ದಿನದ ಸುದ್ದಿ

ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸಂಯೋಜಕಿಯಾಗಿ ಭವ್ಯ ನರಸಿಂಹಮೂರ್ತಿ ನೇಮಕ

Published

on

ಸುದ್ದಿದಿನ, ಬೆಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸಂಯೋಜಕಿಯಾಗಿ ಭವ್ಯ ನರಸಿಂಹ ಮೂರ್ತಿ ಅವರು ನೇಮಕಗೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿರುವ 37 ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ಭವ್ಯಾ ನರಸಿಂಹಮೂರ್ತಿ ಅವರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲರಾಗಿರುವ ಅವರ ಸಾಮಾಜಿಕ ಕಳಕಳಿಗೆ ಜನತೆಯ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಈ ಸಂಬಂಧ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಸರ್, ಶ್ರೀ ಜೈರಾಮ್ ರಮೇಶ್ ಸರ್ , ಶ್ರೀ ಪವನ್ ಖೇರ ಸರ್ , ಶ್ರೀಮತಿ ಸುಪ್ರಿಯಾ ಶ್ರೀನಾತೆ ಮೇಡಂ ಹಾಗೂ ಶ್ರೀ ಪ್ರಿಯಾಂಕಾ ಖರ್ಗೆ ಸರ್ ಅವರಿಗೆ ಭವ್ಯ ಅವರು ಧನ್ಯವಾದ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version