ದಿನದ ಸುದ್ದಿ
ಕರ್ನಾಟಕಕ್ಕೆ ಆಮ್ ಆದ್ಮಿ ಪಾರ್ಟಿ ಅನಿವಾರ್ಯ : ಮುಖ್ಯಮಂತ್ರಿ ಚಂದ್ರು
ಸುದ್ದಿದಿನ,ನವದೆಹಲಿ : ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್ ಆದ್ಮಿ ಪಾರ್ಟಿಗೆ ಜೂನ್ 7 ರಂದು ಸೇರ್ಪಡೆಯಾಗಿದ್ದು, ಈಗ ಎಎಪಿಯ ರಾಷ್ಟ್ರೀಯ ಸಂಚಾಲಕರು ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದರು.
ಇದೇ ವೇಳೆ ದೆಹಲಿಯ ಮೊಹಲ್ಲಾ ಕ್ಲಿನಿಕ್ ಹಾಗೂ ದೆಹಲಿ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ತಮ್ಮ ಅನುಭವವನ್ನು ಪತ್ರಕರ್ತರೊಂದಿಗೆ ಹಂಚಿಕೊಂಡರು.
ತಾವು ಕೇಜ್ರಿವಾಲರ ಜನಸ್ನೇಹಿ ಕಾರ್ಯಕ್ರಮಗಳ ಬಗ್ಗೆ ಕೇಳಿದ್ದೆನು, ಈಗ ಕಣ್ಣಾರೆ ನೋಡಿ ವಿಸ್ಮಿತನಾಗಿದ್ದೇನೆ ಎಂದರು. ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಸಂಚರಿಸಿ, ದೆಹಲಿಯ ಈ ಕಾರ್ಯಕ್ರಮಗಳ ಬಗ್ಗೆ ಕನ್ನಡಿಗರಿಗೆ ತಿಳಿಹೇಳುವುದಾಗಿ ಹೇಳಿ, ಕರ್ನಾಟಕದ ಅಭಿವೃದ್ಧಿಗೆ ಆಮ್ ಆದ್ಮಿ ಪಾರ್ಟಿಯೇ ಅನಿವಾರ್ಯ ಎಂದು ಅಭಿಪ್ರಾಯ ಪಟ್ಟರು.
ಮುಂಬರುವ ಎಲ್ಲ ಚುನಾವಣೆಗಳಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ ಮಾಡಲಿದೆ. ಎಲ್ಲ 224 ಸ್ಥಾನಗಳನ್ನು ಗೆಲ್ಲುವುದೆ ಆಮ್ ಆದ್ಮಿ ಪಾರ್ಟಿಯ ಗುರಿ. ಪ್ರಾಮಾಣಿಕ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಆಮ್ ಆದ್ಮಿ ಪಾರ್ಟಿ ಸೇರಬೇಕು” ಎಂದು ಚಂದ್ರುರವರು ಕರೆ ನೀಡಿದರು.
“ಆಮ್ ಆದ್ಮಿ ಪಾರ್ಟಿಯು ದೇಶದ ರಾಜಕೀಯವನ್ನು ಸರಿದಾರಿಗೆ ತರುತ್ತಿದೆ. ಬೇರೆಲ್ಲ ಪಕ್ಷಗಳು ಶಿಕ್ಷಣ – ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರೆ, ಆಮ್ ಆದ್ಮಿ ಪಾರ್ಟಿ ಸರ್ಕಾರವು ಇವುಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಮೂಲಕ ಸಮಾಜದ ಭವಿಷ್ಯವನ್ನು ಬಲಪಡಿಸುತ್ತಿದೆ. ಕರ್ನಾಟಕದಲ್ಲಿ ಎಎಪಿ ಅಧಿಕಾರಕ್ಕೇ ಬಂದು ಇಲ್ಲಿ ಕೂಡ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಿ ಜನ ನೆಮ್ಮದಿಯಿಂದ ಬದುಕುವಂತಹ ವಾತಾವರಣ ಮೂಡಬೇಕಿದೆ” ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯ ಪಟ್ಟರು.
ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಮಾತನಾಡಿ , “ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ.. ಭಾರತವು ರಾಜ್ಯಗಳ ಒಕ್ಕೂಟವಾಗಿದ್ದು, ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕತೆಗೆ ಒತ್ತು ನೀಡಿ ರಾಷ್ಟ್ರದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವುದೇ ಎಎಪಿಯ ಸ್ಪಷ್ಟ ನಿಲುವು ಎಂದರು.
ಮೌಲ್ಯದರಿತ ರಾಜಕರಣಿ ರಾಮಕೃಷ್ಣ ಹೆಗಡೆ ಅವರ ಆಹ್ವಾನ ಮೇರೆಗೆ ಜನತಾ ಪಕ್ಷ ಸೇರಿ ಸಮಾಜಮುಖಿ ಕೆಲಸ ಮಾಡುತ್ತ ರಾಜ್ಯ ರಾಜಕರಣದಲ್ಲಿ ತಮ್ಮದೆ ಚಾಪು ಮೂಡಿಸಿದ ಚಂದ್ರು ಅವರು ಹೆಗಡೆ ಅವರ ನಂತರ ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲ್ ಕೃಷ್ಣ ಅಡ್ವಾಣಿ ಅವರ ಸಿದ್ಧಾಂತ ಮೆಚ್ಚಿ ಬಿಜೆಪಿ ಸೇರಿದರು, ಆದರೆ ಬಿಜೆಪಿ ಕುಲಶಿತವಾಗಿ ದ್ದನು ನೋಡಿ , ಕಾಂಗ್ರೆಸ್ ಸೇರಿದರು, ಇತ್ತಿಚಿನ ದಿನಗಳಲ್ಲಿ ಎಲ್ಲ ಪಕ್ಷಗಳಿಂದ ಬೇಸರಗೊಂಡು ರಾಜಕರಣದಿಂದ ದೂರ ಉಳಿಯವ ಯೋಜನೆಯಲ್ಲಿ ಇದ್ದಾಗ , ಅರವಿಂದ ಕೇಜ್ರಿವಾಲಾ ಅವರ ಆದ್ಮಿ ಪಕ್ಷದ ಸಿದ್ದಾಂತ ಮೆಚ್ಚಿ ಆಮ್ ಅದ್ಮಿ ಪಕ್ಷ ಸೇರಿದರು, ಗೌರಿಬಿದನೂರು ಕ್ಷೇತ್ರದ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜನರ ಭಾವನೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಿಕ್ಕಿರುವುದರಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ ಹಲವು ಸರ್ಕಾರಿ ತಾಣಗಳಲ್ಲಿ ಕನ್ನಡದಲ್ಲಿಯೂ ಸೂಚನಾ ಫಲಕಗಳು ಇರುವುದರ ಹಿಂದೆ ಚಂದ್ರುರವರ ಶ್ರಮವಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

