Connect with us

ದಿನದ ಸುದ್ದಿ

2ಜಿ ಇಥನಾಲ್ ಕೇಂದ್ರವನ್ನು ಶೀಘ್ರದಲ್ಲಿ ಆರಂಭಿಸುವಂತೆ ಜಿ.ಎಂ ಸಿದ್ದೇಶ್ ಸೂಚನೆ

Published

on

ಸುದ್ದಿದಿನ,ದಾವಣಗೆರೆ : ಭಾರತದ ಅತೀ ದೊಡ್ಡ 2ಜಿ ಇಥನಾಲ್ ಕೇಂದ್ರವನ್ನು ಸ್ಥಾಪಿಸಲು ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿಯಲ್ಲಿ ಜಾಗ ನೀಡಲಾಗಿದ್ದು, ಆದಷ್ಟು ಬೇಗ ಈ ಕೇಂದ್ರದ ಕಟ್ಟಡ ಕಾಮಗಾರಿ ಕೆಲಸವನ್ನು ಶೀಘ್ರದಲ್ಲಿ ಆರಂಭಿಸಿ ಹಾಗೂ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸುವಂತೆ ಸಂಸದರಾದ ಜಿ.ಎಂ. ಸಿದ್ದೇಶ್ವರ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

ಡಿ.18 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮೆ|| ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿ., ಇವರು ಹನಗವಾಡಿ ಗ್ರಾಮ, ಹರಿಹರ ತಾಲ್ಲೂಕು ಇಲ್ಲಿ 60 ಕೆಎಲ್‍ಪಿಡಿ 2ಜಿ ಇಥನಾಲ್ ಉತ್ಪಾದನೆಯ ಘಟಕವನ್ನು ಸ್ಥಾಪಿಸುವ ಸಂಬಂಧ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ 2ಜಿ ಇಥನಾಲ್ ಕೇಂದ್ರ ಸ್ಥಾಪಸಿಲು ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಅವಶ್ಯವಾದ ತಯಾರಿಗಳನ್ನು ಆದಷ್ಟು ಬೇಗ ಮಾಡಿಕೊಂಡು 2 ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕಾರ್ಯ ಆರಂಭಿಸುವಂತೆ ತಿಳಿಸಿದರು.

ಸಭೆಯಲ್ಲಿ ಎಂಆರ್‍ಪಿಎಲ್ ಜನರಲ್ ಮ್ಯಾನೇಜರ್ ಗಿರೀಶ್ ಮಾತನಾಡಿ, ಸಂಸ್ಥೆಯ ಬೆಳವಣಿಗೆ ಮತ್ತು 2ಜಿ ತಂತ್ರಜ್ಞಾನದಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಲಿದೆ ಎಂದು ವಿವರಿಸಿದರು. ಈ ಹಿಂದೆ 60 ಕೆಡಿಎಲ್‍ಪಿ ತಂತ್ರಜ್ಞಾನವನ್ನು ಈಗ 2ಜಿ ಇಥನಾಲ್ ತಂತ್ರಜ್ಞಾನಕ್ಕೆ ಅಭಿವೃದ್ದಿ ಪಡಿಸಲಾಗುತ್ತಿದೆ. ಭಾರತ ದೇಶವು ಪೆಟ್ರೋಲ್‍ಗೆ ಬೇರೆ ದೇಶಗಳ ಮೇಲೆ ಅವಲಂಬನೆಯಾಗುವುದನ್ನು ಕಡಿಮೆ ಮಾಡಲು ಈ ತಂತ್ರಜ್ಞಾನವನ್ನು ಅಭಿವೃದ್ದಿ ಪಡಿಸಲಾಗುತ್ತಿದೆ. ತಮ್ಮ ಸಂಸ್ಥೆಯಿಂದ ಎಲ್.ಪಿ.ಜಿ. ಡಿಸೇಲ್, ಪೆಟ್ರೋಲ್, ನೆಪ್ತಾ, ಬಿಲಿಯಮ್ ಆಯಿಲ್‍ಗಳನ್ನು ತಯಾರಿಸುತ್ತಿದ್ದು, ಕರ್ನಾಟ ಸರ್ಕಾರಕ್ಕೆ ರೂ.1000 ಕೋಟಿ ತೆರಿಗೆ ನೀಡುತ್ತಿದೆ ಹಾಗೂ ಭಾರತಕ್ಕೆ ರೂ.11,000 ಕೋಟಿ ತೆರಿಗೆ ನೀಡುತ್ತಿದೆ ಎಂದರು.

2ಜಿ ತಂತ್ರಜ್ಞಾನದಲ್ಲಿ ಆಯಿಲ್‍ಗಳ ತಯಾರಿಕೆಗಾಗಿ ರೈತರು ಬೆಳೆದ ಬೆಳೆಗಳ ತ್ಯಾಜ್ಯ ವಸ್ತುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಮೆಕ್ಕೆಜೋಳದ ದಂಟು, ಬೆಂಡು, ಭತ್ತದ ಹುಲ್ಲು, ಹತ್ತಿಯ ಕಡ್ಡಿಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದರು.

ಸಂಸದರು ಬೆಳೆಯ ತ್ಯಾಜ್ಯಗಳನ್ನು ನೇರವಾಗಿ ರೈತರಿಂದ ಖರೀದಿಸುತ್ತೀರಾ ? ಎಂದು ಕೇಳಿದಾಗ ಅವರು ಕೆಲವು ಏಜೆನ್ಸಿಗಳನ್ನು ಗುರುತಿಸಿದ್ದು, ಅವರು ರೈತರಿಂದ ಖರೀದಿಸಿ ತಮಗೆ ನೀಡುತ್ತಾರೆ ಎಂದು ಮಾಹಿತಿ ನೀಡಿದರು.

ಈ ಸಂಸ್ಥೆಯು ಒಂದು ದಿನಕ್ಕೆ 60000 ಲೀಟರ್ ಆಯಿಲ್ ಸಂಗ್ರಹಿಸುವ ಸಾಮಥ್ರ್ಯ ಹೊಂದಿದ್ದು, ಇದರ ತಯಾರಿಕೆಗೆ 200 ರಿಂದ 300 ಟನ್ ತ್ಯಾಜ್ಯ ಪದಾರ್ಥಗಳು ಬೇಕಾಗುತ್ತವೆ. ಈ ಪ್ರಮಾಣದ ಕಚ್ಚಾ ಪದಾರ್ಥಗಳನ್ನು ರೈತರಿಂದ ಸಂಗ್ರಹಿಸಲಾಗುವುದು. ಹಾಗೂ ನೀರಿಗಾಗಿ ಶಾಂತಿಸಾಗರದ ಕೆರೆಯನ್ನು ಗುರುತಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಬಂದ ನಂತರ ತುಂಗಭದ್ರ ನದಿ ನೀರನ್ನು ಬಳಸುತ್ತೇವೆ ಎಂದರು.

ಸಂಸದರು ಶಾಂತಿಸಾಗರದ ನೀರು ಕುಡಿಯಲು ಬಳಸಲಾಗುತ್ತದೆ. ನೀವು ಆ ನೀರನ್ನು ಬಳಸಬೇಡಿ, ಬದಲಾಗಿ ತುಂಗಭದ್ರ ನದಿ ನೀರನ್ನು ಬಳಸುವಂತೆ ಸಲಹೆ ನೀಡಿದರು.

2ಜಿ ಇಥನಾಲ್ ಕಟ್ಟಡ ಕಾಮಗಾರಿಗೆ ಕೇಂದ್ರ ಸರ್ಕಾರದ ‘ಪ್ರಧಾನ್ ಮಂತ್ರಿ ಜೀವನ್’ ಯೋಜನೆಯಲ್ಲಿ ಶೇ.20 ರಷ್ಟು ಅನುದಾನ ನೀಡುತ್ತಾರೆ. ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ಇಲ್ಲ, ರಾಜ್ಯ ಸರ್ಕಾರದ ಅನುದಾನಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದಾಗ ಸಂಸದರು ರಾಜ್ಯದಿಂದ ಭೂಮಿ, ನೀರು, ವಿದ್ಯುತ್ ನೀಡುತ್ತಿದ್ದೇವೆ ಅನುದಾನ ನೀಡಲು ಕಷ್ಟ ಆಗುತ್ತದೆ ಎಂದರು.

ಸರ್ಕಾರ 2 ವರ್ಷಗಳ ಹಿಂದೆಯೇ ನಿಮಗೆ ಭೂಮಿ ನೀಡಲಾಗಿದೆ. ಆದರೆ ನೀವು ಇನ್ನು ಕಟ್ಟಡ ಕಾಮಗಾರಿ ಏಕೆ ಆರಂಭಿಸಿಲ್ಲ ಎಂದು ಪ್ರಶ್ನಿಸಿದಾಗ ಸಂಸ್ಥೆಯ ಮ್ಯಾನೇಜರ್ ಅಔS ಇಅ (ಪರಿಸರ ಮಾಲಿನ್ಯ ನಿವಾರಣೆ) ಸರ್ಟಿಫಿಕೇಟ್ ಬಂದ ಕೂಡಲೇ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.

ಸಂಸದರು 2020ರ ಫೆಬ್ರವರಿಯೊಳಗೆ ಸಂಬಂಧಿಸಿದ ಎಲ್ಲಾ ಸರ್ಟಿಫಿಕೇಟ್‍ಗಳನ್ನು ಪಡೆದುಕೊಂಡು ಕಾಮಗಾರಿ ಆರಂಭಿಸಬೇಕು. 2023 ಏಪ್ರಿಲ್ ಅಂತ್ಯದ ವೇಳೆಗೆ ಕಟ್ಟಡ ಉದ್ಘಾಟನೆಗೆ ಸಿದ್ದವಾಗಬೇಕೆಂದು ಸೂಚನೆ ನೀಡಿದರು. ಹಾಗೂ ಕಟ್ಟಡ ಕಾಮಗಾರಿಗೆ ಈ ವ್ಯಾಪ್ತಿಯಲ್ಲಿನ ಕುಟುಂಬಗಳನ್ನು ಗುರುತಿಸಲಾಗಿದ್ದು, ಅವರನ್ನು ತೆಗೆದುಕೊಳ್ಳಿ ಎಂದರು.

ಸಂಸ್ಥೆ ಕೆಲಸ ಆರಂಭಿಸಿದ ನಂತರ ಉದ್ಯೋಗದಲ್ಲಿ ದಾವಣಗೆರೆಯ ಸ್ಥಳೀಯ ಜನರಿಗೆ ಆದ್ಯತೆ ನೀಡಬೇಕು. ಅರ್ಹತೆ ಅನುಗುಣವಾಗಿ ಕೆಲಸ ನೀಡಿ. ವಾಚಮ್ಯಾನ್ ಕೆಲಸದಿಂದ ತಂತ್ರಜ್ಞಾನದ ಕೆಲಸ ಮಾಡುವ ಅರ್ಹತೆ ಇದ್ದವರು ಕಂಡು ಬಂದರೆ ಸ್ಥಳೀಯ ನಿವಾಸಿಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಸಾಧ್ಯವಾದಷ್ಟು ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ.ಜಿ, ಉಪವಿಭಾಗಧಿಕಾರಿ ಮಮತಾ ಹೊಸಗೌಡರ್, ಎಂ.ಆರ್.ಪಿ.ಎಲ್ ಸಂಸ್ಥೆಯ ಇಂಡಿಪೆಂಡೆಂಟ್ ಡೈರೆಕ್ಟರ್ ಮಂಜುಳಾ, ಹರಿಹರ ತಹಶೀಲ್ದಾರರಾದ ರಾಮಚಂದ್ರಪ್ಪ, ಪರಿಸರ ಮಾಲಿನ್ಯ ನಿಯಂತ್ರಣಾ ಧಿಕಾರಿಗಳು, ಎಂಆರ್‍ಪಿಎಲ್ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending