Connect with us

ದಿನದ ಸುದ್ದಿ

2ಜಿ ಇಥನಾಲ್ ಕೇಂದ್ರವನ್ನು ಶೀಘ್ರದಲ್ಲಿ ಆರಂಭಿಸುವಂತೆ ಜಿ.ಎಂ ಸಿದ್ದೇಶ್ ಸೂಚನೆ

Published

on

ಸುದ್ದಿದಿನ,ದಾವಣಗೆರೆ : ಭಾರತದ ಅತೀ ದೊಡ್ಡ 2ಜಿ ಇಥನಾಲ್ ಕೇಂದ್ರವನ್ನು ಸ್ಥಾಪಿಸಲು ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿಯಲ್ಲಿ ಜಾಗ ನೀಡಲಾಗಿದ್ದು, ಆದಷ್ಟು ಬೇಗ ಈ ಕೇಂದ್ರದ ಕಟ್ಟಡ ಕಾಮಗಾರಿ ಕೆಲಸವನ್ನು ಶೀಘ್ರದಲ್ಲಿ ಆರಂಭಿಸಿ ಹಾಗೂ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸುವಂತೆ ಸಂಸದರಾದ ಜಿ.ಎಂ. ಸಿದ್ದೇಶ್ವರ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

ಡಿ.18 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೆ|| ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿ., ಇವರು ಹನಗವಾಡಿ ಗ್ರಾಮ, ಹರಿಹರ ತಾಲ್ಲೂಕು ಇಲ್ಲಿ 60 ಕೆಎಲ್‍ಪಿಡಿ 2ಜಿ ಇಥನಾಲ್ ಉತ್ಪಾದನೆಯ ಘಟಕವನ್ನು ಸ್ಥಾಪಿಸುವ ಸಂಬಂಧ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ 2ಜಿ ಇಥನಾಲ್ ಕೇಂದ್ರ ಸ್ಥಾಪಸಿಲು ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಅವಶ್ಯವಾದ ತಯಾರಿಗಳನ್ನು ಆದಷ್ಟು ಬೇಗ ಮಾಡಿಕೊಂಡು 2 ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕಾರ್ಯ ಆರಂಭಿಸುವಂತೆ ತಿಳಿಸಿದರು.

ಸಭೆಯಲ್ಲಿ ಎಂಆರ್‍ಪಿಎಲ್ ಜನರಲ್ ಮ್ಯಾನೇಜರ್ ಗಿರೀಶ್ ಮಾತನಾಡಿ, ಸಂಸ್ಥೆಯ ಬೆಳವಣಿಗೆ ಮತ್ತು 2ಜಿ ತಂತ್ರಜ್ಞಾನದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಲಿದೆ ಎಂದು ವಿವರಿಸಿದರು. ಈ ಹಿಂದೆ 60 ಕೆಡಿಎಲ್‍ಪಿ ತಂತ್ರಜ್ಞಾನವನ್ನು ಈಗ 2ಜಿ ಇಥನಾಲ್ ತಂತ್ರಜ್ಞಾನಕ್ಕೆ ಅಭಿವೃದ್ದಿ ಪಡಿಸಲಾಗುತ್ತಿದೆ. ಭಾರತ ದೇಶವು ಪೆಟ್ರೋಲ್‍ಗೆ ಬೇರೆ ದೇಶಗಳ ಮೇಲೆ ಅವಲಂಬನೆಯಾಗುವುದನ್ನು ಕಡಿಮೆ ಮಾಡಲು ಈ ತಂತ್ರಜ್ಞಾನವನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ತಮ್ಮ ಸಂಸ್ಥೆಯಿಂದ ಎಲ್.ಪಿ.ಜಿ. ಡಿಸೇಲ್, ಪೆಟ್ರೋಲ್, ನೆಪ್ತಾ, ಬಿಲಿಯಮ್ ಆಯಿಲ್‍ಗಳನ್ನು ತಯಾರಿಸುತ್ತಿದ್ದು, ಕರ್ನಾಟ ಸರ್ಕಾರಕ್ಕೆ ರೂ.1000 ಕೋಟಿ ತೆರಿಗೆ ನೀಡುತ್ತಿದೆ ಹಾಗೂ ಭಾರತಕ್ಕೆ ರೂ.11,000 ಕೋಟಿ ತೆರಿಗೆ ನೀಡುತ್ತಿದೆ ಎಂದರು.

2ಜಿ ತಂತ್ರಜ್ಞಾನದಲ್ಲಿ ಆಯಿಲ್‍ಗಳ ತಯಾರಿಕೆಗಾಗಿ ರೈತರು ಬೆಳೆದ ಬೆಳೆಗಳ ತ್ಯಾಜ್ಯ ವಸ್ತುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಮೆಕ್ಕೆಜೋಳದ ದಂಟು, ಬೆಂಡು, ಭತ್ತದ ಹುಲ್ಲು, ಹತ್ತಿಯ ಕಡ್ಡಿಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ಸಂಸದರು ಬೆಳೆಯ ತ್ಯಾಜ್ಯಗಳನ್ನು ನೇರವಾಗಿ ರೈತರಿಂದ ಖರೀದಿಸುತ್ತೀರಾ ? ಎಂದು ಕೇಳಿದಾಗ ಅವರು ಕೆಲವು ಏಜೆನ್ಸಿಗಳನ್ನು ಗುರುತಿಸಿದ್ದು, ಅವರು ರೈತರಿಂದ ಖರೀದಿಸಿ ತಮಗೆ ನೀಡುತ್ತಾರೆ ಎಂದು ಮಾಹಿತಿ ನೀಡಿದರು.

ಈ ಸಂಸ್ಥೆಯು ಒಂದು ದಿನಕ್ಕೆ 60000 ಲೀಟರ್ ಆಯಿಲ್ ಸಂಗ್ರಹಿಸುವ ಸಾಮಥ್ರ್ಯ ಹೊಂದಿದ್ದು, ಇದರ ತಯಾರಿಕೆಗೆ 200 ರಿಂದ 300 ಟನ್ ತ್ಯಾಜ್ಯ ಪದಾರ್ಥಗಳು ಬೇಕಾಗುತ್ತವೆ. ಈ ಪ್ರಮಾಣದ ಕಚ್ಚಾ ಪದಾರ್ಥಗಳನ್ನು ರೈತರಿಂದ ಸಂಗ್ರಹಿಸಲಾಗುವುದು. ಹಾಗೂ ನೀರಿಗಾಗಿ ಶಾಂತಿಸಾಗರದ ಕೆರೆಯನ್ನು ಗುರುತಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಬಂದ ನಂತರ ತುಂಗಭದ್ರ ನದಿ ನೀರನ್ನು ಬಳಸುತ್ತೇವೆ ಎಂದರು.

ಸಂಸದರು ಶಾಂತಿಸಾಗರದ ನೀರು ಕುಡಿಯಲು ಬಳಸಲಾಗುತ್ತದೆ. ನೀವು ಆ ನೀರನ್ನು ಬಳಸಬೇಡಿ, ಬದಲಾಗಿ ತುಂಗಭದ್ರ ನದಿ ನೀರನ್ನು ಬಳಸುವಂತೆ ಸಲಹೆ ನೀಡಿದರು.

2ಜಿ ಇಥನಾಲ್ ಕಟ್ಟಡ ಕಾಮಗಾರಿಗೆ ಕೇಂದ್ರ ಸರ್ಕಾರದ ‘ಪ್ರಧಾನ್ ಮಂತ್ರಿ ಜೀವನ್’ ಯೋಜನೆಯಲ್ಲಿ ಶೇ.20 ರಷ್ಟು ಅನುದಾನ ನೀಡುತ್ತಾರೆ. ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ, ರಾಜ್ಯ ಸರ್ಕಾರದ ಅನುದಾನಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದಾಗ ಸಂಸದರು ರಾಜ್ಯದಿಂದ ಭೂಮಿ, ನೀರು, ವಿದ್ಯುತ್ ನೀಡುತ್ತಿದ್ದೇವೆ ಅನುದಾನ ನೀಡಲು ಕಷ್ಟ ಆಗುತ್ತದೆ ಎಂದರು.

ಸರ್ಕಾರ 2 ವರ್ಷಗಳ ಹಿಂದೆಯೇ ನಿಮಗೆ ಭೂಮಿ ನೀಡಲಾಗಿದೆ. ಆದರೆ ನೀವು ಇನ್ನು ಕಟ್ಟಡ ಕಾಮಗಾರಿ ಏಕೆ ಆರಂಭಿಸಿಲ್ಲ ಎಂದು ಪ್ರಶ್ನಿಸಿದಾಗ ಸಂಸ್ಥೆಯ ಮ್ಯಾನೇಜರ್ ಅಔS ಇಅ (ಪರಿಸರ ಮಾಲಿನ್ಯ ನಿವಾರಣೆ) ಸರ್ಟಿಫಿಕೇಟ್ ಬಂದ ಕೂಡಲೇ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.

ಸಂಸದರು 2020ರ ಫೆಬ್ರವರಿಯೊಳಗೆ ಸಂಬಂಧಿಸಿದ ಎಲ್ಲಾ ಸರ್ಟಿಫಿಕೇಟ್‍ಗಳನ್ನು ಪಡೆದುಕೊಂಡು ಕಾಮಗಾರಿ ಆರಂಭಿಸಬೇಕು. 2023 ಏಪ್ರಿಲ್ ಅಂತ್ಯದ ವೇಳೆಗೆ ಕಟ್ಟಡ ಉದ್ಘಾಟನೆಗೆ ಸಿದ್ದವಾಗಬೇಕೆಂದು ಸೂಚನೆ ನೀಡಿದರು. ಹಾಗೂ ಕಟ್ಟಡ ಕಾಮಗಾರಿಗೆ ಈ ವ್ಯಾಪ್ತಿಯಲ್ಲಿನ ಕುಟುಂಬಗಳನ್ನು ಗುರುತಿಸಲಾಗಿದ್ದು, ಅವರನ್ನು ತೆಗೆದುಕೊಳ್ಳಿ ಎಂದರು.

ಸಂಸ್ಥೆ ಕೆಲಸ ಆರಂಭಿಸಿದ ನಂತರ ಉದ್ಯೋಗದಲ್ಲಿ ದಾವಣಗೆರೆಯ ಸ್ಥಳೀಯ ಜನರಿಗೆ ಆದ್ಯತೆ ನೀಡಬೇಕು. ಅರ್ಹತೆ ಅನುಗುಣವಾಗಿ ಕೆಲಸ ನೀಡಿ. ವಾಚಮ್ಯಾನ್ ಕೆಲಸದಿಂದ ತಂತ್ರಜ್ಞಾನದ ಕೆಲಸ ಮಾಡುವ ಅರ್ಹತೆ ಇದ್ದವರು ಕಂಡು ಬಂದರೆ ಸ್ಥಳೀಯ ನಿವಾಸಿಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಸಾಧ್ಯವಾದಷ್ಟು ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ.ಜಿ, ಉಪವಿಭಾಗಧಿಕಾರಿ ಮಮತಾ ಹೊಸಗೌಡರ್, ಎಂ.ಆರ್.ಪಿ.ಎಲ್ ಸಂಸ್ಥೆಯ ಇಂಡಿಪೆಂಡೆಂಟ್ ಡೈರೆಕ್ಟರ್ ಮಂಜುಳಾ, ಹರಿಹರ ತಹಶೀಲ್ದಾರರಾದ ರಾಮಚಂದ್ರಪ್ಪ, ಪರಿಸರ ಮಾಲಿನ್ಯ ನಿಯಂತ್ರಣಾ ಧಿಕಾರಿಗಳು, ಎಂಆರ್‍ಪಿಎಲ್ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending