ದಿನದ ಸುದ್ದಿ
ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳ ಅನುಷ್ಟಾನಕ್ಕೆ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಜನರ ಅರ್ಥಿಕ ಅಭಿವೃದ್ಧಿಗಾಗಿ, ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಗಸ್ಟ್.03 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ https://suvidha.karnataka.gov.in/
ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ/ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ವೆಬ್ಸೈಟ್ https://dbcdc.karnataka.gov.in ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಅಣ್ಣ ಸಿಐಡಿ ಕಸ್ಟಡಿಗೆ ; ತಮ್ಮ ಸೆಂಟ್ರಲ್ ಜೈಲಿಗೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ನಲ್ಲಿ ಮಾಜಿ ಸಚಿವ ಎಚ್ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು ಕೋರ್ಟ್, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.
ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ಪ್ರಕರಣಗಳ ಪ್ರತ್ಯೇಕವಾಗಿ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರು ಅರ್ಜಿ ವಿಚಾರಣೆ ನಡೆಸಿದರು. ಸೂರಜ್ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.
ಸಲಿಂಗ ಕಾಮ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸೂರಜ್ ರೇವಣ್ಣನನ್ನು ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಇಬ್ಬರು ಶಿಕ್ಷಕರ ಬಂಧನ
ಸುದ್ದಿದಿನಡೆಸ್ಕ್:ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಸಂಜಯ್ ತುಕಾರಾಂ ಜಾಧವ್ ಮತ್ತು ಜಲೀಲ್ ಉಮರ್ ಖಾನ್ ಪಠಾಣ್ ಅವರನ್ನು ಮಹಾರಾಷ್ಟ್ರದ ನಾಂದೇಡ್ ಭಯೋತ್ಪಾದನಾ ನಿಗ್ರಹ ದಳ-ಎಟಿಎಸ್ ಬಂಧಿಸಿದೆ.
ಬಂಧಿತರಿಬ್ಬರೂ ಜಿಲ್ಲಾ ಪರಿಷತ್ ಶಾಲೆಗಳಲ್ಲಿ ಶಿಕ್ಷಕರಾಗಿದ್ದು, ಲಾತೂರ್ನಲ್ಲಿ ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಮೂಲಗಳು ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಯುವ ನಿಧಿ ಯೋಜನೆ ; ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
ಸುದ್ದಿದಿನಡೆಸ್ಕ್:ಯುವ ನಿಧಿ ಯೋಜನೆ ಅಡಿ, ನಿರುದ್ಯೋಗ ಭತ್ಯೆ ಪಡೆಯುತ್ತಿರುವ, ಉದ್ಯೋಗಾಕಾಂಕ್ಷಿ ಯುವಜನತೆ, ಪ್ರತಿ ತಿಂಗಳು 25 ನೇ ತಾರೀಖಿನೊಳಗೆ, ಸೇವಾ ಸಿಂಧು ಪೋರ್ಟಲ್ನಲ್ಲಿ ಸ್ವಯಂ ಘೋಷಿತ ಪ್ರಮಾಣ ಪತ್ರ ಸಲ್ಲಿಸಲು, ಆಯಾ ಜಿಲ್ಲೆಗಳ ಉದ್ಯೋಗಾಧಿಕಾರಿಗಳು ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಗೃಹಲಕ್ಷ್ಮೀ ಹಣ ನಿಮ್ಮ ಖಾತೆಗೆ ಜಮಾ ಆಗಿಲ್ಲವೇ ? ಇವರನ್ನು ಸಂಪರ್ಕಿಸಿ
-
ಕ್ರೀಡೆ4 days ago
ಈ ಕ್ಷಣದ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ6 days ago
ಕೊಲೆಕೇಸ್ | ನಟ ಚಿಕ್ಕಣ್ಣ ಆಯ್ತು ; ಈಗ ಮತ್ತೊಬ್ಬ ನಟ..!
-
ದಿನದ ಸುದ್ದಿ5 days ago
ಕಲಾವಿದರಿಗೆ ಗುರುತಿನ ಚೀಟಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಿನ್ನೆ ನಡೆದ NET ಪರೀಕ್ಷೆ ರದ್ದು..!
-
ದಿನದ ಸುದ್ದಿ5 days ago
ಡಾಕ್ಟರ್ ಓದಿದವರು ಕೂಡ ಮೌಡ್ಯಾಚರಣೆ ಬಿಟ್ಟಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ
-
ದಿನದ ಸುದ್ದಿ7 days ago
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ | ರೈತರ ಖಾತೆಗೆ ನಾಳೆ ಪ್ರಧಾನಿ ಹಣ ವರ್ಗಾವಣೆ ; ಎಷ್ಟು ಕೋಟಿ..?
-
ದಿನದ ಸುದ್ದಿ5 days ago
ಕ್ರೀಡಾ ಇಲಾಖೆಯಲ್ಲಿ ಟೆಂಡರ್ ಇಲ್ಲದೇ ಕಾಮಗಾರಿ ಮಂಜೂರಾತಿ ಇಲ್ಲ