ದಿನದ ಸುದ್ದಿ
ಯುವಜನತೆ ನವ ಚರಿತ್ರೆ ಬರೆಯಲಿ : ಡಾ. ಎ. ಬಿ ರಾಮಚಂದ್ರಪ್ಪ ಆಶಯ
ಸುದ್ದಿದಿನ, ದಾವಣಗೆರೆ : ದೇಶದ ಆಸ್ತಿ ಹಾಗೂ ಶಕ್ತಿಯಾದ ಯುವ ಜನತೆ ದುಶ್ಚಟ ಮತ್ತು ವ್ಯಕ್ತಿ ಆರಾಧನೆಗೆ ದಾಸರಾಗದೆ, ಬೌದ್ಧಿಕ ದಾರಿದ್ರ್ಯಕ್ಕೆ ತುತ್ತಾಗದೆ ಸ್ವತಂತ್ರ ವ್ಯಕ್ತಿತ್ವ ರೂಪಿಸಿಕೊಂಡು ಅಭಿವೃದ್ಧಿಗಾಗಿ ತಮ್ಮ ಶಕ್ತಿ ವಿನಿಯೋಗಿಸಿ ಶ್ರಮಿಸಬೇಕಿದೆ ಎಂದು ನಿವೃತ್ತ ಉಪನ್ಯಾಸಕ ಹಾಗೂ ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಅಭಿಮತ ವ್ಯಕ್ತಪಡಿಸಿದರು.
ರಾಜ್ಯ ಯುವ ಸಂಘಗಳ ಒಕ್ಕೂಟದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಿನಾಂಕ: 08/10/2021 ರ ಶುಕ್ರವಾರ ಸಂಜೆ 6 ಗಂಟೆಗೆ ಯುವ ಚೇತನ ಶೀರ್ಷಿಕೆಯಡಿ ಜೂಮ್ ಆಪ್ ನಲ್ಲಿ ಆಯೋಜಿಸಲಾಗಿದ್ದ ಆನ್ ಲೈನ್ ಕಾರ್ಯಕ್ರಮದಲ್ಲಿ ಪ್ರಗತಿಗಾಗಿ ಯುವಶಕ್ತಿ ವಿಷಯ ಕುರಿತು ಮಾತನಾಡಿದ ಅವರು ಯೌವನದ ಹಂತ ದಲ್ಲಿ ಅಪರಿಮಿತ ಅಂತಃಶಕ್ತಿ ಅಡಗಿರುತ್ತದೆ. ಸರಿಯಾದ ಮಾರ್ಗದಲ್ಲಿ ಅದರ ಸದ್ಭಳಕೆಯಾಗಬೇಕು ಎಂದರು.
ಜಾತಿ, ಮತ, ಪಟ್ಟಭದ್ರ ಹಿತಾಸಕ್ತಿಗಳು ಸೇರಿದಂತೆ ಯಾವುದೇ ವಿಧದ ಕಪಿಮುಷ್ಟಿಯ ಸುಳಿಗೆ ಸಿಲುಕದೆ ಯುವ ಜನತೆ ಸ್ವತಂತ್ರ ನಾಯಕರಾಗಿ ರೂಪುಗೊಳ್ಳಬೇಕು. ಶಿಕ್ಷಣದ ಜೊತೆ ಶಿಸ್ತು, ಸಂಯಮ, ಸಂಘಟನೆ, ಸುಸಂಸ್ಕಾರಯುತ ಚಾರಿತ್ರ್ಯ ನಿರ್ಮಾಣ ಮಾಡಿಕೊಳ್ಳುವ ಕಡೆ ಚಿತ್ತ ನೆಟ್ಟಿರಬೇಕು ಎಂದು ಸಲಹೆ ನೀಡಿದರು.
ಅಪಾರ ಪ್ರತಿಭೆ ಇರುವ ಇಂದಿನ ಯುವ ಜನತೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಅಂತೆಯೇ ಆಯಕಟ್ಟಿನ ಹುದ್ಧೆ ಮತ್ತು ಸ್ಥಾನಮಾನ ಪಡೆಯುವಲ್ಲೂ ಯಶಸ್ಸು ಸಾಧಿಸಬೇಕು ಎಂದ ಅವರು ಗತ ಇತಿಹಾಸ ಅರಿತು ನವ ಚರಿತ್ರೆ ಬರೆಯುವ ಮನಸ್ಸು ಯುವ ಜನತೆಯಲ್ಲಿ ಮೂಡಲಿ ಎಂದು ಆಶಿಸಿದರು.
ಶುಭ ಸಂದೇಶದ ನುಡಿಯಾಡಿದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಡಾ. ಎಸ್. ಬಾಲಾಜಿ ಅವರು ಯುವ ಜನತೆಯ ಶಕ್ತಿ, ಯುಕ್ತಿ, ಪ್ರತಿಭೆಯ ಸದ್ಭಳಕೆ ಗೆ ಮಾರ್ಗದರ್ಶನ ನೀಡಿ ಅವರನ್ನು ಸನ್ಮಾರ್ಗಕ್ಕೆ ಹಚ್ಚುವ ಕಾರ್ಯದಲ್ಲಿ ನಮ್ಮ ಒಕ್ಕೂಟ ನಿರತವಾಗಿದೆ. ಈ ದಿಸೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಪ್ರೇರಣೆ ನೀಡುವ ಉದ್ದೇಶದಿಂದ ಆಯೊಜಿಸಲಾಗುವ ಉಪನ್ಯಾಸ ಮತ್ತು ಕಾರ್ಯಾಗಾರ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಇಂದಿನ ಯುವ ಜನತೆಯ ಉತ್ತಮ ಆಸಕ್ತಿಗೆ
ಹಿಡಿದ ಕನ್ನಡಿಯಾಗಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.
ಒಕ್ಕೂಟದ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್ ಕೆ ಕೊಟ್ರೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಉಪಾಧ್ಯಕ್ಷರಾದ ಗಂಗಾಧರ್ ಬಿ ಎಲ್ ನಿಟ್ಟೂರ್ ಪ್ರಾಸ್ತಾವಿಕ ನುಡಿಯಾಡುವ ಜೊತೆ ನಿರ್ವಹಿಸಿದರು.
ಭೋಜರಾಜ, ಶಿವಮೂರ್ತಿ, ಬದಪ್ಪ, ರಾಜ್ ಶೇಖರ್, ಅನಿಶ್ ಪಾಷ, ಮೌನೇಶ್, ಅರವಿಂದ್, ಜಯಣ್ಣ, ಶಿವಕುಮಾರ್, ಸಂಗಮೇಶ ಸೇರಿದಂತೆ ಒಕ್ಕೂಟದ ರಾಜ್ಯ ಮತ್ತು ವಿವಿಧ ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ