ದಿನದ ಸುದ್ದಿ
ಕೊಡಗು ಜಿಲ್ಲೆಯ ಮಳೆಯ ಪೂರ್ಣ ವಿವರ ಇಲ್ಲಿದೆ ಓದಿ
ಸುದ್ದಿದಿನ ಡೆಸ್ಕ್ | ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 103.20 ಮಿ.ಮೀ. ಕಳೆದ ವರ್ಷ ಇದೇ ದಿನ 8.71 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 3412.14 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1385.87 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 80.30 ಮಿ.ಮೀ. ಕಳೆದ ವರ್ಷ ಇದೇ ದಿನ 22.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4759.08 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1995.35 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 118.68 ಮಿ.ಮೀ. ಕಳೆದ ವರ್ಷ ಇದೇ ದಿನ 3.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2701.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1113.65 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 110.62 ಮಿ.ಮೀ.ಕಳೆದ ವರ್ಷ ಇದೇ ದಿನ 0.00 ಮಿ.ಮೀ ಜನವರಿಯಿಂದ ಇಲ್ಲಿಯವರೆಗಿನ ಮಳೆ 2776 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1048.62 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ
ನಾಪೋಕ್ಲು 111.20, ಭಾಗಮಂಡಲ 210, ವಿರಾಜಪೇಟೆ ಕಸಬಾ 161.80, ಹುದಿಕೇರಿ 136.50, ಶ್ರೀಮಂಗಲ 126.60 ಪೊನ್ನಂಪೇಟೆ 119.20, ಅಮ್ಮತಿ 81.50, ಬಾಳೆಲೆ 86.50, ಸೋಮವಾರಪೇಟೆ ಕಸಬಾ 127.60, ಶನಿವಾರಸಂತೆ 91, ಶಾಂತಳ್ಳಿ 200.20, ಕೊಡ್ಲಿಪೇಟೆ 68, ಕುಶಾಲನಗರ 51.40, ಸುಂಟಿಕೊಪ್ಪ 125.50 ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (17-08-18) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.87 ಅಡಿಗಳು, ಕಳೆದ ವರ್ಷ ಇದೇ ದಿನ 2855.11 ಅಡಿ. ಇಂದಿನ ನೀರಿನ ಒಳಹರಿವು 77900 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 370 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 77464 ಕ್ಯುಸೆಕ್. ನಾಲೆಗೆ 1125 ಕ್ಯುಸೆಕ್.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

