ದಿನದ ಸುದ್ದಿ
2019 ರ ಚುನಾವಣಾ ತೀರ್ಪು : ಬಲಪಂಥೀಯ ದಾಳಿಯ ಕ್ರೋಡೀಕರಣದ ಸೂಚನೆ

- ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಮತ್ತು ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ. 2014ರ ನಂತರ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಫಲಿತಾಂಶ ಸೂಚಿಸುತ್ತದೆ.
17ನೇ ಲೋಕಸಭೆ ಚುನಾವಣೆಯ ಫಲಿತಾಂಶವಾಗಿ ಬಿಜೆಪಿ ಮತ್ತು ಎನ್ಡಿಎ ನಿರ್ಣಾಯಕ ಬಹುಮತವನ್ನು ಪಡೆದು ಮೋದಿ ಸರಕಾರ ಅಧಿಕಾರಕ್ಕೆ ಮರಳಿದೆ. ಬಿಜೆಪಿಯ ಬಹುಮತ ಏರಿಕೆಯಾಗಿದೆ ಹಾಗೂ ಎನ್ಡಿಎಯ ಒಟ್ಟಾರೆ ಸಂಖ್ಯೆಯೂ ಏರಿದೆ.
ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಹಾಗೂ ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ.
ಮೋದಿ ಯುದ್ಧಕೋರ ರಾಷ್ಟ್ರವಾದ ಮತ್ತು ಅದರ ಜತೆಗೆ ರಾಷ್ಟ್ರವಾದದ ಮುಸುಕಿನಲ್ಲಿ ಬಹುಸಂಖ್ಯಾತತ್ವದ ಭಾವನೆಗಳನ್ನು ಬಡಿದೆಬ್ಬಿಸುವ ಉದ್ದೇಶವನ್ನೇ ಹೊಂದಿದ ಕೋಮುವಾದಿ ಅಜೆಂಡಾವನ್ನು ಬೆರೆಸಿದ ಪ್ರಚಾರದ ನೇತೃತ್ವವನ್ನು ವಹಿಸಿದ್ದರು. ಚುನಾವಣೆ ಪ್ರಚಾರದ ಎಲ್ಲಾ ರಂಗಗಳಲ್ಲಿ ಅಭೂತಪೂರ್ವ ರೀತಿಯಲ್ಲಿ ಹಣಬಲದ ಬಳಕೆಯಾಯಿತು. ಸಾಮಾಜಿಕ ಮಾಧ್ಯಮ ಪ್ರಚಾರಕ್ಕೆ ಬಿಜೆಪಿ ನೂರಾರು ಕೋಟಿ ರೂಪಾಯಿಗಳನ್ನು ವ್ಯಯಿಸಿತು. ಮೋದಿ ಒಬ್ಬ ನಿರ್ಣಾಯಕ ನಾಯಕ ಎಂಬ ಸಂದೇಶ ಹಾಗೂ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಒಂದು ಗೌರವಯುತ ದೇಶವನ್ನಾಗಿ ಅವರು ಮಾಡಿದರು ಮತ್ತು ಪಾಕಿಸ್ತಾನದಿಂದ ನಡೆಯುವ ಭಯೋತ್ಪಾದನೆಯನ್ನು ಎದುರಿಸಿದರು ಎಂದು ವಾಟ್ಸ್ಆಪ್ ಮತ್ತು ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕವಾಗಿ ಬಿಂಬಿಸಲಾಯಿತು.
2014ರ ಚುನಾವಣೆ ನಂತರ ಹರಿಬಿಡಲಾದ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಚುನಾವಣೆ ಫಲಿತಾಂಶ ಸೂಚಿಸುತ್ತದೆ. ಬಿಜೆಪಿ-ಆರ್ಎಸ್ಎಸ್ ಕೂಟ ಸ್ಥಾಪಿಸಿರುವ ರಾಜಕೀಯ ಮತ್ತು ಸೈದ್ಧಾಂತಿಕ ಪ್ರಾಬಲ್ಯದ ವಿರುದ್ಧ ಪರಿಣಾಮಕಾರಿ ಸವಾಲನ್ನು ಎಸೆಯಲು ಎಡ ಪಕ್ಷಗಳೂ ಸೇರಿದಂತೆ ಜಾತ್ಯತೀತ ಪ್ರತಿಪಕ್ಷಗಳಿಗೆ ಸಾಧ್ಯವಾಗಲಿಲ್ಲ ಎನ್ನುವುದು ವಾಸ್ತವ ಸಂಗತಿ.
ಚುನಾವಣೆ ಆಯೋಗ ತಾನು ಮಾಡಬೇಕಾದ್ದನ್ನು ಮಾಡದೆ, ಮಾಡಬಾರದ್ದನ್ನು ಮಾಡುವ ಮೂಲಕ ಬಿಜೆಪಿಗೆ ನೆರವು ನೀಡುತ್ತ ವಹಿಸಿದ ಪಾತ್ರವೂ ಈ ಚುನಾವಣೆಯ ಒಂದು ಕಳವಳಕಾರಿ ಸಂಗತಿಯಾಗಿದೆ. ಪ್ರತಿಪಕ್ಷಗಳಿಗೆ ಸಮಾನ ನೆಲೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಖಾತ್ರಿಗೊಳಿಸುವಲ್ಲಿ ಚುನಾವಣೆ ಆಯೋಗ ವಿಫಲವಾಗಿದ್ದು ಮಾತ್ರವೇ ಅಲ್ಲದೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಕೋಮುವಾದಿ ಹಾಗು ಜಗಳಗಂಟಿ ಭಾಷಣಗಳನ್ನು ನ್ಯಾಯಸಮ್ಮತಗೊಳಿಸಿತು ಕೂಡ.
ಸಿಪಿಐ (ಎಂ) ಮತ್ತು ಎಡ ಪಕ್ಷಗಳು ತೀವ್ರ ಸೋಲನ್ನು ಅನುಭವಿಸಿವೆ. ಪಶ್ಚಿಮ ಬಂಗಾಳ ಮತ್ತು ತ್ರಿಪುರಾದಲ್ಲಿ ಸಿಪಿಐ (ಎಂ) ಭಾರೀ ಅಡ್ಡಿ ಆತಂಕಗಳಲ್ಲದೆ ಭಯೋತ್ಪಾದನೆ, ಹಿಂಸೆ ಮತ್ತು ದಾಳಿಗಳ ನಡುವೆ ಈ ಚುನಾವಣೆಗಳನ್ನು ಎದುರಿಸಿತು. ಸರ್ವ ಪ್ರಯತ್ನಗಳನ್ನು ಮಾಡಿದರೂ ಯಾವುದೇ ಯಶಸ್ಸನ್ನು ಸಾಧಿಸಲು ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಕೇರಳದಲ್ಲಿ ಎಲ್ಡಿಎಫ್ ಭಾರೀ ಸೋಲನ್ನು ಅನುಭವಿಸಿದ್ದು ನಿರಾಶಾದಾಯಕ ಹಾಗೂ ದೊಡ್ಡ ಹಿನ್ನಡೆಯಾಗಿದೆ. ತಮಿಳುನಾಡಿನಲ್ಲಿ ಮಾತ್ರ ಪಕ್ಷ ಉತ್ತಮ ಫಲಿತಾಂಧ ಪಡೆದಿದೆ. ಅಲ್ಲಿ ಡಿಎಂಕೆ ನೇತೃತ್ವದ ಮೈತ್ರಿಯ ಭಾಗವಾಗಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸಿಪಿಐ (ಎಂ) ಜಯ ಸಾಧಿಸಿದೆ.
ಈ ಗಂಭೀರ ಚುನಾವಣಾ ಹಿನ್ನಡೆಯ ಬಗ್ಗೆ ಪಕ್ಷವು ಸ್ವಯಂಟೀಕಾತ್ಮಕ ಪರೀಕ್ಷಣೆಯನ್ನು ನಡೆಸಲಿದೆ. ಆ ಮೂಲಕ ಸರಿಯಾದ ಪಾಠವನ್ನು ಕಲಿತು ಪಕ್ಷದ ರಾಜಕೀಯ, ಸೈದ್ಧಾಂತಿಕ ಮತ್ತು ಸಂಘಟನಾತ್ಮಕ ಕಾರ್ಯವನ್ನು ನವೀಕರಿಸಲು ಮತ್ತು ಬಲಪಡಿಸಲು ಒಂದು ಸಮಗ್ರ ಕಾರ್ಯತಂತ್ರವನ್ನು ಅಂಗೀಕರಿಸಲಾಗುವುದು.
–ಪ್ರಕಾಶ್ ಕಾರಟ್
ಲೇಖನ ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿವರ
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
