Connect with us

ದಿನದ ಸುದ್ದಿ

ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!

Published

on

  • ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು, ಮುಂಬೈ

28 ವರ್ಷ ಪ್ರಾಯದ ರೆಲು ವಸಾವೆ ಮಹಾರಾಷ್ಟ್ರದ ನಂದೂಬರ್ಾರ್ ಜಿಲ್ಲೆಯ ಆದಿವಾಸಿ ಪ್ರದೇಶದ, ಚಿಮಲ್ಖೇಡಿ ಎಂಬ ಹಳ್ಳಿಯ ಒಬ್ಬರು ಅಂಗನವಾಡಿ ಕಾರ್ಯ್ಯಕರ್ತೆ. ಈ ಹಳ್ಳಿಗೆ ರಸ್ತೆಗಳಿಲ್ಲ. ಹಾಗಾಗಿ, ಆ ಪ್ರದೇಶದ ಜನ ಎಲ್ಲಿಗೇ ಹೋಗಬೇಕಿದ್ದರೂ ದೋಣಿಯಲ್ಲಿ ಕುಳಿತು, ನರ್ಮದಾ ನದಿಯನ್ನು ದಾಟಬೇಕು.

ಚಿಮಲ್ಖೇಡಿಯೂ ಸೇರಿ ಏಳು ಹಳ್ಳಿಗಳ ಗರ್ಭಿಣಿಯರು ಮತ್ತು ಆರು ವರ್ಷದೊಳಗಿನ ಮಕ್ಕಳ ಆರೋಗ್ಯದ ಮೇಲೆ ನಿಗಾ ಇಡುವುದು, ಅವರಿಗೆ ಸರ್ಕಾರ ನಿಗದಿಪಡಿಸಿದ ಔಷಧಿ, ಹಾಲು, ಮೊಟ್ಟೆ ಮೊದಲಾದ ಪೋಷಕಾಂಶಯುಕ್ತ ಆಹಾರ ಒದಗಿಸುವುದು. ಸಾಮಾನ್ಯ ಸಂದರ್ಭಗಳಲ್ಲಿ ಮಕ್ಕಳು, ಮಹಿಳೆಯರು ದೋಣಿಯಲ್ಲಿ ಕುಳಿತು ತಾವೇ ಅಂಗನವಾಡಿ ಕೇಂದ್ರಕ್ಕೆ ಬರುತ್ತಾರೆ.

ಆದರೆ, ಕೆಲವು ವಿಶೇಷ ಅಥವಾ ತುರ್ತು ಸಂದರ್ಭಗಳಲ್ಲಿ, ರೆಲು ವಸಾವೆ ತಾವೇ ದೋಣಿಯಲ್ಲಿ ಅವರ ಮನೆಗಳಿಗೆ ಹೋಗಿ, ಲಸಿಕೆ ಹಾಕುವುದು, ಔಷಧಿನೀಡುವುದು ಮಾಡಬೇಕಾಗುತ್ತದೆ. ಬೆಳಗಿನ ಏಳುವರೆಗೆ ತನ್ನ ಅಂಗನವಾಡಿ ಕೇಂದ್ರಕ್ಕೆ ಹೋಗಿ, ಮಧ್ಯಾಹ್ನದ ತನಕ ಅಲ್ಲಿ ಕೆಲಸ ಮಾಡುತ್ತಾರೆ. ನಂತರ, ಔಷಧಿ, ಆಹಾರವಸ್ತು ಮತ್ತು ಮಕ್ಕಳನ್ನು ತೂಗುವ ತಕ್ಕಡಿ ಮೊದಲಾದವುಗಳನ್ನು ಹಿಡಿದುಕೊಂಡು, ದೋಣಿಯಲ್ಲಿ ಕುಳಿತು, ತನ್ನ ಕ್ಷೇತ್ರಮಿತಿಯಲ್ಲಿ ಬರುವ ಹಳ್ಳಿಗಳ ಮಕ್ಕಳು, ಗರ್ಭಿಣಿ ಯರ ಮನೆಗಳ `ಕ್ಷೇತ್ರ ಭೇಟಿ(ಫೀಲ್ಡ್ ವಿಸಿಟ್)’ಗಳಿಗೆ ಹೋಗುವುದು ಇವರು ಪ್ರತಿದಿನ ಮಾಡಬೇಕಾದ ಕೆಲಸ.

ಹೀಗೇ ನಡೆಯುತ್ತಿದ್ದ ರೆಲು ವಸಾವೆಯೆ ದಿನಚರಿಗೆ ಕೋವಿಡ್ ದಾಳಿಯ ಹಿನ್ನೆಲೆಯಲ್ಲಿ ಹೇರಲಾದ ಲಾಕ್ ಡೌನ್ ಭಾರೀ ಹೊಡೆತ ನೀಡಿತು. ಮಕ್ಕಳು ಮತ್ತು ಗಭರ್ಿಣಿಯರು ಅಂಗನವಾಡಿ ಕೇಂದ್ರಗಳಿಗೆ ಬರುವುದು ಸಂಪೂರ್ಣವಾಗಿ ನಿಂತಿತು. ರೆಲು ಸ್ವತಃ ಅವರುಗಳ ಮನೆಗೆ ಹೋಗಲಾಗದಂತಹ ಪರಿಸ್ಥಿತಿ. ಏಕೆಂದರೆ, ಹೊಳೆ ದಾಟಲು ದೋಣಿ ನಡೆಸಲು ಯಾರೂ ಮುಂದೆ ಬಾರರು. ಬಂದರೂ, ಅವರ ಸಮಯಕ್ಕೆ ಅನುಗುಣವಾಗಿ ರೆಲು ತನ್ನ ದಿನಚರಿಯನ್ನು ಹೊಂದಿಸಕೊಳ್ಳಬೇಕಾಗಿತ್ತಾದುದರಿಂದ, ಅವರ ಸಾಮಾನ್ಯ ದಿನಚರಿ ಅಸ್ತವ್ಯಸ್ತವಾಗುತ್ತಿತ್ತು. ಆದರೆ, ರೆಲು ಅಷ್ಟು ಬೇಗನೆ ತನ್ನ ಕರ್ತವ್ಯ ಪಾಲನೆಯಿಂದ ಹಿಮ್ಮಖರಾಗಲು ತಯಾರಿರಲಿಲ್ಲ. ಆಗ ಸ್ವತಃ ಅವರೇ ದೋಣಿ ನಡೆಸಿ, ತನ್ನ ಕರ್ತವ್ಯವನ್ನು ಪಾಲಿಸಲು ಮುಂದಾದರು!

ಏಪ್ರಿಲ್ ತಿಂಗಳಲ್ಲಿ ಅವರು ಸ್ಥಳೀಯ ಮೀನುಗಾರರೊಬ್ಬರಿಂದ ಒಂದು ಚಿಕ್ಕ ದೋಣಿಯನ್ನು ಕೇಳಿ ಪಡೆದರು. ಹೋಗುವ ಮತ್ತು ಬರುವ ಒಟ್ಟು ದೂರ 14 ಕಿಮಿ. ಎರಡೂ ಕೈಗಳಿಂದ ಹುಟ್ಟು ಹಾಕಿ, ಅಷ್ಟು ದೂರ ದೋಣಿ ನಡೆಸಲು ಅಪಾರ ದೈಹಿಕ ಶ್ರಮದ ಜೊತೆ ಅಷ್ಟೇ ಧೈರ್ಯ, ಆತ್ಮವಿಶ್ವಾಸವೂ ಬೇಕು. ಅದೂ ಅಲ್ಲದೆ, ರೆಲು ಚಿಕ್ಕಂದಿನಿಂದಲೂ ಹೊಳೆಯನ್ನು ನೋಡಿ ಬೆಳೆದವರಾದರೂ, ಹೀಗೆ ದೋಣಿ ನಡೆಸುವುದು ಅವರಿಗೆ ಮೊದಲ ಅನುಭವ. ಆದರೆ, ಕರ್ತವ್ಯಪ್ರಜ್ಞೆ ಅವರಿಗೆ ಇವೆಲ್ಲವನ್ನು ಹಿಮ್ಮೆಟ್ಟುವ ಅಪಾರ ಆತ್ಮವಿಶ್ವಾಸ ಮತ್ತು ಮಾನಸಿಕ ಸ್ಥೈರ್ಯವನ್ನು ನೀಡಿತು.

14 ಕಿಮಿ. ದೋಣಿ ನಡೆಸಿದ ನಂತರ, ಆದಿವಾಸಿಗಳ ಮನೆಗಳಿಗೆ ಹೋಗಲು ಸಾಮಾನುಗಳನ್ನು ಹೊತ್ತುಕೊಂಡು, ಗುಡ್ಡಗಳನ್ನು ಹತ್ತಿ ಇಳಿದು, ಕಾಲ್ನಡಿಗೆಯಲ್ಲಿ ಹೋಗಬೇಕು. ಮಳೆಗಾಲದ ತಿಂಗಳುಗಳಲ್ಲಿ ಮಳೆಯ ಜೊತೆ ನದಿಯಲ್ಲಿ ನೀರು ತುಂಬಿ ಹರಿಯುವಾಗ ರೆಲು ಗಾಬರಿಯಾಗುತ್ತಿದ್ದರೂ, ಕರ್ತವ್ಯಪ್ರಜ್ಞೆ ಅವರನ್ನು ಸೆಟೆದು ನಿಲ್ಲಿಸುತ್ತಿತ್ತು. ಹುಟ್ಟು ಹಾಕಿ ದೋಣಿ ನಡೆಸಿ, ಗುಡ್ಡಗಳನ್ನು ಹತ್ತಿಳಿದು, ಸಂಜೆ ಹೊತ್ತು ಮನೆ ತಲುಪಿದಾಗ, ಕೈಗಳಿಗೆ ಜೋಮು ಹಿಡಿದು, ಇಡೀ ಶರೀರ ಸುಸ್ತಾಗಿದ್ದರೂ, ಗಂಡ ಮತ್ತು ಇಬ್ಬರು ಚಿಕ್ಕ ಮಕ್ಕಳಿಗೆ ಅಡುಗೆ ಮಾಡುತ್ತಿದ್ದರು. ಅವರ ಗಂಡ ರಮೇಶ್ ಕೂಡಾ ಹೆಂಡತಿಯ ಕರ್ತವ್ಯಪ್ರಜ್ಞೆಯನ್ನು ಮನಸಾ ಕೊಂಡಾಡುತ್ತಾರೆ.

ಬಿಗಿ ಲಾಕ್ ಡೌನ್ನ ದುರಿತ ಕಾಲದಲ್ಲೂ ರೆಲು ವಸಾವೆ ತನ್ನ ಕರ್ತವ್ಯವನ್ನು ಪಾಲಿಸಲು ಹಿಂಜರಿಯದ ಕಾರಣ, 7 ಜನ ಗರ್ಭಿಣಿಯರು, 25 ನವಜಾತ ಶಿಶುಗಳು ಮತ್ತು ಸುಮಾರು 138 ಮಕ್ಕಳು, ನಿಯಮಿತವಾಗಿ ಮೂಲಭೂತ ಸೌಲಭ್ಯಗಳಾದ ಔಷಧಿ ಮತ್ತು ಪೋಷಕಾಂಶಯುಕ್ತ ಆಹಾರ ಪಡೆಯಲು ಸಾಧ್ಯವಾಯಿತು. ರೆಲು ವಸಾವೆಯ ಈ ಅಸಾಮಾನ್ಯ ಕರ್ತವ್ಯಪ್ರಜ್ಞೆಯನ್ನು ಗುರುತಿಸಿ, ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಪರಿಷತ್ ಅವರನ್ನು ಕೊಂಡಾಡಿ, ಸನ್ಮಾನಿಸಿದರೂ, ಆ ಏಳು ಹಳ್ಳಿಗಳ ಜನತೆ ಇವರ ಋಣವನ್ನು ಅಷ್ಟು ಸುಲಭದಲ್ಲಿ ತೀರಿಸಲಾರರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending