ್ಲಿ ಊರಿನ ಕಡೆ ಹೋಗುವಾಗ ತಪ್ಪದೆ‌ ಮೈಸೂರಿನಿಂದ ಇಲ್ಲಿನ ಕೆಲವೊಂದಿಷ್ಟು‌, ಅವರಿಗೆ ವಿಶೇಷ ಎನಿಸುವ ಗಿಡಗಳನ್ನು ತೆಗೆದುಕೊಂಡು ಹೋಗಿ ಅಲ್ಲಿ ನೆಟ್ಟು‌ ಬೆಳಸುವ ಪ್ರಯತ್ನ ಮಾಡುತ್ತಿದ್ದಾರೆ. ಮೊನ್ನೆ ಇದೇ ರೀತಿ ನಮ್ಮ ನರ್ಸರಿಗೂ ಬಂದು ಕಾಡುಬಾದಾಮಿ, ಶ್ರೀಗಂದ, ಬಿಲ್ವಪತ್ರೆ ಸೇರಿ ಐದಾರು ಗಿಡಗಳನ್ನು ತೆಗೆದುಕೊಂಡರು. ನಮ್ಮ ಅರಣ್ಯ ಇಲಾಖೆ ನರ್ಸರಿಗೆ ಬರುವ ಮುನ್ನ ತೋಟಗಾರಿಕೆ ಇಲಾಖೆಯ ನರ್ಸರಿಯಲ್ಲಿ‌ ಕೆಲವು ಹಣ್ಣಿನ ಗಿಡಗಳನ್ನು ತಂದಿದ್ದರು.

ಈ ಸಂಧರ್ಭದಲ್ಲಿ ಇವರ ಪರಿಚಯವಾಗಿ ಲೋಕರೂಡಿಯಾಗಿ ಮಾತನ್ನಾಡುವಾಗ ರಾಜಸ್ಥಾನದ ಅರಣ್ಯ ಹಾಗೂ‌ ವನ್ಯಜೀವಿ ಪ್ರೇಮಿ ಜನಾಂಗವೆಂದು ಹೆಸರಾಗಿರುವ ಬೀಷ್ಣೋಯಿಗಳ ಬಗ್ಗೆ ನಿಮಗೆ ಗೊತ್ತಾ? ಎಂದು ಕೇಳಿದೆ. “ಹೌದು ಗೊತ್ತು. ಅದೇ ಸಲ್ಮಾನ್ ಖಾನ್ ಗೆ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ‌ ಶಿಕ್ಷೆ ಆಗೋದಕ್ಕೆ ಕಡೆಯವರಿಗೆ ಹೋರಾಡಿದ್ರಲ್ಲ… ಮತ್ತೆ ಅನಾಥ ವನ್ಯಜೀವಿಗಳಿಗೆ ತಮ್ಮ ಎದೆಹಾಲು ಕುಡಿಸುವ ಪೋಟೋ ಎಲ್ಲಾ ನೋಡಿದಿವಲ್ಲ… ಅವ್ರಲ್ವಾ!?” ಅಂದ್ರು. ಅನಂತರ ನಾನು ಮಾತು ಮುಂದುವರೆಸಿ “ಹೌದು ಅವರೆ.

ಬೀಷ್ಣೋಯಿ ಜನಾಂಗದವರ ಪರಿಸರ ಹಾಗೂ ವನ್ಯಜೀವಿ ಪ್ರೇಮಕ್ಕೆ ದೊಡ್ಡ ಐತಿಹಾಸಿಕ ಹಿನ್ನೆಲೆ ಇದೆ.‌ 1730 ರಲ್ಲಿ ಜೋದಪುರದ ರಾಜ ಅಭಯ್ ಸಿಂಗ್’ನ ಸೈನಿಕರು, ತಮ್ಮ ರಾಜ್ಯದ ಹೊಸ ಅರಮನೆ ನಿರ್ಮಾಣಕ್ಕಾಗಿ ಬೀಷ್ಣೋಯಿಗಳ ಬಾಹುಳ್ಯದ ಕೇಜರ್ಲಿ ಗ್ರಾಮಕ್ಕೆ ಬಂದು ಆ ಭಾಗದ ಅಪರೂಪದ ಮರವಾಗ ಕೇಜ್ರಿ ಮರ (Prosopis cineraria) ಗಳನ್ನು ಕಡಿಯಲು ಮುಂದಾಗುತ್ತಾರೆ. ಆಗ ಅವುಗಳನ್ನು ಕಡಿಯದಂತೆ ಬೀಷ್ಣೋಯಿಗಳು, ಸೈನಿಕರಿಗೆ ಪ್ರತಿರೋಧ ತೋರುತ್ತಾರೆ‌. ಇದರಿಂದ ಕೆರಳಿದ ರಾಜನ ಸೈನಿಕರು ಮಹಿಳೆ ಮಕ್ಕಳು ಸೇರಿದಂತೆ ಒಟ್ಟು 363 ಜನರನ್ನು ಹತ್ಯೆ ಮಾಡುತ್ತಾರೆ.

ಈ ಘಟನೆ ನಡೆದ ದಿನವಾದ ಸೆಪ್ಟೆಂಬರ್ 10ನ್ನು ಭಾರತದಾದ್ಯಂತ ‘ಅರಣ್ಯ ಹುತಾತ್ಮರ ದಿನ’ ಎಂದು ಆಚರಿಸಲಾಗುತ್ತಿದ್ದು, ಬೀಷ್ಣೋಯಿಗಳನ್ನು ಸೇರಿ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ಹೋರಾಡಿ ಹುತಾತ್ಮರಾದ ಎಲ್ಲರನ್ನು ಆ ದಿನ ಸ್ಮರಿಸಲಾಗುತ್ತದೆ.” ಎಂದು ಬೀಷ್ಣೋಯಿಗಳ ಕುರಿತಾದ ವಿವರಗಳನ್ನು ಅವರಿಗೆ ತಿಳಿಸಿದೆ.

ಅವರಿಗೆ ಕೇಜ್ರಿ ಮರಗಳ ಬಗ್ಗೆ ಹೇಳಿದಾಗ ಅವುಗಳ ಪೋಟೋವನ್ನು ತೋರಿಸಿದಾಗ ಆಗಲೇ ರಾಜಸ್ಥಾನದಲ್ಲಿದ್ದ ಅವರ ತಂದೆಗೆ ಕರೆ ಮಾಡಿ ಕೇಜ್ರಿ ಮರಗಳ ಕುರಿತು ಕೇಳಿದರು. ನನ್ನ ಬಳಿಯೂ ಅವರ ಜೊತೆ ಮಾತನ್ನಾಡಿಸಿದರು. ಕೇಜ್ರಿ ಮರದ ಬಗ್ಗೆ ಸ್ವಲ್ಪ ವಿವರಣೆ ಹೇಳಿದಾಕ್ಷಣ ಅವರ ತಂದೆ ಮರವನ್ನು ಗುರ್ತಿಸಿದರು. ಸಾಧ್ಯವಾದರೆ ಆ ಮರದ ಒಂದೆರಡು‌ ಸಸಿ ಅಥವಾ ಒಂದಷ್ಟು ಬೀಜಗಳನ್ನು ಸಂಗ್ರಹಿಸಿ ಕೊಡಿ ಎಂದು ಹೇಳಿದೆ. ಖಂಡಿತಾ ಸಂಗ್ರಹಿಸಿ ಕೊಡುತ್ತೇನೆ ಎಂದು ಅವರು ಹೇಳಿದರು.

ಹೀಗೆ ಬೈರವ್ ಸಿಂಗ್’ರವರ ಪರಿಚಯ ಕೇಜ್ರಿ ಮರವನ್ನು ನಮ್ಮಲ್ಲಿ ಬೆಳಸಿ ಪರಿಚಯಿಸುವ ಪ್ರಯತ್ನಕ್ಕೆ ಕಾರಣವಾಯಿತು.

(ಲೇಖನ ಕೃಪೆ : ಪರಿಸರ ಪರಿವಾರ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending