ದಿನದ ಸುದ್ದಿ
2019 ರ ಚುನಾವಣಾ ತೀರ್ಪು : ಬಲಪಂಥೀಯ ದಾಳಿಯ ಕ್ರೋಡೀಕರಣದ ಸೂಚನೆ
- ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಮತ್ತು ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ. 2014ರ ನಂತರ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಫಲಿತಾಂಶ ಸೂಚಿಸುತ್ತದೆ.
17ನೇ ಲೋಕಸಭೆ ಚುನಾವಣೆಯ ಫಲಿತಾಂಶವಾಗಿ ಬಿಜೆಪಿ ಮತ್ತು ಎನ್ಡಿಎ ನಿರ್ಣಾಯಕ ಬಹುಮತವನ್ನು ಪಡೆದು ಮೋದಿ ಸರಕಾರ ಅಧಿಕಾರಕ್ಕೆ ಮರಳಿದೆ. ಬಿಜೆಪಿಯ ಬಹುಮತ ಏರಿಕೆಯಾಗಿದೆ ಹಾಗೂ ಎನ್ಡಿಎಯ ಒಟ್ಟಾರೆ ಸಂಖ್ಯೆಯೂ ಏರಿದೆ.
ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಹಾಗೂ ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ.
ಮೋದಿ ಯುದ್ಧಕೋರ ರಾಷ್ಟ್ರವಾದ ಮತ್ತು ಅದರ ಜತೆಗೆ ರಾಷ್ಟ್ರವಾದದ ಮುಸುಕಿನಲ್ಲಿ ಬಹುಸಂಖ್ಯಾತತ್ವದ ಭಾವನೆಗಳನ್ನು ಬಡಿದೆಬ್ಬಿಸುವ ಉದ್ದೇಶವನ್ನೇ ಹೊಂದಿದ ಕೋಮುವಾದಿ ಅಜೆಂಡಾವನ್ನು ಬೆರೆಸಿದ ಪ್ರಚಾರದ ನೇತೃತ್ವವನ್ನು ವಹಿಸಿದ್ದರು. ಚುನಾವಣೆ ಪ್ರಚಾರದ ಎಲ್ಲಾ ರಂಗಗಳಲ್ಲಿ ಅಭೂತಪೂರ್ವ ರೀತಿಯಲ್ಲಿ ಹಣಬಲದ ಬಳಕೆಯಾಯಿತು. ಸಾಮಾಜಿಕ ಮಾಧ್ಯಮ ಪ್ರಚಾರಕ್ಕೆ ಬಿಜೆಪಿ ನೂರಾರು ಕೋಟಿ ರೂಪಾಯಿಗಳನ್ನು ವ್ಯಯಿಸಿತು. ಮೋದಿ ಒಬ್ಬ ನಿರ್ಣಾಯಕ ನಾಯಕ ಎಂಬ ಸಂದೇಶ ಹಾಗೂ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಒಂದು ಗೌರವಯುತ ದೇಶವನ್ನಾಗಿ ಅವರು ಮಾಡಿದರು ಮತ್ತು ಪಾಕಿಸ್ತಾನದಿಂದ ನಡೆಯುವ ಭಯೋತ್ಪಾದನೆಯನ್ನು ಎದುರಿಸಿದರು ಎಂದು ವಾಟ್ಸ್ಆಪ್ ಮತ್ತು ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕವಾಗಿ ಬಿಂಬಿಸಲಾಯಿತು.
2014ರ ಚುನಾವಣೆ ನಂತರ ಹರಿಬಿಡಲಾದ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಚುನಾವಣೆ ಫಲಿತಾಂಶ ಸೂಚಿಸುತ್ತದೆ. ಬಿಜೆಪಿ-ಆರ್ಎಸ್ಎಸ್ ಕೂಟ ಸ್ಥಾಪಿಸಿರುವ ರಾಜಕೀಯ ಮತ್ತು ಸೈದ್ಧಾಂತಿಕ ಪ್ರಾಬಲ್ಯದ ವಿರುದ್ಧ ಪರಿಣಾಮಕಾರಿ ಸವಾಲನ್ನು ಎಸೆಯಲು ಎಡ ಪಕ್ಷಗಳೂ ಸೇರಿದಂತೆ ಜಾತ್ಯತೀತ ಪ್ರತಿಪಕ್ಷಗಳಿಗೆ ಸಾಧ್ಯವಾಗಲಿಲ್ಲ ಎನ್ನುವುದು ವಾಸ್ತವ ಸಂಗತಿ.
ಚುನಾವಣೆ ಆಯೋಗ ತಾನು ಮಾಡಬೇಕಾದ್ದನ್ನು ಮಾಡದೆ, ಮಾಡಬಾರದ್ದನ್ನು ಮಾಡುವ ಮೂಲಕ ಬಿಜೆಪಿಗೆ ನೆರವು ನೀಡುತ್ತ ವಹಿಸಿದ ಪಾತ್ರವೂ ಈ ಚುನಾವಣೆಯ ಒಂದು ಕಳವಳಕಾರಿ ಸಂಗತಿಯಾಗಿದೆ. ಪ್ರತಿಪಕ್ಷಗಳಿಗೆ ಸಮಾನ ನೆಲೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಖಾತ್ರಿಗೊಳಿಸುವಲ್ಲಿ ಚುನಾವಣೆ ಆಯೋಗ ವಿಫಲವಾಗಿದ್ದು ಮಾತ್ರವೇ ಅಲ್ಲದೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಕೋಮುವಾದಿ ಹಾಗು ಜಗಳಗಂಟಿ ಭಾಷಣಗಳನ್ನು ನ್ಯಾಯಸಮ್ಮತಗೊಳಿಸಿತು ಕೂಡ.
ಸಿಪಿಐ (ಎಂ) ಮತ್ತು ಎಡ ಪಕ್ಷಗಳು ತೀವ್ರ ಸೋಲನ್ನು ಅನುಭವಿಸಿವೆ. ಪಶ್ಚಿಮ ಬಂಗಾಳ ಮತ್ತು ತ್ರಿಪುರಾದಲ್ಲಿ ಸಿಪಿಐ (ಎಂ) ಭಾರೀ ಅಡ್ಡಿ ಆತಂಕಗಳಲ್ಲದೆ ಭಯೋತ್ಪಾದನೆ, ಹಿಂಸೆ ಮತ್ತು ದಾಳಿಗಳ ನಡುವೆ ಈ ಚುನಾವಣೆಗಳನ್ನು ಎದುರಿಸಿತು. ಸರ್ವ ಪ್ರಯತ್ನಗಳನ್ನು ಮಾಡಿದರೂ ಯಾವುದೇ ಯಶಸ್ಸನ್ನು ಸಾಧಿಸಲು ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಕೇರಳದಲ್ಲಿ ಎಲ್ಡಿಎಫ್ ಭಾರೀ ಸೋಲನ್ನು ಅನುಭವಿಸಿದ್ದು ನಿರಾಶಾದಾಯಕ ಹಾಗೂ ದೊಡ್ಡ ಹಿನ್ನಡೆಯಾಗಿದೆ. ತಮಿಳುನಾಡಿನಲ್ಲಿ ಮಾತ್ರ ಪಕ್ಷ ಉತ್ತಮ ಫಲಿತಾಂಧ ಪಡೆದಿದೆ. ಅಲ್ಲಿ ಡಿಎಂಕೆ ನೇತೃತ್ವದ ಮೈತ್ರಿಯ ಭಾಗವಾಗಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸಿಪಿಐ (ಎಂ) ಜಯ ಸಾಧಿಸಿದೆ.
ಈ ಗಂಭೀರ ಚುನಾವಣಾ ಹಿನ್ನಡೆಯ ಬಗ್ಗೆ ಪಕ್ಷವು ಸ್ವಯಂಟೀಕಾತ್ಮಕ ಪರೀಕ್ಷಣೆಯನ್ನು ನಡೆಸಲಿದೆ. ಆ ಮೂಲಕ ಸರಿಯಾದ ಪಾಠವನ್ನು ಕಲಿತು ಪಕ್ಷದ ರಾಜಕೀಯ, ಸೈದ್ಧಾಂತಿಕ ಮತ್ತು ಸಂಘಟನಾತ್ಮಕ ಕಾರ್ಯವನ್ನು ನವೀಕರಿಸಲು ಮತ್ತು ಬಲಪಡಿಸಲು ಒಂದು ಸಮಗ್ರ ಕಾರ್ಯತಂತ್ರವನ್ನು ಅಂಗೀಕರಿಸಲಾಗುವುದು.
–ಪ್ರಕಾಶ್ ಕಾರಟ್
ಲೇಖನ ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ22 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ7 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ21 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ4 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

