ಸಿನಿ ಸುದ್ದಿ
ಈ ಶತಮಾನದ ಮಾದರಿ ಹೆಣ್ಣು..!

ಟಿವಿ9 ನ ‘ಮಾರುವೇಷ’ ಸರಣಿಯಲ್ಲಿ ಈಗಷ್ಟೇ ಒಂದು ಒಳ್ಳೆಯ ಕಾರ್ಯ ಕ್ರಮ ನೋಡಿದೆ…
ಅದು ,ಒಂದು ಕಾಲದಲ್ಲಿ ಅತ್ಯುತ್ತಮ ನಟಿಯಾಗಿ 125ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿ,ಇದ್ದಕ್ಕಿದ್ದಂತೇ 1986ರಲ್ಲೇ ಬಣ್ಣದ ಬದುಕಿಗೆ ವಿದಾಯ ಹೇಳಿ,ನಿಜ ಬದುಕಿನಲ್ಲಿ ಸಾಮಾಜಿಕ ಕಳಕಳಿಯಿಂದ ಕೆರೆಯ ನೀರನ್ನು ಕೆರೆಗೆ ಚೆಲ್ಲುವಂತೆ ಸಂಪಾದಿಸಿದ್ದೆಲ್ಲವನ್ನೂ ಬಡವರ ಕಣ್ಣೀರೊರೆಸಲು ವಿನಿಯೋಗಿಸುತ್ತಿರುವ ಶ್ರೇಷ್ಠ ನಟಿ,ಅಭಿನೇತ್ರಿ ಆರತಿಯವರ ಸಾರ್ಥಕ ಬದುಕಿನ ಕತೆ..!!
ನಾಯಕಿ ನಟಿಯಾಗಿ ಜನಪ್ರಿಯತೆಯ ಉತ್ತುಂಗದಲ್ಲಿರುವಾಗಲೇ, ಸಿನಿಮಾದ ಆಕರ್ಷಕ ಬಣ್ಣದ ಲೋಕಕ್ಕೆ ವಿದಾಯ ಹೇಳುವುದು ಸುಲಭದ ಮಾತಲ್ಲ.ಪ್ರೀತಿಸಿ ಕೈ ಹಿಡಿದ ಪುಟ್ಟಣ್ಣ ಕಣಗಾಲರೂ ದೂರವಾಗಿದ್ದರು.ಮಗಳು ಯಶಸ್ವಿನಿಯನ್ನು ಆಯಾಳ ಕೈಗೊಪ್ಪಿಸಿ ದಿನಗಟ್ಟಲೆ ಶೂಟಿಂಗಿಗೆ ತೆರಳಬೇಕಾದ ಅನಿವಾರ್ಯತೆ. ಆದರೆ ಅದೊಂದು ದಿನ ತಡ ರಾತ್ರಿ ಶೂಟಿಂಗ್ ಮುಗಿಸಿ ಬಂದಾಗ, ಮಗಳ ಒಂಟಿತನದ ಆಕ್ರಂದನ ಅದೆಷ್ಟು ತೀವ್ರವಾಗಿ ಆ ತಾಯಿಯ ಕರುಳನ್ನು ಇರಿಯಿತೆಂದರೆ,ಆ ಕ್ಷಣದಲ್ಲಿ ಮಗಳ ತಲೆ ಮೇಲೆ ಕೈಯಿಟ್ಟು ಇನ್ನೆಂದೂ ಬಣ್ಣ ಹಚ್ಚುವುದಿಲ್ಲವೆಂದು ಪ್ರಮಾಣ ಮಾಡಿದರು..!!
ಪಡೆದಿದ್ದ ಎಲ್ಲ ಅಡ್ವಾನ್ಸ್ ಹಣವನ್ನೂ ನಿರ್ಮಾಪಕರಿಗೆ ಹಿಂತಿರುಗಿಸಿದರು..!!
ಬಣ್ಣದ ಬದುಕಿಂದ ದೂರವಾಗಿ ಸರಳ ಬದುಕನ್ನಪ್ಪಿಕೊಂಡು ಅಜ್ಞಾತವಾಗಿರಬಯಸಿದ ಆರತಿ ಸುಮ್ಮನೇ ಕೂರಲಿಲ್ಲ..ತಾನು ದುಡಿದ ಅಷ್ಟೂ ಹಣವನ್ನು ಸಮಾಜ ಸೇವೆಗೆ ವಿನಿಯೋಗಿಸಿದರು.
ಅದೇ ಸಮಯದಲ್ಲಿ ಪರಿಚಯವಾದ ಸೇವಾ ಮನೋಭಾವದ ಹಾರ್ಡ್ ವೇರ್ ಇಂಜಿನಿಯರ್ ಚಂದ್ರಶೇಖರ ದೇಸಾಯಿ ಗೌಡರ ರನ್ನು ಮದುವೆಯಾಗಿ ಅಮೇರಿಕಾದಲ್ಲಿದ್ದುಕೊಂಡೇ ತನ್ನ ಸಾಮಾಜಿಕ ಸೇವಾ ಕ್ಷೇತ್ರದ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿಕೊಂಡರು..!!
ಬೆಂಗಳೂರಿನಲ್ಲಿದ್ದ ತನ್ನ ಪ್ರೀತಿಯ ಬಂಗಲೆ “ಬೆಳ್ಳಿತೆರೆ”ಯನ್ನೂ ಮಾರಿ ಬಂದ 15 ಕೋಟಿ ರೂಪಾಯಿ ಅಷ್ಟನ್ನೂ ಸಮಾಜ ಸೇವೆಗೆ ವಿನಿಯೋಗಿಸಿದರು. ಆರತಿಯವರಿಗೆ ಸಮಾಜಸೇವೆಗೆ ಪ್ರೇರಣೆ ನೀಡಿದ್ದು ಚಾಮರಾಜನಗರದಲ್ಲಿ ಡಾ.ಜಿ.ಎಸ್.ಶಿವರುದ್ರಪ್ಪನವರ ಮಗ ಜಿ.ಎಸ್.ಜಯದೇವ ನಡೆಸುತ್ತಿರುವ ‘ದೀನಬಂಧು’ ಮಕ್ಕಳ ಮನೆ. ಆ ಅನಾಥಾಶ್ರಮಕ್ಕೆ ವಿಶಾಲ ಹಾಸ್ಟೆಲ್ ಕಟ್ಟಡ ಕಟ್ಟಿಸಿ ಕೊಟ್ಟಿದ್ದಲ್ಲದೆ, ಎರಡು ಕೋಟಿ ರೂ.ಠೇವಣಿಯಿರಿಸಿ ಅದರ ಬಡ್ಡಿಯನ್ನು ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ವಿನಿಯೋಗಿಸುತ್ತಿದ್ದಾರೆ. ನಲುವತ್ತು ಶಾಲೆಗಳನ್ನು ದತ್ತು ಪಡೆದು ಅಷ್ಟೂ ಶಾಲೆಗಳ ಬಡ ಮಕ್ಕಳ ಖರ್ಚುವೆಚ್ಚ ಭರಿಸುತ್ತಿದ್ದಾರೆ..!!
ಆರತಿ-ಚಂದ್ರಶೇಖರ ದಂಪತಿಗಳ ಸೇವಾ ಕಾರ್ಯ ಇಷ್ಟಕ್ಕೇ ನಿಲ್ಲುವುದಿಲ್ಲ.ಉತ್ತರ ಕರ್ನಾಟಕದ 20 ಹಳ್ಳಿಗಳನ್ನು ದತ್ತು ಪಡೆದು ಆ ಹಳ್ಳಿಗೆ ಶೌಚಾಲಯ,ಆಸ್ಪತ್ರೆ,ಶಾಲೆ ಹೆಣ್ಣು ಮಕ್ಕಳಿಗೆ ಸ್ವಉದ್ಯೋಗ ತರಬೇತಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ..!!
ಚಿತ್ರರಂಗದಲ್ಲಿದ್ದಾಗಿನ ಅವರ ಸಹಜ ವೈವಾಹಿಕ, ಪ್ರೇಮ ಕತೆಗಳು ಏನಾದರೂ ಇರಲಿ.ನನಗೆ ಅಚ್ಚರಿಯೆನಿಸುವುದು ಅದಲ್ಲ..
ಇಷ್ಟೆಲ್ಲ ಕೋಟಿಗಟ್ಟಲೆ ಮೊತ್ತವನ್ನು ನಿಸ್ವಾರ್ಥ ಭಾವದಿಂದ ಸಾಮಾಜಿಕ ಸೇವೆಗಾಗಿ ವಿನಿಯೋಗಿಸುತ್ತಿದ್ದರೂ, ಯಾರ ಕಣ್ಣಿಗೂ ಬೀಳದೇ,ಸಾರ್ವಜನಿಕರು,ಪತ್ರಿಕೆಯವರು,ಕೊನೆಗೆ ತನ್ನನ್ನು ಬೆಳೆಸಿದ ಚಿತ್ರಂಗದವರಿಂದಲೂ ದೂರವಾಗಿ ಅಜ್ಞಾತರಾಗಿಯೇ ಉಳಿಯಬೇಕೆನ್ನುವ ಅವರ ದಿವ್ಯ ನಿರ್ಲಿಪ್ತ ಮನೋಭಾವ..!!
ಬಹುಶಃ ‘ದೀನಬಂಧು’ಮನೆಯ ಜಯದೇವರಲ್ಲದಿದ್ದರೆ ಆರತಿಯವರು ಯಾರ ಕಣ್ಣಿಗೂ ಕಾಣಿಸುತ್ತಿರಲಿಲ್ಲವೇನೋ.ಹತ್ತು ವರ್ಷಗಳ ಹಿಂದೆ ನಾನು ಚಾಮರಾಜನಗರದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕನಾಗಿದ್ದಾಗ ಜಯದೇವ್ ಅವರ ದೀನಬಂಧು ಮಕ್ಕಳ ಮನೆಯ ಜೊತೆ ನಿಕಟವಾಗಿದ್ದೆ. ಆಗ ಒಮ್ಮೆ ಜಯದೇವ್ ಅವರು ಆರತಿಯವರ ಸೇವಾ ಕಾರ್ಯದ ಬಗ್ಗೆ ಹೇಳಿದ್ದರು. ಮುಂದಿನ ಸಲ ಆರತಿಯವರು ಬಂದಾಗ ನಾನು ಭೇಟಿ ಮಾಡಬಹುದಾ ಅಂತ ಕೇಳಿದಾಗ ಆರತಿಯವರು ಯಾರನ್ನೂ ಭೇಟಿಯಾಗಲು ಇಷ್ಟ ಪಡುವುದಿಲ್ಲ ಎಂದರು..!! ಆದರೆ ಆಗಲೂ ನನಗೆ ಆರತಿಯವರ ವೈಯಕ್ತಿಕ ಬದುಕಿನ ಬಗೆಗಾಗಲಿ, ಸೇವಾಗಾತ್ರ ಇಷ್ಟೊಂದು ದೊಡ್ಡದಿದೆಯೆಂದಾಗಲಿ ಗೊತ್ತಿರಲಿಲ್ಲ..
ಟಿವಿ9 ಹೇಳಿದಂತೆ, ಕೆಲವು ವರ್ಷಗಳ ಹಿಂದೆ ಎಸ್.ಜಿ.ತುಂಗರೇಣುಕ ಅನ್ನುವ ಹಿರಿಯ ಪತ್ರಕರ್ತೆಯಿಂದಾಗಿ ಆರತಿಯವರ ಕುರಿತು ಮಾಹಿತಿ ದೊರೆಯುವಂತಾಯಿತು. ರೇಣುಕ ಅವರಿಗೂ ಆರತಿಯವರ ಭೇಟಿ ಅಷ್ಟು ಸುಲಭದಲ್ಲಿ ಸಿಗಲಿಲ್ಲ. ಜಯದೇವರ ಮೂಲಕ ಭೇಟಿಗೆ ಪ್ರಯತ್ನಿಸಿದರೂ ಆರತಿಯವರು ಭೇಟಿ ನಿರಾಕರಿಸಿದರು.ಕೊನೆಗೂ ಜಯದೇವರ ಒತ್ತಾಯಕ್ಕೆ ಮಣಿದು ಭೇಟಿಗೆ ಅವಕಾಶ ದೊರೆಯಿತು..!! ಬಹುಶಃ ಆ ಭೇಟಿಯಿಂದಾಗಿ ಆರತಿಯವರ ಅತ್ಯಂತ ಸರಳಬದುಕಿನ, ಆದರೆ ಸಮಾಜ ಸೇವೆಯ ಶ್ರೀಮಂತಿಕೆಯ ವಿವರಗಳು ಲಭ್ಯವಾದವು..!! ಆ ನಂತರವೂ ಅವರು ಯಾರಿಗೂ ಸಂದರ್ಶನ ಭೇಟಿಗೆ ಅವಕಾಶ ನೀಡಲಿಲ್ಲ..
ಇವತ್ತು ಕೋಟಿಗಟ್ಟಲೆ ದಾನ ಮಾಡುವ ಅನೇಕ ಸಂಸ್ಥೆಗಳು,ಶ್ರೀಮಂತ ವ್ಯಕ್ತಿಗಳು ಚಿತ್ರರಂಗದ ವರು ನೂರಾರು ಮಂದಿ ಇರಬಹುದು.ಆದರೆ ಎಲ್ಲ ಬಗೆಯ ಪ್ರಚಾರದಿಂದಲೂ ದೂರವಿದ್ದು, ತಾನು ಸಮಾಜದಿಂದ ಪಡೆದದ್ದೆಲ್ಲವನ್ನೂ ಮತ್ತೆ ಸಮಾಜಕ್ಕೆ ಮರಳಿಸುವ ಸರಳ,ನಿಸ್ರೃಹ ನಿಸ್ವಾರ್ಥ ಸೇವೆಗೆ ತಮ್ಮನ್ನು ಮುಡಿಪಾಗಿಸಿಕೊಂಡ ಆರತಿಯವರಂತಹ ವ್ಯಕ್ತಿಗಳು ಹೆಚ್ಚು ಮಂದಿ ಸಿಗುವುದಿಲ್ಲ..!! ಚಂದ್ರಶೇಖರರ ಹೆಸರಾದರೂ ಅವರ ಟ್ರಸ್ಟಿನಲ್ಲಿದೆ. ಆರತಿಯವರ ಹೆಸರು ಎಲ್ಲೂ ಕಾಣಿಸುವುದಿಲ್ಲ..!!
ನಿಜಕ್ಕೂ ಆರತಿಯವರು- ” ಈ ಶತಮಾನದ ಮಾದರಿ ಹೆಣ್ಣು..!!”
ಹ್ಯಾಟ್ಸಾಫ್ ಆರತಿಯವರೇ..
(ಲೇಖನ ಕೃಪೆ : ವಾಟ್ಸಾಪ್)
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಸಿನಿ ಸುದ್ದಿ
ಕನ್ನಡವನ್ನ ಕಿತ್ತುಕೊಳ್ಳೋ ಧೈರ್ಯ ಯಾರಿಗಿದೆ..? ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎನ್ನಿ : ಕನ್ನಡ ಪರ ಹೋರಾಟಗಾರರಿಗೆ ಕಿಚ್ಚನ ಸಲಹೆ

ಸುದ್ದಿದಿನ, ಬೆಂಗಳೂರು : ಸಂಘಟನೆಯವರ ಹಿಂದೆ ನೂರಾರು ಜನ ಬರ್ತೀರಾ, ಆದರೆ ನಮ್ಮಂಥ ಕಲಾವಿದರಿಗೆ ಅಭಿಮಾನಿಗಳಷ್ಟೇ. ಅವರು ರಾಜ್ಯದ ಮೂಲೆಗಳಲ್ಲಿ ಇರ್ತಾರೆ. ನೀವು ನಮ್ಮನ್ನೆನ್ನಾದ್ರೂ ಹೊಡೆಯೋಕೆ ಬಂದ್ರೆ ನಾವೊಬ್ಬರೇ ಸಿಕ್ತೀವಿ. ಹಾಗಾಗಿ ಕೆಲವರು ಏನಾದರೂ ಸ್ಟೆಪ್ಸ್ ತೆಗೆದುಕೊಂಡಾಗ ಸ್ವಲ್ಪ ಯೋಚಿಸಿ ಎಂದು ಕನ್ನಡಪರ ಹೋರಾಟಗಾರರಿಗೆ ಕಿಚ್ಚ ಸುದೀಪ್ ಸಲಹೆ ನೀಡುವ ಮೂಲಕ ಗಮನಸೆಳೆದಿದ್ದಾರೆ.
ರಾಮನಗರ ಜಿಲ್ಲೆ ಬಿಡದಿಯ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಮಾತನಾಡಿದರು. ಬುರ್ಜ್ ಕಲೀಫಾದಲ್ಲಿ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ಜತೆಗೆ ಕನ್ನಡದ ಬಾವುಟ ಪ್ರದರ್ಶನ ಕಂಡ ಹಿನ್ನೆಲೆ ಕಿಚ್ಚ ಸುದೀಪ್ ಅವರಿಗೆ ಕನ್ನಡಪರ ಹೋರಾಟಗಾರರು ಸನ್ಮಾನವನ್ನು ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಿದರು.
ಇದನ್ನೂ ಓದಿ | ಪಡಿತರ ಚೀಟಿದಾರರು ಕೂಡಲೇ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಿ
ನಮ್ಮಲ್ಲಿ ಕನ್ನಡದ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಆದರೆ ಕನ್ನಡ ಪರವಾಗಿ ಇರುವ ಕೆಲ ಕನ್ನಡಪರ ಸಂಘಟನೆಗಳಲ್ಲಿಯೇ ಗೊಂದಲವಿದ್ದು, ನೀವು ಮೊದಲು ನಿಮ್ಮ ಗೊಂದಲವನ್ನ ಸರಿಪಡಿಸಿಕೊಳ್ಳಿ. ಕನ್ನಡದ ಶಾಲು ಹಾಕಿ ನೀವು ಮನೆಗೆ ಬಂದರೆ ಖುಷಿ ಪಡೋದಾ, ಭಯ ಪಡೋದಾ ಗೊತ್ತಾಗಲ್ಲ ನನಗೆ. ಜೊತೆಗೆ ನನಗೆ ಉಗಿಯೋಕೆ ಬಂದಿದ್ದಾರೋ ಅಥವಾ ಹೊಗಳೋಕೆ ಬಂದಿದಿರೋ ಅಂತಾನೂ ಗೊತ್ತಾಗಲ್ಲ ಎಂದರು.
ಕನ್ನಡವನ್ನ ಉಳಿಸಿ ಎಂದು ಹೇಳ್ತೀರಾ ಅದು ತಪ್ಪು. ಯಾಕೆಂದರೆ ಕನ್ನಡವನ್ನ ಕಿತ್ತುಕೊಂಡವರು ಯಾರು..? ಯಾರಿಗಿದೆ ಆ ಧೈರ್ಯ..? ಎಂದು ಕಿಚ್ಚ ಗುಡುಗಿದರು. ಜೊತೆಗೆ ಕನ್ನಡಕ್ಕೆ ಇರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ. ಹಾಗಾಗಿ ಯಾವನಿಗಿದೆ ಕನ್ನಡವನ್ನ ಕಿತ್ತುಕೊಳ್ಳುವ ತಾಕತ್ತು, ಬರೋಕೆ ಹೇಳಿ.
ಆದರೆ ಇಲ್ಲಿ ಬೇರೆ ಭಾಷೆ ಜಾಸ್ತಿಯಾಗಿರೋದಕ್ಕೆ ಕಾರಣ ನೀವೇ ಯೋಚಿಸಿ, ಅರ್ಥ ಸಿಗಲಿದೆ. ಕನ್ನಡದ ಮೇಲೆ ಅಭಿಮಾನ ಇಲ್ಲಾಂದ್ರೆ ಬಿಟ್ಟಾಕಿ ಅವರನ್ನ. ಅಭಿಮಾನ ಇರೋರನ್ನ ಗುರುತಿಸಿ ಬೆಳೆಸಿ. ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ

ಸುದ್ದಿದಿನ,ದಾವಣಗೆರೆ:ಇತ್ತೀಚಿನ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಕೊಟ್ಟ ಮಾತಿನಂತೆ ನಡೆದ ಚಿತ್ರ ನಟ ದರ್ಶನ್ ಅವರು ಮಂಗಳವಾರ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಕುದುರೆಯ ತಡಿ ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಹುಬ್ಬಳ್ಳಿಯಲ್ಲಿ ರಾಬರ್ಟ್ ಸಿನಿಮಾದ ಪ್ರೀ ರಿಲೀಸಿಂಗ್ ಇವೆಂಟ್ ಮುಗಿಸಿದ ನಟ ದರ್ಶನ್ ದಾವಣಗೆರೆಗೆ ಭೇಟಿ ನೀಡಿ ಮಲ್ಲಿಕಾರ್ಜುನ ಅವರನ್ನು ಸೌಹಾರ್ದ ಮಾತುಕತೆ ನಡೆಸಿದರು.
ಕಾಂಗ್ರೆಸ್ ನಾಯಕ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಒಡೆತನದ ಬಾಪೂಜಿ ಅತಿಥಿ ಗೃಹಕ್ಕೆ ತೆರಳಿದ ವೇಳೆ ನಟರಾದ ಚಿಕ್ಕಣ್ಣ, ವಿನೋದ್ ಪ್ರಭಾಕರ್, ರವಿಶಂಕರ್ ಕೂಡ ಜೊತೆಗಿದ್ದರು.
ಮೊದಲಿನಿಂದಲೂ ಎಸ್.ಎಸ್.ಮಲ್ಲಿಕಾರ್ಜುನ್ಗೆ ನಟ ದರ್ಶನ್ ಆಪ್ತರಾಗಿದ್ದು, ಕಳೆದ ಬಾರಿ ದರ್ಶನ್ಗೆ ಮಲ್ಲಿಕಾರ್ಜುನ್ ಕುದುರೆಯೊಂದನ್ನ ಉಡುಗೊರೆಯಾಗಿ ನೀಡಿದ್ದರು.
ಅಮೇರಿಕಾದಿಂದ ತಂದ್ದಿದ ಕುದುರೆಯ ತಡಿ (ಜೀನ್ )ನನ್ನು ಉಡುಗೊರೆಯಾಗಿ ನೀಡಿದರು.ನಂತರ ಮಲ್ಲಿಕಾರ್ಜುನ್ ರವರ ಒಡೆತನದ ಮುದೋಳದ ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ 20 ಲಕ್ಷ ಟನ್ ಕಬ್ಬ ಅರೆದಿದ್ದು, ಮಲ್ಲಿಕಾರ್ಜುನ ಅವರನ್ನು ದರ್ಶನ್ ಅವರು ರೈತರ ಪರವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಜಿ.ಎಸ್.ಮಂಜುನಾಥ್ ಗಡಿಗುಡಾಳ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಬಿ.ಕೆ.ಪರಶುರಾಮ ಸೇರಿದಂತೆ ಮಲ್ಲಿಕಾರ್ಜುನ ಮತ್ತು ದರ್ಶನ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಸಿನಿ ಸುದ್ದಿ
ರಾಬರ್ಟ್ ನ ಫಸ್ಟ್ ವಿಡಿಯೋ ಸಾಂಗ್ ರಿಲೀಸ್ : ಬೇಬಿ ಡಾನ್ಸ್ ವಿಡಿಯೋ ನೀವೂ ನೋಡಿ..!

ಸುದ್ದಿದಿನ ಡೆಸ್ಕ್ : ಕನ್ನಡದ ಬಹುನಿರೀಕ್ಷಿತ ಸಿನೆಮಾ ಡಿ ಬಾಸ್ ತೂಗುದೀಪ ದರ್ಶನ್ ಅಭಿನಯದ ರಾಬರ್ಟ್. ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ತೆಲುಗು ಅವತರಣಿಕೆಯ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಂದ್ರಪ್ರದೇಶದದಲ್ಲೂ ರಾಬರ್ಟ್ ತೆರೆಗೆ ಸಿದ್ಧಾವಾಗಿದ್ದಾನೆ.
ತರುಣ್ ಸುಧೀರ್ ಈ ಸಿನೆಮಾದ ನಿರ್ದೇಶನ ಮಾಡಿದ್ದು, ಉಮಾಪತಿ ಅವರು ಹಣ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಸಿನೆಮಾದ ಮೊದಲ ಹಾಡು ಇದೀಗ ಯ್ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಡಿ ಬಾಸ್ ಗೆ ನಾಯಕಿಯಾಗಿ ಆಶಾ ಭಟ್ ಜತೆಯಾಗಿದ್ದು, ಚಿಕ್ಕಣ್ಣ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ಧಾರೆ.
Here comes the 1st video track #BabyDanceFloorReady from our movie #Roberrt. Watch and share your thoughts 🙂https://t.co/mNX5RLUGa5@UmapathyFilms @TharunSudhir @StarAshaBhat @aanandaaudio pic.twitter.com/7LS2r0pePy
— Darshan Thoogudeepa (@dasadarshan) February 28, 2021
ನಮ್ಮ #Roberrt ಚಿತ್ರದ ಮೊದಲ ವಿಡಿಯೋ ಸಾಂಗ್ #BabyDanceFloorReady ಈಗ ನಿಮ್ಮ ಮುಂದೆ. ನೋಡಿ ನಿಮ್ಮ ಅನಿಸಿಕೆ ಹಂಚಿಕೊಳ್ಳಿhttps://t.co/8Zjsf8DN72@UmapathyFilms @TharunSudhir @StarAshaBhat @aanandaaudio pic.twitter.com/IaDVLdk4yh
— Darshan Thoogudeepa (@dasadarshan) February 28, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ6 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ7 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ನಿತ್ಯ ಭವಿಷ್ಯ6 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ
-
ಬಹಿರಂಗ3 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ನಿತ್ಯ ಭವಿಷ್ಯ5 days ago
ಬುಧವಾರ ರಾಶಿ ಭವಿಷ್ಯ : ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆತಂಕ ದೂರವಾಗಲಿದೆ
-
ದಿನದ ಸುದ್ದಿ5 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ