Connect with us

ದಿನದ ಸುದ್ದಿ

ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!

Published

on

  • ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು, ಮುಂಬೈ

28 ವರ್ಷ ಪ್ರಾಯದ ರೆಲು ವಸಾವೆ ಮಹಾರಾಷ್ಟ್ರದ ನಂದೂಬರ್ಾರ್ ಜಿಲ್ಲೆಯ ಆದಿವಾಸಿ ಪ್ರದೇಶದ, ಚಿಮಲ್ಖೇಡಿ ಎಂಬ ಹಳ್ಳಿಯ ಒಬ್ಬರು ಅಂಗನವಾಡಿ ಕಾರ್ಯ್ಯಕರ್ತೆ. ಈ ಹಳ್ಳಿಗೆ ರಸ್ತೆಗಳಿಲ್ಲ. ಹಾಗಾಗಿ, ಆ ಪ್ರದೇಶದ ಜನ ಎಲ್ಲಿಗೇ ಹೋಗಬೇಕಿದ್ದರೂ ದೋಣಿಯಲ್ಲಿ ಕುಳಿತು, ನರ್ಮದಾ ನದಿಯನ್ನು ದಾಟಬೇಕು.

ಚಿಮಲ್ಖೇಡಿಯೂ ಸೇರಿ ಏಳು ಹಳ್ಳಿಗಳ ಗರ್ಭಿಣಿಯರು ಮತ್ತು ಆರು ವರ್ಷದೊಳಗಿನ ಮಕ್ಕಳ ಆರೋಗ್ಯದ ಮೇಲೆ ನಿಗಾ ಇಡುವುದು, ಅವರಿಗೆ ಸರ್ಕಾರ ನಿಗದಿಪಡಿಸಿದ ಔಷಧಿ, ಹಾಲು, ಮೊಟ್ಟೆ ಮೊದಲಾದ ಪೋಷಕಾಂಶಯುಕ್ತ ಆಹಾರ ಒದಗಿಸುವುದು. ಸಾಮಾನ್ಯ ಸಂದರ್ಭಗಳಲ್ಲಿ ಮಕ್ಕಳು, ಮಹಿಳೆಯರು ದೋಣಿಯಲ್ಲಿ ಕುಳಿತು ತಾವೇ ಅಂಗನವಾಡಿ ಕೇಂದ್ರಕ್ಕೆ ಬರುತ್ತಾರೆ.

ಆದರೆ, ಕೆಲವು ವಿಶೇಷ ಅಥವಾ ತುರ್ತು ಸಂದರ್ಭಗಳಲ್ಲಿ, ರೆಲು ವಸಾವೆ ತಾವೇ ದೋಣಿಯಲ್ಲಿ ಅವರ ಮನೆಗಳಿಗೆ ಹೋಗಿ, ಲಸಿಕೆ ಹಾಕುವುದು, ಔಷಧಿನೀಡುವುದು ಮಾಡಬೇಕಾಗುತ್ತದೆ. ಬೆಳಗಿನ ಏಳುವರೆಗೆ ತನ್ನ ಅಂಗನವಾಡಿ ಕೇಂದ್ರಕ್ಕೆ ಹೋಗಿ, ಮಧ್ಯಾಹ್ನದ ತನಕ ಅಲ್ಲಿ ಕೆಲಸ ಮಾಡುತ್ತಾರೆ. ನಂತರ, ಔಷಧಿ, ಆಹಾರವಸ್ತು ಮತ್ತು ಮಕ್ಕಳನ್ನು ತೂಗುವ ತಕ್ಕಡಿ ಮೊದಲಾದವುಗಳನ್ನು ಹಿಡಿದುಕೊಂಡು, ದೋಣಿಯಲ್ಲಿ ಕುಳಿತು, ತನ್ನ ಕ್ಷೇತ್ರಮಿತಿಯಲ್ಲಿ ಬರುವ ಹಳ್ಳಿಗಳ ಮಕ್ಕಳು, ಗರ್ಭಿಣಿ ಯರ ಮನೆಗಳ `ಕ್ಷೇತ್ರ ಭೇಟಿ(ಫೀಲ್ಡ್ ವಿಸಿಟ್)’ಗಳಿಗೆ ಹೋಗುವುದು ಇವರು ಪ್ರತಿದಿನ ಮಾಡಬೇಕಾದ ಕೆಲಸ.

ಹೀಗೇ ನಡೆಯುತ್ತಿದ್ದ ರೆಲು ವಸಾವೆಯೆ ದಿನಚರಿಗೆ ಕೋವಿಡ್ ದಾಳಿಯ ಹಿನ್ನೆಲೆಯಲ್ಲಿ ಹೇರಲಾದ ಲಾಕ್ ಡೌನ್ ಭಾರೀ ಹೊಡೆತ ನೀಡಿತು. ಮಕ್ಕಳು ಮತ್ತು ಗಭರ್ಿಣಿಯರು ಅಂಗನವಾಡಿ ಕೇಂದ್ರಗಳಿಗೆ ಬರುವುದು ಸಂಪೂರ್ಣವಾಗಿ ನಿಂತಿತು. ರೆಲು ಸ್ವತಃ ಅವರುಗಳ ಮನೆಗೆ ಹೋಗಲಾಗದಂತಹ ಪರಿಸ್ಥಿತಿ. ಏಕೆಂದರೆ, ಹೊಳೆ ದಾಟಲು ದೋಣಿ ನಡೆಸಲು ಯಾರೂ ಮುಂದೆ ಬಾರರು. ಬಂದರೂ, ಅವರ ಸಮಯಕ್ಕೆ ಅನುಗುಣವಾಗಿ ರೆಲು ತನ್ನ ದಿನಚರಿಯನ್ನು ಹೊಂದಿಸಕೊಳ್ಳಬೇಕಾಗಿತ್ತಾದುದರಿಂದ, ಅವರ ಸಾಮಾನ್ಯ ದಿನಚರಿ ಅಸ್ತವ್ಯಸ್ತವಾಗುತ್ತಿತ್ತು. ಆದರೆ, ರೆಲು ಅಷ್ಟು ಬೇಗನೆ ತನ್ನ ಕರ್ತವ್ಯ ಪಾಲನೆಯಿಂದ ಹಿಮ್ಮಖರಾಗಲು ತಯಾರಿರಲಿಲ್ಲ. ಆಗ ಸ್ವತಃ ಅವರೇ ದೋಣಿ ನಡೆಸಿ, ತನ್ನ ಕರ್ತವ್ಯವನ್ನು ಪಾಲಿಸಲು ಮುಂದಾದರು!

ಏಪ್ರಿಲ್ ತಿಂಗಳಲ್ಲಿ ಅವರು ಸ್ಥಳೀಯ ಮೀನುಗಾರರೊಬ್ಬರಿಂದ ಒಂದು ಚಿಕ್ಕ ದೋಣಿಯನ್ನು ಕೇಳಿ ಪಡೆದರು. ಹೋಗುವ ಮತ್ತು ಬರುವ ಒಟ್ಟು ದೂರ 14 ಕಿಮಿ. ಎರಡೂ ಕೈಗಳಿಂದ ಹುಟ್ಟು ಹಾಕಿ, ಅಷ್ಟು ದೂರ ದೋಣಿ ನಡೆಸಲು ಅಪಾರ ದೈಹಿಕ ಶ್ರಮದ ಜೊತೆ ಅಷ್ಟೇ ಧೈರ್ಯ, ಆತ್ಮವಿಶ್ವಾಸವೂ ಬೇಕು. ಅದೂ ಅಲ್ಲದೆ, ರೆಲು ಚಿಕ್ಕಂದಿನಿಂದಲೂ ಹೊಳೆಯನ್ನು ನೋಡಿ ಬೆಳೆದವರಾದರೂ, ಹೀಗೆ ದೋಣಿ ನಡೆಸುವುದು ಅವರಿಗೆ ಮೊದಲ ಅನುಭವ. ಆದರೆ, ಕರ್ತವ್ಯಪ್ರಜ್ಞೆ ಅವರಿಗೆ ಇವೆಲ್ಲವನ್ನು ಹಿಮ್ಮೆಟ್ಟುವ ಅಪಾರ ಆತ್ಮವಿಶ್ವಾಸ ಮತ್ತು ಮಾನಸಿಕ ಸ್ಥೈರ್ಯವನ್ನು ನೀಡಿತು.

14 ಕಿಮಿ. ದೋಣಿ ನಡೆಸಿದ ನಂತರ, ಆದಿವಾಸಿಗಳ ಮನೆಗಳಿಗೆ ಹೋಗಲು ಸಾಮಾನುಗಳನ್ನು ಹೊತ್ತುಕೊಂಡು, ಗುಡ್ಡಗಳನ್ನು ಹತ್ತಿ ಇಳಿದು, ಕಾಲ್ನಡಿಗೆಯಲ್ಲಿ ಹೋಗಬೇಕು. ಮಳೆಗಾಲದ ತಿಂಗಳುಗಳಲ್ಲಿ ಮಳೆಯ ಜೊತೆ ನದಿಯಲ್ಲಿ ನೀರು ತುಂಬಿ ಹರಿಯುವಾಗ ರೆಲು ಗಾಬರಿಯಾಗುತ್ತಿದ್ದರೂ, ಕರ್ತವ್ಯಪ್ರಜ್ಞೆ ಅವರನ್ನು ಸೆಟೆದು ನಿಲ್ಲಿಸುತ್ತಿತ್ತು. ಹುಟ್ಟು ಹಾಕಿ ದೋಣಿ ನಡೆಸಿ, ಗುಡ್ಡಗಳನ್ನು ಹತ್ತಿಳಿದು, ಸಂಜೆ ಹೊತ್ತು ಮನೆ ತಲುಪಿದಾಗ, ಕೈಗಳಿಗೆ ಜೋಮು ಹಿಡಿದು, ಇಡೀ ಶರೀರ ಸುಸ್ತಾಗಿದ್ದರೂ, ಗಂಡ ಮತ್ತು ಇಬ್ಬರು ಚಿಕ್ಕ ಮಕ್ಕಳಿಗೆ ಅಡುಗೆ ಮಾಡುತ್ತಿದ್ದರು. ಅವರ ಗಂಡ ರಮೇಶ್ ಕೂಡಾ ಹೆಂಡತಿಯ ಕರ್ತವ್ಯಪ್ರಜ್ಞೆಯನ್ನು ಮನಸಾ ಕೊಂಡಾಡುತ್ತಾರೆ.

ಬಿಗಿ ಲಾಕ್ ಡೌನ್ನ ದುರಿತ ಕಾಲದಲ್ಲೂ ರೆಲು ವಸಾವೆ ತನ್ನ ಕರ್ತವ್ಯವನ್ನು ಪಾಲಿಸಲು ಹಿಂಜರಿಯದ ಕಾರಣ, 7 ಜನ ಗರ್ಭಿಣಿಯರು, 25 ನವಜಾತ ಶಿಶುಗಳು ಮತ್ತು ಸುಮಾರು 138 ಮಕ್ಕಳು, ನಿಯಮಿತವಾಗಿ ಮೂಲಭೂತ ಸೌಲಭ್ಯಗಳಾದ ಔಷಧಿ ಮತ್ತು ಪೋಷಕಾಂಶಯುಕ್ತ ಆಹಾರ ಪಡೆಯಲು ಸಾಧ್ಯವಾಯಿತು. ರೆಲು ವಸಾವೆಯ ಈ ಅಸಾಮಾನ್ಯ ಕರ್ತವ್ಯಪ್ರಜ್ಞೆಯನ್ನು ಗುರುತಿಸಿ, ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಪರಿಷತ್ ಅವರನ್ನು ಕೊಂಡಾಡಿ, ಸನ್ಮಾನಿಸಿದರೂ, ಆ ಏಳು ಹಳ್ಳಿಗಳ ಜನತೆ ಇವರ ಋಣವನ್ನು ಅಷ್ಟು ಸುಲಭದಲ್ಲಿ ತೀರಿಸಲಾರರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending